ಪಾಕಿಸ್ತಾನದಲ್ಲಿ ಕ್ರೂರ ಕೃತ್ಯ; ಹಿಂದು ಸೋದರಿಯರನ್ನು ಬೆದರಿಸಿ ಅತ್ಯಾಚಾರ

ಕ್ರೈಂ

ಪಾಕಿಸ್ತಾನದಲ್ಲಿ ಕ್ರೂರ ಕೃತ್ಯ; ಹಿಂದು ಸೋದರಿಯರನ್ನು ಬೆದರಿಸಿ ಅತ್ಯಾಚಾರ

ಅಕ್ಕ-ತಂಗಿ ಇಬ್ಬರೂ ಮುಂಜಾನೆ ಬಹಿರ್ದೆಸೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳಲ್ಲೊಬ್ಬ ಶ್ರೀಮಂತ ಕುಟುಂಬಕ್ಕೆ ಸೇರಿದವನಾಗಿದ್ದು, ಬಂಧನದಿಂದ ತಪ್ಪಿಸಿಕೊಂಡಿದ್ದಾನೆ.

VISTARANEWS.COM


on

Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಹೋರ್‌: ಪಾಕಿಸ್ತಾನದಲ್ಲಿ ಹಿಂದೂ ಸೇರಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಿರಂತರ. ಈಗ ಇನ್ನೊಂದು ಕ್ರೌರ್ಯ ಬೆಳಕಿಗೆ ಬಂದಿದೆ. ಇಲ್ಲಿನ ಪಂಜಾಬ್‌ ಪ್ರಾಂತ್ಯದಲ್ಲಿ ಇಬ್ಬರು ಹಿಂದೂ ಬಾಲಕಿಯರ ಮೇಲೆ ಅತ್ಯಾಚಾರವಾಗಿದೆ. ಇವರಿಬ್ಬರೂ ಸೋದರಿಯರು ಆಗಿದ್ದು, ಇಬ್ಬರು ಪುರುಷರಿಂದ ಅತ್ಯಾಚಾರಕ್ಕೀಡಾಗಿದ್ದಾರೆ. ಸಂತ್ರಸ್ತೆಯಲ್ಲಿ ಇಬ್ಬರಲ್ಲಿ ಒಬ್ಬಳಿಗೆ 16ವರ್ಷವಾಗಿದ್ದು, ಇನ್ನೊಬ್ಬಾಕೆಗೆ 17 ವರ್ಷ ವಯಸ್ಸು.

ಲಾಹೋರ್‌ನಿಂದ 300ಕಿಮೀ ದೂರದಲ್ಲಿರುವ ಫೋರ್ಟ್‌ ಅಬ್ಬಾಸ್‌ನ ಬಹವಾಲ್‌ನಗರದ ನಿವಾಸಿಗಳು. ಜೂ.5ರಂದು ಮುಂಜಾನೆ 5ಗಂಟೆಗೆ ಸೋದರಿಯರಿಬ್ಬರೂ ಬಹಿರ್ದೆಸೆಗೆ ಸಮೀಪದ ಹೊಲದ ಬಳಿ ಹೋಗಿದ್ದರು. ಆಗ ಇಬ್ಬರು ಪುರುಷರು ಅಪ್ರಾಪ್ತೆಯರಿಗೆ ಬಂದೂಕು ತೋರಿಸಿ, ಗುಂಡು ಹಾರಿಸುವುದಾಗಿ ಹೆದರಿಸಿ ರೇಪ್‌ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿ ಇರ್ಶಾದ್‌ ಯಾಕೂಬ್‌ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ಆರೋಪಿಗಳಾದ ಉಮೇರ್‌ ಅಷ್ಫಾಕ್‌ ಮತ್ತು ಕಶೀಫ್‌ ಅಲಿ ಇಬ್ಬರೂ ಕೃತ್ಯ ಎಸಗಿ ಅಲ್ಲಿಂದ ಓಡಿ ಹೋಗಿದ್ದರು. ಇದರಲ್ಲಿ ಕಶೀಫ್‌ ಒಂದು ಪ್ರಭಾವಿ ಕುಟುಂಬಕ್ಕೆ ಸೇರಿದಾತ. ಹಾಗಾಗಿ ಸ್ಥಳೀಯರು ಒಂದಷ್ಟು ಜನ ಸೇರಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಸಂತ್ರಸ್ತೆಯರ ಕುಟುಂಬದೊಂದಿಗೆ ಈ ಬಗ್ಗೆ ಮಾತುಕತೆಯನ್ನೂ ನಡೆಸಿದ್ದರು. ಆದರೆ ಹುಡುಗಿಯರ ತಂದೆ ಅದನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಇಬ್ಬರ ವಿರುದ್ಧವೂ ದೂರು ಕೊಟ್ಟಿದ್ದಾರೆ. ಅದರ ಅನ್ವಯ ಕ್ರಮ ಕೈಗೊಳ್ಳಲಾಗಿದೆ. ಆದರೆ ಉಮೇರ್‌ನನ್ನು ಮಾತ್ರ ಬಂಧಿಸಲು ಸಾಧ್ಯವಾಗಿದ್ದು, ಕಶೀಫ್‌ ನಿರೀಕ್ಷಣಾ ಜಾಮೀನು ಪಡೆದಿದ್ದಾನೆ ಎಂದೂ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 25 ವರ್ಷ ಹಿಂದೆ ಪಾಕಿಸ್ತಾನಿ ಬ್ಯಾಟರ್‌ ಬೌಲ್ಡ್‌ ಆಗಿದ್ದು ಈಗ ಏಕೆ ಟ್ರೆಂಡ್‌ ಆಗುತ್ತಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Actor Darshan: ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ನಟ ದರ್ಶನ್‌ ಸೇರಿ 13 ಆರೋಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.

ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಟೆಸ್ಟ್‌ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 33 ವರ್ಷದ ಯುವಕ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಕರ್ನಾಟಕ

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Renuka Swamy Murder Case: ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ತೆರಳಿ ಹೋರಾಟ ನಡೆಸಲಿವೆ.

VISTARANEWS.COM


on

Renuka Swamy Murder Case
Koo

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣ (Renuka Swamy Murder Case) ಖಂಡಿಸಿ ನಾಳೆ (ಜೂನ್‌ 12) ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿ ಪ್ರತಿಭಟನಾಕಾರರು ಹೋರಾಟ ನಡೆಸಲಿದ್ದು, ಈ ವೇಳೆ ಬೇಡ ಜಂಗಮ ಸಮುದಾಯದ ಮುಖಂಡರು, ವಿವಿಧ ಪಕ್ಷ, ಸಂಘಟನೆಗಳ ಪಕ್ಷಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಬೃಹತ್ ಪ್ರತಿಭಟನೆಯಲ್ಲಿ 1000ಕ್ಕೂ ಹೆಚ್ಚು ಜನರು ಭಾಗಿಯಾಗುವ ಸಾಧ್ಯತೆ ಇದೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧನವಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಇದನ್ನೂ ಓದಿ | Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಮೃತನ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದ್ದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದ್ದಾರೆ.

ಏನಿದು ಪ್ರಕರಣ?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ | Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದಾಗ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಹೀಗಾಗಿ ನಟ ದರ್ಶನ್‌, ಪವಿತ್ರಾ ಗೌಡ, ಕೆ. ಪವನ್, ಪ್ರದೋಶ್, ನಂದೀಶ್, ಕೇಶವಮೂರ್ತಿ, ರಾಘವೇಂದ್ರ, ಎಂ.ಲಕ್ಷ್ಮಣ್, ದೀಪಕ್ ಕುಮಾರ್, ಕಾರ್ತಿಕ್, ಆರ್.ನಾಗರಾಜ್, ವಿ.ವಿನಯ್‌, ನಿಖಿಲ್‌ ನಾಯಕ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested :ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

VISTARANEWS.COM


on

Actor Darshan Arrested
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading

ಚಿತ್ರದುರ್ಗ

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Murder case: ರೇಣುಕಾ ಸ್ವಾಮಿ ಎಂಬಾತ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಬಂಧಿಯಾಗಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬೇಡ ಜಂಗಮ ಸಮುದಾಯದವರು ಒತ್ತಾಯಿಸಿದ್ದಾರೆ.

