ಪ್ರೇಯಸಿಗಾಗಿ ಲಿಂಗ ಬದಲಿಸಿಕೊಂಡವಳಿಗೆ ಮಹಾಮೋಸ; ಪುರುಷನ ಪ್ರೇಮಕ್ಕೆ ಬಿದ್ದು ಮೊದಲ ಪ್ರೀತಿಯನ್ನು ಕೊಂದಳು ವಂಚಕಿ - Vistara News

ಕ್ರೈಂ

ಪ್ರೇಯಸಿಗಾಗಿ ಲಿಂಗ ಬದಲಿಸಿಕೊಂಡವಳಿಗೆ ಮಹಾಮೋಸ; ಪುರುಷನ ಪ್ರೇಮಕ್ಕೆ ಬಿದ್ದು ಮೊದಲ ಪ್ರೀತಿಯನ್ನು ಕೊಂದಳು ವಂಚಕಿ

ಝಾನ್ಸಿಯಲ್ಲಿ ಸೋನಲ್​ ಎಂಬ ಯುವತಿ ತನ್ನ ಅಪ್ಪ-ಅಮ್ಮನೊಟ್ಟಿಗೆ ವಾಸವಾಗಿದ್ದಳು. ಅದೇ ಮನೆಯ ಕೊನೇ ಫ್ಲೋರ್​​ಗೆ 2016ರಲ್ಲಿ ಸನಾ ಎಂಬ ಹುಡುಗಿ ಪೇಯಿಂಗ್ ಗೆಸ್ಟ್​ ಆಗಿ ಬಂದು ಸೇರಿದಳು. ಇವರಿಬ್ಬರ ಪ್ರೀತಿ ನಡುವೆ ಗ್ಯಾನ್​ ಬಂದಿದ್ದ.

VISTARANEWS.COM


on

woman changes sex for lover and then Cheated By he In Uttar Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಪ್ರೀತಿಗೆ ಕಣ್ಣಿಲ್ಲ ಎಂಬ ಮಾತನ್ನು ಪದೇಪದೆ ಕೇಳಲ್ಪಡುತ್ತೇವೆ. ಅದೇ ಪ್ರೀತಿಗೆ ಮಿತಿಯೂ ಇಲ್ಲ. ಮನಸಲ್ಲಿ ಹುಟ್ಟುವ ಪ್ರೀತಿ ಅದೇ ಮನಸನ್ನು ಹೇಗಾದರೂ ಆಡಿಸಬಲ್ಲದು. ‘ಮೋಸ’ ಎಂಬ ಮಹಾಜಾಲವನ್ನೂ ಹೆಣೆದುಬಿಡಬಲ್ಲದು. ಒಟ್ಟಿನಲ್ಲಿ ಪ್ರೀತಿಯ ಸ್ವಭಾವ ಹೀಗೇ ಅಂಥ ಹೇಳಲು ಸಾಧ್ಯವಿಲ್ಲ. ಈ ಸ್ಟೋರಿ ಓದಿದರೆ ನೀವೂ ಈ ಮಾತನ್ನು ಒಪ್ಪಿಕೊಳ್ಳುತ್ತೀರಿ. ಇದು ಪ್ರೀತಿಗಾಗಿ ಲಿಂಗವನ್ನೇ ಪರಿವರ್ತಿಸಿಕೊಂಡವಳು, ಅದೇ ಪ್ರೀತಿಯಿಂದ ವಂಚನೆಗೆ ಒಳಗಾದ ದುರದೃಷ್ಟದ ಕತೆ.

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಿಂದ ಒಂದು ವಿಷಾದ ಪ್ರೇಮಕತೆ ವರದಿಯಾಗಿದೆ. ಇದು ಸಾಮಾನ್ಯ ಲವ್​ ಸ್ಟೋರಿಯೂ ಅಲ್ಲ. ಹುಡುಗಿ-ಹುಡುಗಿ ಪ್ರೀತಿಸಿ, ಅದರಲ್ಲೊಬ್ಬಳು ಲಿಂಗ ಬದಲಿಸಿಕೊಂಡ ಬಳಿಕ, ಆಕೆಯ ಪ್ರೇಮಿ ಇವಳಿಗೆ/ಇವನಿಗೆ ವಂಚಿಸಿ ಮತ್ತೊಬ್ಬನ ಜತೆ ಪ್ರಣಯ ಶುರು ಮಾಡಿದ ಕತೆ. ಗೊಂದಲಕ್ಕೀಡಾಬೇಡಿ..ಈ ಸುದ್ದಿ ಓದಿ.

