Bangalore is becoming capital of accidents ವಿಸ್ತಾರ ಸಂಪಾದಕೀಯ: ಅಪಘಾತಗಳ ರಾಜಧಾನಿ ಆಗುತ್ತಿದೆ ಬೆಂಗಳೂರು - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅಪಘಾತಗಳ ರಾಜಧಾನಿ ಆಗುತ್ತಿದೆ ಬೆಂಗಳೂರು

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಬಳಿ ಇರುವ 2021 ಹಾಗೂ 2022ರಲ್ಲಿ ನಡೆದ ರಸ್ತೆ ಅಪಘಾತಗಳ ಅಂಕಿಸಂಖ್ಯೆ ಪರಿಶೀಲಿಸಿದರೆ, ಅಪಘಾತಗಳ ಸಂಖ್ಯೆಯಲ್ಲಿ ದಿಲ್ಲಿ ಹಾಗೂ ಚೆನ್ನೈಗಳ ಬಳಿಕ ಬೆಂಗಳೂರು ಮೂರನೇ ಸ್ಥಾನದಲ್ಲಿದೆ.

VISTARANEWS.COM


on

Bangalore is becoming capital of accidents
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಜ್ಯದ ರಾಜಧಾನಿ ಬೆಂಗಳೂರು ಅಪಘಾತಗಳ ನಗರಿ ಎಂಬ ಕುಖ್ಯಾತಿಗೆ ಪಾತ್ರವಾಗುತ್ತಿದೆ. ಈ ವರ್ಷದ ಮೊದಲ ಮೂರು ತಿಂಗಳಲ್ಲೇ 1197 ಅಪಘಾತಗಳು ಸಂಭವಿಸಿದ್ದು, 200ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಅಪಘಾತಗಳು ಇದೇ ಪ್ರಮಾಣದಲ್ಲಿ ಸಾಗಿದರೆ ಒಂದೇ ವರ್ಷದಲ್ಲಿ ಸಾವಿನ ಸಂಖ್ಯೆ ಸಾವಿರ ದಾಟಲಿದೆ. 1,051 ಮಂದಿ ರಸ್ತೆ ಅಪಘಾತದಿಂದಾಗಿ ಗಾಯಗೊಂಡಿದ್ದಾರೆ. ಇದೆಲ್ಲ ಕಳವಳಕಾರಿ. ಇದಕ್ಕೆ ಕಾರಣವೇನು ಹಾಗೂ ಪರಿಹಾರವೇನು ಎಂದು ಯೋಚಿಸುವುದು ಇಂದಿನ ಜರೂರಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಬಳಿ ಇರುವ 2021 ಹಾಗೂ 2022ರಲ್ಲಿ ನಡೆದ ರಸ್ತೆ ಅಪಘಾತಗಳ ಅಂಕಿಸಂಖ್ಯೆ ಪರಿಶೀಲಿಸಿದರೆ, ಅಪಘಾತಗಳ ಸಂಖ್ಯೆಯಲ್ಲಿ ದಿಲ್ಲಿ ಹಾಗೂ ಚೆನ್ನೈಗಳ ಬಳಿಕ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಅಪಘಾತಗಳ ಸಾವಿನ ಸಂಖ್ಯೆಯಲ್ಲೂ ಇದೇ ಅನುಕ್ರಮಣಿಕೆಯನ್ನು ನೋಡಬಹುದು. ಮೂರನೇ ಸ್ಥಾನ ಎಂದು ಸಮಾಧಾನಪಟ್ಟುಕೊಳ್ಳುವಂತಿಲ್ಲ. ಏಕೆಂದರೆ ಬೆಂಗಳೂರು ಬಲು ವೇಗವಾಗಿ ಬೆಳೆಯುತ್ತಿದೆ ಹಾಗೂ ವಾಹನಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಿದೆ. ಹೊಸ ಹೊಸ ಫ್ಲೈಓವರ್‌ಗಳು, ಎಕ್ಸ್‌ಪ್ರೆಸ್‌ವೇಗಳು, ರಿಂಗ್‌ ರಸ್ತೆಗಳು ನಗರಕ್ಕೆ ಸೇರ್ಪಡೆಯಾಗುತ್ತಿವೆ. ಇವು ಹೆಚ್ಚಾದಂತೆ ವಾಹನಗಳ ವೇಗವೂ ಹೆಚ್ಚಾಗುತ್ತದೆ ಹಾಗೂ ಅಪಘಾತಗಳು ಹೆಚ್ಚುತ್ತವೆ.

