Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು - Vistara News

ಕ್ರೈಂ

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Police Firing: ದರೋಡೆ ಪ್ರಕರಣದ (Robbery Case) ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ.

VISTARANEWS.COM


on

police firing hubli robber
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ (Hubli News) ಮತ್ತೆ ಪೊಲೀಸ್ ರಿವಾಲ್ವರ್ ಸದ್ದು ಮಾಡಿದೆ. ತಪ್ಪಿಸಿಕೊಂಡು ಓಡಲು ಯತ್ನಿಸಿದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿ (Police Firing) ಬಂಧಿಸಿದ್ದಾರೆ.

ದರೋಡೆ ಪ್ರಕರಣದ (Robbery Case) ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ. ಹುಬ್ಬಳ್ಳಿಯ ಎಂಟಿಎಸ್‌ ಕಾಲೊನಿ ಬಳಿ ಘಟನೆ ನಡೆದಿದೆ. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ. ಗಾಯಾಳು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗದಲ್ಲಿ ರೌಡಿಶೀಟರ್‌ಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ (Assault Case) ಎಸ್ಕೇಪ್ ಆಗಲು ಯತ್ನಿಸಿದ ರೌಡಿ ಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಘಟನೆ ನಡೆದಿದೆ.

ರಾಬರಿ‌ ಕೇಸ್‌ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಬಂದಿದ್ದ ಪೊಲೀಸರ ಮೇಲೆ ರೌಡಿ ಶೀಟರ್‌ ಸಂಜಯ್ ಕೊಪ್ಪದ ಹಲ್ಲೆಗೆ ಯತ್ನಿಸಿದ್ದ. ಪೊಲೀಸರ ಮೇಲೆ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಆರೋಪಿ ಸಂಜಯ್ ಮೇಲೆ ಪಿಎಸ್‌ಐ ಸಂಗಮೇಶ್ ಶಿವಯೋಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಕೈ, ಕಾಲಿಗೆ ಗಾಯಗಳಾಗಿವೆ. ಸಂಜಯ್ ವಿರುದ್ಧ ರಾಬರಿ, ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿವೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್ ಹಾಗೂ ಪಿಸಿ ಪ್ರಕಾಶ್‌ಗೆ ಜಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೊಲೆ ಆರೋಪಿಯ ಕಾಲಿಗೆ ಫೈರ್‌ ಮಾಡಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Namma Metro : ತಾಯಿ ಜತೆಗೆ ಮೆಟ್ರೋಗೆ ಬಂದಿದ್ದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ ಘಟನೆ ಬೈಯಪ್ಪನಹಳ್ಳಿಯಲ್ಲಿ (Baiyappanahalli Metro) ನಡೆದಿದೆ. ಅದೃಷ್ಟವಶಾತ್‌ ಮಗುವು ಪ್ರಾಣಾಪಾಯದಿಂದ ಪಾರಾಗಿದೆ.

VISTARANEWS.COM


on

By

Namma Metro
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro ) ಮಕ್ಕಳಿಗೆ ಸೇಫ್ಟಿ ಇಲ್ವಾ?? ಇಂತಹದೊಂದು ಅನುಮಾನ ಸಹಜವಾಗಿಯೇ ಕಾಡುತ್ತದೆ. ಕೆಲವೊಮ್ಮೆ ಸಿಬ್ಬಂದಿ ಇದ್ದರೂ ಅಚಾರ್ತುಯಗಳು ನಡೆದು ಹೋಗಿ ಬಿಡುತ್ತವೆ. ಸದ್ಯ ನಿನ್ನೆ ಗುರುವಾರ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ನಲ್ಲಿ (Baiyappanahalli Metro) ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೆಟ್ರೋ ರೈಲು ಬರಲು ನಾಲ್ಕೈದ ನಿಮಿಷಗಳು ಬಾಕಿ ಇದ್ವು. ಈ ವೇಳೆ ಆಟವಾಡುತ್ತಾ ಮಗು ಟ್ರ್ಯಾಕ್‌ ಮುಂದೆ ಬಂದಿದೆ. ಬಗ್ಗಿ ನೋಡುವಾಗ ಆಕಸ್ಮಿಕವಾಗಿ ಆಯತಪ್ಪಿ ಟ್ರ್ಯಾಕ್‌ಗೆ ಬಂದಿದೆ. ಮಗು ಟ್ರ್ಯಾಕ್‌ಗೆ ಬಿದ್ದ ತಕ್ಷಣ ಅಲರ್ಟ್‌ ಆದ ಮೆಟ್ರೋ ಸಿಬ್ಬಂದಿ, ಮೆಟ್ರೋ ಟ್ರ್ಯಾಕ್‌ನ ಪವರ್ ಕಟ್ ಮಾಡಿಸಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

