Santro Ravi case: ಸ್ಯಾಂಟ್ರೊ‌ ರವಿ ಆತ್ಮಹತ್ಯೆ ಯತ್ನ ಕಟ್ಟುಕಥೆಯಾ? ಅನುಮಾನಕ್ಕೆ ಕಾರಣವಾಯ್ತು ಪೊಲೀಸ್‌ ನಡೆ - Vistara News

ಕ್ರೈಂ

Santro Ravi case: ಸ್ಯಾಂಟ್ರೊ‌ ರವಿ ಆತ್ಮಹತ್ಯೆ ಯತ್ನ ಕಟ್ಟುಕಥೆಯಾ? ಅನುಮಾನಕ್ಕೆ ಕಾರಣವಾಯ್ತು ಪೊಲೀಸ್‌ ನಡೆ

ಸ್ಯಾಂಟ್ರೋ ರವಿಯನ್ನು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ್ದು ಪೂರ್ವಯೋಜಿತ ಸಂಚೇ ಎಂಬ ಅನುಮಾನ ಮೂಡಿದೆ. ಆ ಮೂಲಕ ಆಸ್ಪತ್ರೆಯಲ್ಲಿ ರಹಸ್ಯವಾಗಿ ಬೇರೊಬ್ಬರ ಭೇಟಿಗೆ ಅವಕಾಶ ನೀಡಲಾಯಿತೇ ಎಂಬ ಅನುಮಾನಕ್ಕೆ ಆಸ್ಪದವಾಗಿದೆ.

VISTARANEWS.COM


on

santro ravi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಟ್ರೋ ರವಿಯನ್ನು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ್ದು ಪೂರ್ವಯೋಜಿತ ಸಂಚೇ ಎಂಬ ಅನುಮಾನ ಮೂಡಿದೆ. ಆ ಮೂಲಕ ಆಸ್ಪತ್ರೆಯಲ್ಲಿ ರಹಸ್ಯವಾಗಿ ಬೇರೊಬ್ಬರ ಭೇಟಿಗೆ ಅವಕಾಶ ನೀಡಲಾಯಿತೇ ಎಂಬ ಅನುಮಾನಕ್ಕೆ ಆಸ್ಪದವಾಗಿದೆ.

ಸಿಐಡಿ ಕಚೇರಿಯಲ್ಲಿ ಸಿಸಿ ಕ್ಯಾಮರಾಗಳಿದ್ದು, ಯಾರೇ ಭೇಟಿಯಾಗಲೂ ಬಂದರೂ ದಾಖಲಾಗುತ್ತದೆ. ಅದನ್ನು ತಪ್ಪಿಸಲು ಈ ಸಂಚು ನಡೆಸಿರಬಹುದು ಎನ್ನಲಾಗಿದೆ. ಇದಕ್ಕೆ ಕಾರಣಗಳಿವೆ. ಆತ್ಮಹತ್ಯೆ ಯತ್ನ ನಡೆಸಿದರೂ FIR ದಾಖಲು ಮಾಡಿಲ್ಲ. IPC ಸೆಕ್ಷನ್ 309ರಡಿ ಕೇಸ್‌ ಮಾಡಬೇಕಿತ್ತು. ಅದು ಒಂದು ವರ್ಷ ಜೈಲು, ದಂಡ ವಿಧಿಸಬಹುದಾದ ಪ್ರಕರಣ. ಸಾಯಲೆಂದು ಆತ ಐದಾರು ಮಾತ್ರೆ ನುಂಗಿದ್ದ ಎನ್ನಲಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಟ್ರೀಟ್‌ಮೆಂಟ್ ನೀಡಲಾಗಿತ್ತು.

ಇದನ್ನೂ ಓದಿ: Santro Ravi Case: ಹೆಚ್ಚು ಮಾತ್ರೆ ನುಂಗಿದ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಇಲ್ಲಿ ಸಿಐಡಿ ಅಧಿಕಾರಿಗಳ ಮೇಲೂ ಅನುಮಾನ ಮೂಡುತ್ತಿದೆ. ಸಿಐಡಿ ಒಳಗೆ ಯಾರೇ ಬಂದರೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗುತ್ತದೆ. ಯಾರಾದರೊಬ್ಬರು ವಿಚಾರ ಹೊರಗೆ ಬಿಡುತ್ತಾರೆ‌. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸೇರಿಸಿ ಯಾರನ್ನಾದರೂ ಮೀಟ್ ಮಾಡಿಸಿರಬಹುದು. ರವಿ ಆಸ್ಪತ್ರೆಯಲ್ಲಿ ಇರುವ ಒಂದು ಫೋಟೊ ಅಥವಾ ವಿಡಿಯೋ ಕೂಡ ಇಲ್ಲ. ಆತ ಆಸ್ಪತ್ರೆಯಲ್ಲಿ ‌ಇರುವುದನ್ನು ಯಾರೊಬ್ಬರೂ ನೋಡಿಲ್ಲ. ಹೀಗಾಗಿ ಸ್ಯಾಂಟ್ರೊ‌ ರವಿ ಸೂಸೈಡ್ ಕೇಸ್‌ ಕಟ್ಟುಕಥೆಯಂತೆ ಭಾಸವಾಗುತ್ತಿದೆ.