ಬೆಂಗಳೂರಿನಲ್ಲಿ ಇರುವ ಕೆಟ್ಟ ರಸ್ತೆಗಳು, ಅತಿ ವೇಗದ ಹಾಗೂ ಅಜಾಗರೂಕ ಚಾಲನೆಗಳು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಮುಖ್ಯವಾಗಿ ಕಳಪೆ ಹಾಗೂ ಅವೈಜ್ಞಾನಿಕ ರಸ್ತೆ ಉಬ್ಬುಗಳು, ರಸ್ತೆ ವಿಭಜಕಗಳು ಹಾಗೂ ಗುಂಡಿಗಳು ಜೀವಗಳ ಬಲಿ ಪಡೆಯುತ್ತಿವೆ. ರಾತ್ರೋರಾತ್ರಿ ನಿರ್ಮಿಸಿ ಪಟ್ಟಿ ಬಳಿಯದೇ ಹೋದ ಹಂಪ್‌ನಿಂದಾಗಿ ಎಗರಿ ಬಿದ್ದು ಪ್ರಾಣ ಕಳೆದುಕೊಳ್ಳುವ ದ್ವಿಚಕ್ರ ವಾಹನ ಸವಾರರನ್ನು ಕಂಡಿದ್ದೇವೆ. ದಿಡೀರಾಗಿ ಎದುರಿಗೆ ಬರುವ ರಸ್ತೆ ವಿಭಜಕಗಳು ಪ್ರಾಣ ತೆಗೆಯುತ್ತವೆ. ಸರಿಪಡಿಸದೇ ಹಾಗೇ ಬಿಟ್ಟ ಗುಂಡಿಗಳು ವರ್ಷವರ್ಷವೂ ಹತ್ತಾರು ಜೀವಗಳನ್ನು ಬಲಿಪಡೆಯುತ್ತವೆ. ಜನ ಸಾಮಾನ್ಯರು, ಮಾಧ್ಯಮಗಳಿಂದ ಹಿಡಿದು ಹೈಕೋರ್ಟ್ ತನಕ ಮತ್ತೆ ಮತ್ತೆ ಬಿಬಿಎಂಪಿಗೆ ಚಾಟಿ ಬೀಸಿದರೂ ಬೆಂಗಳೂರಿನ ರಸ್ತೆಗಳು ಸುಗಮ, ಸುರಕ್ಷಿತ ರೂಪಕ್ಕೆ ಬರುತ್ತಿಲ್ಲ. ಬಿಬಿಎಂಪಿ, ಜಲ ಮಂಡಳಿ, ಬೆಸ್ಕಾಂ ನಡುವೆ ಇನ್ನೂ ಸಮನ್ವಯತೆ ಇಲ್ಲ. ಇದರ ದುಷ್ಪರಿಣಾಮ ರಸ್ತೆಗಳ ಮೇಲಾಗುತ್ತಿದೆ. ಫುಟ್‌ಪಾತ್ ಒತ್ತುವರಿಯಿಂದಾಗಿ ಪಾದಚಾರಿಗಳು ರಸ್ತೆ ಮೇಲೆ ನಡೆದು ಅಪಘಾತಕ್ಕೆ ತುತ್ತಾಗುತ್ತಾರೆ. ಇವೆಲ್ಲ ಸರಿಹೋಗದೇ ಬೆಂಗಳೂರು ಅಪಘಾತಮುಕ್ತ ನಗರವಾಗದು. ವಾಹನ ಮಾಲಿಕರಿಂದ ಪಡೆಯುವ ರಸ್ತೆ ತೆರಿಗೆಯನ್ನು ಸರ್ಕಾರ ಉತ್ತಮ ರಸ್ತೆಗಳ ಪಾಲನೆಗೆ ವಿನಿಯೋಗಿಸಬೇಕು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಸಿಎಪಿಎಫ್‌ ಪರೀಕ್ಷೆ ಬರೆಯಲು ಕನ್ನಡದಲ್ಲಿ ಅವಕಾಶ ಸ್ವಾಗತಾರ್ಹ

