Cyber Crime: ಇವಳೇ ನನ್ನ ಹೆಂಡತಿ ಎಂದು ನಂಬಿ 91 ಲಕ್ಷ ರೂ. ಕಳೆದುಕೊಂಡ ಟೆಕ್ಕಿ - Vistara News

ಕ್ರೈಂ

Cyber Crime: ಇವಳೇ ನನ್ನ ಹೆಂಡತಿ ಎಂದು ನಂಬಿ 91 ಲಕ್ಷ ರೂ. ಕಳೆದುಕೊಂಡ ಟೆಕ್ಕಿ

ಪುಣೆಯ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಈ ಎಂಜಿನಿಯರ್​​​ಗೆ ಫೆಬ್ರವರಿಯಲ್ಲಿ ಯುವತಿಯ ಪರಿಚಯ ಆಗಿತ್ತು. ಆತ ಅವಳನ್ನು ಪೂರ್ಣವಾಗಿ ನಂಬಿದ್ದ.

VISTARANEWS.COM


on

online fraud
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆನ್​ಲೈನ್​ ವಂಚನೆ ಜಾಲ ದೊಡ್ಡದಾಗುತ್ತಿದೆ (Online Scams). ವಾಟ್ಸ್​ಆ್ಯಪ್​, ಫೇಸ್​ಬುಕ್ ಮೆಸೆಂಜರ್​, ಇನ್​ಸ್ಟಾಗ್ರಾಂ, ಮ್ಯಾಟ್ರಿಮೋನಿ ವೆಬ್​ಸೈಟ್​ಗಳೆಲ್ಲ ‘ವಂಚಕರ ತಾಣ’ವಾಗುತ್ತಿವೆ (Matrimonial Scams). ಆನ್​ಲೈನ್​ ಮೂಲಕ ವಂಚನೆಗೆ ಇಳಿಯುವವರು (Cyber Crime) ಅದೆಷ್ಟು ನವಿರಾಗಿ ಬಲೆ ಹೆಣೆಯುತ್ತಾರೆಂದರೆ, ಚೆನ್ನಾಗಿ ಓದಿಕೊಂಡವರು, ಒಳ್ಳೆ ಉದ್ಯೋಗ, ಹುದ್ದೆಯಲ್ಲಿ ಇರುವವರೇ ಸುಲಭಕ್ಕೆ ಈ ಜಾಲಕ್ಕೆ ಬಿದ್ದುಬಿಡುತ್ತಾರೆ. ಅದ್ಯಾವುದೋ ಅಪರಿಚಿತರಿಂದ ಕರೆ, ಮೆಸೇಜ್​ ಬಂದರೆ ಅವರನ್ನು ನಂಬಿಬಿಡುತ್ತಾರೆ. ಇಂಥ ಆನ್​ಲೈನ್​ ವಂಚನೆ ಬಗ್ಗೆ ನಾವು ಈಗಾಗಲೇ ಹತ್ತು ಹಲವು ಸುದ್ದಿಗಳನ್ನು ಓದಿದ್ದೇವೆ. ಅದರ ಸಾಲಿಗೆ ಈಗೊಂದು ವರದಿ ಸೇರ್ಪಡೆಯಾಗಿದೆ. ಈ ಸಲ ಆನ್​ಲೈನ್​ ಮೋಸಕ್ಕೆ ಒಳಗಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದು ಮಹಾರಾಷ್ಟ್ರ ಪುಣೆಯ ಆದರ್ಶ ನಗರ ನಿವಾಸಿಯಾಗಿರುವ ಟೆಕ್ಕಿ.

