Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ - Vistara News

ಕ್ರೈಂ

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Road Accident : ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರರಿಬ್ಬರು ಪ್ರಾಣವನ್ನು ಕಳೆದುಕೊಂಡರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಮಾಡಿ ಪರಾರಿ ಆಗಲು ಯತ್ನಿಸಿದ ಕಾರಣಕ್ಕೆ, ಸ್ಥಳೀಯರು ಕಲ್ಲುತೂರಾಟ ಮಾಡಿದ್ದಾರೆ. ಚಾಲಕ ಕುಡಿದು ವಾಹನ ಚಲಾಯಿಸಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ: ಅಪಘಾತ ಮಾಡಿ (Road Accident) ಪರಾರಿ ಆಗುವ ಭರದಲ್ಲಿ ಕಾರು ಚಾಲಕನೊಬ್ಬ ಮತ್ತೆರಡು ಬೈಕ್‌ಗಳಿಗೆ ಗುದ್ದಿದ್ದಾನೆ. ಕಾರು ಗುದ್ದಿದ ರಭಸಕ್ಕೆ ಇಬ್ಬರ ದುರ್ಮರಣ ಹೊಂದಿದ್ದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ- ಚಿಂತಾಮಣಿ ರಾಜ್ಯ ಹೆದ್ದಾರಿಯ ಮದೀನ ಹೋಟೆಲ್ ಬಳಿ ಘಟ‌ನೆ ನಡೆದಿದೆ.

ಕಣ್ಣೂರಹಳ್ಳಿ ನಿವಾಸಿ ಜಗದೀಶ್ (30) ಮತ್ತು ಶಿವಾಜಿನಗರ ನಿವಾಸಿ ಮೊಹಮದ್ ಪೈಜ್ (18) ಮೃತ ದುರ್ದೈವಿಗಳು. ಅಬ್ಬಾಸ್, ಹಬ್ಬಾಸ್ ಪಾಷ ಮತ್ತು ಅಬುಜರ್ ಗಾಯಾಳುಗಳು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐ20 ಕಾರಿನಲ್ಲಿ ಬಂದ ಚಾಲಕ ಪ್ರಗತೀಶ್ ರಾವ್‌ ಎಂಬಾತ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಮಾಡಿದ್ದಾನೆ. ಜನರು ಸೇರುತ್ತಿದ್ದಂತೆ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಪರಾರಿ ಆಗುವ ಭರದಲ್ಲಿ ರಸ್ತೆ ಬದಿಯಲ್ಲಿದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಪರಿಣಾಮ ಸವಾರು ಚೆಲ್ಲಾ ಪಿಲ್ಲಿಯಾಗಿ ಬಿದ್ದರು. ಕಾರು ಚಾಲಕ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕುಡಿದ ಅಮಲಿನಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿ ಅಪಘಾತ ಮಾಡಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪರಾರಿಯಾಗಲು ಯತ್ನಿಸಿದ್ದಕ್ಕೆ ಸಿಟ್ಟಿನಲ್ಲಿ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುವಂತೆ ಸ್ಥಳೀಯರು ಒತ್ತಾಯಿಸಿದರು. ಹೊಸಕೋಟೆ ಶವಾಗಾರದ ಬಳಿ ಮೃತ ಜಗದೀಶ್ ಕುಟುಂಬಸ್ಥರು ಪ್ರತಿಭಟಿಸಿದರು. ಹೊಸಕೋಟೆ ಸಂಚಾರಿ ಪೊಲೀಸರು ಮನವೊಲಿಸಿದ ಬಳಿಕ ಮೃತದೇಹವನ್ನು ಕೊಂಡೊಯ್ದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Physical Abuse : ಕಾಂಪೌಂಡ್‌ ಹಾರಿ ಬಂದ ಪುರಸಭೆ ಮಾಜಿ ಅಧ್ಯಕ್ಷೆಯ ಗಂಡನಿಗೆ ಚಳಿ ಬಿಡಿಸಿದ ಮಹಿಳೆಯರು