ಬೆಂಗಳೂರಿನ ವಾಹನಗಳನ್ನು ನಿಯಂತ್ರಿಸುವುದೂ ಸುಲಭ ಸಾಧ್ಯವಿಲ್ಲ. ಇಲ್ಲಿ 1.07 ಕೋಟಿ ವಾಹನಗಳಿವೆ. ಬೆಂಗಳೂರಿನಲ್ಲಿ ನಿರ್ಲಕ್ಷ್ಯ ವಾಹನ ಚಾಲನೆ ಸಂಬಂಧ ಕಳೆದ ಮೂರು ತಿಂಗಳಲ್ಲಿ 660 ಕೇಸ್, ಅತಿ ವೇಗದ ವಾಹನ ಚಾಲನೆ ಸಂಬಂಧ 917 ಪ್ರಕರಣಗಳು ದಾಖಲಾಗಿವೆ. ಸಿಗ್ನಲ್ ಜಂಪ್, ಲೇನ್ ಶಿಸ್ತು ಉಲ್ಲಂಘನೆ ಸಂಬಂಧ 2,32,626 ಪ್ರಕರಣಗಳು ದಾಖಲಾಗಿವೆ. ಮದ್ಯ ಸೇವಿಸಿ ವಾಹನ ಚಲಾಯಿಸಿದ ಪ್ರಕರಣಗಳೂ ಸಾಕಷ್ಟು. ಅಂದರೆ ರಸ್ತೆ ಶಿಸ್ತು ಪಾಲನೆಯಾಗುತ್ತಿಲ್ಲ. ಕಠಿಣ ಪರೀಕ್ಷಾ ಮಾನದಂಡಗಳಿಲ್ಲದೆ ಲೈಸೆನ್ಸ್‌ ನೀಡುವುದರಿಂದಲೂ ಅನಾಹುತಗಳಾಗುತ್ತವೆ. ಗಂಭೀರ ಟ್ರಾಫಿಕ್‌ ನಿಯಮ ಉಲ್ಲಂಘನೆ ಮಾಡಿದವರ ಪರವಾನಗಿ ರದ್ದು ಮಾಡುವಂಥ ಕಠಿಣ ಕ್ರಮ ಕೈಗೊಂಡಾಗ ನಿರ್ಲಕ್ಷ್ಯದ ಚಾಲನೆಗಳಿಗೆ ತುಸು ಕಡಿವಾಣ ಬೀಳಬಹುದು. ನಮ್ಮಲ್ಲಿ ಪಾದಚಾರಿಗಳಿಗೂ ರಸ್ತೆ ಸುರಕ್ಷತಾ ನಿಯಮಗಳು ಗೊತ್ತಿಲ್ಲ. ಜವಾಬ್ದಾರಿಯುತ ಪೌರ ಪ್ರಜ್ಞೆಯ ಗೈರುಹಾಜರಿಯೇ ಇವೆಲ್ಲವುಗಳ ಮೂಲ. ಹೀಗಾಗಿ ಅಧಿಕಾರಸ್ಥರ ಜತೆಗೆ ವಾಹನ ಚಾಲಕರು ಮತ್ತು ಎಲ್ಲ ಸಾರ್ವಜನಿಕರೂ ಜಾಗರೂಕತೆ ಪಾಲಿಸುವುದು ಅಗತ್ಯವಿದೆ.

ರಸ್ತೆ ಸುರಕ್ಷತಾ ಕ್ರಮಗಳು ಇನ್ನಷ್ಟು ಬಲಗೊಳ್ಳಬೇಕಿವೆ. ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ, ವೈಜ್ಞಾನಿಕವಾಗಿ ತಪಾಸಣೆ ನಡೆಸುವ ಮೂಲಕ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮೆರಾಗಳಿದ್ದು, ಅವುಗಳ ಕಟ್ಟುನಿಟ್ಟಿನ ನಿಗಾ ಅಗತ್ಯ. ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ಮೇಲೆ ಮೀನಮೇಷ ಎಣಿಸದೆ ಕ್ರಮ ಕೈಗೊಂಡರೆ ಅಮಾಯಕರು ಭಯಮುಕ್ತರಾಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ವಿಸ್ತಾರ ಚಾನೆಲ್‌ನ ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Karnataka Milk Federation: ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

