Murder Case: ಕೋರ್ಟ್‌ನಲ್ಲಿ ಸಾಕ್ಷಿ ಹೇಳಬೇಡ ಅಂತ ಆವಾಜ್‌ ಹಾಕಿ ತಾನೇ ಕೊಲೆಯಾದ ರೌಡಿ - Vistara News

ಕ್ರೈಂ

Murder Case: ಕೋರ್ಟ್‌ನಲ್ಲಿ ಸಾಕ್ಷಿ ಹೇಳಬೇಡ ಅಂತ ಆವಾಜ್‌ ಹಾಕಿ ತಾನೇ ಕೊಲೆಯಾದ ರೌಡಿ

Rowdy Sheeter murder case: ಕೋರ್ಟ್‌ ಕೇಸೊಂದರಲ್ಲಿ ರೌಡಿಶೀಟರ್‌ ಮಂಜನ ಎದುರು ಆತನ ಕೊಲೆ ಆರೋಪಿ ವಿಜಿ ಸಾಕ್ಷಿಯಾಗಿದ್ದ.

VISTARANEWS.COM


on

rowdy sheeter manja murde case
ಕೊಲೆಯಾದ ಮಂಜ, ಆರೋಪಿಗಳಾದ ವಿಜಿ, ಶಶಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನೇಕಲ್: ಕೋರ್ಟ್‌ನಲ್ಲಿ ತನ್ನ ಎದುರು ಸಾಕ್ಷಿ ಹೇಳದಂತೆ ಆವಾಜ್‌ ಹಾಕಲು ಹೋದ ರೌಡಿ ಶೀಟರ್ (Rowdy sheeter) ಒಬ್ಬನನ್ನು ಇರಿದು (Murder Case) ಕೊಲ್ಲಲಾಗಿದೆ. ಬೆಂಗಳೂರು ಹೊರವಲಯದ (Bangalore rural) ಆನೇಕಲ್ ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ಘಟನೆ ನಡೆದಿದೆ.

ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಕೊಲೆ ನಡೆದಿದೆ. ಆನೇಕಲ್ ಪಟ್ಟಣ ಮಂಜುನಾಥ್ ಅಲಿಯಾಸ್ ಮೆಂಟಲ್ ಮಂಜ ಕೊಲೆಯಾದ ರೌಡಿ ಶೀಟರ್. ಶಶಿಕುಮಾರ್, ವಿಜಯ್ ಅಲಿಯಾಸ್ ಟ್ಯಾಟೂ ವಿಜಿ ಕೊಲೆ ಮಾಡಿದ ಆರೋಪಿಗಳು.

ಮೆಂಟಲ್ ಮಂಜ ಕಳೆದ ಆರೇಳು ತಿಂಗಳಿನ ಹಿಂದೆ ಮನೆಯೊಂದಕ್ಕೆ ನುಗ್ಗಿ ಗಲಾಟೆ ಮಾಡಿದ್ದ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ವಿಜಯ್ ಅಲಿಯಾಸ್ ಟ್ಯಾಟೂ ವಿಜಿ ಎಂಬಾತ ಸಾಕ್ಷಿ ಆಗಿದ್ದ. ನಿನ್ನೆ ಟ್ಯಾಟೂ ವಿಜಿಗೆ ಪೋನ್ ಮಾಡಿ, ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಮೆಂಟಲ್ ಮಂಜ ಅವಾಜ್ ಹಾಕಿದ್ದ.

ಈ ಬಗ್ಗೆ ಫೋನ್‌ನಲ್ಲಿಯೇ ಮೆಂಟಲ್ ಮಂಜ ಮತ್ತು ಟ್ಯಾಟೂ ವಿಜಿ ನಡುವೆ ವಾಗ್ಯುದ್ಧ ಹಾಗೂ ಅವಾಚ್ಯ ಬೈಗುಳಗಳ ವಿನಿಮಯ ನಡೆದಿತ್ತು. ಕೆರಳಿದ ಮೆಂಟಲ್‌ ಮಂಜ ಹುಡುಗರ ಜೊತೆ ಟ್ಯಾಟೂ ವಿಜಿ ಮನೆ ಬಳಿ ಹೋಗಿದ್ದ. ಏರಿಯಾದ ರಸ್ತೆಯಲ್ಲಿ ಟ್ಯಾಟೂ ವಿಜಿಯನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದ.

