Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು - Vistara News

ಕ್ರೈಂ

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Police Firing: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ. ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ.

VISTARANEWS.COM


on

Police Firing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ (Police Firing).

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೂಕನಬೆಟ್ಟದ ಬಳಿ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ ಫೈರಿಂಗ್ ನಡೆದಿದೆ.

ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ಪ್ರಕರಣದಲ್ಲಿ ಭಾಗಿಯಗಿರುವ ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಡ್ರ್ಯಾಗನ್‌ನಿಂದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಗಾಯಗೊಂಡ ಆರೋಪಿ ಸತೀಶ್‌ನನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ. ಆರೋಪಿಯಿಂದ ದಾಳಿಗೊಳಗಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜು ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಸಕ್ಕರೆನಾಡು ಮಂಡ್ಯದಲ್ಲಿಯೂ ಫೈರಿಂಗ್‌

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಧಾರವಾಡ: ಪ್ರೇಮಿಗಳಿಗೆ ಕಂಟಕವಾದ ಪಾಲಕರು

ಧಾರವಾಡ: ಪ್ರೇಮಿಗಳ ಪಾಲಿಗೆ ಅವರ ಪಾಲಕರೇ ಕಂಟಕವಾಗಿದ್ದು, ನವ ದಂಪತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಧಾರವಾಡದ ಯುವಕ ಹಾವೇರಿ ಯುವತಿ ನಡುವಿನ ಲವ್‌ ಸ್ಟೋರಿ ಇದೀಗ ಪೊಲೀಸ್‌ ಸ್ಟೇಶನ್‌ವರೆಗೂ ಬಂದಿದೆ.

ಧಾರವಾಡದ ಶಂಭು ಹಾಗೂ ಹಾವೇರಿಯ ಶಾಲಿನಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ ಇವರ ಮದುವೆಗೆ ಮನೆಯವರು ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಪೋಷಕರ ವಿರೋಧದ ನಡುವೆಯೇ ಮದುವೆ ಆಗಿದ್ದರು. ಮದುವೆಗೂ ಶಾಲಿನಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಬೇರೆ ಬೇರೆ ಜಾತಿ ಆಗಿದ್ದಕ್ಕೆ ಶಾಲಿನಿ ಮನೆಯವರು ಮದುವೆಯನ್ನು ವಿರೋಧಿಸಿದ್ದರು. ಆಕೆಗೆ ಬೇರೆ ಯುವಕನ ಜತೆಗೆ ಮದುವೆ ಮಾಡಲು ಮುಂದಾಗಿದ್ದರು. ಇದೀಗ ದಂಪತಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ರಕ್ಷಣೆ ಕೊಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಶಾಲಿನಿಯ ಪೋಷಕರಿಂದ ನವ ಕೊಲೆ ಬೆದರಿಕೆ ಬಂದಿದೆ ಎಂದು ದೂರು ನೀಡಲಾಗಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Hidden Camera: ದೊಡ್ಡ ದೊಡ್ಡ ಹೋಟೆಲ್‌, ಕೆಫೆಗಳಲ್ಲಿ ವಾಶ್‌ರೂಮ್‌ ಬಳಸುವ ಮುನ್ನ ನೂರು ಸಲ ಯೋಚನೆ ಮಾಡಿ.. ಯಾಕೆಂದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ವಿಡಿಯೊ ರೆಕಾರ್ಡ್‌ ಆಗುತ್ತಿರಬಹುದು. ಸದ್ಯ ಇಂತಹದ್ದೆ ಒಂದು ಘಟನೆ ಪ್ರಸಿದ್ಧ ಕಾಫಿ ಶಾಪ್‌ನಲ್ಲಿ ನಡೆದಿದೆ.