ಮತ್ತೊಂದು ಕಡೆ ಸ್ಯಾಂಟ್ರೋ ರವಿ ಕಾಟಕ್ಕೆ ಸಿಐಡಿ ಅಧಿಕಾರಿಗಳು ಹೆದರಿದರೇ ಎಂಬ ಅನುಮಾನವೂ ಮೂಡಿದೆ. ಕಸ್ಟಡಿ ಅವಧಿ ಮುಗಿಯುವುದಕ್ಕೂ ಮುನ್ನವೇ ಆತನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದು ಕಡೆ ಸಿಸಿಬಿ ಪೊಲೀಸರಿಂದಲೂ ಸ್ಯಾಂಟ್ರೋ ಕಸ್ಟಡಿ ಪಡೆಯಲು ಹಿಂದೇಟು ವ್ಯಕ್ತವಾಗುತ್ತಿದೆ. ಬುಧವಾರ ಮೈಸೂರಿಗೆ ಹೋಗಲು ಸಿಸಿಬಿ ಚಿಂತನೆ ನಡೆಸಿದ್ದು, ಕಸ್ಟಡಿಗೆ ಪಡೆಯದೇ ಜೈಲಿನಲ್ಲೇ ಹೇಳಿಕೆ ಪಡೆಯಲು ತಯಾರು ಮಾಡಿಕೊಳ್ಳುತ್ತಿದ್ದಾರೆ. ಪೊಲೀಸರು ಕೂಡ ಸ್ಯಾಂಟ್ರೋ ರವಿ ಪ್ರಭಾವಕ್ಕೆ ಹೆದರಿದ್ದಾರಾ? ಹಾಗೊಂದು ಅನುಮಾನ ಮೂಡುತ್ತಿದೆ.

ಇದನ್ನೂ ಓದಿ: Santro Ravi Case: ಸಿಐಡಿ ಅಧಿಕಾರಿಗಳಿಂದ ಸ್ಯಾಂಟ್ರೋ ರವಿ 2ನೇ ಪತ್ನಿ ವಿಚಾರಣೆ, ಸ್ಥಳ ಮಹಜರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಗಲಕೋಟೆ

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

Road Accident : ಟಿಪ್ಪರ್‌ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಸಿದ್ದನಕೊಳ್ಳ ಡಾ.ಶಿವಕುಮಾರ್ ಶ್ರೀಗಳಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Road Accident in bagalakote
Koo

ಬಾಗಲಕೋಟೆ: ಬಾಗಲಕೋಟೆ (Baglkote News) ಜಿಲ್ಲೆಯ ಹುನಗುಂದ ತಾಲೂಕಿನ ಬಾನಂತಿ ಕೊಳ್ಳದ ಸಮೀಪ ವೇಗವಾಗಿ ಬಂದ ಟಿಪ್ಪರ್‌ ಲಾರಿ- ಕಾರಿನ ನಡುವೆ ಅಪಘಾತ (Road Accident) ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಛಿದ್ರಗೊಂಡಿದ್ದು, ಲಾರಿ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ.

ಇನ್ನೂ ಕಾರಿನೊಳಗೆ ಇದ್ದ ಸಿದ್ದನಕೊಳ್ಳ ಡಾ.ಶಿವಕುಮಾರ್ ಶ್ರೀಗಳಿಗೆ ಗಂಭೀರ ಗಾಯಗೊಂಡಿದ್ದಾರೆ. ಶ್ರೀಗಳೇ ಕಾರು ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಡಾ.ಶಿವಕುಮಾರ್ ಶ್ರೀಗಳನ್ನು ಆಂಬ್ಯುಲೆನ್ಸ್‌ ಮೂಲಕ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಮಿನಗಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಅಮಿನಗಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