ಅಷ್ಟು ಹೊತ್ತಿಗೆ ಟ್ಯಾಟೂ ವಿಜಿ ಸ್ನೇಹಿತ ಶಶಿ ಅಲ್ಲಿಗೆ ಬಂದಿದ್ದು, ಎರಡು ಕಡೆಯವರೂ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಮೆಂಟಲ್ ಮಂಜನನ್ನು ಹೀಗೇ ಬಿಟ್ಟರೆ ನಮ್ಮನ್ನು ಮುಗಿಸುತ್ತಾನೆ ಎಂದು ಮಂಜನ ಎದೆಗೆ ಟ್ಯಾಟೂ ವಿಜಿ ಮತ್ತು ಶಶಿ ಚಾಕು ಇಳಿಸಿದ್ದರು.

ಮೆಂಟಲ್ ಮಂಜ ಕೆಳಗೆ ಉರುಳಿ ಬೀಳುತ್ತಿದ್ದಂತೆ ಜೊತೆಯಲ್ಲಿದ್ದವರು ಎಸ್ಕೇಪ್ ಆಗಿದ್ದರು. ಕೂಡಲೇ ಆತನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೆಲ್ತ್‌ಗೆ ಶಿಫ್ಟ್ ಮಾಡುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾನೆ.

ಕೊಲೆ ಮಾಡಿದ ಟ್ಯಾಟೂ ವಿಜಿ ಮತ್ತು ಶಶಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಂಟಲ್ ಮಂಜ ಈ ಹಿಂದೆ ಎಂಟಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಕೊಲೆ, ದರೋಡೆ ಮತ್ತಿತರ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಏಳು ಪ್ರಕರಣ ಇವೆ. ಮೊನ್ನೆಯಷ್ಟೇ ಮೆಂಟಲ್ ಮಂಜನ ಮೇಲೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆನೇಕಲ್ ಪೊಲೀಸರು 110 ಕೇಸ್ ಹಾಕಿ ವಾರ್ನ್ ಮಾಡಿ ಕಳುಹಿಸಿದ್ದರು.

ಕೊಲೆ ಆರೋಪಿ ಶಶಿ ಮೇಲೆ ಈ ಹಿಂದೆ ಎರಡು ಪ್ರಕರಣ ದಾಖಲು ಆಗಿವೆ. ಈತ ಕೊಲೆ ಯತ್ನ ಮತ್ತು ಗಲಾಟೆ ವಿಚಾರದಲ್ಲಿ ಜೈಲಿಗೆ ಹೋಗಿಬಂದಿದ್ದ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕು ಇರಿದು ಸೆ.307 ಕೇಸ್ ದಾಖಲಾಗಿದೆ. ಶಶಿ ಮತ್ತು ಟ್ಯಾಟೂ ವಿಜಿ ಇಬ್ಬರೂ ಗಲಾಟೆಗಳನ್ನು ಮಾಡಿಕೊಳ್ಳುತ್ತಿದ್ದರು.

ಇದನ್ನೂ ಓದಿ: Self Harm: ನಿಶ್ಚಿತಾರ್ಥವಾದ ಯುವತಿಗೆ ಹಳೆಯ ಪ್ರಿಯಕರನ ಕಾಟ, ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

Dog Attack : ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಸಿಕ್ಕ ಸಿಕ್ಕವರ ಮೇಲೆ ಎಗರಿ ದಾಳಿ ಮಾಡುತ್ತಿದ್ದ ಬೀದಿ ನಾಯಿಯನ್ನು ಹಿಡಿದು ಗ್ರಾಮಸ್ಥರು ಕೊಂದು ಹಾಕಿದ್ದಾರೆ.

