ವಿಸ್ತಾರ ಸಂಪಾದಕೀಯ: ಇರಾನ್ -‌ ಇಸ್ರೇಲ್ ಯುದ್ಧ ತಪ್ಪಿಸಲೇಬೇಕಿದೆ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಇರಾನ್ -‌ ಇಸ್ರೇಲ್ ಯುದ್ಧ ತಪ್ಪಿಸಲೇಬೇಕಿದೆ

ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಯುದ್ಧವು ಎಲ್ಲ ಕಡೆಗೂ ಕರಾಳ ಛಾಯೆಯನ್ನು ಸೃಷ್ಟಿಸುತ್ತದೆ. ಹೀಗಾಗಿ, ಎಲ್ಲ ದೇಶಗಳೂ ವಿವೇಕವನ್ನು ಬಳಸಿ ಈ ಯುದ್ಧವನ್ನು ತಪ್ಪಿಸಲು ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ವಿಶ್ವಸಂಸ್ಥೆ ಕೂಡ ಮುಂದಾಗಬೇಕು.

VISTARANEWS.COM


on

iran- israel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಇಸ್ರೇಲ್‌ ಹಾಗೂ ಇರಾನ್‌ ನಡುವೆ ಶತ್ರುತ್ವ ಬಿಗಡಾಯಿಸಿದ್ದು, ಯುದ್ಧಾತಂಕ ತಲೆದೋರಿದೆ. ಸಹಜವಾಗಿಯೇ ಮಿತ್ರರಾಷ್ಟ್ರ ಇಸ್ರೇಲ್‌ ಜೊತೆಗೆ ಅಮೆರಿಕ ನಿಂತಿದ್ದು, ಇಸ್ರೇಲ್‌ ಮೇಲೆ ದಾಳಿ ನಡೆಸದಂತೆ ಇರಾನ್‌ಗೆ ಎಚ್ಚರಿಕೆ ನೀಡಿದೆ. ಇಸ್ರೇಲ್ ವಿರುದ್ಧ ಇರಾನ್ ಸೇನೆ ದಾಳಿ ಮಾಡುವ ಸಾಧ್ಯತೆ ಇದ್ದು, ಅಲರ್ಟ್ ಆಗಿರಿ ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಅಮೆರಿಕದ ಅಧ್ಯಕ್ಷರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಸೂಕ್ಷ್ಮ ವಾತಾವರಣ ಸೃಷ್ಟಿ ಮಾಡಿದೆ. “ಯುದ್ಧದಲ್ಲಿ ಇಸ್ರೇಲ್ ಪರ ನಮ್ಮ ಬೆಂಬಲ. ಇಸ್ರೇಲ್‌ಗೆ ಬೇಕಾದ ಎಲ್ಲ ಸಹಾಯ ಮಾಡಲಿದ್ದೇವೆ. ಯುದ್ಧ ನಡೆಸಿದರೆ ಇರಾನ್ ಗೆಲುವು ಪಡೆಯಲಾರದು” ಎಂದಿದ್ದಾರೆ. ಇದರ ನಡುವೆ ಇನ್ನಷ್ಟು ಬೆಳವಣಿಗೆಗಳು ಆಗಿವೆ. ಭಾರತ ಕೂಡ, ಇರಾನ್‌ ಹಾಗೂ ಇಸ್ರೇಲ್‌ಗಳಿಗೆ ಪ್ರಯಾಣಿಸದಂತೆ, ಅಲ್ಲಿರುವವರು ಎಚ್ಚರಾಗಿರುವಂತೆ ಸೂಚನೆ ನೀಡಿದೆ. ಈ ಮಧ್ಯೆ ಯುಎಇ ಕರಾವಳಿಯಲ್ಲಿ ಇಸ್ರೇಲ್‌ ಮೂಲದ ಕಂಟೈನರ್ ಹಡಗೊಂದನ್ನು ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ವಶಪಡಿಸಿಕೊಂಡಿದೆ. ಅದರಲ್ಲಿರುವ 25 ಸಿಬ್ಬಂದಿ ಪೈಕಿ 17 ಮಂದಿ ಭಾರತೀಯರು. ಹೀಗಾಗಿ ಇಲ್ಲಿನ ಯಾವುದೇ ಬೆಳವಣಿಗೆಗಳು ಭಾರತಕ್ಕೂ ಆತಂಕಕಾರಿಯಾಗಿವೆ.

