30 ಮಕ್ಕಳ ಮೇಲೆ ರೇಪ್​ ಮಾಡಿ, ಕೊಂದವನಿಗೆ ಜೀವಾವಧಿ ಶಿಕ್ಷೆ; ಇದು ರಾಕ್ಷಸಿ ಕೃತ್ಯ ಎಂದ ನ್ಯಾಯಾಧೀಶರು Vistara News
Connect with us

ಕ್ರೈಂ

30 ಮಕ್ಕಳ ಮೇಲೆ ರೇಪ್​ ಮಾಡಿ, ಕೊಂದವನಿಗೆ ಜೀವಾವಧಿ ಶಿಕ್ಷೆ; ಇದು ರಾಕ್ಷಸಿ ಕೃತ್ಯ ಎಂದ ನ್ಯಾಯಾಧೀಶರು

2008ರಿಂದ 2015ರವರೆಗೆ ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೊಂದಿದ್ದ. ಅವನಿಗೆ ಹೆಣ್ಣು-ಗಂಡು ಎಂಬ ಭೇದವಿರಲಿಲ್ಲ. 2015ರಿಂದಲೂ ಈತ ಜೈಲಿನಿಲ್ಲಿಯೇ ಇದ್ದ.

VISTARANEWS.COM


on

Serial killer who raped and murdered over 30 kids Gets sentenced to life imprisonment
Koo

ಸರಣಿ ಅತ್ಯಾಚಾರಿ, ಹಂತರ ರವೀಂದರ್​ ಕುಮಾರ್​​ನಿಗೆ, ಎಂಟು ವರ್ಷಗಳ ಹಿಂದಿನ ಕೇಸ್​ವೊಂದರಲ್ಲಿ ದೆಹಲಿ ನ್ಯಾಯಾಲಯ (Delhi Court) ಈಗ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ರವೀಂದರ್ ಕುಮಾರ್​ನ ಭಯಾನಕ ಸ್ಟೋರಿಯನ್ನು ಇತ್ತೀಚೆಗೆಷ್ಟೇ ಮಾಧ್ಯಮಗಳು ವರದಿ ಮಾಡಿದ್ದವು. 2008ರಿಂದ 2015ರವರೆಗೆ ಸುಮಾರು 30 ಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೊಂದಿದ್ದ. ಅವನಿಗೆ ಹೆಣ್ಣು-ಗಂಡು ಎಂಬ ಭೇದವಿರಲಿಲ್ಲ. 2015ರಲ್ಲಿ, ದೆಹಲಿಯ ಬೇಗಂಪುರ ಎಂಬಲ್ಲಿ, 6 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಂದಿದ್ದ. ಆ ಕೇಸ್​​ನಡಿ ರವೀಂದರ್​ ಅರೆಸ್ಟ್ ಆಗಿದ್ದ. ಇದೀಗ ಅದೇ ಕೇಸ್​​ನಲ್ಲಿ ದೆಹಲಿ ನ್ಯಾಯಾಲಯ ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಈತನ ಕೇಸ್​​ನ ವಿಚಾರಣೆ ನಡೆಸಿದ ದೆಹಲಿ ಹೆಚ್ಚುವರಿ ನ್ಯಾಯಾಧೀಶ ಸುನೀಲ್ ಕುಮಾರ್​ ‘ರವೀಂದರ್​ ಮಾಡಿರುವುದು ರಾಕ್ಷಸೀ ಕೃತ್ಯ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಆರೋಪಿಯು ಶಿಕ್ಷೆ ವಿಚಾರದಲ್ಲಿ ಯಾವುದೇ ವಿನಾಯಿತಿಗೆ ಅರ್ಹನಲ್ಲ’ ಎಂದು ಹೇಳಿದ್ದಾರೆ. 6 ವರ್ಷದ ಬಾಲಕಿ ಹತ್ಯೆ ಕೇಸ್​​ನ್ನು ಮಾತ್ರ ವಿಚಾರಣೆ ನಡೆಸಿದ್ದ ಈ ನ್ಯಾಯಾಧೀಶರು ಆಕೆಯ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Urfi Javed | ʻಅತ್ಯಾಚಾರಿಗಳ ಮೇಲೆ ದೂರು ನೀಡಿ, ನನ್ನ ಮೇಲಲ್ಲʼ: ಉರ್ಫಿ ಜಾವೇದ್ ಗರಂ ಆಗಿದ್ಯಾಕೆ?

