Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು - Vistara News

ಕ್ರೈಂ

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Road Accident : ಪ್ರತ್ಯೇಕ ಕಡೆಗಳಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೈಯರ್‌ ಸಿಡಿದು ಲಾರಿಯೊಂದು ಸುಟ್ಟು ಕರಕಲಾಗಿದ್ದು, ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನ ಹುಣಸೂರು ತಾಲೂಕಿನ ಮೈಸೂರು- ಬಂಟ್ವಳ ರಾಷ್ಟೀಯ ಹೆದ್ದಾರಿ 275ರ ಬನ್ನಿಕುಪ್ಪೆ ಬಳಿ ಅಪಘಾತ (Road Accident) ನಡೆದಿದೆ.

ಬನ್ನಿಕುಪ್ಪೆ ಬಳಿ ಮಹಿಳೆ ಮೈಸೂರು ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವು ಗುದ್ದಿದೆ. ಗುದ್ದಿದ ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಮೃತಳ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಣಸೂರು ಶವಗಾರಕ್ಕೆ ರವಾನೆ ಮಾಡಲಾಗಿದೆ. ಇನ್ನೂ ಮಹಿಳೆ ಬಗ್ಗೆ ಮಾಹಿತಿ ಸಿಕ್ಕವರು 9480805057 ನಂಬರ್ ತಿಳಿಸುವಂತೆ ಇನ್ಸ್‌ಪೆಕ್ಟರ್ ಲೋಲಾಕ್ಷಿ ಮನವಿ ಮಾಡಿದ್ದಾರೆ.

ಅಪಘಾತಕ್ಕೆ ತುಮಕೂರಲ್ಲಿ ಯುವಕ ಸಾವು

ಇತ್ತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡ ಆಲದಮರದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನೊರ್ವ ಮೃತಪಟ್ಟಿದ್ದಾನೆ. ಪವನ್ ಎಸ್‌. ಆರ್ (23) ಮೃತ ದುರ್ದೈವಿ.

ಶಿರಾ ನಿವಾಸಿಯಾಗಿರುವ ಪವನ್ ತುಮಕೂರಿನ ಐನಾಕ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಕೆಲಸ ಮುಗಿಸಿ ತುಮಕೂರಿನಿಂದ ಶಿರಾಗೆ ಬೈಕ್‌ನಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಿಂದ ಹಾರಿ ಬಿದ್ದ ಪವನ್‌ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ‌

ಇದನ್ನೂ ಓದಿ: Traffic violation : ನಗೆಪಾಟಲಾದ ಟ್ರಾಫಿಕ್‌ ಪೊಲೀಸರು; ಹೆಲ್ಮೆಟ್ ಹಾಕಿಲ್ಲವೆಂದು ಟಿಪ್ಪರ್ ಲಾರಿ ಚಾಲಕನಿಗೆ 500 ರೂ. ದಂಡ

ಚಾಮರಾಜನಗರದಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಟೈಯರ್‌ ಸಿಡಿದು ಸುಟ್ಟು ಕರಕಲಾದ ಲಾರಿ

ಕಾಫಿ ತುಂಬಿದ ಲಾರಿ ಟೈಯರ್ ಸಿಡಿದು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಕಣೇನೂರು ಗ್ರಾಮದ ಬಳಿ ಘಟನೆ ನಡೆದಿದೆ. ಲಾರಿ ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿತ್ತು.

ಈ ವೇಳೆ ಕಣೇನೂರು ಗ್ರಾಮಕ್ಕೆ ಬರುವಾಗ ಲಾರಿ ಮುಂಭಾಗದ ಚಕ್ರ ಸಿಡಿದು ಬೆಂಕಿ ಕಾಣಿಕೊಂಡಿದೆ. ನೋಡನೋಡುತ್ತಿದ್ದಂತೆ ಬೆಂಕಿ ಕೆನ್ನಾಲಿಗೆಗೆ ಲಾರಿ ಭಸ್ಮವಾಗಿತ್ತು. ಲಾರಿಯಲ್ಲಿದ್ದ ಕಾಫಿ ಬೀಜ ಸುಟ್ಟು ಕರಕಲಾಗಿತ್ತು. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಲಾರಿಯಿಂದ ಬಿದ್ದು ಅಸ್ವಸ್ಥಗೊಂಡಿದ್ದ ಲಾರಿ ಚಾಲಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

Cholera outbreak: ಚಿನ್ನೇನಹಳ್ಳಿಯಲ್ಲಿ ಕಳೆದ ಭಾನುವಾರದಿಂದ ಹಲವು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬರಿಗೆ ಕಾಲರಾ ಇರುವುದು ದೃಢಪಟ್ಟಿದೆ.