11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್‌ನ ದೂತಾವಾಸ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೇಲ್ ಕ್ರಮವನ್ನು ಖಂಡಿಸಿ ಇರಾನ್ ಯುದ್ಧ ಪ್ರಾರಂಭಿಸಲು ಮುಂದಾಗಿದೆ. ಈಗಾಗಲೇ ಇರಾನ್‌ ಪ್ರೇರಿತ ಹೆಜ್ಬೊಲ್ಲಾ ಉಗ್ರರು ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ ಶುರು ಮಾಡಿದ್ದಾರೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ 13 ಮಂದಿ ಮೃತಪಟ್ಟಿದ್ದರು. ಅದರಲ್ಲಿ ಇರಾನ್ ಸೈನ್ಯದ ಹಲವು ಅಧಿಕಾರಿಗಳೂ ಇದ್ದರು. ಇಸ್ರೇಲ್‌ನ ಕ್ರಮಕ್ಕೆ ಪ್ರತೀಕಾರವಾಗಿ ಶೀಘ್ರದಲ್ಲೇ ಇಸ್ರೇಲ್‌ನ ಮೇಲೆ ಇರಾನ್‌ ದಾಳಿ ನಡೆಸಲಿದೆ ಎನ್ನಲಾಗಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವನ್ನು ತಡೆಯಲು ಅಮೆರಿಕ ಪ್ರಯತ್ನಿಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್, ಚೀನಾ, ಟರ್ಕಿ, ಸೌದಿ ಅರೇಬಿಯಾ ಮತ್ತು ಯುರೋಪಿಯನ್ ರಾಷ್ಟ್ರಗಳಲ್ಲಿರುವ ತಮ್ಮ ಸಹವರ್ತಿಗಳೊಂದಿಗೆ ಇರಾನ್‌ಗೆ ಇಸ್ರೇಲ್ ಮೇಲೆ ದಾಳಿ ನಡೆಸದಂತೆ ಪ್ರಯತ್ನಿಸಲು ಹೇಳಿದ್ದಾರೆ. ಆದರೆ ಇದು ಫಲ ನೀಡುವುದು ಕಷ್ಟ.

ಭಾರತದ ರಾಜನೀತಿಯು ಇಸ್ರೇಲ್‌ ಹಾಗೂ ಅಮೆರಿಕದ ಕಡೆಗೆ ಹೆಚ್ಚು ವಾಲಿಕೊಂಡಿದೆ. ಹಾಗಂತ ಇರಾನ್‌ ಕೂಡ ಭಾರತದ ವೈರಿ ದೇಶ ಏನಲ್ಲ. ಹಾಗಾಗಿ ಭಾರತ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ. ಇಸ್ರೇಲ್‌-ಇರಾನ್‌ ಯುದ್ಧ ತಡೆಯಲು ಭಾರತ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಬಹುದು. ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಒಂದೊಮ್ಮೆ ಇಸ್ರೇಲ್‌-ಇರಾನ್‌ ನಡುವೆ ಯುದ್ಧ ಸ್ಫೋಟಗೊಂಡರೆ ಇದರ ಮೊದಲ ಪರಿಣಾಮ ಬೀರುವುದು ತೈಲ ದರದ ಮೇಲೆ. ವಿಶ್ವದಲ್ಲಿ ಯಾವುದೇ ಭಾಗದಲ್ಲಿ ಯುದ್ಧ ನಡೆದರೂ ತೈಲ ಪೂರೈಕೆ ಜಾಲ ಏರುಪೇರಾಗುತ್ತದೆ. ಅದರಲ್ಲೂ ಇರಾನ್‌ ತೈಲ ಪೂರೈಸುವ ಪ್ರಮುಖ ರಾಷ್ಟ್ರ ಆಗಿರುವುದರಿಂದ, ಯುದ್ಧ ಸಂಭವಿಸಿದರೆ ತೈಲ ದರ ಏರಿಕೆ ಆಗುವ ಅಪಾಯವಿದೆ. ಇದು ಇತರ ಎಲ್ಲ ಕಡೆಗಳಿಗೂ ವ್ಯಾಪಿಸಿ, ಎಲ್ಲ ರಂಗಗಳಲ್ಲಿಯೂ ಹಣದುಬ್ಬರ ಆಗುವಂತೆ ಮಾಡುತ್ತದೆ. ಮಧ್ಯಾಪ್ರಾಚ್ಯದಲ್ಲಿ ಸಾಕಷ್ಟು ಭಾರತೀಯರು ಬದುಕು ಕಂಡುಕೊಂಡಿದ್ದಾರೆ. ಇವರ ಬದುಕಿಗೂ ಸಂಕಷ್ಟ ಒದಗುವ ಸಾಧ್ಯತೆ ಇದೆ.

