World Cup 2023: ವಿಶ್ವಕಪ್‌ ಕ್ರಿಕೆಟ್‌ ಬೆಟ್ಟಿಂಗ್‌; ಸಿಸಿಬಿ ದಾಳಿ ವೇಳೆ ಚಿನ್ನದ ಬಿಸ್ಕೆಟ್‌ಗಳು ಪತ್ತೆ - Vistara News

ಕರ್ನಾಟಕ

World Cup 2023: ವಿಶ್ವಕಪ್‌ ಕ್ರಿಕೆಟ್‌ ಬೆಟ್ಟಿಂಗ್‌; ಸಿಸಿಬಿ ದಾಳಿ ವೇಳೆ ಚಿನ್ನದ ಬಿಸ್ಕೆಟ್‌ಗಳು ಪತ್ತೆ

Betting Case : ಆನ್‌ಲೈನ್‌ ವೆಬ್‌ಸೈಟ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ (world Cup 2023) ನಡೆಸುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

VISTARANEWS.COM


on

CCB raids cricket betting two arrested
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ (World Cup 2023) ಪಂದ್ಯಕ್ಕೆ ಬೆಟ್ಟಿಂಗ್‌ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ಆರ್‌.ಆರ್ ನಗರದ ಫ್ಲಾಟ್ ಒಂದರ ಮೇಲೆ ದಾಳಿ ಮಾಡಿದರು. ದಾಳಿ ವೇಳೆ ಒಂದು ಕೆ.ಜಿಗೂ ಹೆಚ್ಚು ಚಿನ್ನ ಹಾಗೂ ಲ್ಯಾಪ್ ಟಾಪ್, ಮೊಬೈಲ್‌ಗಳು ಪತ್ತೆ (Betting Case) ಆಗಿವೆ.

ಸಾಕೇತ್ ಮತ್ತು ರಿಷಬ್ ಎಂಬುವರನ್ನು ವಶಕ್ಕೆ ಪಡೆದು ಸಿಸಿಬಿ ಅಧಿಕಾರಿಗಳು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಇವರಿಬ್ಬರು ಆನ್‌ಲೈನ್ ವೆಬ್ ಸೈಟ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು. ಹೀಗಾಗಿ ಫ್ಲಾಟ್ ಪರಿಶೀಲನೆ ಮಾಡಿದಾಗ ಒಂದು ಕೆ.ಜಿ ಚಿನ್ನ ಪತ್ತೆಯಾಗಿದೆ. ನೂರು ಗ್ರಾಂ ತೂಕದ ಹತ್ತು ಚಿನ್ನದ ಬಿಸ್ಕೆಟ್ಸ್ ಸಿಕ್ಕಿದೆ. ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಗದ ಹಿನ್ನೆಲೆಯಲ್ಲಿ ಎಲ್ಲವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಲೇಜು ಆವರಣದಲ್ಲಿದ್ದ ಶ್ರೀಗಂಧ ಮರ ಕಳ್ಳತನ

ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಮರ ಕಳ್ಳತನವಾಗಿದೆ. ಶೇಷಾದ್ರಿ ರಸ್ತೆಯ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿದ್ದ ಶ್ರೀಗಂಧ ಮರವನ್ನು ಕಡಿದು, ಕಳ್ಳತನ ಮಾಡಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಸದಾಶಿವಮೂರ್ತಿ ದೂರು ನೀಡಿದ್ದಾರೆ. ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಅತ್ತೆ ಮನೆಗೆ ಕನ್ನ ಹಾಕಿದ ಅಳಿಯ! ಉಂಡು ಹೋದ ಕೊಂಡು ಹೋದ

ಬೆಂಗಳೂರು: ಅತ್ತೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಒಳಗೆ ನುಗ್ಗಿದ ಖದೀಮ ಅಳಿಯ ಚಿನ್ನಾಭರಣವನ್ನೆಲ್ಲ ಲೂಟಿ ಮಾಡಿ ಪರಾರಿ (Theft Case) ಆಗಿದ್ದ. ಇದೀಗ ಚಲಾಕಿ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಕುಮಾರ್ ಬಂಧಿತ ಆರೋಪಿ.

ರೆಜಿನಾ ಎಂಬುವವರ ಮನೆಯಲ್ಲಿ ಪ್ರದೀಪ್‌ ಕುಮಾರ್‌ ಕಳ್ಳತನ ಮಾಡಿ ಜೈಲು ಕಂಬಿ ಎಣಿಸುವಂತಾಗಿದೆ. ಈ ಪ್ರದೀಪ್‌ ಕುಮಾರ್‌ ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಾಳನ್ನು ಒಂದೂವರೆ ವರ್ಷ ಪ್ರೀತಿಸಿ ಬಳಿಕ ಆಕೆಯನ್ನು ಮರುಳು ಮಾಡಿ ಕರೆದುಕೊಂಡು ಹೋಗಿದ್ದ. ದೂರು ದಾಖಲಾಗುತ್ತಿದ್ದಂತೆ ಮಾವನ ಮನೆಯನ್ನು ಸೇರಿದ್ದ.

theft case Pradeep kumar
ಅತ್ತೆ ಮನೆಯಲ್ಲೇ ಕಳ್ಳತನ ಮಾಡಿದ್ದ ಪ್ರದೀಪ್‌ ಕುಮಾರ್‌

ಒಂದೂವರೆ ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದಾನೆ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು ಪರಾರಿ ಆಗುತ್ತಿದ್ದಾಗ ಅಕ್ಕ ಪಕ್ಕದ ನಿವಾಸಿಗಳು ನೋಡಿದ್ದರು.