VISTARANEWS.COM


on

Cholera outbreak
Koo

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕು ಚಿನ್ನೇನಹಳ್ಳಿಯಲ್ಲಿ ಕಾಲರಾ ಪ್ರಕರಣ (Cholera outbreak) ಪತ್ತೆಯಾಗಿದೆ. ಕಲುಷಿತ ನೀರು ಸೇವನೆಯಿಂದ ಊರಿನ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇದೇ ಕಾರಣಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕೃಷ್ಣಪ್ಪ (32) ಎಂಬುವವರಿಗೆ ಕಾಲರಾ ದೃಢಪಟ್ಟಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಚಿನ್ನೇನಹಳ್ಳಿಯಲ್ಲಿ ಕಳೆದ ಭಾನುವಾರದಿಂದ ಹಲವು ಗ್ರಾಮಸ್ಥರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದರಿಂದ 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದರು. ಅಸ್ವಸ್ಥಗೊಂಡ 100ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವರು ಗುಣಮುಖರಾಗಿದ್ದರೆ, ಇನ್ನು ಕೆಲವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕಲುಷಿತ ನೀರು ಸೇವನೆಯಿಂದ ಗ್ರಾಮಸ್ಥರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಚಿನ್ನೇನಹಳ್ಳಿ ಗ್ರಾಮಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಈ ವೇಳೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇೊ ಪ್ರಭು, ಡಿಎಚ್‌ಒ ಡಾ.ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವು

ತುಮಕೂರು: ಕೆರೆಯಲು ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ. ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೆ ಏಳಲಾಗದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Drowns in lake: ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ಘಟನೆ ನಡೆದಿದೆ. ಸ್ನೇಹಿತರ ಜತೆ ಕೆರೆಗೆ ಈಜಲು ಹೋಗಿದ್ದ ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

Drowns in Lake
Koo

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Electric Shock: ಕುಷ್ಟಗಿಯಲ್ಲಿ ವಿದ್ಯುತ್ ತಂತಿ ತಗುಲಿ ರೈತ, 2 ಎತ್ತುಗಳ ಸಾವು

ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಕೊಡಗು: ಖಾಸಗಿ ಬಸ್ ಹಾಗೂ ದ್ವಿಚಕ್ರ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ನಡೆದಿದೆ. ಸುಂಟಿಕೊಪ್ಪ‌ ನಿವಾಸಿ ಪಟ್ಟೆಮನೆ ಲೋಕೇಶ್ ಕುಮಾರ್ (59) ಮೃತ ದುರ್ದೈವಿ.

ಕಳೆದ ಹಲವು ವರ್ಷಗಳಿಂದ ಲೋಕೇಶ್‌ ವಾಹನ ಚಾಲಕರಾಗಿದ್ದರು. ಸುಂಟಿಕೊಪ್ಪದ ಗದ್ದೆಹಳ್ಳ ಬಳಿ‌ ತೆರಳುತ್ತಿದ್ದಾಗ ಖಾಸಗಿ ಬಸ್‌ನೊಂದಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ವಿಜಯಪುರ: ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ. ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಅಶೋಕ ಹೊರಬಂದಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ ವ್ಯಕ್ತಿಯನ್ನು ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ಮೂಡಿದೆ.

ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಸಿನಿಮಾ

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka Swamy murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಈಗಾಗಲೇ ಆರೋಪಿಗಳ ಬಂಧನವಾಗಿದೆ. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಆಟೋ ಹಾಗೂ ಕಾರನ್ನು ಸೀಜ್ ಮಾಡಲಾಗಿದೆ. ಇದೇ ವೇಳೆ ಎ1 ಆರೋಪಿ ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಲಾಯಿತು.