VISTARANEWS.COM


on

By

Dog Attack in raichur
Koo

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

ರಾಯಚೂರಿನ ಕೊರವಿಹಾಳ ಗ್ರಾಮದಲ್ಲಿ ಬೀದಿ ನಾಯಿ ದಾಳಿಗೆ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಲಾವಣ್ಯ(4) ನಾಯಿ ಕಡಿತಕ್ಕೆ ಬಲಿಯಾದವಳು.

ಕೊರವಿಹಾಳ ಗ್ರಾಮದ ಕೀರಲಿಂಗ ಎಂಬುವವರ ಮಗಳು ಲಾವಣ್ಯ ಕಳೆದ ಶನಿವಾರ ಮೃತಪಟ್ಟಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ ಸೇರಿ ನಾಲ್ಕೈದು ಮಕ್ಕಳು ಮನೆ ಮುಂದೆ ಆಟವಾಡುತ್ತಿದ್ದರು. ಈ ವೇಳೆ ಬೀದಿ ನಾಯಿಯೊಂದು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ದಾಳಿ ಸಮಯದಲ್ಲಿ ಲಾವಣ್ಯಳ ಕತ್ತಿನ ಹಿಂಭಾಗಕ್ಕೆ ದಾಳಿ ಮಾಡಿದ ನಾಯಿ ಕ್ರೂರವಾಗಿ ಕಚ್ಚಿತ್ತು.

ಕಳೆದ 15 ದಿನಗಳ ಹಿಂದೆ ನಡೆದ ಈ ದಾಳಿಯಲ್ಲಿ ಕೊರವಿಹಾಳ ಗ್ರಾಮದ ಏಳು ಮಕ್ಕಳಿಗೆ ನಾಯಿ ಕಚ್ಚಿತ್ತು. ಇತ್ತ ನಾಯಿ ದಾಳಿಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಲಾವಣ್ಯಳನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾವಣ್ಯ ಕಳೆದ ಶನಿವಾರ ಏಕಾಏಕಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

ರೊಚ್ಚಿಗೆದ್ದು ನಾಯಿಯನ್ನೆ ಕೊಂದರು

ಒಬ್ಬಂಟಿಯಾಗಿ ಓಡಾಡುವರನ್ನು ಕಂಡರೆ ಸಾಕು ರೊಚ್ಚಿಗೆದ್ದ ಬೀದಿ ನಾಯಿಗಳು (Street Dog Attack ) ಅಟ್ಟಾಡಿಸಿಕೊಂಡು ಹೋಗಿ ದಾಳಿ ಮಾಡುತ್ತಿರುವುದು ಕಂಡು ಬಂದಿತ್ತು. ವಯೋವೃದ್ಧರು ಹಾಗೂ ಶಾಲಾ ಮಕ್ಕಳು ಒಬ್ಬೊಬ್ಬರೇ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿತ್ತು. ಸಿಕ್ಕ ಸಿಕ್ಕವರ ಮೇಲೆ ಎರಗಿ ಕಚ್ಚುತ್ತಿದ್ದ ನಾಯಿಯಿಂದ ಇತರೆ ಮಕ್ಕಳ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಈ ಎಲ್ಲ ಘಟನೆ ಬಳಿಕ ರೊಚ್ಚಿ ಗೆದ್ದ ಗ್ರಾಮಸ್ಥರು ದಾಳಿ ಮಾಡಿದ್ದ ಬೀದಿ ನಾಯಿಯನ್ನು ಹಿಡಿದು ಕೊಂದು ಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Soldier death: ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ.

VISTARANEWS.COM


on

cisf soldier death raichur
Koo

ರಾಯಚೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ (Gun misfire) ಸಿಡಿದು ರಾಯಚೂರು (Raichur news) ಮೂಲದ ಯೋಧರೊಬ್ಬರು (Soldier death) ಸಾವಿಗೀಡಾಗಿದ್ದಾರೆ. ಮಾನ್ವಿ ತಾಲೂಕಿನ ಆರ್.ಜಿ ಕ್ಯಾಂಪ್‌ನ ಯೋಧ ರವಿಕಿರಣ್ (37) ಮೃತಪಟ್ಟವರು. ಚೆನ್ನೈ ಏರ್‌ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ.

ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್‌ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್‌ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್‌ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ.

ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ಇಂದು ಆರ್.ಜಿ ಕ್ಯಾಂಪ್‌ಗೆ ಯೋಧ ರವಿಕಿರಣ್‌ ಪಾರ್ಥಿವ ಶರೀರ ಬರಲಿದೆ.

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (missing case) ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

Continue Reading

ದೇಶ

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

Crime News: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದಲ್ಲಿ ಸ್ಪೋರ್ಟ್ಸ್‌ ಕಾರು ಓಡಿಸಿ ಇಬ್ಬರ ಸಾವಿನ ಕಾರಣನಾದ ಅಪ್ರಾಪ್ತ ವಯಸ್ಕನಿಗೆ ಜಾಮೀನು ಸಿಕ್ಕ ವಿಚಾರ ಸೋಮವಾರ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಜತೆಗೆ ಕೋರ್ಟ್‌ನ ತೀರ್ಪಿಗೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಕಾರು ಚಲಾಯಿಸಿ ಅಪಘಾತ ನಡೆಸಿದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಭಾನುವಾರ ಮುಂಜಾನೆ ಅಪಘಾತ ನಡೆದು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೃತಪಟ್ಟಿದ್ದರು (Crime News).

17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಪುಣೆ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಘಟನೆ ಬಗ್ಗೆ ಮಾಹಿತಿ ನೀಡಿ, ʼʼಸ್ಥಳೀಯ ಪಬ್‌ ಒಂದರಲ್ಲಿ ವೇದಾಂತ್‌ ಅಗರ್‌ವಾಲ್‌ ಮತ್ತು ಆತನ ಸ್ನೇಹಿತರು ಪಾರ್ಟಿ ಮಾಡಿ ಮದ್ಯ ಸೇವಿಸಿದ್ದರು. ಮಹಾರಾಷ್ಟ್ರದಲ್ಲಿ 25 ವರ್ಷಕ್ಕಿಂತ ಕೆಳಗಿನವರು ಮದ್ಯ ಸೇವಿಸುವುದು ನಿಷಿದ್ಧ. ಹೀಗಾಗಿ ಅಪ್ರಾಪ್ತರಿಗೆ ಮದ್ಯ ನೀಡಿದ ಬಾರ್‌ ಮಾಲೀಕನ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆʼʼ ಎಂದು ತಿಳಿಸಿದ್ದಾರೆ.

15 ಗಂಟೆಯೊಳಗೆ ಜಾಮೀನು

ವೇದಾಂತ್‌ ಅಗರ್‌ವಾಲ್‌ ಚಲಾಯಿಸುತ್ತಿದ್ದ ಕಾರಿನಲ್ಲಿ ಒಟ್ಟು ಮೂವರಿದ್ದರು. ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದರು. ಈ ಪೈಕಿ ಓರ್ವ ತಪ್ಪಿಸಿಕೊಂಡಿದ್ದ. ಆದರೆ ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿಯು ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಅಪರಾಧಿ ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬ ಷರತ್ತು ವಿಧಿಸಿತ್ತು. ಈ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಜಾಮೀನು ನಿರ್ಧಾರವನ್ನು ಪುಣೆ ಪೊಲೀಸರೂ ವಿರೋಧಿಸಿದ್ದು, ವೇದಾಂತ್‌ ಅಗರ್‌ವಾಲ್‌ನನ್ನು ವಿಚಾರಣೆಗೆ ಒಳಪಡಿಸಲು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. “ಈ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಐಪಿಸಿಯ ಸೆಕ್ಷನ್ 304ರ ಅಡಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಇದು ಜಾಮೀನು ರಹಿತ ಸೆಕ್ಷನ್ ಆಗಿದ್ದು, ಇದು ಘೋರ ಅಪರಾಧ” ಎಂದು ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ತಿಳಿಸಿದ್ದಾರೆ.

