ವಿಸ್ತಾರ ಸಂಪಾದಕೀಯ: ಅರುಣಾಚಲ ವಿಚಾರದಲ್ಲಿ ಅಮೆರಿಕದ ನಿಲುವು ಭಾರತಕ್ಕೆ ಆನೆಬಲ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅರುಣಾಚಲ ವಿಚಾರದಲ್ಲಿ ಅಮೆರಿಕದ ನಿಲುವು ಭಾರತಕ್ಕೆ ಆನೆಬಲ

ಅರುಣಾಚಲ ಪ್ರದೇಶದ ಬಗೆಗೆ ಚೀನಾದ ದಾಹ ಇಂದು ನಿನ್ನೆಯದಲ್ಲ. ಅದು ಅರುಣಾಚಲದ 90,000 ಎಕರೆ ಪ್ರದೇಶವನ್ನು ತನ್ನದೆಂದು ವಾದಿಸುತ್ತದೆ. ಇಡೀ ಅರುಣಾಚಲ ಪ್ರದೇಶವೇ ದಕ್ಷಿಣ ಟಿಬೆಟ್‌ ಎಂಬುದು ಅದರ ಹಳೇ ಪ್ರತಿಪಾದನೆ. ಆದರೆ ಭಾರತ ಅದಕ್ಕೆ ತಕ್ಕ ಪ್ರತ್ಯುತ್ತರ ಕೊಡುತ್ತ ಬಂದಿದೆ.

VISTARANEWS.COM


on

Arunachal Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

“ಅರುಣಾಚಲ ಪ್ರದೇಶವು ಭಾರತದ ಭೂಪ್ರದೇಶ” ಎಂದು (Arunachal Pradesh) ಅಮೆರಿಕ ಸ್ಪಷ್ಟವಾಗಿ ಹೇಳಿದೆ. ಅಮೆರಿಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಅವರು ಅರುಣಾಚಲ ಪ್ರದೇಶದ ಕುರಿತು ಮಾತನಾಡಿದ್ದಾರೆ. “ಅರುಣಾಚಲ ಪ್ರದೇಶವು ಭಾರತದ್ದು ಎಂದು ಅಮೆರಿಕ ಗುರುತಿಸುತ್ತದೆ. ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಬಳಿ ಚೀನಾ ಯಾವುದೇ ರೀತಿಯ ಅತಿಕ್ರಮಣ, ನಮ್ಮ ಭೂಪ್ರದೇಶ ಎಂಬುದಾಗಿ ಹೇಳುವುದು, ಹೆಚ್ಚುವರಿ ಸೈನಿಕರನ್ನು ನಿಯೋಜಿಸುವುದು ಸೇರಿ ಹಲವು ಚಟುವಟಿಕೆಗಳನ್ನು ಅಮೆರಿಕ ವಿರೋಧಿಸುತ್ತದೆ” ಎಂದು ಹೇಳಿದ್ದಾರೆ. ಇದು ಹಲವು ರೀತಿಯಲ್ಲಿ ಭಾರತಕ್ಕೆ ಉಪಕಾರಿ. ಮೊದಲನೆಯದಾಗಿ, ಅರುಣಾಚಲ ಪ್ರದೇಶ ನಮ್ಮದು ಎನ್ನುವ ಭಾರತದ ಧ್ವನಿಗೆ ಅಮೆರಿಕ ಧ್ವನಿಗೂಡಿಸಿದಂತಾಗಿ, ಭಾರತಕ್ಕೆ ಹೆಚ್ಚಿನ ಬಲ ಬರುತ್ತದೆ. ಎರಡನೆಯದಾಗಿ, ಅರುಣಾಚಲ ಪ್ರದೇಶ ಯಾರ ವ್ಯಾಪ್ತಿಗೆ ಸೇರಿದ್ದು ಎಂದು ಜಾಗತಿಕ ಸಮುದಾಯ ಭಾವಿಸಬೇಕು ಎಂಬ ವಿಚಾರದಲ್ಲಿ ಅಮೆರಿಕ ಹಾಕಿಕೊಟ್ಟಿರುವ ಮೇಲ್ಪಂಕ್ತಿಯನ್ನು ಇನ್ನುಳಿದ ರಾಷ್ಟ್ರಗಳೂ ಅನುಸರಿಸುತ್ತವೆ. ಮೂರನೆಯದಾಗಿ, ಇದು ಸದಾ ಅರುಣಾಚಲ ಪ್ರದೇಶದ ಮೇಲೆ ಹಕ್ಕು ಸಾಧಿಸಲು ತಿಣುಕಾಡುತ್ತಲೇ ಇರುವ, ಆಗಾಗ ಉದ್ಧಟತನ ಎಸಗುವ ಚೀನಾಗೆ ಮಾಡಿದ ಮುಖಭಂಗವೂ ಹೌದು.