ಝಾನ್ಸಿಯಲ್ಲಿ ಸೋನಲ್​ ಎಂಬ ಯುವತಿ ತನ್ನ ಅಪ್ಪ-ಅಮ್ಮನೊಟ್ಟಿಗೆ ವಾಸವಾಗಿದ್ದಳು. ಅದೇ ಮನೆಯ ಕೊನೇ ಫ್ಲೋರ್​​ಗೆ 2016ರಲ್ಲಿ ಸನಾ ಎಂಬ ಹುಡುಗಿ ಪೇಯಿಂಗ್ ಗೆಸ್ಟ್​ ಆಗಿ ಬಂದು ಸೇರಿದಳು. ಸೋನಲ್​ ಮತ್ತು ಸನಾ ಇಬ್ಬರೂ ಬಹುತೇಕ ಒಂದೇ ವಯಸ್ಸಿನವರಾಗಿದ್ದರಿಂದ ಸಹಜವಾಗಿಯೇ ಉತ್ತಮ ಗೆಳತಿಯರಾದರು. ಆದರೆ ಇವರಿಬ್ಬರ ಸ್ನೇಹ ಬರುಬರುತ್ತ ಪ್ರೀತಿಯಾಗಿ ತಿರುಗಿತು. ಮತ್ತು ಅವರಿಬ್ಬರೂ ಸಲಿಂಗಿ ಜೋಡಿಯಾಗಿ ಬದಲಾದರು. ಇವರಿಬ್ಬರ ಪ್ರೇಮ ಗುಟ್ಟಾಗಿ ಉಳಿಯಲಿಲ್ಲ. ಇವರಿಬ್ಬರೂ ಪ್ರೀತಿಸುತ್ತಿರುವ ವಿಷಯ ಸೋನಲ್​ ಮನೆಯಲ್ಲಿ ಗೊತ್ತಾಗಿ, ಸಿಟ್ಟಾದರು. ಹೀಗೆ ಇಬ್ಬರು ಹುಡುಗಿಯ ಸಂಬಂಧವನ್ನು ಸಮಾಜ ಒಪ್ಪುವುದಿಲ್ಲ-ನಾವಂತೂ ಖಂಡಿತ ಒಪ್ಪುವುದಿಲ್ಲ ಎಂದು ಹೇಳಿ, ಸನಾಳನ್ನು ಮನೆಬಿಟ್ಟು ಹೋಗುವಂತೆ ಗದರಿಸಿ ಕಳಿಸಿದರು. ಇಷ್ಟೆಲ್ಲ ಆಗಿದ್ದು 2017ರಲ್ಲಿ.

ಇನ್ನು ಸನಾ ಸರ್ಕಾರಿ ಉದ್ಯೋಗಿಯಾಗಿದ್ದಳು. ಉತ್ತಮ ವೇತನವಿತ್ತು. ಆಕೆ ಕೆಲಸ ಮಾಡುತ್ತಿದ್ದ ಕಚೇರಿಯ ಕ್ವಾರ್ಟರ್​​​ನಲ್ಲಿಯೇ ಉಳಿಯಲು ಅವಕಾಶ ಸಿಕ್ಕಿತು. ಹೀಗೆ ಸನಾ ಅಲ್ಲಿ ಹೋಗುತ್ತಿದ್ದಂತೆ ಇತ್ತ ಸೋನಲ್ ಕೂಡ ಅಪ್ಪ-ಅಮ್ಮನನ್ನು ಬಿಟ್ಟು ಹೋಗಿ ಸನಾ ಜತೆಗೇ ವಾಸಿಸಲು ಪ್ರಾರಂಭಿಸಿದಳು. ಅಷ್ಟಲ್ಲದೇ, ಸನಾಳಿಗೆ ಲಿಂಗ ಪರಿವರ್ತನೆ ಮಾಡಿಸಿಕೊಂಡು ‘ಪುರುಷ’ ನಾಗುವಂತೆ ಮನವೊಲಿಸಿದಳು. ನಾವು ಹೀಗೆ ಒಟ್ಟಿಗಿದ್ದರೆ ಸಮಾಜ ಒಪ್ಪುವುದಿಲ್ಲ ಎಂದು ಸನಾ ತಲೆಗೆ ತುಂಬಿದಳು. ಪ್ರೀತಿ ನೋಡಿ, ಸನಾ ಕೂಡ ಸೋನಲ್​ ಮಾತಿಗೆ ಒಪ್ಪಿಯೇಬಿಟ್ಟಳು. ಬಳಿಕ 2020ರಲ್ಲಿ ಇವರಿಬ್ಬರೂ ದೆಹಲಿಯ ಶ್ರೀಗಂಗಾ ರಾಮ್​ ಆಸ್ಪತ್ರೆಗೆ ತೆರಳಿದರು. ಅಲ್ಲಿ ಸನಾಳನ್ನು ಸಮಗ್ರವಾಗಿ ತಪಾಸಣೆ ಮಾಡಿದ ಬಳಿಕ ವೈದ್ಯರು ಆಕೆಗೆ ಲಿಂಗ ಪರಿವರ್ತನೆ ಸರ್ಜರಿಯನ್ನೂ ಮಾಡಿದರು. ಅದಾದ ಮೇಲೆ ಸನಾ​ ‘ಸೊಹಿಲ್​ ಖಾನ್​’ ಆಗಿ ಬದಲಾದಳು/ನು. ಹೀಗೆ ಸರ್ಜರಿ ಮಾಡುವಾಗ ಆಸ್ಪತ್ರೆಗೆ ಒದಗಿಸಬೇಕಿದ್ದ ಎಲ್ಲ ದಾಖಲೆಗಳ ಮೇಲೆಯೂ ಸೋನಲ್​, ತಾನು ಸೊಹಿಲ್ ಖಾನ್​ ಪತ್ನಿ ಎಂದೇ ಉಲ್ಲೇಖಿಸಿದ್ದಳು.

