Safe Bangalore : ಬೆಂಗಳೂರಿಗರೇ ಆಪತ್ತು ಬಂತಾ? ಈ ನಂಬರ್‌ಗೆ ಕರೆ ಮಾಡಿ; 7 ನಿಮಿಷಕ್ಕೆ ಪೊಲೀಸರು ಹಾಜರ್! - Vistara News

ಕರ್ನಾಟಕ

Safe Bangalore : ಬೆಂಗಳೂರಿಗರೇ ಆಪತ್ತು ಬಂತಾ? ಈ ನಂಬರ್‌ಗೆ ಕರೆ ಮಾಡಿ; 7 ನಿಮಿಷಕ್ಕೆ ಪೊಲೀಸರು ಹಾಜರ್!

Safe Bangalore : ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಅನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ. ಇದರ ವಿಶೇಷವೆಂದರೆ ಇಂತಹ ಆಪತ್ತು ಎದುರಾದಾಗ ಸಂತ್ರಸ್ತರು ಕಮಾಂಡ್ ಸೆಂಟರ್ ಸಹಾಯವಾಣಿಗೆ ಕರೆ ಮಾಡಿದರೆ ಕೇವಲ ಏಳು ನಿಮಿಷದಲ್ಲಿ ಪೊಲೀಸರು ಹಾಜರಿರುತ್ತಾರೆ.

VISTARANEWS.COM


on

CM Siddaramaiah in Bangalore Safe City Command Centre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು ಮಹಾನಗರವಾಗಿ ಬೆಳೆದಿದೆ. ಅದೇ ರೀತಿಯಾಗಿ ಕ್ರೈಂ ರೇಟ್‌ (Crime rate in Bengaluru) ಸಹ ಹೆಚ್ಚಳವಾಗುತ್ತಲಿದೆ. ಎಲ್ಲ ಕಡೆ ಪೊಲೀಸರು ಇರಲು ಸಾಧ್ಯವಿಲ್ಲ. ಇಂತಹ ವೇಳೆ ಕೆಲವೊಂದು ಕುಕೃತ್ಯಗಳು ನಡೆದು ಹೋಗುತ್ತವೆ. ಅದರಲ್ಲೂ ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ. ಕೊಲೆಗಳು, ಕಾನೂನು ಬಾಹಿರ ಚಟುವಟಿಕೆ (Illegal activity) ಹೆಚ್ಚಾಗಿವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು, ಬೆಂಗಳೂರಿನಲ್ಲಿ ಸುರಕ್ಷೆ (Safe Bangalore ) ಕಲ್ಪಿಸಲು ನಿರ್ಭಯಾ ನಿಧಿಯಡಿ (Nirbhaya Fund) ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ (Bangalore Safe City Command Centre) ಅನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ. ಇದರ ವಿಶೇಷವೆಂದರೆ ಇಂತಹ ಆಪತ್ತು ಎದುರಾದಾಗ ಸಂತ್ರಸ್ತರು ಕಮಾಂಡ್ ಸೆಂಟರ್ ಸಹಾಯವಾಣಿಗೆ (Helpline Number) ಕರೆ ಮಾಡಿದರೆ ಕೇವಲ ಏಳು ನಿಮಿಷದಲ್ಲಿ ಪೊಲೀಸರು ಹಾಜರಿರುತ್ತಾರೆ. ಇದರಿಂದ ಅಪರಾಧ ಚಟುವಟಿಕೆಯನ್ನು ತಗ್ಗಿಸುವ ಪ್ರಯತ್ನವನ್ನು ಮಾಡಲಾಗುತ್ತಿದೆ.

ಬೆಂಗಳೂರು ಸೇರಿದಂತೆ ದೇಶದ 8 ಕಡೆಗಳಲ್ಲಿ ಇಂತಹ ಕೇಂದ್ರವನ್ನು ತೆರೆಯಲಾಗಿದೆ. ದೇಶದ 8 ಸ್ಥಳಗಳಲ್ಲಿ ಈ ಕೇಂದ್ರಕ್ಕೆ ಮಂಜೂರಾತಿ ನೀಡಿದ್ದರೂ, ಬೆಂಗಳೂರಿನಲ್ಲಿ ಮಾತ್ರ ಸೇಫ್ ಸಿಟಿ ಕಮಾಂಡ್ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಟ್ಟಡಕ್ಕೆ ಸುಮಾರು 12 ಕೋಟಿ ರೂ. ವೆಚ್ಚವಾಗಿದೆ. ನಿರ್ಭಯಾ ನಿಧಿಯಡಿ ಕಟ್ಟಡ ನಿರ್ಮಾಣವಾಗಿದೆ.

ಅತ್ಯಾಧುನಿಕ ತಂತ್ರಜ್ಞಾನ ಇಲ್ಲಿದೆ!

ಸೇಫ್ ಸಿಟಿ ಯೋಜನೆಯಡಿ ನಗರದಲ್ಲಿ ತಲೆ ಎತ್ತಿರುವ ಈ ಅತ್ಯಾಧುನಿಕ ಕಮಾಂಡ್ ಸೆಂಟರ್​ನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಕೃತಕ ಬುದ್ಧಿಮತ್ತೆ (ಎಐ) ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಇದರಿಂದ ಕೆಲವು ಅನುಮಾನಾಸ್ಪದ ಘಟನೆಗಳು ತಕ್ಷಣ ಅರಿವಿಗೆ ಬರುತ್ತದೆ. ಇದರಿಂದ ಸಹ ಕೆಲವು ಅಪರಾಧ ಕೃತ್ಯಗಳನ್ನು ತಡೆಯಲು ಸಹಕಾರಿಯಾಗುತ್ತದೆ ಎನ್ನಲಾಗಿದೆ. ನೂತನ ಕಮಾಂಡ್ ಸೆಂಟರ್​ನಲ್ಲಿ ಡಯಲ್ -112 ಕಾಲ್ ಸೆಂಟರ್, ಮಹಿಳಾ‌‌ ಸೇಫ್ಟಿ ಲ್ಯಾಂಡ್ ಕಮಾಂಡ್ ಸೆಂಟರ್​ನಲ್ಲಿ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ.