VISTARANEWS.COM


on

By

Hidden camera
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕೆಲವು ಕಿಡಿಗೇಡಿಗಳ ಕೃತ್ಯಕ್ಕೆ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಹೋಟೆಲ್‌, ಕಾಫಿ ಶಾಪ್‌, ಶಾಪಿಂಗ್‌ ಮಾಲ್‌ನ ಟ್ರಯಲ್‌ ರೂಮ್‌ನಿಂದ ಹಿಡಿದು ವಾಶ್‌ ರೂಮ್‌ನಲ್ಲಿ ಹಿಡನ್‌ ಕ್ಯಾಮೆರಾಗಳನ್ನು (Hidden Camera) ಇಟ್ಟು, ಹೆಣ್ಮಕ್ಕಳ ವಿಡಿಯೊ ಮಾಡಿಕೊ‌ಳ್ಳುವ ಗ್ಯಾಂಗ್‌ ಇದೆ. ಸದ್ಯ ಬೆಂಗಳೂರು ನಗರದ ಬಿಇಎಲ್ ರಸ್ತೆಯಲ್ಲಿರುವ ಪ್ರಸಿದ್ಧ ಥರ್ಡ್ ವೇವ್ ಕಾಫಿ ಕೆಫೆಯ (Third Wave Coffee cafe) ಲೇಡಿಸ್‌ ವಾಶ್‌ ರೂಮ್‌ನ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆಯಾಗಿದೆ. ಸುಮಾರು 2 ಗಂಟೆಗಳ ಕಾಲ ಮೊಬೈಲ್‌ ಕ್ಯಾಮೆರಾದಲ್ಲಿ ವಿಡಿಯೊ ರೆಕಾರ್ಡ್‌ ಆಗಿದೆ.

ಥರ್ಡ್‌ ವೇವ್‌ ಕಾಫಿ ಕೆಫೆ ಸಿಬ್ಬಂದಿಯೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಕೆಫೆ ಸಿಬ್ಬಂದಿಯೇ ಮೊಬೈಲ್ ಫೋನ್ ಅನ್ನು ಮಹಿಳಾ ಶೌಚಾಲಯದಲ್ಲಿ ಬಚ್ಚಿಟ್ಟಿದ್ದು, ಸುಮಾರು ಎರಡು ಗಂಟೆಗಳ ಕಾಲ ವಿಡಿಯೊ ರೆಕಾರ್ಡಿಂಗ್ ಆಗಿದೆ ಎಂದು ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮಗೆ ಆದ ಅನುಭವವನ್ನು ಹಂಚಿಕೊಂಡಿದ್ದಾರೆ.

“ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಕೆಫೆಗೆ ಹೋಗಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಇರುವ ಕಸದ ಬುಟ್ಟಿಯಲ್ಲಿ ಮೊಬೈಲ್‌ ಫೋನ್‌ ಅಡಗಿಸಿಟ್ಟಿರುವುದು ಕಂಡು ಬಂತು. ಫೋನ್‌ ಫ್ಲೈಟ್‌ ಮೋಡ್‌ನಲ್ಲಿ ಇದ್ದ ಕಾರಣಕ್ಕೆ ಯಾರಿಗೂ ಗೊತ್ತಾಗಿಲ್ಲ. ಡಸ್ಟ್‌ಬೀನ್‌ನಲ್ಲಿ ಸಣ್ಣದೊಂದು ರಂಧ್ರ ಮಾಡಿ, ಫೋನ್‌ ಇಟ್ಟು ಕ್ಯಾಮೆರಾ ಆನ್‌ ಮಾಡಲಾಗಿತ್ತು. ಇದನ್ನೂ ಸೂಕ್ಷ್ಮವಾಗಿ ಗಮನಿಸಿದಾಗ ಫೋನ್‌ ಇರುವುದು ಗೊತ್ತಾಗಿದೆ. ಆ ಫೋನ್‌ ಅಲ್ಲಿನ ಸಿಬ್ಬಂದಿಯದ್ದು ಎಂದು ಗೊತ್ತಾಯಿತು ಎಂದು ತಿಳಿಸಿದ್ದಾರೆ.

