Road Accident : ಗೊಲ್ಲರದೊಡ್ಡಿ ದುರಂತದಲ್ಲಿ ನಾಲ್ಕನೇ ಮಗು ಸಾವು; ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ - Vistara News

ಕರ್ನಾಟಕ

Road Accident : ಗೊಲ್ಲರದೊಡ್ಡಿ ದುರಂತದಲ್ಲಿ ನಾಲ್ಕನೇ ಮಗು ಸಾವು; ರಸ್ತೆಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

Road Accident : ರಾಮನಗರ ಸಮೀಪದ ಗೊಲ್ಲರದೊಡ್ಡಿ ಅಪಘಾತದಲ್ಲಿ ನಾಲ್ಕವೇ ಸಾವು ಸಂಭವಿಸಿದ್ದರಿಂದ ಆಕ್ರೋಶಿತರಾದ ಗ್ರಾಮಸ್ಥರು ಟಯರ್‌ ಸುಟ್ಟು ರಸ್ತೆ ತಡೆ ನಡೆಸಿದರು. ಜತೆಗೆ ಮಗುವಿನ ಮೃತದೇಹವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟಿಸಿದರು.

VISTARANEWS.COM


on

Gollaradoddi accident claims fourth life
ಗೊಲ್ಲರದೊಡ್ಡಿಯಲ್ಲಿ ರಸ್ತೆ ತಡೆ ನಡೆಸಿದ ಗ್ರಾಮಸ್ಥರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ಕಳೆದ ಆಗಸ್ಟ್‌ 9ರಂದು ರಾತ್ರಿ 8 ಗಂಟೆಗೆ ರಾಮನಗರ ತಾಲೂಕಿನ‌ ಗೊಲ್ಲರದೊಡ್ಡಿ (Gollaradoddi Accident) ಗ್ರಾಮದಲ್ಲಿ ಷಮ್ ಮುಗಿಸಿ ಮನೆಗೆ ಹೋಗುತ್ತಿದ್ದ ಐದು ಮಕ್ಕಳ ಮೇಲೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆಯಲ್ಲಿ (Road Accident) ಐದು ಮಕ್ಕಳ ಪೈಕಿ ನಾಲ್ಕನೇ ಮಗುವಿನ ಸಾವು (Fourth child death) ಭಾನುವಾರ ಸಂಭವಿಸಿದೆ. ಮಕ್ಕಳ ಸಾವಿನಿಂದ ನೊಂದ ಪೋಷಕರು ಮತ್ತು ಗ್ರಾಮಸ್ಥರು ಸೋಮವಾರ ಬೆಳಗ್ಗೆ ಮಗುವಿನ ಮೃತದೇಹವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು.

Gollaradoddi accident
ಮಾರ್ಗ ಮಧ್ಯೆ ಶವ ಇಟ್ಟು ಪ್ರತಿಭಟನೆ

ರಾಮನಗರ ತಾಲೂಕಿನ ಲಕ್ಷ್ಮೀಪುರದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೂ ಮೂವರು ಮಕ್ಕಳು ಗಾಯಗೊಂಡಿದ್ದರು. ಅಪಘಾತದ ದಿನವೇ ಪುಟಾಣಿಗಳಾದ ಶಾಲಿನಿ ಮತ್ತು ರೋಹಿತ್ ಮೃತಪಟ್ಟಿದ್ದರೆ ಕಳೆದ ಶುಕ್ರವಾರ ಸುಜಿತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಾಣ ಕಳೆದುಕೊಂಡಿದ್ದಾನೆ. ಇದೀಗ ಭಾನುವಾರ ಭುವನೇಶ್ವರಿ ಎಂಬ ಮಗು ಮೃತಪಟ್ಟಿದೆ.