VISTARANEWS.COM


on

Karnataka Milk Federation


ಕರ್ನಾಟಕ ಹಾಲು ಮಹಾಮಂಡಳಿ (Karnataka Milk Federation) ನಂದಿನಿ ಹಾಲಿನ ದರ ಏರಿಕೆಯನ್ನು ಘೋಷಿಸಿದೆ. ಹೊಸ ದರ ಬುಧವಾರದಿಂದ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ ಎಳೆದಿದ್ದ ಕರ್ನಾಟಕ ಸರ್ಕಾರ, ಈಗ ಹಾಲಿನ ದರ ಏರಿಕೆ ಮಾಡಿ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ದರ ಏರಿಕೆಯಿಂದ ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳವಾಗಲಿದೆ. ಬೆಲೆ ಹೊಂದಾಣಿಕೆಯ ಜೊತೆಗೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಒದಗಿಸಲು ನಂದಿನಿ ಹಾಲಿನ ಪ್ರತಿ ಪ್ಯಾಕೆಟ್ ಈಗ 50 ಮಿಲಿ ಲೀಟರ್ ಹೆಚ್ಚು ಹಾಲನ್ನು ಹೊಂದಿರುತ್ತದೆ. ಉದಾಹರಣೆಗೆ, ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 550 ಮಿ.ಲೀ. ಹಾಲನ್ನು ಹೊಂದಿರುತ್ತದೆ. ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲೂ 50 ಮಿ.ಲೀ. ಹೆಚ್ಚಿರುತ್ತದೆ. ಈ ಹೆಚ್ಚುವರಿ ಹಾಲಿನ ದರವನ್ನು ಮಾತ್ರ ವಸೂಲಿ ಮಾಡಲಾಗುತ್ತದೆ ಎಂಬುದು ಈ ಬೆಲೆ ಏರಿಕೆ ಮಾಡಿದವರ ಸಮಜಾಯಿಷಿ.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ (Nandini Milk Price Hike) ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಈ ಕ್ರಮದಲ್ಲಿ ಸದುದ್ದೇಶವೇ ಇರುವಂತೆ ಕಾಣಿಸುತ್ತಿದೆ. ಯಾಕೆಂದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬುದು ಸದುದ್ದೇಶ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯ. ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲನ್ನು ಸೇರಿಸುವುದು ಸರಿ. ಅದು ಬಳಕೆದಾರನಿಗೆ ಲಾಭವಾಗಿ ಸಿಗುವಂತೆ ಮಾಡದೆ, ಆತನಿಗೆ ಬೇಕಿಲ್ಲದಿದ್ದರೂ ಬಲವಂತವಾಗಿ ನೀಡುತ್ತಿರುವಂತೆ ಈ ಕ್ರಮ ಇದೆ. ಬಳಕೆದಾರನ ದೃಷ್ಟಿಯಿಂದ ಇದು ಅಷ್ಟೇನೂ ಸರಿಯಾದ ಕ್ರಮವಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಈಗಲೂ ಹಾಲಿನ ಮಾರಾಟದಿಂದ ಕೆಎಂಎಫ್‌ ಲಾಭವನ್ನು ಗಳಿಸುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಜೊತೆಗೆ ಮೊಸರು, ತುಪ್ಪ, ಬೆಣ್ಣೆ ಮುಂತಾದ ನಂದಿನಿ ಹೈನು ಉತ್ಪನ್ನಗಳಿವೆ. ಹಾಗೆಯೇ ಮೈಸೂರು ಪಾಕ್‌, ಪೇಢ ಮುಂತಾದ ಸಿಹಿ ಉತ್ಪನ್ನಗಳೂ ಇವೆ. ಇವೆಲ್ಲವುಗಳ ಮಾರಾಟದಿಂದ ಬರುತ್ತಿರುವ ಒಟ್ಟಾರೆ ಆದಾಯವು ಈ ಸಂಸ್ಥೆಯನ್ನು ಸಲಹುತ್ತಿದೆ. ರಾಜ್ಯದಲ್ಲಿ ಹಾಲಿನ ಬಳಕೆಯನ್ನು ಹೆಚ್ಚು ಮಾಡಬೇಕು; ಆ ಮೂಲಕ ಹೈನುಗಾರರಿಗೆ ನೆರವಾಗಬೇಕು ಎಂಬ ಉದ್ದೇಶವೇನೋ ಚೆನ್ನಾಗಿದೆ. ಆದರೆ ಇದನ್ನು ಬೇರೆ ಮೂಲಗಳಿಂದ ಭರಿಸಬೇಕು ಹೊರತು ಹಾಲಿನಿಂದಲ್ಲ. ಯಾಕೆಂದರೆ ಹಾಲು ಒಂದು ರೀತಿಯಿಂದ ಎಲ್ಲರ ಅಗತ್ಯ ಆಹಾರ. ಹೊಟ್ಟೆ ತುಂಬ ಊಟವಿಲ್ಲದಾಗ ಹಾಲು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುವವರಿದ್ದಾರೆ. ಮಕ್ಕಳಿಗೆ, ಮಹಿಳೆಯರಿಗೆ ಹಾಲು ಅತ್ಯಂತ ಪೌಷ್ಟಿಕ ಆಹಾರ. ಆದರೆ ಎಲ್ಲರೂ ಈ ಏರಿದ ಬೆಲೆಯಲ್ಲಿ ಹಾಲನ್ನು ಕೊಳ್ಳುವ ಸ್ಥಿತಿವಂತರಾಗಿರುವುದಿಲ್ಲ.

