3 ವರ್ಷದ ಹಿಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದರು, ಜೈಲಿಂದ ಬಂದು ಆಕೆಯನ್ನೇ ಕೊಂದರು Vistara News

ಕ್ರೈಂ

3 ವರ್ಷದ ಹಿಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದರು, ಜೈಲಿಂದ ಬಂದು ಆಕೆಯನ್ನೇ ಕೊಂದರು

ಉತ್ತರ ಪ್ರದೇಶದಲ್ಲಿ ಹಾಡಹಗಲೇ ಯುವತಿಯೊಬ್ಬಳನ್ನು ಇಬ್ಬರು ಯುವಕರು ಕೊಚ್ಚಿ ಕೊಂದಿದ್ದಾರೆ. ಈ ಇಬ್ಬರು ಆರೋಪಿಗಳು ಮೂರು ವರ್ಷದ ಹಿಂದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ತಿಳಿದುಬಂದಿದೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ದೇಶದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಎಷ್ಟೇ ಕಠಿಣ ಕಾನೂನು ಜಾರಿಯಾಗಲಿ, ಯಾವುದೇ ಕ್ರಮ ತೆಗೆದುಕೊಳ್ಳಲಿ, ಹೆಣ್ಣುಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು (Physical Abuse) ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ (Uttar Pradesh) ಕೌಶಂಬಿ ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬರಳನ್ನು ಇಬ್ಬರು ದುಷ್ಕರ್ಮಿಗಳು ಹಾಡಹಗಲೇ ಕೊಚ್ಚಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದು ದುರಂತ ಅಂದರೆ, ಇದೇ ಯುವತಿಯು ಮೂರು ವರ್ಷದ ಹಿಂದೆ ಅತ್ಯಾಚಾರಕ್ಕೀಡಾಗಿದ್ದಳು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮತ್ತೊಂದು ಕೊಲೆ ಪ್ರಕರಣದಲ್ಲಿ ಎರಡು ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಅಶೋಕ್‌ ಹಾಗೂ ಪವನ್‌ ನಿಶಾದ್‌ ಎಂಬುವರು ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನು ಬೆನ್ನತ್ತಿಕೊಂಡು ಬಂದ ಯುವಕರು ಆಕೆಯನ್ನು ಕೊಲೆ ಮಾಡಿದ್ದಾರೆ. ಅಶೋಕ್‌ ಹಾಗೂ ಪವನ್‌ ನಿಶಾದ್‌ ಎಂಬುವರು ಯುವತಿಯನ್ನು ಬೆನ್ನತ್ತಿ, ಆಕೆಯನ್ನು ಕೊಡಲಿಯಿಂದ ಕೊಚ್ಚಿದರೂ ಗ್ರಾಮಸ್ಥರು ಮೂಕ ಪ್ರೇಕ್ಷಕರಾಗಿ ನಿಂತಿದ್ದರು ಎಂದು ತಿಳಿದುಬಂದಿದೆ.

ಪ್ರಕರಣದ ಕುರಿತು ಮಾಹಿತಿ ನೀಡಿದ ಪೊಲೀಸರು

ಕೇಸ್‌ ವಾಪಸ್‌ ತೆಗೆದುಕೊಳ್ಳುವಂತೆ ಒತ್ತಾಯ

ಪವನ್‌ ನಿಶಾದ್‌ ಹಾಗೂ ಆತನ ಸ್ನೇಹಿತರು ಮೂರು ವರ್ಷಗಳ ಹಿಂದೆ ಅಂದರೆ, ಯುವತಿಯು ಬಾಲಕಿಯಾಗಿದ್ದಾಗ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ಇದಾದ ಬಳಿಕ ಬಾಲಕಿಯ ಪೋಷಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ಪವನ್‌ ನಿಶಾದ್‌ ಸೇರಿ ಹಲವರು ಜೈಲಿಗೆ ಹೋಗಿದ್ದರು. ಜೈಲಿನಿಂದ ಬಳದ ಪವನ್‌ ನಿಶಾದ್‌, ಅದೇ ಯುವತಿ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು ಎಂದು ಒತ್ತಡ ಹೇರಿದ್ದರು. ಇದಕ್ಕೆ ಯುವತಿ ಹಾಗೂ ಆಕೆಯ ಕುಟುಂಬಸ್ಥರು ನಿರಾಕರಿಸಿದ್ದು, ಕುಪಿತಗೊಂಡ ಪವನ್‌ ನಿಶಾದ್‌, ಆತನ ಸಹೋದರ ಅಶೋಕ್‌ ಎಂಬುವರು ಕೊಚ್ಚಿ ಕೊಂದಿದ್ದಾರೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Physical Abuse : ಹುಡುಗಿ ಒಪ್ಪದೆ ಪುರುಷ ಅತ್ಯಾಚಾರ ಮಾಡಲಾಗದು!; ಕಾಂಗ್ರೆಸ್‌ ನಾಯಕನ ಸಂಶೋಧನೆ!

