Crime News: ಪ್ರಿಯಕರನಿಗಾಗಿ ಮಗನನ್ನೇ ಕೊಂದ ಕಟುಕಿ, ಪಾರಾಗಲು ದೃಶ್ಯಂ ಸಿನಿಮಾ ನೋಡಿದ ಚಾಲಾಕಿ - Vistara News

ಕ್ರೈಂ

Crime News: ಪ್ರಿಯಕರನಿಗಾಗಿ ಮಗನನ್ನೇ ಕೊಂದ ಕಟುಕಿ, ಪಾರಾಗಲು ದೃಶ್ಯಂ ಸಿನಿಮಾ ನೋಡಿದ ಚಾಲಾಕಿ

Crime News: ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ಖತರ್ನಾಕ್‌ ಮಹಿಳೆಯು ಮಗನನ್ನೇ ಕೊಂದುಹಾಕಿದ್ದಾಳೆ. ಬಳಿಕ ಪೊಲೀಸರಿಂದ ತಪ್ಪಿಸಿಕೊಳ್ಳಲು ತಾನೇ ಹೋಗಿ ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ಕೊಟ್ಟಿದ್ದಾಳೆ. ದೃಶ್ಯಂ ಸಿನಿಮಾ ನೋಡಿ ಇಷ್ಟೆಲ್ಲ ಚಾಲಾಕಿತನ ಮೆರೆದ ಆಕೆ ಈಗ ಕಂಬಿ ಎಣಿಸುತ್ತಿದ್ದಾಳೆ.

VISTARANEWS.COM


on

Woman Kills Son For Lover
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿನಗರ: ಕೆಲವೊಮ್ಮೆ ನಿಜ ಜೀವನವನ್ನು ಆಧರಿಸಿ ಸಿನಿಮಾ ಮಾಡಲಾಗುತ್ತದೆ. ಇನ್ನೂ ಕೆಲವೊಮ್ಮೆ ಸಿನಿಮಾಗಳು ನಿಜ ಜೀವನಕ್ಕೆ ಸಮೀಪವಾಗಿರುತ್ತವೆ. ಹಾಗಾಗಿ, ನಮ್ಮ ಮೇಲೆ ಸಿನಿಮಾಗಳು ಹೆಚ್ಚು ಪ್ರಭಾವ ಬೀರುತ್ತವೆ. ಆದರೆ, ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ಮಹಿಳೆಯು ಪ್ರಿಯಕರನಿಗಾಗಿ ತನ್ನ ಎರಡೂವರೆ ವರ್ಷದ ಮಗನನ್ನೇ ಕೊಂದು (Crime News) ಹಾಕಿದ್ದಾಳೆ. ಹಾಗೆಯೇ, ಪೊಲೀಸರಿಂದ ತಪ್ಪಿಸಿಕೊಳ್ಳಲು ದೃಶ್ಯಂ ಸಿನಿಮಾ ನೋಡಿ, ಅದರಂತೆ ಮಗನ ಶವ ಹೂತು ಹಾಕಿದ್ದಾಳೆ. ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಹೌದು, ಸೂರತ್‌ ಜಿಲ್ಲೆಯ ದಿಂಡೋಲಿ ಪ್ರದೇಶದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿರುವ ನಯನಾ ಮಂಡಾವಿ ಎಂಬ ಮಹಿಳೆಯು ಸಿನಿಮೀಯ ರೀತಿಯಲ್ಲಿ ಅಪರಾಧ ಎಸಗಿದ್ದಾಳೆ. ತನ್ನ ಪ್ರಿಯಕರನ ಜತೆ ಓಡಿಹೋಗುವ ಕಾರಣದಿಂದಾಗಿ ಆಕೆ ತನ್ನ ಎರಡೂವರೆ ವರ್ಷದ ಮಗ ವೀರ್‌ ಮಂಡಾವಿಯನ್ನು ಕೊಂದಿದ್ದಾಳೆ. ಅಪರಾಧದಿಂದ ತಪ್ಪಿಸಿಕೊಳ್ಳಲು ತಾನೇ ಪೊಲೀಸ್‌ ಠಾಣೆಗೆ ಹೋಗಿ ಮಗ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದಾಳೆ. ಆದರೆ, ದೃಶ್ಯಂ ಸಿನಿಮಾದಂತೆ ತಪ್ಪಿಸಿಕೊಳ್ಳಲು ಆಗದೆ ಕಂಬಿ ಎಣಿಸುತ್ತಿದ್ದಾಳೆ.

ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

ಮಹಿಳೆಯು ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸುತ್ತಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯು ಒಂದೊಂದು ರೀತಿ ಹೇಳಿಕೆ ನೀಡಿದ ಕಾರಣ ಕೊನೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ, ಮಹಿಳೆಯು ಮಗನನ್ನು ಕಟ್ಟಡ ನಿರ್ಮಾಣ ಸ್ಥಳದಿಂದ ಬೇರೆಲ್ಲೂ ಕಳುಹಿಸಿಲ್ಲ ಎಂಬುದು ಗೊತ್ತಾಗಿದೆ. ಅನುಮಾನ ಬಲವಾದ ಕಾರಣ ಪೊಲೀಸರು ಗದರಿಸಿದಾಗ ಮಹಿಳೆಯು ಅಪರಾಧ ಒಪ್ಪಿಕೊಂಡಿದ್ದಾಳೆ.

ಇದನ್ನೂ ಓದಿ: Crime News: ಪತ್ನಿಯ ಶವ ಫ್ರೀಜರ್‌ನಲ್ಲಿ ಇಟ್ಟ, ಪೊಲೀಸರು ಕೇಳಿದರೆ ಜಾಂಡೀಸ್‌ನಿಂದ ಸಾವು ಎಂದ, ಮುಂದೇನಾಯ್ತು?

ದೃಶ್ಯಂ ಸಿನಿಮಾ ನೋಡಿದ ಮಹಿಳೆ

ಮಗನನ್ನು ಕೊಂದು, ಹೊಂಡದಲ್ಲಿ ಹೂತು ಹಾಕಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ. ಪೊಲೀಸರು ಹೋಗಿ ಹೊಂಡ ತಪಾಸಣೆ ಮಾಡಿದಾಗ ಶವ ಸಿಕ್ಕಿಲ್ಲ. ಮತ್ತೊಮ್ಮೆ ಕೇಳಿದಾಗ, ಕೆರೆಯಲ್ಲಿ ಬಿಸಾಡಿದ್ದೇನೆ ಎಂದಿದ್ದಾಳೆ. ಪೊಲೀಸರು ಕೆರೆಯಲ್ಲಿ ಹುಡುಕಿದರೂ ಶವ ಸಿಕ್ಕಿಲ್ಲ. ಇದಾದ ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ, ಆಕೆ ಮಗನನ್ನು ಕೊಂದು, ಕಟ್ಟಡದಲ್ಲಿ ನಿರ್ಮಾಣ ಹಂತದಲ್ಲಿರುವ ಶೌಚಾಲಯದ ಹೊಂಡಕ್ಕೆ ಎಸೆದಿದ್ದೇನೆ ಎಂದು ತಿಳಿಸಿದ್ದಾಳೆ. ಪೊಲೀಸರು ಹುಡುಕಿದಾಗ ಶೌಚಾಲಯ ಹೊಂಡದಲ್ಲಿ ಮಗುವಿನ ಶವ ಸಿಕ್ಕಿದೆ. ಅಪರಾಧ ಮುಚ್ಚಿಹಾಕಲು ದೃಶ್ಯಂ ಸಿನಿಮಾ ನೋಡಿ ಮಗನನ್ನು ಹೂತು ಹಾಕಿದ್ದೇನೆ ಎಂಬುದನ್ನು ಮಹಿಳೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕ್ರೈಂ

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Prajwal Revanna Case: ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ? ಏನು ಮಾಡಬಹುದು ಎಂಬ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Prajwal Revanna Case Will SIT team go abroad for arrest Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ಕೇಸ್‌ ಜಟಿಲವಾಗುತ್ತಲೇ ಇದೆ. ಒಂದು ಕಡೆ ಎಸ್‌ಐಟಿ ತನಿಖೆ ಬಗ್ಗೆ ವಿಪಕ್ಷಗಳ ಅಸಮಾಧಾನ ಹಾಗೂ ಆರೋಪ. ಇನ್ನೊಂದು ಕಡೆ ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ರಾಜಕೀಯ

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಇದೆಲ್ಲವೂ ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಎಚ್‌.ಡಿ. ರೇವಣ್ಣ ಅವರ ಬಳಿ ವಿಸ್ತೃತವಾಗಿ ಚರ್ಚೆ ಮಾಡಿ ತಾಕೀತು ಮಾಡಿದ್ದಾರೆನ್ನಲಾಗಿದೆ.

