Road Accident: ಉಳುಮೆ ಮಾಡುವಾಗ ಪಲ್ಟಿ ಹೊಡೆದ ಟ್ರ್ಯಾಕ್ಟರ್‌; ರೈತ ಸ್ಥಳದಲ್ಲೇ ಸಾವು - Vistara News

ಕ್ರೈಂ

Road Accident: ಉಳುಮೆ ಮಾಡುವಾಗ ಪಲ್ಟಿ ಹೊಡೆದ ಟ್ರ್ಯಾಕ್ಟರ್‌; ರೈತ ಸ್ಥಳದಲ್ಲೇ ಸಾವು

Road Accident : ಪ್ರತ್ಯೇಕ ಮೂರು ಕಡೆಗಳಲ್ಲಿ ಸಂಭವಿಸಿದ ಅಪಘಾತದಲ್ಲಿ ರೈತ ಸೇರಿ ಮೂವರು ದುರ್ಮರಣ ಹೊಂದಿದ್ದಾರೆ. ಉಳುಮೆ ಮಾಡುವಾಗ ಟ್ರ್ಯಾಕ್ಟರ್‌ ಮಗುಚಿ ಬಿದ್ದ ಪರಿಣಾಮ ರೈತರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Tractor overturns while ploughing Farmer dies on the spot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತಗಳು (Road Accident) ಸಂಭವಿಸಿದ್ದು, ಮೂವರು ಅಸುನೀಗಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು, ರೈತರೊಬ್ಬರು ಮೃತಪಟ್ಟಿದ್ದಾರೆ. ಮಾದಪ್ಪ (58) ಮೃತ ದುರ್ದೈವಿ. ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್‌ ಅಡಿ ಸಿಲುಕಿದ ಮಾದಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕೊಡಗಿನಲ್ಲಿ ಸ್ಕೂಟರ್‌ಗೆ ಬಸ್‌ ಡಿಕ್ಕಿ, ಮಹಿಳೆ ದುರ್ಮರಣ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದುರ್ಮರಣ ಹೊಂದಿದ್ದಾರೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟ ದುರ್ದೈವಿ. ಸ್ಕೂಟಿ ಓಡಿಸುತ್ತಿದ್ದ ಸಿಂಚನಾ ಎಂಬುವವರ ಸ್ಥಿತಿ ಗಂಭೀರವಾಗಿದೆ. ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ಅಪಘಾತ ಸಂಭವಿಸಿದೆ.

KSRTC Hit bike

ಮಡಿಕೇರಿಯಿಂದ ಮೈಸೂರಿಗೆ ಕೆಎಸ್ಆರ್‌ಟಿಸಿ ಬಸ್ ತೆರಳುತ್ತಿತ್ತು. ಇತ್ತ ಮಹಿಳೆಯರಿಬ್ಬರು ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಬಸ್‌ ಹಾಗೂ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನಡಿ ಸಿಲುಕಿದ ಸ್ಕೂಟಿ ನಜ್ಜುಗುಜ್ಜಾಗಿತ್ತು. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂಬ ಮಾಹಿತಿ ಇದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Operation Elephant : ಬೀಟಮ್ಮ ಗುಂಪನ್ನು ಬೀಟ್‌ ಮಾಡಲು ಎಂಟ್ರಿ ಕೊಟ್ಟ ಅಭಿಮನ್ಯು ಟೀಂ

ಅಡ್ಡಾದಿಡ್ಡಿ ಚಾಲನೆ; ಬೈಕ್‌ಗೆ ಆಟೋ ಡಿಕ್ಕಿ ಚಾಲಕ ಸಾವು

ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯ ಬಾಲಾಜಿ ಥಿಯೇಟರ್ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಹುಲ್ (23) ಮೃತ ದುರ್ದೈವಿ.

ಚಾಲಕ ಅಜಾಗರೂಕತೆಯಿಂದ ಆಟೋ ಚಲಾಯಿಸಿದ್ದೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಸ್ತೆ ಬಲಬದಿಯಲ್ಲಿ ಆಟೋ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದು ಫುಟ್ ಪಾತ್ ಮೇಲೆ ಮಗುಚಿ ಬಿದ್ದಿದೆ. ಪರಿಣಾಮ ಆಟೋ ಚಾಲಕ ರಾಹುಲ್‌ ಸ್ಥಳದಲ್ಲೇ ಮೃತಪಟ್ಟರೆ, ಆಟೋದಲ್ಲಿದ್ದ ಕಿರಣ್ ಹಾಗೂ ಬೈಕ್ ಸವಾರ ನಂದಕುಮಾರ್‌ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Prajwal Revanna Case: ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

VISTARANEWS.COM


on

Prajwal Revanna Case Two additional SPPs appointed for SIT cases
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು (Special Public Prosecutors) ನೇಮಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರವು ಆದೇಶದಲ್ಲಿ ತಿಳಿಸಿದೆ.

ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Prajwal Revanna Case: ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಎಚ್‌.ಡಿ. ರೇವಣ್ಣ ನ್ಯಾಯಾದೀಶರ ಮುಂದೆ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

VISTARANEWS.COM


on

Prajwal Revanna Case HD Revanna sent to 7 day judicial custody
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ. ಹೀಗಾಗಿ ಪರಪ್ಪನ ಅಗ್ರಹಾರಕ್ಕೆ ರೇವಣ್ಣ ಶಿಫ್ಟ್‌ ಆಗಲಿದ್ದಾರೆ. ಅಮಾವಾಸ್ಯೆ ದಿನವೇ ರೇವಣ್ಣ ಅವರಿಗೆ ಜೈಲುವಾಸ ಆದಂತೆ ಆಗಿದೆ.

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿಯು ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು.

ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ಇಂದಿನಿಂದ 7 ದಿನಗಳ ವರೆಗೆ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗಲಿದ್ದಾರೆ.

ವಾದ – ಪ್ರತಿವಾದ ಹೇಗಿತ್ತು?

ವಿಚಾರಣೆ ಆರಂಭವಾಗುತ್ತಿದ್ದಂತೆ, ಎಚ್‌.ಡಿ. ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಶನ್ ಸಲ್ಲಿಸಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲರು, ಎಸ್ಐಟಿ ಸಲ್ಲಿಸಿರೋ ವರದಿಯಲ್ಲಿ ಆರೋಪಿ ತನಿಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಉಲ್ಲೇಖಿಸಿದ್ದಾರೆ. ಮೌನ ವಹಿಸುವುದು ಸಹ ವ್ಯಕ್ತಿ ಹಕ್ಕಾಗಿದೆ ಎಂದು ಹೇಳಿದರು.

ಆದರೆ, ಈ ವೇಳೆ ಮಧ್ಯಪ್ರವೇಶ ಮಾಡಿದ ವಿಶೇಷ ಸಾರ್ವಜನಿಕ ಅಭಿಯೋಜಕರು, ಜಾಮೀನು ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಮನವಿ ಮಾಡಿದರು. ಇದಕ್ಕೆ ರೇವಣ್ಣ ಪರ ವಕೀಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಅಲ್ಲದೆ, ಹಳೇ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದರು.

ಆಗ ಎಸ್‌ಐಟಿ ಪರ ವಕೀಲರು, ಆರೋಪಿ ಜಾಮೀನು ನೀಡಿದರೆ ಸಾಕ್ಷಿಯನ್ನು ನಾಶ ಪಡಿಸುತ್ತಾರೆ. ಈಗಾಗಲೇ 354a ಪ್ರಕರಣ ದಾಖಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ವಿಚಾರಗಳನ್ನು ಈ ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಿದರು.

ಆರೋಪಿ ಹೊಳೆನರಸೀಪುರ ತಾಲೂಕಿನಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವೆಲ್ಲವೂ ಜಾಮೀನು ಸಹಿತ ಸೆಕ್ಷನ್‌ಗಳಾಗಿವೆ ಎಂದು ವಾದ ಮಂಡಿಸಿದ್ದಾರೆ.

ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿ ನೀಡಿರುವ ಮಾಹಿತಿ ಮೆಲೆ ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದು, ಮೌನ ವಹಿಸುವುದು ತನಿಖೆಗೆ ಸಹಕರಿಸಿಲ್ಲ ಎಂದು ಅಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಮೌನದಿಂದ ಇರುವುದನ್ನು ಒಪ್ಪಿದೆ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿ ವಾದಿಸಿದ್ದಾರೆ. ಮಹಿಳೆಯನ್ನು ಸ್ವ – ಇಚ್ಛೆಯಿಂದ ಬೈಕ್‌ನಲ್ಲಿ ಕೂರಿಸಿಕೊಂಡು ಹೋದರೆ ಅಪಹರಣ ಏನಾಗುತ್ತದೆ? ಕಳೆದ ಮೂರು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನೀಡಿದ ಮಾಹಿತಿಯನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ನಕಾರಾತ್ಮಕ ಅಂತ ಹೇಳಿದರೆ ಏನು ಅರ್ಥ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾರ್ತಿಕ್‌ಗೆ ನೋಟಿಸ್‌ ನೀಡದ SIT; ರಾಜ್ಯಪಾಲ, ಕೋರ್ಟ್‌ ಮೊರೆ ಹೋಗಲು ಎಚ್‌ಡಿಕೆ ನಿರ್ಧಾರ

ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಜಾಮೀನು ನೀಡುವಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು, ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಪ್ರಶ್ನೆ ಮಾಡಿದ್ದರು. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದ್ದರು.