Hidden camera
Hidden camera

ಇಂತಹ ಕೆಫೆಗಳು ಅಥವಾ ರೆಸ್ಟೋರೆಂಟ್‌ಗಳು ಎಷ್ಟೇ ಪ್ರಸಿದ್ಧವಾಗಿದ್ದರೂ, ಇವತ್ತಿನಿಂದ ನಾನು ಯಾವುದೇ ವಾಶ್ ರೂಮ್‌ ಬಳಸಬೇಕಾದರೂ ನೂರು ಸಲ ಯೋಚನೆ ಮಾಡುತ್ತೇನೆ. ನೀವೂ ಕೂಡ ಹುಷಾರಾಗಿ ಎಂದು ಇನ್ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಿಬ್ಬಂದಿಯನ್ನು ವಜಾ ಮಾಡಿದ ಥರ್ಡ್‌ ವೇವ್‌ ಕಾಫಿ ಕೆಫೆ

ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆ ಕುರಿತು ಥರ್ಡ್‌ ವೇವ್‌ ಕಾಫಿ ಕೆಫೆ ಎಕ್ಸ್‌ನಲ್ಲಿ ಕ್ಷಮೆ ಕೇಳಿ ಪೋಸ್ಟ್‌ ಮಾಡಿದೆ. ಬಿಇಎಲ್‌ ರಸ್ತೆಯಲ್ಲಿರುವ ಕಫೆಯಲ್ಲಿ ನಡೆದಿರುವ ಈ ಘಟನೆಗೆ ವಿಷಾದಿಸುತ್ತೇವೆ. ನಮ್ಮ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಜತೆಗೆ ಗ್ರಾಹಕರ ಸುರಕ್ಷತೆಗಾಗಿ ಮತ್ತಷ್ಟು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Hidden camera
Hidden camera

ಕ್ಯಾಮೆರಾ ಇಟ್ಟ ಕಾಮುಕ ಅರೆಸ್ಟ್‌

ಕ್ಯಾಮೆರಾ ಕಂಡೊಡನೆ ಗಾಬರಿಯಾದ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತ್ಯದ ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜತೆಗೆ ಭದ್ರಾವತಿ ಮೂಲದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡಿದ್ದು ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ. ಕಾಫಿ ಶಾಪ್‌ನಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ (23) ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಫೋನ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Serial Killer: ಬಂಧಿತನನ್ನು ಕುಲದೀಪ್‌ ಎಂದು ಗುರುತಿಸಲಾಗಿದ್ದು, ಈ ಪೊಲೀಸರ ಎದುರು ತಾನು ಹೇಗೆ ಕೊಲೆ ಮಾಡುತ್ತಿದೆ ಎಂಬುದನ್ನು ವಿವರಿಸಿದ್ದಾನೆ. ಶಾಹಿ-ಶೀಶ್‌ಗಢ ಪ್ರದೇಶದಲ್ಲಿ 25 ಕಿ.ಮೀ ವ್ಯಾಪ್ತಿಯಲ್ಲಿ ಈ ಕೊಲೆಗಳು ನಡೆದಿದ್ದು, 45 ರಿಂದ 55 ವರ್ಷ ವಯಸ್ಸಿನ ಒಂಬತ್ತು ಮಹಿಳೆಯರನ್ನು ತಮ್ಮ ಸೀರೆಯಿಂದ ಕತ್ತು ಹಿಸುಕಿ ಹಂತಕ ಕೊಲೆಗೈದಿದ್ದಾನೆ.