ಕೊಚ್ಚಿ: ಹೆತ್ತ ತಾಯಿಯೊಬ್ಬಳು ಹಸುಗೂಸನ್ನು (Newly born Child) ಅಪಾರ್ಟ್‌ಮೆಂಟ್‌(Apartment)ನಿಂದ ಕೆಳಗೆಸೆದಿರುವಂತಹ ಆಘಾತಕಾರಿ ಘಟನೆ(Viral News) ಕೇರಳದ(Kerala) ಕೊಚ್ಚಿಯಲ್ಲಿ ನಡೆದಿದೆ. ಪಣಂಪುಲ್ಲಿನಗರದಲ್ಲಿ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್‌ವೊಂದರ ಪಕ್ಕದ ರಸ್ತೆಯಲ್ಲಿ ಬಟ್ಟೆ ಮತ್ತು ಕೊರಿಯರ್‌ ಪ್ಲಾಸ್ಟಿಕ್‌ನಲ್ಲಿ ಸುತ್ತಿದ್ದ ಮಗುವಿನ ಮೃತದೇಹ ಪತ್ತೆಯಾಗಿತ್ತು. ಇದನ್ನು ನೋಡಿದ ಜನ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ ತಾಯಿಯೇ ಮಗುವನ್ನು ಎಸೆದಿರುವ ಆಘಾತಕಾರಿ ವಿಚಾರ ಬಯಲಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಾಗ ಅಪಾರ್ಟ್‌ಮೆಂಟ್‌ನಿಂದ ಮಗುವನ್ನು ಎಸೆದಿರುವುದು ಸ್ಪಷ್ಟವಾಗಿದೆ. ಮೇಲಿನಿಂದ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಅಸುನೀಗಿದೆ. ತಕ್ಷಣ ಅಪಾರ್ಟ್‌ಮೆಂಟ್‌ ಒಳಗೆ ಹೋದ ಪೊಲೀಸರು 23ವರ್ಷದ ಮಹಿಳೆಯಯನ್ನು ಅರೆಸ್ಟ್‌ ಮಾಡಿದ್ದು, ಆಕೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಮುಂದಿನ ಕಾನೂನು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಇನ್ನು ಮಹಿಳೆ ಹೆರಿಗೆಯಾದ ಮೂರು ಗಂಟೆಗಳ ನಂತರ ಗಾಬರಿಯಲ್ಲಿ ಮಗುವನ್ನು ಬಟ್ಟೆಯಲ್ಲಿ, ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಮಹಿಳೆ ಅಪಾರ್ಟ್‌ಮೆಂಟ್‌ನಿಂದ ಎಸೆದಿದ್ದಾಳೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಮಹಿಳೆ ಅತ್ಯಾಚಾರ ಸಂತ್ರಸ್ತೆ ಎಂಬ ಶಂಕೆ

ವಿಚಾರಣೆ ಆರಂಭಿಸಿರುವ ಪೊಲೀಸರು ಮಹಿಳೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ವಿಚಾರಣೆ ವೇಳೆ ಮಹಿಳೆ ಈ ಕೃತ್ಯ ತಾನೇ ಎಸಗಿರುವುದಾಗಿ ಒಪ್ಪಿಕೊಂಡಿದ್ದು, ಮಗುವಿನ ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಕೃತ್ಯದ ಹಿಂದಿರುವ ನಿಜವಾದ ಉದ್ದೇಶ ಬಯಲಾಗಲಿದೆ. ಒಂದು ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿದ್ದರೆ ಅದರ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ. ಇನ್ನು ಆರೋಪಿ ಮಹಿಳೆ ಗರ್ಭಿಣಿಯಾಗಿರುವ ವಿಚಾರ ಆಕೆಯ ಮನೆಯವರಿಗೆ ತಿಳಿದಿರಲಿಲ್ಲ. ಅವರಿಗೂ ಈ ಕೊಲೆಗೂ ಯಾವುದೇ ಸಂಬಂಧ ಇಲ್ಲ ಎಂದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ.

ಇಂತಹದ್ದೇ ಒಂದು ಘಟನೆ ಎರಡು ತಿಂಗಳ ಹಿಂದೆ ಮಡಿಕೇರಿಯ ಸುಂಠಿಕೊಪ್ಪದಲ್ಲಿ ನಡೆದಿತ್ತು. ಯಂಕನ ದೇವರಾಜು ಎಂಬುವವರ ಗದ್ದೆಯಲ್ಲಿ ನವಜಾತ ಶಿಶುವಿನ ಮೃತದೇಹ ಮಣ್ಣಿನೊಳಗೆ ಪತ್ತೆಯಾಗಿತ್ತು. ತನಿಖೆ ನಡೆಸಿದಾಗ ಹೆತ್ತ ತಾಯಿಯೇ ಮಗುವನ್ನು ಕತ್ತು ಹಿಸುಕಿ ಕೊಂದು ನಂತರ ಮಣ್ಣಿನಲ್ಲಿ ಹೂತಿರುವುದು ಬೆಳಕಿಗೆ ಬಂದಿತ್ತು. ಘಟನೆಗೆ ಸಂಬಂಧಿಸಿ ಸುಂಟಿಕೊಪ್ಪ ಪೊಲೀಸರು ಆರೋಪಿಗಳಿಬ್ಬರನ್ನು ಪತ್ತೆಹಚ್ಚಿ ಬಂಧಿಸಿದ್ದು, ಬಂಧಿತರನ್ನು ಗದ್ದೆಹಳ್ಳ ಗಿರಿಯಪ್ಪ ಮನೆ ಗದ್ದೆಯಲ್ಲಿ ವಾಸವಾಗಿರುವ ಕುಮಾರ ಮತ್ತು ಆತನ ತಾಯಿ ಯಮುನಾ ಎಂದು ಗುರುತಿಸಲಾಗಿದೆ. ಇವರು ಆಗಷ್ಟೇ ಹುಟ್ಟಿದ ಮಗುವಿನ ಕತ್ತು ಹಿಸುಕಿ ಸಾಯಿಸಿ ನಂತರ ಹೂತು ಹಾಕಿರುವುದನ್ನು ಪೋಲೀಸರ ವಿಚಾರಣೆ ಸಂದರ್ಭ ಒಪ್ಪಿಕೊಂಡಿದ್ದರು.