ಚಲಿಸುತ್ತಿದ್ದ ಕ್ರೇನ್‌ ಮೇಲೆ ಬಿದ್ದ ಮರ

ಉಡುಪಿಯ ಬ್ರಹ್ಮಾವರ ತಾಲೂಕು ಬೆಣ್ಣೆಕುದ್ರು ಬಾರ್ಕೂರು ಪಾಂಡೇಶ್ವರ ರಸ್ತೆಯಲ್ಲಿ ಚಲಿಸುತ್ತಿದ್ದ ಕ್ರೇನ್ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕ್ರೇನ್ ಹಾಗೂ ವಿದ್ಯುತ್ ಕಂಬ ಜಖಂಗೊಂಡಿತ್ತು. ಬೆಣ್ಣೆ ಕುದ್ರುವಿನಲ್ಲಿ ನಡೆಯುತ್ತಿರುವ ಕಾಮಗಾರಿ ಮುಗಿಸಿ ಬರುತ್ತಿದ್ದಾಗ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮೆಸ್ಕಾಂ ಸಿಬ್ಬಂದಿ ಮತ್ತು ಸಾರ್ವಜನಿಕರ ನೆರವಿನಿಂದ ಮರ ತೆರವು ಕಾರ್ಯ ನಡೆಯಿತು.

ಬಿಯರ್ ತುಂಬಿದ ಲಾರಿ ಪಲ್ಟಿ; ಎಣ್ಣೆಗಾಗಿ ಮುಗಿಬಿದ್ದ ಜನ

ರಾಯಚೂರು ತಾಲೂಕಿನ ಹೆಗ್ಗಸನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿಯರ್‌ ತುಂಬಿದ್ದ ಲಾರಿಯು ಪಲ್ಟಿಯಾಗಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಬಿಯರ್ ಬಾಟಲ್ ರಸ್ತೆ ಮಧ್ಯೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಇದನ್ನು ಕಂಡ ಬಿಯರ್ ಪ್ರಿಯರು ಬಾಟಟ್‌ಗಾಗಿ ಮುಗಿ ಬಿದ್ದರು. ಬಿಯರ್ ಡಬ್ಬಿಗೆ ಒಮ್ಮೆಲೆ ಜನ ಮುಗಿ ಬಿದ್ದ ಕಾರಣ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ಟ್ರಾಫಿಕ್ ಜಾಂನಿಂದ ವಾಹನ ಸವಾರರು ಹೈರಾಣಾದರು. ರಾಯಚೂರು ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Police Firing: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ. ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ.

VISTARANEWS.COM


on

Police Firing
Koo

ಹಾಸನ: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ (Police Firing).

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೂಕನಬೆಟ್ಟದ ಬಳಿ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ ಫೈರಿಂಗ್ ನಡೆದಿದೆ.

ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ಪ್ರಕರಣದಲ್ಲಿ ಭಾಗಿಯಗಿರುವ ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಡ್ರ್ಯಾಗನ್‌ನಿಂದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಗಾಯಗೊಂಡ ಆರೋಪಿ ಸತೀಶ್‌ನನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ. ಆರೋಪಿಯಿಂದ ದಾಳಿಗೊಳಗಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜು ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಸಕ್ಕರೆನಾಡು ಮಂಡ್ಯದಲ್ಲಿಯೂ ಫೈರಿಂಗ್‌

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಧಾರವಾಡ: ಪ್ರೇಮಿಗಳಿಗೆ ಕಂಟಕವಾದ ಪಾಲಕರು

ಧಾರವಾಡ: ಪ್ರೇಮಿಗಳ ಪಾಲಿಗೆ ಅವರ ಪಾಲಕರೇ ಕಂಟಕವಾಗಿದ್ದು, ನವ ದಂಪತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಧಾರವಾಡದ ಯುವಕ ಹಾವೇರಿ ಯುವತಿ ನಡುವಿನ ಲವ್‌ ಸ್ಟೋರಿ ಇದೀಗ ಪೊಲೀಸ್‌ ಸ್ಟೇಶನ್‌ವರೆಗೂ ಬಂದಿದೆ.

ಧಾರವಾಡದ ಶಂಭು ಹಾಗೂ ಹಾವೇರಿಯ ಶಾಲಿನಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ ಇವರ ಮದುವೆಗೆ ಮನೆಯವರು ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಪೋಷಕರ ವಿರೋಧದ ನಡುವೆಯೇ ಮದುವೆ ಆಗಿದ್ದರು. ಮದುವೆಗೂ ಶಾಲಿನಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಬೇರೆ ಬೇರೆ ಜಾತಿ ಆಗಿದ್ದಕ್ಕೆ ಶಾಲಿನಿ ಮನೆಯವರು ಮದುವೆಯನ್ನು ವಿರೋಧಿಸಿದ್ದರು. ಆಕೆಗೆ ಬೇರೆ ಯುವಕನ ಜತೆಗೆ ಮದುವೆ ಮಾಡಲು ಮುಂದಾಗಿದ್ದರು. ಇದೀಗ ದಂಪತಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ರಕ್ಷಣೆ ಕೊಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಶಾಲಿನಿಯ ಪೋಷಕರಿಂದ ನವ ಕೊಲೆ ಬೆದರಿಕೆ ಬಂದಿದೆ ಎಂದು ದೂರು ನೀಡಲಾಗಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Continue Reading