CM Siddaramaiah in Bangalore Safe City Command Centre
ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್‌ನ ತಂತ್ರಜ್ಞಾನದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.

112ಕ್ಕೆ ಕರೆ ಮಾಡಿದರೆ ಲೊಕೇಷನ್ ಪತ್ತೆ

ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆಯಾದ 112ಕ್ಕೆ ಆಪತ್ತಿನಲ್ಲಿ ಸಿಲುಕಿರುವವರು ಕರೆ ಮಾಡಿದರೆ ತಕ್ಷಣ ಆ ವ್ಯಕ್ತಿ ಇರುವ ಸ್ಥಳದ ಲೊಕೇಷನ್ ಲಭ್ಯವಾಗಲಿದೆ.‌ ಆಗ ಲಭ್ಯವಾಗುವ ಲೊಕೇಷನ್‌ ಸಹಾಯದಿಂದ ಕ್ಷಣಾರ್ಧದಲ್ಲೇ ಅಂದರೆ ಕರೆ ಮಾಡಿದ ಏಳೇ ನಿಮಿಷದಲ್ಲಿ ಪೊಲೀಸರ ನೆರವು ಸಿಗಲಿದೆ. ಅಂದರೆ ಯಾವ ಸ್ಥಳದಲ್ಲಿ ಸಂತ್ರಸ್ತರು ಇರುತ್ತಾರೋ ಅದರ ಸಮೀಪ ಇರುವ ಪೊಲೀಸರಿಗೆ ಮಾಹಿತಿ ಹೋಗುತ್ತದೆ. ಕೂಡಲೇ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಲಿದ್ದಾರೆ.

ಈಗಾಗಲೇ ಠಾಣಾ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾಗಳ‌‌ನ್ನು ಅಳವಡಿಸಲಾಗಿದೆ. ಇದರ ನೇರ ಸಂಪರ್ಕ ಕಮಾಂಡ್ ಸೆಂಟರ್​ನಲ್ಲಿ‌ ಇರಲಿದೆ.‌ ಅಲ್ಲದೆ, ಕಾನೂನು ಹಾಗೂ ಸುವ್ಯವಸ್ಥೆಗೆ ಪೊಲೀಸ್ ಠಾಣೆಗಳು, ಎಂಟು ಡಿಸಿಪಿ ಕಚೇರಿಗಳು ಹಾಗೂ ಎಂಟು ಹೆಚ್ಚುವರಿ ವೀಕ್ಷಣಾ ಕೇಂದ್ರಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಇಲ್ಲಿ ಸೆರೆಯಾಗುವ ವಿಡಿಯೊ, ಪೋಟೊ ಒಂದು ತಿಂಗಳಿನವರೆಗೂ ಸ್ಟೋರ್​ ಆಗಿರಲಿದೆ. ಅಪರಾಧ ಕೃತ್ಯಗಳು ನಡೆದಾಗ ಸಹ ಇವುಗಳ ಆಧಾರದ ಮೇಲೆ ಅಪರಾಧಿಗಳನ್ನು ಸೆರೆ ಹಿಡಿಯಲು ಅನುಕೂಲವಾಗುತ್ತದೆ.

ಯೋಜನೆಗೆ 661.5 ಕೋಟಿ ರೂ. ಖರ್ಚು

ನಿರ್ಭಯ ನಿಧಿ ಅಡಿ ಬೆಂಗಳರು ನಗರ ಸೇಫ್ ಸಿಟಿ ಕಮಾಂಡ್ ಸೆಂಟರ್ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಈ ಯೋಜನೆಗೆ 661.5 ಕೋಟಿ ರೂ. ಖರ್ಚಾಗಿದೆ. ಕೇಂದ್ರ ಸರ್ಕಾರದ ಶೇ.60 ಹಾಗೂ ರಾಜ್ಯ ಸರ್ಕಾರದ ಶೇ. 40ರಷ್ಟು ಅನುದಾನ ನೀಡಲಾಗಿದೆ. ಬೆಂಗಳೂರು ನಗರದ ಜನರಿಗೆ ಸುರಕ್ಷತೆಯನ್ನು ಈ ಕೇಂದ್ರ ಒದಗಿಸಲಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಹಿಳೆಯರು, ಅಂಗವಿಕಲರು, ವಯೋವೃದ್ಧರಿಗೆ ಯಾವುದೇ ತೊಂದರೆ ಸಂಭವಿಸಿದರೂ ಈ ಕೇಂದ್ರ ಅವರಿಗೆ ತ್ವರಿತ ಸಹಾಯ ಒದಗಿಸಲಿದೆ. ಈ ಕೇಂದ್ರದ ಸಹಕಾರದಿಂದ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಪೊಲೀಸ್ ಠಾಣೆಯ ಪೊಲೀಸರು 7 ನಿಮಿಷದೊಳಗೆ ಆಗಮಿಸಿ, ತೊಂದರೆಯಲ್ಲಿರುವ ಜನರಿಗೆ ನೆರವು ನೀಡಲಿದೆ. ಬೆಂಗಳೂರು ಸೇರಿದಂತೆ ದೇಶದ 8 ಕಡೆಗಳಲ್ಲಿ ಇಂತಹ ಕೇಂದ್ರವನ್ನು ತೆರೆಯಲಾಗಿದೆ. ದೇಶದ 8 ಸ್ಥಳಗಳಲ್ಲಿ ಈ ಕೇಂದ್ರಕ್ಕೆ ಮಂಜೂರಾತಿ ನೀಡಿದ್ದರೂ, ಬೆಂಗಳೂರಿನಲ್ಲಿ ಮಾತ್ರ ಸೇಫ್ ಸಿಟಿ ಕಮಾಂಡ್ ಕೇಂದ್ರ ಕಟ್ಟಡವನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಟ್ಟಡಕ್ಕೆ ಸುಮಾರು 12 ಕೋಟಿ ರೂ. ವೆಚ್ಚವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಅನ್ನು ಅವರು ಶುಕ್ರವಾರ ಉದ್ಘಾಟಿಸಿದರು.