VISTARANEWS.COM


on

By

Renukaswamy murder case The location of the accused is complete
Koo

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ (Renuka Swamy murder) ಪ್ರಕರಣ ಸಂಬಂಧ ತನಿಖೆಯು ಚುರುಕುಗೊಂಡಿದೆ. ಭಾನುವಾರ ಆರೋಪಿಗಳ ಮನೆಯಲ್ಲಿ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಚಿತ್ರದುರ್ಗದಲ್ಲಿ ಬೆಂಗಳೂರು ಪೊಲೀಸರಿಂದ ಸ್ಥಳ ಮಹಜರು ವೇಳೆ ರೇಣುಕಾಸ್ವಾಮಿ ಕಿಡ್ನ್ಯಾಪ್‌ಗೆ ಬಳಸಿದ್ದ ಆಟೋವನ್ನು ಸೀಜ್‌ ಮಾಡಲಾಯಿತು. ಜತೆಗೆ ಆರೋಪಿ ರವಿ ಮನೆ ಬಳಿ ಇದ್ದ ಟೊಯೊಟಾ ಇಟಿಯೋಸ್ ಕಾರನ್ನು ಜಪ್ತಿ ಮಾಡಲಾಗಿದೆ. ಭೀಕರವಾಗಿ ಕೊಂದರೂ ಆರೋಪಿಗಳಿಗೆ ಪಾಪಪ್ರಜ್ಞೆ ಕಾಡುತ್ತಿಲ್ವಾ? ಅಥವಾ ಪ್ರಭಾವಿಗಳ ಬೆಂಬಲ ಇದೆ ಎಂಬಂತೆ ನಗುತ್ತಲೇ ಪವಿತ್ರಾ ಗೌಡ ಹಾಗೂ ಪವನ್‌ ಮನೆಯಿಂದ ಹೊರಬಂದಿದ್ದಾರೆ.

ಪವಿತ್ರಾಗೌಡ ಮನೆಯಲ್ಲಿ ಸತತ 3 ಗಂಟೆಗಳ ಕಾಲ ಪರಿಶೀಲನೆ

ಬೆಂಗಳೂರಿನ ಆರ್‌ಆರ್ ನಗರದಲ್ಲಿ ಕಳೆದ 10 ವರ್ಷಗಳಿಂದ ಪವಿತ್ರಾಗೌಡ ವಾಸವಿದ್ದು, ಭಾನುವಾರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರ್ ಮಾಡಿದರು. ಪವಿತ್ರಾ ಜೂನ್ 9 – 10ರಂದು ಎಲ್ಲಿದ್ದರು? ಎಷ್ಟೊತ್ತಿಗೆ ಮನೆಯಿಂದ ತೆರಳಿದ್ದರು ಎಂಬುದನ್ನು ತಿಳಿಯಲು ಸಿಸಿಟಿವಿ ಪರಿಶೀಲನೆ ನಡೆಸಲಾಯಿತು.

ಪವಿತ್ರಾಗೌಡ ಇರುವ ಮನೆಯು ಡುಪ್ಲೆಕ್ಸ್ ಆಗಿದ್ದು ಒಟ್ಟು ಮೂರು ಮಹಡಿ ಇದೆ. ಇದರಲ್ಲಿ ಕೆಳಗಡೆ ಪಾರ್ಕಿಂಗ್‌ ಜಾಗದೊಂದಿಗೆ ಪವನ್ ವಾಸಕ್ಕೆ ಮನೆಯೊಂದು ಇದೆ. ಪವನ್ ಪವಿತ್ರಾ ಗೌಡಗೆ ಮನೆ‌ ಕೆಲಸಗಾರ ಜತೆಗೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ. ಆಗಾಗ ದರ್ಶನ್ ಈ ಮನೆಗೆ ಫಾರ್ಚುನರ್ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ಪವಿತ್ರಾ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್‌ ಕಾರಿನಲ್ಲಿ ಓಡಾಡುತ್ತಿದ್ದಳು ಎನ್ನಲಾಗಿದೆ. ಇನ್ನೂ ಪವಿತ್ರಾ ಗೌಡ ಮಗಳು ಹಾಸ್ಟೆಲ್‌ನಲ್ಲಿ ಇದ್ದು, ಆಗಾಗ ಬಂದು ಹೋಗುತ್ತಿದ್ದಳು.