ಕ್ರೈಂ

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

VISTARANEWS.COM


on

Police Firing
Koo

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ (Police Firing). ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆ ವಿವರ

ಕಾರ್ಯಾಚರಣೆ ಬಗ್ಗೆ ಮಂಡ್ಯದಲ್ಲಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಜುಲೈ 30ರಂದು ಕಾಂತರಾಜು ಎಂಬಾತನ ಕೊಲೆಯಾಗಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿಐ ಶ್ರೀಧರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಬಂಧನವಾಗಿತ್ತು. ತನಿಖೆ ವೇಳೆ ಕಾಂತರಾಜು ಕೊಲೆಗೆ ರೌಡಿಶೀಟರ್‌ ಡಕ್ಕ ಸುಪಾರಿ ನೀಡಿದ್ದಾಗಿ ಬಂಧಿತರು ಬಾಯ್ಬಿಟ್ಟಿದ್ದರು. ಮುತ್ತುರಾಜ್ ಸೂಚನೆ ಮೇರೆಗೆ ಕೊಲೆ ನಡೆಸಿರುವುದಾಗಿ ಅವರು ಹೇಳಿಕೆ ನೀಡಿದ್ದರು. ಹೀಗಾಗಿ ಸಿಪಿಐ ಶ್ರೀಧರ್ ಮತ್ತುವರ ತಂಡ ಡಕ್ಕನನ್ನು ಬಂಧಿಸಲು ಮುಂದಾಗಿತ್ತು. ಆತ ಚಿಕ್ಕಮಲಗೂಡು ಬಳಿ ಇರುವ ಬಗ್ಗೆ ಮಾಹಿತಿ ಲಭಿಸಿ ಅಲ್ಲಿಗೆ ತೆರಳಿದ್ದರು.

ಬೈಕ್‌ನಲ್ಲಿ ತೆರಳುತ್ತಿದ್ದ ಡಕ್ಕನ್ನು ಹಿಡಿಯಲು ಸಿಪಿಐ ಶ್ರೀಧರ್ ಮತ್ತು ತಂಡ ಮುಂದಾಯಿತು. ಈ ವೇಳೆ
ಬೈಕ್ ಬೀಳಿಸಿ ಆತ ಓಡಲು ಮುಂದಾಗಿದ್ದ. ತಡೆಯಲು ಮುಂದಾದ ಪೇದೆ ಮೇಲೆ ಡ್ರ್ಯಾಗನ್‌ನಿಂದ ಹಲ್ಲೆ ನಡೆಸಿದ್ದ.
ಏರ್‌ಫೈರ್ ವಾರ್ನಿಂಗ್‌ಗೂ ಡಕ್ಕ‌ ಬಗ್ಗಿರಲಿಲ್ಲ. ಕೊನೆಗೆ ಸ್ವಯಂ ರಕ್ಷಣೆಗಾಗಿ ಸಿಪಿಐ ಶ್ರೀಧರ್‌ ಫೈರಿಂಗ್ ನಡೆಸಿದ್ದರು. ಈ ವೇಳೆ ಡಕ್ಕನ ಬಲಗಾಲಿಗೆ ಗುಂಡೇಟು ತಗುಲಿದೆ ಎಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

11 ಪ್ರಕರಣದಲ್ಲಿ ಆರೋಪಿ

3 ಕೊಲೆ, 3 ಕೊಲೆಗೆ ಯತ್ನ, 2 ರಾಬರಿ ಪ್ರಕರಣ ಸೇರಿ ಡಕ್ಕನ ವಿರುದ್ಧ 11 ಪ್ರಕರಣ ದಾಖಲಾಗಿದೆ. ಹುಡುಗರ ಗುಂಪು ಕಟ್ಟಿಕೊಂಡು 2019ರಿಂದಲೂ ಈತ ರೌಡಿಸಂ ನಡೆಸುತ್ತಿದ್ದ. ಇಸ್ಪೀಟ್‌ ಆಡಿಸುವ ದಂಧೆಗೂ ಇಳಿದಿದ್ದ. ಡಕ್ಕನ ಗ್ಯಾಂಗ್‌ ಸದಸ್ಯರಿಗೂ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ: Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ

ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ದರೋಡೆ ಪ್ರಕರಣದ ಆರೋಪಿ ಸೋನು ನಾಯಕ್ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದರು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿತ್ತು. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ತಪ್ಪಿಸಿಕೊಂಡು ಹೋಗುತ್ತಿದ್ದ ವೇಳೆ ಆತನ ವೇಳೆ ಫೈರಿಂಗ್‌ ಮಾಡಲಾಗಿತ್ತು.

