Site icon Vistara News

Viral News: ಮಥುರಾ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತ ಕುಳಿತಿದ್ದವನ ಕೊಲೆ

Sexual Assault Case: mother of Dalit Victim stripped and brother killed

ಲಕ್ನೋ: ಉತ್ತರ ಪ್ರದೇಶದ ಮಥುರಾದ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಇನ್ನೊಬ್ಬ ವ್ಯಕ್ತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದೆ.

ಇದನ್ನೂ ಓದಿ: Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!
ರಾಜಸ್ಥಾನದ ಝುಂಝುನು ಜಿಲ್ಲೆಯ ನಿವಾಸಿ ಅರುಣ್‌ ಗೌರ್‌ ಮಾರ್ಚ್‌ 13ರಂದು ಮಥುರಾಕ್ಕೆ ಬಂದಿಳಿದಿದ್ದರು ಗಾಯತ್ರಿ ತಪೋಭೂಮಿ ದೇಗುಲ ವೀಕ್ಷಣೆಗೆಂದು ಅವರು ಮಥುರಾಕ್ಕೆ ಬಂದಿದ್ದರು. ವೃಂದಾವನ ರಸ್ತೆಯಲ್ಲಿರುವ ದೇವಸ್ಥಾನವೊಂದರಲ್ಲಿ ಪ್ರಾರ್ಥನೆ ಮಾಡುತ್ತಾ ಕುಳಿತಿದ್ದಾಗ ವ್ಯಕ್ತಿಯೊಬ್ಬ ಬಂದು ಅವರನ್ನು ಕೊಲೆ ಮಾಡಿದ್ದಾನೆ.

ಕೊಲೆ ಮಾಡಿರುವ ವ್ಯಕ್ತಿಯನ್ನು ಪ್ಯಾರೆಲಾಲ್‌ ಎಂದು ಗುರುತಿಸಲಾಗಿದೆ. ಈತ ಉತ್ತರಾಖಂಡದ ಡೆಹ್ರಾಡೂನ್‌ ಮೂಲದವನು ಎನ್ನಲಾಗಿದೆ. ಕೊಲೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ
ದೇವಸ್ಥಾನದಲ್ಲಿ ಕುಳಿತಿದ್ದ ಅರುಣ್‌ ಅವರಿಗೆ ಹೊಡೆದ ಪ್ಯಾರೆಲಾಲ್‌ ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾನೆ. ಅಲ್ಲಿದ್ದ ಜನರು ಗಂಭೀರ ಗಾಯಾಳುವಾಗಿದ್ದ ಅರುಣ್‌ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅವರು ದಾರಿ ಮಧ್ಯೆಯೇ ಪ್ರಾಣ ಬಿಟ್ಟಿದ್ದಾಗಿ ವರದಿಯಾಗಿದೆ.

Exit mobile version