ಇದನ್ನೂ ಓದಿ: Aishwarya Rai: ನಾವು ತುಂಬ ಮಿಸ್‌ ಮಾಡಿಕೊಳ್ಳುತ್ತೇವೆ ಅಪ್ಪ; ಐಶ್ವರ್ಯಾ ರೈ ಭಾವುಕ ಪೋಸ್ಟ್‌!

ಕೂಡಲೇ ಸ್ಥಳೀಯರು ಪ್ರಶ್ನೆ ಮಾಡಿದಾಗ ನಾನು ಇವರ ಸಂಬಂಧಿ ಎಂದು ಹೇಳಿ ಕಾಲ್ಕಿತ್ತಿದ್ದ. ಈ ವೇಳೆ ಸ್ಥಳೀಯರು ಆತನ ಫೋಟೊ ತೆಗೆದು ರೆಜಿನಾ ಅವರಿಗೆ ಕರೆ ಮಾಡಿದ್ದರು. ಆದರೆ ರೆಜಿನಾ ಅವರ ಫೋನ್‌ ಕಾಲ್‌ ಸಂಪರ್ಕ ಸಾಧ್ಯವಾಗಿರಲಿಲ್ಲ. ನಂತರ ಕನ್ಯಾಕುಮಾರಿಯಿಂದ ವಾಪಾಸ್ ಬಂದಾಗ ರೆಜಿನಾ ಅವರಿಗೆ ಶಾಕ್‌ ಆಗಿತ್ತ. ಯಾಕೆಂದರೆ ಬೀಗ ಹಾಕಿದ್ದ ಮನೆ ಬಾಗಿಲು ಒಡೆದಿತ್ತು. ಅನುಮಾನಗೊಂಡು ನೋಡಿದಾಗ ಮನೆಯಲ್ಲಿದ್ದ ಚಿನ್ನಾಭರಣ ನಗದು ಸೇರಿ ಒಟ್ಟು 40 ಲಕ್ಷ ರೂ. ಕಳ್ಳತನವಾಗಿತ್ತು.

pradeep kumar
pradeep kumar

ಕಳ್ಳತನವಾಗಿರುವುದು ಗೊತ್ತಾದ ಕೂಡಲೇ ಅಕ್ಕಪಕ್ಕದ ನಿವಾಸಿಗಳು ತಾವು ನೋಡಿರುವುದಾಗಿ ಹೇಳಿ, ಫೋಟೊ ತೋರಿಸಿದ್ದಾರೆ. ಕಳ್ಳತನ ಮಾಡಿದ್ದ ಸ್ವಂತ ಅಳಿಯನೇ ಎಂದು ತಿಳಿದ ಕೂಡಲೇ ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಅತ್ತೆ ರೆಜಿನಾ ದೂರು ದಾಖಲಿಸಿದ್ದಾರೆ.

ಇನ್ನು ಮಗಳು ಎಲ್ಲಿದ್ದಾಳೆಂದು ಎಂಬುದು ರೆಜಿನಾ ಅವರಿಗೆ ತಿಳಿದಿಲ್ಲವಂತೆ. ಸದ್ಯ ಈ ಸಂಬಂಧ ಅಳಿಯನ ವಿರುದ್ಧ ದೂರು ದಾಖಲಿಸಿದ್ದಾರೆ. ಹಲಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಅಡವಿಟ್ಟ ಚಿನ್ನವನ್ನೇ ಕದ್ದ ಮ್ಯಾನೇಜರ್‌!

ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನವನ್ನು ಕದ್ದು ನಂತರೆ ಬೇರೆಡೆ ಅಡವಿಟ್ಟ ವ್ಯಕ್ತಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ನಿಧಿ ಗೋಲ್ಡ್ ಫೈನಾನ್ಸ್‌ನ ಮ್ಯಾನೇಜರ್ ಪ್ರಸನ್ನ ಬಂಧಿತ ಆರೋಪಿ.

ನಿಧಿ ಗೋಲ್ಡ್ ಫೈನಾನ್ಸ್‌ನಲ್ಲಿ ಅಡಮಾನವಿಟ್ಟಿದ್ದ ಒಂದೂವರೆ ಕೆ.ಜಿ ಚಿನ್ನ ದುರುಪಯೋಗ ಪಡಿಸಿಕೊಂಡಿದ್ದಾನೆ. ಗ್ರಾಹಕರು ಅಡವಿಟ್ಟ ಚಿನ್ನವನ್ನು ಮಣಪ್ಪುರಮ್ ಹಾಗೂ ಮುತ್ತೂಟ್ ಫೈನಾನ್ಸ್‌ನಲ್ಲಿ ಅಡಮಾನ ಇಟ್ಟಿದ್ದಾನೆ. ಗ್ರಾಹಕರು ಸಾಲ ತೀರಿಸಿ ಚಿನ್ನ ವಾಪಸ್ ಕೇಳಿದಾಗ ಮ್ಯಾನೇಜರ್‌ನ ಕಳ್ಳಾಟ ಬಯಲಾಗಿದೆ. ಬಂಧಿತನಿಂದ ಒಂದೂವರೆ ಕೆ.ಜಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading

ಬೆಂಗಳೂರು

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ.

