Chhattisgarh Murder | 11 ಲಕ್ಷ ರೂ.ಗಾಗಿ ಪ್ರಿಯತಮೆಯನ್ನೇ ಕೊಂದು, 4 ದಿನ ಮೆಡಿಕಲ್‌ ಶಾಪ್‌ನಲ್ಲಿಟ್ಟವ ಸಿಕ್ಕಿದ್ದು ಹೇಗೆ? - Vistara News

ಕ್ರೈಂ

Chhattisgarh Murder | 11 ಲಕ್ಷ ರೂ.ಗಾಗಿ ಪ್ರಿಯತಮೆಯನ್ನೇ ಕೊಂದು, 4 ದಿನ ಮೆಡಿಕಲ್‌ ಶಾಪ್‌ನಲ್ಲಿಟ್ಟವ ಸಿಕ್ಕಿದ್ದು ಹೇಗೆ?

ಛತ್ತೀಸ್‌ಗಢದಲ್ಲಿ ಪ್ರೇಮಿಗಳು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರು. ಆದರೆ, ಇದರಲ್ಲಿ ನಷ್ಟ ಅನುಭವಿಸಿದ ಕಾರಣ ಪ್ರಿಯಾಂಕಾ ಹಣ ವಾಪಸ್‌ ಕೇಳಿದ್ದಾರೆ. ಇದರಿಂದ ಕೋಪಗೊಂಡ ಆಶಿಶ್‌, ಆಕೆಯನ್ನು ಹತ್ಯೆ (Chhattisgarh Murder) ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Chhattisgarh Murder Case
ಛತ್ತೀಸ್‌ಗಢದಲ್ಲಿ ಪ್ರಿಯತಮನಿಂದಲೇ ಹತ್ಯೆಗೀಡಾದ ಪ್ರಿಯಾಂಕಾ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಪುರ: ದೆಹಲಿಯಲ್ಲಿ ಪ್ರೀತಿ ಅರಸಿ ಹಿಂದೆ ಬಂದವಳ ದೇಹವನ್ನೇ 35 ಭಾಗಗಳಾಗಿ ತುಂಡರಿಸಿ ಕೊಂದ ಪ್ರಕರಣವು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ವ್ಯಕ್ತಿಯು ಹಣದ ಮೇಲಿನ ಮೋಹಕ್ಕಾಗಿ (Chhattisgarh Murder) ಪ್ರೀತಿಸಿದವಳನ್ನೇ ಕೊಂದಿದ್ದಾನೆ. ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ಮೆಡಿಕಲ್‌ ಶಾಪ್‌ನಲ್ಲಿ ಇಟ್ಟು ದುಷ್ಕೃತ್ಯ ಮೆರೆದ ಆತನೀಗ ಕಂಬಿ ಎಣಿಸುತ್ತಿದ್ದಾನೆ.

“ಆಶಿಶ್‌ ಸಾಹು ಹಾಗೂ ಪ್ರಿಯಾಂಕಾ ಪ್ರೀತಿಸುತ್ತಿದ್ದರು. ಆದರೆ, ಹಣಕಾಸು ವಿಚಾರಕ್ಕೆ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಇದೇ ಕಾರಣಕ್ಕೆ ಆಕೆಯನ್ನು ಕೊಂದ ಸಾಹು, ಶವವನ್ನು ನಾಲ್ಕು ದಿನ ಮೆಡಿಕಲ್‌ನಲ್ಲಿ ಇಟ್ಟಿದ್ದಾನೆ. ಕೊನೆಗೆ, ಶವವನ್ನು ಬೇರೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಆಶಿಶ್‌ ಹಾಗೂ ಸಾಹು ಸ್ಟಾಕ್‌ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುತ್ತಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಹಣಕಾಸು ಒಪ್ಪಂದವಾಗಿದೆ. ಆದರೆ, ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡು ನಷ್ಟ ಅನುಭವಿಸಿದ ಕಾರಣ, ಪ್ರಿಯಾಂಕಾ 11 ಲಕ್ಷ ರೂ. ವಾಪಸ್‌ ಕೇಳಿದ್ದಾರೆ. ಇದರಿಂದ ಕುಪಿತಗೊಂಡ ಆಶಿಶ್‌ ಆಕೆಯನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Shraddha Murder Case | ಬ್ಯಾಗ್‌ ಹಿಡಿದು ಅಫ್ತಾಬ್‌ ಓಡಾಡುತ್ತಿರುವ ವಿಡಿಯೊ ಲಭ್ಯ, ಬ್ಯಾಗಲ್ಲಿತ್ತಾ ಶ್ರದ್ಧಾ ಬಾಡಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