“ಕೌಶಂಬಿ ಜಿಲ್ಲೆಯ ದೆರ್ಹಾ ಎಂಬ ಗ್ರಾಮದಲ್ಲಿ ಭೀಕರ ಘಟನೆ ನಡೆದಿದೆ. ಯುವತಿ ಹಾಗೂ ಆರೋಪಿಗಳು ಒಂದೇ ಸಮುದಾಯದವರಾಗಿದ್ದಾರೆ. ಇವರ ಮಧ್ಯೆ ಮೊದಲಿನಿಂದಲೂ ದ್ವೇಷ ಇತ್ತು ಎಂದು ತಿಳಿದುಬಂದಿದೆ. ಇದು ಕೂಡ ಮಹಿಳೆಯ ಹತ್ಯೆಗೆ ಕಾರಣವಾಗಿರಬಹುದು. ಇಬ್ಬರೂ ಯುವಕರ ಬಂಧನಕ್ಕೆ ಬಲೆ ಬೀಸಲಾಗಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಂದಹಾಗೆ, ಅಶೊಕ್‌ ಹಾಗೂ ಪವನ್‌ ನಿಶಾದ್‌ ವಿರುದ್ಧ ಬೇರೊಂದು ಕೊಲೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರ ಕೊಲೆ ಪ್ರಕರಣದಲ್ಲಿ ಇಬ್ಬರೂ ಜೈಲುಪಾಲಾಗಿದ್ದು, ಎರಡು ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Road Accident : ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ಸೋದರನ ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Gadaga accident two bike riders dead
ಹಸನಸಾಬ್ ಹುಸೇನಸಾಬ್ ಖಾನಗೌಡರ್ ಮತ್ತು ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ
Koo

ಗದಗ: ಕರ್ನಾಟಕ ರಾಜ್ಯ ಸರ್ಕಾರಿ ಬಸ್‌ (KSRTC Bus) ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು (Two riders dead) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ತಮ್ಮ ಸೋದರನ ಮದುವೆಯ ನಿಶ್ಚಿತಾರ್ಥದಲ್ಲಿ ಭಾಗವಹಿಸಿದ ಖುಷಿಯಲ್ಲಿದ್ದ ಅವರು ರಸ್ತೆ ಮಧ್ಯೆ ಹೆಣವಾಗಿದ್ದಾರೆ.

ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಇವರ ಸಹೋದರ ವಿವಾಹ ನಿಶ್ಚಿತಾರ್ಥ ರೋಣದ ಬಳಿ ನಡೆದಿತ್ತು. ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KSRTC ಬಸ್ ಸಿಂಧನೂರಿನಿಂದ ಗಜೇಂದ್ರಗಡಕ್ಕೆ ಬರುತ್ತಿತ್ತು.

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸವಾರರು ಮೃತ್ಯು

ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ವೇಗವಾಗಿ ಧಾವಿಸಿ ಬಂದ ಬೈಕ್ ಡಿಕ್ಕಿಯಾಗಿ (Bike Rams into tractor) ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ (Bike riders dead) ದಾರುಣ ಘಟನೆ (Road Accident) ವಿಜಯಪುರ ಜಿಲ್ಲೆಯ (Vijayapura news) ತಾಳಿಕೋಟಿ ತಾಲೂಕಿನ ದೇವರಹುಲಗಬಾಳ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ತಾಳಿಕೋಟಿ ಮುದ್ದೇಬಿಹಾಳ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ತಾಳಿಕೋಟಿ ತಾಲೂಕಿನ ತುಂಬಗಿ ಗ್ರಾಮದವರಾದ ಹುಸೇನಸಾಬ ಇನಾಂದಾರ್ (30), ಮೈಬುಸಾಬ ನದಾಫ್ (33) ಎಂದು ಗುರುತಿಸಲಾಗಿದೆ.

vijaypura accident

ಕಬ್ಬು ತುಂಬಿಕೊಂಡು ಬಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಅತಿ ವೇಗದಲ್ಲಿ ಬಂದ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಹೇಗೆ ನಿಯಂತ್ರಣ ತಪ್ಪಿತೋ, ಬೈಕ್‌ ಯಾಕೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೋ ಸ್ಪಷ್ಟತೆ ಇಲ್ಲ. ತಾಳಿಕೋಟಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

Continue Reading

ಕರ್ನಾಟಕ

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Road accident : ವಿಜಯಪುರದ ತಾಳಿಕೋಟೆ ಬಳಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

VISTARANEWS.COM


on

vijaypura accident
ತಾಳಿಕೋಟೆ ಅಪಘಾತದಲ್ಲಿಸಂಪೂರ್ಣ ನಜ್ಜಗುಜ್ಜಾಗಿರುವ ಬೈಕ್‌
Koo

ವಿಜಯಪುರ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ವೇಗವಾಗಿ ಧಾವಿಸಿ ಬಂದ ಬೈಕ್ ಡಿಕ್ಕಿಯಾಗಿ (Bike Rams into tractor) ಸವಾರರಿಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ (Bike riders dead) ದಾರುಣ ಘಟನೆ (Road Accident) ವಿಜಯಪುರ ಜಿಲ್ಲೆಯ (Vijayapura news) ತಾಳಿಕೋಟಿ ತಾಲೂಕಿನ ದೇವರಹುಲಗಬಾಳ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ.