ಗುಸು ಗುಸು ಮಾತು, ನಗುತ್ತಲೇ ಮಹಜರ್‌ ಪ್ರಕ್ರಿಯೆಯಲ್ಲಿ ಭಾಗಿ

ಪವಿತ್ರಾಗೌಡ ಜತೆಗೆ ಪವನ್‌ನನ್ನು ಸ್ಥಳ ಮಹಜರಿಗೆ ಕರೆತರಲಾಗಿತ್ತು. ಈ ವೇಳೆ ಇಬ್ಬರು ಗುಸು ಗುಸು ಎಂದು ಮಾತನಾಡುತ್ತಿರುವುದು ಕಂಡು ಬಂತು. ಪವನ್ ನಗು ನಗುತ್ತಲೇ ಮಹಜರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಪ್ರಭಾವಿಗಳ ರಕ್ಷಣೆಯ ವಿಶ್ವಾಸ ತೋರಿದಂತೆ ಇತ್ತು. ಅತ್ತ ಸತತ ಮೂರು ಗಂಟೆಗಳ ಮಹಜರ್ ಪ್ರಕ್ರಿಯೆ ನಂತರ ಹೊರ ಬಂದ ಪವಿತ್ರ ಗೌಡ ಕೂಡ ನಗುಮುಖದಲ್ಲೇ ಪೊಲೀಸ್‌ ವ್ಯಾನ್‌ ಹತ್ತಿದ್ದರು.

ಎಫ್‌ಎಸ್‌ಎಲ್ ತಂಡದಿಂದ ಮಹತ್ತರ ಸಾಕ್ಷಿಗಳ ಸಂಗ್ರಹ ಮಾಡಿ, ಎರಡು ಬಟ್ಟೆಗಂಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸ್ಥಳ ಮಹಜರು ಮುಗಿಸಿದ ಬಳಿಕ ಪವಿತ್ರಗೌಡ ಹಾಗೂ ಪವನ್‌ನನ್ನು ವಾಪಸ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಇತ್ತ ಎ5 ಆರೋಪಿ ನಂದೀಶ್‌ನನ್ನು ಪಟ್ಟಣಗೆರೆ ಶೆಡ್‌ನಿಂದ ನೇರವಾಗಿ ದರ್ಶನ್‌ ಮನೆಗೆ ಕರೆತಂದು ಪರಿಶೀಲನೆ ಮಾಡಲಾಯಿತು. ಈ ವೇಳೆ ನಂದೀಶ್‌ ಶೂ ಮತ್ತೆ ಬಟ್ಟೆಯನ್ನು ಜಪ್ತಿ ಮಾಡಲಾಯಿತು. ಸ್ಥಳ ಮಹಜರಿಗಾಗಿ ಆರೋಪಿ ವಿನಯ್ ಜತೆಗೆ ನಿಖಿಲ್‌ನನ್ನು ಅವರ ಮನೆಯಲ್ಲಿ ಕರೆದುಕೊಂಡು ಹೋಗಲಾಗಿತ್ತು. ಕೃತ್ಯ ನಡೆದ ದಿನ ಧರಿಸಿದ್ದ ಬಟ್ಟೆ , ಶೂ ಇನ್ನಿತರ ವಸ್ತುಗಳ ರಿಕವರಿಗಾಗಿ ‌ಮುಂದಾದರು.

ಚಿತ್ರದುರ್ಗದಲ್ಲೂ ಸ್ಥಳ ಮಹಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆ ತಂದು ಸ್ಥಳ ಮಹಜರು ಮಾಡಲಾಯಿತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ರಘು, ರವಿ, ಅನು, ಜಗ್ಗನ ಕರೆ ತರಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಗರದ ಮಹಾವೀರ ನಗರದಲ್ಲಿರುವ ಜಗ್ಗ ಅಲಿಯಾಸ್‌ ಜಗದೀಶ್ ಮನೆಯನ್ನು ಪರಿಶೀಲನೆ ನಡೆಸಿದರು. ಗೋವಿಂದರಾಜ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದಲ್ಲಿ ಮಹಜರು ನಡೆಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿತ್ರದುರ್ಗ

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Renuka swamy Murder : ರೇಣುಕಾಸ್ವಾಮಿಯನ್ನು ಮನುಷ್ಯತ್ವವನ್ನು ಇಲ್ಲದಂತೆ ಕ್ರೂರಿಗಳ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗದಂತೆ ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಬೇಕು ಎಂದು ಬಾಳೇ ಹೊನ್ನೂರು ಶ್ರೀಗಳು ಆಗ್ರಹಿಸಿದರು.

