ಶಾಲೆಗೆ ಬಿಂದಿ ಇಟ್ಟು ಹೋದ ಹಿಂದು ವಿದ್ಯಾರ್ಥಿನಿಗೆ ಥಳಿಸಿದ ಕ್ರಿಶ್ಚಿಯನ್​​​ ಶಾಲೆ ಶಿಕ್ಷಕಿ; ಬಾಲಕಿ ಆತ್ಮಹತ್ಯೆ - Vistara News

ಕ್ರೈಂ

ಶಾಲೆಗೆ ಬಿಂದಿ ಇಟ್ಟು ಹೋದ ಹಿಂದು ವಿದ್ಯಾರ್ಥಿನಿಗೆ ಥಳಿಸಿದ ಕ್ರಿಶ್ಚಿಯನ್​​​ ಶಾಲೆ ಶಿಕ್ಷಕಿ; ಬಾಲಕಿ ಆತ್ಮಹತ್ಯೆ

ಹುಡುಗಿಯ ಸಾವಿನ ಬೆನ್ನಲ್ಲೇ ಆಕೆಯ ಪಾಲಕರು, ಸಂಬಂಧಿಗಳು, ಇನ್ನಿತರ ಕೆಲವು ಮಕ್ಕಳ ಪಾಲಕರೆಲ್ಲ ಸೇರಿ ಶಾಲೆ ಎದುರು ಪ್ರತಿಭಟನೆಯನ್ನೂ ಮಾಡಿದ್ದಾರೆ.

VISTARANEWS.COM


on

Bindi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕ್ರಿಶ್ಚಿಯನ್ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹಿಂದು ಹುಡುಗಿ ಆತ್ಮಹತ್ಯೆ (Student Suicide) ಮಾಡಿಕೊಂಡಿದ್ದು ದೊಡ್ಡಮಟ್ಟದ ವಿವಾದ-ಪ್ರತಿಭಟನೆಗೆ ಕಾರಣವಾಗಿದೆ. ಜಾರ್ಖಂಡ್​ನ ಧನ್​ಬಾದ್​​ನ ಟೆತುಲ್ಮರಿ ಎಂಬಲ್ಲಿರುವ ಸೇಂಟ್​ ಕ್ಸೇವಿಯರ್​ ಶಾಲೆಯಲ್ಲಿ ಬಾಲಕಿ ಉಷಾಕುಮಾರಿ (16) ವಿದ್ಯಾಭ್ಯಾಸ ಮಾಡುತ್ತಿದ್ದಳು. ಸೋಮವಾರ ಉಷಾಕುಮಾರಿ ಹಣೆಗೆ ಬಿಂದಿ ಇಟ್ಟುಕೊಂಡು (ಹಿಂದು ಸಂಪ್ರದಾಯದಂತೆ ಹಣೆಗೆ ಕುಂಕುಮ/ಸ್ಟಿಕರ್​ ಇಡುವುದು) (Wearing A Bindi) ಶಾಲೆಗೆ ಬಂದಿದ್ದಳು. ಅದನ್ನು ನೋಡಿದ ಶಿಕ್ಷಕಿಯೊಬ್ಬಳು ಬಾಲಕಿಗೆ ಹೊಡೆದಿದ್ದಾಳೆ. ಹೀಗೆ ಬಿಂದು ಇಟ್ಟುಕೊಂಡು ಹೋಗಿದ್ದಕ್ಕೆ ಶಿಕ್ಷಕಿಯಿಂದ ಥಳಿತಕ್ಕೆ ಒಳಗಾದ ಹುಡುಗಿ ಮರುದಿನ ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೋಮವಾರ ಶಾಲೆಯಲ್ಲಿ ಪ್ರಾರ್ಥನೆ ವೇಳೆ ಎಲ್ಲ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸಮವಸ್ತ್ರ, ಶೂಗಳನ್ನೆಲ್ಲ ತಪಾಸಣೆ ಮಾಡಲಾಯಿತು. ಈ ವೇಳೆ ಉಷಾ ಕುಮಾರಿ ಹಣೆಯಲ್ಲಿ ಕುಂಕುಮ ನೋಡಿದ ಶಿಕ್ಷಕಿ ಆಕೆಗೆ ಎಲ್ಲರ ಎದುರು ಅವಮಾನಿಸಿದ್ದಲ್ಲದೆ, ಹೊಡೆದಿದ್ದಾಳೆ. ಇದರಿಂದ ಉಷಾ ತೀವ್ರ ನೊಂದಿದ್ದಳು. ಹನುಮಾನ್​ಗಢಿ ಕಾಲನಿಯಲ್ಲಿರುವ ತನ್ನ ಮನೆಗೆ ಬಂದು ಮಂಗಳವಾರ ಬೆಳಗ್ಗೆ ಸೀಲಿಂಗ್ ಫ್ಯಾನ್​ಗೆ ನೇಣು ಹಾಕಿಕೊಂಡಿದ್ದಾಳೆ. ಆಕೆ ಶಾಲಾ ಸಮವಸ್ತ್ರದಲ್ಲಿಯೇ ತನ್ನನ್ನು ತಾನು ಕೊಂದುಕೊಂಡಿದ್ದಾಳೆ. ಹಾಗೇ, ಒಂದು ಸೂಸೈಡ್ ನೋಟ್​ ಬರೆದು, ಅದನ್ನು ತನ್ನ ಸಮವಸ್ತ್ರದ ಜೇಬಿನಲ್ಲಿ ಇಟ್ಟುಕೊಂಡಿದ್ದಳು. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೇ, ಹುಡುಗಿಯ ಆರೋಪದ ಅನ್ವಯ ಸೇಂಟ್ ಕ್ಸೇವಿಯರ್ ಶಾಲೆಯ ಪ್ರಿನ್ಸಿಪಾಲ್ ಮತ್ತು ಹುಡುಗಿಗೆ ಹೊಡೆದ ಶಿಕ್ಷಕಿ ಇಬ್ಬರನ್ನೂ ಬಂಧಿಸಿದ್ದಾರೆ.