Continue Reading

ಕ್ರೈಂ

Double Murder: ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

Double Murder: ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ. ಬಿಡಿಸಲು ಬಂದ ಸಹೋದರನಿಗೂ ಇರಿದು ಕೊಂದಿದ್ದಾನೆ.

VISTARANEWS.COM


on

Double Murder Fakirappa stabs brothers to death for falling behind daughter
Koo

ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನ್ನು ಯುವತಿಯ ತಂದೆಯೇ ಬರ್ಬರವಾಗಿ ಹತ್ಯೆ (Double Murder) ಮಾಡಿದ್ದಾನೆ. ಚಾಕುವಿನಿಂದ ಇರಿದು ಇಬ್ಬರನ್ನೂ ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ‌ನಡೆದಿದೆ.

ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ (22) ಮಾಯಪ್ಪ ಹಳೇಗೋಡಿ (22) ಕೊಲೆಯಾದವರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಎಂಬಾತ ಕೃತ್ಯ ಎಸಗಿದ್ದಾನೆ.

ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ.

ಯಲ್ಲಪ್ಪನನ್ನು‌ ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ‌ಫಕೀರಪ್ಪ ಚಾಕುವಿನಿಂದ ಇರಿದಿದ್ದಾಣೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ‌ಮಾಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ‌ಫಲಿಸದೇ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

ಟೆಕ್ಸಾಸ್: ಮಗುವಿನಿಂದ ತಂದೆಗೆ ವಿದಾಯ ಹೇಳಿಸಿದ ಬಳಿಕ ಮಹಿಳೆಯೊಬ್ಬಳು ಮಗುವನ್ನು ಗುಂಡಿಕ್ಕಿ (shot) ಕೊಂದು ತಾನು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ನ್ಯೂಯಾರ್ಕ್ ನ (New York) ಟೆಕ್ಸಾಸ್ ನ (Texas) ಸ್ಯಾನ್ ಆಂಟೋನಿಯೊದ ಉದ್ಯಾನವನದಲ್ಲಿ ಮಾರ್ಚ್ 19ರಂದು ನಡೆದಿದೆ. ಸವನ್ನಾ ಕ್ರಿಗರ್ (32) ಮತ್ತು ಆಕೆಯ ಮಗ ಕೈಡೆನ್ (3) ಮೃತರು.

ಟೆಕ್ಸಾಸ್ ನಲ್ಲಿ ಮಗು ಕೈಡೆನ್ ಜೊತೆ ವಾಸವಿದ್ದ ಸವಾನ್ನಾ ಕ್ರಿಗರ್ ಇದಕ್ಕೂ ಮೊದಲು ತನ್ನ ಮದುವೆಯ ಫೋಟೋಗಳನ್ನು ಚಿತ್ರೀಕರಿಸುವುದು, ಮಾಜಿ ಗಂಡನ ನಿವಾಸವನ್ನು ಧ್ವಂಸಗೊಳಿಸುವುದು, ವೀಡಿಯೊಗಳು ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಿ ಮಾಜಿ ಗಂಡನಿಗೆ ಬೆದರಿಕೆ ಒಡ್ಡಿದ್ದಳು.

ಮಾರ್ಚ್ 18ರ ಮಧ್ಯಾಹ್ನ ಕ್ರಿಗರ್ ಕೆಲಸ ತೊರೆದು ತನ್ನ ಮಾಜಿ ಗಂಡನ ಮನೆಗೆ ಹೋಗಿದ್ದು, ಆತ ಕೆಲಸಕ್ಕೆ ಹೋಗಿದ್ದ. ಬಳಿಕ ಆಕೆ ಅವರ ನಿವಾಸಕ್ಕೆ ಹಾನಿ ಮಾಡಿದ್ದಳು.