ಬೇಗಂಪುರದಲ್ಲಿ ಹತ್ಯೆಯಾಗಿದ್ದ 6 ವರ್ಷದ ಬಾಲಕಿಯ ಕೊಲೆ ಕೇಸ್​ ತನಿಖೆ ಕೈಗೊಂಡ ಪೊಲೀಸರು 2015ರ ಜುಲೈನಲ್ಲಿ ರವೀಂದರ್​​ನನ್ನು ಅರೆಸ್ಟ್ ಮಾಡಿದ್ದರು. ಆದರೆ ಬಂಧನದ ಬಳಿಕ ಆತ ಬಿಚ್ಚಿಟ್ಟ ಮಾಹಿತಿ ಭಯಂಕರವಾಗಿತ್ತು. ಬರೀ ಈ ಬಾಲಕಿಯನ್ನಷ್ಟೇ ಅಲ್ಲದೆ, ಹಲವಾರು ಹುಡುಗರು/ಹುಡುಗಿಯರು ಸೇರಿ 30 ಮಕ್ಕಳ ಮೇಲೆ ಈತ ಕಾಮತೃಷೆ ತೀರಿಸಿಕೊಂಡು, ಕೊಂದಿದ್ದ. ಅಷ್ಟೂ ಮಕ್ಕಳ ಹೆಸರನ್ನು ಅವನು ಪೊಲೀಸರ ಎದುರು ಹೇಳಿದ್ದ. ದಿನ ರಾತ್ರಿ ಡ್ರಗ್ಸ್​ ತೆಗೆದುಕೊಂಡು, ಅಶ್ಲೀಲ ವಿಡಿಯೊಗಳನ್ನು ನೋಡುತ್ತಿದ್ದ. ಬಳಿಕ ಮಕ್ಕಳನ್ನು ಹುಡುಕಿಕೊಂಡು ಊರೂರು ಅಲೆಯುತ್ತಿದ್ದ. ಎಲ್ಲೆಲ್ಲಿ ಕಟ್ಟಡ, ಮನೆ ನಿರ್ಮಾಣ ಕಾರ್ಯ ನಡೆಯುತ್ತಿರುತ್ತದೆಯೋ, ಅಲ್ಲೇ ಅವನು ಹುಡುಕುತ್ತಿದ್ದ. ಅಲ್ಲಿನ ಕಾರ್ಮಿಕರು ನಿದ್ದೆಯಲ್ಲಿದ್ದಾಗ ಅವರ ಮಕ್ಕಳನ್ನು ಮೆಲ್ಲಗೆ ಎಬ್ಬಿಸಿಕೊಂಡು, ಚಾಕಲೇಟ್​, ಆಟಿಕೆ ತೋರಿಸಿ ಕರೆದುಕೊಂಡು ಹೋಗುತ್ತಿದ್ದ. ರೇಪ್​ ಮಾಡಿ, ಅವರನ್ನು ಕೊಂದು ಹಾಕಿ, ಹೆಣ ಅಲ್ಲಿಯೇ ಬಿಸಾಕಿ ಹೋಗುತ್ತಿದ್ದ. ಕೆಲವೊಮ್ಮೆ ಅವನು ಮಕ್ಕಳನ್ನು ಹುಡುಕಿಕೊಂಡು ರಾಜ್ಯದಿಂದ ರಾಜ್ಯಕ್ಕೆ ಪ್ರಯಾಣಿಸಿದ್ದೂ ಉಂಟು. ಆತ ಇದನ್ನೆಲ್ಲ ಹೇಳಿದಾಗ ಪೊಲೀಸರೇ ಬೆಚ್ಚಿಬಿದ್ದಿದ್ದರು. ಆದರೆ ಎಲ್ಲ ಕೇಸ್​ಗಳೂ ದಾಖಲಾಗದ ಕಾರಣ ಸದ್ಯ ಇದೊಂದು ಕೇಸ್​​ ಕೋರ್ಟ್​ ಮೆಟ್ಟಿಲೇರಿತ್ತು.

