Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ - Vistara News

ಕ್ರೈಂ

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Reels Obsession: ಮೊನ್ನೆಯಷ್ಟೇ ರೀಲ್ಸ್‌ಗಾಗಿ ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಕಾರಣಕ್ಕೆ ರೀಲ್ಸ್‌ ಸ್ಟಾರ್‌ ಅರೆಸ್ಟ್‌ ಆಗಿದ್ದ. ಆದರೆ ಈತನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌ ದಾಖಲಾಗಿದ್ದು, ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Reels Obsession who gave dummy gun To Reels Obsession Sandalwood technician now trouble
ಸಿನಿಮಾ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರಿಂದ ನೋಟಿಸ್‌.. ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಅರುಣ್‌ ಕಟಾರೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ/ಬೆಂಗಳೂರು: ರೀಲ್ಸ್‌ಗಾಗಿ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು ಶೋಕಿ (Reels Obsession) ಮಾಡಿದ ಅರುಣ್‌ ಕಟಾರೆ ಎಂಬಾತನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಆದರೆ ಕಳೆದ ವರ್ಷವೇ ಚಿತ್ರದುರ್ಗದಲ್ಲಿ ಅರುಣ್‌ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಶೋಕಿಲಾಲ ಅರುಣ್‌ ಕಟಾರೆ ವಿರುದ್ಧ ಕಳೆದ 2023ರ ಏಪ್ರಿಲ್ ಹಾಗೂ ಜುಲೈನಲ್ಲಿ ಬ್ಲ್ಯಾಕ್‌ಮೇಲ್‌ ಹಾಗೂ ಚೀಟಿಂಗ್‌ ಮಾಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಬಾಲಕನಿಗೆ ಮದ್ಯ ಕುಡಿಸಿ, ಸಿಗರೇಟ್ ಸೇದಿಸಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಬೆದರಿಸುತ್ತಿದ್ದ. ಮನೆಯಿಂದ ಒಡವೆ ತರುವಂತೆ ಬಾಲಕನಿಗೆ ಅರುಣ್ ಕಟಾರೆ ಬೆದರಿಸುತ್ತಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕನ ತಂದೆ ಬಾಲಾಜಿ ಎಂ.ಕೆ ಎಂಬುವವರಿಂದ ದೂರು ದಾಖಲಿಸಿದ್ದರು.

ಹಣ ಡಬಲ್‌ ಮಾಡುವುದಾಗಿ ವಂಚನೆ

ಮತ್ತೊಬ್ಬರಿಗೆ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಸುಮಾರು 3,68,000 ಹಣ ಪಡೆದು ಅರುಣ್ ಕಟಾರೆ ವಂಚಿಸಿದ್ದಾನೆ. ಡ್ಯೂಯೆಟ್ ಪಬ್‌ನಲ್ಲಿ ಬಂಡವಾಳ ಹಾಕಿ ಡಬಲ್ ಮಾಡುವುದಾಗಿ ಹೇಳಿದ್ದ. ವಂಚನೆಗೆ ಒಳಗಾದ ರವಿತೇಜ ಎಲ್.ಯು ಎಂಬುವುವರಿಂದ ದೂರು ದಾಖಲಾಗಿದೆ. ರವಿತೇಜನಿಂದ ಹಣ ಪಡೆದ ಬಳಿಕ ಫೋನ್ ಸ್ವಿಚ್ ಮಾಡಿಕೊಂಡು ಅರುಣ್‌ ಕಟಾರೆ ಪರಾರಿ ಆಗಿದ್ದ.

ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

ಅರುಣ್‌ ಕಟಾರೆ ರೀಲ್ಸ್ ಶೋಕಿಯಿಂದಾಗಿ ಸ್ಯಾಂಡಲವುಡ್‌ನ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ. ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಡಮ್ಮಿ ಗನ್ ಒದಗಿಸುವ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ. ಹೊಂಬಾಳೆ ಫಿಲ್ಸ್, ಗೀತಾ ಪಿಕ್ಚರ್ಸ್ ನಂತಹ ಬ್ಯಾನರ್‌ಗಳ ಸಿನಿಮಾಗಳಿಗೆ ಸಾಹಿಲ್ ಟೆಕ್ನಿಷಿಯನ್ ಆಗಿದ್ದರು. ಕನ್ನಡದ ಸೂಪರ್ ಹಿಟ್ ಚಿತ್ರಗಳಾದ ಕಬ್ಜ, ಭೈರತಿ ರಣಗಲ್, ಮಪ್ತಿ ಸಿನಿಮಾಗಳಿಗೆ ಟೆಕ್ನಿಷಿಯನ್ ಸಾಹಿಲ್ ಡಮ್ಮಿ ಗನ್ ಒದಗಿಸಿದ್ದರು. ಇದೇ ಸಾಹಿಲ್ ಬಳಿ ಅರುಣ್ ಕಟಾರೆ ಡಮ್ಮಿ ಗನ್ ಬಾಡಿಗೆ ಪಡೆದಿದ್ದರು. ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಲು ಡಮ್ಮಿ ಗನ್‌ ಅನ್ನು ಅರುಣ್ ಕಟಾರೆ ಬಳಸಿದ್ದ. ಸದ್ಯ ಕೊತ್ತನೂರು ಠಾಣೆ ಪೊಲೀಸರಿಂದ ಬಂಧಿತನಾಗಿದ್ದ ಅರುಣ್ ಕಾಟೇರ, ಸಾಹಿಲ್ ಬಳಿ ಶಾರ್ಟ್ ಮೂವಿಗೆ ಎಂದು ಡಮ್ಮಿ ಗನ್ ಬಾಡಿಗೆ ತೆಗೆದುಕೊಂಡಿದ್ದ. ಈಗ ಕೊತ್ತನೂರು ಪೊಲೀಸರು ಸಾಹಿಲ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಏನಿದು ಪ್ರಕರಣ?

ಬೆಂಗಳೂರು: ರೀಲ್ಸ್‌ಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದರು. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದರು. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದರು.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು. ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿತ್ತು. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Crime News: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಇತ್ತ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿದ್ದಾರೆ.

VISTARANEWS.COM


on

Crime News
Koo

ಕೊಪ್ಪಳ: ಗಾಂಜಾ ಮತ್ತಿನಲ್ಲಿ ಚಾಲಕನೋರ್ವ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಘಟನೆ ಕೊಪ್ಪಳ ನಗರದ ಸಿಂಪಿ ಲಿಂಗಣ್ಣ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದ್ದು, ಪೊಲೀಸರು ಕಾರು ಚಾಲಕನ್ನು ವಶಕ್ಕೆ ಪಡೆದಿದ್ದಾರೆ (Crime News).

ಕಾರು ಚಾಲಕನನ್ನು ವಿಶ್ವಾಸ್‌ ಎಂದು ಗುರುತಿಸಲಾಗಿದೆ. ಈತ ಕಾರು ಚಲಾಯಿಸಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮುಂದೆ‌ ನಿಲ್ಲಿಸಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಈ ವೇಳೆ ಈತ ಅಮಲಿನಲ್ಲಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಘಟನೆ ವಿವರ

ಶನಿವಾರ ರಾತ್ರಿ ವಿಶ್ವಾಸ್‌ ಕಾರು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಆತ ಅಮಲಿನಲ್ಲಿದ್ದುದರಿಂದ ನಿಯಂತ್ರಣ ಸಿಗದೆ ಬಾರ್‌ ಮುಂದೆ ನಿಲ್ಲಿಸಿದ್ದ ಸುಮಾರು 10 ಬೈಕ್‌ಗಳಿಗೆ ಗುದ್ದಿದ್ದಾನೆ. ಇದರಿಂದ ಬೈಕ್‌ಗಳಿಗೆ ಹಾನಿಯಾಗಿದ್ದು, ಬೈಕ್‌ ಸವಾರರು ಆತನೊಂದಿಗೆ ವಾಗ್ವಾದ ನಡೆಸಿದರು. ವಿಶ್ವಾಸ್‌ ಗಾಂಜಾ ಸೇವಿಸಿದ ಮತ್ತಿನಲ್ಲಿ ಕಾರು ಚಲಾಯಿಸಿ ಗುದ್ದಿದ್ದಾನೆ ಎಂದು ಆರೋಪಿಸಿ ಬೈಕ್‌ ಸವಾರರು ಆತನನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಘಟನಾ ಸ್ಥಳಕ್ಕೆ ನೂತನ ಎಸ್‌ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು. ಸದ್ಯ ಕಾರು ಚಾಲಕ ವಿಶ್ವಾಸನನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿ ಬಿದ್ದಿದ್ದಾರೆ. ಮಾತ್ರವಲ್ಲ ಅವರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿ ತಕ್ಕ ಪಾಠ ಕಲಿಸಿದ್ದಾರೆ.

ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಕಳ್ಳತನ ನಿರಂತವಾಗಿ ನಡೆಯುತ್ತಿತ್ತು. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್ ಕಳವಾಗುತ್ತಿದ್ದವು. ಮಾತ್ರವಲ್ಲ ಮೇಕೆ, ಕುರಿಗಳನ್ನೂ ಕಳ್ಳರು ಹೊತ್ತೊಯ್ಯುತ್ತಿದ್ದರು. ಇದು ಗ್ರಾಮಸ್ಥರಿಗೆ ತಲೆ ನೋವಾಗಿ ಪರಿಣಮಿಸಿತ್ತು. ಮುಂಡರಗಿ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ದೂರು ನೀಡಿದ್ದರೂ ಕಳವು ಪ್ರಕರಣ ನಿಯಂತ್ರಣಕ್ಕೆ ಬಂದಿರಲಿಲ್ಲ.

ಪ್ರತಿ ಬಾರಿಯೂ ತಪ್ಪಿಸಿಕೊಳ್ಳುತ್ತಿದ್ದ ಕಳ್ಳರ ಅದೃಷ್ಟ ಶನಿವಾರ ಕೈಕೊಟ್ಟಿತ್ತು. ಎಂದಿನಂತರ ಕಳ್ಳತನಕ್ಕೆ ಇಳಿದ ಗ್ಯಾಂಗ್‌ ಅನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ನಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದರು. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತನಿಖೆ ನಡೆಲಾಗುತ್ತಿದೆ. ʼʼಗ್ರಾಮದಲ್ಲಿ ಕೆಲವು ತಿಂಗಳಿಂದ ನಿರಂತರ ಕಳ್ಳತನ ನಡೆಯುತ್ತಿತ್ತು. ಪೊಲೀಸ್‌ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ ಇದೀಗ ಕಳ್ಳರ ಗ್ಯಾಂಗ್‌ ಸಿಕ್ಕಿ ಬಿದ್ದಿದೆ. ಅವರನ್ನು ರೆಡ್‌ ಹ್ಯಾಂಡಾಗಿ ಹಿಡಿದು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಕೂಡಿ ಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದೇವೆʼʼ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Indecent Behaviour: ಮಹಿಳೆಯರಿಗೆ ಮರ್ಮಾಂಗ ತೋರಿಸಿ, ಅಸಭ್ಯ ವರ್ತನೆ; ಕಾಮುಕನಿಗೆ ಹಿಗ್ಗಾಮುಗ್ಗಾ ಬಾರಿಸಿದ ಜನ!

Continue Reading

ಪ್ರಮುಖ ಸುದ್ದಿ

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Dengue cases in Karnataka: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ.

VISTARANEWS.COM


on

Dengue cases in Karnataka
Koo

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 175 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲೇ 115 ಹೊಸ ಕೇಸ್‌ಗಳು ವರದಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ (Dengue cases in Karnataka) 352 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 753 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 175 ಮಂದಿಗೆ ಸೋಂಕು ದೃಢವಾಗಿದೆ. ಜಿಲ್ಲಾವಾರು ನೋಡುವುದಾದರೆ ಬೆಂಗಳೂರಿನಲ್ಲಿ 115, ಬೆಂಗಳೂರು ಗ್ರಾಮಾಂತರ 2, ವಿಜಯಪುರ 9, ಗದಗ 8, ಉತ್ತರ ಕನ್ನಡ 1, ಬಳ್ಳಾರಿ 1, ಮಂಡ್ಯ 26, ಉಡುಪಿ 2, ಕೊಡಗು ಜಿಲ್ಲೆಯಲ್ಲಿ 11 ಪ್ರಕರಣ ಪತ್ತೆಯಾಗಿವೆ. ಸದ್ಯ ಇರುವ 325 ಸಕ್ರಿಯ ಪ್ರಕರಣಗಳ ಪೈಕಿ 45 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನವರಿಯಿಂದ ಈವರೆಗೆ ರಾಜ್ಯದಲ್ಲಿ ಒಟ್ಟು 7,006 ಡೆಂಗ್ಯೂ ಕೇಸ್‌ಗಳು ವರದಿಯಾಗಿದ್ದು, ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ 1,908 ಸೋಂಕು ಪ್ರಕರಣಗಳು ದಾಖಲಾಗಿವೆ.

ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

Continue Reading

ಕರ್ನಾಟಕ

Dengue fever: ಶಿರಸಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ವಿದ್ಯಾರ್ಥಿನಿ ಸಾವು

Dengue fever: ಶಿರಸಿಯ ಕಸ್ತೂರಬಾ ನಗರದ 12 ವರ್ಷದ ವಿದ್ಯಾರ್ಥಿನಿ ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಇದುವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue fever
Koo

ಕಾರವಾರ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಶಿರಸಿಯ ಕಸ್ತೂರಬಾ ನಗರದ ಸುಹಾನಾ ಮಹ್ಮದ್ ಶಫಿ (12) ಮೃತ ದುರ್ದೈವಿ. ಡೆಂಗ್ಯೂ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜ್ವರಕ್ಕೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿ ನಗರದ ಮಹಾಲಕ್ಷ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಇದುವರೆಗೆ 122 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಅಬ್ಬರಿಸುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 122 ಮಂದಿಗೆ ಡೆಂಗ್ಯೂ ದೃಢವಾಗಿದ್ದು, 1692 ಡೆಂಗ್ಯೂ ಶಂಕಿತರನ್ನು ಪತ್ತೆ ಹಚ್ಚಲಾಗಿದೆ. 1499 ಮಂದಿ ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯ ಅಂಕೋಲಾ, ಹೊನ್ನಾವರ ತಾಲೂಕುಗಳಲ್ಲಿ 30ಕ್ಕೂ ಅಧಿಕ ಡೆಂಗ್ಯೂ ಸೋಂಕಿತರು ಪತ್ತೆಯಾಗಿದ್ದಾರೆ. ಹೀಗಾಗಿ ಡೆಂಗ್ಯೂ ಕುರಿತು ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ. ನೀರು ಖಾಲಿ‌ ಮಾಡಲು ಸಾಧ್ಯವಾದ ಸ್ಥಳಗಳಲ್ಲಿ ಲಾರ್ವಾ ನಾಶಕ ಔಷಧ ಸಿಂಪಡಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ | Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

ಆರೋಗ್ಯ ಇಲಾಖೆಯಿಂದಲೂ ಜಾಗೃತಿ‌ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ವಾರಕ್ಕೊಮ್ಮೆ ಮನೆ ಮನೆಗೆ ಭೇಟಿ ನೀಡಿ ಆಶಾಕಾರ್ಯಕರ್ತೆಯರಿಂದ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಜ್ವರ ಬಂದಾಗ ನಿರ್ಲಕ್ಷ್ಯ ತೋರದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗುತ್ತಿದೆ ಎಂದು ಕಾರವಾರ ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ ರಾವ್ ಮಾಹಿತಿ ನೀಡಿದ್ದಾರೆ.

Dengue fever: ಹಾವೇರಿಯಲ್ಲಿ ಶಂಕಿತ ಡೆಂಗ್ಯೂಗೆ 9 ವರ್ಷದ ಮಗು ಬಲಿ

ಹಾವೇರಿ: ಶಂಕಿತ ಡೆಂಗ್ಯೂ ಜ್ವರಕ್ಕೆ (Dengue fever) ಜಿಲ್ಲೆಯಲ್ಲಿ 9 ವರ್ಷದ ಮಗು ಬಲಿಯಾಗಿದೆ. ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಮೃತ ಮಗು. ಕಳೆದ 12 ದಿನಗಳ ಹಿಂದೆ ಜ್ವರದಿಂದ ಬಳುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

ಶುಕ್ರವಾರ ತಡರಾತ್ರಿ ಬೆಂಗಳೂರಿನ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶಂಕಿತ ಡೆಂಗ್ಯೂ ಜ್ವರದಿಂದ ಸಾವಿಗೀಡಾಗಿದ್ದ. ಇದರ ಬೆನ್ನಲ್ಲೇ ಬ್ಯಾಡಗಿ ತಾಲೂಕಿನಲ್ಲಿ 9 ವರ್ಷದ ಬಾಲಕಿ ಮೃತಪ್ಟಿದ್ದಾಳೆ. ರಾಜ್ಯದಲ್ಲಿ ಶುಕ್ರವಾರ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿದ್ದವು. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿತ್ತು.

