Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ - Vistara News

ಕ್ರೈಂ

Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

Theft Case : ದಾವಣಗೆರೆ ಹಾಗೂ ತುಮಕೂರಿನ ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ದಾವಣಗೆರೆಯಲ್ಲಿ ರಾತ್ರೋ ರಾತ್ರಿ ದೇವರ ಹರಕೆ ಕುರಿಯನ್ನೇ ಕಳ್ಳರು ಕದ್ಯೊಯ್ದರೆ, ಇತ್ತ ತುಮಕೂರಿನ ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರನ್ನು ಹಿಡಿಯಲು ಹೋದರೆ ಹಲ್ಲೆ ಮಾಡಿ ಎಸ್ಕೇಪ್‌ ಆಗಿದ್ದಾರೆ.

VISTARANEWS.COM


on

theft Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದಾವಣಗೆರೆ/ತುಮಕೂರು: ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ತುಮಕೂರಿನ 2 ಸೂಪರ್ ಮಾರ್ಕೆಟ್‌ಗಳಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಶ್ರೀನಿವಾಸ ಹೈಪರ್ ಮಾರ್ಕೆಟ್ ಹಾಗೂ ಜಿಎಮ್‌ಆರ್ ಮೆಗಾ ಮಾರ್ಟ್‌ನಲ್ಲಿ ಕಳ್ಳತನವಾಗಿದೆ. ಕಳ್ಳರು ಜಿಎಮ್‌ಆರ್ ಮೆಗಾ ಮಾರ್ಟ್‌ನ ಬೀಗ ಮುರಿಯುವಾಗ ಮಾಲೀಕನ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಕಳ್ಳತನ ತಡೆಯಲು ಬಂದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಂಗಡಿ ಮಾಲೀಕರನ್ನೇ ಹೆದರಿಸಿ ಕಳ್ಳರು ಪರಾರಿಯಾಗಿದ್ದಾರೆ.

theft Case

50 ಸಾವಿರ ರೂ. ನಗದು ಹಾಗೂ 10ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಕದ್ದಿದ್ದು, ಜತೆಗೆ ಸಿಸಿಟಿವಿಯ ಡಿವಿಆರ್ ಕದ್ದಿದ್ದಾರೆ. ಸುಮಾರು ನಾಲ್ಕೈದು ಕಳ್ಳರ ತಂಡ ಲಗ್ಗೆ ಇಟ್ಟ ಪೂರ್ತಿ ದೃಶ್ಯವು ಮತ್ತೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Huligemma Temple : ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಏರ್ ಇಂಡಿಯಾ ವಿಮಾನ 20 ಗಂಟೆ ವಿಳಂಬ; ಎಸಿ ಇಲ್ಲದೆ ಪ್ರಜ್ಞೆ ತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಗುರುವಾರ ಮಧ್ಯಾಹ್ನ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ (Air India Flight) 20 ಗಂಟೆಗಳ ಕಾಲ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಹವಾ ನಿಯಂತ್ರಣ ವ್ಯವಸ್ಥೆ ಇಲ್ಲದೆ ವಿಮಾನದೊಳಗೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಹೊರಡಲಿದೆ.

ಗುರುವಾರ ಪತ್ರಕರ್ತೆ ಶ್ವೇತಾ ಪುಂಜ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸಿ ಇಲ್ಲದೆ ಪ್ರಯಾಣಿಕರು ಪರದಾಡುತ್ತಿರುವ ಫೋಟೊವನ್ನು ಪೋಸ್ಟ್‌ ಮಾಡಿದ್ದಾರೆ. ʼʼಫ್ಲೈಟ್ ನಂ. ಎಐ 183 ವಿಮಾನಕ್ಕೆ ಪ್ರಯಾಣಿಕರನ್ನು ಹತ್ತಿಸಲಾಯಿತು. ಹವಾ ನಿಯಂತ್ರಣವಿಲ್ಲದೆ ಹಲವರು ಪರದಾಡಿದರು. ಈ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಪ್ರಯಾಣಿಕರಿಗೆ ವಿಮಾನದಿಂದ ನಿರ್ಗಮಿಸಲು ತಿಳಿಸಲಾಯಿತುʼʼ ಎಂದು ಅವರು ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ಉಷ್ಣಾಂಶ ದಾಖಲೆಯ ಮಟ್ಟಕ್ಕೆ ಏರಿದೆ. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ 52.9 ಡಿಗ್ರಿ ಸೆಲ್ಶಿಯಸ್‌ ತಾಪಮಾನ ಕಂಡು ಬಂದಿತ್ತು. ʼʼಇದು ಖಾಸಗೀಕರಣ ವಿಫಲವಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆ. ಎಐ 183 ವಿಮಾನವು ಎಂಟು ಗಂಟೆಗಳಿಗಿಂತ ಹೆಚ್ಚು ವಿಳಂಬವಾಗಿದೆ. ಪ್ರಯಾಣಿಕರನ್ನು ಹವಾನಿಯಂತ್ರಣ ವ್ಯವಸ್ಥೆ ಇಲ್ಲದ ವಿಮಾನವನ್ನು ಹತ್ತಿಸಿದ್ದು ಅಮಾನವೀಯ” ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಟ್ಯಾಗ್ ಮಾಡಿ ಶ್ವೇತಾ ಪುಂಜ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಏರ್‌ ಇಂಡಿಯಾ ಹೇಳಿದ್ದೇನು?