VISTARANEWS.COM


on

By

Kichcha Sudeeps mother Saroja passes away
Koo

ಬೆಂಗಳೂರು: ನಟ ಕಿಚ್ಚ ಸುದೀಪ್‌ (Kichcha Sudeepa) ತಾಯಿ ಸರೋಜಾ ಅವರು ನಿಧನರಾಗಿದ್ದಾರೆ. ನಿನ್ನೆ ಶನಿವಾರ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ 07.04 ನಿಮಿಷಕ್ಕೆ ಮೃತಪಟ್ಟಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

Kichcha Sudeeps mother Saroja passes away

ನಿನ್ನೆಯಷ್ಟೆ ಬಿಗ್ ಬಾಸ್ ವೇದಿಕೆ ಮೇಲೆ ತಾಯಿ ಮಹತ್ವದ ಬಗ್ಗೆ ಸುದೀಪ್‌ ಮಾತನಾಡಿದ್ದರು. ಚೈತ್ರಾ ಕುಂದಾಪುರ ಜಗದೀಶ್ ವಿರುದ್ಧ ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಅನ್ನೋ ಪದ ಬಳಸಿದ್ದರು. ಅದಕ್ಕೆ ಖಡಕ್ ಆಗಿ ಉತ್ತರಿಸಿದ ಸುದೀಪ್‌, ನೀವು ಅಂದಿರುವುದು ಅಪ್ಪನಿಗಲ್ಲ ಅದು ತಾಯಿಗೆ ಮಾಡಿದ ಅವಮಾನ ಅಂತ ಆಕ್ರೋಶದಲ್ಲಿ ಅರಿವು ಮೂಡಿಸಿದ್ದರು. ನಿನ್ನೆ ಎಪಿಸೋಡ್‌ನಲ್ಲಿ ಚೈತ್ರಗೆ ಕ್ಲಾಸ್ ತಗೆದುಕೊಂಡಿದ್ದರು.

ಸುದೀಪ್ ತಾಯಿ ನಿಧನ ಸುದ್ದಿಗೆ ಚಿತ್ರರಂಗ ಹಾಗು ಫ್ಯಾನ್ಸ್ ಕಂಬನಿ ಮಿಡಿದಿದೆ. ಸುದೀಪ್ ತಾಯಿ ನಿಧನದ ಹಿನ್ನೆಲೆ ಜಗದೀಶ್ ಸುದ್ದಿಗೋಷ್ಟಿ ರದ್ದಾಗಿದೆ. ಸುದೀಪ್ ಅವರಿಗೆ ಜಗದೀಶ್‌ ಸಾಂತ್ವನ ಹೇಳಿದ್ದಾರೆ.

Continue Reading

ಗದಗ

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Missing Case : ಬಸ್‌ ನಿಲ್ದಾಣದಲ್ಲಿ ತಾಯಿಯಿಂದ ದೂರಾಗಿದ್ದ ಮಗುವೊಂದು ಪೊಲೀಸರ ಸಹಾಯದಿಂದ ವಾಪಸ್‌ ತಾಯಿಯ ಮಡಿಲು ಸೇರಿದೆ.

VISTARANEWS.COM


on

By

missing case
Koo

ಗದಗ: ಇತ್ತೀಗಷ್ಟೇ ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗುವೊಂದು ಹೊರ ಬಿದ್ದಿತ್ತು. ತಕ್ಷಣ ಚೈನ್ ಮೂಲಕ ರೈಲು ನಿಲ್ಲಿಸಿದ ಪುಟ್ಟ ಬಾಲಕಿಯ ತಂದೆ, ಸುಮಾರು 16 ಕಿಮೀ ಹಿಂದೆ ಓಡಿ, ತನ್ನ ಮಗಳು ಬಿದ್ದ ಜಾಗವನ್ನು ಪತ್ತೆ ಮಾಡಿದ್ದ. ಕಗ್ಗತ್ತಲಿನ ನಿರ್ಜನ ಪ್ರದೇಶದಲ್ಲಿ ತನ್ನ ಮಗುವಿನ ಆರ್ತನಾದ ಕೇಳಿ, ತನ್ನ ಕರುಳ ಬಳ್ಳಿಯನ್ನು ತಾಯಿ ಒಡಲಲ್ಲಿ ಸೇರಿಸಿದ್ದ. ಕರುಳಕುಡಿಯ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ ಅಂದರೂ, ಇಡೀ ಭಾರತವೇ ಈ ತಂದೆ ಮಗಳ ಕಥೆಗೆ ಕಂಬನಿ ಮಿಡಿದಿತ್ತು. ಇದೀಗ ಆ ಘಟನೆ ಮಾಸುವ ಮುನ್ನವೇ, ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ತಾಯಿಯಿಂದ ದೂರವಾಗಿದ್ದ ಐದು ವರ್ಷದ ಪುಟ್ಟ ಕಂದಮ್ಮ (missing case) ಮತ್ತೆ ತಾಯಿಯ ಮಡಿಲು ಸೇರಿದ್ದಾಳೆ.