ಇದನ್ನೂ ಓದಿ: Viral news: ಹಳೆಪ್ರೇಮಿಯ ಮೇಲೆ ಸಿಟ್ಟಾ? ಹಾಗಿದ್ದರೆ ಕೆನಡಾದ ಜಿರಳೆಗೆ ಪ್ರೇಮಿಯ ಹೆಸರಿಡಿ!

ಮೂರನೇಯವನ ಪ್ರವೇಶ
2020ರಿಂದ ಎರಡು ವರ್ಷ ಎಲ್ಲವೂ ಚೆನ್ನಾಗಿಯೇ ಇತ್ತು. ಇವರಿಬ್ಬರೂ ಪ್ರೀತಿಯಿಂದಲೇ ಇದ್ದರು. ಆದರೆ 2022ರಲ್ಲಿ ಸೋನಲ್​​ಗೆ ಅಲ್ಲೇ ಉತ್ತರ ಪ್ರದೇಶದ ಯತಾರ್ಥ್​ ಆಸ್ಪತ್ರೆಯಲ್ಲಿ ಉದ್ಯೋಗ ಸಿಕ್ಕಿತು. ಅಲ್ಲಿ ಕೆಲಸ ಮಾಡಲು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸೋನಲ್​ ನಡವಳಿಕೆಯಲ್ಲಿ ತುಂಬ ಬದಲಾವಣೆಯಾಗಿತ್ತು. ಪದೇಪದೇ ಈ ಜೋಡಿ ಮಧ್ಯೆ ಜಗಳ ನಡೆಯಲು ಪ್ರಾರಂಭವಾಯಿತು. ಸೊಹಿಲ್​ ಖಾನ್ (ಹಿಂದಿನ ಸನಾ)ಗೆ ಏನೂ ಅರ್ಥವಾಗುತ್ತಿರಲಿಲ್ಲ. ಆದರೆ ಸೋನಲ್​ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆ ಎಂಬುದು ಆತನಿಗೆ ಗೊತ್ತಾಗುತ್ತಿತ್ತು. ಒಂದು ದಿನ ರಾತ್ರಿ ಸೋನಲ್​ ಮೊಬೈಲ್​​ನಲ್ಲಿ ಯಾರೊಂದಿಗೋ ಗುಂಪುಕರೆಯಲ್ಲಿ ತೊಡಗಿದ್ದಳು. ಆಗ ದೊಡ್ಡದಾಗಿ ಅಳುತ್ತ, ‘ನಾನು ನನ್ನ ಮನೆಯವರನ್ನು ಮಿಸ್​ ಮಾಡಿಕೊಳ್ತಿದ್ದೇನೆ’ ಎಂದು ಹೇಳುತ್ತಿದ್ದಳು. ಅದನ್ನು ಸೊಹಿಲ್​ ನೋಡಿದ್ದ.

ಹೀಗೆ ಸೋನಲ್​ಗೆ ಏನಾಗಿರಬಹುದು ಎಂಬುದರ ತನಿಖೆಯಲ್ಲಿ ತೊಡಗಿದ ಸೊಹಿಲ್​ ಖಾನ್​ಗೆ ಆಘಾತವೇ ಕಾದಿತ್ತು. ಇವರಿಬ್ಬರ ಪ್ರೀತಿಯಲ್ಲಿ ಗ್ಯಾನ್​ ಎಂಬ ಮೂರನೇ ವ್ಯಕ್ತಿಯ ಪ್ರವೇಶವಾಗಿತ್ತು. ಸೋನಲ್​ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ ಗ್ಯಾನ್​ ಮೇಲೆ ಸೋನಲ್​​ಗೆ ಪ್ರೀತಿ ಹುಟ್ಟಿತ್ತು. ಆಕೆಗೆ ತನಗೋಸ್ಕರ ಲಿಂಗ ಬದಲಿಸಿಕೊಂಡ ಸನಾ/ಸೊಹಿಲ್​ ಖಾನ್​ ಈಗ ಬೇಡವಾಗಿತ್ತು. ಈ ಬಗ್ಗೆ ಸೋನಲ್ ಬಳಿ ಪ್ರಶ್ನಿಸಿದ್ದಕ್ಕೆ, ಅವಳು ದೊಡ್ಡ ಗಲಾಟೆ ಮಾಡಿ ಮನೆಬಿಟ್ಟು ಹೋಗಿ ತವರು ಮನೆ ಸೇರಿಕೊಂಡಳು. ಅಷ್ಟೇ ಅಲ್ಲ, ಪಾಲಕರೊಂದಿಗೆ ಪೊಲೀಸ್​ ಸ್ಟೇಶನ್​​ಗೆ ಬಂದು ಸೊಹಿಲ್ ಖಾನ್​ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ದಾಖಲು ಮಾಡಿದಳು.