CM Siddaramaiah in Bangalore Safe City Command Centre
ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಿಲ್ವಾ? ಕೂಡಲೇ ಈ ಕೆಲಸ ಮಾಡಿ!

ಕ್ರೈಂ ಮ್ಯಾಪಿಂಗ್‌ಗೆ ಸಹಕಾರಿ

ಸುಲಿಗೆ, ಕಳ್ಳತನ ಹಾಗೂ ಮಹಿಳೆ ಮೇಲಾಗುವ ಲೈಂಗಿಕ ದೌರ್ಜನ್ಯ ಸೇರಿ ವಿವಿಧ ಅಪರಾಧಗಳು ಪದೇ‌ ಪದೆ ಒಂದು ಕಡೆ ನಡೆಯುವುದು ವರದಿಯಾದರೆ ತಂತ್ರಜ್ಞಾನ ನೆರವಿನಿಂದ ಸುಲಭವಾಗಿ ಕ್ರೈಂ ಮ್ಯಾಪಿಂಗ್ ಮಾಡಬಹುದಾಗಿದೆ. ಸಾಮಾಜಿಕ ಜಾಲತಾಣ ಹಾಗೂ ಸೋಷಿಯಲ್ ಡೆಮೊಗ್ರಾಫಿಕ್ ನೆರವಿನಿಂದ ಅಪರಾಧ ನಡೆಯುವ ಸ್ಥಳಗಳ ಬಗ್ಗೆ ಮ್ಯಾಪಿಂಗ್ ಮಾಡಲು ಎಐ ಗುರುತು ಮಾಡಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Online gambling : ರಮ್ಮಿ ಚಟಕ್ಕೆ 20 ಲಕ್ಷ ರೂ. ಸಾಲ; ಸಾಲಗಾರರ ಕಾಟಕ್ಕೆ ‘ನಾನು ಸೋತಿದ್ದೇನೆ’ ಎಂದು ಮನೆ ತೊರೆದ ಬ್ಯಾಂಕ್‌ ನೌಕರ

ಅತಿಯಾಸೆ ಗತಿಗೇಡು ಎಂಬ ಮಾತು ಈ ಪ್ರಕರಣಕ್ಕೆ ಸರಿ ಒಂದುತ್ತೆ. ರಮ್ಮಿ ಚಟಕ್ಕೆ ಬಿದ್ದ ಬ್ಯಾಂಕ್‌ ನೌಕರ ಬರೋಬ್ಬರಿ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತ ಆತ ‘ನಾನು ಸೋತಿದ್ದೇನೆ’ ಎಂದು ಪತ್ರ ಬರೆದು ವಿಡಿಯೊ ಮಾಡಿ ಮನೆ ತೊರೆದಿದ್ದಾನೆ. ಇತ್ತ ಪತಿಗಾಗಿ ಪತ್ನಿ ಹುಡುಕಾಟ ನಡೆಸುತ್ತಿದ್ದಾಳೆ.

VISTARANEWS.COM


on

By

Online gambling Rs 20 lakh for rummy addiction debt Bank employee leaves home due to debtors
Koo

ಬೆಂಗಳೂರು: ಜೂಜು (Online gambling) ಎಷ್ಟರ ಮಟ್ಟಿಗೆ ಎಫೆಕ್ಟ್ ಕೊಡುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಒಂದೊಳ್ಳೆ ಹುದ್ದೆಯಲ್ಲಿದ್ದವನು ಮಾಡುವ ಕೆಲಸ ಬಿಟ್ಟು ಜೂಜಿನ ಹಿಂದೆ ಬಿದ್ದವನು ಸಾಲಗಾರರ ಕಾಟಕ್ಕೆ ಬೇಸತ್ತು ಕಾಣೆಯಾಗಿದ್ದಾನೆ. ಭರತ್ ಎಂಬ ಬ್ಯಾಂಕ್ ಉದ್ಯೋಗಿ ಕಾಣೆಯಾಗಿದ್ದಾನೆ. ಸೆಲ್ಫಿ ವಿಡಿಯೋ ಮಾಡಿ, ತನ್ನ ಮೊಬೈಲ್‌ಗಳನ್ನು ಮನೆಯಲ್ಲಿಟ್ಟು ಮನೆ ಬಿಟ್ಟು ಹೋಗಿದ್ದಾನೆ. ಇತ್ತ ಭರತ್‌ಗಾಗಿ ಆತನ ಪತ್ನಿ ದುಃಖಿತಳಾಗಿದ್ದು ಪತಿಗಾಗಿ ಎಲ್ಲ ಕಡೆ ಹುಡುಕಾಡಿ ಸಿಗದೆ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಭರತ್‌ ಪ್ರತಿಷ್ಠಿತ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾದರೆ, ಪತ್ನಿ ಚೈತ್ರಾ ಕೂಡ ಸಾಫ್ಟ್ ಇಂಜಿನೀಯರ್. ಇಬ್ಬರು ಸೇರಿ ಒಂದೊಳ್ಳೆ ಜೀವನ ನಡೆಸುತ್ತಿದ್ದರು. ಆದರೆ ರಮ್ಮಿ ಆಡಿ ಬಹುಮಾನ ಗೆಲ್ಲಿ ಎಂಬ ಆ್ಯಡ್‌ಗಳಿಂದ ಆಕರ್ಷಿತನಾದ ಭರತ್ ಕೊನೆಗೆ ರಮ್ಮಿ ಚಟಕ್ಕೆ ಬಿದ್ದಿದ್ದ. ಕೊನೆಗೆ ಬ್ಯಾಂಕ್ ಉದ್ಯೋಗಿಯಾಗಿ ದೊಡ್ಡ ಮಟ್ಟದ ಸಾಲಗಾರನಾಗಿದ್ದ.