ಹೌದು, ಚಿತ್ರದುರ್ಗ ಮೂಲದ ತಾಯಿ ಶಶಿಕಲಾ,(ಊರು ಹಾಗೂ ತಾಯಿಯ ಹೆಸರು ಬದಲಾಯಿಸಲಾಗಿದೆ) ತನ್ನ ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಸಂಬಂಧಿ ಜತೆಗೂಡಿ, ಕಳೆದ ಎರಡು ದಿನಗಳ ಹಿಂದೆ, ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಆಗಮಿಸಿದ್ದರು. ದೇವರ ದರ್ಶನ ಮುಗಿಸಿ ಮರಳಿ ಮಧ್ಯಾಹ್ನದ ವೇಳೆಗೆ ನರಗುಂದ ಪಟ್ಟಣದ ಮೂಲಕ ಹೊಸಪೇಟೆಯ ಹುಲಿಗೆಮ್ಮ ದೇವಿ ದರ್ಶನಕ್ಕೆ ತೆರಳುವವರಿದ್ದರು. ನರಗುಂದ ಪಟ್ಟಣಕ್ಕೆ ಆಗಮಿಸಿದ್ದ, ತಾಯಿ ಶಶಿಕಲಾ ಹಾಗೂ ಮಕ್ಕಳು, ಗದಗ ಬಸ್ ಹತ್ತಿದ್ದರು. ಹುಣ್ಣಿಮೆ ಹತ್ತಿರವಿದ್ದ ಕಾರಣ, ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಬಸ್ಸುಗಳು ಸಾಕಷ್ಟು ಗಿಜಿಗುಡುತ್ತಿದ್ದವು.

ಇದೇ ವೇಳೆ, ತಾಯಿ ಶಶಿಕಲಾ ಹಾಗೂ ಮಕ್ಕಳು ಗದಗ ನಗರಕ್ಕೆ ತೆರಳುವ ಬಸ್ಸನ್ನ ಹತ್ತಿದ್ದಾರೆ. ಬಸ್ಸಿನೊಳಗೆ ಸಾಕಷ್ಟು ಪ್ರಯಾಣಿಕರಿದ್ದ ಹಿನ್ನೆಲೆ, ನಾಲ್ಕು ಹೆಣ್ಣುಮಕ್ಕಳಲ್ಲಿ ಒಂದಿಬ್ಬರು ಮುಂದಿನ ಸೀಟ್‌ನಲ್ಲಿ ತಾಯಿ ಶಶಿಕಲಾ ಕಣ್ಣಿಗೆ ಕಂಡಿದ್ದಾರೆ. ಹೀಗಾಗಿ ತನ್ನ ನಾಲ್ಕೂ ಮಕ್ಕಳು ನನ್ನ ಜತೆಗೆ ಬಸ್ಸಿನಲ್ಲಿದ್ದಾರೆ ಎಂದು ಭಾವಿಸಿದ ತಾಯಿ ಶಶಿಕಲಾ, ನರಗುಂದದಿಂದ ಗದಗ ಬಸ್ ನಿಲ್ದಾಣದವರೆಗೂ ಪ್ರಯಾಣ ಮುಂದುವರೆಸಿದ್ದಳು. ಇನ್ನೇನು ಗದಗ ಬಸ್ ನಿಲ್ದಾಣದಲ್ಲಿ ತನ್ನ ಮಕ್ಕಳನ್ನ ಬಸ್ಸಿನಿಂದ ಇಳಿಸಿಕೊಳ್ಳುವಾಗ, ನಾಲ್ಕು ಮಕ್ಕಳಲ್ಲಿ ಮೂವರಷ್ಟೇ ಬಸ್ಸಿನಲ್ಲಿ ತನ್ನ ಜತೆಗೆ ಬಂದಿರುವುದು ಎಂದು ಗೊತ್ತಾಗಿದೆ. ತಕ್ಷಣ ಅಳುತ್ತಾ, ಗೋಗರೆಯುತ್ತಾ ಗದಗ ನಗರದ ಶಹರ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಮೂವರು ಮಕ್ಕಳಲ್ಲಿ, ಕೊನೆಯ ಐದು ವರ್ಷದ ಮಗಳು ಸ್ನೇಹ (ಮಗುವಿನ ಹೆಸರು ಬದಲಾಯಿಸಲಾಗಿದೆ) ಕಾಣ್ತಿಲ್ಲ ಎಂದು ಪೊಲೀಸರೆದುರು ತನ್ನ ಕರುಳಬಳ್ಳಿಯ ಕಥೆ ವಿವರಿಸಿದ್ದಳು.