HD Revanna: ಹಾಸನದ ಅಶ್ಲೀಲ ವಿಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ದೂರು ನೀಡಲು ಮೂವರು ಸಂತ್ರಸ್ತೆಯರು ಮುಂದೆ ಬಂದಿದ್ದಾರೆ. ಇದರಿಂದ ರೇವಣ್ಣ ಜತೆಗೆ ಸದ್ಯ ತಲೆ ಮರೆಸಿಕೊಂಡಿರುವ ಅವರ ಪುತ್ರ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎನ್ನಲಾಗಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ದೂರು ನೀಡಲು ಮೂವರು ಸಂತ್ರಸ್ತೆಯರು ಮುಂದೆ ಬಂದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿರುವ ಮೂವರು ಸಂತ್ರಸ್ತೆಯರು ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಬಗ್ಗೆ ಎಸ್‌ಐಟಿ ಪರಿಶೀಲನೆ ನಡೆಸುತ್ತಿದೆ. ಮತ್ತೆ ಮೂರು ಪ್ರತ್ಯೇಕ ದೂರು ದಾಖಲಾಗಲಿದ್ದು, ತಂದೆ-ಮಗನಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳ ಮಹಜರು ಸಾಧ್ಯತೆ

ಈ ಮಧ್ಯೆ ಇಂದು (ಭಾನುವಾರ) ಅಪಹರಣಕ್ಕೊಳಗಾದ ಮಹಿಳೆಯೊಂದಿಗೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಮಹಿಳೆಯನ್ನ ಕರೆದುಕೊಂಡು ಹೋದ ಸ್ಥಳದಿಂದ, ಮಹಿಳೆ ಪತ್ತೆಯಾಗಿರುವ ಸ್ಥಳದವರೆಗೂ ಅಧಿಕಾರಿಗಳು ಮಹಜರು ನಡೆಸಲಿದ್ದಾರೆ. ಎಸ್‌ಐಟಿ ಈಗಾಗಲೇ ಸಂತ್ರಸ್ತ ಮಹಿಳೆಯ ಮೆಡಿಕಲ್ ಟೆಸ್ಟ್ ಮಾಡಿಸಿದೆ.

ಮಹಿಳೆಯ ಕೈಗಳ ಮೇಲೆ ಒಂದಷ್ಟು ಗಾಯಗಳು ಕೂಡ ಕಂಡು ಬಂದಿರುವ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪ್ರಾಥಮಿಕವಾಗಿ ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡಿರುವ ಎಸ್ಐಟಿ, ಅವರ ಹೇಳಿಕೆ ಆಧರಿಸಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಿ ಒಂದಷ್ಟು ಸಾಕ್ಷಿಗಳನ್ನು ಕಲೆ ಹಾಕಲಿದೆ. ಒಂದು ವೇಳೆ ಸಾಕ್ಷಿ ಸಿಕ್ಕರೆ ಈ ಕೇಸ್ ಮತ್ತಷ್ಟು ಬಿಗಿಯಾಗಲಿದೆ. ಇದರಿಂದ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಮಹಜರು ವೇಳೆ ಬಲವಾದ ಸಾಕ್ಷಿ ಸಿಕ್ಕಿದ್ದೇ ಆದಲ್ಲಿ ರೇವಣ್ಣ ಜತೆಗೆ ಪತ್ನಿ ಭವಾನಿ ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ಅವರಿಗೂ ಕಾನೂನು ಕುಣಿಕೆ ಬಿಗಿಯಲಿದೆ. ಯಾಕೆಂದರೆ ಈಗಾಗಲೇ ಎಫ್ಐಆರ್‌ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ರೇವಣ್ಣ ಹೆಸರು ಕೂಡ ಉಲ್ಲೇಖವಾಗಿದೆ. ಅವರ ವಿರುದ್ಧವೂ ಸಾಕ್ಷಿ ಸಿಗುತ್ತಾ ಎಂದು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಒಟ್ಟಿನಲ್ಲಿ ಸದ್ಯ ರೇವಣ್ಣ ಮತ್ತು ಅವರು ಕುಟುಂಬ ಕಾನೂನಿನ ತೊಡಕಿಗೆ ಸಿಲುಕಿಕೊಂಡಿರುವುದು ಸ್ಪಷ್ಟ. ಚುನಾವಣೆ ವೇಳೆಯಲ್ಲಿಯೇ ರೇವಣ್ಣ ಬಂಧನವಾಗಿರುವುದು ಪಕ್ಷಕ್ಕೆ ಮತ್ತಷ್ಟು ಮಜುಗರ ತಂದಿದೆ.