ಇದನ್ನೂ ಓದಿ: ಹಾಸನ ಮಿಕ್ಸಿ ಸ್ಫೋಟದ ಆರೋಪಿ ಅರೆಸ್ಟ್‌: ಪ್ರೀತಿ ನಿರಾಕರಣೆ, ಅಪಮಾನಕ್ಕೆ ಪ್ರತೀಕಾರ ಎಂದ ವಿಕೃತ ಪ್ರೇಮಿ ಅನೂಪ್‌

ಪೊಲೀಸರಿಂದ ಕರೆ ಬಂದ ಹಿನ್ನೆಲೆಯಲ್ಲಿ ಸ್ಟೇಶನ್​​ಗೆ ಬಂದ ಸೊಹಿಲ್​ ಖಾನ್/ಸನಾ​ ಎಲ್ಲವನ್ನೂ ವಿವರಿಸಿದಳು. 2016ರಿಂದ ಇಲ್ಲಿಯವರೆಗೆ ಏನಾಯಿತು. ಸೋನಲ್​ಗಾಗಿ ತಾನೇನು ತ್ಯಾಗ ಮಾಡಿದೆ? ಅದಕ್ಕೆ ಪ್ರತಿಯಾಗಿ ಆಕೆ ಹೇಗೆ ಮೋಸ ಮಾಡಿದಳು ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟ. ಸೊಹಿಲ್​ ಹೇಳಿಕೆ ಪಡೆದ ಬೆನ್ನಲ್ಲೇ ಪೊಲೀಸರು ಸೋನಲ್​ಗೆ ಸಮನ್ಸ್​ ಕೊಟ್ಟಿದ್ದರು. ಆಕೆಯ ವಂಚನೆ ಸಾಬೀತಾದ ಬೆನ್ನಲ್ಲೇ, ಅವಳನ್ನು ಅರೆಸ್ಟ್ ಕೂಡ ಮಾಡಿದ್ದರು. ಸದ್ಯ ಆಕೆ ಜಾಮೀನು ಪಡೆದು ಹೊರಗಿದ್ದಾಳೆ. ಈ ಕೇಸ್​ ವಿಚಾರಣೆ ಫೆ.23ಕ್ಕೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Prajwal Revanna Case: ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ.

VISTARANEWS.COM


on

prajwal ravanna case dk shivakumar poster
Koo

ಬೆಂಗಳೂರು: ಹಾಸನ ಸಂಸದ (Hassan PM) ಪ್ರಜ್ವಲ್‌ ರೇವಣ್ಣ (Prajwal Revanna Case) ಹಾಗೂ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಅವರ ಲೈಂಗಿಕ ಹಗರಣದಲ್ಲಿ, ಇದುವರೆಗೂ ಹತಾಶವಾಗಿದ್ದ ಬಿಜೆಪಿ (BJP) ಹಾಗೂ ಜೆಡಿಎಸ್‌ಗೆ (JDS) ಈಗ ಆಡಿಯೋ ಅಸ್ತ್ರ ದೊರೆತಿದೆ. ವಕೀಲ ದೇವರಾಜೇಗೌಡ ಪತ್ರಿಕಾಗೋಷ್ಠಿಯ ಬಳಿಕ ತುಸು ಚೇತರಿಕೆ ಬಂದಿದೆ. ಇದರ ನಡುವೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ವಿರುದ್ಧ ಪೋಸ್ಟರ್‌ಗಳು ನಗರದ ಹಲವು ಭಾಗಗಳಲ್ಲಿ ಕಾಣಿಸಿಕೊಂಡಿವೆ.

ಪೆನ್ ಡ್ರೈವ್ ವೀಡಿಯೋ (Pen Drive Case) ಲೀಕ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡವಿದೆ ಎಂದು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ ಬೆನ್ನಲ್ಲೇ ಪೋಸ್ಟರ್‌ಗಳು ರಾರಾಜಿಸುತ್ತಿದ್ದು, ಅನಾಮಿಕರು ಅಂಟಿಸಿರುವ ಪೋಸ್ಟರ್‌ಗಳು ಸಾರ್ವಜನಿಕರ ಗಮನ ಸೆಳೆಯುತ್ತಿವೆ. “ಹೆಣ್ಣು ಮಕ್ಕಳ ವೀಡಿಯೋ ಬಳಸಿಕೊಂಡು ರಾಜಕೀಯ ಮಾಡುವ ವ್ಯಕ್ತಿ” ಎಂದು ಇವುಗಳಲ್ಲಿ ಆರೋಪಿಸಲಾಗಿದೆ. ಜೊತೆಗೆ ಹಲವು ಅವಹೇಳನಕಾರಿ ಒಕ್ಕಣೆಗಳೂ ಈ ಪೋಸ್ಟರ್‌ಗಳಲ್ಲಿ ಕಂಡುಬಂದಿವೆ.

ಕೆಪಿಸಿಸಿ ಕಚೇರಿ, ಡಿಕೆ ಶಿವಕುಮಾರ್‌ ಪಾಲುದಾರಿಕೆ ಹೊಂದಿರುವ ಲುಲು ಮಾಲ್ ಸೇರಿದಂತೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪೋಸ್ಟರ್ ಕಂಡುಬಂದಿವೆ. ರಾತ್ರೋರಾತ್ರಿ ಪೋಸ್ಟರ್‌ಗಳು ಪ್ರತ್ಯಕ್ಷವಾಗಿದ್ದು, ಪೊಲೀಸರು ಇದರ ಹಿಂದಿರುವವರ ಹುಡುಕಾಟದಲ್ಲಿ ತೊಡಗಿದ್ದಾರೆ.