ಪುಣೆಯ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಈ ಎಂಜಿನಿಯರ್​​​ಗೆ ಫೆಬ್ರವರಿಯಲ್ಲಿ ಮ್ಯಾಟ್ರಿಮೋನಿಯಲ್ ಸೈಟ್​ (ವಧು-ವರರ ಹುಡುಕಾಟದ ತಾಣ)ನಲ್ಲಿ ಯುವತಿಯೊಬ್ಬಳ ಪರಿಚಯ ಆಗುತ್ತದೆ. ಆಕೆ ತಾನು ಮಲೇಷಿಯಾದಲ್ಲಿ ನೆಲೆಸಿದ್ದೇನೆ. ಆದರೆ ಭಾರತಕ್ಕೆ ಬರುತ್ತೇನೆ. ನಿಮ್ಮನ್ನೇ ಮದುವೆಯಾಗುವುದು ಎಂದು ಟೆಕ್ಕಿಯನ್ನು ನಂಬಿಸಿದ್ದರು. ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ ಆಕೆ ಕೊಟ್ಟಿದ್ದ ಫೋಟೋ, ವಿವರ ನೋಡಿದ್ದ ಟೆಕ್ಕಿ ಹುಡುಗಿಯನ್ನು ಸಂಪೂರ್ಣವಾಗಿ ನಂಬಿದ್ದ. ಇಬ್ಬರೂ ಫೋನ್​​ನಲ್ಲಿ ಮಾತನಾಡುತ್ತಿದ್ದರು. ಅವಳು ಹೇಳಿದಂತೆ ಕೇಳಲು ಈತ ಶುರು ಮಾಡಿದ್ದ. ಈ ನಂಬಿಕೆಯೇ ದುಬಾರಿಯಾಗಿ 91.75 ಲಕ್ಷ ರೂ.ಕಳೆದುಕೊಂಡ

ಅವಕಾಶವನ್ನು ಯುವತಿ ಸರಿಯಾಗಿ ಬಳಸಿಕೊಂಡಿದ್ದಳು. ವಂಚಕಿಯಾಗಿದ್ದ ಹುಡುಗಿ ನಿಧಾನವಾಗಿ ಟೆಕ್ಕಿಯ ಅಕೌಂಟ್​ನಿಂದ ಹಣ ಸುಲಿಗೆ ಮಾಡಲು ಪ್ರಾರಂಭಿಸಿದ್ದಳು. ಮದುವೆ ನಂತರ ಜೀವನ ಚೆನ್ನಾಗಿರಬೇಕು ಎಂದರೆ ನಾವೂ ಏನಾದರೂ ವ್ಯವಹಾರ ಮಾಡೋಣ ಎಂದು ಟೆಕ್ಕಿಗೆ ಹೇಳಿದ್ದಳು. ಹಾಗೇ Blescoin Trading ( ಡಿಜಿಟಲ್​ ಆಗಿ ಸಂಪತ್ತು ಮಾರಾಟ, ಹೆಚ್ಚಳ, ನಿರ್ವಹಣೆ ಮಾಡುವ ವ್ಯವಹಾರ) ಐಡಿಯಾವನ್ನೂ ಕೊಟ್ಟಿದ್ದಳು. ಇದರಲ್ಲಿ ಹೂಡಿಕೆ ಮಾಡಲು ಹಣ ಕಳಿಸುವಂತೆ ಆಕೆ ಟೆಕ್ಕಿಗೆ ಹೇಳಿದಳು. ಆತ ಹಂತಹಂತವಾಗಿ ಹಣ ಕಳಿಸಲು ಶುರು ಮಾಡಿದ್ದ. ಎಚ್​ಡಿಎಫ್​ಸಿ, ಐಡಿಎಫ್​ಸಿ, ಬಜಾಜ್​ ಫೈನಾನ್ಸ್​, ಆ್ಯಕ್ಸಿಸ್​ ಬ್ಯಾಂಕ್​ಗಳಿಂದ ಸಾಲವಾಗಿ ಪಡೆದ ಒಟ್ಟು 71 ಲಕ್ಷ ರೂಪಾಯಿ, ತನ್ನ ಉಳಿತಾಯದ 15 ಲಕ್ಷ ರೂ. ಸೇರಿ 86 ಲಕ್ಷ ರೂ.ಗಳನ್ನು ಯುವತಿಗೆ ಕಳಿಸಿದ್ದ.