ತಾಳಿಕೋಟಿ ಮುದ್ದೇಬಿಹಾಳ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ತಾಳಿಕೋಟಿ ತಾಲೂಕಿನ ತುಂಬಗಿ ಗ್ರಾಮದವರಾದ ಹುಸೇನಸಾಬ ಇನಾಂದಾರ್ (30), ಮೈಬುಸಾಬ ನದಾಫ್ (33) ಎಂದು ಗುರುತಿಸಲಾಗಿದೆ.

ಕಬ್ಬು ತುಂಬಿಕೊಂಡು ಬಂದು ನಿಂತಿದ್ದ ಟ್ರ್ಯಾಕ್ಟರ್‌ಗೆ ಅತಿ ವೇಗದಲ್ಲಿ ಬಂದ ಬೈಕ್‌ ಡಿಕ್ಕಿಯಾಗಿದೆ. ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ತಾಳಿಕೋಟೆಯಿಂದ ಮುದ್ದೇಬಿಹಾಳ ಕಡೆಗೆ ಹೊರಟಿದ್ದ ಬೈಕ್ ಸವಾರರಿಗೆ ಹೇಗೆ ನಿಯಂತ್ರಣ ತಪ್ಪಿತೋ, ಬೈಕ್‌ ಯಾಕೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೋ ಸ್ಪಷ್ಟತೆ ಇಲ್ಲ. ತಾಳಿಕೋಟಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಬರ್ತ್‌ಡೇ ದಿನವೇ ಡೆತ್‌ಡೇ; ಸ್ನೇಹಿತರಿಬ್ಬರ ಪ್ರಾಣ ತೆಗೆದ ಬಸ್‌!

KSRTC ಬಸ್‌ ಮತ್ತು ಬೈಕ್‌ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಗದಗ: ಕರ್ನಾಟಕ ರಾಜ್ಯ ಸರ್ಕಾರಿ ಬಸ್‌ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ದಾವಲಸಾಬ್ ಹುಸೇನಸಾಬ್ ಮ್ಯಾಗೇರಿ(28), ಹಸನಸಾಬ್ ಹುಸೇನಸಾಬ್ ಖಾನಗೌಡರ್ (25) ಮೃತಪಟ್ಟ ದುರ್ದೈವಿಗಳು. ಇವರು ಕೊಪ್ಪಳ ಜಿ.ಕುಷ್ಟಗಿ ತಾಲೂಕಿನ ಕಲಾಲಬಂಡಿ ಗ್ರಾಮದವರಾಗಿದ್ದು, ರೋಣ ತಾಲೂಕಿನ ಸವಡಿ ಗ್ರಾಮದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

ಸಹೋದರನ ನಿಶ್ಚಿತಾರ್ಥ ಮಗಿಸಿಕೊಂಡು ವಾಪಸ್ ಬರುವ ವೇಳೆ ದುರ್ಘಟನೆ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

ಬೆಂಗಳೂರಿನ ಬಿಪಿಒ ಉದ್ಯೋಗಿಯೊಬ್ಬ ತನ್ನ ಕಚೇರಿಯ ಹುಡುಗಿಯರೂ ಸೇರಿದಂತೆ ನೂರಾರು ಹುಡುಗಿಯರ 13000 ಫೋಟೊಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾನೆ. ಯಾಕಿದು?