ಡಿಕೆಶಿ ಆಡಿಯೋ ಕಾಂಗ್ರೆಸ್‌ಗೆ ತಲೆನೋವು

ಕಳೆದ ಹದಿನೈದು ದಿನಗಳಿಂದ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಇಟ್ಟುಕೊಂಡು ಚೆನ್ನಾಗಿಯೇ ಆಟವಾಡಿದ್ದ ಕಾಂಗ್ರೆಸ್‌, ಮತದಾನದ ಮುನ್ನಾದಿನವಾದ ಭಾನುವಾರ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಚುನಾವಣೆಯ ಹಿಂದಿನ ದಿನವೇ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ಡಿಕೆ ಶಿವಕುಮಾರ್ ಆಡಿಯೋ ಅನ್ನು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಬಿಡುಗಡೆ ಮಾಡಿದ್ದು, ಪ್ರಕರಣದ ಹಿಂದಿನ ಸತ್ಯಾಸತ್ಯತೆ ಬಗ್ಗೆ ಸಾರ್ವಜನಿಕರು ಇನ್ನೊಂದು ಕೋನದಿಂದ ಯೋಚಿಸುವಂತಾಗಿದೆ.

ದೇವರಾಜೇಗೌಡ ಜತೆ ಡಿಕೆ ಶಿವಕುಮಾರ್‌ ನಡೆಸಿರುವ ಮಾತುಕತೆಯ ಆಡಿಯೋದಲ್ಲಿ ಡಿಕೆಶಿ ಧ್ವನಿ ಸ್ಪಷ್ಟವಾಗಿದೆ ಎನ್ನಲಾಗಿದೆ. ಪೆನ್ ಡ್ರೈವ್ ಮಾಡಿಸಿದ್ದೇ ಡಿಕೆಶಿ ಎಂದು ಆರೋಪಿಸಲಾಗಿದೆ. ರಾಜಕೀಯ ಲಾಭಕ್ಕಾಗಿ ವ್ಯವಸ್ಥೆಯನ್ನು ಬಳಸಿಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಎಸ್ಐಟಿ ಅಧಿಕಾರಿಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.

ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುವ ಬಗ್ಗೆ ಹಾಗೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ವಿಸ್ತಾರ ನ್ಯೂಸ್‌ಗೆ ಬಿಜೆಪಿ ವಕ್ತಾರ ವಿವೇಕರೆಡ್ಡಿ ಹೇಳಿದ್ದಾರೆ. ಎಸ್ಐಟಿ ತನಿಖೆ ಮೇಲೆ ಅನುಮಾನ ಬರುತ್ತಿದೆ. ಹೀಗಾಗಿ ಸಿಬಿಐ ಇಲ್ಲವೇ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಿಎಂಗೆ ಮನವಿ ಬಳಿಕ ಹೈಕೋರ್ಟ್ ಮೊರೆ ಹೋಗಲಾಗುತ್ತದೆ. ಈ ನಡುವೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ವಿವೇಕರೆಡ್ಡಿ ಹೇಳಿದ್ದಾರೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Continue Reading

ಕ್ರೈಂ

Road Accident: ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

Road Accident: ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.

VISTARANEWS.COM


on

chikkaballapur road accident
Koo

ಚಿಕ್ಕಬಳ್ಳಾಪುರ: ಕಲ್ಲು ಕೂಚ (ಕಂಬ) ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ (Road Accident), ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು (laborers death) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ- ಗೌರಿಬಿದನೂರು (Chikkaballapur news) ಮಾರ್ಗದ ಕಣಿವೆ ಬಳಿ ದುರ್ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.

108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

Continue Reading

ಕ್ರೈಂ

Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

Road rage:ತನ್ನ ಕುಟುಂಬದೊಂದಿಗೆ ಮಹಿಳೆ ಚಲಾಯಿಸುತ್ತಿದ್ದ ಕಾರನ್ನು ಚೇಸ್‌ ಮಾಡಿಕೊಂಡು ಬಂದಿದ್ದ ಕಿಡಿಗೇಡಿಗಳು ಏಕಾಏಕಿ ಕಾರನ್ನು ಅಡ್ಡಗಟ್ಟಿ ಬಿಯರ್‌ ಬಾಟಲಿಗಳಿಂದ ದಾಳಿ ನಡೆಸಿದ್ದರು. ಸಂತ್ರಸ್ತರು ಈ ಘಟನೆ ಬಗ್ಗೆ ಕೇಸ್‌ ದಾಖಲಿಸಲು ನಿರಾಕರಿಸಿದ್ದು, ವೈರಲ್‌ ಆಗಿರುವ ವಿಡಿಯೋದ ಆರೋದ ಆಧಾರದಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್‌ ಆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ

VISTARANEWS.COM


on

Road rage
Koo

ಉತ್ತರಪ್ರದೇಶ: ನಡುರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಹಲ್ಲೆಗೆ(Road rage) ಯತ್ನಿಸಿರುವ ಘಟನೆಯೊಂದು ಉತ್ತರಪ್ರದೇಶದ ನೋಯ್ಡಾ(Noida)ದಲ್ಲಿ ನಡೆದಿದೆ. BMW ಕಾರಿನಲ್ಲಿ ದಂಪತಿ ಇದ್ದ ಇದ್ದ ಕಾರನ್ನು ಚೇಸ್‌ ಮಾಡಿದ್ದ ಪುಂಡರು ಅಡ್ಡಗಟ್ಟಿ ಪುಂಡಾಟ ಮೆರೆದಿದ್ದಾರೆ. ಘಟನೆ ಸಂಪೂರ್ಣ ದೃಶ್ಯ ಕಾರಿನ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಮೇ 2ರಂದು ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral video) ಆಗುತ್ತಿದು, ಅನೇಕರು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆ ವಿವರ:

ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರನ್ನು ಏವರ್‌ ಟೇಕ್‌ ಮಾಡಿದ BMW ಕಾರೊಂದು ಏಕಾಏಕಿ ಅಡ್ಡಗಟ್ಟಿತ್ತು. ಅದರಿಂದ ಕೆಲವು ಯುವಕರು ಕೆಳಗಿಳಿದು ಏಕಾಏಕಿ ಕಾರಿನತ್ತ ಬಾಟಲ್‌ಗಳನ್ನು ಎಸೆಯಲು ಶುರುಮಾಡಿದ್ದರು. ಇದರಿಂದ ಭೀತಿಗೊಂಡ ಸಂತ್ರಸ್ತ ಕುಟುಂಬ ಕಾರನ್ನು ಹಿಂದಕ್ಕೆ ತೆಗೆದುಕೊಂಡು ಟರ್ನ್‌ ಮಾಡಿ ವೇಗವಾಗಿ ಕಾರು ಚಲಾಯಿಸಿ ಪಾರಾಗಿದ್ದಾರೆ. ಈ ದೃಶ್ಯ ಕಾರಿನ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪೊಲೀಸರು ಹೇಳೋದೇನು?

ಪೊಲೀಸರ ಮಾಹಿತಿ ಪ್ರಕಾರ ಈ ಘಟನೆ IFSವಿಲ್ಲಾದ ಎದುರು ಇರುವ ನಾಲೆಡ್ಜ್‌ ಪಾರ್ಕ್‌ ಪೊಲೀಸ್‌ ಸ್ಟೇಷನ್‌ ಸಮೀಪ ನಡೆದಿದೆ. ತನ್ನ ಕುಟುಂಬದೊಂದಿಗೆ ಮಹಿಳೆ ಚಲಾಯಿಸುತ್ತಿದ್ದ ಕಾರನ್ನು ಚೇಸ್‌ ಮಾಡಿಕೊಂಡು ಬಂದಿದ್ದ ಕಿಡಿಗೇಡಿಗಳು ಏಕಾಏಕಿ ಕಾರನ್ನು ಅಡ್ಡಗಟ್ಟಿ ಬಿಯರ್‌ ಬಾಟಲಿಗಳಿಂದ ದಾಳಿ ನಡೆಸಿದ್ದರು. ಸಂತ್ರಸ್ತರು ಈ ಘಟನೆ ಬಗ್ಗೆ ಕೇಸ್‌ ದಾಖಲಿಸಲು ನಿರಾಕರಿಸಿದ್ದು, ವೈರಲ್‌ ಆಗಿರುವ ವಿಡಿಯೋದ ಆರೋದ ಆಧಾರದಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್‌ ಆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಹೆಚ್ಚುವರಿ ಡೆಪ್ಯೂಟಿ ಪೊಲೀಸ್‌ ಕಮಿಷನರ್‌ ಅಶೋಕ್‌ ಕುಮಾರ್‌ ಶರ್ಮಾ ಹೇಳಿದ್ದಾರೆ.

ತಿಂಗಳ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಪ್ರಕರಣ ದಾಖಲಾಗಿತ್ತು. ಸರ್ಜಾಪುರ ರಸ್ತೆಯಲ್ಲಿ ಮಾರ್ಚ್‌ 29ರ ರಾತ್ರಿ 10:40ರ ಸುಮಾರಿಗೆ ಕಾರಿನಲ್ಲಿ ‌ಪ್ರಯಾಣಿಸುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ ಬೈಕ್ ಸವಾರನೊಬ್ಬ ಕಿರಿಕ್ ಮಾಡಿದ್ದ. ಓವರ್‌ಟೇಕ್ (overtake) ಮಾಡುವ ವಿಚಾರಕ್ಕೆ ಗಲಾಟೆಯಾಗಿ ಕಿರಿಕ್ ಮಾಡಿದ್ದಾನೆ ಎನ್ನಲಾಗಿದೆ. ಓವರ್‌ಟೇಕ್‌ ವಿಚಾರದಲ್ಲಿ ತಗಾದೆ ಸೃಷ್ಟಿಯಾಗಿದ್ದು, ಯುವಕ ಕಾರಿನ ಹಿಂಬದಿಯಿಂದ ಸುಮಾರು 2 ಕಿಲೋಮೀಟರ್‌ನಷ್ಟು ಅಟ್ಟಿಸಿಕೊಂಡು ಬಂದಿದ್ದಾನೆ. ಸಿಗ್ನಲ್‌ನಲ್ಲಿ ಕಾರು ನಿಲ್ಲಿಸಿದಾಗ ಅದಕ್ಕೆ ಅಡ್ಡ ಬಂದು ನಿಲ್ಲಿಸಿ ಧಮಕಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಮಹಿಳೆ ಭಯದಿಂದ ಚೀರಿಕೊಂಡಿದ್ದಾರೆ. ನಂತರ ದಂಪತಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ದಂಪತಿ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಇದನ್ನೂ ಓದಿ:Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