ಶ್ವೇತಾ ಪುಂಜ್ ಅವರ ಪೋಸ್ಟ್‌ ವೈರಲ್‌ ಆದ ಬೆನ್ನಲ್ಲೇ ಏರ್‌ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ʼʼಈ ಘಟನೆಗಾಗಿ ವಿಷಾಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ತಂಡದವರು ಸೂಕ್ತವಾಗಿ ಸ್ಪಂದಿಸಲಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕ್ರಮ ಕೈಗೊಳ್ಳಲಿದ್ದಾರೆʼʼ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಪ್ರಯಾಣಿಕ ಅಭಿಷೇಕ್ ಶರ್ಮಾ ತ್ವರಿತ ಕ್ರಮಕ್ಕಾಗಿ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದಾರೆ. ಬೋರ್ಡಿಂಗ್ ಪ್ರದೇಶದಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆಗೆ ಹೋಗಲು ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. ಅನೇಕ ಪ್ರಯಾಣಿಕರು ಪೋಸ್ಟ್ ಮಾಡಿದ ದೃಶ್ಯಗಳಲ್ಲಿ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರು ನೆಲದ ಮೇಲೆ ಕುಳಿತಿರುವುದನ್ನು ಕಂಡು ಬಂದಿದೆ.

ಇದನ್ನೂ ಓದಿ: Air India: ನಿಯಮ ಉಲ್ಲಂಘಿಸಿದ ಏರ್‌ ಇಂಡಿಯಾಕ್ಕೆ ಬಿತ್ತು ಭಾರೀ ದಂಡ

ಕೆಲವು ತಿಂಗಳ ಹಿಂದೆ ಇಂತಹದ್ದೇ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಬೆಂಗಳೂರಿಗೆ ಡಿ. 23ರ ರಾತ್ರಿ 8.15ಕ್ಕೆ ಮಂಗಳೂರಿನಿಂದ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಕೆಂಜಾರಿನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ವಿಮಾನ ಬಾರದ ಕಾರಣದಿಂದ ಆಕ್ರೋಶಗೊಂಡಿದ್ದರು. ಅಮೆರಿಕಕ್ಕೆ ಪ್ರಯಾಣ ಬೆಳೆಸಬೇಕಿದ್ದವರು, ಪರೀಕ್ಷೆ ಬರೆಯಲು ಹೊರಟವರು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ವಿಮಾನ ಬಾರದ ಕಾರಣ ಮಂಗಳೂರು ವಿಮಾನ ನಿಲ್ದಾಣದಲ್ಲೇ ಬಾಕಿ ಆಗಿದ್ದರು. ರಾತ್ರಿ 8.15ಕ್ಕೆ ಹೊರಡಬೇಕಿದ್ದ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ವಿಮಾನ ನಿಲ್ದಾಣದಲ್ಲಿಯೇ ನಡುರಾತ್ರಿಯವರೆಗೆ ಕಾದು ಕುಳಿತು ಬಳಿಕ ಪ್ರಯಾಣಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

VISTARANEWS.COM


on

ಬೆಂಗಳೂರು: ನಗರದ ಜೈಲಿನಲ್ಲಿದ್ದುಕೊಂಡೇ ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಗಳ ಎಸೆಗಲು ಸಂಚು ರೂಪಿಸಿದ್ದ ಲಷ್ಕರ್‌ ಎ ತೊಬ್ಯಾ ಸಂಪರ್ಕಿತ ಏಳು ಆರೋಪಿಗಳಿಗೆ ಎನ್‌ ಐ ಎ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಪ್ರಕಟಿಸಿದೆ.
ಅಪರಾಧಿಗಳಾದ ಲಷ್ಕರ್‌ – ಎ-ತೊಯ್ಬಾ ಸಂಪರ್ಕಿತ ಉಗ್ರ ಟಿ.ನಾಸಿರ್‌ ನೇತೃತ್ವದಲ್ಲಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್ ಶಿಕ್ಷೆಗೆ ಗುರಿಯಾದವರು. ಪ್ರಕರಣದಲ್ಲಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.
ಇವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದುಕೊಂಡೇ ಯುವಕರನ್ನು ಉಗ್ರವಾದದತ್ತ ಆಕರ್ಷಿಸಿ, ಮತಾಂತರಗೊಳಿಸಿ ದೇಶದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಕೋರ್ಟ್‌ ಏಳು ವರ್ಷ ಜೈಲು ಶಿಕ್ಷೆ ಸೇರಿದಂತೆ 48 ಸಾವಿರ ರೂಪಾಯಿ ದಂಡ ವಿಧಿಸಿದೆ.
2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು. ಇವರು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.
2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದು ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು.
ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