ಇತ್ತೀಚೆಗೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಝಾಂಗ್‌ ಕ್ಸಿಯೋಗಾಂಗ್‌ ಅವರು ಅರುಣಾಚಲ ಪ್ರದೇಶದ ಕುರಿತು ಉದ್ಧಟತನದ ಹೇಳಿಕೆ ನೀಡಿದ್ದರು. “ಭಾರತವು ಅಕ್ರಮವಾಗಿ ಅರುಣಾಚಲ ಪ್ರದೇಶದ ಮೇಲೆ ಹಿಡಿತ ಸಾಧಿಸಿದೆ. ಅರುಣಾಚಲ ಪ್ರದೇಶವು ಎಂದಿಗೂ ಚೀನಾದ ಅವಿಭಾಜ್ಯ ಅಂಗವಾಗಿದೆ” ಎಂದು ಹೇಳಿದ್ದರು. ಇದಕ್ಕೆ ಭಾರತ ಕೂಡ ಚೀನಾಗೆ ಸರಿಯಾಗಿಯೇ ತಿರುಗೇಟು ನೀಡಿತ್ತು. ಅರುಣಾಚಲ ಪ್ರದೇಶದ ವಿಚಾರದಲ್ಲಿ ಚೀನಾ ಮೊದಲಿನಿಂದಲೂ ಕ್ಯಾತೆ ತೆಗೆಯುತ್ತದೆ. ಕಳೆದ ಬಾರಿ ನರೇಂದ್ರ ಮೋದಿಯವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಚೀನಾ ವಿರೋಧಿಸಿತ್ತು. ಟಿಬೆಟ್‌ ವಿಚಾರದಲ್ಲಿ ದಲಾಯಿ ಲಾಮ ಅವರಿಗೆ ಆಶ್ರಯ ನೀಡಿರುವ ಭಾರತದ ಕ್ರಮ ಇಂದಿಗೂ ಚೀನಾಗೆ ಇರಸುಮುರಿಸು. ಇಂತಹ ಪರಿಸ್ಥಿತಿಯ ಮಧ್ಯೆಯೇ, ಅಮೆರಿಕವು ಭಾರತದ ಪರವಾಗಿ ನಿಂತಿರುವುದು, ಅರುಣಾಚಲ ಪ್ರದೇಶವು ಭಾರತದ್ದು ಎಂಬುದಾಗಿ ಹೇಳಿರುವುದು ಚೀನಾಗೆ ಹಿನ್ನಡೆಯಾಗಿದೆ.

ಅರುಣಾಚಲ ಪ್ರದೇಶದ ಬಗೆಗೆ ಚೀನಾದ ದಾಹ ಇಂದು ನಿನ್ನೆಯದಲ್ಲ. ಅದು ಅರುಣಾಚಲದ 90,000 ಎಕರೆ ಪ್ರದೇಶವನ್ನು ತನ್ನದೆಂದು ವಾದಿಸುತ್ತದೆ. ಇಡೀ ಅರುಣಾಚಲ ಪ್ರದೇಶವೇ ದಕ್ಷಿಣ ಟಿಬೆಟ್‌ ಎಂಬುದು ಅದರ ಹಳೇ ಪ್ರತಿಪಾದನೆ. ಆದರೆ ಈ ಈಶಾನ್ಯ ರಾಜ್ಯ ಸಂಪೂರ್ಣವಾಗಿ ನಮಗೇ ಸೇರಿದ್ದು, ಹೆಸರು ಬದಲಿಸಿದ ಮಾತ್ರಕ್ಕೆ ವಾಸ್ತವ ಬದಲಿಸಲಾಗದು ಎಂದು ಭಾರತ ಬಲವಾಗಿ ಪ್ರತಿಪಾದಿಸಿದೆ. ವರ್ಷದ ಹಿಂದೆ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ನ ಗಡಿಯಲ್ಲಿ ಚೀನಾದ ಸೇನೆ ಉಪಟಳ ಉಂಟುಮಾಡಿತ್ತು. ಭಾರತ ಹಾಗೂ ಚೀನಾ ಯೋಧರ ಮಧ್ಯೆ ಭಾರಿ ಪ್ರಮಾಣದಲ್ಲಿ ಹೊಡೆದಾಟ ನಡೆದಿದ್ದು, ಉಭಯ ಕಡೆಗಳ ಸೈನಿಕರಿಗೂ ಗಾಯಗಳಾಗಿದ್ದವು. ಅಂದರೆ ಚೀನಾ ಬರೀ ಬೊಗಳುವ ಶ್ವಾನವಲ್ಲ; ಕಚ್ಚಲೂ ಹೇಸದ ಸ್ವಭಾದ ಅದರದ್ದು. ಹೀಗಾಗಿ ಅರುಣಾಚಲದ ವಿಚಾರವನ್ನು ಎತ್ತಿ ಅದು ತಗಾದೆ ತೆಗೆಯುತ್ತ ಇರುವವರೆಗೂ ನಾವು ಕಟ್ಟೆಚ್ಚರ ವಹಿಸುತ್ತಲೇ ಇರಬೇಕಾದ್ದು ಅಗತ್ಯ. ಅರುಣಾಚಲದಲ್ಲಿ ಕೆಲವು ಕಡೆ ಗಡಿ ಸರಿಯಾಗಿ ನಿರ್ಧಾರವಾಗಿಲ್ಲ ಎಂಬುದು ನಿಜ. ಇಲ್ಲಿ ಚೀನಾ ಸೈನ್ಯ ಸುಲಭವಾಗಿ ಒಳತೂರಿ ಬರುವುದಕ್ಕೆ ಸಾಕಷ್ಟು ಆಸ್ಪದವಿದೆ ಎಂಬುದೂ ನಿಜ. 1962ರ ಯುದ್ಧದ ವೇಳೆಗೆ ಚೀನಾದ ಸೈನಿಕರು ಸುಮಾರು 20 ಕಿಲೋಮೀಟರ್‌ನಷ್ಟು ಒಳಬಂದು, ಯುದ್ಧವಿರಾಮದ ಬಳಿಕ ಹಿಂದೆ ಸರಿದಿದ್ದರು. ಆಗ ಅಂತಾರಾಷ್ಟ್ರೀಯ ಸಮುದಾಯ ಭಾರತದ ಜತೆಗೆ ನಿಂತಿತ್ತು.