ಇದನ್ನೂ ಓದಿ: United Kingdom: ‘ಪ್ರಯಾಣಕ್ಕೆಅಪಾಯಕಾರಿ’ ದೇಶಗಳ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಿದ ಬ್ರಿಟನ್​!

ರಷ್ಯಾ ಹಾಗೂ ಉಕ್ರೇನ್‌ ಯುದ್ಧ ಆರಂಭದ ಸಮಯದಲ್ಲಿ, ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರಿಗೆ ಈ ಬಗ್ಗೆ ಎಚ್ಚರಿಕೆ ಸಂದೇಶ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, “ಈ ಕಾಲ ಯುದ್ಧದ ಕಾಲವಲ್ಲ” ಎಂದು ಹೇಳಿದ್ದರು. ಅಂದರೆ ಆಧುನೀಕರಣ, ಜಾಗತೀಕರಣದ ಈ ಕಾಲದಲ್ಲಿ ಎಲ್ಲ ದೇಶಗಳೂ ಒಂದರ ಜೊತೆಗೊಂದು ಹೆಣೆದುಕೊಂಡಿವೆ. ಉಕ್ರೇನ್‌ನಲ್ಲಿ ಅಥವಾ ಇಸ್ರೇಲ್‌ನಲ್ಲಿ ಆಗುವ ಸಣ್ಣ ಚಲನೆಯೂ ಇಡೀ ಜಗತ್ತಿನಲ್ಲಿ ಬದಲಾವಣೆಯನ್ನು ಉಂಟುಮಾಡಬಹುದಾದಂಥದು. ಇರಾನ್‌ ದಶಕಗಳ ಹಿಂದೆ ಇರಾಕ್‌ ಜೊತೆಗೆ ನಡೆಸಿದ ಯುದ್ಧದ ಸಂದರ್ಭ ಕೂಡ ಜಾಗತಿಕವಾಗಿ ತೈಲಬೆಲೆ ಉಲ್ಬಣ, ಹಣದುಬ್ಬರ ಉಲ್ಬಣ ಮತ್ತಿತರ ಸಮಸ್ಯೆಗಳಿಗೆ ಕಾರಣವಾಗಿತ್ತು. ರಷ್ಯಾ- ಉಕ್ರೇನ್‌ ಯುದ್ಧದಿಂದಾಗಿಯೂ ಹಲವು ವಾಣಿಜ್ಯ ವಹಿವಾಟುಗಳಿಗೆ ಧಕ್ಕೆಯಾಗಿದೆ. ಹೀಗೆ, ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಯುದ್ಧವು ಎಲ್ಲ ಕಡೆಗೂ ಕರಾಳ ಛಾಯೆಯನ್ನು ಸೃಷ್ಟಿಸುತ್ತದೆ. ಹೀಗಾಗಿ, ಎಲ್ಲ ದೇಶಗಳೂ ವಿವೇಕವನ್ನು ಬಳಸಿ ಈ ಯುದ್ಧವನ್ನು ತಪ್ಪಿಸಲು ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ವಿಶ್ವಸಂಸ್ಥೆ ಕೂಡ ಮುಂದಾಗಬೇಕು.

Kangana Ranaut

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ವಿಸ್ತಾರ ಚಾನೆಲ್‌ನ ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Karnataka Milk Federation: ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