VISTARANEWS.COM


on

Serial Killer
Koo

ಲಖನೌ: ಕಳೆದೊಂದು ವರ್ಷದಲ್ಲಿ ಬರೋಬ್ಬರಿ 9 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೈದ ಪಾತಕಿಯನ್ನು(Serial Killer) ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಉತ್ತರ ಪ್ರದೇಶ(Uttar Pradesh)ದ ಬರೇಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈತ ಸರಣಿ ಕೊಲೆ ಹೇಗೆ ಮಾಡುತ್ತಿದ್ದ ಎಂಬುದನ್ನು ಪೊಲೀಸರ ಎದುರು ಪ್ರಾತ್ಯಕ್ಷಿಕೆ ಸಮೇತ ವಿವರಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ಬಂಧಿತನನ್ನು ಕುಲದೀಪ್‌ ಎಂದು ಗುರುತಿಸಲಾಗಿದ್ದು, ಈ ಪೊಲೀಸರ ಎದುರು ತಾನು ಹೇಗೆ ಕೊಲೆ ಮಾಡುತ್ತಿದೆ ಎಂಬುದನ್ನು ವಿವರಿಸಿದ್ದಾನೆ.. ಶಾಹಿ-ಶೀಶ್‌ಗಢ ಪ್ರದೇಶದಲ್ಲಿ 25 ಕಿ.ಮೀ ವ್ಯಾಪ್ತಿಯಲ್ಲಿ ಈ ಕೊಲೆಗಳು ನಡೆದಿದ್ದು, 45 ರಿಂದ 55 ವರ್ಷ ವಯಸ್ಸಿನ ಒಂಬತ್ತು ಮಹಿಳೆಯರನ್ನು ತಮ್ಮ ಸೀರೆಯಿಂದ ಕತ್ತು ಹಿಸುಕಿ ಹಂತಕ ಕೊಲೆಗೈದಿದ್ದಾನೆ. ಕೊಲೆಯಾದ ಮಹಿಳೆಯರ ಶವಗಳು ಬಹುತೇಕ ಹೊಲಗಳಲ್ಲಿ ಪತ್ತೆ ಮಾಡಲಾಗಿವೆ. ಸಾಮಾನ್ಯವಾಗಿ ಮಧ್ಯಾಹ್ನದ ಸುಮಾರಿಗೇ ಈತ ಕೃತ್ಯ ಎಸಗುತ್ತಿದ್ದ. ಇದಕ್ಕೂ ಮುನ್ನ ಅವರನ್ನು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡುತ್ತಿದ್ದ ಎಂಬುದನ್ನು ಕುಲದೀಪ್‌ ಪೊಲೀಸರ ಎದುರು ಒಪ್ಪಿಕೊಂಡಿದ್ದಾನೆ.

ಇನ್ನು ಕೊಲೆಗಳು ಎರಡು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದೆ. ಈ ಭಯಾನಕ ಘಟನೆಗಳು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಕೆಲವು ತಿಂಗಳ ಹಿಂದೆ ಸರಣಿ ಅತ್ಯಾಚಾರಿ, ಹಂತಕ ರವೀಂದರ್​ ಕುಮಾರ್ ಎಂಬಾತ​​ನಿಗೆ, ಎಂಟು ವರ್ಷಗಳ ಹಿಂದಿನ ಕೇಸ್​ವೊಂದರಲ್ಲಿ ದೆಹಲಿ ನ್ಯಾಯಾಲಯ (Delhi Court) ಈಗ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ರವೀಂದರ್ ಕುಮಾರ್​ನ ಭಯಾನಕ ಸ್ಟೋರಿಯನ್ನು ಇತ್ತೀಚೆಗೆಷ್ಟೇ ಮಾಧ್ಯಮಗಳು ವರದಿ ಮಾಡಿದ್ದವು. 2008ರಿಂದ 2015ರವರೆಗೆ ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೊಂದಿದ್ದ. ಅವನಿಗೆ ಹೆಣ್ಣು-ಗಂಡು ಎಂಬ ಭೇದವಿರಲಿಲ್ಲ. 2015ರಲ್ಲಿ, ದೆಹಲಿಯ ಬೇಗಂಪುರ ಎಂಬಲ್ಲಿ, 6 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಂದಿದ್ದ. ಆ ಕೇಸ್​​ನಡಿ ರವೀಂದರ್​ ಅರೆಸ್ಟ್ ಆಗಿದ್ದ. ಇದೀಗ ಅದೇ ಕೇಸ್​​ನಲ್ಲಿ ದೆಹಲಿ ನ್ಯಾಯಾಲಯ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: Serial Killer | ಕೆಜಿಎಫ್ ಸಿನಿಮಾ ಪ್ರೇರಿತ ಯುವಕ ಆದ ಸೀರಿಯಲ್ ಕಿಲ್ಲರ್, ಕಲ್ಲಿನಿಂದ ಜಜ್ಜಿ ಐವರನ್ನು ಕೊಂದೇ ಬಿಟ್ಟ!