ಇದನ್ನೂ ಓದಿ: Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಇಂದು (ಭಾನುವಾರ) ರೇವಣ್ಣ ಅವರನ್ನು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

Continue Reading

ಕರ್ನಾಟಕ

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸದ್ಯ ಎಸ್‌ಐಟಿ ವಶದಲ್ಲಿದ್ದಾರೆ. ಶನಿವಾರ ತಡರಾತ್ರಿವೆರೆಗೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ. ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಶನಿವಾರ ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ಈ ಮಧ್ಯೆ ಎಚ್‌.ಡಿ.ರೇವಣ್ಣ ಅವರ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು. ಶನಿವಾರ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿತ್ತು. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ರೇವಣ್ಣ ಅರೆಸ್ಟ್ ಆದ ಬೆನ್ನಲ್ಲೆ ನಿರೀಕ್ಷಣಾ ಜಾಮೀನು ಅರ್ಜಿ ತನ್ನಿಂದ ತಾನೆ ವಜಾ ಆಗಿದೆ. ಹೀಗಾಗಿ ನಾಳೆ (ಜನವರಿ 6) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಸಂತ್ರಸ್ತೆ ಪತ್ತೆಯಾಗಿದ್ದು, ರೇವಣ್ಣ ಅವರಿಗೂ ಅಪಹರಣ ಕೇಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ವಾದ ಮಂಡಿಸುವ ಸಾಧ್ಯತೆ ಇದೆ.

ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ?

ಇನ್ನು ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಜಾಮೀನು ರದ್ದಾದರೆ ರೇವಣ್ಣ ಅವರು ಹೈಕೋರ್ಟ್‌ನ ಕದ ತಟ್ಟಲಿದ್ದಾರೆ. ಹೈಕೋರ್ಟ್‌ನ ಜನಪ್ರತಿನಿಧಿಗಳ ಪೀಠದಲ್ಲಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಇದೆ. ಇದೆಲ್ಲವೂ ಅಪಹರಣಕ್ಕೊಳಗಾದ ಸಂತ್ರಸ್ತೆ ನೀಡುವ ಹೇಳಿಕೆಗಳ ಮೇಲೆ ನಿರ್ಧಾರವಾಗುತ್ತದೆ. ಒಂದು ವೇಳೆ ಸಂತ್ರಸ್ತೆ ರೇವಣ್ಣ ಪರ ಗುರುತರ ಆರೋಪಗಳನ್ನ ಮಾಡದಿದ್ದರೆ ಸುಲಭವಾಗಿ ಜಾಮೀನು ಸಿಗಬಹುದು. ಬದಲಾಗಿ ರೇವಣ್ಣ ವಿರುದ್ಧ ಸಂತ್ರಸ್ತೆ ಅಪಹರಣ, ಕಿರುಕುಳದ ಆರೋಪ ಮಾಡಿ ಅದು ಸಾಬೀತಾದರೆ ಜಾಮೀನು ಲಭಿಸುವುದು ಕಷ್ಟ ಎಂದು ಮೂಲಗಳು ತಿಳಿಸಿವೆ.