ಇದೀಗ ಪುಣೆ ಪೊಲೀಸರು ಬಾಲಕನ ತಂದೆ, ಸ್ಥಳೀಯ ಪ್ರಮುಖ ಬಿಲ್ಡರ್ ವಿಶಾಲ್‌ ಅಗರ್‌ವಾಲ್‌ನನ್ನು ಬಂಧಿಸಿದ್ದಾರೆ. ಅಪ್ರಾಪ್ತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವುದು ಮತ್ತು ಅವರಿಗೆ ಮಾದಕ ವಸ್ತುಗಳನ್ನು ಒದಗಿಸುವ ಕಾರಣ ನೀಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಶ್ರೀಮಂತನ ಮಗನಿಗೆ 15 ಗಂಟೆಯೊಳಗೆ ಜಾಮೀನು! ಪ್ರಬಂಧ ಬರೆಯುವ ಶಿಕ್ಷೆ!

Continue Reading

ಕ್ರೈಂ

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Missing case: ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ.

VISTARANEWS.COM


on

missing case davanagere
Koo

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆಯಾದ (family missing Case) ಘಟನೆ ದಾವಣೆಗೆರೆಯಲ್ಲಿ (Davanagere crime news) ನಡೆದಿದೆ. ನಾಪತ್ತೆಯಾದವರು ದಾವಣಗೆರೆಯ ವಿನೋಬಾ ನಗರದ 7ನೇ ಕ್ರಾಸ್‌ನಲ್ಲಿರುವ ಮನೆಯ ನಿವಾಸಿಗಳಾಗಿದ್ದು, ಇವರ ಪತ್ತೆಗಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪತಿ, ಪತ್ನಿ, ಮಗಳು ನಾಪತ್ತೆಯಾದವರು. ಅಂಜನ್ ಬಾಬು (34) ನಾಗವೇಣಿ (24) ಹಾಗೂ ನಕ್ಷತ್ರ (1) ಏಪ್ರಿಲ್ 12ರಂದು ಮನೆಯಿಂದ ಹೋದವರು ಇದುವರೆಗೂ ಮನೆಗೆ ವಾಪಸ್ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧು ಬಾಂಧವರಿಗೆ ಯಾವುದೇ ಸೂಚನೆ, ಮಾಹಿತಿ ನೀಡಿಲ್ಲ. ಯಾವುದೇ ಪತ್ರ ಬರೆದಿಟ್ಟಿಲ್ಲ. ಹೀಗಾಗಿ ಇವರು ನಿಗೂಡವಾಗಿ ನಾಪತ್ತೆಯಾಗಿರುವ ಪ್ರಕರಣ ಕುತೂಹಲ ಕೆರಳಿಸಿದೆ. ನಾಪತ್ತೆ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

ಬೆಳಗಾವಿ: ರೈತರೊಬ್ಬರು ಮಾಡಿದ ಸಾಲ ಕಟ್ಟಲಿಲ್ಲ (farmer loan) ಎಂದು ಸಾಲ ನೀಡಿದ ಮಹಿಳೆ ಆ ರೈತನ ಪತ್ನಿ ಹಾಗೂ ಪುತ್ರನಿಗೆ ಅನ್ನ ನೀರು ಕೊಡದೆ ಗೃಹಬಂಧನದಲ್ಲಿಟ್ಟ, ಇದರಿಂದ ನೊಂದ ರೈತ ಆತ್ಮಹತ್ಯೆ (farmer suicide, farmer self harming) ಮಾಡಿಕೊಂಡ ಮನ ಕಲಕುವ ಘಟನೆ ಬೆಳಗಾವಿ (belagavi news) ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.

ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದೆ. ಭೀಕರ ಬರಕ್ಕೆ ಕೈಕೊಟ್ಟ ಬೆಳೆಗಳಿಂದಾಗಿ ಉಪಜೀವನಕ್ಕೆ ರೈತ ಸಾಲದ ಮೊರೆ ಹೋಗಿದ್ದರು. ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನದ ಶಿಕ್ಷೆಯನ್ನು ಸಾಲ ನೀಡಿದ ಮಹಿಳೆ ವಿಧಿಸಿದ್ದಳು. ಇದರಿಂದ ಮನನೊಂದ ರೈತ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಹೆಸರಿನ ವಿಕೃತ ಮಹಿಳೆಯಿಂದ ಈ ಕೃತ್ಯ ನಡೆದಿದೆ. ರಾಜು ಖೋತಗಿ ತಮ್ಮ ಜೀವನ ‌ನಿರ್ವಹಣೆಗೆ ಸಿದ್ದವ್ವ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ತುಂಬುತ್ತಿದ್ದರು. ಎರಡು ದಿನಗಳ ಹಿಂದೆ ಏಕಾಏಕಿ ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಾಳೆ. ರಾಜು ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದ್ದರು.