ವಿವಾಹಿತನಾಗಿರುವ ಕುಮಾರನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಈತ ಚೆಟ್ಟಳ್ಳಿ ಸಮೀಪದ ಗ್ರಾಮವೊಂದರ ಮಹಿಳೆ ಒಬ್ಬಳ ಜತೆ ಅಕ್ರಮ ಸಂಬಂಧ ಇರಿಸಿದ್ದು ಇದರ ಫಲವಾಗಿ ಆಕೆ ತುಂಬು ಗರ್ಭಿಣಿಯಾಗಿದ್ದಳು. ರಾತ್ರಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ ಕುಮಾರ ಮತ್ತು ಅವನ ತಾಯಿ ನವಜಾತ ಶಿಶುವಿನ ಕತ್ತುಹಿಸುಕಿ ಅದರ ಜೀವ ಕಿತ್ತುಕೊಂಡಿದ್ದರು. ಮರುದಿನ ಮುಂಜಾನೆ ಕುಮಾರ ಮತ್ತು ಯಮುನಾ ರಸ್ತೆ ಬದಿಯ ಗದ್ದೆಯಲ್ಲಿ ಗುಂಡಿ ತೋಡಿ ನವಜಾತ ಶಿಶುವನ್ನು ಹೂತಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Bomb Threat: ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

VISTARANEWS.COM


on

mangaluru airport bomb threat
Koo

ಮಂಗಳೂರು: ಮಂಗಳೂರು ಏರ್‌ಪೋರ್ಟ್ (Mangaluru Airport) ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಏರ್‌ಪೋರ್ಟ್‌ ಆವರಣದಲ್ಲಿ ಹಾಗೂ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಇಮೇಲ್‌ (threat Email) ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನ ಬಂದ ಕಡೆಗಳಲ್ಲಿ ತಪಾಸಣೆ ಕೂಡ ನಡೆಸಲಾಗಿದೆ.

ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕಳಿಸಲಾಗಿದೆ. “ಏರ್‌ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿದ್ದೇವೆ. ಇನ್ನು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತ ಆಗಲಿದೆ” ಎಂದು ಬೆದರಿಕೆ ಒಡ್ಡಲಾಗಿತ್ತು. “ಟೆರರೈಸರ್ಸ್ 111” ಸಂಘಟನೆ ಈ ಕೃತ್ಯದ ಹಿಂದೆ ಇದೆ ಎಂದು ಬೆದರಿಕೆ ಇಮೇಲ್ ತಿಳಿಸಿತ್ತು.

ಎಪ್ರಿಲ್ 29ರಂದೇ ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಅಂದೇ ತಪಾಸಣೆ ನಡೆದು ಇದೊಂದು ಹುಸಿ ಬೆದರಿಕೆ ಎಂಬುದು ರುಜುವಾತಾಗಿದೆ. ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಂಬ್ ಬೆದರಿಕೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಬಾಂಬ್ ಬೆದರಿಕೆ ವಿಷಯವನ್ನು ಗೌಪ್ಯವಾಗಿಟ್ಟು ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಎರಡು ದಿನಗಳ ಹಿಂದೆ ದಿಲ್ಲಿಯ ಶಾಲೆಗಳಿಗೆ ಇದೇ ರೀತಿಯ ಬಾಂಬ್‌ ಸ್ಫೋಟದ ಇಮೇಲ್‌ ಬೆದರಿಕೆ ಬಂದಿತ್ತು. ನೂರಾರು ಶಾಲೆಗಳಿಗೆ ಈ ಇಮೇಲ್‌ ಬಂದಿದ್ದು, ಇದರ ಮೂಲವನ್ನು ಪೊಲೀಸರು ಟ್ರೇಸ್‌ ಮಾಡಿದ್ದಾರೆ. ಬೆಂಗಳೂರಿನಲ್ಲಿಯೂ ಹಲವು ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್‌ ಬಂದಿದ್ದುದನ್ನು ನೆನಪಿಸಿಕೊಳ್ಳಬಹುದು. ಇದುವರೆಗೂ ಇಂಥ ಬೆದರಿಕೆ ಮೇಲ್‌ಗಳು ನಿಜವಾದ ಉದಾಹರಣೆ ಇಲ್ಲ.