ಇದನ್ನೂ ಓದಿ: Pramod Mutalik : ಆನ್‌ಲೈನ್‌ ಮದುವೆ ನೋಂದಣಿಯಿಂದ ಲವ್‌ ಜಿಹಾದ್‌ ಹೆಚ್ಚಳ; ಮುತಾಲಿಕ್‌ ತೀವ್ರ ವಿರೋಧ

ಹಣ ವಾಪಸ್ ಬರುತ್ತದೆ ಎಂದು ಯುವತಿ ಹೇಳಿದ್ದಳು. ಆದರೆ ಎಷ್ಟೇ ದಿನಗಳಾದೂ ಹಣ ವಾಪಸ್ ತನ್ನ ಅಕೌಂಟ್​ಗೆ ಬಾರದಾಗ ಟೆಕ್ಕಿ ಮತ್ತೆ ಆಕೆಯ ಬಳಿಯೇ ಕೇಳಿದ್ದ. ಅದಕ್ಕೆ ಅವಳು, ಹೂಡಿಕೆ ಮಾಡಿದ ಹಣ ಎರಡರಷ್ಟು ವಾಪಸ್ ಬರಬೇಕು ಎಂದರೆ ನೀನಿನ್ನೂ 10 ಲಕ್ಷ ರೂಪಾಯಿ ಕೊಡಬೇಕಾಗುತ್ತದೆ ಎಂದಿದ್ದಳು. ಅದನ್ನೂ ನಂಬಿ ಆತ ಮೊದಲ ಹಂತದಲ್ಲಿ 3.95 ಲಕ್ಷ ರೂ., ಎರಡನೇ ಹಂತದಲ್ಲಿ 1.85 ಲಕ್ಷ ರೂ.ನ್ನು ತನ್ನ ಬ್ಯಾಂಕ್​ ಅಕೌಂಟ್​ನಿಂದ ಟ್ರಾನ್ಸ್​ಫರ್ ಮಾಡಿದ್ದ. ಆದರೆ ಹಣ ವಾಪಸ್ ಬರುವ ಲಕ್ಷಣವೇ ಇಲ್ಲದಾಗ ಅವನಿಗೆ ತಾನು ಮೋಸ ಹೋಗಿದ್ದು ಗೊತ್ತಾಗಿದೆ. ಕೂಡಲೇ ದೇಹು ಠಾಣೆಗೆ ಹೋಗಿ ದೂರು ಕೊಟ್ಟಿದ್ದಾನೆ. ಪೊಲೀಸರು ಇದೀಗ ಅಪರಿಚಿತ ಯುವತಿ ಮತ್ತು ಆಕೆಯ ಸಹಚರರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಅವಳು ಇಷ್ಟು ದಿನ ಟೆಕ್ಕಿಗೆ ಫೋನ್ ಮಾಡುತ್ತಿದ್ದ ನಂಬರ್ ಸ್ವಿಚ್​ಆಪ್​ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Hassan Pen Drive Case: ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ. ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

VISTARANEWS.COM


on

Hassan Pen Drive case Prajwal and Revanna arrested if they fail to appear before SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

ಹೊಳೆನರಸೀಪುರದ ಮನೆಯಲ್ಲಿ ಹೋಮ ಮಾಡಿಸಿದ ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರದ ನಿವಾಸಲ್ಲಿ ಹೋಮ ಮಾಡಿಸಿದ್ದಾರೆ ಎನ್ನಲಾಗಿದೆ. ಯಾವ ಹೋಮವನ್ನು ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬುಧವಾರ ಹೋಮ ಪೂರ್ಣಗೊಂಡ ಬಳಿಕ ಅಲ್ಲಿಂದ ಬೆಂಗಳೂರಿನತ್ತ ವಾಪಸ್‌ ಆಗಿದ್ದಾರೆ.