ಸಂಪಾದಕೀಯ: ವಿಸ್ತಾರ ಸಂಪಾದಕೀಯ: ನನೆಗುದಿಗೆ ಬಿದ್ದ ಪಬ್ಲಿಕ್‌ ಪರೀಕ್ಷೆಗೆ ಮೋಕ್ಷ ಕೊಡಿ, ವಿದ್ಯಾರ್ಥಿಗಳ ಸಂಕಟ ತಪ್ಪಿಸಿ

ಸದ್ಯ ಭಾರತದ ನಿಲುವನ್ನು ಎತ್ತಿ ಹಿಡಿದಿರುವ ಅಮೆರಿಕದ ಕ್ರಮ, ಅರುಣಾಚಲದಲ್ಲಿ ಭಾರತ ಸಾರ್ವಭೌಮತ್ವವನ್ನು ನಿಸ್ಸಂದೇಹವಾಗಿ ಸ್ಥಾಪಿಸಿದೆ. ಅರುಣಾಚಲ ಪ್ರದೇಶವೇನೂ ಅಂತಾರಾಷ್ಟ್ರೀಯ ವಿವಾದದ ವಿಷಯವಲ್ಲವಾದರೂ, ಅಮೆರಿಕದಂಥ ಬಲಿಷ್ಠ ದೇಶಗಳ ನಿಲುವು ನಮಗೆ ಪೂರಕವಾಗಿರುವುದು ನಿಶ್ಚಿತವಾಗಿಯೂ ನಮಗೆ ಇನ್ನಷ್ಟು ಬಲವನ್ನು ತುಂಬುತ್ತದೆ. ಭಾರತದ ವ್ಯೂಹಾತ್ಮಕ ಸಿದ್ಧತೆ, ಮಿಲಿಟರಿ ಸನ್ನದ್ಧತೆ, ಠಕ್ಕ ಚೀನಾದ ಬಗ್ಗೆ ಸದಾ ಎಚ್ಚರ, ಅಕ್ಕಪಕ್ಕದ ದೇಶಗಳ ಜತೆಗಿನ ಆತ್ಮೀಯ ರಾಜನೀತಿ, ಅಮೆರಿಕದಂಥ ಮಿತ್ರ ರಾಷ್ಟ್ರಗಳನ್ನು ಕಾಪಾಡಿಕೊಳ್ಳುವ ಜಾಣ್ಮೆಗಳ ಮೂಲಕ ನಾವು ಅರುಣಾಚಲ ಪ್ರದೇಶವನ್ನು ಕಾಪಾಡಿಕೊಳ್ಳಬಲ್ಲೆವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ? ನಗರ ವಾಸಿಗಳು ಈ ಬಾರಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡಿದ್ದು ವಿಷಾದನೀಯ.

VISTARANEWS.COM


on

lok sabha election
Koo

ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ (lok sabha Election) ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ರಾಜ್ಯದ ಮೊದಲ ಹಂತದ ಒಟ್ಟಾರೆ ಮತದಾನ 69.23% ದಾಖಲಾಗಿದೆ. ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಮುಂಜಾನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಕಡಿಮೆಯಾಯಿತು. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ (81.48%) ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ (52.81%) ವೋಟಿಂಗ್ ದಾಖಲಾಗಿದೆ. ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದ್ದು, ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿವೆ. ಸಂಸದ ಸ್ಥಾನದ ಆಕಾಂಕ್ಷಿಗಳು ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ.