ಕೂಡಲೇ ಟ್ರ್ಯಾಕ್‌ಗೆ ಇಳಿದು ಮಗುವನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್‌ ಮಗುವಿಗೆ ಯಾವುದೇ ಅಪಾಯವಾಗಿಲ್ಲ. ಇನ್ನೂ ಈ ಘಟನೆಯಿಂದ ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ನಿನ್ನೆ (ಆ.1) ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 16 ನಿಮಿಷದ ವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿ, 2 ರೈಲು ಸಂಚಾರವನ್ನು ಬಿಎಂಆರ್‌ಸಿಎಲ್‌ ಸ್ಥಗಿತಗೊಳಿಸಿತ್ತು. ಬಳಿಕ ಎಂದಿನಂತೆ ಮೆಟ್ರೋ ಸಂಚಾರಾರಂಭವಾಗಿತ್ತು.

ಇಬ್ಬರೂ ಮೆಟ್ರೋ ಸೆಕ್ಯುರಿಟಿ ಗಾರ್ಡ್‌ಗಳಿಂದ ಮಗುವಿನ ಪ್ರಾಣ ಉಳಿದಿದೆ. ಮಗುವಿಗೆ ಯಾವುದೇ ಗಾಯಗಳು ಆಗದ ರೀತಿಯಲ್ಲಿ ಮೆಟ್ರೋ ವಿದ್ಯುತ್ ಲೈನ್ ಆಫ್ ಮಾಡಿದ್ದಾರೆ. ಮೆಟ್ರೋ ಸೆಕ್ಯುರಿಟಿಗಳು, ಸಿಬ್ಬಂದಿ ಚೂರು ಯಾಮಾರಿದರೂ ಮಗುವಿನ ಪ್ರಾಣ ಹೋಗುತ್ತಿತ್ತು ಎಂಬ ಮಾಹಿತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Actor Darshan: ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

VISTARANEWS.COM


on

Actor Darshan Lost KG In 25 Days
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಜೊತೆಗೆ ಬಂಧಿತರಾಗಿ ನಂತರ ತುಮಕೂರು ಜೈಲಿನಲ್ಲಿ (Tumkur news) ಒಂದೇ ಸೆಲ್‌ನಲ್ಲಿರುವ ಆರೋಪಿಗಳ ನಡುವೆ ಪರಸ್ಪರ ಮಾತಿನ ಚಕಮಕಿ, ಬೈಗುಳ ವಿನಿಮಯ ಹಾಗೂ ಹೊಯ್‌ಕೈ ನಡೆದಿರುವುದು ವರದಿಯಾಗಿದೆ.

ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳಲ್ಲಿ ಒಬ್ಬೊಬ್ಬನ ಕತೆಯೂ ಒಂದೊಂದು ಬಗೆಯಾಗಿದ್ದು, ತನ್ನ ಸ್ಥಿತಿಯಿಂದಾಗಿ ಹತಾಶರಾಗಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿ ಪವಿತ್ರ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಯಾರಿಗೂ ಜಾಮೀನು ದೊರೆತಿಲ್ಲ. ಹೀಗಾಗಿ ಇನ್ನುಳಿದವರಿಗೂ ಜಾಮೀನು ಸಿಗುವ ಸಾಧ್ಯತೆ ಕ್ಷೀಣವಾಗಿದೆ.