Continue Reading

ಕ್ರೈಂ

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

VISTARANEWS.COM


on

Police Firing
Koo

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ (Police Firing). ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ವಿವರ

ಕಾರ್ಯಾಚರಣೆ ಬಗ್ಗೆ ಮಂಡ್ಯದಲ್ಲಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಜುಲೈ 30ರಂದು ಕಾಂತರಾಜು ಎಂಬಾತನ ಕೊಲೆಯಾಗಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿಐ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿತ್ತು. ತನಿಖೆ ವೇಳೆ ಕಾಂತರಾಜು ಕೊಲೆಗೆ ರೌಡಿಶೀಟರ್‌ ಡಕ್ಕ ಸುಪಾರಿ ನೀಡಿದ್ದಾಗಿ ಬಂಧಿತರು ಬಾಯ್ಬಿಟ್ಟಿದ್ದರು. ಮುತ್ತುರಾಜ್ ಸೂಚನೆ ಮೇರೆಗೆ ಕೊಲೆ ನಡೆಸಿರುವುದಾಗಿ ಅವರು ಹೇಳಿಕೆ ನೀಡಿದ್ದರು. ಹೀಗಾಗಿ ಸಿಪಿಐ ಶ್ರೀಧರ್ ಮತ್ತುವರ ತಂಡ ಡಕ್ಕನನ್ನು ಬಂಧಿಸಲು ಮುಂದಾಗಿತ್ತು. ಆತ ಚಿಕ್ಕಮಲಗೂಡು ಬಳಿ ಇರುವ ಬಗ್ಗೆ ಮಾಹಿತಿ ಲಭಿಸಿ ಅಲ್ಲಿಗೆ ತೆರಳಿದ್ದರು.

ಬೈಕ್‌ನಲ್ಲಿ ತೆರಳುತ್ತಿದ್ದ ಡಕ್ಕನ್ನು ಹಿಡಿಯಲು ಸಿಪಿಐ ಶ್ರೀಧರ್ ಮತ್ತು ತಂಡ ಮುಂದಾಯಿತು. ಈ ವೇಳೆ
ಬೈಕ್ ಬೀಳಿಸಿ ಆತ ಓಡಲು ಮುಂದಾಗಿದ್ದ. ತಡೆಯಲು ಮುಂದಾದ ಪೇದೆ ಮೇಲೆ ಡ್ರ್ಯಾಗನ್‌ನಿಂದ ಹಲ್ಲೆ ನಡೆಸಿದ್ದ.
ಏರ್‌ಫೈರ್ ವಾರ್ನಿಂಗ್‌ಗೂ ಡಕ್ಕ‌ ಬಗ್ಗಿರಲಿಲ್ಲ. ಕೊನೆಗೆ ಸ್ವಯಂ ರಕ್ಷಣೆಗಾಗಿ ಸಿಪಿಐ ಶ್ರೀಧರ್‌ ಫೈರಿಂಗ್ ನಡೆಸಿದ್ದರು. ಈ ವೇಳೆ ಡಕ್ಕನ ಬಲಗಾಲಿಗೆ ಗುಂಡೇಟು ತಗುಲಿದೆ ಎಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