VISTARANEWS.COM


on

Karnataka Milk Federation


ಕರ್ನಾಟಕ ಹಾಲು ಮಹಾಮಂಡಳಿ (Karnataka Milk Federation) ನಂದಿನಿ ಹಾಲಿನ ದರ ಏರಿಕೆಯನ್ನು ಘೋಷಿಸಿದೆ. ಹೊಸ ದರ ಬುಧವಾರದಿಂದ ಜಾರಿಗೆ ಬರಲಿದೆ. ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬರೆ ಎಳೆದಿದ್ದ ಕರ್ನಾಟಕ ಸರ್ಕಾರ, ಈಗ ಹಾಲಿನ ದರ ಏರಿಕೆ ಮಾಡಿ ಗ್ರಾಹಕರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ. ದರ ಏರಿಕೆಯಿಂದ ಪ್ರತಿ ಲೀಟರ್ ಹಾಲಿಗೆ 2.10 ರೂಪಾಯಿ ಹೆಚ್ಚಳವಾಗಲಿದೆ. ಬೆಲೆ ಹೊಂದಾಣಿಕೆಯ ಜೊತೆಗೆ, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು ಒದಗಿಸಲು ನಂದಿನಿ ಹಾಲಿನ ಪ್ರತಿ ಪ್ಯಾಕೆಟ್ ಈಗ 50 ಮಿಲಿ ಲೀಟರ್ ಹೆಚ್ಚು ಹಾಲನ್ನು ಹೊಂದಿರುತ್ತದೆ. ಉದಾಹರಣೆಗೆ, ಅರ್ಧ ಲೀಟರ್ ಪ್ಯಾಕೆಟ್‌ನಲ್ಲಿ 550 ಮಿ.ಲೀ. ಹಾಲನ್ನು ಹೊಂದಿರುತ್ತದೆ. ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲೂ 50 ಮಿ.ಲೀ. ಹೆಚ್ಚಿರುತ್ತದೆ. ಈ ಹೆಚ್ಚುವರಿ ಹಾಲಿನ ದರವನ್ನು ಮಾತ್ರ ವಸೂಲಿ ಮಾಡಲಾಗುತ್ತದೆ ಎಂಬುದು ಈ ಬೆಲೆ ಏರಿಕೆ ಮಾಡಿದವರ ಸಮಜಾಯಿಷಿ.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗಿದ್ದರಿಂದ ನಂದಿನಿ ಹಾಲಿನ ಪ್ಯಾಕೆಟ್‌ಗೆ ತಲಾ 50 ಮಿ.ಲೀ. ಹಾಲು ಹೆಚ್ಚಳ (Nandini Milk Price Hike) ಮಾಡಲಾಗಿದೆ. ಹೀಗಾಗಿ ಹೆಚ್ಚುವರಿ ಹಾಲಿಗೆ 2 ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಹಾಲಿನ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದಿದ್ದಾರೆ.

ಮೇಲ್ನೋಟಕ್ಕೆ ಈ ಕ್ರಮದಲ್ಲಿ ಸದುದ್ದೇಶವೇ ಇರುವಂತೆ ಕಾಣಿಸುತ್ತಿದೆ. ಯಾಕೆಂದರೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು. ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬುದು ಸದುದ್ದೇಶ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆಎಂಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯ. ಪ್ಯಾಕೆಟ್‌ನಲ್ಲಿ ಹೆಚ್ಚುವರಿ ಹಾಲನ್ನು ಸೇರಿಸುವುದು ಸರಿ. ಅದು ಬಳಕೆದಾರನಿಗೆ ಲಾಭವಾಗಿ ಸಿಗುವಂತೆ ಮಾಡದೆ, ಆತನಿಗೆ ಬೇಕಿಲ್ಲದಿದ್ದರೂ ಬಲವಂತವಾಗಿ ನೀಡುತ್ತಿರುವಂತೆ ಈ ಕ್ರಮ ಇದೆ. ಬಳಕೆದಾರನ ದೃಷ್ಟಿಯಿಂದ ಇದು ಅಷ್ಟೇನೂ ಸರಿಯಾದ ಕ್ರಮವಲ್ಲ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಈಗಲೂ ಹಾಲಿನ ಮಾರಾಟದಿಂದ ಕೆಎಂಎಫ್‌ ಲಾಭವನ್ನು ಗಳಿಸುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದೇ ಇದೆ. ಗರಿಷ್ಠ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಜೊತೆಗೆ ಮೊಸರು, ತುಪ್ಪ, ಬೆಣ್ಣೆ ಮುಂತಾದ ನಂದಿನಿ ಹೈನು ಉತ್ಪನ್ನಗಳಿವೆ. ಹಾಗೆಯೇ ಮೈಸೂರು ಪಾಕ್‌, ಪೇಢ ಮುಂತಾದ ಸಿಹಿ ಉತ್ಪನ್ನಗಳೂ ಇವೆ. ಇವೆಲ್ಲವುಗಳ ಮಾರಾಟದಿಂದ ಬರುತ್ತಿರುವ ಒಟ್ಟಾರೆ ಆದಾಯವು ಈ ಸಂಸ್ಥೆಯನ್ನು ಸಲಹುತ್ತಿದೆ. ರಾಜ್ಯದಲ್ಲಿ ಹಾಲಿನ ಬಳಕೆಯನ್ನು ಹೆಚ್ಚು ಮಾಡಬೇಕು; ಆ ಮೂಲಕ ಹೈನುಗಾರರಿಗೆ ನೆರವಾಗಬೇಕು ಎಂಬ ಉದ್ದೇಶವೇನೋ ಚೆನ್ನಾಗಿದೆ. ಆದರೆ ಇದನ್ನು ಬೇರೆ ಮೂಲಗಳಿಂದ ಭರಿಸಬೇಕು ಹೊರತು ಹಾಲಿನಿಂದಲ್ಲ. ಯಾಕೆಂದರೆ ಹಾಲು ಒಂದು ರೀತಿಯಿಂದ ಎಲ್ಲರ ಅಗತ್ಯ ಆಹಾರ. ಹೊಟ್ಟೆ ತುಂಬ ಊಟವಿಲ್ಲದಾಗ ಹಾಲು ಕುಡಿದೇ ಹೊಟ್ಟೆ ತುಂಬಿಸಿಕೊಳ್ಳುವವರಿದ್ದಾರೆ. ಮಕ್ಕಳಿಗೆ, ಮಹಿಳೆಯರಿಗೆ ಹಾಲು ಅತ್ಯಂತ ಪೌಷ್ಟಿಕ ಆಹಾರ. ಆದರೆ ಎಲ್ಲರೂ ಈ ಏರಿದ ಬೆಲೆಯಲ್ಲಿ ಹಾಲನ್ನು ಕೊಳ್ಳುವ ಸ್ಥಿತಿವಂತರಾಗಿರುವುದಿಲ್ಲ.