ಸದ್ಯ ಸುರಕ್ಷತೆಯ ಕಾರಣದ ಪರಪ್ಪನ ಅಗ್ರಹಾರದಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಿರುವ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಆರೋಪಿಗಳಾದ ರವಿಶಂಕರ್, ನಿಖಿಲ್, ಕಾರ್ತಿಕ್, ಕೇಶವ ಎಲ್ಲರೂ ಒಂದೇ ಬ್ಯಾರಕ್‌ನಲ್ಲಿದ್ದಾರೆ. ಪ್ರಕರಣದ ಹೊಣೆ ನಿನ್ನದು ನಿನ್ನದು ಎಂದು ನಾಲ್ವರೂ ಬೈದಾಡಿಕೊಂಡಿದ್ದಾರೆ.

ನಿನ್ನ ಮಾತು ಕೇಳಿ ನಾನೂ ಸಿಕ್ಹಾಕಿಕೊಂಡೆ ಅಂತ ಪರಸ್ಪರ ನಿಂದಿಸಿಕೊಂಡಿದ್ದಾರೆ. ರಾಘವೇಂದ್ರನ ಮಾತು ಕೇಳಿ ನಾವು ಸಿಲುಕಿಕೊಂಡೆವು. ನಮಗೆ ಜೈಲೇ ಗಟ್ಟಿಯಾಗುತ್ತೆ. ಯಾರೂ ಸಹಾಯ ಮಾಡುವುದಿಲ್ಲ ಎಂದು ಗೋಳಾಡಿಕೊಂಡಿದ್ದಾರೆ.‌ ದರ್ಶನ್‌ಗೆ ಜಾಮೀನು ಅರ್ಜಿಯನ್ನಾದರೂ ಸಲ್ಲಿಸಲಾಗಿತ್ತು. ಆದರೆ ಇವರಿಗೆ ಜಾಮೀನು ನೀಡುವುದಕ್ಕೂ ಯಾರೂ ಮುಂದೆ ಬಂದಿಲ್ಲ. ದರ್ಶನ್‌ ಮನೆಯವರು ಹಾಗೂ ನ್ಯಾಯವಾದಿಗಳ ತಂಡದ ಕಡೆಯಿಂದಲೂ ಸಹಾಯದ ಭರವಸೆ ದೊರೆತಿಲ್ಲ ಎನ್ನಲಾಗಿದೆ.

ಈ ಪ್ರಕರಣದ ಬಳಿಕ ನಮ್ಮೆಲ್ಲರ ಜೀವನ ಸೆಟ್ಲ್ ಆಗುತ್ತೆ ಡೋಂಟ್ ವರಿ ಎಂದು ಇನ್ನೊಬ್ಬ ಆರೋಪಿ ರಾಘವೇಂದ್ರ ಹಣದ ಆಮಿಷ ತೋರಿಸಿದ್ದನಂತೆ. ಕೊಲೆ ಬಳಿಕ ಮೃತದೇಹ ಬಿಸಾಡಿದ್ದು, ಸ್ಟೇಷನ್‌ಗೆ ಹೋಗಿ ಸರೆಂಡರ್ ಆಗಿದ್ದು ಎಲ್ಲವನ್ನೂ ಈ ಆರೋಪಿಗಳು ರಾಘವೇಂದ್ರ ಹೇಳಿದಂತೆ ಮಾಡಿದ್ದಾರೆ. ಆದರೆ ಪೊಲೀಸರ ತನಿಖೆಯ ಬಿಗಿ ಹೆಚ್ಚಾಗುತ್ತ ಹೋದಂತೆ ಎಲ್ಲವನ್ನೂ ಹೇಳಿಬಿಟ್ಟಿದ್ದಾರೆ.