ಆದರೆ, ಭದ್ರತಾ ಪಡೆಗಳು ರಿಸ್ಕ್‌ ತೆಗೆದುಕೊಳ್ಳಲು ಇಚ್ಛಿಸದೆ ತೀವ್ರ ತಪಾಸಣೆ ನಡೆಸುತ್ತವೆ ಹಾಗೂ ಸೈಬರ್‌ ಪೊಲೀಸರು ಇಂಥ ಇಮೇಲ್‌ಗಳ ಮೂಲದ ಬೆನ್ನು ಬೀಳುತ್ತಾರೆ. ಆದರೆ ಹೆಚ್ಚಾಗಿ ಇಂಥ ಇಮೇಲ್‌ಗಳ ಮೂಲ ಪತ್ತೆಯಾಗದಂತೆ ವಿಪಿಎನ್‌ ಮೂಲಕ ಕಾರ್ಯಾಚರಿಸಿ, ಯಾವುದೋ ವಿದೇಶದ ಸರ್ವರ್‌ನಿಂದ ಬಂದದ್ದು ಎಂದು ಕಾಣಿಸುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Continue Reading

ತುಮಕೂರು

Self Harming : ಸಾಲಬಾಧೆಗೆ ನೊಂದು ಮನೆಯೊಳಗೆ ನೇಣಿಗೆ ಕೊರಳೊಡ್ಡಿದ ಗೃಹಿಣಿ

Self harming : ಸಾಲಬಾಧೆಯಿಂದ ನೊಂದ ಮಹಿಳೆಯೊಬ್ಬರು ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

Self Harming
Koo

ತುಮಕೂರು: ಸಾಲಬಾಧೆ ತಾಳಲಾರದೇ ಗೃಹಿಣಿಯೊಬ್ಬರು ಮನನೊಂದು ಆತ್ಮಹತ್ಯೆಗೆ (Self harming) ಶರಣಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅರಳಗುಪ್ಪೆಯಲ್ಲಿ ಘಟನೆ ನಡೆದಿದೆ. ಭಾಗ್ಯಮ್ಮ (50) ಆತ್ಮಹತ್ಯೆಗೆ ಶರಣಾದವರು.

ಭಾಗ್ಯಮ್ಮ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ಹಣ ಕಟ್ಟಲು ಸಾಧ್ಯವಾಗದೇ ಆತ್ಮಹತ್ಯೆ ದಾರಿ ತುಳಿದಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

20 ವರ್ಷಗಳಲ್ಲಿ ಐಐಟಿಯ 115 ವಿದ್ಯಾರ್ಥಿಗಳು ಆತ್ಮಹತ್ಯೆ

ಮುಂಬಯಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ – IIT) ಕನಿಷ್ಠ 115 ವಿದ್ಯಾರ್ಥಿಗಳು 2005ರಿಂದೀಚೆಗೆ ಆತ್ಮಹತ್ಯೆ (Students Self harming, students Suicide) ಮಾಡಿಕೊಂಡಿದ್ದಾರೆ ಎಂಬ ಕಳವಳಕಾರಿ ಅಂಶ ಬಯಲಾಗಿದೆ. ಇವುಗಳಲ್ಲಿ 98 ಸಾವುಗಳು ಕ್ಯಾಂಪಸ್‌ನಲ್ಲಿ ಆಗಿವೆ. 17 ಕ್ಯಾಂಪಸ್‌ನಿಂದ ಹೊರಗೆ ಆಗಿವೆ. 56 ಜನ ನೇಣು ಬಿಗಿದುಕೊಂಡಿದ್ದಾರೆ.