Magadi road accident fourth child death
ಮೃತಪಟ್ಟ ಶಾಲಿನಿ, ರೋಹಿತ್‌, ಸುಜಿತ್‌ ಮತ್ತು ಭುವನೇಶ್ವರಿ

ಇದೀಗ ಪೋಷಕರು ಮತ್ತು ಊರಿನವರು ತಮಗೆ ನ್ಯಾಯ ನೀಡಬೇಕು ಆಗ್ರಹಿಸಿ ರಸ್ತೆಯಲ್ಲಿ ಟಯರ್‌ ಸುಟ್ಟು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಮಾತ್ರವಲ್ಲದೆ ಭಾನುವಾರ ಮೃತಪಟ್ಟ ಮಗುವಿನ ಶವವನ್ನೂ ರಸ್ತೆಗೆ ತಂದಿದ್ದಾರೆ. ಈ ಭಾಗದಲ್ಲಿ ವಾಹನಗಳ ವಿಪರೀತ ವೇಗದಿಂದ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದ್ದು, ಜನರ ಜೀವಗಳಿಗೆ ಬೆಲೆ ಇಲ್ಲದಂತಾಗಿದೆ. ಹೀಗಾಗಿ ವೇಗಕ್ಕೆ ಕಡಿವಾಣ ಹಾಕಬೇಕು ಎನ್ನುವುದು ಅವರ ಆಗ್ರಹ.

ಆಗಸ್ಟ್‌ 9ರಂದು ರಾತ್ರಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ (Gollaradoddi Accident) ಟಾಟಾ ಏಸ್‌ ಒಂದು ಟ್ಯೂಷನ್‌ ಮುಗಿಸಿ ಮನೆಗೆ ಮರಳುತ್ತಿದ್ದ ಮಕ್ಕಳ ಮೇಲೆ ಟಾಟಾ ಏಸ್‌ ಡಿಕ್ಕಿ ಹೊಡೆದಿತ್ತು. ಅಂದು ರೋಹಿತ್(5), ಶಾಲಿನಿ(8) ಎಂಬ ಇಬ್ಬರು ಮಕ್ಕಳು ಮೃತಪಟ್ಟಿದ್ದರು.

Gollaradoddi accident victims
ಅಪಘಾತದ ದಿನ ಮೃತಪಟ್ಟ ಪುಟಾಣಿಗಳಾದ ಶಾಲಿನಿ ಮತ್ತು ರೋಹಿತ್

ಒಂದು ವಾರದ ಬಳಿಕ ಸುಜಿತ್‌ ಸಾವು

ಒಂದು ವಾರದ ಬಳಿಕ ಗುರುವಾರ ಬೆಳಗ್ಗೆ ಗ್ರಾಮದ ಅನಿಲ್‌ ಮತ್ತು ವನಿತಾ ದಂಪತಿಯ ಪುತ್ರ ಸುಜಿತ್‌ ಮೃತಪಟ್ಟಿದ್ದಾನೆ. ಅಂದು ನಡೆದ ಘಟನೆಯಲ್ಲಿ ಐದನೇ ತರಗತಿಯಲ್ಲಿ ಕಲಿಯುತ್ತಿದ್ದ ಸುಜಿತ್‌ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಅವನಿಗೆ ಮೊದಲು ರಾಮನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಬಿಜಿಎಸ್‌ ಆಸ್ಪತ್ರೆಯಲ್ಲಿ ಸುಜಿತ್‌ ತಲೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಜಿತ್‌ ಗುರುವಾರ ಬೆಳಗ್ಗೆ ಉಸಿರು ನಿಲ್ಲಿಸಿದ್ದಾನೆ. ಅಪಘಾತದಲ್ಲಿ ಸುಜಿತ್‌ ತಂಗಿ, ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಗೌತಮಿ ಕೂಡಾ ಗಾಯಗೊಂಡಿದ್ದಾಳೆ. ಆಕೆಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Gollaradoddi accident
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಸುಜಿತ್‌ ಈಗ ಮೃತಪಟ್ಟಿದ್ದಾನೆ.

ಭಾನುವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭುವನೇಶ್ವರಿ ಎಂಬ ಮಗು ಮೃತಪಟ್ಟಿದ್ದು, ಇದೀಗ ಜನಾಕ್ರೋಶ ಭುಗಿಲೆದ್ದಿದೆ.

ಇದನ್ನೂ ಓದಿ: Road Accident : ಅಪಘಾತದಲ್ಲಿ ಯುವಕ ಸಾವು; ಸುದ್ದಿ ತಿಳಿದು ಸ್ನೇಹಿತನಿಗೆ ಹೃದಯಾಘಾತ!

ಆಗಸ್ಟ್‌ 10ರಂದು ಒಂದೇ ವಠಾರದ ಐದು ಮಂದಿ ಮಕ್ಕಳು ಟ್ಯೂಷನ್‌ ಮುಗಿಸಿ ಮನೆಗೆ ಮರಳುತಿದ್ದಾಗ ವಾಹನವೊಂದು ಅವರ ಮೇಲೆ ಹರಿದು ಹೋಗಿತ್ತು. ಅವರಿಗೆ ಡಿಕ್ಕಿಯಾದ ವಾಹನ ಯಾವುದು ಎನ್ನುವುದನ್ನು ಪೊಲೀಸರು ಹುಡುಕಾಡಿದಾಗ ವಾಯುಪುತ್ರ ಎಂಬ ಹೆಸರಿನ ಟಾಟಾ ಏಸ್‌ ವಾಹನ ಚಾಲಕ ವರದರಾಜು ಮರುದಿನ ಬೆಳಗ್ಗೆ ಬಂದು ಠಾಣೆಗೆ ಹಾಜರಾಗಿದ್ದ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shira News: ಶಿರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಶಾಸಕ ಜಯಚಂದ್ರ ಪರಿಶೀಲನೆ

Shira News: ಶಿರಾ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಶಿರಾ ನಗರದ ಸಮೀಪ ಪ್ರಾರಂಭಿಸಲು ಜಮೀನು ಗುರುತಿಸಲಾಗಿದೆ ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

VISTARANEWS.COM


on

Construction of International Cricket Stadium at Shira MLA T B Jayachandra KSCA team inspection
Koo

ಶಿರಾ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ಶಿರಾ (Shira News) ನಗರದ ಸಮೀಪ ಪ್ರಾರಂಭಿಸಲು ಜಮೀನು ಗುರುತಿಸಲಾಗಿದೆ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು. ನಗರದ ಶಿವಾಜಿ ನಗರ ಬಡಾವಣೆ ಸಮೀಪದಲ್ಲಿ ಮಂಗಳವಾರ ಕೆ.ಎಸ್.ಸಿ.ಎ. ಪ್ರತಿನಿಧಿಗಳಿಗೆ ಕ್ರೀಡಾಂಗಣಕ್ಕಾಗಿ ಕಾಯ್ದಿರಿಸಿದ ಜಮೀನಿನ್ನು ಪರಿಶೀಲಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

ಖೇಲೋ ಭಾರತ್ ಯೋಜನೆಯಡಿ ಕ್ರೀಡಾ ಗ್ರಾಮ ನಿರ್ಮಾಣಕ್ಕಾಗಿ ಭುವನಹಳ್ಳಿ, ಕಲ್ಲುಕೋಟೆ ವಿವಿಧ ಸರ್ವೆ ನಂಬರ್‌ಗಳಲ್ಲಿ 100 ಎಕರೆ ಜಮೀನಿದ್ದು, ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಸಲುವಾಗಿ 20 ಎಕರೆ ನೀಡಲು ಉದ್ದೇಶಿಸಲಾಗಿದೆ. ಅಂತಯೇ ಈ ಕ್ರೀಡಾಂಗಣಕ್ಕೆ ಬರಲು 100 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಕೆ.ಎಸ್.ಸಿ.ಎ ಪ್ರತಿನಿಧಿ ರಘುರಾಮ್ ಭಟ್ ಮಾತನಾಡಿ, ಕ್ರೀಡಾಂಗಣ ನಿರ್ಮಿಸಲು ಈ ಸ್ಥಳ ಸೂಕ್ತವಾಗಿದೆ. ಮುಂದಿನ ವಾರದಲ್ಲಿ ಕೆ.ಎಸ್‌.ಸಿ.ಎ. ಎಂಜಿನಿಯರ್‌ಗಳ ತಂಡ ಆಗಮಿಸಿ, ವರದಿ ನೀಡಿದ ಬಳಿಕ ಮುಂದಿನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