ಇದಕ್ಕೆ ಒಪ್ಪದೇ, ಸಾಲ ಮರಳಿಸುವವರೆಗೂ ಪುತ್ರ ಬಸವರಾಜ ಖೋತಗಿಯನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಎರಡು ದಿನವಾದರೂ ಪುತ್ರನನ್ನು ಬಿಡದಾಗ ಸಿದ್ದವ್ವಳ ಮನೆಗೆ ಕೇಳಲು ರಾಜು-ದುರ್ಗವ್ವ ಹೋಗಿದ್ದರು. ಈ ವೇಳೆ ಬಸವರಾಜ್‌ನನ್ನು ಬಿಟ್ಟು ರಾಜು ಖೋತಗಿ, ಪತ್ನಿ ದುರ್ಗವ್ವರನ್ನು ಮನೆಯಲ್ಲಿ ಕೂರಿಸಿ ಶಿಕ್ಷೆ ವಿಧಿಸಿದ್ದಾಳೆ. ಮೂವರನ್ನೂ ಹನಿ ನೀರು, ತುತ್ತು ಅನ್ನ ನೀಡದೇ 2 ದಿನ ಗೃಹಬಂಧನದಲ್ಲಿಟ್ಟಿದ್ದಾಳೆ.

ಇದರಿಂದ ಮನನೊಂದು ಮನೆಗೆ ಬಂದ ರಾಜು ಖೋತಗಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೂರು ನೀಡಲು ಹೋದರೆ, ಸಿದ್ದವ್ವಳ ಅನ್ಯಾಯದ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳದೇ ಸತಾಯಿಸಿದ್ದಾರೆ. ಬೆಳಗ್ಗೆಯಿಂದ ಠಾಣೆಯಲ್ಲಿ ಕೂರಿಸಿಕೊಂಡು ರಾತ್ರಿ ವೇಳೆ ದುರ್ಬಲ ಸೆಕ್ಷನ್‌ನಡಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಯಮಕನಮರಡಿ ಠಾಣೆ ಪೊಲೀಸರ ವಿರುದ್ಧ ಪತಿ ಕಳೆದುಕೊಂಡ ದುರ್ಗವ್ವ, ಪೋಷಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ಮಂಡ್ಯ: 2023ರ ಡಿಸೆಂಬರ್‌ ತಿಂಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ, ದುಷ್ಕೃತ್ಯಗಳಿಗೆ ಕೇಂದ್ರ ತಾಣವಾಗಿದ್ದ ಮಂಡ್ಯದಲ್ಲಿ ಇನ್ನೂ ಈ ದಂಧೆ ನಿಂತಂತೆ ಕಾಣುತ್ತಿಲ್ಲ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ. ಮೈಸೂರು ಮೂಲದ ಮಹಿಳೆಗೆ ಈಗಾಗಲೇ 2 ಹೆಣ್ಣು ಮಗು ಜನಿಸಿತ್ತು. 3ನೇ ಮಗು ಹೆಣ್ಣು ಮಗು ಎಂದು ತಿಳಿದು ಗರ್ಭಪಾತ ಮಾಡಿಸಿಕೊಳ್ಳಲು ಪಾಂಡವಪುರಕ್ಕೆ ಆಗಮಿಸಿದ್ದರು. ಇದೀಗ ನಾಲ್ಕು ತಿಂಗಳ ಹೆಣ್ಣು ಭ್ರೂಣ ಹತ್ಯೆ ಮಾಡಲಾಗಿದೆ.