ಇದನ್ನೂ ಓದಿ: 30 ಮಕ್ಕಳ ಮೇಲೆ ರೇಪ್​ ಮಾಡಿ, ಕೊಂದವನಿಗೆ ಜೀವಾವಧಿ ಶಿಕ್ಷೆ; ಆತ ಪರಭಕ್ಷಕ ಎಂದ ನ್ಯಾಯಾಧೀಶರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೈಂ

ಉತ್ತರ ಪ್ರದೇಶ ಕೋರ್ಟ್‌ನಲ್ಲೇ ರಕ್ತಪಾತ; ಮುಖ್ತಾರ್‌ ಅನ್ಸಾರಿ ಆಪ್ತನಾದ ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಹತ್ಯೆ

ಉತ್ತರ ಪ್ರದೇಶದ ರಾಜಕಾರಣಿ ಮುಖ್ತಾರ್‌ ಅನ್ಸಾರಿ ಹಾಗೂ ಸಂಜೀವ್‌ ಜೀವಾ ಗ್ಯಾಂಗ್‌ಸ್ಟರ್‌ಗಳಾಗಿದ್ದು, ಕ್ರಿಮಿನಲ್‌ ಕೇಸೊಂದಕ್ಕೆ ಸಂಬಂಧಿಸಿದಂತೆ ಸಂಜೀವ್‌ ಜೀವಾನನ್ನು ಲಖನೌ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇದೇ ವೇಳೆ ಗುಂಡಿನ ದಾಳಿ ನಡೆದಿದೆ.

VISTARANEWS.COM


on

Edited by

Sanjeev Jeeva Shot Dead
ಸಂಜೀವ್‌ ಜೀವಾ ಹಾಗೂ ಮುಖ್ತಾರ್‌ ಅನ್ಸಾರಿ.
Koo

ಲಖನೌ: ಉತ್ತರ ಪ್ರದೇಶದ ಕುಖ್ಯಾತ ಗ್ಯಾಂಗ್‌ಸ್ಟರ್‌, ರಾಜಕಾರಣಿ ಮುಖ್ತಾರ್‌ ಅನ್ಸಾರಿಗೆ ನ್ಯಾಯಾಲಯವು ಕೆಲ ದಿನಗಳ ಹಿಂದಷ್ಟೇ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ, ಉತ್ತರ ಪ್ರದೇಶದ ಕೋರ್ಟ್‌ ಆವರಣದಲ್ಲಿಯೇ ಮುಖ್ತಾರ್‌ ಅನ್ಸಾರಿ ಆಪ್ತನೂ ಆದ ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಬಾಲಕಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಗಾಯಗಳಾಗಿವೆ.

ಬಿಜೆಪಿ ಶಾಸಕ ಬ್ರಹ್ಮದತ್‌ ದ್ವಿವೇದಿ ಅವರ ಹತ್ಯೆ ಪ್ರಕರಣದಲ್ಲಿ ಮುಖ್ತಾರ್‌ ಅನ್ಸಾರಿ ಹಾಗೂ ಅನ್ಸಾರಿ ಆಪ್ತ ಸಂಜೀವ್‌ ಮಹೇಶ್ವರಿ ಜೀವಾ ಆರೋಪಿಗಳಾಗಿದ್ದಾರೆ. ಸಂಜೀವ್‌ ಜೀವಾ ಕೂಡ ಶೂಟರ್‌ ಆಗಿದ್ದು, ಕ್ರಿಮಿನಲ್‌ ಕೇಸೊಂದರ ವಿಚಾರಣೆ ಹಿನ್ನೆಲೆಯಲ್ಲಿ ಆತನನ್ನು ಲಖನೌ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಲಾಯಿತು. ಇದೇ ವೇಲೆ, ಅಪರಿಚಿತ ಶೂಟರ್‌ ಒಬ್ಬ ಸಂಜೀವ್‌ ಜೀವಾ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಯಲ್ಲಿ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ.