ಜೊತೆಗೆ ಹಾಲಿನ ದರ ಏರಿಕೆಯೆಂದರೆ ಒಂದು ರೀತಿಯಲ್ಲಿ ಪೆಟ್ರೋಲ್‌ ದರ ಏರಿಕೆಯಂತೆಯೇ. ಇದನ್ನನುಸರಿಸಿ ಕಾಫಿ, ಟೀ ಮುಂತಾದ ಹೋಟೆಲ್‌ ಉತ್ಪನ್ನಗಳ ದರಗಳು ಹೆಚ್ಚಾಗಲಿವೆ. ಮೊಸರು, ತುಪ್ಪ, ಬೆಣ್ಣೆಗಳ ದರವೂ ಹೆಚ್ಚಬೇಕಾದೀತು. ಹಾಲನ್ನು ಬಳಸಿ ಮಾಡುವ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತದೆ. ಹೀಗಾಗಿ ಇದು ಬಳಕೆದಾರರಿಗೆ ಹೊರೆಯೇ ಆಗಿದೆ. ಕಾಂಗ್ರೆಸ್‌ ಸರಕಾರ ಎಲ್ಲೆಲ್ಲಿ ದರ ಏರಿಸಬಹುದು ಎಂಬ ಕಡೆಯೆಲ್ಲಾ ಪ್ರಯತ್ನಿಸಿ ನೋಡುತ್ತಿರುವಂತಿದೆ. ಇತ್ತೀಚೆಗೆ ತಾನೇ ಪೆಟ್ರೋಲ್-‌ ಡೀಸೆಲ್‌ ಬೆಲೆಯೇರಿಕೆಯನ್ನು ಮಾಡಿತ್ತು. ಹೀಗೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆಯ ಬರೆ ಎಳೆಯುತ್ತ ಹೋದರೆ ಕೆಳ ಹಾಗೂ ಕೆಳಮಧ್ಯಮ ವರ್ಗದ ಬಳಕೆದಾರರು ಬದುಕುಳಿಯುವುದೇ ಕಷ್ಟವಾಗಲಿದೆ. ಹೈನುಗಾರರಿಗೆ ಹಾಲು ಮಾರಾಟದ ಲಾಭ ಸಿಗಲಿ. ಆದರೆ ಅದಕ್ಕಾಗಿ ಸಾಮಾನ್ಯ ಬಳಕೆದಾರನ ಜೇಬಿಗೆ ಹೆಚ್ಚಿನ ಹೊರೆ ಆಗದಿರಲಿ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಯೋತ್ಪಾದಕನಿಗೆ ಶ್ರದ್ಧಾಂಜಲಿ; ಕೆನಡಾ ಸಂಸತ್ ನ ಮೂರ್ಖತನ