ಅದಕ್ಕೂ ಮುನ್ನ ರಾತ್ರಿ ಸಮಯದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಚೇಸ್‌ ಮಾಡಿಕೊಂಡು ಬಂದು ಪುಂಡರು ಕಿರುಕುಳ ನೀಡಿದ್ದರು. ದಾರಿಯುದ್ದಕ್ಕೂ ಚೇಸ್ ಮಾಡಿದ್ದಲ್ಲದೇ ಬೈಕ್‌ ಮೂಲಕ ಕಾರನ್ನು ಸುತ್ತುವರಿದು ಟಾರ್ಚರ್ ನೀಡಿದ್ದರು. ಕಿಡಿಗೇಡಿಗಳು ಮಡಿವಾಳ, ಸೆಂಟ್ ಜಾನ್ಸ್ ಅಲ್ಲಿಂದ ಕೋರಮಂಗಲವರೆಗೂ ಹಿಂಬಾಲಿಸಿಕೊಂಡು ಬಂದಿದ್ದಾರೆ. ಇದರಿಂದ ಆತಂಕಗೊಂಡ ಮಹಿಳೆಯರು ಸಹಾಯಕ್ಕಾಗಿ ಕೂಡಲೇ 112ಗೆ ಸಹಾಯವಾಣಿಗೆ ಕರೆ ಮಾಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಲರ್ಟ್‌ ಆದ ಪೊಲೀಸರು ಯುವತಿಯರು ಇದ್ದ ಜಾಗಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡೊಡನೆ ಪುಂಡರು ಎಸ್ಕೇಪ್ ಆಗಿದ್ದರು.

Continue Reading

ಹಾಸನ

Prajwal Revanna Case: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ, ಇಲ್ಲದಿದ್ದರೆ ಕ್ರಮ: SIT ಮುಖ್ಯಸ್ಥರ ಖಡಕ್‌ ವಾರ್ನಿಂಗ್

Prajwal Revanna Case: ಪ್ರಜ್ವಲ್‌ ವಿಡಿಯೊ ಪ್ರಕರಣ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ ಎಂದೂ ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

Prajwal Revanna Case Delete vulgar video and avoid legal action says SIT chief
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

ಅತ್ಯಾಚಾರ ಸಂತ್ರಸ್ತೆ ಅಪಹರಣ ಕೇಸ್; ರೇವಣ್ಣ ಮುಂದಿರುವ ಆಯ್ಕೆಗಳೇನು?

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ಸಂಬಂಧ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಿಎಂ ಎಚ್.ಡಿ. ರೇವಣ್ಣ (HD Revanna) ವಿರುದ್ಧದ ಕೇಸ್‌ಗೆ ಸಂಬಂಧಪಟ್ಟಂತೆ ಅವರಿಗೆ ಮುಂದೆ ಇರುವ ಆಯ್ಕೆ ಏನು ಎಂಬ ಪ್ರಶ್ನೆ ಎದುರಾಗಿದೆ. ಅಲ್ಲದೆ, ತನ್ನ ಅಪಹರಣ ಮಾಡಿಸಿದ್ದು ರೇವಣ್ಣ ಅವರೇ ಎಂದು ಸಂತ್ರಸ್ತೆ ಬಾಯಿಬಿಟ್ಟರೆ ಪರಪ್ಪನ ಅಗ್ರಹಾರವೇ ಗತಿಯಾಗಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಎಚ್.ಡಿ. ರೇವಣ್ಣ ಅವರ ಮುಂದೆ ಇರುವ ಆಯ್ಕೆ ಎಂದರೆ, ಎಸ್ಐಟಿ ಕಸ್ಟಡಿ ಮುಗಿಯುವವರೆಗೂ ತನಿಖೆಯನ್ನು ಎದುರಿಸುವುದಾಗಿದೆ. ಎಸ್ಐಟಿ ಕಸ್ಟಡಿ ಅಂತ್ಯವಾಗುವ ವೇಳೆಗೆ ಜಾಮೀನು ಕೋರಿ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ಸಂತ್ರಸ್ತೆಯನ್ನು ನಾನು ಕಿಡ್ನ್ಯಾಪ್‌ ಮಾಡಿಲ್ಲ ಎಂದು ವಾದ ಮಂಡಿಸುವುದು. ಇದಕ್ಕೆ ಪೂರಕ ಸಾಕ್ಷ್ಯಾಧಾರವನ್ನು ಒದಗಿಸಲು ಪ್ರಯತ್ನ ಮಾಡುವುದು. ಈ ಮೂಲಕ ನ್ಯಾಯಾಲಯಕ್ಕೆ ಮನವರಿಕೆ ಮಾಡಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸದಂತೆ ಜಾಮೀನು ಪಡೆದು ಬಚಾವ್ ಆಗುವ ಲೆಕ್ಕಾಚಾರಗಳು ಸಹ ನಡೆದಿವೆ. ಹಾಗಾಗಿ ಈಗ ಅಪಹರಣಕ್ಕೊಳಗಾಗಿದ್ದಾರೆ ಎಂಬ ಸಂತ್ರಸ್ತೆಯು ನೀಡುವ ಹೇಳಿಕೆ ಎಚ್.ಡಿ. ರೇವಣ್ಣ ಅವರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಅವರ ಹೇಳಿಕೆ ವಿರುದ್ಧವಾಗಿದ್ದರೆ ರೇವಣ್ಣ ಅವರಿಗೆ ಜೈಲೇ ಗತಿಯಾಗಿದೆ.