Missing case
Missing case

ತನ್ನ ನಾಲ್ಕು ಮಕ್ಕಳಲ್ಲಿ ಓರ್ವ ಮಗಳು ಸ್ನೇಹಾ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳೆದುಹೋಗಿದ್ದಳು. ಹೌದು, ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ, ಬಸ್ ಅನ್ನು ಹತ್ತುವಾಗ, ಐದು ವರ್ಷದ ಪುಟ್ಟ ಬಾಲಕಿ ಸ್ನೇಹ ಗದ್ದಲದ ನಡುವೆ ಬಸ್ ಹತ್ತಲು ಆಗದೇ, ನಿಲ್ದಾಣದಲ್ಲಿಯೇ ಉಳಿದುಕೊಂಡುಬಿಟ್ಟಿದ್ದಳು. ತನ್ನ ನಾಲ್ಕೂ ಮಕ್ಕಳು ತನ್ನ ಜತೆಯೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ತಿಳಿದಿದ್ದ ತಾಯಿ ಶಶಿಕಲಾಗೆ, ಕೊನೆಯ ಪುಟ್ಟ ಮಗಳು ಸ್ನೇಹ, ತನ್ನ ಜೊತೆಗೆ ಪ್ರಯಾಣಿಸುತ್ತಿಲ್ಲ ಅನ್ನೋದು ಗೊತ್ತಾಗಲೇ ಇಲ್ಲ. ಹೀಗೆ, ತನ್ನ ತಾಯಿ ಹಾಗೂ ತನ್ನ ಅಕ್ಕಂದಿರನ್ನು ಕಳೆದುಕೊಂಡಿದ್ದ, ಪುಟ್ಟ ಬಾಲಕಿ ಸ್ನೇಹ, ಸುಮಾರು ಎರಡು ಗಂಟೆಗಳ ಕಾಲ ನರಗುಂದದ ಬಸ್ ನಿಲ್ದಾಣದಲ್ಲಿ ಅಳುತ್ತಾ ಕುಳಿತಿದ್ದಳು.

ಇದನ್ನು ಗಮನಿಸಿದ ಸ್ಥಳೀಯ ಕಾಲೇಜು ವಿದ್ಯಾರ್ಥಿಯೋರ್ವ, ಪುಟ್ಟ ಮಗುವಿನ ಆಕ್ರಂದನ ನೋಡಲಾರದೇ, ಸ್ಥಳೀಯ ಪೊಲೀಸ್ ಠಾಣೆಗೆ ಬಾಲಕಿಯನ್ನು ಕರೆತಂದು ಪೊಲೀಸರಿಗೆ ಒಪ್ಪಿಸಿದ್ದ. ತಡಮಾಡದ ಪೊಲೀಸ್ ಪಡೆ, ತಮ್ಮ ವಾಟ್ಸಪ್ ಗ್ರೂಪ್‌ಗಳಲ್ಲಿ ಮಗು ಮಿಸ್ಸಿಂಗ್ ಆಗಿರುವ ಮಾಹಿತಿಯನ್ನ, ಜಿಲ್ಲೆಯ ಎಲ್ಲ ಸ್ಟೇಷನ್‌ಗಳಿಗೂ ರವಾನಿಸಿತ್ತು. ಇದೇ ಸಮಯಕ್ಕೆ ಗದಗ ನಗರದ ಶಹರ ಪೊಲೀಸ್ ಠಾಣೆಗೂ, ತಾಯಿ, ಮಗು ಕಳೆದುಕೊಂಡ ಬಗ್ಗೆ, ಇತ್ತ, ಮಗು ತನ್ನವರನ್ನ ಕಳೆದುಕೊಂಡ ಬಗ್ಗೆ ಎರೆಡೂ ಕಡೆಯಿಂದಲೂ ಕರುಳ ಬಳ್ಳಿಯ ದೂರುಗಳು ಬಂದು ಮುಟ್ಟಿದ್ದವು.

ವಾಟ್ಸಪ್ ಮೂಲಕ ಬಂದ ಮಗುವಿನ ಫೋಟೋವನ್ನ ಪೊಲೀಸರು, ತಾಯಿ ಶಶಿಕಲಾಗೆ ತೋರಿಸಿ, ಇವಳೇನಾ ನೋಡು ನಿನ್ನ ಮಗಳು ಎಂದಾಗ, ತಾಯಿಗೆ ಮತ್ತೇ ಪುನರ್ಜನ್ಮ ಬಂದಂತಾಗಿತ್ತು. ಇತ್ತ ನರಗುಂದ ಪೊಲೀಸ್ ಠಾಣೆಯಲ್ಲಿದ್ದ ಪುಟ್ಟ ಮಗು ಸ್ನೇಹಳಿಗೂ ನಿನ್ನ ತಾಯಿ, ನಿನ್ನ ಅಕ್ಕಂದಿರು ನಿನ್ನ ಕರೆದುಕೊಂಡು ಹೋಗೋಕೆ ಇಲ್ಲಿಗೆ ಬರುತ್ತಿದ್ದಾರೆ ಅಂದಾಗ, ಅಕ್ಷರಶಃ ಮಗು ಕಣ್ಣೀರಿನಲ್ಲೇ, ಸಂಭ್ರಮಿಸಿ, ಮುಗಿಲೆತ್ತರದ ತನ್ನ ದುಃಖಕ್ಕೆ ಧಣಿವರಿಸಿದ್ದಳು. ಇತ್ತ 60 ಕಿಲೋ. ಮೀಟರ್ ದೂರದಷ್ಟು ತನ್ನ ಮಗುವನ್ನ ಬಿಟ್ಟು ಹೋಗಿದ್ದ, ತಾಯಿ ಶಶಿಕಲಾಗೆ, ಮತ್ತೇ ಮರಳಿ ತನ್ನ ಮಗಳ ಅಪ್ಪುಗೆ ಪಡೆಯೋಕೆ, ನರಗುಂದ ಪೊಲೀಸ್ ಠಾಣೆ ಆರು ಸಾವಿರ ಕೀಲೋಮೀಟರ್ ನಷ್ಟು ದೂರವಾದಂತೆ ಭಾಸವಾಗಿತ್ತು.