ನೆನ್ನೆ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಿದ್ದು, ಈ ಪೈಕಿ 155 ಮಂದಿಗೆ ಸೋಂಕು ದೃಢವಾಗಿತ್ತು. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿದ್ದವು. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಸನದಲ್ಲಿ ಒಂದು ವಾರದಲ್ಲಿ ನಾಲ್ವರು ಬಾಲಕಿಯರ ಸಾವು

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಬಾಲಕಿಯೊಬ್ಬಳು ಶುಕ್ರವಾರ ಮೃತಪಟ್ಟಿದ್ದಳು. ರಮೇಶ್-ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿ (8) ಮೃತಪಟ್ಟ ಬಾಲಕಿ. ಕಳೆದ ಮೂರ್ನಾಲ್ಕು ದಿನಗಳಿಂದ ಈಕೆ ತೀವ್ರ ಜ್ವರದಿಂದ ಬಳಲುತ್ತಿದ್ದಳು. ಮೂರು ದಿನದ ಹಿಂದೆ ಹಿಮ್ಸ್‌ಗೆ ದಾಖಲಾಗಿದ್ದಳು. ಬಾಲಕಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ | Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

ಇದರಿಂದ ಒಂದು ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯುವಿಗೆ ನಾಲ್ವರು ಬಾಲಕಿಯರು ಬಲಿಯಾದಂತಾಗಿದೆ. ಹೊಳೆನರಸೀಪುರ ತಾಲ್ಲೂಕಿನಲ್ಲೇ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಅರಕಲಗೂಡು ಮೂಲದ ಒಂದು ಹಾಗು ಹೊಳೆನರಸೀಪುರ ಮೂಲದ ಮೂರು ಕಂದಮ್ಮಗಳು ಸಾವಿಗೀಡಾಗಿವೆ. ಮೂರೂ ಮಕ್ಕಳೂ ತೀವ್ರ ಜ್ವರದಿಂದ ಬಳಲಿದ್ದವು. ಜುಲೈ 1ರಂದು ಅರಕಲಗೂಡು ಮೂಲದ ಅಣ್ಣಪ್ಪಶೆಟ್ಟಿ ಹಾಗು ಪದ್ಮ ದಂಪತಿ ಪುತ್ರಿ ಅಕ್ಷತಾ (13) ಸಾವಿಗೀಡಾಗಿದ್ದಾಳೆ. ಜೂನ್ 30ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಮೂಲದ ವರ್ಷಿಕಾ(8) ತೀವ್ರ ಜ್ವರದಿಂದ ಬಳಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಬುಧವಾರ ಹೊಳೆನರಸೀಪುರ ತಾಲೂಕಿನ ಕಲಾಶ್ರೀ ಜಿ.ಎಲ್ (11) ನಿಧನ ಹೊಂದಿದ್ದಳು. ಈಕೆ ಹೊಳೆನರಸೀಪುರ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ಮತ್ತು ತನುಜ ಎಂಬವರ ಪುತ್ರಿ.

Continue Reading

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತ- ಭೋಲೆ ಬಾಬಾನ ವಿರುದ್ಧ ಮೊದಲ ಕೇಸ್‌ ದಾಖಲು