VISTARANEWS.COM


on

BPO Employee Bangalore Nude Photos
Koo

ಬೆಂಗಳೂರು: ಅವಳು ಬೆಂಗಳೂರಿನ ಬಿಪಿಒ ಕಂಪನಿಯಲ್ಲಿ (BPO Company in Bangalore) ಉದ್ಯೋಗಿ. ವಯಸ್ಸು 22 ವರ್ಷ. ಅವಳಿಗೊಬ್ಬ ಬಾಯ್‌ಫ್ರೆಂಡ್ (Boy friend). ಇನ್ನೂ 25 ವರ್ಷ. ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಪರಿಚಯವಾಗಿದ್ದ ಅವರು ಆಗಲೇ ಪ್ರೀತಿ-ಪ್ರೇಮ-ಪ್ರಣಯ (Love and sex relationship) ಅಂತ ಸ್ವಲ್ಪ ಸ್ವಲ್ಪ ಎಲ್ಲೆ ಮೀರಿದ್ದರು. ಅವರಿಬ್ಬರ ನಡುವಿನ ಆತ್ಮೀಯ ಕ್ಷಣಗಳನ್ನು ಆ ಹುಡುಗ ಸೆರೆ ಹಿಡಿದಿದ್ದ. ಅದೊಂದು ದಿನ ಅವನು ಕಣ್ಣಂಚಿನಲ್ಲಿ ಇಲ್ಲದಾಗ ಅವನ ಮೊಬೈಲ್‌ ತೆಗೆದು ತಮ್ಮ ಇಂಟಿಮೇಟ್‌ ಕ್ಷಣಗಳ (Intemate moments) ಚಿತ್ರ ವಿಡಿಯೊಗಳನ್ನು ಡಿಲೀಟ್‌ ಮಾಡಲು ಮುಂದಾದಳು. ಅದು ಹೇಗೋ ಸಂಪಾದಿಸಿಕೊಂಡಿದ್ದ ಲಾಕಿಂಗ್‌ ಪಾಸ್‌ವರ್ಡ್‌ ಬಳಸಿ ಅವನು ಮೊಬೈಲ್‌ನ ಗ್ಯಾಲರಿ (Mobile Photo Gallery) ಓಪನ್‌ ಮಾಡಿದರೆ.. ಬೆಚ್ಚಿ ಬೀಳುವ ಸರದಿ ಅವಳದಾಗಿತ್ತು. ಯಾಕೆಂದರೆ, ಅಲ್ಲಿ ಅವಳೊಬ್ಬಳ ಫೋಟೊ, ವಿಡಿಯೊ ಮಾತ್ರ ಇದ್ದಿದ್ದಲ್ಲ. ಸುಮಾರು 13000 ಹುಡುಗಿಯರ ಸೆಕ್ಸೀ, ರೊಮ್ಯಾಂಟಿಕ್‌ ಫೋಟೊಗಳು ಅಲ್ಲಿದ್ದವು. ಮಾತ್ರವಲ್ಲ, ಅವರಿಬ್ಬರು ಕೆಲಸ ಮಾಡುವ ಅದೇ ಬಿಪಿಒ ಕಂಪನಿಯ ಹಲವು ಹುಡುಗಿಯರ ಮಾದಕ ಚಿತ್ರಗಳ ಸಂಪುಟವೂ ಅಲ್ಲಿ ತೆರೆದುಕೊಂಡಿತ್ತು!

ಹೀಗೆ ಬೆಚ್ಚಿ ಬಿದ್ದ ಹುಡುಗಿಯ ಹೆಸರು ಸಾನ್ವಿ (ಹೆಸರು ಬದಲಿಸಲಾಗಿದೆ). ವರ್ಷದ ಹಿಂದೆ ಬಿಪಿಒ ಕಂಪನಿಗೆ ಸೇರಿದ್ದಳು. ಆಕೆ ಕೆಲಸ ಮಾಡುತ್ತಿದ್ದ ಕಂಪನಿಗೆ ಐದು ತಿಂಗಳ ಹಿಂದೆ ಬಂದು ಸೇರಿಕೊಂಡವನು ಸಂತೋಷ್‌ ಆದಿತ್ಯ (ಹೆಸರು ಬದಲಿಸಲಾಗಿದೆ). ನೋಡಲು ಚೆನ್ನಾಗಿದ್ದ ಅವನಿಗೂ, ಚೆಲುವಿನ ಖನಿಯಾಗಿದ್ದ ಅವಳಿಗೂ ಆಗಲೇ ಪರಿಚಯವಾಗಿತ್ತು. ಒಂದೇ ತಿಂಗಳಲ್ಲಿ ಅದು ಸಂಬಂಧವಾಗಿ ಪರಿವರ್ತನೆಯಾಯಿತು. ಮನಸು ಮಾತ್ರವಲ್ಲ ದೇಹಗಳೂ ಹತ್ತಿರವಾಗಿ ಆತ್ಮೀಯ ರಸಕ್ಷಣಗಳು ನಡೆದುಹೋದವು. ಈ ರಸಕ್ಷಣಗಳ ನೆನಪು ಶಾಶ್ವತವಾಗಿರಲಿ ಎಂದು ಸಂತೋಷ್‌ ಆದಿತ್ಯ ಕೆಲವೊಮ್ಮೆ ಫೋಟೊ ತೆಗೆದಿದ್ದ, ಕೆಲವೊಮ್ಮೆ ವಿಡಿಯೊ ಮಾಡಿದ್ದ.

BPO Employee representational photo
ಪ್ರಾತಿನಿಧಿಕ ಚಿತ್ರ

ಎಲ್ಲ ಮುಗಿದ ಮೇಲೆ ಸಾನ್ವಿಗೆ ಒಬ್ಬ ಹುಡುಗನ ಮೊಬೈಲ್‌ನಲ್ಲಿ ತನ್ನ ಈ ರೀತಿಯ ಫೋಟೊ/ವಿಡಿಯೊಗಳು ಇರುವುದು ಸರಿಯಲ್ಲ ಎಂಬುದರ ಅರಿವಾಗಿದೆ. ಹಾಗಾಗಿ ಆಕೆ ಆತನಿಗೆ ಅರಿವಿಲ್ಲದೆಯೇ ಆತನ ಮೊಬೈಲ್‌ ತೆರೆದು ಗ್ಯಾಲರಿ ಓಪನ್‌ ಮಾಡಿದ್ದಾಳೆ. ಆಗ ಅವಳಿಗೆ ಕಂಡಿದ್ದು 13 ಸಾವಿರ ಫೋಟೊಗಳು! ಅದರಲ್ಲಿ ಹೆಚ್ಚಿನವರು ಹೆಣ್ಮಕ್ಕಳ ಫೋಟೊಗಳು! ಅದರಲ್ಲೂ ತನ್ನದೇ ಆಫೀಸಿನ ಹೆಣ್ಮಕ್ಕಳ ಫೋಟೊಗಳು ಹೆಚ್ಚಾಗಿದ್ದವು. ಅವರ ಜತೆಗೆ ಇದ್ದದ್ದು ಕೂಡಾ ಅದೇ ಇಂಟಿಮೇಟ್‌ ಕ್ಷಣಗಳು.