11 ಪ್ರಕರಣದಲ್ಲಿ ಆರೋಪಿ

3 ಕೊಲೆ, 3 ಕೊಲೆಗೆ ಯತ್ನ, 2 ರಾಬರಿ ಪ್ರಕರಣ ಸೇರಿ ಡಕ್ಕನ ವಿರುದ್ಧ 11 ಪ್ರಕರಣ ದಾಖಲಾಗಿದೆ. ಹುಡುಗರ ಗುಂಪು ಕಟ್ಟಿಕೊಂಡು 2019ರಿಂದಲೂ ಈತ ರೌಡಿಸಂ ನಡೆಸುತ್ತಿದ್ದ. ಇಸ್ಪೀಟ್‌ ಆಡಿಸುವ ದಂಧೆಗೂ ಇಳಿದಿದ್ದ. ಡಕ್ಕನ ಗ್ಯಾಂಗ್‌ ಸದಸ್ಯರಿಗೂ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ: Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ

ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ದರೋಡೆ ಪ್ರಕರಣದ ಆರೋಪಿ ಸೋನು ನಾಯಕ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದರು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿತ್ತು. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಆತನ ವೇಳೆ ಫೈರಿಂಗ್‌ ಮಾಡಲಾಗಿತ್ತು.

Continue Reading

ದೇಶ

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

Kejriwal Bungalow Case: ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

Kejriwal Bungalow Case
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ(Delhi CM) ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರ ಅಧಿಕೃತ ಮನೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ(Kejriwal Bungalow Case)ದಲ್ಲಿ ಮೂವರು ಇಂಜಿನಿಯರ್‌ಗಳನ್ನು ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ) ಅಮಾನತುಗೊಳಿಸಿದೆ. ಮೂವರು ಇಂಜಿನಿಯರ್‌ಗಳಾದ ಪ್ರದೀಪ್ ಕುಮಾರ್ ಪರ್ಮಾರ್, ಅಭಿಷೇಕ್ ರಾಜ್ ಮತ್ತು ಅಶೋಕ್ ಕುಮಾರ್ ರಾಜ್‌ದೇವ್ ಅವರು ಕೇಜ್ರಿವಾಲ್ ಅವರ ಬಂಗಲೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಇಂಜಿನಿಯರ್‌ಗಳಿಗೆ ದೆಹಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಚಿವರು ಕೈಜೋಡಿಸಿದ್ದು, ಮತ್ತು ಸಿಎಂ ಬಂಗಲೆ ತುರ್ತಾಗಿ ನವೀಕರಣಗೊಳಿಸುವ ಅವಶ್ಯಕತೆ ಇದೆ ಎಂದು ಈ ಕಾರ್ಯಕ್ಕೆ ಕೈ ಹಾಕಿದ್ದರು. ಆದರೆ ಇಡೀ ದೇಶವೇ ಕೋವಿಡ್‌ ಎದುರಿಸುತ್ತಿದ್ದ ಸಂದರ್ಭದಲ್ಲಿ ಅಂತಹ ಯಾವುದೇ ಅವಶ್ಯಕತೆ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಇಲಾಖೆಯು ಹಣಕಾಸಿನ ನಿರ್ವಹಣೆ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಕುರಿತು ಆದೇಶಗಳನ್ನು ನೀಡುತ್ತಿರುವಾಗ, PWD ಸಚಿವರು ಹೊಸ ಬಂಗಲೆ ನಿರ್ಮಾಣದ ಪ್ರಸ್ತಾವನೆಯನ್ನು ಇಟ್ಟಿದ್ದರು ಎನ್ನಲಾಗಿದೆ.