Hathras Stampede: ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂವರು ಸದಸ್ಯರ ಕಾನೂನು ಆಯೋಗವನ್ನು ನೇಮಿಸಿ ಪ್ರಕರಣದ ತನಿಖೆಗೆ ಆದೇಶಿಸಿದೆ. ನಿವೃತ ಹೈಕೋರ್ಟ್‌ ನ್ಯಾಯಮೂರ್ತಿ ಈ ಆಯೋಗದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ, ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ಇದೀಗ ಮಾಧ್ಯಮದ ಜತೆ ಮಾತನಾಡಿ, ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಜುಲೈ 2ರಂದು ನಡೆದ, ಸುಮಾರು 121 ಜನರನ್ನು ಬಲಿ ಪಡೆದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ (Hathras Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ವಿರುದ್ಧ ಮೊದಲ ಕೇಸ್‌ ದಾಖಲಾಗಿದೆ. ಪಾಟ್ನಾ ಕೋರ್ಟ್‌ನಲ್ಲಿ ಭೋಲೇ ಬಾಬಾನ ವಿರುದ್ಧ ಮೊದಲ ಪ್ರಕರಣ ದಾಖಲಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂವರು ಸದಸ್ಯರ ಕಾನೂನು ಆಯೋಗವನ್ನು ನೇಮಿಸಿ ಪ್ರಕರಣದ ತನಿಖೆಗೆ ಆದೇಶಿಸಿದೆ. ನಿವೃತ ಹೈಕೋರ್ಟ್‌ ನ್ಯಾಯಮೂರ್ತಿ ಈ ಆಯೋಗದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣದ ಬಳಿಕ ತಲೆ ಮರೆಸಿಕೊಂಡಿದ್ದ, ಸ್ವಯಂಘೋಷಿತ ದೇವ ಮಾನವ ಭೋಲೆ ಬಾಬಾ (Bhole Baba) ಇದೀಗ ಮಾಧ್ಯಮದ ಜತೆ ಮಾತನಾಡಿ, ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ತಮ್ಮ ಸತ್ಸಂಗ ಕಾರ್ಯಕ್ರಮ ಬಳಿಕ ನಡೆದ ಈ ಘಟನೆಯಿಂದ ತೀವ್ರ ದುಃಖಿತನಾಗಿ ಖಿನ್ನತೆಗೆ ಜಾರಿರುವುದಾಗಿ ಅವರು ತಿಳಿಸಿದ್ದಾರೆ.

ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಎಂದು ಗುರುತಿಸಿಕೊಂಡಿರುವ ಸೂರಜ್‌ಪಾಲ್‌ ಅವರು ಕಾಲ್ತುಳಿತದ ಪ್ರಮುಖ ಆರೋಪಿ ದೇವ್‌ಪ್ರಕಾಶ್ ಮಧುಕರ್ ನವದೆಹಲಿಯಲ್ಲಿ ಪೊಲೀಸರ ಮುಂದೆ ಶರಣಾದ ಕೆಲವೇ ಗಂಟೆಗಳ ನಂತರ ಶನಿವಾರ ಸುದ್ದಿಸಂಸ್ಥೆ ಎಎನ್ಐ ಜತೆ ಮಾತನಾಡಿದರು. ನಂತರ ಅವರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ʼಜುಲೈ 2ರಂದು ನಡೆದ ಕಾಲ್ತುಳಿತದ ಘಟನೆಯಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಆ ದೇವರು ನಮಗೆಲ್ಲ ಈ ದುಃಖದಿಂದ ಹೊರ ಬರುವ ಶಕ್ತಿ ನೀಡಲಿ. ಸರ್ಕಾರ ಮತ್ತು ಆಡಳಿತ ಮೇಲೆ ನಂಬಿಕೆ ಇಡಿ. ಗೊಂದಲ, ಕಾಲ್ತುಳಿತಕ್ಕೆ ಕಾರಣರಾದವರನ್ನು ಕಾನೂನು ಸುಮ್ಮನೆ ಬಿಡುವುದಿಲ್ಲ ಎಂಬ ನಂಬಿಕೆ ನನಗಿದೆ. ನನ್ನ ವಕೀಲ ಎ.ಪಿ.ಸಿಂಗ್ ಅವರ ಮೂಲಕ, ದುಃಖಿತ ಕುಟುಂಬಗಳು ಮತ್ತು ಗಾಯಗೊಂಡವರ ಜತೆ ನಿಲ್ಲಲು ಮತ್ತು ಅವರಿಗೆ ಸಹಾಯ ಮಾಡಲು ನಾನು ಸಮಿತಿಯ ಸದಸ್ಯರಲ್ಲಿ ಮನವಿ ಮಾಡುತ್ತಿದ್ದೇನೆ” ಎಂದು ಭೋಲೆ ಬಾಬಾ ಹೇಳಿದ್ದಾರೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಮುಖ್ಯ ಆರೋಪಿ ದೇವಪ್ರಕಾಶ್‌ ಮಧುಕರ್‌ (Devprakash Madhukar)ನನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ʼʼದೆಹಲಿಯಲ್ಲಿದ್ದ ದೇವಪ್ರಕಾಶ್‌ ಮಧುಕರ್‌ ಶರಣಾಗಿದ್ದು, ಉತ್ತರ ಪ್ರದೇಶ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆʼʼ ಎಂದು ಅವರ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ಭೋಲೆ ಬಾಬಾ (Bhole Baba) ಅವರ ಸತ್ಯಂಗದ ಮುಖ್ಯ ಸೇವಾದಾರ ಮಧುಕರ್‌ ವಿರುದ್ಧ ಹತ್ರಾಸ್‌ನ ಸಿಕಂದ್ರ ರಾವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಧುಕರ್‌ನ ವಕೀಲ ಎ.ಪಿ.ಸಿಂಗ್ ವಿಡಿಯೊ ಸಂದೇಶದಲ್ಲಿ, ʼʼತಮ್ಮ ಕಕ್ಷಿದಾರ (ದೇವಪ್ರಕಾಶ್‌ ಮಧುಕರ್‌) ದೆಹಲಿಯಲ್ಲಿ ಶರಣಾಗಿದ್ದಾರೆ. ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರುʼʼ ಎಂದು ಹೇಳಿದ್ದಾರೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ವಕೀಲರೂ ಆದ ಎ.ಪಿ.ಸಿಂಗ್ ತಾನು ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅವರ ಪರವಾಗಿ ವಾದಿಸುತ್ತೇನೆ ಎಂದು ಹೇಳಿಕೊಂಡಿದ್ದರು. ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ದೇವಪ್ರಕಾಶ್‌ ಮಧುಕರ್‌ನ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ 2 ದಿನಗಳ ಹಿಂದೆ ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದರು.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading
Advertisement
MS Dhoni Birthday
ಕ್ರಿಕೆಟ್3 mins ago