ದಾಳಿ ಬಳಿಕ ಬಿಗುವಿನ ವಾತಾವರಣ

ಲಾಯರ್‌ ವೇಷದಲ್ಲಿ ಬಂದು ದಾಳಿ

ಲಖನೌ ನ್ಯಾಯಾಲಯಕ್ಕೆ ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾನನ್ನು ಹಾಜರುಪಡಿಸಲಾಗುತ್ತದೆ ಎಂದು ತಿಳಿದ ದುಷ್ಕರ್ಮಿಗಳು ವಕೀಲರ ವೇಷದಲ್ಲಿ ಕೋರ್ಟ್‌ ಆವರಣ ಪ್ರವೇಶಿಸಿದ್ದಾರೆ. ವಿಚಾರಣೆಗೆ ಹಾಜರುಪಡಿಸುವ ವೇಳೆಯೇ ವಕೀಲರ ವೇಷದಲ್ಲಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿ ನಡೆಯುತ್ತಲೇ ಜನ ಗಲಿಬಿಲಿಗೊಂಡು ಓಡಿದ್ದಾರೆ. ಇದರಿಂದಾಗಿ ಕೋರ್ಟ್‌ ಆವರಣದಲ್ಲಿ ಕೆಲ ಗಂಟೆವರೆಗೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇನ್ನು, ಸಂಜೀವ್‌ ಜೀವಾನ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿರೋಧಿ ಗ್ಯಾಂಗ್‌ನವರೇ ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

32 ವರ್ಷಗಳ ಹಿಂದಿನ ಅವದೇಶ್ ರೈ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗಸ್ಟರ್ ರಾಜಕಾರಣಿ ಮುಖ್ತಾರ್ ಅನ್ಸಾರಿಯನ್ನು ಕೆಲ ದಿನಗಳ ಹಿಂದಷ್ಟೇ ದೋಷಿ ಎಂದು ವಾರಾಣಸಿಯ ಕೋರ್ಟ್ ಹೇಳಿದೆ. ತೀರ್ಪು ನೀಡಿದ ವಾರಾಣಸಿ ಕೋರ್ಟ್, ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

ಇದನ್ನೂ ಓದಿ: Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್ ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ, ಇನ್ನೂ 20 ಕೇಸ್ ಬಾಕಿ!

ಅನ್ಸಾರಿ ಅವರು 1991ರಲ್ಲಿ ರಾಜಕೀಯವಾಗಿ ಪ್ರಾಮುಖ್ಯತೆ ಪಡೆಯುತ್ತಿರುವಾಗಲೇ, ಅವರ ವಿರುದ್ಧ ಕಾಂಗ್ರೆಸ್ ಮುಖಂಡರ ಕೊಲೆ ಆರೋಪವನ್ನು ಹೊರಿಸಲಾಗಿತ್ತು. 1991 ಆಗಸ್ಟ್ 3 ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈ ಅವರನ್ನು ವಾರಣಾಸಿಯಲ್ಲಿ ರೈ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ ಮಾಡಲಾಗಿತ್ತು. ಈ ಕೊಲೆ ನಡೆದಾಗ ಮುಕ್ತಾರ್ ಅನ್ಸಾರಿ ಅವರು ಶಾಸಕರಾಗಿರಲಿಲ್ಲ. ಈ ಕೊಲೆ ಪ್ರಕರಣದ ಎಫ್‌ಐಆರ್‌ನಲ್ಲಿ ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್, ಮಾಜಿ ಶಾಸಕ ಅಬ್ದುಲ್ ಕಲೀಂ ಮತ್ತು ಇತರ ಇಬ್ಬರನ್ನು ಹೆಸರಿಸಲಾಗಿತ್ತು.