ಜೊತೆಗೆ ಹಾಲಿನ ದರ ಏರಿಕೆಯೆಂದರೆ ಒಂದು ರೀತಿಯಲ್ಲಿ ಪೆಟ್ರೋಲ್‌ ದರ ಏರಿಕೆಯಂತೆಯೇ. ಇದನ್ನನುಸರಿಸಿ ಕಾಫಿ, ಟೀ ಮುಂತಾದ ಹೋಟೆಲ್‌ ಉತ್ಪನ್ನಗಳ ದರಗಳು ಹೆಚ್ಚಾಗಲಿವೆ. ಮೊಸರು, ತುಪ್ಪ, ಬೆಣ್ಣೆಗಳ ದರವೂ ಹೆಚ್ಚಬೇಕಾದೀತು. ಹಾಲನ್ನು ಬಳಸಿ ಮಾಡುವ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಇದು ಬಳಕೆದಾರರಿಗೆ ಹೊರೆಯೇ ಆಗಿದೆ. ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ಕೆನಡಾ ಸಂಸತ್ ನಲ್ಲಿ ಖಲಿಸ್ತಾನಿ ಉಗ್ರನಿಗೆ ಶ್ರದ್ಧಾಂಜಲಿ ಅರ್ಪಿಸಿರುವುದು ಖಂಡನೀಯ.

VISTARANEWS.COM


on

Canada

ಕೆನಡಾದಲ್ಲಿದ್ದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನ ಹತ್ಯೆಗೈದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಮಂಗಳವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ಒಂದು ನಿಮಿಷ ಮೌನ ಆಚರಿಸಿ ಆತನಿಗೆ ಗೌರವ ಸಲ್ಲಿಸಿದೆ. ಕಳೆದ ವರ್ಷ ಜೂನ್‌ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿತು. ಇದೊಂದು ವಿಚಿತ್ರ ಬೆಳವಣಿಗೆ. ಹಾಗೆಯೇ ಕೆನಡಾದ ಉದ್ಧಟತನಕ್ಕೆ ಇದು ಸಾಕ್ಷಿ ಕೂಡ. ಭಯೋತ್ಪಾದನೆ ಎಂದರೇನು ಎಂದು ಗೊತ್ತಿಲ್ಲದ, ಖಲಿಸ್ತಾನಿ ಉಗ್ರವಾದದ ರುಚಿ ಕಂಡಿಲ್ಲದ ಕೆನಡಾದಂಥ ದೇಶದ ಮೂರ್ಖ ಆಡಳಿತಗಾರರು ಮಾತ್ರ ಮಾಡಬಹುದಾದ ಸಂಗತಿ ಇದು.

ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇಂಥ ಉಗ್ರನ ಹತ್ಯೆಯಾದರೆ ಕೆನಡಾಕ್ಕೆ ಯಾಕೆ ಹೊಟ್ಟೆನೋವು?

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ನಿಜ್ಜಾರ್‌ ಹತ್ಯೆಗೂ ಮೊದಲು ಖಲಿಸ್ತಾನಿ ಉಗ್ರ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವುದು, ಭಾರತೀಯ ರಾಯಭಾರಿಗಳನ್ನು ಬೆದರಿಸುವುದು ಇವರ ಮುಖ್ಯ ಉದ್ಯೋಗ.