ಕೋರ್ಟ್‌ನಲ್ಲಿ ವಿಫಲವಾದರೆ ಜೈಲು ಪಕ್ಕಾ

ಇನ್ನು ಎಚ್‌.ಡಿ. ರೇವಣ್ಣ ಅವರು ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲರಾದಲ್ಲಿ ಹಾಗೂ ರೇವಣ್ಣ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂಬುದಾಗಿ ಕೋರ್ಟ್ ನಿರ್ಧಾರಕ್ಕೆ ಬಂದಲ್ಲಿ ಸದ್ಯಕ್ಕೆ ಜೈಲುವಾಸ ಆಗಲಿದೆ. ಬಳಿಕ ಮೇಲ್ದರ್ಜೆಯ ಕೋರ್ಟ್‌ಗೆ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು.

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ.

ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ. ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.

ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ (HD Revanna) ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್‌ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.

ಅಪಹರಣ ಕೇಸ್‌ ಬಗ್ಗೆ ಎಚ್.ಡಿ. ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು. ಸತೀಶ್ ಬಾಬು ಪರಿಚಯವಿದ್ದಾರಾ? ಅವರ ಮೂಲಕ ಕಿಡ್ನ್ಯಾಪ್ ಮಾಡಿಸಲು ನೀವೇ ತಿಳಿಸಿದ್ದಿರಾ? ಅಪಹರಣ ಮಾಡಿದ್ದರ ಹಿಂದಿನ ಉದ್ದೇಶ ಏನು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಶ್ನೆ ಮಾಡಿ ಉತ್ತರವನ್ನು ಪಡೆದುಕೊಂಡಿದ್ದರು. ಕೇಸ್‌ಗೆ ಸಂಬಂಧಿಸಿ ಕೆಲವು ಸಾಂದರ್ಭಿಕ ಪ್ರಶ್ನೆಗಳಿಗೆ ಹೇಳಿಕೆ ಪಡೆದು ಅದನ್ನು ಪೇಪರ್‌ನಲ್ಲಿ ನಮೂದಿಸಿ ಸ್ವ – ಇಚ್ಛಾ ಹೇಳಿಕೆಗೆ ಸಹಿ ಮಾಡುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಸಹಿ ಹಾಕುವುದಿಲ್ಲ ಎಂದ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

ಅಪಹರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ. ಆದರೂ ನೀವುಗಳು ಬರೆದುಕೊಂಡಿದ್ದೀರಿ. ನಾನೇ ಮಾಡಿಸಿರುವ ಹಾಗೆ ಬರೆದುಕೊಂಡಿದ್ದೀರಿ. ನಾನು ಯಾವ ಹೇಳಿಕೆಗೂ ಸಹಿ ಹಾಕಲ್ಲ ಎಂದು ರೇವಣ್ಣ ನಿರಾಕರಣೆ ಮಾಡಿದ್ದಾರೆ.

Continue Reading
Advertisement
Salman Khan
ಸಿನಿಮಾ8 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ11 mins ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ12 mins ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Narendra Modi
ದೇಶ19 mins ago

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Job Alert
ಉದ್ಯೋಗ52 mins ago

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

LIQUID NITROGEN
ಬೆಂಗಳೂರು54 mins ago

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

IPL 2024
ಕ್ರೀಡೆ58 mins ago

IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

prajwal ravanna case dk shivakumar poster
ಪ್ರಮುಖ ಸುದ್ದಿ1 hour ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Naxal activities
ದೇಶ2 hours ago

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Rohit Sharma
ಕ್ರೀಡೆ2 hours ago

Rohit Sharma: ರೋಹಿತ್ ಶರ್ಮ​ ಕಣ್ಣೀರಿಗೆ ಅಸಲಿ ಕಾರಣ ಇದಂತೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ17 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ18 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ18 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