VISTARANEWS.COM


on

By

actor Darshan
Koo

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧಿಯಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯವು ಕೇಳಿ ಬಂದಿದೆ. ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ಮೃತ ಕುಟುಂಬಸ್ಥರಿಗೆ ಭಾವನಾ ಬೆಳಗೆರೆ ಸಾಂತ್ವನ

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ದರ್ಶನ್‌, ಪವಿತ್ರಗೌಡ ಸೇರಿ 13 ಮಂದಿ ಬಂಧನ

ನಟನೆ, ಸಿನಿಮಾಗಳ ಜತೆಗೆ ವಿವಾದಗಳಿಂದಲೂ ಹೆಚ್ಚು ಸುದ್ದಿಯಲ್ಲಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ (Actor Darshan) ಅವರೀಗ ಗಂಭೀರ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ (Renukaswamy) ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ದರ್ಶನ್‌ ಅವರ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್‌ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 364ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ಇನ್ನು ಗೋಡೌನ್‌ನಲ್ಲಿ ಇರಿಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಇದಾದ ಬಳಿಕ ರೇಣುಕಾಸ್ವಾಮಿ ಮೃತಪಟ್ಟಿದ್ದಾನೆ. ಹಾಗಾಗಿ, ಐಪಿಸಿ ಸೆಕ್ಷನ್‌ 302ರ ಅಡಿಯಲ್ಲಿ ಕೇಸ್‌ ದಾಖಲಾಗಲಿದೆ. ಇನ್ನು ಹತ್ಯೆ ಬಳಿಕ ಶವವನ್ನು ಬಿಸಾಕಿದ ಕಾರಣ ಸಾಕ್ಷ್ಯ ನಾಶದ ಪ್ರಕರಣವನ್ನೂ ಸೇರಿಸಲಾಗುತ್ತದೆ. ಹಾಗಾಗಿ, ಯಾವ ಪ್ರಕರಣಗಳಲ್ಲಿ ಆರೋಪ ಸಾಬೀತಾದರೂ ದರ್ಶನ್‌ ಅವರಿಗೆ ಜೈಲು ಶಿಕ್ಷೆಯಾಗಲಿದೆ. ಕೊಲೆ ಕೇಸ್‌ನಲ್ಲಿ ಆರೋಪ ಸಾಬೀತಾದರಂತೂ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aishwarya Arjun
ಪ್ರಮುಖ ಸುದ್ದಿ22 mins ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Chellagurki Shri Yerrithathanavara Maharathotsava On 12th June
ಧಾರ್ಮಿಕ28 mins ago

Ballari News: ಜೂ.12ರಂದು ಚೇಳ್ಳಗುರ್ಕಿ ಶ್ರೀ ಎರ‍್ರಿತಾತನವರ ಮಹಾರಥೋತ್ಸವ

Fortis hospital Doctors Perform Successful Dual Cochlear Implant Surgery on Nigerian Young Woman
ಕರ್ನಾಟಕ30 mins ago

Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

Viral News
ವೈರಲ್ ನ್ಯೂಸ್34 mins ago

Viral News: ಕೊಳದಲ್ಲಿ ತೇಲುತ್ತಿದ್ದ ದೇಹ ಮೇಲೆತ್ತಲು ಹೋದ ಪೊಲೀಸರು! ಹೆಣ ನಡೆಯತೊಡಗಿತು!

YouTuber Dhruv Rathee
ವೈರಲ್ ನ್ಯೂಸ್50 mins ago

YouTuber Dhruv Rathee: ಧ್ರುವ ರಾಥಿಯ ಮೋದಿ ವಿರೋಧಿ ವಿಡಿಯೊ ಗೊತ್ತು; ಅವರ ಲವ್‌ ಸ್ಟೋರಿ ಗೊತ್ತಾ?

University Grants Commission
ಪ್ರಮುಖ ಸುದ್ದಿ1 hour ago

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Actor Darshan
ಪ್ರಮುಖ ಸುದ್ದಿ1 hour ago

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Wedding Jewel Fashion
ಫ್ಯಾಷನ್2 hours ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್2 hours ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ2 hours ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ6 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ7 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ9 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