ಮೊದಲ ನೋಟಿಸ್‌ಗೆ ಪ್ರಜ್ವಲ್‌ ಗೈರು ಪಕ್ಕಾ

ಎಸ್‌ಐಟಿ ನೀಡಿರುವ ಮೊದಲ ನೋಟಿಸ್‌ಗೆ ಪ್ರಜ್ವಲ್‌ ರೇವಣ್ಣ ಗೈರಾಗುವುದು ಪಕ್ಕಾ ಆಗಿದೆ. ಏಕೆಂದರೆ, ಜರ್ಮನಿಯಿಂದ ಬೆಂಗಳೂರು ತಲುಪಬೇಕಾದರೆ ಕನಿಷ್ಠ 9ರಿಂದ 10 ಗಂಟೆ ಪ್ರಯಾಣ ಮಾಡಬೇಕು. 10 ಗಂಟೆ ಪ್ರಯಾಣ ಮಾಡಿದರೂ ನೋಟಿಸ್ ನೀಡಿದ 24 ಗಂಟೆಗಳ‌ ಒಳಗೆ ತಲುಪಲು ಅಸಾಧ್ಯ. ಮೊದಲ ನೋಟಿಸ್‌ಗೆ ಗೈರಾದರೆ ಎರಡನೇ ನೋಟಿಸ್ ನೀಡುವ ಸಾಧ್ಯತೆ ಇದೆ. ಹೀಗೆ ಮೂರು ಬಾರಿ ಆರೋಪಿ ಸ್ಥಾನದಲ್ಲಿರುವವರಿಗೆ ನೋಟಿಸ್‌ ನೀಡಲಾಗುವುದು.

ಮೂರು ನೋಟಿಸ್‌ಗೂ ಸ್ಪಂದಿಸದೇ ಇದ್ದರೆ?

ಎಸ್‌ಐಟಿ ಮೂರು ಬಾರಿ ನೋಟಿಸ್‌ ನೀಡಿದರೂ ಆರೋಪಿಗಳು ಸ್ಪಂದಿಸದೇ ಇದ್ದಿದ್ದರೆ ಕೋರ್ಟ್‌ ಮುಖಾಂತರ ವಾರೆಂಟ್‌ ತಂದು ಬಂಧಿಸುವ ಅವಕಾಶವೂ ಇದೆ. ಇನ್ನು ಎರಡನೇ ನೋಟಿಸ್‌ಗೆ ಸ್ಪಂದಿಸಿ ವಿಚಾರಣೆಗೆ ಹಾಜರಾದರೆ, ತನಿಖಾಧಿಕಾರಿಗಳ ಮುಂದೆ ಸೂಕ್ತ ಕಾರಣ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದಾಖಲಾಗಿರುವ ಸೆಕ್ಷನ್‌ನಲ್ಲಿ ಜಾಮೀನು ಮಂಜೂರು ಆಗುವ ಸಾಧ್ಯತೆ ಇದೆ. ಇಂದು (ಬುಧವಾರ) ರಜೆಯಾಗಿರುವುದರಿಂದ ಗುರುವಾರ (ಮೇ 2) ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಗಾಗಿಯೇ ವಿಚಾರಣೆಗೆ ಹಾಜರಾಗದೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Hassan Pen Drive Case: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

VISTARANEWS.COM


on

Hassan Pen Drive Case POCSO case registered against Prajwal Revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ಕಲಬುರಗಿ

Ambedkar Statue: ತಲೆ ತಿರುಗಿ ಬಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್

Ambedkar Statue : ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌ ಸಂಬಂಧ ಜಾಮೀನು ಪಡೆದು ಹೊರಬಂದ ಆರೋಪಿ ಸಂಗಮೇಶ್ ಮನೆಗೆ ರಾತ್ರೋ ರಾತ್ರಿ ನುಗ್ಗಿ ದಾಳಿ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕಲಬುರಗಿ ಸಂಸದ ಡಾ ಉಮೇಶ್‌ ಜಾಧವ್ (MP Dr Umesh Jadhav) ತಲೆ ತಿರುಗಿ ಕುಸಿದು ಬಿದ್ದಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಆಂಬ್ಯುಲೆನ್ಸ್‌ ಮೂಲಕ ದಾಖಲು ಮಾಡಲಾಗಿದೆ.