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ಕೆನಡಾ ಸಂಸತ್ ನಲ್ಲಿ ಖಲಿಸ್ತಾನಿ ಉಗ್ರನಿಗೆ ಶ್ರದ್ಧಾಂಜಲಿ ಅರ್ಪಿಸಿರುವುದು ಖಂಡನೀಯ.

VISTARANEWS.COM


on

Canada

ಕೆನಡಾದಲ್ಲಿದ್ದ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನ ಹತ್ಯೆಗೈದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಮಂಗಳವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ಒಂದು ನಿಮಿಷ ಮೌನ ಆಚರಿಸಿ ಆತನಿಗೆ ಗೌರವ ಸಲ್ಲಿಸಿದೆ. ಕಳೆದ ವರ್ಷ ಜೂನ್‌ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿತು. ಇದೊಂದು ವಿಚಿತ್ರ ಬೆಳವಣಿಗೆ. ಹಾಗೆಯೇ ಕೆನಡಾದ ಉದ್ಧಟತನಕ್ಕೆ ಇದು ಸಾಕ್ಷಿ ಕೂಡ. ಭಯೋತ್ಪಾದನೆ ಎಂದರೇನು ಎಂದು ಗೊತ್ತಿಲ್ಲದ, ಖಲಿಸ್ತಾನಿ ಉಗ್ರವಾದದ ರುಚಿ ಕಂಡಿಲ್ಲದ ಕೆನಡಾದಂಥ ದೇಶದ ಮೂರ್ಖ ಆಡಳಿತಗಾರರು ಮಾತ್ರ ಮಾಡಬಹುದಾದ ಸಂಗತಿ ಇದು.

ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇಂಥ ಉಗ್ರನ ಹತ್ಯೆಯಾದರೆ ಕೆನಡಾಕ್ಕೆ ಯಾಕೆ ಹೊಟ್ಟೆನೋವು?

ಖಲಿಸ್ತಾನಿ ಉಗ್ರರಿಗೆ ಕೆನಡಾ ಹುಲುಸಾದ ನೆಲ. ಇಲ್ಲಿರುವ ಭಾರಿ ಪ್ರಮಾಣದ ಸಿಕ್ಖ್‌ ವಲಸಿಗರಲ್ಲಿ ಹಲವು ಪ್ರತ್ಯೇಕತಾವಾದಿಗಳು ಇದರ ಪೋಷಕರು. ಈ ಶ್ರೀಮಂತರ ಹಣಕ್ಕೆ ಆಸೆಪಡುತ್ತಿರುವ ಕೆನಡಾದ ಆಡಳಿತಗಾರರು ಈ ಖಲಿಸ್ತಾನಿ ಚಳವಳಿಯ ಪೋಷಕರೂ ಆಗಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ನಿಜ್ಜಾರ್‌ ಹತ್ಯೆಗೂ ಮೊದಲು ಖಲಿಸ್ತಾನಿ ಉಗ್ರ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುವುದು, ಭಾರತೀಯ ರಾಯಭಾರಿಗಳನ್ನು ಬೆದರಿಸುವುದು ಇವರ ಮುಖ್ಯ ಉದ್ಯೋಗ.