ಬಳಿಕ ತನ್ನ ಮನೆಗೆ ಮರಳಿ ತನ್ನ ಮದುವೆಯ ಉಡುಪು ಮತ್ತು ಭಾವಚಿತ್ರಗಳನ್ನು ಹಾಸಿಗೆಯ ಮೇಲೆ ಜೋಡಿಸಿದಳು. ಅದರ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. ಒಂದು ಸಂದೇಶದಲ್ಲಿ, ಆಕೆ ನೀನು ಈಗ ಮನೆಗೆ ಹೋಗಲು ಏನೂ ಇಲ್ಲ. ನೀವು ನಿಜವಾಗಿಯೂ ಇಲ್ಲ. ದಿನದ ಕೊನೆಯಲ್ಲಿ ನೀವು ಏನನ್ನೂ ಹೊಂದಿರುವುದಿಲ್ಲ ಎಂದು ಕ್ರಿಗರ್ ಹೇಳಿದ್ದು, ಮಾಜಿ ಪತಿಗೆ ಕಳುಹಿಸಿದ ಕೊನೆಯ ಸಂದೇಶದಲಿ ನಿಮ್ಮ ಮಗನಿಗೆ ವಿದಾಯ ಹೇಳಿ ಎಂದು ಬರೆದಿದ್ದಳು.

ಇದನ್ನು ನೋಡಿ ಆಕೆಯ ಮಾಜಿ ಪತಿ ಕೂಡಲೇ ಧಾವಿಸಿ ಬಂದಾಗ ಕ್ರಿಗರ್ ಮತ್ತು ಆಕೆಯ ಮಗನ ಮೃತದೇಹ ಉದ್ಯಾನವನದ ಕಂದಕದಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: Human trafficking: ಕೆಲಸ ಕೊಡಿಸೋದಾಗಿ ನಂಬಿಸಿ ರಷ್ಯಾ-ಉಕ್ರೇನ್‌ ಯುದ್ಧ ಪೀಡಿತ ಪ್ರದೇಶಕ್ಕೆ ರವಾನೆ-ಇಬ್ಬರು ಅರೆಸ್ಟ್‌

ಸಾಲಬಾಧೆಯಿಂದ ಗೃಹಿಣಿ ಆತ್ಮಹತ್ಯೆ

ತುಮಕೂರು: ಸಾಲಬಾಧೆ ತಾಳಲಾರದೇ ಗೃಹಿಣಿಯೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಇತ್ತೀಚೆಗೆ ನಡೆದಿತ್ತು. ಭಾಗ್ಯಮ್ಮ (50) ಮೃತರು.
ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಅವರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಈ ಕುರಿತು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ರಾಜಕೀಯ

Prajwal Revanna Case: ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ; ಕೊಡ್ತೇನೆ ಅಂದ್ರು ಡಿಕೆಶಿ!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲರ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Will resign says DK Shivakumar and slams HD Kumaraswamy
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಹೇಳಿದರು.

ಎಚ್‌ಡಿಕೆ ಕಿಂಗ್ ಆಫ್ ಬ್ಲ್ಯಾಕ್‌ಮೇಲ್

ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading
Advertisement
Akshaya Tritiya Jewellery
ಫ್ಯಾಷನ್3 mins ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ7 mins ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Apple New Products
ಗ್ಯಾಜೆಟ್ಸ್12 mins ago

Apple New Products: ಐಪ್ಯಾಡ್ ಪ್ರೊನಿಂದ ಪೆನ್ಸಿಲ್ ಪ್ರೊವರೆಗೆ; 2024ರ ಆಪಲ್‌ ಹೊಸ ಉತ್ಪನ್ನಗಳಿವು

State Education Policy
ಕರ್ನಾಟಕ15 mins ago

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

Actor Ravichandran female lead in ravichandrans premaloka 2
ಸ್ಯಾಂಡಲ್ ವುಡ್18 mins ago

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Prajwal Revanna Case Two additional SPPs appointed for SIT cases
ಕ್ರೈಂ21 mins ago

Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

Paris Olympics 2024
ಕ್ರೀಡೆ43 mins ago

Paris Olympics 2024: 19ನೇ ಶತಮಾನದ ಹಡಗಿನಲ್ಲಿ ಇಂದು ಫ್ರಾನ್ಸ್‌ಗೆ ಬರಲಿದೆ ಒಲಿಂಪಿಕ್‌ ಜ್ಯೋತಿ

Chicken Shawarma
ಪ್ರಮುಖ ಸುದ್ದಿ55 mins ago

Chicken Shawarma: ಬೀದಿ ಬದಿ ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು; ಚಿಕನ್‌ ಪ್ರಿಯರೇ ಎಚ್ಚರ!

Thug Life Simbu is the new gun wielding gangster in town
South Cinema58 mins ago

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Viral video
ವೈರಲ್ ನ್ಯೂಸ್1 hour ago

Viral Video: ಅಂಬಾನಿಗಿಂತಲೂ ರಿಚ್‌ ಈತ.. ಗದ್ದೆ ಉಳುಮೆಗೆ 20 ಲಕ್ಷದ ಕಾರೇ ಬೇಕು..!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ20 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ23 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