ಇದನ್ನು ನೋಡಿದ ಸಾನ್ವಿ ಬೆಚ್ಚಿ ಬಿದ್ದಿದ್ದಾಳೆ. ಅಷ್ಟೂ ಹುಡುಗಿಯರ ಫೋಟೊ/ವಿಡಿಯೊಗಳ ನಡುವೆ ಆಕೆಯದ್ದು ಕಾಣಿಸಲೇ ಇಲ್ಲ! ಇದೆಲ್ಲ ನಡೆದದ್ದು ಸುಮಾರು 10 ದಿನಗಳ ಹಿಂದೆ. ಇದನ್ನು ನೋಡಿದ ಸಾನ್ವಿ ಸುಮ್ಮನಿರಲಿಲ್ಲ.

ಮೊದಲು ಸಂತೋಷ್‌ ಜತೆಗೆ ಬ್ರೇಕಪ್‌ ಮಾಡಿಕೊಂಡಿದ್ದಾಳೆ. ನಂತರ ನವೆಂಬರ್‌ 20ರಂದು ಆಕೆ ತನ್ನ ಕಚೇರಿಯ ಸೀನಿಯರ್‌ಗಳಿಗೆ ಈ ವಿಚಾರ ತಿಳಿಸಿದ್ದಾಳೆ. ಸಂತೋಷ್‌ನ ಫೋನ್‌ನಲ್ಲಿ 13000ಕ್ಕೂ ಹೆಚ್ಚು ನಗ್ನ ಫೋಟೊಗಳಿವೆ. ಇವುಗಳಲ್ಲಿ ಕೆಲವು ನಮ್ಮ ಕಚೇರಿಯಲ್ಲೇ ಕೆಲಸ ಮಾಡುವ ಹುಡುಗಿಯರು, ಹೆಂಗಸರದ್ದೂ ಇದೆ. ಹೀಗಾಗಿ ಅವರಿಗೆ ಯಾರಿಗೂ ಮುಂದೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಿಚಾರವನ್ನು ಗಮನಕ್ಕೆ ತರುತ್ತಿರುವುದಾಗಿ ಹೇಳಿದ್ದಾಳೆ.

ವರದಿಗಳ ಪ್ರಕಾರ ಈ ಚಿತ್ರಗಳಲ್ಲಿ ಕೆಲವು ಒರಿಜಿನಲ್‌ ಆಗಿವೆ. ಅದರ ಜತೆಗೆ ಕೆಲವು ಚಿತ್ರಗಳು ನಕಲಿಯಾಗಿರಬಹುದು ಎನ್ನಲಾಗಿದೆ. ಅಂದರೆ ಕಚೇರಿಯ ಕೆಲವು ಮಹಿಳೆಯರ ಯುವತಿಯರ ಫೋಟೊಗಳನ್ನು ಆತ ನಗ್ನ ಚಿತ್ರಗಳಿಗೆ ಜೋಡಿಸಿ ಆನಂದಿಸಿರಬಹುದು ಎಂದು ಕೂಡಾ ಹೇಳಲಾಗುತ್ತಿದೆ.

BPO sex case

ಮತ್ತೊಬ್ಬ ಸಿಬ್ಬಂದಿಯಿಂದ ಪೊಲೀಸರಿಗೆ ದೂರು

ಸಂತೋಷ್‌ನ ಈ ವಿಕೃತಿಯನ್ನು ಅರ್ಥ ಮಾಡಿಕೊಂಡ ಬೆಳ್ಳಂದೂರು ಮೂಲದ ಬಿಪಿಒ ಕಂಪನಿಯ ಉದ್ಯೋಗಿಯಾಗಿರುವ ಸುಚಿತ್ರಾ (ಹೆಸರು ಬದಲಿಸಲಾಗಿದೆ) ಅವರು ಸಂತೋಷ್‌ ವಿರುದ್ಧ ನವೆಂಬರ್‌ 23ರಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅವನು ಇದುವರೆಗೆ ಈ ಕಚೇರಿಯಲ್ಲಿ ಯಾವ ಮಹಿಳೆಯರಿಗೂ ತೊಂದರೆ ಮಾಡಿಲ್ಲ. ಆದರೆ, ಈ ರೀತಿ ಫೋಟೊಗಳು ಇವೆ ಎಂದಾಗ ಅದು ಹೆಣ್ಮಕ್ಕಳಿಗೆ ಆತಂಕ ಆಗಿಯೇ ಆಗುತ್ತದೆ. ಆತ ಯಾಕೆ ಈ ರೀತಿಯಾಗಿ ಫೋಟೊಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾನೆ? ಅವನ ಉದ್ದೇಶವೇನು ಎನ್ನುವುದು ಗೊತ್ತಿಲ್ಲ. ಒಂದು ವೇಳೆ ಇಂಥ ಫೋಟೊಗಳು ಒಂದು ವೇಳೆ ಸೋರಿಕೆಯಾದರೆ ಹೆಣ್ಮಕ್ಕಳು ತುಂಬ ಖಿನ್ನತೆಗೆ ಒಳಗಾಗಬಹುದು. ಹೀಗಾಗಿ ಪ್ರಕರಣದ ಗಂಭೀರತೆಯನ್ನು ಆಧರಿಸಿ ಪೊಲೀಸರಿಗೆ ವಿವರಿಸಿದ್ದೇವೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ ಎನ್ನಲಾಗಿದೆ.

