Site icon Vistara News

Someshwara Beach: ದ್ವಿತೀಯ ಪಿಯುಸಿ ಇಬ್ಬರು ವಿದ್ಯಾರ್ಥಿಗಳು ಸೋಮೇಶ್ವರದಲ್ಲಿ ಸಮುದ್ರಪಾಲು

PUC students drown in Someshwara Beach

ಉಳ್ಳಾಲ: ಸೋಮೇಶ್ವರ ಸಮುದ್ರತೀರಕ್ಕೆ (Someshwara Beach) ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು (2nd PUC Students) ಸಮುದ್ರಪಾಲಾಗಿರುವ (Drown in sea) ಘಟನೆ ಶನಿವಾರ (ಡಿ.9) ಮಧ್ಯಾಹ್ನ ಸಂಭವಿಸಿದೆ. ಕಣ್ಮರೆಯಾಗಿರುವ ಇಬ್ಬರು ವಿದ್ಯಾರ್ಥಿಗಳಿಗಾಗಿ ಸ್ಥಳೀಯ ಈಜುಗಾರರು ಹಾಗೂ ಉಳ್ಳಾಲ ಠಾಣಾ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬುವವರ ಪುತ್ರ ಯುವರಾಜ್ (18) ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದವರು.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ನಂತರ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರೂ ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದು, ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಅಲೆಗಳ ಅಬ್ಬರವಿದೆ ಈಜದಿರಿ!

ಸೋಮೇಶ್ವರ ಸಮುದ್ರ ತೀರ ಈಗಾಗಲೇ ಹಲವು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಕುರಿತು ಸ್ಥಳದಲ್ಲಿರುವ ಬಂಡೆಗಳಲ್ಲಿ ಹಾಗೂ ಇಲಾಖೆ ವತಿಯಿಂದ ನಾಮಫಲಕಗಳನ್ನು ಅಳವಡಿಸಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವಂತೆ ಕೋರಲಾಗಿದೆ. ಆದರೂ ಸ್ಥಳದಲ್ಲಿ ವಿಹಾರಕ್ಕೆಂದು ಬರುವ ವಿದ್ಯಾರ್ಥಿಗಳು, ಪ್ರವಾಸಿಗರು ಹೋಂಗಾರ್ಡ್‌ಗಳ ಮತ್ತು ನಾಮಫಲಕಗಳನ್ನು ಗಮನಿಸಿಯೂ ಸಮುದ್ರಕ್ಕೆ ಇಳಿದು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಸ್ಥಳಕ್ಕೆ ಬರುವವರು ಮುಂಜಾಗ್ರತಾ ವಹಿಸಿ ವಿಹರಿಸುವಂತೆ ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ಎಚ್ಚರಿಕೆಯ ಸೂಚನೆ ನೀಡಿದ್ದಾರೆ.

Murder case : ಮಲಗಿದ್ದ ರೈತನ‌ ರುಂಡವನ್ನೇ ಕತ್ತರಿಸಿದ ದುರುಳರು!

ಗದಗ: ಮೆಣಸಿನಕಾಯಿ ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನನ್ನು ಭೀಕರವಾಗಿ ಹತ್ಯೆ (Murder case) ಮಾಡಲಾಗಿದೆ. ಜಮೀನಲ್ಲಿ ಮಲಗಿದ್ದ ವ್ಯಕ್ತಿಯ ರುಂಡವನ್ನೇ ದುರುಳರು ಕತ್ತರಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣ ಹನಂತಪ್ಪ ವಜ್ರದ್ (60) ಹತ್ಯೆಯಾದವರು.

ಸಣ್ಣಹನಂತಪ್ಪರ ಕತ್ತರಿಸಿರುವ ದುಷ್ಕರ್ಮಿಗಳು ಮುಂಡವನ್ನು ಜಮೀನಿನಲ್ಲೇ ಬಿಟ್ಟು, ರುಂಡ ಸಮೇತ ಪರಾರಿ ಆಗಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ಈ ಹತ್ಯೆ ನಡೆದಿದೆ. ಮೆಣಸಿನಕಾಯಿ ಕಾವಲಿಗಾಗಿ ಸಣ್ಣದೊಂದು ಗುಡಿಸಲು ನಿರ್ಮಿಸಿಕೊಂಡು ಮಲಗಿದ್ದರು. ಈ ವೇಳೆ ಕೊಲೆಗಡುಕರು ಸಣ್ಣಹನಂತಪ್ಪರ ತಲೆಯನ್ನೇ ಕಡಿದಿದ್ದಾರೆ.

ಭೀಕರ ಹತ್ಯೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗದಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದು, ಕೊಲೆಗಾರರು ಯಾರೆಂದು ಹುಡುಕಾಟ ನಡೆಸಿದ್ದಾರೆ.

ಕೊಡಗು ರೆಸಾರ್ಟ್‌ನಲ್ಲಿ ಮಗುವನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆ

ಕೊಡಗು: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ (Madikeri Resort) ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್‌ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: JDS Karnataka: ಪಕ್ಷ ವಿರೋಧಿ ಚಟುವಟಿಕೆ; ಸಿ.ಎಂ.ಇಬ್ರಾಹಿಂ, ಕೇರಳದ ಸಿ.ಕೆ. ನಾನು ಉಚ್ಚಾಟನೆ

ಆದರೆ, ಶುಕ್ರವಾರ ರೆಸಾರ್ಟ್‌ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್‌ಔಟ್‌ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್‌ಔಟ್‌ ಮಾಡಲು ಬಾರದ ಕಾರಣ ರೆಸಾರ್ಟ್‌ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.

Exit mobile version