Continue Reading

ದೇಶ

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

Kejriwal Bungalow Case: ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

Kejriwal Bungalow Case
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ(Delhi CM) ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರ ಅಧಿಕೃತ ಮನೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ(Kejriwal Bungalow Case)ದಲ್ಲಿ ಮೂವರು ಇಂಜಿನಿಯರ್‌ಗಳನ್ನು ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ) ಅಮಾನತುಗೊಳಿಸಿದೆ. ಮೂವರು ಇಂಜಿನಿಯರ್‌ಗಳಾದ ಪ್ರದೀಪ್ ಕುಮಾರ್ ಪರ್ಮಾರ್, ಅಭಿಷೇಕ್ ರಾಜ್ ಮತ್ತು ಅಶೋಕ್ ಕುಮಾರ್ ರಾಜ್‌ದೇವ್ ಅವರು ಕೇಜ್ರಿವಾಲ್ ಅವರ ಬಂಗಲೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಇಂಜಿನಿಯರ್‌ಗಳಿಗೆ ದೆಹಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಚಿವರು ಕೈಜೋಡಿಸಿದ್ದು, ಮತ್ತು ಸಿಎಂ ಬಂಗಲೆ ತುರ್ತಾಗಿ ನವೀಕರಣಗೊಳಿಸುವ ಅವಶ್ಯಕತೆ ಇದೆ ಎಂದು ಈ ಕಾರ್ಯಕ್ಕೆ ಕೈ ಹಾಕಿದ್ದರು. ಆದರೆ ಇಡೀ ದೇಶವೇ ಕೋವಿಡ್‌ ಎದುರಿಸುತ್ತಿದ್ದ ಸಂದರ್ಭದಲ್ಲಿ ಅಂತಹ ಯಾವುದೇ ಅವಶ್ಯಕತೆ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಇಲಾಖೆಯು ಹಣಕಾಸಿನ ನಿರ್ವಹಣೆ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಕುರಿತು ಆದೇಶಗಳನ್ನು ನೀಡುತ್ತಿರುವಾಗ, PWD ಸಚಿವರು ಹೊಸ ಬಂಗಲೆ ನಿರ್ಮಾಣದ ಪ್ರಸ್ತಾವನೆಯನ್ನು ಇಟ್ಟಿದ್ದರು ಎನ್ನಲಾಗಿದೆ.

ಪಿಡಬ್ಲ್ಯುಡಿ ಸಚಿವರ ನಿರ್ದೇಶನದ ಮೇರೆಗೆ ಹಳೆಯ ಕಟ್ಟಡವನ್ನು ಕೆಡವಿ ಹೊಸದನ್ನು ನಿರ್ಮಿಸುವುದು ಮತ್ತು ಅದರ ವೆಚ್ಚ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಕಲಾತ್ಮಕ ಮತ್ತು ಅಲಂಕಾರಿಕ ಕೆಲಸಗಳು, ಅತ್ಯುತ್ತಮ ಗುಣಮಟ್ಟದ ಕಲ್ಲಿನ ನೆಲಹಾಸುಗಳು, ಉನ್ನತ ಮರದ ಬಾಗಿಲುಗಳು ಮತ್ತು ಸ್ವಯಂಚಾಲಿತ ಜಾರುವ ಗಾಜಿನ ಬಾಗಿಲುಗಳು ಮುಂತಾದ ಬದಲಾವಣೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ ಎನ್ನಲಾಗಿದೆ. ಈ ಪ್ರಕರಣವನ್ನು ಈಗಾಗಲೇ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಅಬಕಾರಿ ನೀತಿ ಹಗರಣದಲ್ಲಿ ತಿಹಾರ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಭವ್‌ ಕುಮಾರ್‌ ವಿರುದ್ಧ ದೆಹಲಿ ಪೊಲೀಸರು (Delhi Police) ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ಹೆಸರನ್ನೂ ಪ್ರಸ್ತಾಪಿಸಲಾಗಿದೆ. ಇದು ಈಗ ಸಿಎಂಗೆ ಮತ್ತೊಂದು ಕಂಟಕವಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Continue Reading

ಕ್ರೈಂ

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Cyber Crime: ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಲಾಭದ ಆಸೆ ತೋರಿಸಿ ಲಂಡನ್‌ಲ್ಲಿ ಕುಳಿತು ವಂಚಕ ಈ ಕೃತ್ಯ ಎಸಗಿದ್ದ.