ಐಐಟಿ ಕಾನ್ಪುರದ ಹಳೆಯ ವಿದ್ಯಾರ್ಥಿ ಮತ್ತು ಗ್ಲೋಬಲ್ ಐಐಟಿ ಅಲುಮ್ನಿ ಸಪೋರ್ಟ್ ಗ್ರೂಪ್‌ನ ಸಂಸ್ಥಾಪಕ ಧೀರಜ್ ಸಿಂಗ್ ಅವರು ಕೇಳಿದ ಮಾಹಿತಿ ಹಕ್ಕು (ಆರ್‌ಟಿಐ) ಪ್ರಶ್ನೆಯ ಮೂಲಕ ಸ್ವೀಕರಿಸಿದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಇದೇ ಫೆಬ್ರವರಿ 12, 2023ರಂದು ಐಐಟಿ ಬಾಂಬೆ ವಿದ್ಯಾರ್ಥಿ ದರ್ಶನ್ ಸೋಲಂಕಿ ಅವರ ಮರಣ ಸಂಭವಿಸಿತ್ತು. ಇದು ಕಳೆದ 20 ವರ್ಷಗಳಲ್ಲಿ ದೇಶಾದ್ಯಂತ ಐಐಟಿಯನ್ನರ ಸಾವಿನ ಬಗ್ಗೆ ಮಾಹಿತಿ ಕೋರಿ RTI ಅರ್ಜಿಯನ್ನು ಸಲ್ಲಿಸಲು ಸಿಂಗ್ ಅವರನ್ನು ಪ್ರೇರೇಪಿಸಿತ್ತು. ಅಂಕಿಅಂಶಗಳ ಪ್ರಕಾರ, 2005 ಮತ್ತು 2024ರ ನಡುವೆ, ಐಐಟಿ ಮದ್ರಾಸ್‌ನಲ್ಲಿ ಅತಿ ಹೆಚ್ಚು ಸಾವುಗಳು 26, ನಂತರ ಐಐಟಿ ಕಾನ್ಪುರದಲ್ಲಿ 18, ಐಐಟಿ ಖರಗ್‌ಪುರದಲ್ಲಿ 13 ಮತ್ತು ಐಐಟಿ ಬಾಂಬೆಯಲ್ಲಿ 10 ಸಾವುಗಳು ದಾಖಲಾಗಿವೆ. ಈ ವರ್ಷ ಇದುವರೆಗೆ ಐದು ಸಾವುಗಳು ದಾಖಲಾಗಿವೆ.

“ಕೇಂದ್ರ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಬರುವ ಉನ್ನತ ಶಿಕ್ಷಣ ಇಲಾಖೆಯು ಆರಂಭದಲ್ಲಿ ನನ್ನ ಅರ್ಜಿಯನ್ನು ತಿರಸ್ಕರಿಸಿತು ಮತ್ತು ಪ್ರತ್ಯೇಕ ಸಂಸ್ಥೆಗಳಿಗೆ ಪ್ರತ್ಯೇಕ ಆರ್‌ಟಿಐಗಳನ್ನು ಸಲ್ಲಿಸುವಂತೆ ಕೇಳಿತು. ಮನವಿಯ ನಂತರ, ಸಚಿವಾಲಯವು ಎಲ್ಲಾ ಐಐಟಿಗಳಿಗೆ ಡೇಟಾವನ್ನು ಹಂಚಿಕೊಳ್ಳಲು ಸೂಚಿಸಿತು” ಎಂದು ಸಿಂಗ್ ಹೇಳಿದರು.

ಆದಾಗ್ಯೂ, ಎಂಟು ತಿಂಗಳುಗಳಲ್ಲಿ, 23 ಐಐಟಿಗಳಲ್ಲಿ 13 ಮಾತ್ರ ಸಿಂಗ್ ಅವರೊಂದಿಗೆ ಡೇಟಾವನ್ನು ಹಂಚಿಕೊಂಡಿವೆ. “ನಾನು RTI ಪ್ರತಿಕ್ರಿಯೆಯಿಂದ ಕೆಲವು ಡೇಟಾವನ್ನು ಸ್ವೀಕರಿಸಿದ್ದೇನೆ. ಸಾರ್ವಜನಿಕ ಡೊಮೇನ್‌ನಲ್ಲಿನ ಅಧಿಕೃತ ಮೂಲಗಳಿಂದ ಕೆಲ ಡೇಟಾವನ್ನು ಸಂಗ್ರಹಿಸಿದ್ದೇನೆ. ಇದರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ಅಂಕಿಅಂಶಗಳು ಮತ್ತು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಗಳು ಸೇರಿವೆ” ಎಂದಿದ್ದಾರೆ ಸಿಂಗ್.

ಕಳೆದ ವರ್ಷ ಐಐಟಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಹೆಚ್ಚಿನ ಆತಂಕವನ್ನು ಸೃಷ್ಟಿಸಿದೆ. ಐಐಟಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಮತ್ತು ಸಾಮಾಜಿಕ ಒತ್ತಡವನ್ನು ನಿಭಾಯಿಸಲು ಗಂಭೀರ ಕ್ರಮಗಳಿಗೆ ಕರೆ ನೀಡಿರುವ ಸಿಂಗ್, “ದೇಶದ ಪ್ರಮುಖ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮೇಲೆ ಹೆಚ್ಚಿರುವ ಒತ್ತಡವನ್ನು ಎತ್ತಿ ತೋರಿಸಬೇಕಿದೆ. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಪೋಷಕರಿಗೆ ಒತ್ತಡ ಕಡಿಮೆ ಮಾಡಲು ಐಐಟಿ ಶಿಕ್ಷಣವನ್ನು ಸುಧಾರಿಸುವ ತುರ್ತು ಅವಶ್ಯಕತೆಯಿದೆ” ಎಂದಿದ್ದಾರೆ.