ಭಾರತದಲ್ಲಿ ದಶಕಗಳ ಹಿಂದೆ ಉಲ್ಬಣಗೊಂಡು ಇದೀಗ ಉಪಶಮನಗೊಂಡಿರುವ ಹುಣ್ಣನ್ನು ಕೆರೆದು ಮತ್ತೆ ಉಲ್ಬಣಗೊಳಿಸುವ ಕೆಲಸವನ್ನು ಕೆನಡಾ ಮಾಡುತ್ತಿದೆ. ಒಂದು ಕಾಲದಲ್ಲಿ ಅಮೃತಸರದ ಸ್ವರ್ಣಮಂದಿರವನ್ನು ಅಪವಿತ್ರಗೊಳಿಸಿದ, ಖಲಿಸ್ತಾನ್‌ ಚಳವಳಿಯ ಹೆಸರಲ್ಲಿ ಪಂಜಾಬ್‌ನ ಯುವಜನತೆಯ ಮನಸ್ಸುಗಳನ್ನು ಕೆಡಿಸಿ ಸರ್ವನಾಶ ಮಾಡಿದ ಭಿಂದ್ರಾನ್‌ವಾಲೆಯ ಸಂತಾನಗಳು ಇಂದಿಗೂ ಕೆನಡಾದ ನೆಲದಲ್ಲಿ ಆಶ್ರಯ ಪಡೆದಿವೆ. ಇಂಥ ಡಜನ್‌ಗೂ ಹೆಚ್ಚು ಉಗ್ರರ ಹೆಸರನ್ನು ಭಾರತ ಸರ್ಕಾರ ಕೆನಡಾಗೆ ನೀಡಿದ್ದು, ಅವರನ್ನು ತಮಗೊಪ್ಪಿಸುವಂತೆ ಹೇಳಿದೆ. ಆದರೆ ಅವರು ಕೆನಡಾದ ಪ್ರಜೆಗಳೆಂದೂ, ಅವರ ಪ್ರತಿಭಟನೆಯ ಸ್ವಾತಂತ್ರ್ಯಕ್ಕೆ ತಾನು ಧಕ್ಕೆ ತರುವುದಿಲ್ಲವೆಂದೂ ಕೆನಡಾ ಗಳುಹುತ್ತಲೇ ಇದೆ. ʼಭಾರತ ತನ್ನ ಸಾರ್ವಭೌಮತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆʼ ಎಂದು ಪ್ರಲಾಪಿಸುತ್ತಿರುವ ಈ ದೇಶದ ಭಂಡ ನಾಯಕತ್ವದ ವೈಫಲ್ಯದಿಂದಾಗಿ, ಕಳೆದ ವರ್ಷ ಉಭಯ ದೇಶಗಳ ರಾಜತಾಂತ್ರಿಕ ಬಾಂಧವ್ಯವೂ ಹಳಸಿತ್ತು. ಪರಸ್ಪರರ ಹೈಕಮಿಶನರ್‌ಗಳನ್ನು ಹೊರಗೆ ಕಳಿಸುವವರೆಗೆ ಅದು ಹೋಗಿತ್ತು. ಇಲ್ಲೂ ಕೆನಡಾದ್ದೇ ಉಪದ್ವ್ಯಾಪ.

ಕೆನಡಾದ ಪ್ರಧಾನಿ ಜಸ್ಟಿನ್‌ ಟ್ರುಡೊ ಮತ್ತು ಇತರ ಆಡಳಿತಗಾರರು ಅರ್ಥ ಮಾಡಿಕೊಳ್ಳಬೇಕಾದ್ದು ಏನೆಂದರೆ, ಖಲಿಸ್ತಾನಿ ಹಿಂಸಾವಾದಿಗಳನ್ನು ಮುಂದಿಟ್ಟುಕೊಂಡು ಹೊರಟರೆ ಆ ದೇಶವೇ ಹಿಂಸೆಯ ಫಲವನ್ನು ಉಣ್ಣಬೇಕಾದೀತು. ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಭಾರತ ಈಗಾಗಲೇ ಪ್ರತಿಪಾದಿಸಿದೆ. ಭಯೋತ್ಪಾದಕನಿಗೆ ಗೌರವ ಸಲ್ಲಿಸುವ ಮೂಲಕ ಕೆನಡಾ ಯಾವ ಸಂದೇಶ ನೀಡಹೊರಟಿದೆ? ಆ ದೇಶವೇ ಹೇಳಬೇಕು. ಉಭಯ ದೇಶಗಳ ನಡುವೆ ಶಾಂತಿ- ಸೌಹಾರ್ದ ಸ್ಥಾಪಿಸಬಯಸುವವರು ಮಾಡುವ ಕೆಲಸವಂತೂ ಇದಲ್ಲ.

ಇದನ್ನೂ ಓದಿ: Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Continue Reading
Advertisement
ಪರಿಷತ್‌ ಚುನಾವಣೆ
Latest5 hours ago

ಪರಿಷತ್ ಚುನಾವಣೆ ಹಿನ್ನೆಲೆ: ʼಕೈʼ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌?

ಬಿಡದಿ ಟೌನ್‌ಶಿಪ್‌
Latest2 days ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest2 days ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest3 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest4 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