VISTARANEWS.COM


on

By

Ambedkar Statue MP Umesh Jadhav Unwell
Koo

ಕಲಬುರಗಿ: ಆರೋಪಿ ಸಂಗಮೇಶ್ ಮನೆ ಮೇಲೆ ದಾಳಿ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಸದ ಡಾ.ಉಮೇಶ್ ಜಾಧವ್ (MP Dr Umesh Jadhav) ಸಾಥ್‌ ನೀಡಿದ್ದರು. ಪ್ರತಿಭಟನೆ ವೇಳೆ ಏಕಾಏಕಿ ತಲೆ ತಿರುಗಿ ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅಂಬೇಡ್ಕರ್‌ ಪ್ರತಿಮೆ ಅಪಮಾನ (Ambedkar Statue) ಕೇಸ್‌ ಸಂಬಂಧ ಜಾಮೀನು ಪಡೆದು ಹೊರಬಂದ ಆರೋಪಿ ಸಂಗಮೇಶ್ ಮನೆಗೆ ಕಿಡಿಗೇಡಿಗಳು ರಾತ್ರೋ ರಾತ್ರಿ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ನಡೆಸಿದ್ದರು. ಇದನ್ನೂ ವಿರೋಧಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ (Kalaburagi news) ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಡಾ.ಉಮೇಶ್ ಜಾಧವ್ ಬಿಸಿಲ ತೀವ್ರತೆಗೆ ಅಸ್ವಸ್ಥಗೊಂಡಿದ್ದರು. ಲೋ ಬಿಪಿಯಿಂದಾಗಿ ಏಕಾಏಕಿ ತಲೆ ತಿರುಗಿ ಬಿದ್ದ ಉಮೇಶ್‌ ಅವರು ಪ್ರತಿಭಟನಾಕಾರರ ತೊಡೆ ಮೇಲೆ ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದವರು ತಲೆ ಮೇಲೆ ಟವೆಲ್ ಹಿಡಿದು ನಿಂತು, ಗಾಳಿ ಬೀಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಅಸ್ವಸ್ಥರಾದ ಸಂಸದರನ್ನು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸಂಸದ ಡಾ.ಉಮೇಶ್ ಜಾಧವ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಕೋಟನೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ರಾಮಮಂದಿರಕ್ಕೆ ಶಿಫ್ಟ್‌ ಆಗಿದೆ. ರಾಮಮಂದಿರ ಬಳಿ ರಸ್ತೆ ತಡೆದು‌ ಆಕ್ರೋಶ ಹೊರಹಾಕುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆಗಮಿಸಿ, ಮನವೊಲಿಸುತ್ತಿದ್ದಾರೆ.

ಸ್ಥಳಕ್ಕೆ ಆದೋಲ ಸಿದ್ದಲಿಂಗ ಸ್ವಾಮಿ ಆಗಮಿಸಿ, ಪ್ರತಿಭಟನಾಕಾರರ ಜತೆ ಕೈ ಜೋಡಿಸಿದರು. ರಾಮಮಂದಿರ ವೃತ್ತದ ಬಳಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಮಿಲಿಟರಿ ಪಡೆ ಆಗಮಿಸಿದೆ.

ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

ಕಲಬುರಗಿ: ಕಳೆದ ಜನವರಿಯಲ್ಲಿ ಕಲಬುರಗಿ ನಗರದ (Kalaburagi News) ಕೊಟನೂರ (ಡಿ) ಬಡಾವಣೆಯಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಪ್ರತಿಮೆಗೆ (Ambedkar statue) ಅಪಮಾನ ಮಾಡಲಾಗಿತ್ತು. ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಎಂಬಾತನಿಗೆ ನಿನ್ನೆ ಮಂಗಳವಾರ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿದೆ.

ಆರೋಪಿ ಕುಟುಂಬಸ್ಥರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಜಖಂಗೊಳಿಸಿದ್ದಾರೆ. ಆರೋಪಿ ಸಂಗಮೇಶ್‌ ಮನೆಯಲ್ಲದೇ ಬಡಾವಣೆಯಲ್ಲಿರುವ ಇತರೆ ಮನೆಗಳ ಮೇಲೂ ದಾಳಿ ಮಾಡಿದ್ದಾರೆ. ಹಲವು ಬೈಕ್‌ಗಳ ಜಖಂಗೊಳಿಸಿ, ಕಾರುಗಳ ಗಾಜು ಪುಡಿ ಪುಡಿ ಮಾಡಿದ್ದಾರೆ.