ವಿಚಾರಣೆ ವೇಳೆ ರೇವಣ್ಣ ಏನಂದ್ರು?

ಇನ್ನು ಶನಿವಾರ ತಡರಾತ್ರಿವರೆಗೂ ರೇವಣ್ಣ ಅವರ ವಿಚಾರಣೆ ನಡೆಸಲಾಯಿತು. ಎಸ್ಐಟಿ ಹಿರಿಯ ಅಧಿಕಾರಿಗಳು ಅಪಹರಣ ಪ್ರಕರಣದ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದರು. ಎಸ್ಐಟಿ ಎಡಿಜಿಪಿ ಬಿ.ಕೆ.ಸಿಂಗ್ ಹಾಗೂ ತಂಡ ರೇವಣ್ಣ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ಆ ವೇಳೆ ತಮ್ಮ ಮೇಲಿನ ಆರೋಪಗಳನ್ನು ರೇವಣ್ಣ ನಿರಾಕರಿಸಿದ್ದಾರೆ.

ʼʼನಾವು ಆಕೆಯನ್ನ ಅಪಹರಣ ಮಾಡಿಲ್ಲ. ಚುನಾವಣೆ ಇರುವ ಇರುವ ಕಾರಣ ಆಕೆ ನಮ್ಮ ಮನೆಗೆ ಬಂದಿದ್ದರು. ಅವರು ಕೆಲವು ವರ್ಷಗಳಿಂದ ನಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದರು. ಅದಷ್ಟೆ ಗೊತ್ತು‌. ಅದನ್ನ ಹೊರತುಪಡಿಸಿ ಆಕೆಯ ಬಗ್ಗೆಯಾಗಲಿ, ಅಪರಹರಣದ ಬಗ್ಗೆಯಾಗಲೀ ಯಾವುದೂ ಗೊತ್ತಿಲ್ಲʼʼ ಎಂದು ರೇವಣ್ಣ ತಿಳಿಸಿದ್ದಾರೆ. ಇಂದು ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರು ಪಡಿಸಿ ಬಳಿಕ ಎಸ್‌ಐಟಿ ತಮ್ಮ ಕಷ್ಟಡಿಗೆ ಕೇಳಲಿದೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Road Accident: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ನಡೆದಿದೆ. ಬೈಕ್ ಸವಾರ ಭೀಮಣ್ಣ (55) ಮೃತರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.

ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲು

ರಾಯಚೂರು: ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ‌ ಕೊಠಾ ಗ್ರಾಮದ ಬಳಿ ನಡೆದಿದೆ. ಅಯ್ಯನ್ ಶಫಿ (17) ನೀರು ಪಾಲಾದ ಬಾಲಕ. ಮೂವರು ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ತೆರಳಿ, ಶೋಧಕಾರ್ಯ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Dingaleshwar Swamiji: ನವಲಗುಂದದಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿದ್ದರಿಂದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Dingaleshwar Swamiji
Koo

ಧಾರವಾಡ: ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಸ್ವಾಮೀಜಿ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಭಾಷಣ ಮಾಡಿದ್ದರು. ಹೀಗಾಗಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡಿದ್ದಾರೆ ಎಂಬ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

Continue Reading
Advertisement
Kangana Ranaut
ರಾಜಕೀಯ2 mins ago

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Virat Kohli
ಕ್ರೀಡೆ6 mins ago

Virat Kohli: ಟಿ20ಯಲ್ಲಿ ದಾಖಲೆ ಬರೆದ ಕೊಹ್ಲಿ; ಈ ಸಾಧನೆ ಮಾಡಿದ ಮೊದಲ ಭಾರತೀಯ

HD Revanna
ಕರ್ನಾಟಕ13 mins ago

HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
ಕಾಲಿವುಡ್31 mins ago

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

IPL 2024
ಕ್ರೀಡೆ40 mins ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ56 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್1 hour ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್1 hour ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ1 hour ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ1 hour ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