ಗರ್ಭಪಾತ ಮಾಡಿಸಿದ ಆನಂದ್ ಮತ್ತು ಅಶ್ವಿನಿ ದಂಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಪಾಂಡವಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಂಪತಿ ಹೊರಗುತ್ತಿಗೆ ನೌಕರರಾಗಿದ್ದಾರೆ. ಅಶ್ವಿನಿ ಡಿ ದರ್ಜೆ ನೌಕರೆಯಾಗಿದ್ದರೆ, ಆನಂದ ಆಂಬ್ಯುಲೆನ್ಸ್ ಚಾಲಕನಾಗಿದ್ದ. ತಾಲುಕು ಆರೋಗ್ಯ ಅಧಿಕಾರಿಗಳ ಕಚೇರಿ ಬಳಿಯ ಮನೆಯಲ್ಲಿ ಕೃತ್ಯ ನಡೆಸುತ್ತಿದ್ದಾಗ ದಂಪತಿಗಳು ಸಿಕ್ಕಿಬಿದ್ದಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಿರುವ ವಸತಿ ಗೃಹದಲ್ಲಿ ಕಳೆದ 9 ವರ್ಷಗಳಿಂದ ದಂಪತಿ ವಾಸವಿದ್ದರು.

ಇದನ್ನೂ ಓದಿ | Marriage Cancel : ಸಿಹಿ ತಿಂಡಿ ಕಿರಿಕ್‌ಗೆ ಮದುವೆ ಮುರಿದ ವರ; ಹೋಗೊಲೋ ಎಂದಳು ವಧು!

ಪ್ರಕರಣದ ಹಿನ್ನೆಲೆಯಲ್ಲಿ ಪಾಂಡವಪುರಕ್ಕೆ ಮಂಡ್ಯ ಡಿಸಿ ಕುಮಾರ್, ಎಸ್.ಪಿ. ಯತೀಶ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿ ಭ್ರೂಣ ಹತ್ಯೆ ನಡೆಯುತ್ತಿದ್ದ ಮನೆ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖೆಯಿಂದ ನೀಡಲಾಗಿರುವ ವಸತಿ ಗೃಹವನ್ನೇ ಆಸ್ಪತ್ರೆ ಸಿಬ್ಬಂದಿಯಾದ ದಂಪತಿ, ದುಷ್ಕೃತ್ಯಕ್ಕೆ ಬಳಸಿಕೊಂಡಿದ್ದಾರೆ.

ಭ್ರೂಣಹತ್ಯೆ ದಂಧೆಯನ್ನು ಸಿಐಡಿಗೆ ಒಪ್ಪಿಸಿದ್ದ ರಾಜ್ಯ ಸರ್ಕಾರ

ರಾಜ್ಯದಲ್ಲಿ 2023ರ ಡಿಸೆಂಬರ್‌ನಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ (CID Investigation) ರಾಜ್ಯ ಸರ್ಕಾರ ಒಪ್ಪಿಸಿತ್ತು. ರಾಮನಗರ ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ 9ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ಜಾಲ ಇನ್ನಷ್ಟು ಪ್ರದೇಶಗಳಲ್ಲಿ ವಿಸ್ತರಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದೇ ರೀತಿ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ತಪ್ಪಿಸಿ ನಡೆಯುತ್ತಿದ್ದ ಜಾಲವನ್ನು ಮಟ್ಟ ಹಾಕುವಲ್ಲಿ ವ್ಯವಸ್ಥೆ ವೈಫಲ್ಯವಾಗಿರುವುದು ಕೂಡ ಬಹಿರಂಗೊಂಡಿತ್ತು. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು.

ಇದನ್ನೂ ಓದಿ: Self Harming: ಕಬ್ಬಿಗೆರೆ ಗೊಲ್ಲರಹಟ್ಟಿಯಲ್ಲಿ ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Continue Reading
Advertisement
Katrina Kaif And Vicky Kaushal Together In London
ಸಿನಿಮಾ4 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ15 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ22 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್31 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು39 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್45 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್1 hour ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ1 hour ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Dog Attack in raichur
ರಾಯಚೂರು1 hour ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ1 hour ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