ದುಡ್ಡಿನ ಆಸೆಗೆ ತಪ್ಪು ಮಾಡಿಬಿಟ್ಟೆವು ಎಂದು ಇದೀಗ ಜೈಲು ಸಿಬ್ಬಂದಿ ಬಳಿ ಆರೋಪಿಗಳು ಅಳಲು ತೋಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಜೋರು ಮಾತುಗಳಿಂದ ನಾಲ್ವರೂ ಬೈದಾಡಿಕೊಂಡಿದ್ದು, ಜೈಲಾಧಿಕಾರಿಗಳು ನಾಲ್ವರಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗಲಾಟೆ ಮಾಡಿಕೊಂಡರೆ ಕಷ್ಟ ಎಂದು ಜೈಲು ಸಿಬ್ಬಂದಿ ಹೆಚ್ಚಿನ ನಿಗಾ ಇಟ್ಟಿದ್ದಾರೆ.

ಸಾಕ್ಷಿಗಳಿಗೆ ಬೆದರಿಕೆ, ಎನ್‌ಸಿಆರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಜೈಲಿನಲ್ಲಿದ್ದೇ ಡಿ ಗ್ಯಾಂಗ್ ಪ್ಲಾನ್ ಮಾಡಿದೆ ಎಂದು ವರದಿಯಾಗಿದ್ದು, ಪೊಲೀಸರ ಮುಂದೆ ಸಾಕ್ಷಿ ಹೇಳದಂತೆ ಹಲವರಿಗೆ ಬೆದರಿಕೆ ಒಡ್ಡಿದೆ ಎಂದು ಗೊತ್ತಾಗಿದೆ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ವ್ಯಕ್ತಿಗೆ ಜೈಲಿನಲ್ಲಿದ್ದುಕೊಂಡೇ ಈ ಟೀಮ್‌ ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿಯೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಎನ್‌ಸಿಆರ್ ದಾಖಲಿಸಿ ಸಾಕ್ಷಿಗಳಿಗೆ ಧೈರ್ಯ ತುಂಬಿದ್ದಾರೆ. ಈಗಾಗಲೇ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ಬಂಧನಕ್ಕೂ ಮುನ್ನವೇ ಗ್ಯಾಂಗ್‌ ಡಿಲೀಟ್ ಮಾಡಿಸಿತ್ತು. ಸಾಕ್ಷ್ಯನಾಶ ಮಾಡಲು ಡಿ ಗ್ಯಾಂಗ್ ಸರ್ವ ಪ್ಲಾನ್‌ಗಳನ್ನೂ ಮಾಡಿತ್ತು. ಸಾಕ್ಷಿಗಳು ಈ ಕುರಿತು ಆತಂಕದಲ್ಲಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Continue Reading

ಕ್ರೈಂ

Food Poisoning: ವಿಷ ಬೆರೆತ ಮಟನ್‌ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ

Food Poisoning: ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರಬಹುದು ಎಂಬ ಶಂಕೆಯಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

raichur food poisoning 1
Koo

ರಾಯಚೂರು: ವಿಷ ಬೆರೆತ ಮಟನ್ (Mutton) ಊಟ ಮಾಡಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘೋರ ಘಟನೆ ರಾಯಚೂರು (Raichur news) ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ನಡೆದಿದೆ. ಇನ್ನೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಫುಡ್‌ ಪಾಯಿಸನ್‌ನಿಂದ (Food Poisoning) ಹೀಗಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ ಆತ್ಮಹತ್ಯೆ ಸಾಧ್ಯತೆಯ (Self Harming) ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ರಾಯಚೂರು ಜಿಲ್ಲೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಈ ದುರಂತ ನಡೆದಿದೆ. ಭೀಮಣ್ಣ (60), ಭೀಮಣ್ಣನ ಪತ್ನಿ ಈರಮ್ಮ (54), ಭೀಮಣ್ಣನ ಮಗ ಮಲ್ಲೇಶ್ (19), ಮಗಳು ಪಾರ್ವತಿ (17) ಸಾವಿಗೀಡಾದವರು. ಮತ್ತೊಬ್ಬ ಮಗಳು ಮಲ್ಲಮ್ಮ (18) ಎಂಬಾಕೆಯ ಸ್ಥಿತಿ ಗಂಭೀರವಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬುಧವಾರ ರಾತ್ರಿ ಇಡೀ ಕುಟುಂಬ ಮಟನ್ ಕೊಂಡು ತಂದು ಅಡುಗೆ ಮಾಡಿ ಜೊತೆಯಾಗಿ ಊಟ ಮಾಡಿತ್ತು. ಮಟನ್ ಮಾಡುವ ವೇಳೆ ಅಡುಗೆಯಲ್ಲಿ ಹಲ್ಲಿ ಬಿದ್ದಿರಬಹುದು ಎಂಬ ಶಂಕೆಯಿದೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದು ಫುಡ್ ಪಾಯ್ಸನ್ ಅಲ್ಲ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದೂ ಕೆಲವರು ತರ್ಕಿಸಿದ್ದಾರೆ. ಎಂಎಲ್‌ಸಿ ವರದಿ ಆಧರಿಸಿ ಫುಡ್ ಪಾಯ್ಸನ್ ಅಂತ ಪ್ರಾಥಮಿಕ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಆತ್ಮಹತ್ಯೆ ಆರೋಪದ ಹಿನ್ನೆಲೆಯಲ್ಲಿ ಆ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