ಸೋಲಂಕಿಯವರ ಮರಣದ ನಂತರ ವಿವಿಧ ಐಐಟಿ ವಿದ್ಯಾರ್ಥಿ ಸಂಘಟನೆಗಳು ನಡೆಸಿದ ಆಂತರಿಕ ಸಮೀಕ್ಷೆಗಳಲ್ಲಿ, 61% ಪ್ರತಿಸ್ಪಂದಕರು ವಿದ್ಯಾರ್ಥಿಗಳ ಸಾವುಗಳು ಶೈಕ್ಷಣಿಕ ಒತ್ತಡದ ಕಾರಣ ಎಂದು ನಂಬಿದ್ದರು. ಇದರ ನಂತರ ಉದ್ಯೋಗದ ಅಭದ್ರತೆ (12%), ಕೌಟುಂಬಿಕ ಸಮಸ್ಯೆಗಳು (10%) ಮತ್ತು ಕಿರುಕುಳ (6%). ಹನ್ನೊಂದು ಪ್ರತಿಶತ ವಿದ್ಯಾರ್ಥಿಗಳು ‘ಇತರ ಕಾರಣಗಳು’ ಅಂಕಣವನ್ನು ಟಿಕ್ ಮಾಡಿದ್ದಾರೆ.

ಸೋಲಂಕಿಯವರ ಮರಣದ ನಂತರ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ವಿವಿಧ ಕ್ರಮಗಳನ್ನು ಕೈಗೊಂಡಿದೆ. ದೈಹಿಕ ಸಾಮರ್ಥ್ಯ ಮತ್ತು ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಆರೋಗ್ಯ, ಕಲ್ಯಾಣ ಮತ್ತು ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡಲು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಲಹೆಗಳನ್ನು ನೀಡಿತು. ಮಾನಸಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕುಟುಂಬಗಳಿಗೆ ಮಾನಸಿಕ ಬೆಂಬಲವನ್ನು ಒದಗಿಸಲು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭಿಸಲಾದ ಮನೋದರ್ಪಣ್ ಎಂಬ ಭಾರತ ಸರ್ಕಾರದ ಉಪಕ್ರಮವೂ ಇದೆ.

ಪ್ರಿವೆಂಟಿವ್ ಕ್ಯಾಂಪಸ್ ಕ್ರಮಗಳಲ್ಲಿ IIT-ಬಾಂಬೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಒಂದು ವಿಷಯವನ್ನು ಕೈಬಿಟ್ಟಿತು. ಕಳೆದ ವರ್ಷ ಸೋಲಂಕಿ ಆತ್ಮಹತ್ಯೆಯ ನಂತರ ನಡೆದ IIT-ಬಾಂಬೆ ಸೆನೆಟ್‌ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕ್ರಮವು ಫ್ರೆಶರ್‌ಗಳ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಕ್ಯಾಂಪಸ್ ಜೀವನಕ್ಕೆ ಹೊಂದಿಕೊಳ್ಳಲು ಅವರಿಗೆ ಹೆಚ್ಚಿನ ವಿರಾಮ ಸಮಯವನ್ನು ನೀಡುತ್ತದೆ ಎಂದು ಐಐಟಿ-ಬಾಂಬೆ ಅಧಿಕಾರಿಗಳು ತಿಳಿಸಿದ್ದಾರೆ.

ಕಠಿಣ ಸ್ಪರ್ಧೆಯಲ್ಲಿ ಯಶಸ್ವಿಯಾದ ನಂತರ ವಿದ್ಯಾರ್ಥಿಗಳು ಐಐಟಿಗಳಲ್ಲಿ ತಮ್ಮ ಸ್ಥಾನವನ್ನು ಗಳಿಸಿರುತ್ತಾರೆ. ಆದರೆ ಅದರ ನಂತರ ಗಮನಾರ್ಹ ಸಾಂಸ್ಥಿಕ ಮತ್ತು ಸಾಮಾಜಿಕ ಒತ್ತಡಗಳನ್ನು ಎದುರಿಸುತ್ತಾರೆ. ಅವರು ಬಡ ಅಥವಾ ಶ್ರೀಮಂತ ಹಿನ್ನೆಲೆಯಿಂದ ಬಂದವರಾಗಿದ್ದರೂ, ವಿದ್ಯಾರ್ಥಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಸಾಮಾಜಿಕ ಒತ್ತಡವನ್ನು ಎದುರಿಸುತ್ತಾರೆ. ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ನಿವಾರಿಸಲು ಸಹಾಯ ಮಾಡುವ ಸಾಂಸ್ಥಿಕ ಮತ್ತು ಸಾಮಾಜಿಕ ಹಂತಗಳಲ್ಲಿ ನಾವು ಸೂಕ್ಷ್ಮ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಜ್ಞರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಸಿಎಂಗೆ ಪತ್ರ ಬರೆದು ಚುರುಕು ಮುಟ್ಟಿಸಿದ ರಾಗಾ; ಎಸ್‌ಐಟಿ ಜೊತೆ ಸಭೆ ನಡೆಸಿ ಸಿಎಂ ಖಡಕ್‌ ಸೂಚನೆ