ಮಧ್ಯಮ ವರ್ಗದ ಜನರಿಗೆ 20 ‌ಲಕ್ಷ ರೂ. ಎಂಬುದು ಬಹು ದೊಡ್ಡ ಮೊತ್ತವೇ. ಕೆಲವರು ಇಷ್ಟು ಹಣ ಸಿಕ್ಕರೆ ಸಾಕು ಒಂದು ಉದ್ದಿಮೆಗೆ ಹೂಡಿಕೆ ಮಾಡಿ ದುಡಿಮೆ ಮಾಡುತ್ತಾರೆ. ಆದರೆ ಈ ಬ್ಯಾಂಕ್ ಉದ್ಯೋಗಿ ಭರತ್ ಹೂಡಿಕೆ ಮಾಡಿದ್ದು ರಮ್ಮಿ ಜೂಜಿನಲ್ಲಿ. ರಮ್ಮಿ ಚಟಕ್ಕೆ ಬಿದ್ದವನಿಗೆ ತನಗೆ ಬರುತ್ತಿದ್ದ ಸಂಬಳ ಕೂಡ ಸಾಕಾಗುತ್ತಿರಲಿಲ್ಲ. ಪಡೆದುಕೊಂಡಿರುವ ಸಾಲದ ಇಎಂಐ ಕೂಡ ಕಟ್ಟಬೇಕಿತ್ತು. ಜತೆಗೆ ಫ್ಯಾಮಿಲಿ ಕಮಿಟ್ಮೆಂಟ್ ಬೇರೆ ಇತ್ತು . ಒಂದಲ್ಲ ಒಂದು ದಿನ ಕೋಟಿ ಗಳಿಸುತ್ತೀನಿ ಎಂದು ರಮ್ಮಿ ಆ್ಯಪ್‌ನಲ್ಲಿ ಜೂಜಾಟ ನಡೆಸಿದ್ದ.

ಸಂಬಳದ ಹಣ ಅಲ್ಲದೆ ಸಾಲ ಮಾಡಿ ಜೂಜಿಗೆ ಬಳಸಿದ. ಕೊನೆಗೆ ಆ ಸಾಲದ ಮೊತ್ತ ದಾಟಿದ್ದು 20 ಲಕ್ಷಕ್ಕೆ. ಆ ಸಾಲಕ್ಕೆ ಮತ್ತೆ ಬಡ್ಡಿ ಕಟ್ಟಬೇಕು. ಕೊಡದೆ ಇದ್ದಾಗ ಸಾಲಗಾರರು ಕಾಟ ಕೊಡಲು ಶುರು ಮಾಡಿದ್ದರು. ಇದರಿಂದ ಬೇಸತ್ತ ಬ್ಯಾಂಕ್ ಉದ್ಯೋಗಿ ಎರಡು ದಿನ ಮನೆ ಬಿಟ್ಟಿದ್ದ. ಪತ್ನಿ ಚೈತ್ರಾ ಜತೆ ಫೋನ್ ಸಂಪರ್ಕದಲ್ಲಿದ್ದ.

ಆದರೆ ನಾಪತ್ತೆ ಆಗಿದ್ದ. ಎರಡು ದಿನ ಬಳಿಕ ಮನೆಯಲ್ಲಿ ಪುಸ್ತಕವೊಂದರಲ್ಲಿ ಸಾಲಗಾರರ ಕಾಟ ಜಾಸ್ತಿ ಆಗಿದೆ ನಾನು ಮನೆ ಬಿಟ್ಟು ಹೋಗುತ್ತಿದ್ದೀನಿ. ನನ್ನ ಹುಡುಕುವುದು ಬೇಡ ಎಂದು ಬರೆದಿದ್ದ. ಜತೆಗೆ ಆತನ ಮೊಬೈಲ್ ಕೂಡ ಇತ್ತು. ಅದನ್ನು ಪರಿಶೀಲನೆ ನಡೆಸಿದಾಗ ವಿಡಿಯೋ ಸಿಕ್ಕಿದೆ. ತನ್ನ ಬೈಕ್‌ನಲ್ಲಿ ಮನೆ ಬಿಟ್ಟಿರುವ ಭರತ್‌ಗಾಗಿ ಆತನ ಪತ್ನಿ ತೀವ್ರ ಹುಡುಕಾಟ ನಡೆಸಿ ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾಳೆ . ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Assault Case : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಅಪರಿಚಿತರು ಪರಾರಿ

