ಉದಯಪುರ ಶಿರಚ್ಛೇದ ಪ್ರಕರಣ ಎನ್‌ಐಎನಿಂದ ನಡೆಯಲಿದೆ ತನಿಖೆ - Vistara News

ಕ್ರೈಂ

ಉದಯಪುರ ಶಿರಚ್ಛೇದ ಪ್ರಕರಣ ಎನ್‌ಐಎನಿಂದ ನಡೆಯಲಿದೆ ತನಿಖೆ

ಉಯದಪುರದಲ್ಲಿ ಟೈಲರ್‌ ಶಿರಚ್ಛೇದ ಪ್ರಕರಣದ ಹಂತಕರು ಪ್ರಧಾನಿ ಮೋದಿಗೂ ಜೀವ ಬೆದರಿಕೆಯೊಡ್ಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಲಾಗುತ್ತಿದೆ.

VISTARANEWS.COM


on

shivamogga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉದಯಪುರ: ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾರಿಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಾಕಿದ್ದ ಟೈಲರ್‌ನ ಶಿರಚ್ಛೇದ ಮಾಡಿರುವ ಹಂತಕರು ಪ್ರಧಾನಿ ಮೋದಿಗೂ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಇಲಾಖೆ ತನಿಖೆಗೆ ರಾಷ್ಟ್ರೀಯ ತನಿಖಾ ಏಜೆನ್ಸಿಯನ್ನು (ಎನ್‌ಐಎ) ಕಳುಹಿಸಿಕೊಟ್ಟಿದೆ.

ಪ್ರಕರಣವನ್ನು ಭಯೋತ್ಪಾದಕ ಕೃತ್ಯವೆಂದು ಪರಿಗಣಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನಿನಡಿ ಪ್ರಕರಣ ದಾಖಲಿಸಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಎನ್‌ಐಎ ಈ ಪ್ರಕರಣದ ತನಿಖೆ ನಡೆಸುವುದು ಬಹುತೇಕ ಖಚಿತಪಟ್ಟಿದೆ. ಮಂಗಳವಾರ ರಾತ್ರಿಯೇ ಎನ್‌ಐಎಯ ಅಧಿಕಾರಿಗಳು ಉದಯಪುರಕ್ಕೆ ಆಗಮಿಸುತ್ತಿದ್ದು, ಸ್ಥಳೀಯ ಪೊಲೀಸರಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಲಿದ್ದಾರೆ.

ಈ ನಡುವೆ ರಾಜಸ್ಥಾನದಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ಮುಂದಿನ ಒಂದು ತಿಂಗಳ ಕಾಲ ನಿಷೇಧಾಜ್ಞೆ (ಸೆಕ್ಷನ್‌ ೧೪೪) ಹೇರಲಾಗಿದೆ. ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ರಾಜ್ಯದಾದ್ಯಂತ ಸ್ಥಗಿತಗೊಳಿಸಲಾಗಿದೆ. ಮೊದಲಿಗೆ ಉದಯಪುರ ಜಿಲ್ಲೆಯಲ್ಲಿ ಮಾತ್ರ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವೂ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಹಿರಿಯ ಪೊಲೀಸ್‌ ಅಧಿಕಾರಿಗಳೇ ಈ ತಂಡದಲ್ಲಿದ್ದಾರೆ.

ಈ ಪ್ರಕರಣದ ಹಂತಕರು ಇನ್ನೂ ಪತ್ತೆಯಾಗಿಲ್ಲ. ಪ್ರಕಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ಪಡೆಯಲಾಗಿರುವ ಇಬ್ಬರನ್ನು ತೀವ್ರ ವಿಚಾರಣೆಗೊಳಪಡಿಸಲಾಗುತ್ತಿದೆ. ಮೃತ ಕನ್ನಯ್ಯ ಲಾಲ್‌ (27) ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾರಿಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಹಾಕಿದ ನಂತರ ಅವರಿಗೆ ಕೆಲ ಸಂಘಟನೆಗಳಿಂದ ಕೊಲೆ ಬೆದರಿಕೆಗಳು ಬಂದಿದ್ದವು ಎನ್ನಲಾಗುತ್ತಿದೆ.