ಅದೇನೆ‌ ಇರಲಿ. ಕೊನೆಗೂ ಪೊಲೀಸರ ಸುರಕ್ಷತೆಯಲ್ಲಿದ್ದ ಮಗು ಸ್ನೇಹಾಳನ್ನು ತಾಯಿ ಶಶಿಕಲಾಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ. ಅದೇನೆ ಇರಲಿ, ಪಾಲಕರೇ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇರಲಿ ಎಂದು ಹೇಳುತ್ತಾ, ಬಾಲಕಿಯನ್ನ ಠಾಣೆಗೆ ಒಪ್ಪಿಸಿದ ಕಾಲೇಜು ವಿದ್ಯಾರ್ಥಿ ಹಾಗೂ ಇದೆಲ್ಲದರ ಜವಾಬ್ದಾರಿ ಹೊತ್ತಿದ್ದ ಖಾಕಿ ಪಡೆಗೆ ತಾಯಿ ಶಶಿಕಲಾ, ಪುಟ್ಟ ಮಗು ಸ್ನೇಹಾ ಮತ್ತು ಆಕೆಯ ಅಕ್ಕಂದಿರು ಕೃತಜ್ಞನತೆ ಸಲ್ಲಿಸಿದರು.

Continue Reading

ಬೆಂಗಳೂರು

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

BMRCL : ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರಕಲೆ ಬಿಡಿಸುವ “ಗೋಡೆ ಬೆಂಗಳೂರು” (Gode Bengaluru) ಚಟುವಟಿಕೆಯನ್ನು ಅನ್‌ಬಾಕ್ಸಿಂಗ್‌ ಬೆಂಗಳೂರು ಘೋಷಿಸಿದೆ.

VISTARANEWS.COM


on

By

Gode Bengaluru
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಗೋಡೆಗಳನ್ನು ಚಿತ್ರಗಳಿಂದ ಕಂಗೊಳಿಸುವಂತೆ ಮಾಡುವ ಉದ್ದೇಶದಿಂದ ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ “ಗೋಡೆ ಬೆಂಗಳೂರು” ಶೀರ್ಷಿಕೆಯಡಿ (Gode Bengaluru) ಗೋಡೆಗಳ ಮೇಲೆ ಚಿತ್ರಬಿಡುಸುವ ಉಪಕ್ರಮವನ್ನು ಘೋಷಿಸಿದೆ.

ಬೆಂಗಳೂರಿನಾದ್ಯಂತ ಇರುವ ಗೋಡೆಗಳ ಮೇಲೆ ನಮ್ಮ ಕಲೆ, ಸಂಸ್ಕೃತಿ, ಆಚರಣೆ ಇತ್ಯಾದಿ ಸೊಬಗನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸುವ ಚಟುವಟಿಕೆ ನಡೆಸುತ್ತಿದೆ. ಸರ್ಕಾರದ ಸಹಭಾಗಿತ್ವದಲ್ಲಿ ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ಅದ್ಧೂರಿಯಿಂದ ಅನ್‌ಬಾಕ್ಸಿಂಗ್‌ ಫೌಂಡೇಷನ್‌ ಆಚರಿಸಲು ಸಿದ್ಧತೆ ನಡೆಸುತ್ತಿದೆ.

Gode Bengaluru
Gode Bengaluru

ಇದರ ಭಾಗವಾಗಿ “ಗೋಡೆ ಬೆಂಗಳೂರು” ಚಟುವಟಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಬಿಎಂಆರ್‌ಸಿಎಲ್‌ನ ಸಹಯೋಗದಿಂದಿಗೆ “ಗೋಡೆ ಬೆಂಗಳೂರು” ಚಟುವಟಿಕೆ ನಡೆಯಲಿದ್ದು, ನಮ್ಮ ಸಂಸ್ಕೃತಿ ಹಾಗೂ ಕ್ರಿಯಾತ್ಮಕ ಮನೋಭಾವದ ಚಿತ್ರಗಳನ್ನು ಗೋಡೆಗಳ ಮೇಲೆ ಚಿತ್ರಿಸಿ ನಮ್ಮ ನಗರವನ್ನು ಸುಂದವಾಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಉಪಕ್ರಮವು ಮೆಟ್ರೋ ನಿಲ್ದಾಣಗಳು, ನಗರದ ಪ್ರಮುಖ ಗೋಡೆಗಳ ಮೇಲೆ ಚಿತ್ರಿಸಲಾಗುತ್ತದೆ. ಬೆಂಗಳೂರಿನ ನಿವಾಸಿಗಳು ಹಾಗೂ ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಈ ಸುಂದರ ಕಲೆಗಳ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಈಗಾಗಲೇ ಆಗಸ್ಟ್ ತಿಂಗಳಲ್ಲೇ “ ಗೋಡೆ ಬೆಂಗಳೂರು” ಚಟುವಟಿಕೆಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಿ, ಹತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಈ ಅರ್ಜಿಗಳನ್ನು 1ಶಾಂತಿರೋಡ್ ಸ್ಟುಡಿಯೋ/ಗ್ಯಾಲರಿಯ ಸಂಸ್ಥಾಪಕ, ದೃಶ್ಯ ಕಲಾವಿದ, ಕಲಾ ಇತಿಹಾಸಕಾರ ಮತ್ತು ಮೇಲ್ವಿಚಾರಕರಾದ ಸುರೇಶ್ ಜಯರಾಮ್, ಕಲಾವಿದೆ ಅರ್ಚನಾ ಹಂಡೆ, ಬಹುಶಿಸ್ತೀಯ ಕಲಾವಿದ ಮತ್ತು ಚಿತ್ರಕಲೆ, ಶಿಲ್ಪಕಲೆ ಕಲಾವಿದಾರದ ರವಿಕುಮಾರ್ ಕಾಶಿ ಈ ತೀರ್ಪುಗಾರರನ್ನು ಒಳಗೊಂಡ ಸ್ವತಂತ್ರ ಸಮಿತಿಯು ಪರಿಶೀಲನೆ ನಡೆಸಿ ಕಲಾವಿದರನ್ನು ಆಯ್ಕೆ ಮಾಡಿದೆ.