Continue Reading

ಕರ್ನಾಟಕ

Soldiers Fall ill: ಕ್ಯಾಂಪ್‌ನಲ್ಲಿ ಊಟ ಸೇವಿಸಿ 35 ಮಂದಿ ಸೈನಿಕರು ಅಸ್ವಸ್ಥ

Soldiers Fall ill: ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯ ಕ್ಯಾಂಪ್‌ನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ವಿಷಾಹಾರ ಸೇವನೆಯಿಂದ ಸೈನಿಕರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Edited by

soldiers fall ill
Koo

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯ ಕ್ಯಾಂಪ್‌ನಲ್ಲಿ ಬುಧವಾರ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡುಗರಹಳ್ಳಿ ಬಳಿಯ ಕ್ಯಾಂಪ್‌ಗೆ ಸೈನಿಕರು ಚಾಲನಾ ತರಬೇತಿಗೆ ಬಂದಿದ್ದರು. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಇದನ್ನೂ ಓದಿ | Crime News : ಹಾಸ್ಟೆಲ್‌ನಲ್ಲೇ ಯುವತಿಯ ಅತ್ಯಾಚಾರ, ಕೊಲೆ; ಹಳಿ ಮೇಲೆ ಪತ್ತೆಯಾಯ್ತು ಮತ್ತೊಂದು ಶವ!

soldiers fall ill in Sakleshpur

ವಿಷಾಹಾರ ಸೇವನೆಯಿಂದ (Food poisoning) ಸೈನಿಕರು ಅಸ್ವಸ್ಥರಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.

Continue Reading

ಕರ್ನಾಟಕ

Road Accident: ಅಣ್ಣನೊಂದಿಗೆ ಐಸ್‌ಕ್ರೀಮ್‌ ತರಲು ಹೋದ ಬಾಲಕ, ಟ್ರ್ಯಾಕ್ಟರ್‌ ಅಡಿ ಬಿದ್ದು ಸಾವು

Road Accident: ವಾಟರ್‌ ಟ್ರ್ಯಾಕ್ಟರ್‌ ಹಿಂಬದಿ ಚಕ್ರ ಹರಿದು ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್‌ ಎನ್ನಿಸುವಂತಿದೆ.

VISTARANEWS.COM


on

Edited by

Road Accident
ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಅಪಘಾತದ ದೃಶ್ಯ
Koo

ಆನೇಕಲ್‌/ಕೊಪ್ಪಳ: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಿ.ಕೆ ಪಾಳ್ಯದಲ್ಲಿ ವಾಟರ್‌ ಟ್ರ್ಯಾಕ್ಟರ್‌ ಹರಿದು ಬಾಲಕ ಮೃತಪಟ್ಟಿರುವ (Road Accident) ದುರ್ಘಟನೆ ನಡೆದಿದೆ. ಭುವನ್ (4) ಮೃತ ದುರ್ದೈವಿ.