ಮತದಾನ ಪ್ರಮಾಣವನ್ನು ಗಮನಿಸಿದರೆ ಕೆಲವು ಅಂಶಗಳನ್ನು ಹೇಳಬಹುದಾಗಿದೆ. ನಗರಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳೇ ಮತದಾನದ ಪ್ರಮಾಣದಲ್ಲಿ ವಾಸಿ. ಬೆಂಗಳೂರು ಗ್ರಾಮಾಂತರದಲ್ಲಿ 67.29% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರಗಳಲ್ಲಿ 53.15% ಹಾಗೂ 54.42% ಮತದಾನವಾಗಿದೆ. ಮಂಡ್ಯದಲ್ಲಿ ಅತ್ಯಧಿಕ ಮತದಾನವಾಗಿರುವುದು ಈ ಪ್ರದೇಶದ ಜನತೆಯ ರಾಜಕೀಯ ಪ್ರಜ್ಞೆಯಿಂದಾಗಿಯೇ ಇರಬಹುದು. ಕೋಲಾರ (78.07%) ಹಾಗೂ ತುಮಕೂರು (77.70%) ಕೂಡ ಹೆಚ್ಚಿನ ಮತದಾನ ದಾಖಲಿಸಿವೆ. ಬೆಂಗಳೂರು ಕೇಂದ್ರ ಕ್ಷೇತ್ರದ ನೀರಸ ಮತದಾನ (52.81%) ಚಿಂತೆಗೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮತದಾನ ಶೇಕಡಾವಾರು 68.81% ಆಗಿತ್ತು. ಈ ಬಾರಿ ಮೊದಲ ಹಂತದಲ್ಲಿ ಅದಕ್ಕಿಂತ ಸ್ವಲ್ಪ ಹೆಚ್ಚಿಗೆ (69.23%) ಮತದಾನವಾಗಿದೆ. ಆದರೆ ಎರಡನೇ ಹಂತದಲ್ಲಿ ಎಷ್ಟಾಗಲಿದೆ ಎಂಬುದರ ಮೇಲೆ ಒಟ್ಟಾರೆ ಸರಾಸರಿ ನಿರ್ಧಾರವಾಗಲಿದೆ.

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹಾಗೂ ಮತದಾನ ಬಹಿಷ್ಕಾರ ಮಾಡಿದ್ದು ಕೂಡ ನಡೆದಿವೆ. ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದು ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಎದುರಾಯಿತು. ಸ್ವಾತಂತ್ರ್ಯ ದೊರೆತು ಎಂಟು ದಶಕ ಕಳೆದರೂ ಇನ್ನೂ ಮೂಲಸೌಕರ್ಯ ಕಲ್ಪಿಸದ ನಮ್ಮ ಆಡಳಿತಗಳಿಗೆ ಮತದಾನ ಬಹಿಷ್ಕಾರವೇ ಸೂಕ್ತ ಉತ್ತರ ಎಂದು ಗ್ರಾಮೀಣ ಜನತೆ ಕಂಡುಕೊಂಡರೋ ಗೊತ್ತಿಲ್ಲ. ಇದು ಮೊದಲೇ ಸಾರಿ, ಕಾರಣ ಹೇಳಿ ಮಾಡುವ ಬಹಿಷ್ಕಾರ. ಆದರೆ ವಿದ್ಯಾವಂತ ನಗರವಾಸಿಗಳ ʼಮತದಾನ ಬಹಿಷ್ಕಾರʼಕ್ಕೆ ಕಾರಣವಾದರೂ ಏನು? ನಗರದಲ್ಲಿ ಮತದಾನ ಹೆಚ್ಚಳ ಮಾಡಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಮತದಾರರಿಗಾಗಿಯೇ ಉತ್ತೇಜನದ ಉಪಕ್ರಮಗಳು, ಮಹಿಳೆಯರಿಗಾಗಿಯೇ ಸಖಿ ಮತಗಟ್ಟೆಗಳು, ಸಾರ್ವತ್ರಿಕ ರಜೆ ಎಲ್ಲವನ್ನೂ ಘೋಷಿಸಲಾಗಿದೆ. ಯಾವುದೇ ಕಷ್ಟವಿಲ್ಲದೆ ಮತದಾರರ ಗುರುತಿನ ಚೀಟಿ ಅಪ್‌ಡೇಟ್‌ ಮಾಡುವ, ತಮ್ಮ ಮತಗಟ್ಟೆ ಎಲ್ಲಿ ಎಂದು ತಿಳಿಯಲು ಕ್ಯುಆರ್‌ ಕೋಡ್‌ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಲಾಗಿದೆ. ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ?