ಇನ್ನೂ ಕಿಡಿಗೇಡಿಗಳ ದಾಳಿಗೆ ವೀರಶೈವ-ಲಿಂಗಾಯತ ಜನರು ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಕಲಬುರಗಿ ಬಂದ್‌ಗೆ ಕರೆ ಕೊಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸದ್ಯ ಕಲಬುರಗಿ ವಿವಿ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹೆದ್ದಾರಿ ಬಂದ್‌ ಮಾಡಿ ಪ್ರತಿಭಟನೆ

ಕಿಡಿಗೇಡಿಗಳು ಮನೆ ಮೇಲೆ ‌ದಾಳಿ ಮಾಡಿದ್ದನ್ನು ಖಂಡಿಸಿ ವೀರಶೈವ ಲಿಂಗಾಯ ಸಮುದಾಯದಿಂದ ಕಲಬುರಗಿ ಬೆಂಗಳೂರು ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ‌ಹಚ್ಚಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸಿದರು. ಇನ್ನೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮನವಿ ಮಾಡಿದರು.

ದಾಳಿ ಖಂಡಿಸಿ ಸಂಸದ ಡಾ.ಉಮೇಶ್ ಜಾಧವ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಜಿಲ್ಲಾಧಿಕಾರಿ ‌ಫೌಜಿಯಾ ತರನ್ನುಮ್ ಆಗಮಿಸುವಂತೆ ಪಟ್ಟು ಹಿಡಿದರು. ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಆರ್. ಚೇತನ್ ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಶಾಸಕ ಅಲ್ಲಮಪ್ರಭು ಪಾಟೀಲ್ ಭೇಟಿ ನೀಡಿದ್ದು ಪ್ರತಿಭಟನಕಾರರ ಮನವೊಲಿಕೆ ಮಾಡಲು ಮುಂದಾದರು. ಆರೋಪಿ ಸಂಗಮೇಶ್ ಮನೆಗೆ ನುಗ್ಗಿ ದಾಂಧಲೆ‌ ಹಾಗೂ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಾನೂನು ಪ್ರಕಾರ ಆರೋಪಿಗೆ ಶಿಕ್ಷೆಯಾಗಿದೆ. ಮೂರು ತಿಂಗಳು ಸಜೆಯಾಗಿತ್ತು, ಜಾಮೀನು ಪಡೆದು ಹೊರ ಬಂದಿದ್ದಾನೆ. ಶಿಕ್ಷೆ ಅನುಭವಿಸಿ ಬಂದ ಮೇಲೆ ಹಲ್ಲೆ ಮಾಡಿದ್ದು ತಪ್ಪು, ಯಾರೆ ಆಗಿರಲಿ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಕೆಲವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

ಏನಿದು ಪ್ರಕರಣ

ಕಳೆದ ಜನವರಿ 22ರ ರಾತ್ರಿ ಕಲಬುರಗಿಯ ಕೋಟನೂರ ಬಡಾವಣೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ (Ambedkar Statue) ಯಾರೋ ದುಷ್ಕರ್ಮಿಗಳು ಅಪಮಾನ (Desecration of Ambedkar statue) ಮಾಡಿದ್ದರಿಂದ ಈ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ದಲಿತ ಸಮುದಾಯದವರು ರಸ್ತೆ ತಡೆ (Road block in kalaburagi) ನಡೆಸಿ ಪ್ರತಿಭಟನೆ ನಡೆಸಿದ್ದರು. ಕಲಬುರಗಿಯ ಒಂದು ಪೆಟ್ರೋಲ್‌ ಪಂಪ್‌ಗೆ ಹಾನಿ ಮಾಡಲಾಗಿತ್ತು.

Ambedkar Statue
ಘಟನೆಯಿಂದ ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಕೋಟನೂರ ಬಡಾವಣೆಯಲ್ಲಿರುವ ಪ್ರತಿಮೆಗೆ ಚಪ್ಪಲಿ ಹಾರ ಹಾಕಿರುವುದು ಮರುದಿನ ಬೆಳಗ್ಗೆ ಗಮನಕ್ಕೆ ಬಂದಿತ್ತು. ಇದನ್ನು ನೋಡಿ ಆಕ್ರೋಶಿತರಾದ ಜನರು ಪ್ರತಿಭಟನೆಗೆ ಇಳಿದರು. ರಸ್ತೆ ತಡೆಯ ವಿಷಯ ತಿಳಿಯುತ್ತಲೇ ಪೊಲೀಸರು ಆಗಮಿಸಿದರು. ಸ್ಥಳಕ್ಕೆ ಆಗಮಿಸಿದ ಡಿಸಿಪಿ ಕನ್ನಿಕಾ ಸಿಕ್ರಿವಾಲ್‌ ಅವರು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ನಿಯಂತ್ರಿಸಲು ಪೊಲೀಸರು ಒಂದು ಹಂತಕ್ಕೆ ಸಫಲರಾದರೂ ಅದು ಬೇರೆ ಬೇರೆ ಭಾಗಗಳಿಗೆ ಹರಡಿತು.