Road Accident
ಮೃತ ಬಾಲಕ ಭುವನ್‌

ಭುವನ್‌ ತನ್ನ ಅಣ್ಣನೊಂದಿಗೆ ಐಸ್ ಕ್ರೀಮ್ ತರಲು ಬೇಕರಿಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಸಿ.ಕೆ ಪಾಳ್ಯದ ಕಿರಿದಾದ ರಸ್ತೆಯಲ್ಲಿ ಹೋಗುವಾಗ ಹೀಗಾಗಿದೆ. ರಸ್ತೆ ಬದಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಮಣ್ಣು ಹಾಕಲಾಗಿತ್ತು. ಈ ರಸ್ತೆಯಲ್ಲಿ ಭುವನ್‌ ತನ್ನ ಅಣ್ಣನ ಜತೆಗೆ ನಡೆದು ಹೋಗುತ್ತಿದ್ದಾಗ, ಎದುರಿಗೆ ವಾಟರ್‌ ಟ್ರ್ಯಾಕ್ಟರ್‌ ಬಂದಿದೆ. ಮಣ್ಣಿನ ಮೇಲೆ ನಡೆದು ಹೋಗಿ ಮತ್ತೆ ರಸ್ತೆಗೆ ಬಂದಾಗ ಟ್ರ್ಯಾಕ್ಟರ್‌ನ ಹಿಂಬದಿ ಚಕ್ರದಡಿ ಬಿದ್ದಿದ್ದಾನೆ. ಇದ್ಯಾವುದೂ ಅರಿಯದೆ ಚಾಲಕ ಟ್ರ್ಯಾಕ್ಟರ್‌ ಅನ್ನು ಬಾಲಕನ ಮೇಲೆ ಹರಿಸಿದ್ದಾನೆ.

ಜೂನ್‌ 6ರ ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತವಾಗುತ್ತಿದ್ದಂತೆ ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆಸ್ಪತ್ರೆಗೆ ಸೇರಿಸುವ ಮುನ್ನವೇ ಬಾಲಕ ಉಸಿರು ಚೆಲ್ಲಿದ್ದಾನೆ. ಇನ್ನು ಎರಡು ದಿನದಲ್ಲಿ ಶಾಲೆಗೆ ಹೋಗಬೇಕಾಗಿತ್ತು. ಖುಷಿ ಖುಷಿಯಾಗಿ ಓಡಾಡಿಕೊಂಡಿದ್ದ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಮಗನ ಅಗಲಿಕೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಟ್ರ್ಯಾಕ್ಟರ್‌ ಬಿಟ್ಟು ಪರಾರಿಯಾದ ಚಾಲಕ

ಟಿ. ಚಿನ್ನಣ್ಣರವರಿಗೆ ಸೇರಿದ ನೀರಿನ ಟ್ರ್ಯಾಕ್ಟರ್ ಎಂದು ತಿಳಿದು ಬಂದಿದೆ. ಕುಡಿದ ಮತ್ತಲ್ಲಿ ಟ್ರ್ಯಾಕ್ಟರ್‌ ಚಾಲನೆ ಮಾಡಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಅಪಘಾತ ಬಳಿಕ ವಾಹನವನ್ನು ಅಲ್ಲೆ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅತಿ ವೇಗ ತಂದ ಆಪತ್ತು; ಬೈಕ್‌ ಸವಾರ ಮೃತ್ಯು

ಬೈಕ್‌ ಅಪಘಾತದಲ್ಲಿ ಸವಾರನೊಬ್ಬ ಉಸಿರು ಚೆಲ್ಲಿರುವ ಘಟನೆ ಕೊಪ್ಪಳ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ. ಅಲ್ಲಾಸಾಬ (31) ಮೃತ ದುರ್ದೈವಿ.

bike Accident
ಬೈಕ್‌ ಸ್ಕಿಡ್‌ ಆಗಿ ಬಿದ್ದು ಸವಾರ ಸಾವು

ಹೊಸಪೇಟೆ ತಾಲೂಕಿನ ಡಾಣಾಪುರದ ಗ್ರಾಮದ ಅಲ್ಲಾಸಾಬ, ಪತ್ನಿ ಹಾಗೂ ಚಿಕ್ಕ ಮಗುವಿನೊಂದಿಗೆ ತಾವರಗೇರಿಗೆ ಉರುಸಿಗೆ ಹೋಗಿದ್ದರು. ವಾಪಸ್ಸು ಗ್ರಾಮಕ್ಕೆ ಮರಳುವಾಗ ಬೈಕ್‌ ಸ್ಕಿಡ್ ಆಗಿದ್ದು, ಏಕಾಏಕಿ ರಸ್ತೆಗೆ ಎಗರಿ ಬಿದ್ದಿದ್ದಾರೆ. ರಭಸವಾಗಿ ಬಿದ್ದ ಪರಿಣಾಮ ಅಲ್ಲಾಸಾಬ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Mangalore News: ಮಂಗಳೂರು ನೈತಿಕ ಪೊಲೀಸ್‌ಗಿರಿ ಪ್ರಕರಣ; ಐವರ ವಿರುದ್ಧ ಕೇಸ್ ದಾಖಲು