ಆಯ್ಕೆಯಾಗಿರುವ ಹತ್ತು ಪ್ರತಿಭಾವಂತ ಕಲಾವಿದರು ಬೆಂಗಳೂರಿನ ಗೋಡೆಗಳ ಮೇಲೆ ಸುಂದರ ಕಲಾಕೃತಿಗಳನ್ನು ರಚಿಸಲಿದ್ದಾರೆ. ಈ ಕಲಾವಿದರು ‘ಬೆಂಗಳೂರು ವರ್ಣಗಳು’ ಎಂಬ ವಿಷಯದ ಸುತ್ತ ಚಿತ್ರಗಳನ್ನು ರಚಿಸಲಿದ್ದಾರೆ. ಇದು ನಗರದ ಸಾರವನ್ನು ಸೆರೆಹಿಡಿಯುವ ಪ್ರಯತ್ನವಾಗಿದೆ. ನಮ್ಮ ನಗರದ ಇತಿಹಾಸ, ಸಂಸ್ಕೃತಿ, ಹಬ್ಬಗಳು, ಸಸ್ಯ ಮತ್ತು ಪ್ರಾಣಿಗಳು ಮತ್ತು ಬೆಂಗಳೂರನ್ನು ಅನನ್ಯವಾಗಿಸುವ ದೈನಂದಿನ ಮೋಡಿ ಸೇರಿದಂತೆ ಹಲವು ಪ್ರಮುಖ ಆಕರ್ಷಣೆಗಳು ಒಳಗೊಂಡರಲಿದೆ.’

ಗೋಡೆ ಬೆಂಗಳೂರಿನ ಮುಖ್ಯ ಕ್ಯುರೇಟರ್, ಕಾಮಿನಿ ಸಾಹ್ನಿ ಮಾತನಾಡಿ, ಈ ವಿನೂತನ ಉಪಕ್ರಮವು ನಮ್ಮ ಹೆಮ್ಮೆಯ ಕಲೆ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಲಿದೆ. “ಗೋಡೆ ಬೆಂಗಳೂರು” ಶೀರ್ಷಿಕೆಯಲ್ಲಿ ಮೂಡಿ ಬರುವ ಗೋಡೆ ಚಿತ್ರಗಳು ಬೆಂಗಳೂರಿನ ಜನರ ಮನಸ್ಸಿನಲ್ಲಿ ಅವಿನಾಭಾವ ಸೆಳೆತ ಸೃಷ್ಟಿಸುವ ಪ್ರಯತ್ನ ಮಾಡಲಿದೆ..
ಈ ಗೋಡೆ ಚಿತ್ರಗಳು ನಮ್ಮ ಸಮುದಾಯ ಎತ್ತ ಸಾಗುತ್ತಿದೆ, ಸಂಸ್ಕೃತಿಯ ಮಹತ್ವ ಇತ್ಯಾದಿ ಅಂಶಗಳನ್ನು ಜನರ ನಡುವೆ ಸಂಭಾಷಣಾ ಕ್ಯಾನ್ವಾಸ್ ಆಗಿ ಕಾರ್ಯನಿರ್ವಹಿಸಬೇಕೆಂದು ನಾವು ಬಯಸುತ್ತೇವೆ. ಪ್ರತಿಯೊಂದು ಕಲೆಯು ಒಂದೊಂದು ವಿಶಿಷ್ಟವಾದ ಕಥೆಯನ್ನು ಹೇಳುತ್ತವೆ, ಈ ಉಪಕ್ರಮವು ಅನುಭವಿ ಮತ್ತು ಉದಯೋನ್ಮುಖ ಕಲಾವಿದರಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಛಾಪು ಮೂಡಿಸಲು ಅನುವು ಮಾಡಿಕೊಡುತ್ತದೆ.