ಇದನ್ನೂ ಓದಿ | ಶಿರಚ್ಛೇದ ಪ್ರಕರಣ | ಭುಗಿಲೆದ್ದ ಪ್ರತಿಭಟನೆ; ಉದಯಪುರದಲ್ಲಿ ಇಂಟರ್‌ನೆಟ್‌ ಸ್ಥಗಿತ, ಕರ್ಫ್ಯೂ ಜಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Stone Pelting: ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

VISTARANEWS.COM


on

Stone pelting
Koo

ಲಕ್ನೋ: ರಸ್ತೆಯಲ್ಲಿ ಆದ ಸಣ್ಣ ಜಗಳ ಇಡೀ ಒಂದು ಊರನ್ನೇ ಉದ್ವಿಗ್ನಗೊಳಿಸಿರುವ ಘಟನೆ ಉತ್ತರಪ್ರದೇಶದ(Uttar Pradesh) ಲಕ್ನೋದಲ್ಲಿ ನಡೆದಿದೆ. ಸಣ್ಣದೊಂದು ಜಗಳದ ಕಿಡಿ ಗುಂಪು ಘರ್ಷಣೆ(ಯಾಗಿ ಹೊತ್ತಿಕೊಂಡಿದ್ದು, ಜನ ಕಲ್ಲು ತೂರಾಟ(Stone Pelting) ನಡೆಸಿದ್ದಾರೆ. ಅಲ್ಲದೇ ಇದೇ ವೇಳೆ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಈ ಭೀಕರ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹಲವರಿಗೆ ಗಂಭೀರ ಗಾಯಗಳಾಗಿವೆ.

ಘಟನೆ ವಿವರ:

ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

ಅವರು ತಮ್ಮ ಮನೆ ಬಳಿ ತಲುಪುತ್ತಿದ್ದಂತೆ 40-50 ಜನರಿಗೆಕರೆ ಮಾಡಿ ಕರೆಸಿಕೊಂಡಿದ್ದರು. ಹಿಂಬಾಲಿಸಿಕೊಂಡು ಬಂದಿದ್ದ ಹರ್ಷ್‌ ಮತ್ತು ಆತನ ಸ್ನೇಹಿತರನ್ನು ಕಂಡ ಕೂಡಲೇ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೇ ಸಫಾರಿ ಸೂಟ್‌ ಧರಿಸಿದ್ದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣವಾಇ ಜಖಂ ಆಗಿದ್ದು, ಅನೇಕರು ಕಲ್ಲೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಇನ್ನು ಘಟನೆಗೆ ಸಂಬಂಧಿಸಿದಂತೆ ಆಧಿಕೃತವಾಗಿ ಯಾವುದೇ ದೂರು ದಾಖಲಾಗಿಲ್ಲ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಲಾಯಿತು. ಇನ್ನು ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ಮೊದಲು ಅರೆಸ್ಟ್‌ ಮಾಡಲಾಗಿತ್ತು. ಇದೀಗ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಇಂದು ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬಂದ ಕೂಡಲೇ ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ್ದು, ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಕರ್ನಾಟಕ

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh: ನಟಿ ಛಾಯಾ ಸಿಂಗ್‌ ಅವರ ತಾಯಿ ಮನೆಯಲ್ಲಿ 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಈ ಸಂಬಂಧ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Chaya Singh
Koo

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda
Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ರಾಜಕೀಯ

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released: ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

VISTARANEWS.COM


on

HD Revanna Released first reaction after release will be acquitted of all charges
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