ಬೈಕ್‌ನಲ್ಲಿದ್ದ ಅಲ್ಲಾಸಾಬ ಅವರ ಪತ್ನಿ, ಮಗು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರಿಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅತಿ ವೇಗ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ್ರೈಂ

Crime News : ಹಾಸ್ಟೆಲ್‌ನಲ್ಲೇ ಯುವತಿಯ ಅತ್ಯಾಚಾರ, ಕೊಲೆ; ಹಳಿ ಮೇಲೆ ಪತ್ತೆಯಾಯ್ತು ಮತ್ತೊಂದು ಶವ!

ಹಾಸ್ಟೆಲ್‌ನಲ್ಲಿ ವಾಸವಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ (Crime News) ನಡೆದಿದೆ.

VISTARANEWS.COM


on

Edited by

rape and murder in hostel
Koo

ಮುಂಬೈ: ಹಾಸ್ಟೆಲ್‌ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಯುವತಿ ಅಲ್ಲೇ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದಾಳೆ. ಈ ಭಯಾನಕ ಘಟನೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಸರ್ಕಾರಿ ಮಹಿಳಾ ಹಾಸ್ಟೆಲ್‌ನಲ್ಲಿ ನಡೆದಿದೆ. ಈ ಘಟನೆ ನಡೆದ ಕೆಲ ಗಂಟೆಗಳಲ್ಲೇ ಹತ್ತಿರದ ರೈಲ್ವೆ ಹಳಿ ಬಳಿ ಮತ್ತೊಂದು ಶವ (Crime News) ಪತ್ತೆಯಾಗಿದೆ.

ಅಕೋಲಾ ಮೂಲದ 18 ವರ್ಷದ ಯುವತಿ ಈ ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದಳು. ಎರಡನೇ ವರ್ಷದ ಪಾಲಿಟೆಕ್ನಿಕ್‌ ಅಭ್ಯಾಸ ಮಾಡುತ್ತಿದ್ದ ಆಕೆ ಹಾಸ್ಟೆಲ್‌ನ ನಾಲ್ಕನೇ ಮಹಡಿಯಲ್ಲಿದ್ದು, ಆಕೆಯೊಂದಿಗೆ ಇನ್ನೊಬ್ಬ ಯುವತಿ ವಾಸವಿದ್ದಳು. ಆ ಯುವತಿ ಊರಿಗೆ ಹೋಗಿದ್ದರಿಂದಾಗಿ ಈಗ ಕೊಲೆಯಾದ ಯುವತಿ ಒಬ್ಬಳೇ ರೂಮಿನಲ್ಲಿದ್ದಳು. ಸೋಮವಾರ ರಾತ್ರಿ ಅದೇ ಹಾಸ್ಟೆಲ್‌ನ ಕೆಳ ಮಹಡಿಯಲ್ಲಿ ವಾಸವಿದ್ದ ಆಕೆಯ ಸ್ನೇಹಿತೆ ಆಕೆಯನ್ನು ರೂಮಿಗೆ ಕರೆದಿದ್ದಳು. ಪೂರ್ತಿ ಮಹಡಿಯಲ್ಲಿ ನೀನೊಬ್ಬಳೇ ಇರುವುದು ಸರಿಯಲ್ಲ, ಹಾಗಾಗಿ ನನ್ನೊಂದಿಗೆ ನನ್ನ ರೂಮಿನಲ್ಲಿರುವ ಎಂದಿದ್ದಳು. ಅದಕ್ಕೆ ಒಪ್ಪದ ಯುವತಿ ಒಬ್ಬಂಟಿಯಾಗಿ ರೂಮಿನಲ್ಲಿರುವುದಾಗಿ ಹೇಳಿದ್ದಳು.