MS Dhoni Birthday: ಸಲ್ಮಾನ್​ ಖಾನ್​ ಜತೆ ಕೇಕ್​ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಧೋನಿ

Building Collapse
ದೇಶ20 mins ago

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Kannada New Movie Not Out Trailer out
ಸ್ಯಾಂಡಲ್ ವುಡ್27 mins ago

Kannada New Movie: ಕುತೂಹಲ ಮೂಡಿಸಿದೆ ʻನಾಟ್ ಔಟ್ʼ ಚಿತ್ರದ ಟ್ರೈಲರ್‌!

Boiler Blast
ಕರ್ನಾಟಕ32 mins ago

Boiler Blast: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; ತಪ್ಪಿದ ಬಹುದೊಡ್ಡ ಅನಾಹುತ

MS Dhoni Birthday
ಕ್ರೀಡೆ34 mins ago

MS Dhoni Birthday: 43ನೇ ವಸಂತಕ್ಕೆ ಕಾಲಿಟ್ಟ ಮಹೇಂದ್ರ ಸಿಂಗ್‌ ಧೋನಿ

Pearl Fashion
ಫ್ಯಾಷನ್53 mins ago

Pearl Fashion: ಮುತ್ತಿನ ಹಾರಕ್ಕೆ ಸಿಕ್ತು ನ್ಯೂ ಲುಕ್‌!

Crime News
ಕ್ರೈಂ1 hour ago

Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

Health Food Tips
ಆರೋಗ್ಯ1 hour ago

Health Food Tips: ಈ ಕೆಲವು ಆಹಾರಗಳ ಸೇವನೆಯಿಂದ ಬಾಯಾರಿ, ಗಂಟಲೊಣಗಿ ನೀರು ಬೇಕೆನಿಸುತ್ತದೆ!

Toothbrush Using Tips
ಲೈಫ್‌ಸ್ಟೈಲ್2 hours ago

Toothbrush Using Tips: ನಿಮ್ಮ ಬ್ರಷ್‌ ಬದಲಿಸಿದ್ದು ಯಾವಾಗ ನೆನಪಿದೆಯಾ?

karnataka weather Forecast
ಮಳೆ3 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ14 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ17 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ18 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು20 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ22 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