Assault case : ಪ್ರತ್ಯೇಕ ಕಡೆಗಳಲ್ಲಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆದಿದೆ. ಗದಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹಣ ದೋಚಿ ಪರಾರಿ ಆಗಿದ್ದಾರೆ. ಮತ್ತೊಂದು ಕಡೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Kantilal Bhansali a close aide of former CM BS Yediyurappa attacked assaulted in gadag
Koo

ಗದಗ: ಗದಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಅಪರಿಚಿತರು ಹಲ್ಲೆ (Assault Case ) ನಡೆಸಿದ್ದಾರೆ. ಮಾಜಿ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ, ಉದ್ಯಮಿ ಕಾಂತಿಲಾಲ್ ಬನ್ಸಾಲಿ ಎಪಿಎಂಸಿಯಿಂದ ನಿನ್ನೆ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಭೂಮರೆಡ್ಡಿ ಸರ್ಕಲ್ ಬಳಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ.

ಬಳಿಕ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ಮಾಡಿ ಹಣ ದೋಚಿ ಪರಾರಿ ಆಗಿದ್ದಾರೆ. ಮನೆಗೆ ಹೋಗುವಾಗ ಕಾಂತಿಲಾಲ್ ಬೈಕ್‌ಗೆ ಡಿಕ್ಕಿ ಹೊಡೆದು, ಹಲ್ಲೆ ಮಾಡಿ ಶರ್ಟ್ ಹರಿದು 50 ಸಾವಿರ ಹಣ ದೋಚಿದ್ದಾರೆ. ಮಾತ್ರವಲ್ಲ ನಿಂದು ಬಹಳ ಆಗಿದೆ ಅಂತ ಅವಾಜ್ ಹಾಕಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ರಾಜಕೀಯ ವಿರೋಧಿಗಳು ಮಾಡಿಸಿದ ಹಲ್ಲೆ ಇದು ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಗದಗ ಕ್ಷೇತ್ರದ ಬಿಜೆಪಿ ಬೆಳವಣಿಗೆ ಬಗ್ಗೆ ಬಹಿರಂಗವಾಗಿ ಕಾಂತಿಲಾಲ್ ಮಾತನಾಡಿದ್ದರು. ಹೀಗಾಗಿ ಯಾರಾದರೂ ಹೆದರಿಸಲು ಹಲ್ಲೆ ಮಾಡಿಸಿದ್ದಾರಾ ಅಂತ ಬಿಜೆಪಿ ವಲಯದಲ್ಲಿ ಚರ್ಚೆ ಆಗಿದೆ. ಹಣಕ್ಕಾಗಿ ದುಷ್ಕರ್ಮಿಗಳಿಂದ ಹಲ್ಲೆ ನಡೆದೆದಿಯಾ ಎಂಬ ಅನುಮಾನವಿದೆ.

ಬಿಜೆಪಿ ಮುಖಂಡನ ಮೇಲಿನ ಹಲ್ಲೆ ತೀವ್ರವಾಗಿ ಖಂಡಿಸಿದ್ದಾರೆ ಮಾಜಿ ನಿಗಮ ಮಂಡಳಿ ಅಧ್ಯಕ್ಷರಿಗೆ ರಕ್ಷಣೆ ಇಲ್ಲದಿದ್ದರೆ, ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಗದಗನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದರು. ಬಿಜೆಪಿ ಮುಖಂಡರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದ ಕಾಂತಿಲಾಲ್ ದೂರು ದಾಖಲಿಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲೂ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ದಾಂಧಲೆ

ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಯುವಕರು ದಾಂಧಲೆ ನಡೆಸಿದ್ದಾರೆ. ನಗರದ ಕೊಡಿಯಾಲ್ ಬೈಲ್‌ನ ಮನೆಗೆ ನುಗ್ಗಿ ಗಲಾಟೆ ಮಾಡಿ ದಾಂಧಲೆ ನಡೆಸಿದ ಇಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಎನ್ ಎಸ್ ಯುಐ ಕಾರ್ಯಕರ್ತ ಅನುಷ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಬಂಧಿತರು.

ಬೆಂಗಳೂರಿನಿಂದ ಆಗಮಿಸಿದ್ದ ಮಗಳನ್ನು ಕರೆ ತರಲು ರಾತ್ರಿ ಮಂಗಳೂರು ಏರ್‌ಪೋರ್ಟ್‌ಗೆ ಜಿತೇಂದ್ರ ಕೊಟ್ಟಾರಿ ಆಗಮಿಸಿದ್ದರು. ಬಳಿಕ ಕಾರಿನಲ್ಲಿ ಮಗಳ ಜತೆ ಮಂಗಳೂರಿನ ಮನೆಯತ್ತ ತೆರಳುತ್ತಿದ್ದರು. ಈ ವೇಳೆ ಅನುಷ್ ಶೆಟ್ಟಿ ಹಾಗೂ ಅಂಕಿತ್ ಇದ್ದ ಕಾರನ್ನು ಜಿತೇಂದ್ರ ಕೊಟ್ಟಾರಿ ಓವರ್ ಟೇಕ್ ಮಾಡಿದ್ದರು. ಇದೇ ಕೋಪದಲ್ಲಿ ಕಾರನ್ನು ಹಿಂಬಾಲಿಕೊಂಡು ಜಿತೇಂದ್ರ ಕೊಟ್ಟಾರಿ ಮನೆಯ ಬಳಿಗೆ ಬಂದಿದ್ದ ಯುವಕರು, ಕುಡಿತದ ಮತ್ತಿನಲ್ಲಿ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ಜಿತೇಂದ್ರ ಕೊಟ್ಟಾರಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ದೂರು ಪಡೆದು ಎಫ್ಐಆರ್ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನು ಬಂಧಿತರಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ ಅನುಷ್ ಶೆಟ್ಟಿ ಎಂದು ತಿಳಿದಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ನೋಟಾ ಅಭಿಯಾನ ನಡೆಸಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Honey Trap : ಹುಬ್ಬಳ್ಳಿ- ಧಾರವಾಡದಲ್ಲಿ ಹನಿಟ್ರ್ಯಾಪ್‌ಗೆ ಇಳಿದ ಗಂಡ-ಹೆಂಡತಿ