ಈ ನಡುವೆ ಕಂಪನಿ ಇನ್ನೊಂದು ಸ್ಪಷ್ಟೀಕರಣವನ್ನು ನೀಡಿದೆ. ಅದೇನೆಂದರೆ, ಸಂತೋಷ್‌ ಫೋಟೊಗಳನ್ನು ಮಾರ್ಫ್‌ ಮಾಡಲು ಕಂಪನಿಯ ಯಾವುದೇ ಸಾಧನಗಳನ್ನು ಬಳಸಿಕೊಂಡಿಲ್ಲ ಎಂಬುದು. ಈ ಮೂಲಕ ಆತನ ಇಂಥ ಕುಕೃತ್ಯಗಳಿಗೂ ಕಂಪನಿಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ.

ಇದೇವೇಳೆ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡು ಸಂತೋಷ್‌ನನ್ನು ಆತನ ಕಚೇರಿಯಿಂದಲೇ ಬಂಧಿಸಿ ಕರೆದೊಯ್ದಿದ್ದಾರೆ. ಆತನ ಮೊಬೈಲ್‌ ಮತ್ತು ಅದರಲ್ಲಿರುವ ಚಿತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಸಂಖ್ಯೆಯ ನಗ್ನ ಚಿತ್ರಗಳನ್ನು ಸಂಗ್ರಹಿಸುವ ಆತನ ಉದ್ದೇಶವೇನು ಎನ್ನುವ ಬಗ್ಗೆ ಅವರು ತನಿಖೆ ನಡೆಸಲಿದ್ದಾರೆ.

ಮೊಬೈಲ್‌ನಲ್ಲಿರುವ ಚಿತ್ರಗಳ ಪೈಕಿ ಕೆಲವು ಮಾರ್ಫ್‌ ಮಾಡಿದ ನಕಲಿ ಫೋಟಗಳು, ಕೆಲವು ನಿಜವಾಗಿಯೂ ಮಹಿಳೆಯರದ್ದೇ ಫೋಟೊಗಳು. ಅವನು ಈ ಫೋಟೊಗಳನ್ನು ಹೇಗೆ ತೆಗೆದುಕೊಂಡ, ಕೇವಲ ಐದೇ ತಿಂಗಳಲ್ಲಿ ಇಂಥ ಫೋಟೊಗಳನ್ನು ತೆಗೆಸಿಕೊಳ್ಳುವಷ್ಟು ಆತ್ಮೀಯತೆ ಹೇಗೆ ಬೆಳೆಯಿತು? ಆತ ಯಾರಿಗಾದರೂ ಈ ಫೋಟೋ ಬಳಸಿ ಬ್ಲ್ಯಾಕ್‌ ಮೇಲ್‌ ಮಾಡಿದ್ದಾನಾ? ಯಾರಿಗಾದರೂ ಕಳುಹಿಸಿದ್ದಾನಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಜತೆಗೆ ಆತನ ಸಂಪರ್ಕಗಳ ಮೇಲೂ ಕಣ್ಣಿಡಲಿದ್ದಾರೆ.

Continue Reading

ಆರೋಗ್ಯ

Child dead : ಝೀರೋ ಟ್ರಾಫಿಕ್‌ನಲ್ಲಿ ಬಂದ್ರೂ ಬೆಡ್‌ ಇಲ್ಲ ಎಂದ ನಿಮ್ಹಾನ್ಸ್‌; ಎಳೆ ಮಗು ಸಾವು

Child death: ಅದು ದೊಡ್ಡ ಆಸ್ಪತ್ರೆ, ದೊಡ್ಡ ವೈದ್ಯರು ಸಿಗುತ್ತಾರೆ ಎನ್ನುವ ಆಸೆಯೊಂದಿಗೆ ಹಾಸನದಿಂದ ನಿಮ್ಹಾನ್ಸ್‌ ಆಸ್ಪತ್ರೆಗೆ ಕರೆ ತರಲಾದ ಮಗುವೊಂದು ಬೆಡ್‌ ಸಿಗದೆ ಪ್ರಾಣ ಕಳೆದುಕೊಂಡಿದೆ.