ಚಿಕ್ಕಬಳ್ಳಾಪುರ: ಇನ್‌ಸ್ಟಾಗ್ರಾಂನಲ್ಲಿ ಲವ್‌ (Instagram Love Story) ಆಗಿ ಓಡಿಹೋಗುವ, ಇರುವ ಗಂಡನ/ಹೆಂಡತಿಯ ಬಿಟ್ಟು ಇನ್ನೊಬ್ಬನ/ಳ ಜೊತೆ ಪರಾರಿಯಾಗುವ (Elope) ಪ್ರಕರಣಗಳು ಹೆಚ್ಚುತ್ತಿವೆ. ಇದು ಅಂಥದೇ ಇನ್ನೊಂದು ಪ್ರಕರಣ. ಇದೂ ಕೂಡ ಇನ್‌ಸ್ಟಗ್ರಾಂನಲ್ಲಿ ಹುಟ್ಟಿಕೊಂಡ ಪ್ರೀತಿ ದಾಂಪತ್ಯವನ್ನು (Marriage) ಹಾಳು ಮಾಡಿದ ಕಥೆ. ಮೂವರು ಗಂಡರ ಮುದ್ದಿನ ಹೆಂಡತಿಯ ಪ್ರಕರಣದಲ್ಲಿ ಎರಡನೇ ಗಂಡ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಬೆಳಗಾವಿಯಲ್ಲಿ (Belagavi news) ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಲವ್ ಮಾಡಿ ಇನ್ನೊಬ್ಬನನ್ನು ಮದುವೆ ಆದ ಪ್ರಕರಣದಲ್ಲಿ ಇದೀಗ ಎರಡನೇ ಗಂಡನೇ ಪೋಲೀಸರಿಗೆ ದೂರು ನೀಡಿದ್ದಾನೆ. ಶಿಡ್ಲಘಟ್ಟದಲ್ಲಿ ದೂರು ದಾಖಲಾಗಿದೆ. ಯುವತಿ ಪ್ರಿಯಾಂಕ ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾಳೆ. ಆಕೆ ಕಾರು ಬಾಡಿಗೆ ಹೋಗಿದ್ದ ವೇಳೆ ಪರಿಚಯವಾಗಿದ್ದಳು. ಒಂದು ವಾರ ಫೋನ್‌ನಲ್ಲಿ ಮಾತನಾಡಿ ನಂತರ ನನ್ನ ಜೊತೆಯಲ್ಲಿ ಬಂದಳು. 8 ತಿಂಗಳಿನಿಂದ ನನ್ನ ಜೊತೆಯಲ್ಲಿ ಇದ್ದಳು ಎಂದು ಎರಡನೇ ಗಂಡ ದೂರಿದ್ದಾನೆ.