Honey Trap : ಹುಬ್ಬಳ್ಳಿ- ಧಾರವಾಡದಲ್ಲಿ ಹನಿಟ್ರ್ಯಾಪ್‌ಗೆ ಇಳಿದ ಗಂಡ-ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Husband and wife arrested for honey-trapping in Hubballi-Dharwad
Koo

ಧಾರವಾಡ: ಹನಿಟ್ರ್ಯಾಪ್ (Honey Trap ) ಮಾಡುತ್ತಿದ್ದ ಗಂಡ-ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ- ಧಾರವಾಡ ನಗರದಲ್ಲಿದ್ದ ಹನಿಟ್ರ್ಯಾಪ್ ಗ್ಯಾಂಗ್‌ನಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಇದ್ದರು. ಈ ಗ್ಯಾಂಗ್‌ ಮೊದಲು ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸುತ್ತಾರೆ. ಬಳಿಕ ಅವರನ್ನು ಪುಸಲಾಯಿಸಿ ಭೇಟಿ ಆಗೋಣ ಎನ್ನುತ್ತಾರೆ. ಭೇಟಿಗೆ ಬಂದಾಗ ಅವರ ಜತೆಗಿನ ಖಾಸಗಿ ವಿಡಿಯೊ ಮಾಡಿಕೊಳ್ಳುತ್ತಾರೆ. ಬಳಿಕ ವಿಡಿಯೊ ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಾರೆ. ಕೊಡದೆ ಇದ್ದರೆ ವಿಡಿಯೊ ಹರಿಬಿಡುವುದಾಗಿ ಬೆದರಿಸುತ್ತಿದ್ದರು.

ಸದ್ಯ ಧಾರವಾಡ ವಿದ್ಯಾಗಿರಿ ಪೊಲೀಸರು ಆಕಾಶ ಉಪ್ಪಾರ, ರೇಣುಕಾ ಉಪ್ಪಾರ್, ಮಲ್ಲಿಕ್ ಜಾನ್ ನದಾಫ್, ಗಜಾಲಾಭಾನು ನಗರಿ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನ ಆಭರಣ, ಬೆಳ್ಳಿ, ಹಣ ಸೇರಿ ಒಂದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 14,73,000 ಮೌಲ್ಯದ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಇದೆ ರೀತಿ ರಾಜ್ಯದ ವಿವಿಧ ಜಿಲ್ಲೆಗಳ ಜನರಿಗೂ ವಂಚನೆ ಮಾಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಗ್ಯಾಂಗ್‌ ವಿರುದ್ಧ ಒಟ್ಟು 4 ಪ್ರಕರಣಗಳು ದಾಖಲಾಗಿದೆ.

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ ಜೋರಾಗಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟರೆ, ಮತ್ತಿಬ್ಬರಿಗೆ ಗಾಯವಾಗಿದೆ.

VISTARANEWS.COM


on

By

Heavy rains lash Yadgir Woman killed in lightning strike
Koo

ಯಾದಗಿರಿ: ಭಾರಿ ಮಳೆ ಜತೆಗೆ ಸಿಡಿಲು ಬಡಿದು ಕೂಲಿ ಕಾರ್ಮಿಕ‌ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಂದ್ಲಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ಮಿಕರು ಹತ್ತಿ ಬಿಡಿಸಲು ಬೇರೊಬ್ಬರ ಜಮೀನಿಗೆ ಕೂಲಿಗೆ ತೆರಳಿದ್ದರು. ನಿನ್ನೆ ಸಂಜೆ ಜಮೀನಿನಲ್ಲಿ ಹತ್ತಿ ಬಿಡಿಸುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ನಿಂಗಮ್ಮ ಕೊಂಗಂಡಿ (35) ಮೃತ ದುರ್ದೈವಿ. ಭಾಗಮ್ಮ, ಬಸವರಾಜ ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸುರಪುರ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಲವತ್ತು ಕೋಳಿಗಳು ಬಲಿ

ಕೊಪ್ಪಳ ತಾಲೂಕಿನ ಗಿಣಗೇರಿಯ ಹುಲಿಗಿ ಚಿಕನ್ ಸೆಂಟರ್‌ನಲ್ಲಿ ಭಾರಿ ಮಳೆಗೆ ನಲವತ್ತು ಕೋಳಿಗಳು ಬಲಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಗೆ ರಾಜು ಎಂಬುವವರಿಗೆ ಸೇರಿದ ಶಾಪ್‌ನ ಒಳಗೆ ಗ್ರಾಮದ ಚರಂಡಿ ನೀರು ನುಗ್ಗಿದೆ. ಪರಿಣಾಮ ನೀರಿಗೆ ಸಿಲುಕಿ ಮಾರಾಟಕ್ಕಿಟ್ಟಿದ್ದ ಕೋಳಿಗಳು ಮೃತಪಟ್ಟಿವೆ. ಸಾವಿರಾರು ರೂಪಾಯಿ ಮೌಲ್ಯದ ಕೋಳಿಗಳು ಕಳೆದುಕೊಂಡು ಶಾಪ್ ಮಾಲೀಕ ನಷ್ಟ ಅನುಭವಿಸಿದ್ದರು.