ರೇವಣ್ಣ ಅವರು ತಂದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (HD Devegowda) ನಿವಾಸಕ್ಕೆ ತೆರಳಿದ್ದು, ಅವರನ್ನು ಕಂಡ ಕೂಡಲೇ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಬ್ಬಿಕೊಂಡು ಸ್ವಾಗತಿಸಿದರು. ಇನ್ನು ಕುಟುಂಬಸ್ಥರನ್ನು ಕಂಡಕೂಡಲೇ ರೇವಣ್ಣ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಹನ್ನೊಂದು ದಿನಗಳ ಹಿಂದೆ ಇದೇ ದೇವೇಗೌಡರ ಮನೆಯಲ್ಲಿ ಎಸ್ಐಟಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಸೀದಾ ಅಲ್ಲಿಗೇ ಎಚ್‌.ಡಿ. ರೇವಣ್ಣ ಬಂದಿದ್ದಾರೆ. ಇದಕ್ಕಿಂತ ಮುಂಚಿತವಾಗಿ ಎಚ್‌.ಡಿ. ದೇವೇಗೌಡರು ಮನೆಯಲ್ಲಿ ವಿಶೇಷ ಪೂಜೆಯನ್ನು ಮಾಡಿಸಿದ್ದರು. ರೇವಣ್ಣ ಮನೆಗೆ ಎಂಟ್ರಿ ಆದ ತಕ್ಷಣ ಅವರನ್ನು ತಬ್ಬಿಕೊಂಡ ಕುಮಾರಸ್ವಾಮಿ ಸಂತೈಸಿದರು. ಅಲ್ಲಿಂದ ಸೀದಾ ಒಳಗೆ ಹೋದ ರೇವಣ್ಣ ಅವರು ಎಚ್‌.ಡಿ. ದೇವೇಗೌಡರ ಕೋಣೆಗೆ ಎಂಟ್ರಿ ಕೊಟ್ಟರು.
ದೇವೇಗೌಡರನ್ನು ನೋಡಿ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು ಎನ್ನಲಾಗಿದೆ. ಜತೆಗೆ ತಾಯಿ ಚನ್ನಮ್ಮ ಅವರ ಆಶೀರ್ವಾದವನ್ನೂ ಈ ವೇಳೆ ರೇವಣ್ಣ ಪಡೆದುಕೊಂಡರು.

ಭವಾನಿ ರೇವಣ್ಣ ನೆಗ್ಲೆಟ್‌?

ಎಚ್‌.ಡಿ. ರೇವಣ್ಣ ಅವರಿಗೆ ಸೋಮವಾರ ಸಂಜೆಯೇ ಬೇಲ್‌ ಸಿಕ್ಕರೂ ಭವಾನಿ ರೇವಣ್ಣ ಅವರ ಸುದ್ದಿಯೇ ಇಲ್ಲವಾಘಿದೆ. ಇನ್ನು ಪದ್ಮನಾಭ ನಗರದ ದೇವೇಗೌಡರ ನಿವಾಸಕ್ಕೂ ಅವರು ಆಗಮಿಸಲಿಲ್ಲ. ರೇವಣ್ಣ ಜೈಲಿಗೆ ಹೋದಾಗಲೂ ನೋಡಲು ಹೋಗಲಿಲ್ಲ. ರೇವಣ್ಣ ಎಸ್ಐಟಿ ಕಸ್ಟಡಿಯಲ್ಲಿ ಇದ್ದಾಗಲೂ ಬರಲಿಲ್ಲ. ಬಿಡುಗಡೆ ಆಗಿ ದೇವೇಗೌಡರ ನಿವಾಸಕ್ಕೆ ರೇವಣ್ಣ ಬಂದರೂ ಅತ್ತ ಕಡೆ ಸುಳಿಯದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಅಂತರ ಕಾಯ್ದುಕೊಂಡರಾ ಭವಾನಿ ಹಾಗೂ ಸೂರಜ್ ರೇವಣ್ಣ?

ಭವಾನಿ ರೇವಣ್ಣ ಹಾಗೂ ಸೂರಜ್ ರೇವಣ್ಣ ಅಂತರ ಕಾಯ್ದುಕೊಂಡರಾ ಎಂಬ ಪ್ರಶ್ನೆ ಮೂಡುತ್ತಿದೆ. ಈ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಗ್ಗೆ ಅಸಹನೆಯಾ? ಇಲ್ಲವೇ ಪ್ರಜ್ವಲ್ ಕೇಸ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೀಗೆ ಮಾಡುತ್ತಿದ್ದಾರಾ? ಎಂಬ ಪ್ರಶ್ನೆ ಮೂಡಿದೆ.