ಬೆಳಗಾವಿಗೆ ಸ್ನೇಹಿತೆಯ ಮದುವೆಯಿದೆ ಎಂದು ಹೇಳಿ ಹೋದಳು. ಸ್ವಂತ ಮಾವ ನನ್ನ ಕೂಡಿ ಹಾಕಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಿದ್ದಾಳೆ‌. ಆ ಆರೋಪ‌ ಸುಳ್ಳು, ನಾನು ಅವರ ಸೋದರ ಮಾವ ಅಲ್ಲ. ನಮಗೂ ಅವರಿಗೂ ಯಾವುದೇ ರೀತಿ ಸಂಬಂಧ ಇಲ್ಲ. ನನ್ನ ಮದುವೆಗೂ ಮುನ್ನ ಆಕೆಯ ಮೊದಲೇ ಮದುವೆ ಆಗಿತ್ತು. ನನ್ನ ಜೊತೆಯಲ್ಲಿ ಬಂದಾಗ ಅವಳ ಮೊದಲನೇ ಗಂಡ ಮುನಿರಾಜು ಬಂದು ವಾಪಸ್ ಕರೆದುಕೊಂಡು ಹೋಗಿದ್ದರು. ಆಕೆ ಮತ್ತೆ ನಾನೇ ಬೇಕು ಎಂದು ವಾಪಸ್ ಬಂದಳು. ಆರೋಪ ಎಲ್ಲಾ ಸುಳ್ಳು ಎಂದು ಪ್ರಿಯಾಂಕ ವಿರುದ್ಧ ಎರಡನೇ ಗಂಡ ದೂರು ನೀಡಿದ್ದಾನೆ.

ಈಕೆ ಮೊದಲು ಚಿಕ್ಕಬಳ್ಳಾಪುರದ ಮುನಿರಾಜು ಎಂಬವರನ್ನು ಮದುವೆಯಾಗಿದ್ದಳು. ನಂತರ ಶಿಡ್ಲಘಟ್ಟದ ಸುಧಾಕರ್‌ ಜೊತೆಗೆ ಎರಡನೇ ಮದುವೆಯಾಗಿದ್ದಳು. ಈತನ ಜೊತೆಗೆ ಪ್ರೀತಿ ಇನ್‌ಸ್ಟಗ್ರಾಂ ಮೂಲಕ ಹುಟ್ಟಿಕೊಂಡದ್ದು ಎನ್ನಲಾಗಿತ್ತು. ಇದೀಗ ಬೆಳಗಾವಿ ಮೂಲದ ರೋಹಿತ್‌ ಎಂಬಾತನ ಜೊತೆಗೆ ಮೂರನೇ ಮದುವೆಯಾಗಿದೆ ಎನ್ನಲಾಗಿದೆ. ಈ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರಿಗೆ ತಲೆ ಕೆಡುವ ಹಾಗೆ ಆಗುತ್ತಿದೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Continue Reading

ಕ್ರೈಂ

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Instagram Love Story: ಬೆಳಗಾವಿಯಲ್ಲಿ ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಲವ್ ಮಾಡಿ ಇನ್ನೊಬ್ಬನನ್ನು ಮದುವೆ ಆದ ಪ್ರಕರಣದಲ್ಲಿ ಇದೀಗ ಎರಡನೇ ಗಂಡನೇ ಪೋಲೀಸರಿಗೆ ದೂರು ನೀಡಿದ್ದಾನೆ. ಶಿಡ್ಲಘಟ್ಟದಲ್ಲಿ ದೂರು ದಾಖಲಾಗಿದೆ.