Continue Reading

ಅವಿಭಾಗೀಕೃತ

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

VISTARANEWS.COM


on

ಮುಂಬೈ: ಮಹಿಳಾ ಮೀಸಲಾತಿ ಕುರಿತು ಮುಂಬೈನಲ್ಲಿ ಬಿಜೆಪಿ ಪ್ರತಿಭಟನ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರನ್ನು ಮಹಿಳೆಯೊಬ್ಬರು ಸಚಿವರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾಕಷ್ಟು ವೈರಲ್‌ ಆಗಿದೆ.
ಮುಂಬೈನ ವೊರ್ಲಿ ಪ್ರದೇಶದಲ್ಲಿ ಸಚಿವ ಗಿರೀಶ್ ಮಹಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಅಡಚಣೆ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಈ ಮಹಿಳೆ ಸಚಿವರನ್ನು ಉದ್ದೇಶಿಸಿ ನಿಮ್ಮಿಂದಲೇ ಟ್ರಾಫಿಕ್ ಜ್ಯಾಮ್ ಉಂಟಾಗುತ್ತಿದ್ದು,ಫ್ರೆಂ ಹಿಯರ್.. ಗೆಟ್‌ ಔಟ್‌ ಎಂದು ನಿಂದಿಸಿದ್ದಾರೆ.
ಈ ರೀತಿ ನಡುರಸ್ತೆಯಲ್ಲಿ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಬದಲು ಸಮೀಪದ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಈ ಮಹಿಳೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದಾಗ ಮಾತನಾಡಲು ನಿರಾಕರಿಸಿದ ಮಹಿಳೆ ತನ್ನೊಂದಿಗೆ ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಈ ವಿಡಿಯೊವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರ್ಷವರ್ಧನ್ ಸಪ್ನಲ್, ಮಹಿಳಾ ಮೀಸಲಾತಿ ಕುರಿತು ಆಡಳಿತ ಪಕ್ಷದ ಅಭಿಯಾನದ ನೈಜ ಮುಖವನ್ನು ಬಹಿರಂಗಪಡಿಸಿದೆ ಎಂದು
ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದು ಅದಕ್ಕಾಗಿ ಮಹಿಳಾ ಮೀತಿ ವಿಷಯವನ್ನು ಒಂದು ಸಾಧನವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

Latest

ಇಡಿ ದಾಳಿ: ನಳಪಾಡ್‌ ಫಸ್ಟ್‌ ರಿಯಾಕ್ಷನ್‌ ಏನಿತ್ತು? ಅವರು ಕೊಟ್ಟ ಸ್ಪಷ್ಟನೆ ಏನು?

VISTARANEWS.COM


on

ಬೆಂಗಳೂರು: ನನ್ನ ಮೇಲೆ ನಡೆದ ಇಡಿ ದಾಳಿಗೂ ನನ್ನ ತಂದೆ, ಶಾಸಕ ಬಿಡಿಎ ಅಧ್ಯಕ್ಷರೂ ಆದ ಎನ್.ಎ. ಹ್ಯಾರಿಸ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ನನ್ನ ತಮ್ಮನ ಮನೆಗಳ ಮೇಲೆ ದಾಳಿ ನಡೆದಿದೆ ಎಂದು ಯುವ ಕಾಂಗ್ರೆಸ್‌ ಮುಖಂಡ ನಳಪಾಡ್‌ ಸ್ಪಷ್ಟಪಡಿಸಿದ್ದಾರೆ. ಶ್ರೀಕಿ ಜತೆ ಬಿಟ್‌ ಕಾಯಿನ್‌ ಅವ್ಯವಹಾರ ನಡೆಸಿರುವುದಕ್ಕೆ ಸಂಬಂಧಪಟ್ಟಂತೆ ನಿನ್ನೆ ನಳಪಾಡ್‌ ಅವರ ಮೇಲೆ ಜಾರಿ ನಿರ್ಧೇಶನಾಲಯ ದಾಳಿ ನಡೆಸಿತ್ತು. ಇಂದು ಪ್ರತಿಕ್ರಿಯೆ ನೀಡಿದ ಅವರು, ಶ್ರೀಕಿ ನನಗೆ ಪರಿಚಯ ಇಲ್ಲ ಎಂದು ಹೇಳುವುದಿಲ್ಲ. ಶ್ರೀಕಿ ಜತೆಯಲ್ಲಿ ಕುಳಿತು ಊಟ ಮಾಡಿರಬಹುದು ಅಷ್ಟೇ. ನನ್ನ ತಂದೆ ಹ್ಯಾರಿಸ್‌ ಅವರಿಗೆ ಸಚಿವ ಹುದ್ದೆ ತಪ್ಪಿಸಲು ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಹೇಳಿದ್ದಾರೆ.