ಈ ಸಂದರ್ಭದಲ್ಲಿ ತಹಸೀಲ್ದಾರ್ ದತ್ತಾತ್ರೇಯ ಜೆ. ಗಾದ, ನಗರಸಭೆ ಅಯುಕ್ತ ರುದ್ರೇಶ್, ನಗರಸಭಾ ಸದಸ್ಯರಾದ ಬುರಾನ್ ಅಹಮದ್, ಬಿ.ಎಂ.ರಾಧಕೃಷ್ಣ, ಮುಖಂಡರಾದ ಸುಧಾಕರ್ ಗೌಡ ಸೇರಿದಂತೆ ಹಲವರು ಇದ್ದರು.

Continue Reading

ಕರ್ನಾಟಕ

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

Rachel Movie: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ. ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

VISTARANEWS.COM


on

Malayali actress Honey Rose starring Rachel movie Teaser release
Koo

ಬೆಂಗಳೂರು: ಮಲಯಾಳಿ ನಟಿ ಹನಿ ರೋಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮೂಲ ಮಲಯಾಳಂನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಕನ್ನಡದಲ್ಲೂ ರಿಲೀಸ್‌ ಆಗಲಿದೆ. ಚಿತ್ರವು ಹಿಂಸಾಚಾರ ಮತ್ತು ರಕ್ತಪಾತದ ಕಥೆಯಾಗಿರುತ್ತದೆ ಎಂದು ಟೀಸರ್ ಸುಳಿವು ನೀಡುತ್ತದೆ.

ಎಬ್ರಿಡ್ ಶೈನ್ ಸಹ ನಿರ್ಮಾಣದ ಜತೆಗೆ ಮತ್ತು ಬರಹಗಾರರಾಗಿರುವ ಈ ಚಿತ್ರವನ್ನು ಆನಂದಿನಿ ಬಾಲಾ ನಿರ್ದೇಶಿಸಿದ್ದಾರೆ. ಹನಿ ರೋಸ್ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದಲ್ಲಿ ಬಾಬು ರಾಜ್, ಕಲಾಭವನ್ ಶಾಜೋನ್, ರೋಷನ್ ಬಶೀರ್, ಚಂದು ಸಲೀಂಕುಮಾರ್, ರಾಧಿಕಾ ರಾಧಾಕೃಷ್ಣನ್, ಜಾಫರ್ ಇಡುಕ್ಕಿ, ವಿನೀತ್ ತಟ್ಟಿಲ್, ಜೋಜಿ, ದಿನೇಶ್ ಪ್ರಭಾಕರ್, ಪಾಲಿ ವಲ್ಸನ್, ವಂದಿತಾ ಮನೋಹರನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