VISTARANEWS.COM


on

Child death in Nimhans
Koo

ಬೆಂಗಳೂರು: ಸಾವು ಬದುಕಿನ ಹೋರಾಟದಲ್ಲಿದ್ದ (Life and death) ಪುಟ್ಟ ಮಗುವಿನ ಬಗೆಗೂ ಕರುಣೆ ತೋರದೆ, ಬೆಡ್‌ ಇಲ್ಲ ಎಂದು ನಿರ್ಲಕ್ಷ್ಯ ತೋರಿದೆ ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್‌ ಆಸ್ಪತ್ರೆ (Nimhans Hospital). ಹೀಗಾಗಿ ಒಂದುವರೆ ವರ್ಷದ ಪುಟ್ಟ ಮಗುವೊಂದು ಹೆತ್ತವರ ಆಕ್ರಂದನ ನಡುವೆ ಕಣ್ಮುಚ್ಚಿದೆ (Child death).

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿ ವೆಂಕಟೇಶ್ ಹಾಗೂ ಜ್ಯೋತಿ ದಂಪತಿಯ ಒಂದುವರೆ ವರ್ಷದ ಮಗು ಮೇಲಿಂದ ಬಿದ್ದು ತಲೆಗೆ ಗಾಯವಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಈ ಮಗುವನ್ನು ನಿಮ್ಹಾನ್‌ ಆಸ್ಪತ್ರೆಗೆ ಸ್ಪಷ್ಟ ಮಾಹಿತಿ ನೀಡಿಯೇ ಹಾಸನದ ಆಸ್ಪತ್ರೆಯಿಂದ ಝೀರೋ ಟ್ರಾಫಿಕ್‌ನಲ್ಲಿ ತರಲಾಗಿತ್ತು. ಆದರೆ, ಮಗು ಆಸ್ಪತ್ರೆ ತಲುಪಿ ಗಂಟೆಗಳು ಕಳೆದರೂ ಬೆಡ್‌ ನೀಡದೆ, ಚಿಕಿತ್ಸೆ ನೀಡದೆ ಅಂತಿಮವಾಗಿ ಮಗು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಇವರು ವೈದ್ಯರೋ, ರಕ್ಕಸರೋ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಚಿಕ್ಕಮಗಳೂರಿನ ಬಸವನಗುಡಿ ನಿವಾಸಿ ವೆಂಕಟೇಶ್ ಹಾಗೂ ಜ್ಯೋತಿ ಎಂಬವರು ಪುಟ್ಟ ಮಗು ಮಂಗಳವಾರ ಆಟವಾಡುವಾಗ ಹತ್ತು ಅಡಿ ಎತ್ತರದಿಂದ ಕೆಳಗೆ ಬಿದ್ದಿತ್ತು. ಆಟವಾಡುವಾಗ ಮೆಟ್ಟಿಲಿನಿಂದ ಬಿದ್ದಿದೆ ಎಂದು ಕೆಲವರು ಹೇಳಿದರೆ, ತಾಯಿಯ ಕೈಯಿಂದಲೇ ಬಿದ್ದಿದೆ ಎಂದು ಕೆಲವರು ಹೇಳುತ್ತಿದ್ದಾರೆ.

Child death Hasan to Nimhans zero traffic
ಹಾಸನದಿಂದ ಹೊರಟ ಆಂಬ್ಯುಲೆನ್ಸ್

ಹೀಗೆ ಬಿದ್ದಾಗ ಮಗುವಿನ ತಲೆಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣವೇ ಮಗುವನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದರಿಂದ, ಅದರಲ್ಲೂ ತಲೆಗೆ ಗಾಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು.

ಹಾಸನ ಆಸ್ಪತ್ರೆಯ ವೈದ್ಯರು ನಿಮ್ಹಾನ್ಸ್‌ನ ವೈದ್ಯರು ಮತ್ತು ಆಡಳಿತ ವಿಭಾಗಕ್ಕೆ ಕರೆ ಮಾಡಿ ಮಗುವನ್ನು ಕರೆ ತರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಈ ನಡುವೆ, ಹಾಸನ ಪೊಲೀಸರು ಮಗುವಿನ ರವಾನೆಗೆ ಝೀರೋ ಟ್ರಾಫಿಕ್‌ ವ್ಯವಸ್ಥೆ ಮಾಡಿ ಕಳುಹಿಸಿದರು. ಹಾಸನದಿಂದ ಬೆಂಗಳೂರಿಗೆ ಕೇವಲ ಒಂದು ಗಂಟೆ 40 ನಿಮಿಷದಲ್ಲಿ ತಲುಪಿತ್ತು.

Child death Hasan to Nimhans zero traffic

ಇಲ್ಲಿ ಬಂದು ನೋಡಿದರೆ ಬೆಡ್ಡೂ ಇಲ್ಲ, ಚಿಕಿತ್ಸೆಯೂ ಇಲ್ಲ!

