Site icon Vistara News

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

cisf soldier death raichur

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Exit mobile version