ಹುಡುಗಿ ಬರೆದಿಟ್ಟ ಸೂಸೈಡ್​ ನೋಟ್​​ನಲ್ಲಿ ಏನಿದೆ ಎಂಬುದನ್ನು ಪೊಲೀಸ್ ಅಧಿಕಾರಿ ಆಶಿಶ್ ಯಾದವ್ ತಿಳಿಸಿದ್ದಾರೆ. ‘ನಾನು ಹಣೆಗೆ ಬಿಂದಿ ಇಟ್ಟುಕೊಂಡು ಹೋದೆ ಎಂಬ ಕಾರಣಕ್ಕೆ ಎಲ್ಲರ ಎದುರು ನನಗೆ ಹೊಡೆದರು. ಶಾಲೆಯ ಪ್ರಾರ್ಥನಾ ಹಾಲ್​​ನಿಂದ ನನ್ನ ಆಚೆಗೆ ಕಳಿಸಿದರು. ನನಗೆ ಈ ಅವಮಾನ ಸಹಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹುಡುಗಿ ಬರೆದಿದ್ದಾಳೆ. ಅಷ್ಟೇ ಅಲ್ಲ, ನನ್ನ ಸಾವಿಗೆ ಸೇಂಟ್​ ಕ್ಸೇವಿಯರ್ ಶಾಲೆಯ ಪ್ರಿನ್ಸಿಪಾಲ್​ ಮತ್ತು ನನಗೆ ಹೊಡೆದ ಶಿಕ್ಷಕಿಯೇ ಕಾರಣ ಎಂದಿದ್ದಾಳೆ. ಅವರಿಬ್ಬರ ಹೆಸರನ್ನೂ ಉಲ್ಲೇಖಿಸಿ, ಇಬ್ಬರ ವಿರುದ್ಧವೂ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಬರೆದಿದ್ದಾಳೆ ಎಂದು ಆಶಿಶ್ ಯಾದವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Kanal Kannan Arrested: ಕ್ರಿಶ್ಚಿಯನ್ ಧರ್ಮ ವಿರುದ್ಧ ಟ್ವೀಟ್; ತಮಿಳು ಸಿನಿಮಾ ಸ್ಟಂಟ್ ಮಾಸ್ಟರ್ ಕಣ್ಣನ್ ಅಂದರ್!

ಇನ್ನು ಹುಡುಗಿಯ ಸಾವಿನ ಬೆನ್ನಲ್ಲೇ ಆಕೆಯ ಪಾಲಕರು, ಸಂಬಂಧಿಗಳು, ಇನ್ನಿತರ ಕೆಲವು ಮಕ್ಕಳ ಪಾಲಕರೆಲ್ಲ ಸೇರಿ ಶಾಲೆ ಎದುರು ಪ್ರತಿಭಟನೆಯನ್ನೂ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕವೇ ಅವರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಹುಡುಗಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿಯೇ ಕಾರಣ. ನಾವು ಎಫ್​ಐಆರ್ ದಾಖಲು ಮಾಡಿದ್ದೇವೆ ಎಂದು ಆಶಿಶ್ ಯಾದವ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Road Accident : ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ಬಸ್ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ (37) ಎನ್ನಲಾಗಿದೆ.

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವಾಗ ಆತುರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ ಮುಂದೆ ಚಲಿಸಿದ್ದು, ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Road accidents in Bengaluru  Vijayanagar

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Road accidents in Bengaluru  Vijayanagar

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯಪುರ

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Robbery Case : ಮಿಡ್‌ನೈಟ್‌ನಲ್ಲಿ ಬೊಲೆರೋದಲ್ಲಿ ಬಂದ‌ ದುಷ್ಕರ್ಮಿಗಳು ಕ್ಯಾಂಟರ್‌ ವಾಹನಕ್ಕೆ ಅಡ್ಡಗಟ್ಟಿ, ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ 32 ಲಕ್ಷ ರೂ. ಕದ್ದು ಪರಾರಿ ಆಗಿದ್ದಾರೆ.