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಮತದಾನ ಕಡಿಮೆಯಾದರೆ ತಾಂತ್ರಿಕವಾಗಿ ನಾವು ಸಮರ್ಪಕವಾದ ಸರ್ಕಾರವನ್ನು ಚುನಾಯಿಸುತ್ತಿರುವುದಿಲ್ಲ. ದೇಶದ 60% ಜನ ಮಾತ್ರ ಮತ ಹಾಕಿ, ಅದರಲ್ಲಿ 30% ಮತ ಪಡೆದ ಪಕ್ಷ ಅಧಿಕಾರಕ್ಕೆ ಬಂದರೆ, ಒಟ್ಟಾರೆ ದೇಶದ ಜನತೆಯಲ್ಲಿ ಆ ಪಕ್ಷವನ್ನು ಆಯ್ಕೆ ಮಾಡಿದವರು ಮೂರನೇ ಒಂದು ಭಾಗ ಮಾತ್ರವೇ ಆಗಿರುತ್ತಾರೆ. ಉಳಿದ ಮೂರನೇ ಎರಡು ಭಾಗ ಜನತೆ ಆ ಪಕ್ಷದ ವಿರುದ್ಧ ಇದ್ದಾರೆ ಎಂದು ತಿಳಿಯಬೇಕಾಗುತ್ತದೆ. ವಾಸ್ತವ ಹಾಗಿರುವುದಿಲ್ಲ. ಮತ ಹಾಕದ ಮಂದಿಯಲ್ಲಿ ಎಷ್ಟು ಮತಗಳು ಯಾವ ಪಕ್ಷದ್ದು ಎಂದು ನಿರ್ಣಯಿಸುವ ಯಾವ ವಿಧಾನವೂ ಇಲ್ಲ. ಹೀಗಾಗಿ ಮತದಾನ ಪ್ರಮಾಣ ಕಡಿಮೆ ಬಂದಾಗ, ಬರುವ ಫಲಿತಾಂಶವೂ ಅಷ್ಟರ ಮಟ್ಟಿಗೆ ಅಸಮರ್ಪಕವೇ ಆಗಿರುತ್ತದೆ. ಇನ್ನು ವಿದ್ಯಾವಂತರು, ಪ್ರಜ್ಞಾವಂತರು ಮತದಾನದಿಂದ ಹಿಂದುಳಿದರೆ, ಪ್ರಜ್ಞಾವಂತಿಕೆಯ ಆಯ್ಕೆಯೂ ಇಲ್ಲದಾಗುತ್ತದೆ. ಇದರಿಂದ ನಷ್ಟ ಪ್ರಜೆಗಳಿಗೇ. ಮೂರ್ಖರು ಅಧಿಕಾರಕ್ಕೆ ಆರಿಸಿ ಬರಬಾರದು ಎಂದಿದ್ದರೆ, ಬುದ್ಧಿವಂತರು ಮತ ಹಾಕಬೇಕು. ಮೇ 7ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಾದರೂ ಹೆಚ್ಚಿನ ಪ್ರಮಾಣದ ಮತದಾನವಾಗಲಿ ಎಂದು ಆಶಿಸೋಣ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು.

VISTARANEWS.COM


on

Lok sabha Election
Koo

ದೇಶದಲ್ಲಿ ಲೋಕಸಭೆ ಚುನಾವಣೆಯ (lok sabha election) ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ (ಏಪ್ರಿಲ್‌ 26) ಶುಕ್ರವಾರ ನಡೆಯುತ್ತಿದೆ. ಮತದಾನವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಭಾರತದಲ್ಲಿ ಚುನಾವಣೆ ನಡೆಯುತ್ತದೆ ಎಂದರೆ ಜಗತ್ತೇ ಅದನ್ನು ಕುತೂಹಲದಿಂದ ವೀಕ್ಷಿಸುತ್ತದೆ. ಯಾಕೆಂದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರದಲ್ಲಿ, ಯಾವುದೇ ಹಿಂಸಾಚಾರವಿಲ್ಲದೆ, ಒಂದೇ ಒಂದು ಜೀವಹಾನಿಯಿಲ್ಲದೆ, ಯಾವ ಲೋಪದೋಷವೂ ಇಲ್ಲದಂತೆ, ಜಗತ್ತಿಗೇ ಮಾದರಿಯಾಗಿ ನಡೆಯುವ ಮತದಾನ ಪ್ರಕ್ರಿಯೆ ಹಲವು ದೇಶಗಳಿಗೆ ಅಧ್ಯಯನ ಯೋಗ್ಯವಾಗಿ ಕಾಣುತ್ತದೆ. ದಾಖಲೆ ಸಂಖ್ಯೆಯ ಜನರು ಮತದಾನ ಮಾಡಲು ಏಳೆಂಟು ಹಂತಗಳನ್ನು ತೆಗೆದುಕೊಂಡರೂ, ಒಂದೇ ದಿನದಲ್ಲಿ ಸಂಶಯಕ್ಕೆಡೆಯಿಲ್ಲದಂತೆ ಫಲಿತಾಂಶವನ್ನು ಪಡೆಯುವುದು ವಿಶೇಷ. ಅಮೆರಿಕದಂಥ ದೇಶದಲ್ಲೇ ಚುನಾವಣೆ ಹಲವು ಸಲ ಗೊಂದಲಮಯವಾಗಿರುತ್ತದೆ ಎಂಬುದನ್ನು ನೋಡಿದರೆ, ನಮ್ಮದು ಅಧ್ಯಯನಯೋಗ್ಯವೇ ಸರಿ.