ಇದನ್ನೂ ಓದಿ: Monsoon Flood Safety Tips: ಮುಂಗಾರು ಮಳೆಗೆ ಕ್ಷಣಗಣನೆ; ಪ್ರವಾಹದ ಬಗ್ಗೆ ಇರಲಿ ಎಚ್ಚರ
ನಂತರ ಮಂಗಳವಾರ ಸಂಜೆಯಾದರೂ ಈ ಯುವತಿ ಎಲ್ಲೂ ಪತ್ತೆಯಾಗಿರಲಿಲ್ಲ. ಅನುಮಾನ ಬಂದ ಹಾಸ್ಟೆಲ್‌ ಅಧಿಕಾರಿಗಳು ರೂಮಿನ ಬಳಿ ಹೋಗಿ ನೋಡಿದ್ದಾರೆ. ರೂಮು ಹೊರಗಿನಿಂದ ಲಾಕ್‌ ಆಗಿತ್ತು. ಕಿಟಕಿಯಿಂದ ಇಣುಕಿ ನೋಡಿದಾಗ ಯುವತಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಆಗ ಅಲ್ಲಿ ಯುವತಿಯ ಕೊರಳಿಗೆ ದುಪ್ಪಟ್ಟದಿಂದ ಸುತ್ತಿ ಕೊಲೆ ಮಾಡಿರುವುದು ಕಂಡುಬಂದಿದೆ.

ಈ ಕೃತ್ಯ ಮಾಡಿರುವ ಬಗ್ಗೆ ಹಲವಾರು ಅನುಮಾನಗಳು ಹರಿದಾಡುತ್ತಿವೆ. ಹಾಸ್ಟೆಲ್‌ಗೆ ಒಟ್ಟು ಮೂವರು ಕಾವಲುಗಾರರಿದ್ದಾರೆ. ಅದರಲ್ಲಿ ಉತ್ತರ ಪ್ರದೇಶ ಮೂಲದ ಪ್ರಕಾಶ್‌ ಕನೋಜಿಯಾ ಕೂಡ ಒಬ್ಬ. ಹಾಸ್ಟೆಲ್‌ನ ಲಾಂಡರಿ ಬಾಯ್‌ ಆಗಿಯೂ ಕೆಲಸ ಮಾಡುವ ಆತ ಮಂಗಳವಾರ ಮುಂಜಾನೆ 4 ಗಂಟೆ ಹೊತ್ತಿಗೆ ಹಾಸ್ಟೆಲ್‌ನಿಂದ ಹೊರ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತನಿಗಾಗಿ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದರು. ಬಳಿಕ ಆತನ ಶವ ಚರಣಿ ರೋಡ್‌ ರೈಲ್ವೆ ನಿಲ್ದಾಣದ ಬಳಿಯ ರೈಲು ಹಳಿಯ ಮೇಲೆ ಪತ್ತೆಯಾಗಿದೆ. ಯುವತಿಯನ್ನು ಅತ್ಯಾಚಾರ ಮಾಡಿ, ಕೊಲೆ ನಡೆಸಿ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸದ್ಯ ಪೊಲೀಸರು ಲೆಕ್ಕಾಚಾರ ಹಾಕಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕಿದೆ.

Continue Reading
Advertisement
wrestlers protest
ಕ್ರೀಡೆ9 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ11 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್12 mins ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ16 mins ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ28 mins ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ30 mins ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ41 mins ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ51 mins ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ51 mins ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

Kolhapur Protest
ದೇಶ60 mins ago

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ11 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ8 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ15 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!