VISTARANEWS.COM


on

By

Robbery case
Koo

ವಿಜಯಪುರ: ಕ್ಯಾಂಟರ್ ವಾಹನಕ್ಕೆ ಅಡ್ಡಗಟ್ಟಿದ ದುಷ್ಕರ್ಮಿಗಳು 32 ಲಕ್ಷ ನಗದು ದರೋಡೆ ಮಾಡಿ (Robbery Case) ಪರಾರಿ ಆಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ಶುಕ್ರವಾರ (ಮೇ 17) ತಡರಾತ್ರಿ ದರೋಡೆ ನಡೆದಿದೆ. ಹತ್ತಿ ಮಾರಾಟ ಮಾಡಿ ವಾಪಸ್ ಹಣ ತೆಗೆದುಕೊಂಡು ಹೋಗುತ್ತಿದ್ದಾಗ ದರೋಡೆ ನಡೆದಿದೆ.

ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವವರ ಹಣವನ್ನು ದರೋಡೆ ಮಾಡಿದ್ದಾರೆ. ಚಂದ್ರಕಾಂತ ಅವರು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರುವ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿ 32 ಲಕ್ಷ ರೂ. ನಗದು ಜತೆಗೆ ವಾಪಸ್ ಜೀವರ್ಗಿಗೆ ತೆರಳುತ್ತಿದ್ದರು.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಕೊಲ್ಹಾರ ಪಟ್ಟಣದ ಬಳಿ ಬರುವಾಗ ಬುಲೆರೋ ವಾಹನದಿಂದ ಬಂದ ದರೋಡೆಕೋರರು ಕ್ಯಾಂಟರ್‌ ವಾಹನಕ್ಕೆ ಅಡ್ಡಗಟ್ಟಿದ್ದಾರೆ. ನಂತರ ಏಕಾಏಕಿ ಕ್ಯಾಂಟರ್‌ ಗಾಜಿಗೆ ಕಲ್ಲು ಎಸೆದು, ರಾಡ್‌ನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ನಂತರ ಕಣ್ಣಿಗೆ ಖಾರದ ಪುಡಿ ಎರಚಿ ಕ್ಯಾಂಟರ್‌ನಲ್ಲಿಟ್ಟಿದ್ದ 32 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿ ಆಗಿದ್ದಾರೆ.

ದರೋಡೆಕೋರರಿಂದ ಹಲ್ಲೆಗೀಡಾದ ವ್ಯಾಪಾರಿ ಚಂದ್ರಕಾಂತ ಅವರ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಅವರನ್ನು ಕೊಲ್ಹಾರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

Gas Cylinder Blast : ಗ್ಯಾಸ್‌ ಸಿಲಿಂಡರ್‌ ಸೋರಿಕೆ ಆಗಿದ್ದು, ಅಡುಗೆ ಮನೆಯ ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧರಿಬ್ಬರಿಗೆ ಗಂಭೀರ ಗಾಯವಾಗಿದದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ಮನೆಯವರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Gas Cylinder Blast
Koo

ಬೆಳಗಾವಿ: ಬೆಳ್ಳಂಬೆಳಿಗ್ಗೆ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ (LPG Cylinder Blast) ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯ ಸುಳಗಾದಲ್ಲಿ ಈ ಭೀಕರ ಸ್ಫೋಟ (Gas Cylinder Blast) ಸಂಭವಿಸಿದೆ.

ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಪ್ಪ ಹಾಗೂ ಸುಮನ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿವೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಬೆಳಗ್ಗೆ 4 ಗಂಟೆಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದೆ. ಸ್ಫೋಟದ ತೀವ್ರತೆಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Milana Nagaraj Anarkali border gown worn
ಸ್ಯಾಂಡಲ್ ವುಡ್7 mins ago

Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

Boxer Parveen
ಕ್ರೀಡೆ9 mins ago

Boxer Parveen: ಒಲಿಂಪಿಕ್ಸ್‌ ಕೋಟಾ ಕಳೆದುಕೊಂಡ ಭಾರತದ ಬಾಕ್ಸರ್‌ ಪರ್ವೀನ್‌

Famous Food of bangalore
ಆಹಾರ/ಅಡುಗೆ32 mins ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ36 mins ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

RCB FANS BIKE RALLY
ಕ್ರೀಡೆ42 mins ago

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

Pavithra Jayaram Chandrakant are just friends, daughter said
ಕಿರುತೆರೆ48 mins ago

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Powerful Bike
ಪ್ರಮುಖ ಸುದ್ದಿ50 mins ago

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Road Accident
ಶಿವಮೊಗ್ಗ1 hour ago

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Kannada stone inscription found in Kashi Use as a foot bridge at the ghat
ಶಿವಮೊಗ್ಗ1 hour ago

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Road Accident
ಬೆಂಗಳೂರು ಗ್ರಾಮಾಂತರ2 hours ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ19 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