Ambedkar statue in kalaburagi
ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ದಲಿತ ಸಮುದಾಯ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

Bomb threat: ಇಂದು ಮುಂಜಾನೆ ದಿಲ್ಲಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು. ಇದೀಗ ಇಮೇಲ್‌ ಮೂಲ ಪತ್ತೆಹಚ್ಚಲಾಗಿದೆ.

VISTARANEWS.COM


on

bomb threat delhi ncr schools
Koo

ಹೊಸದಿಲ್ಲಿ: ದೆಹಲಿ (New Delhi) ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಸುಮಾರು 100 ಶಾಲೆಗಳಿಗೆ (Schools) ಕಳುಹಿಸಲಾದ ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಿವೆ.

“ದೆಹಲಿ ಪೊಲೀಸರು ಇಮೇಲ್‌ಗಳ (Email threat) ಮೂಲವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಜಾಗರೂಕರಾಗಿದ್ದಾರೆ, ಲೀಡ್‌ಗಳನ್ನು ಪಡೆಯುತ್ತಿದ್ದಾರೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ದೆಹಲಿಯ ನಾಗರಿಕರಿಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೊಸದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.

ಇಂದು ಮುಂಜಾನೆ ದಿಲ್ಲಿಯ 100ಕ್ಕೂ ಅಧಿಕ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿತ್ತು. ಕೂಡಲೇ ಮಕ್ಕಳನ್ನು ತೆರವುಗೊಳಿಸಿ ಮನೆಗೆ ಕಳಿಸಲಾಗಿತ್ತು. ಆತಂಕಿತರಾದ ಇತರ ಶಾಲೆಗಳವರೂ ಮಕ್ಕಳನ್ನು ತರಗತಿಗಳಿಂದ ಮರಳಿ ಕಳಿಸಿದ್ದರು.

ವಿದೇಶಿ ಸರ್ವರ್‌ಗಳ ಮೂಲಕ ಡೇಟಾವನ್ನು ರೂಟ್ ಮಾಡುವ ಮತ್ತು ದಾರಿ ತಪ್ಪಿಸುವ ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಅನ್ನು ಬಳಸಿಕೊಂಡು ಇಮೇಲ್‌ನ ಮೂಲವನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸ್ವಲ್ಪ ಸಮಯ ತೆಗೆದುಕೊಂಡರು. ವಿಪಿಎನ್ ಟ್ರಾಫಿಕ್ ಅನ್ನು ಹಿಂತೆಗೆದುಕೊಂಡ ನಂತರ ಮತ್ತು ಇಮೇಲ್‌ನ ಮೂಲವನ್ನು ಕಂಡುಹಿಡಿದ ನಂತರ ಪೊಲೀಸರು ಇಂಟರ್ನೆಟ್ ಪ್ರೋಟೋಕಾಲ್ (ಐಪಿ) ವಿಳಾಸವನ್ನು- ಅನನ್ಯ ಐಡೆಂಟಿಫೈಯರ್ ಅನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಪೊಲೀಸ್ ವಿಶೇಷ ಸೆಲ್‌ ಈ ಕುರಿತು ತನಿಖೆ ಪ್ರಾರಂಭಿಸಿದೆ. ಶೋಧದ ಸಂದರ್ಭದಲ್ಲಿ ಯಾವುದೇ ಶಾಲೆಯಲ್ಲಿ ಅನುಮಾನಾಸ್ಪದವಾದುದು ಏನೂ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಎಲ್ಲಾ ಶಾಲೆಗಳನ್ನು ಪರಿಶೀಲಿಸಿದ್ದೇವೆ ಮತ್ತು ಏನೂ ಕಂಡುಬಂದಿಲ್ಲ; ಭಯಪಡುವ ಅಗತ್ಯವಿಲ್ಲ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಮಹ್ಲಾ ಹೇಳಿದ್ದಾರೆ.