VISTARANEWS.COM


on

Prajwal Revanna Case Deve Gowda lashes out at Bhavani
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ (Bhavani Revanna) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ ಬಿಟ್ಟಿದ್ದು ಎಂಬುದಾಗಿ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ, ದೇವೇಗೌಡರ ಮನೆಯತ್ತಲೂ ಸುಳಿಯಲಿಲ್ಲ. ಇದು ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ. ತಾವು ಗಳಿಸಿಟ್ಟ ಗೌರವ, ಹೆಸರನ್ನು ಮಣ್ಣು ಪಾಲಾಗಲು ಬಿಡುವುದಿಲ್ಲ. ಆ ರೀತಿ ಮಾಡಲು ಇನ್ನು ಮುಂದೆ ಅವಕಾಶವನ್ನೂ ಕೊಡುವುದಿಲ್ಲ ಎಂದು ಗುಡುಗಿದ್ದಾರೆನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

ಹಾಗಾದರೆ ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು. ಆಸರೆಯ ಮಾತನಾಡಬೇಕಿತ್ತು. ಆದರೆ, ಈ ಯಾವುದನ್ನೂ ಮಾಡದ ಭವಾನಿ, ತಮ್ಮ ಸೇಫ್‌ ಅನ್ನು ಮಾತ್ರವೇ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪುತ್ರ ಪ್ರಜ್ವಲ್ ಸಹ ತಂದೆ ಜೈಲುಪಾಲಾದರೂ ನನಗೇನು ಎಂಬ ರೀತಿಯಲ್ಲಿ ವಿದೇಶವನ್ನು ಬಿಟ್ಟು ಹೊರ ಬರುತ್ತಿಲ್ಲ. ಇದೆಲ್ಲವೂ ದೇವೇಗೌಡರಿಗೆ ಸಿಟ್ಟು ತರಿಸಿದೆ ಎನ್ನಲಾಗಿದೆ.

ಅಮ್ಮ – ಮಗನ ಆಟಕ್ಕೆ ರೇವಣ್ಣ ಬಲಿ ಎಂದು ಅಸಮಾಧಾನ

ಸಾಮಾನ್ಯವಾಗಿ ಪುತ್ರನ ಕುಟುಂಬದ ವ್ಯವಹಾರಗಳಿಗೆ ತಲೆ ಹಾಕದ ಎಚ್.ಡಿ. ದೇವೇಗೌಡರು, ಈ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಹೆಸರು ಮಣ್ಣುಪಾಲಾಗುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರೇವಣ್ಣ ಅವರನ್ನು ಕರೆದು ಒಂದಷ್ಟು ಬುದ್ಧಿ ಮಾತುಗಳನ್ನು ಹೇಳಿದ್ದಾರೆ. ಅಮ್ಮ – ಮಗನ ಆಟಕ್ಕೆ ನೀನು ಬಲಿಯಾಗುತ್ತಿರುವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ನಿನ್ನ ಕಷ್ಟದ ಕಾಲದಲ್ಲಿಯೂ ಭವಾನಿ ಸಾಥ್‌ ಕೊಡಲಿಲ್ಲವೆಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನ ಒಳ್ಳೆಯತನವೇ ಮುಳುವಾಯಿತು ಎಂದು ಎಚ್‌.ಡಿ. ದೇವೇಗೌಡ ಕಿಡಿಕಾರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಕರೆದು ಬುದ್ಧಿ ಹೇಳು, ಮತ್ತೆ ಹೀಗಾಗದಂತೆ ನೋಡಿಕೋ!!

ಭವಾನಿ ಮತ್ತು ಮಕ್ಕಳು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಯ ನೋಡಿ ಅವರೆಲ್ಲರಿಗೂ ಎಚ್ಚರಿಕೆ ಕೊಡು. ಪ್ರಜ್ವಲ್ ವಿದೇಶದಿಂದ ಬಂದು ಕೋರ್ಟ್‌ನಿಂದ ಜಾಮೀನು ಪಡೆದ ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನೀನು ಜವಾಬ್ದಾರಿಯಿಂದ ನೋಡಿಕೊ ಎಂದು ಎಚ್.ಡಿ. ರೇವಣ್ಣ ಅವರಿಗೆ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

Continue Reading

ಕ್ರೈಂ

Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

Prajwal Revanna Case: ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಈ ನಡುವೆ ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದ್ದು, ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

VISTARANEWS.COM


on

Prajwal Revanna Case Prajwal never boarded a flight from Germany
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬುದು ಸುಳ್ಳಾಗಿದೆ. ಅವರು ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನ ಲಾಂಜ್‌ನಲ್ಲಿಯೇ ಕಾಣಿಸಿಕೊಂಡಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಅಲ್ಲದೆ, ಫ್ಲೈಟ್‌ ಟೇಕ್‌ ಆಫ್‌ ಆಗಿದ್ದರೂ ಅವರು ಅವರು ಅತ್ತ ಸುಳಿದಿಲ್ಲ. ಹೀಗಾಗಿ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್‌ ಮಾಡಿಸಿಯೂ ಅವರು ವಿಮಾನವನ್ನು ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ.