ದೇವೇಗೌಡರ ಜತೆ ಊಟಕ್ಕೆ ಕುಳಿತ ಮಕ್ಕಳು; ಕಂಪ್ಲೇಂಟ್‌ ಹೇಳಿದರಾ ರೇವಣ್ಣ?

ಮನೆಗೆ ಧಾವಿಸಿದ ಹಿರಿಯ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಮೊದಲಿಗೆ ಬೆಳಗ್ಗೆ ಮನೆಯಲ್ಲಿ ಮಾಡಿಸಲಾಗಿದ್ದ ದೇವರ ಪೂಜೆಯ ಪ್ರಸಾದವನ್ನು ಕೊಡಲಾಯಿತು. ಬಳಿಕ ಎಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತರು. ಊಟದ ಸಮಯದಲ್ಲಿ ರೇವಣ್ಣ ಅವರು ಎಸ್‌ಐಟಿ ವಶ ಹಾಗೂ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಹೇಳಿಕೊಂಡಿದ್ದಾರೆನ್ನಲಾಗಿದೆ.

ಎಸ್ಐಟಿ ಅಧಿಕಾರಿಗಳು ತನಿಖೆ ನೆಪದಲ್ಲಿ ಏನೆಲ್ಲ ಪ್ರಶ್ನೆಗಳನ್ನು ಕೇಳಿದರು? ಯಾವ ಮಾದರಿಯ ಪ್ರಶ್ನೆಗಳು ಇದ್ದವು? ಯಾವೆಲ್ಲ ಒತ್ತಡವನ್ನು ನೀಡಿದರು? ಎಂಬಿತ್ಯಾದಿ ವಿಷಯಗಳ ಬಗ್ಗೆ ಎಚ್‌.ಡಿ. ರೇವಣ್ಣ ಅವರು ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಷಡ್ಯಂತ್ರದ ಬಗ್ಗೆ ಚರ್ಚೆ?

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ನಿಷ್ಪಕ್ಷಪಾತ ತನಿಖೆಯನ್ನು ನಡೆಸಲಾಗುತ್ತಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್‌ ಮಧ್ಯಪ್ರವೇಶ ಮಾಡಿದ್ದಾರೆ. ರಾಜಕೀಯವಾಗಿ ಏನೆಲ್ಲ ಷಡ್ಯಂತ್ರ ನಡೆಯುತ್ತಿದೆ ಎಂಬ ಬಗ್ಗೆ ಈಗಾಗಲೇ ಆರೋಪ ಮಾಡಿರುವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವನ್ನು ರೇವಣ್ಣ ಮುಂದೆ ಪ್ರಸ್ತಾಪ ಮಾಡಿದ್ದಾರೆನ್ನಲಾಗಿದೆ. ಅಲ್ಲದೆ, ರಾಜಕೀಯ ಷಡ್ಯಂತ್ರದ ಜತೆಗೆ ಮುಂದಿನ ನಡೆ ಏನು ಎಂಬ ಬಗ್ಗೆಯೂ ತಂದೆ ಮತ್ತು ಮಕ್ಕಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

ಜೆಡಿಎಸ್‌ ಶಾಸಕರು, ಮುಖಂಡರ ಜತೆ ರೇವಣ್ಣ ಚರ್ಚೆ

ಈ ವೇಳೆ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಜೆಡಿಎಸ್‌ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಕೆ ಆರ್ ಪೇಟೆ ಶಾಸಕ ಎಚ್.ಡಿ. ಮಂಜುನಾಥ್, ಮಾಗಡಿ ಮಾಜಿ ಶಾಸಕ ಮಂಜುನಾಥ್ ಸೇರಿದಂತೆ ಹಲವರು ಆಗಮಿಸಿದ್ದಾರೆ. ಇನ್ನು ಎಚ್‌.ಡಿ. ರೇವಣ್ಣ ಸಹ ಕೆಲವು ಪ್ರಮುಖರ ಜತೆ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

Continue Reading
Advertisement
viral video garbage bengaluru roads
ವೈರಲ್ ನ್ಯೂಸ್31 mins ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ34 mins ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ36 mins ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ57 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ1 hour ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ1 hour ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ2 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ2 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ57 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202419 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