VISTARANEWS.COM


on

By

Renuka swamy murder
Koo

ಚಿತ್ರದುರ್ಗ: ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ (Renuka swamy Murder) ಮನೆಗೆ ಭಾನುವಾರ ಬಾಳೆ ಹೊನ್ನೂರು ಮಠದ ರಂಭಾಪುರಿ ಶ್ರೀಗಳು ಭೇಟಿ ನೀಡಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರೇಣುಕಾಸ್ವಾಮಿ ಪೋಷಕರು ಶ್ರೀಗಳ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಶ್ರೀಗಳು ರೇಣುಕಾಸ್ವಾಮಿ ಕೊಲೆಯು ಅಮಾನವೀಯವಾಗಿದೆ. ಮನುಷ್ಯತ್ವ ಇಲ್ಲದಂತೆ ಕ್ರೂರಿಗಳ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಯಾವುದೇ ಪಕ್ಷದ ಸರ್ಕಾರಗಳು ಇರಲಿ ನಿರ್ದಾಕ್ಷಣ್ಯವಾಗಿ ಕ್ರಮಕೈಗೊಳ್ಳಬೇಕು. ಆರೋಪಿಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕು. ಮೃತ ಕುಟುಂಸ್ಥರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು ಎಂದರು.

ನಟರು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು- ಜಯ ಮೃತ್ಯುಂಜಯ ಸ್ವಾಮೀಜಿ

ಕಲಾವಿದರ ಬದುಕು ಮತ್ತು ಬರಹ ಒಂದೆ ಆಗಿರಬೇಕು. ಪರದೆ ಮೇಲಿನ ನಟನೆಗೂ ಬದುಕಿಗೂ ಸಾಮೀಪ್ಯವಾಗುವಂತೆ ಬದಕುವ ಪ್ರಯತ್ನ ಮಾಡಬೇಕು. ಪರದೇ ಮೇಲೆ ಒಂದು ನಟನೆ, ಪರದೇ ಹಿಂದೆ ಒಂದು ನಟನೆ ಮಾಡಿದಾಗ ಇಂತಹ ಅವಘಡ ಆಗುತ್ತವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಅವಘಡಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬ ನಟರು ತಮ್ಮ ವ್ಯಕ್ತಿತ್ವ ರೂಪಿಸಿಕೋಳ್ಳಬೇಕು. ಡಾ ರಾಜಕುಮಾರ, ಡಾ ವಿಷ್ಣುವರ್ಧನ್‌ ಆದರ್ಶವಾಗಿದ್ದಾರೆ. ಅಂತಹ ಮಹಾನ್‌ ನಟರಂತೆ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ದರ್ಶನ ವಿರುದ್ಧ ರೊಚ್ಚಿಗೆದ್ದ ಕರವೇ ಕಾರ್ಯಕರ್ತರು

ಬೆಳಗಾವಿಯಲ್ಲಿ ನಟ ದರ್ಶನ ವಿರುದ್ಧ ಕರವೇ ಕಾರ್ಯಕರ್ತರು ರೊಚ್ಚಿಗೆದ್ದರು. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಖಂಡಿಸಿ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾ ಘಟಕದಿಂದ ದರ್ಶನ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಸಣ್ಣಪುಟ್ಟ ವಿಷಯಕ್ಕೂ ಕೊಲೆಗಳಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು. ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ ಮತ್ತು ಪವಿತ್ರಾಗೌಡ ಸೇರಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

ಚಿತ್ರರಂಗದಿಂದ ಬ್ಯಾನ್‌ ಮಾಡಿ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಮೈಸೂರಿನ ತಿ.ನರಸೀಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟ ಪ್ರತಿಭಟಿಸಿದೆ. ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ನಟ ದರ್ಶನ್‌ ಚಿತ್ರರಂಗದಿಂದ ಬ್ಯಾನ್ ಆಗಬೇಕು ಎಂದು ಒತ್ತಾಯಿಸಿದರು.

ನಟ ದರ್ಶನ್‌ ಚಿತ್ರಗಳು ತೆರೆಯ ಮೇಲೆ ಬರದಂತೆ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bakrid 2024
ಧಾರ್ಮಿಕ23 mins ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Karnataka weather Forecast
ಮಳೆ58 mins ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ2 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ8 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ10 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ11 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ11 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Drowns in Lake
ಕರ್ನಾಟಕ11 hours ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ12 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ12 hours ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ13 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ14 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ19 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