VISTARANEWS.COM


on

Cyber Crime
Koo

ಬೆಂಗಳೂರು: ಸೈಬರ್‌ ಕ್ರೈಂ (Cyber Crime) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ವಂಚಕ ಬಲೆ ಬೀಸಿದ್ದ. ಹೆಚ್ಚಿನ ಲಾಭದ ಆಸೆ ತೋರಿಸಿ ಈ ಕೃತ್ಯ ಎಸಗಿದ್ದ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.

ಬ್ರಿಟನ್‌ನಲ್ಲಿ ಕುಳಿತು ವಂಚಕ ಈ ವಂಚನೆ ಜಾಲವನ್ನು ನಡೆಸುತ್ತಿದ್ದ. ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ. ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್‌ಸೈಟ್‌ ಒಂದನ್ನು ತೆರೆದು ದಂಪತಿಗೆ ಇದರ ಆಕ್ಸೆಸ್‌ ಕೂಡ ನೀಡಿದ್ದ.

ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದ್ದಾರೆ. ಆದರೆ ಹಣ ತೆಗೆಯಲು ಆಗುತ್ತಿರಲಿಲ್ಲ. ಇದರಿಂದ ಅವರಿಗೆ ಅನುಮಾನ ಮೂಡತೊಡಗಿತ್ತು. ಅಷ್ಟೇ ಅಲ್ಲ ನಕಲಿ ವೆಬ್‌ಸೈಟ್‌ನ ಆಕ್ಸೆಸ್‌ ಕೂಡ ಹೋಗಿತ್ತು. ಕೊನೆಗೆ ದಂಪತಿಯನ್ನು ಈ ವೆಬ್‌ಸೈಟ್‌ ಬ್ಲಾಕ್ ಮಾಡಿತ್ತು.

ಇದರೊಂದಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ದೃಢವಾಗಿತ್ತು. ಕೂಡಲೇ ದಂಪತಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ನಡೆಸಿದ್ದ ಈ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್‌ ಮಾಡಿದ್ದಾರೆ.

ಲಂಡನ್​​ನಿಂದ ಕೃತ್ಯ

ʼʼಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಇದಕ್ಕಾಗಿ ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾನೆ. ಷೇರು ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾನೆ. ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಳ್ಳಲಾದ ಹಣವನ್ನು ಪೊಲೀಸರು ವಂಚನೆಗೆ ಒಳಗಾದ ದಂಪತಿಗೆ ಮರಳಿಸುತ್ತಿದ್ದಾರೆ.

ನೋಡ ನೋಡುತ್ತಲೇ ಸ್ಕೂಟರ್‌ ಕದ್ದ ಕಳ್ಳ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕ‍ಳ್ಳರ ಹಾವಳಿ ಮಿತಿ ಮೀರಿದೆ. ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ ಅನ್ನು ಕಳ್ಳನೊಬ್ಬ ರಾಜಾರೋಷವಾಗಿ ಕದ್ದುಕೊಂಡು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಮುಂಭಾಗ ಈ ಘಟನೆ ನಡೆದಿದೆ. ಕೀ ಸಮೇತ ಸ್ಕೂಟರ್ ನಿಲ್ಲಿಸಿ ಮಹಿಳೆಯೊಬ್ಬರು ತರಕಾರಿ ತರಲು ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಮಹಿಳೆ ತರಕಾರಿ ತಗೊಂಡು ವಾಪಸ್ ಬರುವ ವೇಳೆ ಆ್ಯಕ್ಟಿವಾ ಮಾಯವಾಗಿತ್ತು. ಮಹಿಳೆ ಕೀಯನ್ನು ಸ್ಕೂಟರ್‌ನಲ್ಲೇ ಬಿಟ್ಟು ಅಂಗಡಿಗೆ ತೆರಳಿರುವುದನ್ನು ಗಮನಿಸಿದ ಕಳ್ಳ ತನ್ನ ಕೈಚಳಕ ತೋರಿದ್ದ. ಅತ್ತ-ಇತ್ತ ನೋಡಿ ಸ್ಕೂಟರ್ ಸ್ಟಾರ್ಟ್ ಮಾಡಿಕೊಂಡು ಕಳ್ಳ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಇದನ್ನೂ ಓದಿ: Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Continue Reading
Advertisement
Police Firing
ಕ್ರೈಂ3 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ3 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್25 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್42 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ48 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema54 mins ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ58 mins ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ1 hour ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