VISTARANEWS.COM


on

instagram love story
Koo

ಚಿಕ್ಕಬಳ್ಳಾಪುರ: ಇನ್‌ಸ್ಟಾಗ್ರಾಂನಲ್ಲಿ ಲವ್‌ (Instagram Love Story) ಆಗಿ ಓಡಿಹೋಗುವ, ಇರುವ ಗಂಡನ/ಹೆಂಡತಿಯ ಬಿಟ್ಟು ಇನ್ನೊಬ್ಬನ/ಳ ಜೊತೆ ಪರಾರಿಯಾಗುವ (Elope) ಪ್ರಕರಣಗಳು ಹೆಚ್ಚುತ್ತಿವೆ. ಇದು ಅಂಥದೇ ಇನ್ನೊಂದು ಪ್ರಕರಣ. ಇದೂ ಕೂಡ ಇನ್‌ಸ್ಟಗ್ರಾಂನಲ್ಲಿ ಹುಟ್ಟಿಕೊಂಡ ಪ್ರೀತಿ ದಾಂಪತ್ಯವನ್ನು (Marriage) ಹಾಳು ಮಾಡಿದ ಕಥೆ. ಮೂವರು ಗಂಡರ ಮುದ್ದಿನ ಹೆಂಡತಿಯ ಪ್ರಕರಣದಲ್ಲಿ ಎರಡನೇ ಗಂಡ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಬೆಳಗಾವಿಯಲ್ಲಿ (Belagavi news) ಯುವತಿ ಇನ್‌ಸ್ಟಾಗ್ರಾಮ್‌ನಲ್ಲಿ ಲವ್ ಮಾಡಿ ಇನ್ನೊಬ್ಬನನ್ನು ಮದುವೆ ಆದ ಪ್ರಕರಣದಲ್ಲಿ ಇದೀಗ ಎರಡನೇ ಗಂಡನೇ ಪೋಲೀಸರಿಗೆ ದೂರು ನೀಡಿದ್ದಾನೆ. ಶಿಡ್ಲಘಟ್ಟದಲ್ಲಿ ದೂರು ದಾಖಲಾಗಿದೆ. ಯುವತಿ ಪ್ರಿಯಾಂಕ ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾಳೆ. ಆಕೆ ಕಾರು ಬಾಡಿಗೆ ಹೋಗಿದ್ದ ವೇಳೆ ಪರಿಚಯವಾಗಿದ್ದಳು. ಒಂದು ವಾರ ಫೋನ್‌ನಲ್ಲಿ ಮಾತನಾಡಿ ನಂತರ ನನ್ನ ಜೊತೆಯಲ್ಲಿ ಬಂದಳು. 8 ತಿಂಗಳಿನಿಂದ ನನ್ನ ಜೊತೆಯಲ್ಲಿ ಇದ್ದಳು ಎಂದು ಎರಡನೇ ಗಂಡ ದೂರಿದ್ದಾನೆ.

ಬೆಳಗಾವಿಗೆ ಸ್ನೇಹಿತೆಯ ಮದುವೆಯಿದೆ ಎಂದು ಹೇಳಿ ಹೋದಳು. ಸ್ವಂತ ಮಾವ ನನ್ನ ಕೂಡಿ ಹಾಕಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಿದ್ದಾಳೆ‌. ಆ ಆರೋಪ‌ ಸುಳ್ಳು, ನಾನು ಅವರ ಸೋದರ ಮಾವ ಅಲ್ಲ. ನಮಗೂ ಅವರಿಗೂ ಯಾವುದೇ ರೀತಿ ಸಂಬಂಧ ಇಲ್ಲ. ನನ್ನ ಮದುವೆಗೂ ಮುನ್ನ ಆಕೆಯ ಮೊದಲೇ ಮದುವೆ ಆಗಿತ್ತು. ನನ್ನ ಜೊತೆಯಲ್ಲಿ ಬಂದಾಗ ಅವಳ ಮೊದಲನೇ ಗಂಡ ಮುನಿರಾಜು ಬಂದು ವಾಪಸ್ ಕರೆದುಕೊಂಡು ಹೋಗಿದ್ದರು. ಆಕೆ ಮತ್ತೆ ನಾನೇ ಬೇಕು ಎಂದು ವಾಪಸ್ ಬಂದಳು. ಆರೋಪ ಎಲ್ಲಾ ಸುಳ್ಳು ಎಂದು ಪ್ರಿಯಾಂಕ ವಿರುದ್ಧ ಎರಡನೇ ಗಂಡ ದೂರು ನೀಡಿದ್ದಾನೆ.