Continue Reading

Latest

ಗುಜರಾತ್‌ ನಲ್ಲಿ ಬೃಹತ್‌ ಸೈಬರ್‌ ವಂಚನೆ ಜಾಲ ಪತ್ತೆ: 2,500 ಕೋಟಿ ಹಣ ವಂಚನೆ

VISTARANEWS.COM


on

ಗುಜರಾತ್‌: ಗುಜರಾತ್‌ನಲ್ಲಿ ಪತ್ತೆಯಾದ ಈ ಬೃಹತ್ ಸೈಬರ್ ವಂಚನೆ ಪ್ರಕರಣವು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನೇ ಆತಂಕಕ್ಕೆ ತಳ್ಳಿದೆ. ಸುಮಾರು 2,500 ಕೋಟಿ ರೂ. ಮೊತ್ತದ ಈ ಹಗರಣದಲ್ಲಿ ಭಾಗಿಯಾಗಿದ್ದ 20 ಆರೋಪಿಗಳನ್ನು ರಾಜ್‌ಕೋಟ್ ಪೊಲೀಸರು ಬಂಧಿಸಿದ್ದು, ಇವರಲ್ಲಿ ಎಚ್.ಡಿಎಫ್.ಸಿ, ಯೆಸ್ ಮತ್ತು ಆಕ್ಸಿಸ್ ಬ್ಯಾಂಕ್‌ನಂತಹ ಪ್ರತಿಷ್ಠಿತ ಸಂಸ್ಥೆಗಳ ಅಧಿಕಾರಿಗಳೂ ಸೇರಿರುವುದು ಗಂಭೀರ ವಿಚಾರವಾಗಿದೆ.

ಈ ಬ್ಯಾಂಕ್ ಅಧಿಕಾರಿಗಳು ಸೈಬರ್ ಕ್ರಿಮಿನಲ್‌ಗಳೊಂದಿಗೆ ಶಾಮೀಲಾಗಿ, ನಕಲಿ ದಾಖಲೆಗಳನ್ನು ಬಳಸಿ ಸುಮಾರು 85ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (ನಕಲಿ ಖಾತೆ) ತೆರೆದಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ದೊಡ್ಡ ಮೊತ್ತದ ಹಣ ವರ್ಗಾವಣೆ ಮಾಡುತ್ತಿದ್ದ ಇವರು, ವ್ಯವಸ್ಥೆಯಲ್ಲಿ ಬರುವ ಎಚ್ಚರಿಕೆಗಳನ್ನು (Internal Alerts) ಬೇಕೆಂದೇ ನಿರ್ಲಕ್ಷಿಸುತ್ತಿದ್ದರು. ಬಳಿಕ ಈ ಹಣವನ್ನು ಹವಾಲಾ ದಂಧೆಯ ಮೂಲಕ ಬೇರೆಡೆ ರವಾನಿಸಿ, ವಂಚಕರಿಂದ ದೊಡ್ಡ ಮೊತ್ತದ ಕಮಿಷನ್ ಪಡೆಯುತ್ತಿದ್ದರು.

ಗೊಂಡಲ್ ಮಾರ್ಕೆಟಿಂಗ್ ಯಾರ್ಡ್‌ನ ಕಂಪನಿಯೊಂದರ ಖಾತೆಯಲ್ಲಿ ನಡೆದ 200 ಕೋಟಿ ರೂ.ಗಳ ಸಂಶಯಾಸ್ಪದ ವ್ಯವಹಾರವು ಈ ಮಹಾ ಹಗರಣವನ್ನು ಬಯಲಿಗೆಳೆದಿದೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 535 ದೂರುಗಳು ದಾಖಲಾಗಿದ್ದು, 35 ನಕಲಿ ಸಂಸ್ಥೆಗಳನ್ನು ಪೊಲೀಸರು ಗುರುತಿಸಿದ್ದಾರೆ. ತನಿಖೆ ಮುಂದುವರಿದಂತೆ ಇನ್ನೂ ಹೆಚ್ಚಿನ ಬ್ಯಾಂಕ್ ನೌಕರರು ಸಿಕ್ಕಿಬೀಳುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Latest3 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest4 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest4 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ5 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest5 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest7 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest7 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest9 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ10 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest10 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