ಈ ಚಿತ್ರವನ್ನು ಬಾದುಶಾ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಬಾದುಶಾ ಎನ್‌ಎಂ, ರಾಜನ್ ಚಿರಾಯಿಲ್ ಮತ್ತು ಎಬ್ರಿಡ್ ಶೈನ್ ನಿರ್ಮಿಸಿದ್ದಾರೆ. ಕಥೆಯನ್ನು ರಾಹುಲ್ ಮನಪ್ಪಟ್ಟು ಬರೆದಿದ್ದು, ಚಿತ್ರಕಥೆಯನ್ನು ರಾಹುಲ್ ಮನಪ್ಪಟ್ಟು ಮತ್ತು ಎಬ್ರಿಡ್ ಶೈನ್ ಮಾಡಿದ್ದಾರೆ. ಸಹ ನಿರ್ಮಾಪಕ – ಹನ್ನನ್ ಮರಮುತ್ತಮ್, ಛಾಯಾಗ್ರಹಣ – ಸ್ವರೂಪ್ ಫಿಲಿಪ್, ಸಂಗೀತ ಮತ್ತು ಬಿಜಿಎಂ – ಇಶಾನ್ ಛಾಬ್ರಾ, ಸಂಕಲನ – ಮನೋಜ್, ನಿರ್ಮಾಣ ವಿನ್ಯಾಸಕ – ಸುಜಿತ್ ರಾಘವ್, ಧ್ವನಿ ಮಿಶ್ರಣ – ರಾಜಕೃಷ್ಣನ್ ಎಂ ಆರ್, ಧ್ವನಿ ವಿನ್ಯಾಸ – ಶ್ರೀ ಶಂಕರ್, ಕಾರ್ಯನಿರ್ವಾಹಕ ನಿರ್ಮಾಪಕರು – ಮಂಜು ಬಾದುಷಾ, ಶೆಮಿ ಬಶೀರ್, ಶೈಮಾ ಮುಹಮ್ಮದ್ ಬಶೀರ್ ಅವರದ್ದು.

Continue Reading

ಕರ್ನಾಟಕ

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kannada New Movie: ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಸಂಸ್ಥೆಯಡಿ, ಪ್ರತಿಭಾ ಅವರು ನಿರ್ಮಿಸಿರುವ, ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇʼ ಚಿತ್ರವು ಇದೇ ಜೂನ್‍ 21 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

VISTARANEWS.COM


on

Sambhavami Yuge Yuge movie release on June 21
Koo

ಬೆಂಗಳೂರು: ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ ಸಂಸ್ಥೆಯಡಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವು (Kannada New Movie) ಇದೇ ಜೂನ್‍ 21 ರಂದು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರಕ್ಕೆ ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್‍ ಅವರಿಗೆ ಇದು ಮೊದಲ ಸ್ವತಂತ್ರ ಪ್ರಯತ್ನ.

ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್‍ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಈ ಹಿಂದೆ ‘1975’ ಎಂಬ ಚಿತ್ರದಲ್ಲಿ ನಟಿಸಿದ್ದ ಜಯ್‍ ಶೆಟ್ಟಿ, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಬಿಜಾಪುರ ಮೂಲದ ನಿಶಾ ರಜಪೂತ್‍ ನಾಯಕಿಯಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಎಂಬ ವಿಷಯಗಳು ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಕಥಾವಸ್ತು. ಯುವಕರು ಹಳ್ಳಿಯಲ್ಲೇ ನೆಲಸಬೇಕು ಮತ್ತು ಹಾಗೆ ನೆಲೆಸಬೇಕು ಎಂದರೆ ಹಳ್ಳಿಯಲ್ಲಿ ಒಂದಿಷ್ಟು ಕೆಲಸ ಆಗಬೇಕು ಎಂದು ನಾಯಕ ಮುಂದಾಗುತ್ತಾನೆ. ಈ ನಿಟ್ಟಿನಲ್ಲಿ ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಾನೆ ಎನ್ನುವುದು ಚಿತ್ರದ ಕಥೆ. ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳು ಈ ಚಿತ್ರದಲ್ಲಿವೆ ಎನ್ನುತ್ತಾರೆ ನಿರ್ದೇಶಕ ಚೇತನ್‍ ಚಂದ್ರಶೇಖರ್ ಶೆಟ್ಟಿ.