ಪ್ರಸ್ತುತ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಏರಲು ಜನತೆಯ ಆಶೀರ್ವಾದ ಕೋರಿದೆ. ನರೇಂದ್ರ ಮೋದಿಯವರು ಪಕ್ಷಕ್ಕೆ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಸಮರ್ಥ ನಾಯಕತ್ವ ನೀಡಿದ್ದಾರೆ. ಹಲವು ದಶಕಗಳ ಕಾಲ ದೇಶವನ್ನು ಆಳಿ ಸದ್ಯ ಅಧಿಕೃತ ವಿಪಕ್ಷ ಸ್ಥಾನಮಾನವನ್ನೂ ಹೊಂದಿಲ್ಲದ ಕಾಂಗ್ರೆಸ್‌, ಮರಳಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಹಲವು ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಇಂಡಿಯಾ ಬ್ಲಾಕ್‌ ರಚಿಸಿಕೊಂಡು ಬಿಜೆಪಿಯ ಅಶ್ವಮೇಧವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ. ಚುನಾವಣೆಯ ಪ್ರಚಾರ ಕಣದಲ್ಲಿ ಹಲವು ವಾದವಿವಾದಗಳು, ವಾಗ್ವಾದಗಳು ನಡೆದುಹೋಗಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಮತದಾರನಿಗೆ ಬಿಟ್ಟ ವಿಷಯ. ಮತದಾರ ಸಾಕಷ್ಟು ಬುದ್ಧಿವಂತನಾಗಿದ್ದು, ತನ್ನ ಆಯ್ಕೆಯನ್ನು ಆತ ಮಾಡಬಲ್ಲ.

ಆದರೆ, ಚಿಂತಿಸಬೇಕಾದ ಒಂದು ವಿಷಯವೆಂದರೆ, ಮತದಾನದ ಪ್ರಮಾಣ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ (2019) ಇಡೀ ರಾಜ್ಯದಲ್ಲೇ ಕನಿಷ್ಠ ಪ್ರಮಾಣ (ಶೇ 53.7) ಮತದಾನವಾಗಿತ್ತು. ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾನ ಪ್ರಮಾಣ ಸೇಕಡ 54.3, ಬೆಂಗಳೂರು ಉತ್ತರದಲ್ಲಿ ಮತದಾನ ಪ್ರಮಾಣ ಶೇಕಡ 54.7 ಇತ್ತು. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಮತದಾನ ಪ್ರಮಾಣ ಶೇಕಡ 64.9 ಇತ್ತು. ಕರ್ನಾಟಕದ ಒಟ್ಟು ಮತದಾನ ಪ್ರಮಾಣ ಶೇಕಡ 68 ಇತ್ತು. ಆದ್ದರಿಂದ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ. ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಆಯೋಗ ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದೆ. ಹಾಗೆಯೇ ಈ ದಿನ ಸಾರ್ವತ್ರಿಕ ರಜೆಯನ್ನು ನೀಡಲಾಗಿದೆ. ರಜೆಯೆಂದು ಪ್ರವಾಸ ಹೋಗುವ ನಗರದ ಮತದಾರರ ಚಾಳಿಯನ್ನು ತಪ್ಪಿಸಲು ಹೆಚ್ಚಿನ ಪ್ರವಾಸೀ ತಾಣಗಳನ್ನು ಕ್ಲೋಸ್‌ ಮಾಡಲಾಗುತ್ತಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಂಡಿದ್ದಾರೆ. ಭಾರತೀಯ ಚುನಾವಣಾ ಆಯೋಗವು ನವೀನ ಮತ್ತು ವಿನೂತನ ಮತದಾರರ ಜಾಗೃತಿ ಅಭಿಯಾನಗಳನ್ನು ಆಯೋಜಿಸಿರುವುದರ ಜೊತೆಗೆ ಹೋಟೆಲ್ ಉದ್ಯಮಿಗಳು, ಕಂಪನಿಗಳು ಮತ್ತು ಇತರ ಸಂಸ್ಥೆಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಮತದಾರರನ್ನು ಓಲೈಸಲು ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ವಿಶೇಷ ಮತಗಟ್ಟೆ ರಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