ಎಲ್‌ಜಿ ಸಕ್ಸೇನಾ ಅವರು ದೆಹಲಿ ಪೊಲೀಸ್ ಮುಖ್ಯಸ್ಥರಿಂದ ವಿವರವಾದ ತನಿಖೆಯನ್ನು ಕೋರಿದ್ದಾರೆ. ರಾಜಧಾನಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ನಂತರ ಸಕ್ಸೇನಾ ಅವರು ಉತ್ತರ ದೆಹಲಿಯ ಮಾಡೆಲ್ ಟೌನ್‌ನಲ್ಲಿರುವ ಡಿಎವಿ ಶಾಲೆಗೆ ಭೇಟಿ ನೀಡಿದರು.

“… ಪೋಷಕರು ಭಯಪಡಬೇಡಿ. ಶಾಲೆಗಳು ಮತ್ತು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಡಳಿತದೊಂದಿಗೆ ಸಹಕರಿಸಬೇಕೆಂದು ನಾನು ವಿನಂತಿಸುತ್ತೇನೆ. ದುಷ್ಕರ್ಮಿಗಳು ಮತ್ತು ಅಪರಾಧಿಗಳನ್ನು ಬಿಡಲಾಗುವುದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ. ಬೆಳಗಿನ ಜಾವ 4.15ರ ಸುಮಾರಿಗೆ ಬಾಂಬ್‌ ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

“ಮುಂಜಾನೆ 4:15ರ ಸುಮಾರಿಗೆ ಹಲವಾರು ಶಾಲೆಗಳಿಗೆ ಒಂದೇ ಇಮೇಲ್ ಕಳುಹಿಸಲಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ನಾವು ಕ್ರಮ ಕೈಗೊಂಡಿದ್ದೇವೆ. ಶಾಲೆಗಳನ್ನು ಮುಚ್ಚಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಎಲ್ಲಾ ಶಾಲೆಗಳಲ್ಲಿ ತಪಾಸಣೆ ನಡೆಯುತ್ತಿದೆ. ನಮ್ಮ ತಾಂತ್ರಿಕ ವಿಭಾಗವು ತನಿಖೆ ನಡೆಸುತ್ತಿದೆ. ಪ್ರಾಥಮಿಕ ತನಿಖೆಯ ಮೂಲಕ ಇದೊಂದು ಸಾಮೂಹಿಕ ಇಮೇಲ್ ಎಂದು ಕಂಡುಬಂದಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ರೋಹಿತ್ ಮೀನಾ ತಿಳಿಸಿದ್ದಾರೆ.

ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿರುವುದರಿಂದ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. “ಬಾಂಬ್ ಬಗ್ಗೆ ನಮಗೆ ಇಮೇಲ್ ಬಂದಿದೆ. ನಮ್ಮಲ್ಲಿ ವಿದ್ಯಾರ್ಥಿಗಳಿರುವುದರಿಂದ ನಾವು ರಿಸ್ಕ್‌ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪೊಲೀಸರಿಗೆ, ಪೋಷಕರಿಗೆ ತಿಳಿಸಲಾಗಿದೆ ಮತ್ತು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ” ಎಂದು ದೆಹಲಿ ಪಬ್ಲಿಕ್ ಸ್ಕೂಲ್ ನೋಯ್ಡಾದ ಪ್ರಾಂಶುಪಾಲರಾದ ಕಾಮಿನಿ ಭಾಸಿನ್ ಹೇಳಿದರು.

ಇದನ್ನೂ ಓದಿ: Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Continue Reading
Advertisement
E-Pass Mandatory
ಪ್ರವಾಸ28 mins ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ32 mins ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ41 mins ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ43 mins ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ47 mins ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

GST Collection
ದೇಶ49 mins ago

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Covishield vaccine india
ಪ್ರಮುಖ ಸುದ್ದಿ53 mins ago

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Rupali Ganguly Of Anupamaa Fame Joins BJP
ಕಿರುತೆರೆ1 hour ago

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Movie Release
ಒಟಿಟಿ1 hour ago

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Hassan Pen Drive Case POCSO case registered against Prajwal Revanna
ಕ್ರೈಂ2 hours ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