ಈಕೆ ಮೊದಲು ಚಿಕ್ಕಬಳ್ಳಾಪುರದ ಮುನಿರಾಜು ಎಂಬವರನ್ನು ಮದುವೆಯಾಗಿದ್ದಳು. ನಂತರ ಶಿಡ್ಲಘಟ್ಟದ ಸುಧಾಕರ್‌ ಜೊತೆಗೆ ಎರಡನೇ ಮದುವೆಯಾಗಿದ್ದಳು. ಈತನ ಜೊತೆಗೆ ಪ್ರೀತಿ ಇನ್‌ಸ್ಟಗ್ರಾಂ ಮೂಲಕ ಹುಟ್ಟಿಕೊಂಡದ್ದು ಎನ್ನಲಾಗಿತ್ತು. ಇದೀಗ ಬೆಳಗಾವಿ ಮೂಲದ ರೋಹಿತ್‌ ಎಂಬಾತನ ಜೊತೆಗೆ ಮೂರನೇ ಮದುವೆಯಾಗಿದೆ ಎನ್ನಲಾಗಿದೆ. ಈ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರಿಗೆ ತಲೆ ಕೆಡುವ ಹಾಗೆ ಆಗುತ್ತಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್‌ ಕೊಲೆ

ಬೆಂಗಳೂರು: ಹಾಡಹಗಲೆ ಯುವಕನ ಬರ್ಬರ ಹತ್ಯೆ (Murder case) ನಡೆದಿದೆ. ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ಘಟನೆ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು.

ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೊಲೆ ಕೇಸ್‌ನಲ್ಲಿ ಆರೋಪಿಯಾಗಿದ್ದ ಅಜಿತ್‌

ಬ್ಲಡ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಅಜಿತ್‌, 2022ರಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಸಂಜೆ 4:15ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ ಅಜಿತ್ ಮೇಲೆ ಏಕಾಏಕಿ ಹಂತಕರ ಗ್ಯಾಂಗ್‌ ಅಟ್ಯಾಕ್‌ ಮಾಡಿದೆ. ಮಚ್ಚು ಬೀಸಿದ ರಭಸಕ್ಕೆ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶೇಷಾದ್ರಿಪುರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಜಿತ್ ಹಾಗೂ ಸೋದರ ಕಾರ್ತಿಕ್ ಇಬ್ಬರು ಗಣೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಏರಿಯಾದಲ್ಲಿ ನಾನೇ ಡಾನ್ ಎಂದು ಅಜಿತ್‌ ಮೆರೆಯುತ್ತಿದ್ದ. ಸಮಯ ಕಾದು ನೋಡಿ ಎದುರಾಳಿಗಳು ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Continue Reading
Advertisement
Wayanad landslides
ದೇಶ4 mins ago

Wayanad Landslide: ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

Namma Metro
ಬೆಂಗಳೂರು13 mins ago

Namma Metro : ಆಟವಾಡುತ್ತಾ ಮೆಟ್ರೋ ಟ್ರ್ಯಾಕ್‌ಗೆ ಜಿಗಿದ 4 ವರ್ಷದ ಮಗು! ಮುಂದೇನಾಯ್ತು

Paris Olympics
ಕ್ರೀಡೆ14 mins ago

Paris Olympics: ಹ್ಯಾಟ್ರಿಕ್​ ಪದಕ ನಿರೀಕ್ಷೆಯಲ್ಲಿ ಮನು ಭಾಕರ್; 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧೆ

Actor Darshan Lost KG In 25 Days
ಕ್ರೈಂ54 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಆರೋಪಿಗಳ ನಡುವೆಯೇ ಚಕಮಕಿ, ಗೋಳಾಟ!

Gold Rate Today
ಕರ್ನಾಟಕ54 mins ago

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌; ಮತ್ತೆ ಏರಿಕೆ ಕಂಡ ಚಿನ್ನದ ದರ

KSET 2024
ನೋಟಿಸ್ ಬೋರ್ಡ್54 mins ago

KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

Stock Market
ದೇಶ1 hour ago

Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Swapnil Kusale
ಕ್ರೀಡೆ2 hours ago

Swapnil Kusale: ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

raichur food poisoning 1
ಕ್ರೈಂ2 hours ago

Food Poisoning: ವಿಷ ಬೆರೆತ ಮಟನ್‌ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ

Paris Olympics
ಕ್ರೀಡೆ2 hours ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ22 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ23 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ23 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