VISTARANEWS.COM


on

Modi
Koo

ಮುಂದಿನ 5 ವರ್ಷಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಯಾಣಿಕರಿಗೂ (Railway Ticket) ಕನ್ಫರ್ಮ್ಡ್‌ ಟಿಕೆಟ್‌ (Confirmed Tickets) ಸಿಗಲಿವೆ. ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗ್ಯಾರಂಟಿ- ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆ ಎಂದಿದ್ದಾರೆ ಸಚಿವರು. ಇದು ದೇಶದ ರೈಲ್ವೇ ವ್ಯವಸ್ಥೆಯ ಸುಧಾರಣೆಗಳಲ್ಲಿ ಒಂದು ವಿಚಾರ ಮಾತ್ರ.

ಕಳೆದ 10 ವರ್ಷಗಳಲ್ಲಿ ದೇಶದ ರೈಲ್ವೇ ವ್ಯವಸ್ಥೆಯನ್ನು ಸಾಕಷ್ಟು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ. ದೇಶಾದ್ಯಂತ ರೈಲ್ವೆ ಪ್ರಯಾಣಿಕರಿಗೆ ಹೊಸ ಸೌಲಭ್ಯ, ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಪ್ರಯತ್ನಪಡುತ್ತಿದೆ. ಅದೇ ರೀತಿ ಪ್ರಯಾಣಿಕರು ಸುಲಭವಾಗಿ ಹಾಗೂ ಕ್ಷಿಪ್ರವಾಗಿ ರೈಲು ಟಿಕೆಟ್‌ಗಳನ್ನು ಪಡೆಯುವಂತೆ ಮಾಡುವುದು ಮೊದಲ ಆದ್ಯತೆ. ಇದಕ್ಕಾಗಿ ಇನ್ನಷ್ಟು ರೈಲುಗಳ ಓಡಾಟ, ದೇಶಾದ್ಯಂತ ರೈಲುಗಳ ವಿಸ್ತರಣೆ, ರೈಲ್ವೆ ಲೇನ್‌ಗಳನ್ನು ವಿಸ್ತರಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. 2014ರಿಂದ 2024ರ ಅವಧಿಯಲ್ಲಿ ದೇಶಾದ್ಯಂತ 31 ಸಾವಿರ ಹೊಸ ಟ್ರ್ಯಾಕ್‌ಗಳನ್ನು ಅಳವಡಿಸಲಾಗಿದೆ. 2004ರಿಂದ 2014ರ ಅವಧಿಯಲ್ಲಿ 5 ಸಾವಿರ ಕಿಲೋಮೀಟರ್‌ ರೈಲು ಮಾರ್ಗ ವಿದ್ಯುದ್ದೀಕರಣವಾಗಿದ್ದರೆ, 2014ರಿಂದೀಚೆಗೆ ವಿದ್ಯುದ್ದೀಕರಣದ ಪ್ರಮಾಣವು 44 ಸಾವಿರ ಕಿಲೋಮೀಟರ್‌ಗೆ ಏರಿಕೆಯಾಗಿದೆ. ಕಳೆದ 10 ವರ್ಷದಲ್ಲಿ 54 ಸಾವಿರ ಬೋಗಿಗಳನ್ನು ತಯಾರಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮೋದಿಯವರು 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು ದೇಶಾದ್ಯಂತ ಲೋಕಾರ್ಪಣೆ ಮಾಡಿದ್ದರು. ಈ ಮೊದಲು ರೈಲ್ವೆ ಇಲಾಖೆ ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆಯು ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ. ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದರು. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರ ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಸಣ್ಣಪುಟ್ಟ ಸಂಗತಿಗಳಲ್ಲೂ ರೈಲ್ವೇ ಇಲಾಖೆ ಸುಧಾರಣೆ ತರುತ್ತಿದೆ. ಉದಾಹರಣೆಗೆ, ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು (60 ರೂ. ಮಾತ್ರ) ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಅಂದರೆ ಈ ಮೊದಲಿನ ಅನಿಯಂತ್ರಿತ ಶುಲ್ಕ ಇನ್ನು ಇರುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ರೈಲ್ವೇಯು ವೈಟಿಂಗ್‌ ಟಿಕೆಟ್‌ಗಳ ರದ್ದತಿಯಿಂದ ಬರೋಬ್ಬರಿ 1,230 ಕೋಟಿ ರೂ. ಆದಾಯ ಗಳಿಸಿದೆ. ಈ ಹಣದುಬ್ಬರದ ಕಾಲದಲ್ಲೂ ಕನಿಷ್ಠ ಪ್ರಯಾಣಿಕ ಹಾಗೂ ಸರಕು ಸಾಗಣೆ ಶುಲ್ಕವನ್ನು ರೈಲ್ವೇಯು ಹೊಂದಿರುವುದರಿಂದ, ಸಾರ್ವಜನಿಕ ಸೇವೆಯ ಮಾಧ್ಯಮವೂ ಆಗಿದೆ. ಹೀಗಾಗಿ ರೈಲ್ವೆಯಲ್ಲಿ ಆಗುವ ಸುಧಾರಣೆಯು ಇನ್ನೊಂದು ರೀತಿಯಲ್ಲಿ ಬಡ- ಮಧ್ಯಮ- ಕೆಳವರ್ಗದ ಜನತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಸೌಲಭ್ಯವನ್ನು ನೀಡುವ ಉಪಕ್ರಮವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