Prajwal Revanna Case: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

VISTARANEWS.COM


on

prajwal revanna case cm siddaramaiah rahul gandhi
Koo

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna Case) ಲೈಂಗಿಕ ಹಗರಣ (Pen Drive Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಎಸ್ಐಟಿ (SIT) ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದು, ಇನ್ನಷ್ಟು ತೀವ್ರವಾದ ತನಿಖೆ ನಡೆಸಲು ಖಡಕ್‌ ಸೂಚನೆ ನೀಡಿದರು. ಇದಕ್ಕೂ ಮುನ್ನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಿಎಂಗೆ ಪತ್ರ ಬರೆದು, ಪ್ರಕರಣದ ತನಿಖೆ ತೀವ್ರಗೊಳಿಸಲು ಸೂಚಿಸಿದರು.

ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು. ತನಿಖೆಯ ಪ್ರಗತಿ, ಮುಂದಿನ ತನಿಖೆಯ ದಿಕ್ಕು, ಪ್ರಸಕ್ತ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಡಿಜಿಐಜಿ ಅಲೋಕ್ ಮೋಹನ್, ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.‌

ರಾಹುಲ್‌ ಗಾಂಧಿ ಪತ್ರ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದು, “ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು, ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಒತ್ತಾಯಿಸಿದ್ದಾರೆ. “ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕರನ್ನು ಕ್ರೂರವಾಗಿ ಪ್ರಜ್ವಲ್ ನಡೆಸಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ತಿಳಿಸಿದ್ದರು ಎಂದು ತಿಳಿದು ನನಗೆ ಆಘಾತವಾಗಿದೆ. ಪ್ರಧಾನ ಮಂತ್ರಿಗಳ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್. ಭಾರತದಿಂದ ಆತ ಪಾರಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ” ಎಂದು ಕೂಡ ಪತ್ರದಲ್ಲಿ ಬರೆದಿದ್ದಾರೆ.

“ಹರಿಯಾಣದ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಪ್ರಧಾನಿಗಳು ಮೌನ ವಹಿಸಿದ್ದಾರೆ. ತಾಯಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ‌ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಗಾ” ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ X ಮುಖಾಂತರ ಭರವಸೆ

“ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು @RahulGandhi ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ..” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Continue Reading
Advertisement
PBKS vs CSK
ಕ್ರೀಡೆ8 mins ago

PBKS vs CSK: ಬ್ಯಾಟಲ್​ ಆಫ್​ ದಿ ಕಿಂಗ್ಸ್​ಗೆ ಚೆನ್ನೈ-ಪಂಜಾಬ್​ ರೆಡಿ; ಗಾಯಕ್ವಾಡ್​ಗೆ ಸೇಡಿನ ಪಂದ್ಯ

Road Accident in bagalakote
ಬಾಗಲಕೋಟೆ9 mins ago

Road Accident : ಟಿಪ್ಪರ್‌ ಲಾರಿ ಡಿಕ್ಕಿಗೆ ಕಾರು ಪುಡಿ ಪುಡಿ; ಸಿದ್ದನಕೊಳ್ಳ ಶ್ರೀಗಳು ಗಂಭೀರ ಗಾಯ

MTR Karunadu Svada food festival inauguration in Bengaluru
ಕರ್ನಾಟಕ9 mins ago

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

Vijay Devarakonda announces new film
ಕಿರುತೆರೆ11 mins ago

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Amruthadhare Serial Bhumika-Gautham angryness has melted like ice
ಕಿರುತೆರೆ12 mins ago

Amruthadhare Serial : ಐಸ್ ಥರ ಕರಗಿಹೋಯ್ತು ಭೂಮಿಕಾ-ಗೌತಮ್‌ ಮುನಿಸು!

Gold smuggling
ದೇಶ16 mins ago

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Prajwal Revanna Case
ಕರ್ನಾಟಕ22 mins ago

Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Money Guide
ಮನಿ-ಗೈಡ್32 mins ago

Money Guide: ಈ ರಜೆಯಲ್ಲಿ ಮಕ್ಕಳಿಗೆ ಆರ್ಥಿಕತೆಯ ಪ್ರಾಕ್ಟಿಕಲ್‌ ಪಾಠ ಮಾಡಿ

mangaluru airport bomb threat
ದಕ್ಷಿಣ ಕನ್ನಡ44 mins ago

Bomb Threat: ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ, ಪ್ರಕರಣ ತಡವಾಗಿ ಬೆಳಕಿಗೆ

Elvish Yadav
ದೇಶ1 hour ago

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ24 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