ಆಂಬ್ಯುಲೆನ್ಸ್‌ ಏನೋ ಅತ್ಯಂತ ವೇಗವಾಗಿ ಮಗುವನ್ನು ನಿಮ್ಹಾನ್ಸ್‌ ಆಸ್ಪತ್ರೆಗೆ ತಲುಪಿಸಿತು. ಆದರೆ, ಇಲ್ಲಿ ಬಂದು ಕೇಳಿದರೆ ಬೆಡ್‌ ಇಲ್ಲ ಎಂದು ಸಬೂಬು ಹೇಳಲಾಯಿತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪುಟ್ಟ ಕಂದಮ್ಮಗೆ ವೈದ್ಯರು ಚಿಕಿತ್ಸೆ ನೀಡಲೇ ಇಲ್ಲ.

ದಯವಿಟ್ಟು ಮಗುವಿಗೆ ಬೆಡ್‌ ಕೊಡಿ, ಚಿಕಿತ್ಸೆ ಶುರು ಮಾಡಿ ಎಂದು ಪೋಷಕರು ಎಷ್ಟೇ ಬೊಬ್ಬೆ ಹಾಕಿದರೂ, ಕಣ್ಣೀರು ಹಾಕಿದರೂ ಅವಕಾಶ ಸಿಗಲೇ ಇಲ್ಲ. ಬರುವ ಮೊದಲೇ ಮಾಹಿತಿ ನೀಡಿದ್ದರೂ ಬೆಡ್ ಖಾಲಿಯಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿ ಆಂಬ್ಯುಲೆನ್ಸ್‌ನಲ್ಲೇ ಉಳಿಸಲಾಯಿತು. ಅಂತಿಮವಾಗಿ ಮಗು ಪ್ರಾಣವನ್ನೇ ಕಳೆದುಕೊಂಡಿದೆ.

ಆರೋಗ್ಯ ಸಚಿವರು ಹೇಳುವುದೇನು?

ಘಟನೆಯ ಬಗ್ಗೆ, ಸಾರ್ವಜನಿಕವಾಗಿ ಕೇಳಿಬರುತ್ತಿರುವ ಆಕ್ರೋಶದ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು, ನಿಮ್ಹಾನ್ಸ್‌ನಲ್ಲಿ ವ್ಯವಸ್ಥೆಗಳು ಸರಿಯಾಗಿಲ್ಲ. ಅಲ್ಲಿ ಜನಜುಂಗಳಿ ಕೂಡ ಇದೆ. ಒತ್ತಡದ ನಡುವೆಯೂ ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೊಡುತ್ತಿದ್ದಾರೆ. ಅವರ ಮೇಲಿನ ಒತ್ತಡ ವನ್ನು ನಾವು ಕಡಿಮೆ ಮಾಡಬೇಕು ಎಂದು ಹೇಳಿದರು. ಮಗು ಮೃತಪಟ್ಟಿರುವ ಬಗ್ಗೆ ಮಾಹಿತಿ ತರಿಸಿಕೊಡುವುದಾಗಿ ತಿಳಿಸಿದರು.

Continue Reading
Advertisement
Fashion Show
ದೇಶ37 mins ago

Fashion Show : ಏಕತೆಗೆ ಧಕ್ಕೆ; ಫ್ಯಾಶನ್​ ಶೋದಲ್ಲಿ ಬುರ್ಖಾ ಹಾಕಿದ್ದಕ್ಕೆ ಮುಸ್ಲಿಂ ನಾಯಕನ ಆಕ್ಷೇಪ!

kalpamrutha cold pressed oil production unit inaugurated
ಕರ್ನಾಟಕ37 mins ago

ಕಲ್ಪಾಮೃತ ಶುದ್ಧ ಗಾಣದ ಎಣ್ಣೆ ಉತ್ಪಾದನಾ ಘಟಕಕ್ಕೆ ಚಾಲನೆ

Gadaga accident two bike riders dead
ಕರ್ನಾಟಕ37 mins ago

Road Accident : ಸೋದರನ ನಿಶ್ಚಿತಾರ್ಥ ಮುಗಿಸಿ ಹೊರಟ ಇಬ್ಬರು ಅಪಘಾತದಲ್ಲಿ ಮೃತ್ಯು

Anju who went to Pakistan for to marry her lover, returns to India
ದೇಶ40 mins ago

Anju Love Story: ಪಾಕ್‌ಗೆ ಹೋಗಿ ಪ್ರಿಯಕರನ ಮದ್ವೆಯಾಗಿದ್ದ ಅಂಜು ಭಾರತಕ್ಕೆ ವಾಪಸ್!

vijaypura accident
ಕರ್ನಾಟಕ53 mins ago

Road Accident : ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

Task force committee meeting at Kottur
ವಿಜಯನಗರ1 hour ago

Vijayanagara News: ಮೂಲ ಸೌಕರ್ಯಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ನೇಮಿರಾಜ ನಾಯ್ಕ

Pooja Gandhi and Vijay Ghorpade
ಕರ್ನಾಟಕ1 hour ago

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

Bombay High court orders to son to vacate his mother flat
ಕೋರ್ಟ್1 hour ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ2 hours ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ2 hours ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