ಚಿತ್ರದ ಕುರಿತು ನಾಯಕ ನಟ ಜಯ್‍ ಶೆಟ್ಟಿ ಮಾತನಾಡಿ, ‘ಇದೊಂದು ಕೃಷಿ ಮತ್ತು ರೈತರ ಸಿನಿಮಾ. ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನು ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ʼಸಂಭವಾಮಿ ಯುಗೇ ಯಗೇʼ ಚಿತ್ರದಲ್ಲಿ ಜಯ್ ಶೆಟ್ಟಿ ಮತ್ತು ನಿಶಾ ರಜಪೂತ್ ಜತೆಗೆ ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರ ಗೌಡ, ಅಭಯ್ ಪುನೀತ್, ಬಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪೂರಣ್‍ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ನರಸಿಂಹ ಅವರ ಸಾಹಸ ನಿರ್ದೇಶನ, ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಪ್ರಮುಖ ಸುದ್ದಿ

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Kodi Mutt Swamiji: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ ಎಂದು ಕೋಡಿಮಠ ಶ್ರೀಗಳು ತಿಳಿಸಿದ್ದಾರೆ.

VISTARANEWS.COM


on

Kodi Mutt Swamiji
Koo

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು (Kodi Mutt Swamiji) ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್ ಮನೆ ಒತ್ತುವರಿ ತೆರವಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌; ಬುಲ್ಡೋಜರ್‌ ರೆಡಿ ಮಾಡುತ್ತಿದೆ ಬಿಬಿಎಂಪಿ

ದರ್ಶನ್ ಹಾಗೂ ಉಮಾಪತಿ ನಡುವಿನ ವಿವಾದ ಬಗ್ಗೆ ಪ್ರತಿಕ್ರಿಯಿಸಿ, ಕೋಪ ಕಡಿಮೆ ಮಾಡಿಕೊಳ್ಳಬೇಕು, ತಂದೆ-ತಾಯಿ ಮಾತು ಕೇಳಬೇಕು. ಆ ರೀತಿ ನಡೆದುಕೊಂಡಿದ್ದರಿಂದ ಈಗ ಒಳ್ಳೆಯ ಸ್ಥಾನಮಾನದಲ್ಲಿ ಇದ್ದೇನೆ. ದರ್ಶನ್ ವಿರುದ್ಧ ಗಲಾಟೆ ನಡೆದಾಗ ನಾನು ಕೋಪ ಮಾಡಿಕೊಳ್ಳಲಿಲ್ಲ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು ಇಬ್ಬರ ನಡುವಿನ ಗಲಾಟೆ ಬಗ್ಗೆ ಮಾರ್ಮಿಕವಾಗಿ ಹೇಳಿದ್ದಾರೆ.

Continue Reading
Advertisement
Sonakshi Sinha
ಬಾಲಿವುಡ್18 mins ago

Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

Construction of International Cricket Stadium at Shira MLA T B Jayachandra KSCA team inspection
ಕರ್ನಾಟಕ1 hour ago

Shira News: ಶಿರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಶಾಸಕ ಜಯಚಂದ್ರ ಪರಿಶೀಲನೆ

Malayali actress Honey Rose starring Rachel movie Teaser release
ಕರ್ನಾಟಕ1 hour ago

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

IPS Officer
ದೇಶ1 hour ago

IPS Officer: ಕ್ಯಾನ್ಸರ್‌ನಿಂದ ಪತ್ನಿ ಸಾವಿನ ಸುದ್ದಿ ತಿಳಿದ ಕೆಲವೇ ನಿಮಿಷದಲ್ಲಿ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ!

Sambhavami Yuge Yuge movie release on June 21
ಕರ್ನಾಟಕ1 hour ago

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kodi Mutt Swamiji
ಪ್ರಮುಖ ಸುದ್ದಿ1 hour ago

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Vijayapura News
ಕರ್ನಾಟಕ2 hours ago

Vijayapura News: ಗುಂಡಿಗೆ ಬಿದ್ದು ಮೂವರ ಸಾವು; ಬಾಲಕಿಯನ್ನು ರಕ್ಷಿಸಲು ಹೋದವರೂ ನೀರುಪಾಲು

Pakistan Begger
Latest2 hours ago

Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

Union Budget 2024
ದೇಶ2 hours ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ2 hours ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