ಭಾರತದಲ್ಲಿ ದಶಕಗಳ ಹಿಂದೆ ಉಲ್ಬಣಗೊಂಡು ಇದೀಗ ಉಪಶಮನಗೊಂಡಿರುವ ಹುಣ್ಣನ್ನು ಕೆರೆದು ಮತ್ತೆ ಉಲ್ಬಣಗೊಳಿಸುವ ಕೆಲಸವನ್ನು ಕೆನಡಾ ಮಾಡುತ್ತಿದೆ. ಒಂದು ಕಾಲದಲ್ಲಿ ಅಮೃತಸರದ ಸ್ವರ್ಣಮಂದಿರವನ್ನು ಅಪವಿತ್ರಗೊಳಿಸಿದ, ಖಲಿಸ್ತಾನ್‌ ಚಳವಳಿಯ ಹೆಸರಲ್ಲಿ ಪಂಜಾಬ್‌ನ ಯುವಜನತೆಯ ಮನಸ್ಸುಗಳನ್ನು ಕೆಡಿಸಿ ಸರ್ವನಾಶ ಮಾಡಿದ ಭಿಂದ್ರಾನ್‌ವಾಲೆಯ ಸಂತಾನಗಳು ಇಂದಿಗೂ ಕೆನಡಾದ ನೆಲದಲ್ಲಿ ಆಶ್ರಯ ಪಡೆದಿವೆ. ಇಂಥ ಡಜನ್‌ಗೂ ಹೆಚ್ಚು ಉಗ್ರರ ಹೆಸರನ್ನು ಭಾರತ ಸರ್ಕಾರ ಕೆನಡಾಗೆ ನೀಡಿದ್ದು, ಅವರನ್ನು ತಮಗೊಪ್ಪಿಸುವಂತೆ ಹೇಳಿದೆ. ಆದರೆ ಅವರು ಕೆನಡಾದ ಪ್ರಜೆಗಳೆಂದೂ, ಅವರ ಪ್ರತಿಭಟನೆಯ ಸ್ವಾತಂತ್ರ್ಯಕ್ಕೆ ತಾನು ಧಕ್ಕೆ ತರುವುದಿಲ್ಲವೆಂದೂ ಕೆನಡಾ ಗಳುಹುತ್ತಲೇ ಇದೆ. ʼಭಾರತ ತನ್ನ ಸಾರ್ವಭೌಮತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆʼ ಎಂದು ಪ್ರಲಾಪಿಸುತ್ತಿರುವ ಈ ದೇಶದ ಭಂಡ ನಾಯಕತ್ವದ ವೈಫಲ್ಯದಿಂದಾಗಿ, ಕಳೆದ ವರ್ಷ ಉಭಯ ದೇಶಗಳ ರಾಜತಾಂತ್ರಿಕ ಬಾಂಧವ್ಯವೂ ಹಳಸಿತ್ತು. ಪರಸ್ಪರರ ಹೈಕಮಿಶನರ್‌ಗಳನ್ನು ಹೊರಗೆ ಕಳಿಸುವವರೆಗೆ ಅದು ಹೋಗಿತ್ತು. ಇಲ್ಲೂ ಕೆನಡಾದ್ದೇ ಉಪದ್ವ್ಯಾಪ.

ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಮತ್ತು ಇತರ ಆಡಳಿತಗಾರರು ಅರ್ಥ ಮಾಡಿಕೊಳ್ಳಬೇಕಾದ್ದು ಏನೆಂದರೆ, ಖಲಿಸ್ತಾನಿ ಹಿಂಸಾವಾದಿಗಳನ್ನು ಮುಂದಿಟ್ಟುಕೊಂಡು ಹೊರಟರೆ ಆ ದೇಶವೇ ಹಿಂಸೆಯ ಫಲವನ್ನು ಉಣ್ಣಬೇಕಾದೀತು. ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಭಾರತ ಈಗಾಗಲೇ ಪ್ರತಿಪಾದಿಸಿದೆ. ಭಯೋತ್ಪಾದಕನಿಗೆ ಗೌರವ ಸಲ್ಲಿಸುವ ಮೂಲಕ ಕೆನಡಾ ಯಾವ ಸಂದೇಶ ನೀಡಹೊರಟಿದೆ? ಆ ದೇಶವೇ ಹೇಳಬೇಕು. ಉಭಯ ದೇಶಗಳ ನಡುವೆ ಶಾಂತಿ- ಸೌಹಾರ್ದ ಸ್ಥಾಪಿಸಬಯಸುವವರು ಮಾಡುವ ಕೆಲಸವಂತೂ ಇದಲ್ಲ.

ಇದನ್ನೂ ಓದಿ: Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Continue Reading
Advertisement
Latest11 hours ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest12 hours ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest12 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest2 days ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest3 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