ಈ ಬಗ್ಗೆ ಜರ್ಮನಿ ಮ್ಯೂನಿಕ್ ಏರ್‌ಪೋರ್ಟ್‌ನಿಂದ ವಿಸ್ತಾರ ನ್ಯೂಸ್‌ ಗ್ರೌಂಡ್ ರಿಪೋರ್ಟ್ ಮಾಡಿದ್ದು, ಬೆಂಗಳೂರಿಗೆ ಬರುವ ಫ್ಲೈಟ್‌ನಲ್ಲಿ ಪ್ರಜ್ವಲ್‌ ಹತ್ತಿಲ್ಲ ಎಂಬ ಸಂಗತಿ ಗೊತ್ತಾಗಿದೆ. ಎಲ್ಲ ಪ್ರಯಾಣಿಕರಿಗೆ ಫ್ಲೈಟ್‌ ಹತ್ತಲು ಬೋರ್ಡಿಂಗ್‌ ಕ್ಲೋಸ್‌ ಆಗಿತ್ತು. 3.35ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ LH764 ಟೇಕ್‌ ಆಫ್‌ ಆಗಿದೆ. ಇದರ ಬ್ಯುಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್‌ಗೆ
ಸುಮಾರು 3 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ. ಇಷ್ಟಾದರೂ ಪ್ರಜ್ವಲ್ ಅಲ್ಲಿಂದ ಹೊರಟೇ ಇಲ್ಲ ಎಂದು ತಿಳಿದುಬಂದಿದೆ.

ಬುಕ್ ಮಾಡಿದ್ದ ಲುಫ್ತಾನ್ಸಾ ಫ್ಲೈಟ್‌ ಹತ್ತದ ಪ್ರಜ್ವಲ್ ರೇವಣ್ಣ!

ಲುಫ್ತಾನ್ಸಾ ಏರ್‌ಲೈನ್ಸ್ ಫ್ಲೈಟ್ LH764 ರಲ್ಲಿ ಬ್ಯುಸಿನೆಸ್ ಕ್ಲಾಸ್ ಕ್ಯಾಟಗರಿ 6ಜಿ ಸೀಟ್‌ ಅನ್ನು ಪ್ರಜ್ವಲ್‌ ರೇವಣ್ಣ ಬುಕ್ ಮಾಡಿದ್ದರು. ಈ ನಿರೀಕ್ಷೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡ ಸಹ ಇದ್ದವು. ಆದರೆ, ಎಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ಕಳ್ಳಾಟ ಆಡಲು ಶುರು ಮಾಡಿದರೋ, ಅದೀಗ ಎಸ್‌ಐಟಿ ತಂಡವನ್ನು ಗರಂ ಆಗಿಸಿದೆ. ಒಂದು ಕಡೆ ಕಾನೂನಿಗೆ ತಲೆಬಾಗುತ್ತೇನೆ ಎಂದು ಪ್ರಜ್ವಲ್ ಅಪ್ಪ ಎಚ್.ಡಿ. ರೇವಣ್ಣ ಹೇಳುತ್ತಾರೆ. ಆದರೆ, ಇನ್ನೊಂದು ಕಡೆ ಕಾನೂನಿಗೆ ಡೋಂಟ್‌ ಕೇರ್ ಎಂದು ಪ್ರಜ್ವಲ್ ಹೇಳುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಇನ್ನು ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್ ನೋಟಿಸ್‌ ಕೂಡಾ ಜಾರಿ ಮಾಡಲಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿತ್ತು.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ಬುಧವಾರ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ ಎಂದು ಹೇಳಲಾಗಿತ್ತು.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿತ್ತು. ಆದರೆ, ಟಿಕೆಟ್‌ ಬುಕ್‌ ಮಾಡಿದ್ದ ಪ್ರಜ್ವಲ್‌ ಮಾತ್ರ ಇತ್ತ ಸುಳಿಯಲೇ ಇಲ್ಲ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎಂದೇ ಭಾವಿಸಲಾಗಿತ್ತು.

Continue Reading
Advertisement
Alamgir Alam
ದೇಶ9 mins ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ20 mins ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ20 mins ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ50 mins ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

EPF Withdrawal Rule
ಮನಿ ಗೈಡ್1 hour ago

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

IND vs AUS Test
ಕ್ರೀಡೆ1 hour ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ2 hours ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Amit Shah
ದೇಶ2 hours ago

Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Prajwal Revanna Case Will SIT team go abroad for arrest Prajwal
ಕ್ರೈಂ2 hours ago

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Rajkummar Rao
ಸಿನಿಮಾ2 hours ago

Rajkummar Rao: ಮುಂಬಯಿಗೆ ಬಂದು ಶಾರುಕ್‌ ಮನೆ ಮುಂದೆ ದಿನವಿಡೀ ಕಾದಿದ್ದರಂತೆ ನಟ ರಾಜ್‌ಕುಮಾರ್ ರಾವ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ12 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ15 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