ಪಿಡಬ್ಲ್ಯುಡಿ ಸಚಿವರ ನಿರ್ದೇಶನದ ಮೇರೆಗೆ ಹಳೆಯ ಕಟ್ಟಡವನ್ನು ಕೆಡವಿ ಹೊಸದನ್ನು ನಿರ್ಮಿಸುವುದು ಮತ್ತು ಅದರ ವೆಚ್ಚ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಕಲಾತ್ಮಕ ಮತ್ತು ಅಲಂಕಾರಿಕ ಕೆಲಸಗಳು, ಅತ್ಯುತ್ತಮ ಗುಣಮಟ್ಟದ ಕಲ್ಲಿನ ನೆಲಹಾಸುಗಳು, ಉನ್ನತ ಮರದ ಬಾಗಿಲುಗಳು ಮತ್ತು ಸ್ವಯಂಚಾಲಿತ ಜಾರುವ ಗಾಜಿನ ಬಾಗಿಲುಗಳು ಮುಂತಾದ ಬದಲಾವಣೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ ಎನ್ನಲಾಗಿದೆ. ಈ ಪ್ರಕರಣವನ್ನು ಈಗಾಗಲೇ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಅಬಕಾರಿ ನೀತಿ ಹಗರಣದಲ್ಲಿ ತಿಹಾರ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಭವ್‌ ಕುಮಾರ್‌ ವಿರುದ್ಧ ದೆಹಲಿ ಪೊಲೀಸರು (Delhi Police) ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ಹೆಸರನ್ನೂ ಪ್ರಸ್ತಾಪಿಸಲಾಗಿದೆ. ಇದು ಈಗ ಸಿಎಂಗೆ ಮತ್ತೊಂದು ಕಂಟಕವಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Continue Reading
Advertisement
Viral Video
ವೈರಲ್ ನ್ಯೂಸ್32 mins ago

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Maharaja Trophy schedule
ಕ್ರೀಡೆ33 mins ago

Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

Tungabhadra Dam
ಬೆಂಗಳೂರು41 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Hidden camera
ಬೆಂಗಳೂರು47 mins ago

Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

Tharun Sudhir - Sonal marriage vibe photos Out
ಸಿನಿಮಾ52 mins ago

Tharun Sudhir – Sonal: ತರುಣ್‌ ಸುಧೀರ್‌ -ಸೋನಲ್‌ ಕಲ್ಯಾಣ; ಹೇಗೆ ಕಾಣ್ತಿದ್ದಾಳೆ ನೋಡಿ ಮದುಮಗಳು!

Kieron Pollard
ಕ್ರೀಡೆ1 hour ago

Kieron Pollard: ರಶೀದ್ ಖಾನ್‌ ಓವರ್​ನಲ್ಲಿ ಸತತ 5 ಸಿಕ್ಸರ್ ಬಾರಿಸಿದ ಪೊಲಾರ್ಡ್‌; ವಿಡಿಯೊ ಇಲ್ಲಿದೆ

Serial Killer
ದೇಶ1 hour ago

Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

Tharun Sudhir and Sonal Monteiro tie the knot
ಸ್ಯಾಂಡಲ್ ವುಡ್1 hour ago

Tharun Sudhir: ವೈವಾಹಿಕ ಜೀವನಕ್ಕೆ ಕಾಲಿಟ್ಟ ತರುಣ್‌ ಸುಧೀರ್‌- ಸೋನಲ್‌ ಮೊಂಥೆರೋ!

Tharun Sudhir mother malathi sudheer old video viral
ಸಿನಿಮಾ2 hours ago

Tharun Sudhir: ನನ್ನ ಮಗ ಸುಂದರ ಇಲ್ವಾ, ಒಳ್ಳೆಯ ಗುಣ ಇಲ್ವಾ ಎಂದು ಕಣ್ಣೀರಿಟ್ಟಿದ್ದ ತರುಣ್ ಸುಧೀರ್ ತಾಯಿ!

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