ಬೆಂಗಳೂರು ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ವಿ ಅವರು, ಈ ಉಪಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದರು, “ಗೋಡೆ ಬೆಂಗಳೂರು” ಕೇವಲ ಕಲೆಯನ್ನು ಚಿತ್ರಿಸುವುದಷ್ಟೇ ಅಲ್ಲದೆ, ಇದು ಬೆಂಗಳೂರಿನ ಜನರ ನಡುವೆ ಅವಿನಾಭಾವ ಸಂಬಂಧ ಬೆಸೆಯಲಿದೆ.ಈ ಉಪಕ್ರಮದ ಮೂಲಕ, ನಾವು ನಗರದ ಚೈತನ್ಯ, ವೈವಿಧ್ಯತೆ ಮತ್ತು ಅದನ್ನು ವ್ಯಾಖ್ಯಾನಿಸುವ ನಾವೀನ್ಯತೆಯ ಮನೋಭಾವವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದ್ದೇವೆ. ಕಲೆಯು ಜನರನ್ನು ಒಟ್ಟುಗೂಡಿಸುವ ಮತ್ತು ಸಂಭಾಷಣೆಗಳನ್ನು ಪ್ರೇರೇಪಿಸುವ ಶಕ್ತಿಯನ್ನು ಹೊಂದಿದ್ದು, ಇದನ್ನು ಗೋಡೆ ಬೆಂಗಳೂರಿನ ಮೂಲಕ ಸಾಕಾರಗೊಳಿಸಲಿದ್ದೇವೆ ಎಂದರು.

ಅನ್‌ಬಾಕ್ಸಿಂಗ್ ಬೆಂಗಳೂರು ವತಿಯಿಂದ ಇದೇ ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುತ್ತಿರುವ “ಬೆಂಗಳೂರು ಹಬ್ಬ”ದ ಮುನ್ನ ವಾರದಲ್ಲಿ “ಗೋಡೆ ಬೆಂಗಳೂರು” ಮೂಲಕ ಗೋಡೆಗಳ ಮೇಲೆ ಕಲಾಕೃತಿಗಳು ಲೈವ್‌ ಇನ್‌ಸ್ಟಾಲ್‌ ಆಗಲಿವೆ. ಈ ಅದ್ಭುತ ಕಲಾಕೃತಿಗಳನ್ನು ಬೆಂಗಳೂರಿಗರು ಕಣ್ತುಂಬಿಕೊಳ್ಳಬಹುದು.

ಬೆಂಗಳೂರು ಹಬ್ಬ 2024

ಬೆಂಗಳೂರು ಹಬ್ಬ ಸರ್ಕಾರಿ ಬೆಂಬಲಿತ, ನಾಗರಿಕ-ಆಧಾರಿತ ಉತ್ಸವವಾಗಿದ್ದು, ಬೆಂಗಳೂರಿಗರಿಗಾಗಿ ಆಚರಿಸುತ್ತದೆ. ಉತ್ಸವದ ಎರಡನೇ ಆವೃತ್ತಿಯು ನವೆಂಬರ್ 30 ರಿಂದ ಡಿಸೆಂಬರ್ 15, 2024 ರವರೆಗೆ ನಡೆಯಲಿದೆ. ಬೆಂಗಳೂರು ಹಬ್ಬವನ್ನು ಅನ್‌ಬಾಕ್ಸಿಂಗ್‌ ಬಿಎಲ್‌ಆರ್ ಫೌಂಡೇಶನ್ ಆಯೋಜಿಸುತ್ತಿದೆ. ಇದು ಲಾಭೋದ್ದೇಶವಿಲ್ಲದ ವೇದಿಕೆ ಆಗಿದ್ದು, ಜನಸಾಮ್ಯರನ್ನು ಸಕ್ರಿಯಗೊಳಿಸುವ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಬೆಂಗಳೂರಿನ ಪ್ರಯಾಣವನ್ನು ಜಾಗತಿಕ ಟೆಕ್ ಹಬ್ ಮತ್ತು ಸಾಂಸ್ಕೃತಿಕ ನಗರಿಯನ್ನಾಗಿ ಆಚರಿಸುತ್ತದೆ. ಬೆಂಗಳೂರು ಹಬ್ಬ ಬೆರಗುಗೊಳಿಸುವ ಪ್ರದರ್ಶನಗಳು ಮತ್ತು ಕಲಾತ್ಮಕ ಪ್ರದರ್ಶನಗಳು ಮತ್ತು ತಲ್ಲೀನಗೊಳಿಸುವ ಅನುಭವಗಳಿಂದ ನಗರದ ರೋಮಾಂಚಕ ಸಂಸ್ಕೃತಿಯನ್ನು ಆಚರಿಸುತ್ತದೆ.

Continue Reading
Advertisement
Karnataka Rain
ಮಳೆ13 ಗಂಟೆಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

Kichcha Sudeeps mother Saroja passes away
ಬೆಂಗಳೂರು14 ಗಂಟೆಗಳು ago

Kichcha Sudeepa : ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ

Dina Bhavishya
ಭವಿಷ್ಯ20 ಗಂಟೆಗಳು ago

Dina Bhavishya : ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳಬೇಡಿ; ನಂಬಿದ ವ್ಯಕ್ತಿಗಳಿಂದ ಈ ರಾಶಿಯವರಿಗೆ ನಿರಾಸೆ

Bigg boss kannada
ಬಿಗ್ ಬಾಸ್2 ದಿನಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ2 ದಿನಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು2 ದಿನಗಳು ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ2 ದಿನಗಳು ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು2 ದಿನಗಳು ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ2 ದಿನಗಳು ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