ಕೋಡಿ ಬಿದ್ದು ಮನೆಗಳು ಜಲಾವೃತ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಹಿರೇಮಲ್ಲನಹೊಳೆ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ
ಹಿರೇಮಲ್ಲನಹೊಳೆ ಕೆರೆ ಕೋಡಿ ಬಿದ್ದಿದೆ. ಮೂವತ್ತು ವರ್ಷಗಳ ಬಳಿಕ ಕೆರೆ ಕೋಡಿ ಬಿದ್ದಿದ್ದು, 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ಕೆರೆ ತುಂಬಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ತೊರೆಸಾಲು, ಹಿರೇಮಲ್ಲನಹೊಳೆ, ತಾಯಿಟೋಣಿ, ಹಾಲೆಹಳ್ಳಿ, ಕೋರಚರಹಟ್ಟಿ ಗ್ರಾಮದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಜೆಸಿಬಿ ಮೂಲಕ ಕೋಡಿ ಬಿದ್ದ ನೀರನ ಹರಿವನ್ನು ಬೇರೆ ಕಡೆಗೆ ಬದಲಿಸಲು ಪ್ರಯತ್ನಿಸಿದರು.

ಚಿತ್ರದುರ್ಗದಲ್ಲೂ ಮಳೆ ಅಬ್ಬರ

ಚಿತ್ರದುರ್ಗ ಜಿಲ್ಲೆಯ ಹಲವು ಕಡೆ ತಡರಾತ್ರಿ ಮಳೆಯ ಅಬ್ಬರ ಜೋರಾಗಿತ್ತು. ಮಳೆಯ ಆರ್ಭಟಕ್ಕೆ ಕೆರೆ ಕಟ್ಟೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿತ್ತು. ಚಳ್ಳಕೆರೆ ತಾಲೂಕಿನ ರೇಖಲಗೆರೆ ಕೆರೆ ಕೋಡಿ ತುಂಬಿ ಹರಿಯುತ್ತಿದೆ. ರಾಮಸಾಗರ ಹಳ್ಳ ಸಂಪೂರ್ಣ ಭರ್ತಿಯಾಗಿದೆ. ರೇಖಲಗೆರೆ ಫೀಡರ್ ಚಾನಲ್ ಮೂಲಕ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ರಾತ್ರಿ ಮಳೆಗೆ ವರವು ಗ್ರಾಮದ ಕೆರೆಯೂ ಸಂಪೂರ್ಣ ಭರ್ತಿಯಾಗಿ, ಕೋಡಿ ಬಿದ್ದು ಹರಿಯುತ್ತಿದೆ. ಬರದ ನಾಡಲ್ಲಿ ಬರಪೂರ ಮಳೆಗೆ ಅನ್ನದಾತರಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ:Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

ಕೆರೆ ಕೋಡಿ ಬಿದ್ದು ಶವ ಸಾಗಿಸಲು ಗ್ರಾಮಸ್ಥರ ಹೆಣಗಾಟ

ಬೆಳಗಾವಿಯ ಕಿತ್ತೂರು ತಾಲೂಕಿನಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಬಸರಕೋಡ ಗ್ರಾಮದಲ್ಲಿ ಶವ ಸಾಗಿಸಲು ಗ್ರಾಮಸ್ಥರು ಹೆಣಗಾಡಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಕೋಡ ಗ್ರಾಮದಲ್ಲಿ ಪ್ರತಿ ವರ್ಷ ಮಳೆಗಾಲ ಬಂದ್ರೇ ಶವ ಸಾಗಿಸಲು ಜನರು ಪರದಾಡಬೇಕು. ಸ್ಮಶಾನಕ್ಕೆ ಹೋಗುವ ಮಾರ್ಗದಲ್ಲಿರುವ ಕೆರೆ ಕೊಡಿ ಬಿದ್ದು ಪರದಾಟ ಅನುಭವಿಸಬೇಕು.

ಮಳೆಗಾಲದಲ್ಲಿ ರಸ್ತೆ ಮೇಲೆ ಕೆರೆಯ ನೀರು ಹಳ್ಳದಂತೆ ಹರಿದು ಹೋಗಲಿದೆ. ನಡುಮಟದ ನೀರಲ್ಲೇ ಶವ ಹೊತ್ತು ಸ್ಮಶಾನಕ್ಕೆ ಸಾಗಿಸುವ ಪರಿಸ್ಥಿತಿ ಇದೆ. ಗ್ರಾಮದಲ್ಲಿ ಹೃದಯಾಘಾತದಿಂದ ಶಂಕ್ರಪ್ಪ ಹರಿಜನ(40) ಎಂಬುವವರು ಮೃತಪಟ್ಟಿದ್ದರು. ಶವ ಹೊತ್ತು ರಭಸವಾಗಿ ಹರಿಯುವ ನೀರಲ್ಲೇ ಸಾಗಿದ ಗ್ರಾಮಸ್ಥರು ಅಂತ್ಯ ಸಂಸ್ಕಾರ ನೆರವೇರಿಸಿದರು. ಕೆರೆ ಪಕ್ಕ ಸೇತುವೆ ನಿರ್ಮಾಣಕ್ಕೆ ಹಣ ಬಂದ್ದರೂ, ಸಣ್ಣ ನೀರಾವರಿ ಇಲಾಖೆ ಅಸಡ್ಡೆ ತೋರುತ್ತಿದೆ. ಒಂದು ಕೋಟಿಗೂ ಅಧಿಕ ಹಣವನ್ನು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ದುರಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತ

ಗದಗ ಜಿಲ್ಲೆಯ ನರಗುಂದ ತಾ. ಕುರ್ಲಗೇರಿ ಸೇತುವೆ ಭಾರೀ ಮಳೆಗೆ ಜಲಾವೃತಗೊಂಡಿದೆ. ಗದಗ-ಶಲವಡಿ- ನರಗುಂದ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ರೋಣ ತಾ.ಯಾವಗಲ್ ಗ್ರಾಮದ ಬಳಿಯ ಸೇತುವೆ ಜಲಾವೃತವಾಗಿದೆ. ರೋಣ-ನರಗುಂದ ರಸ್ತೆ ಸಂಚಾರ ಸ್ಥಗಿತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಅಪಾಯ ಮಟ್ಟ ಮೀರಿ ಬೆಣ್ಣೆಹಳ್ಳ ಹರಿಯುತ್ತಿದೆ. ಹುಬ್ಬಳ್ಳಿ-ಧಾರವಾಢ ಹಾಗೂ ಗದಗ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಬೆಣ್ಣೆ ಹಳ್ಳದ ಬಳಿ ಯಾರು ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಧ್ವನಿ ವರ್ಧಕದ ಮೂಲಕ ಬೆಣ್ಣೆ ಹಳ್ಳ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ ಮಾಡಿದೆ. ಕಷ್ಟ ಪಟ್ಟು ಬೆಳೆದ ಗೋವಿನಜೋಳ ಹತ್ತಿ ಈರುಳ್ಳಿ ಬೆಳೆಗಳು ಜಲಾವೃತಗೊಂಡು, ಬೆಳೆ ಹಾನಿಯಾಗಿದೆ.

ಧಾರವಾಡ, ಯಾದಗಿರಿಯಲ್ಲಿ ಭರ್ಜರಿ ಮಳೆ

ಧಾರವಾಡ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮತ್ತಷ್ಟು ಮಳೆ ಆದರೆ ಪ್ರವಾಹ ಭೀತಿಯಲ್ಲಿ ಹಳ್ಳಕ್ಕೆ ಹೊಂದಿರುವ ಗ್ರಾಮಗಳು ಜಲಾವೃತಗೊಳ್ಳುವ ಸಾಧ್ಯತೆ ಇದೆ. ಯಾದಗಿರಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಗರ ಸೇರಿದಂತೆ ವಿವಿಧೆಡೆ ಒಂದು ಗಂಟೆಗೂ ಮಳೆ ಸುರಿದಿದೆ. ಮಳೆಯಿಂದ ಯಾದಗಿರಿ ರೈತರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Online gambling Rs 20 lakh for rummy addiction debt Bank employee leaves home due to debtors
ಬೆಂಗಳೂರು2 ಗಂಟೆಗಳು ago

Online gambling : ರಮ್ಮಿ ಚಟಕ್ಕೆ 20 ಲಕ್ಷ ರೂ. ಸಾಲ; ಸಾಲಗಾರರ ಕಾಟಕ್ಕೆ ‘ನಾನು ಸೋತಿದ್ದೇನೆ’ ಎಂದು ಮನೆ ತೊರೆದ ಬ್ಯಾಂಕ್‌ ನೌಕರ

Kantilal Bhansali a close aide of former CM BS Yediyurappa attacked assaulted in gadag
ಗದಗ3 ಗಂಟೆಗಳು ago

Assault Case : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಅಪರಿಚಿತರು ಪರಾರಿ

Husband and wife arrested for honey-trapping in Hubballi-Dharwad
ಹುಬ್ಬಳ್ಳಿ4 ಗಂಟೆಗಳು ago

Honey Trap : ಹುಬ್ಬಳ್ಳಿ- ಧಾರವಾಡದಲ್ಲಿ ಹನಿಟ್ರ್ಯಾಪ್‌ಗೆ ಇಳಿದ ಗಂಡ-ಹೆಂಡತಿ

Heavy rains lash Yadgir Woman killed in lightning strike
ಮಳೆ4 ಗಂಟೆಗಳು ago

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Ayudha Puja celebrations across the karnataka state Temples housefull by devotees
ಬೆಂಗಳೂರು6 ಗಂಟೆಗಳು ago

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

karnataka Weather Forecast
ಮಳೆ13 ಗಂಟೆಗಳು ago

Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya : ನಂಬಿದ ವ್ಯಕ್ತಿಗಳಿಂದ ಈ ರಾಶಿಯವರು ಮೋಸ ಹೋಗುತ್ತೀರಿ

karnataka Weather Forecast
ಮಳೆ1 ದಿನ ago

Karnataka Weather : ಚಿಕ್ಕಮಗಳೂರಿನಲ್ಲಿ ಅಬ್ಬರಿಸುತ್ತಿರುವ ಮಳೆ; ನಾಳೆಗೂ ಭಾರಿ ವರ್ಷಧಾರೆ

Actor Darshan
ಬೆಂಗಳೂರು1 ದಿನ ago

Actor Darshan : ನಟ ದರ್ಶನ್‌ ಜಾಮೀನು ಭವಿಷ್ಯ ಅ.14ಕ್ಕೆ ನಿರ್ಧಾರ; ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ ಕೋರ್ಟ್‌

Fake journalist arrested for targeting bakeries For money
ಬೆಂಗಳೂರು1 ದಿನ ago

Fake journalist : ಜನ ಸಾಮಾನ್ಯರ ಬಳಿ ಸುಲಿಗೆ ಮಾಡುತ್ತಿದ್ದ ನಕಲಿ‌ ಪತ್ರಕರ್ತ ಅರೆಸ್ಟ್‌

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