ಇದನ್ನೂ ಓದಿ: Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

Continue Reading

ದೇಶ

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.

VISTARANEWS.COM


on

vistara Editorial ವಿಸ್ತಾರ ಸಂಪಾದಕೀಯ
Koo

ಫಿಲಿಪ್ಪೀನ್ಸ್‌ಗೆ (Philippines) ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ (BrahMos missiles) ಭೂ ಆವೃತ್ತಿಯ ನಾಲ್ಕನೇ ʼಬ್ಯಾಟರಿ’ಯನ್ನು ಭಾರತ ಕಳುಹಿಸುತ್ತಿದೆ. ಬ್ರಹ್ಮೋಸ್ ಕ್ಷಿಪಣಿಗಳ ಮೂರು ‘ಬ್ಯಾಟರಿ’ಗಳನ್ನು ಈಗಾಗಲೇ ದ್ವೀಪ ರಾಷ್ಟ್ರಕ್ಕೆ ಹಸ್ತಾಂತರಿಸಲಾಗಿದೆ. ಪ್ರತಿ ಬ್ಯಾಟರಿಯೂ ನಾಲ್ಕು ಲಾಂಚರ್‌ಗಳನ್ನು ಒಳಗೊಂಡಿರುತ್ತದೆ. ಪ್ರತಿ ಲಾಂಚರ್‌ನಲ್ಲೂ 290 ಕಿಮೀ ವ್ಯಾಪ್ತಿಯ ಮೂರು ಕ್ಷಿಪಣಿಗಳಿರುತ್ತವೆ. ಈ ಕ್ಷಿಪಣಿ ಸೂಪರ್‌ಸಾನಿಕ್ ವೇಗವನ್ನು ಹೊಂದಿರುತ್ತದೆ. ಇದನ್ನು ಭೂಮಿ ಅಥವಾ ಹಡಗು ಆಧಾರಿತ ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್ (BMDs) ವ್ಯವಸ್ಥೆಗಳಿಂದಲೂ ಎದುರಿಸುವುದು ತುಂಬಾ ಕಷ್ಟ. 2022ರಲ್ಲಿ ಭಾರತ- ಫಿಲಿಪ್ಪೀನ್ಸ್‌ ಸಹಿ ಮಾಡಿದ USD 375 ಮಿಲಿಯನ್ ಒಪ್ಪಂದದ ಭಾಗವಿದು. ಸದ್ಯ ಭಾರತದ ಬ್ರಹ್ಮೋಸ್ ದಾಖಲೆ ಮಾರಾಟ ಕಂಡಿದೆ. ಮುಂದಿನ ದಿನಗಳಲ್ಲಿ ಭಾರತವು ಈ ಸೂಪರ್‌ಸಾನಿಕ್ ಕ್ಷಿಪಣಿಗಳ ಹೆಚ್ಚಿನ ಆರ್ಡರ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಬ್ರಹ್ಮೋಸ್‌ನ ಫಿಲಿಪ್ಪೀನ್ಸ್ ಒಪ್ಪಂದದ ಮೂಲಕ, 2023-2024ರಲ್ಲಿ ಭಾರತದ ರಕ್ಷಣಾ ರಫ್ತು ₹21083 ಕೋಟಿಗಳನ್ನು ಮುಟ್ಟಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.32.5ರಷ್ಟು ರಫ್ತು ಬೃಹತ್ ಬೆಳವಣಿಗೆಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಕಾರ, 2026ರ ವೇಳೆಗೆ ರಕ್ಷಣಾ ರಫ್ತನ್ನು 40 ಸಾವಿರ ಕೋಟಿ ರೂ. ದಾಟಿಸುವ ಗುರಿ ಹೊಂದಲಾಗಿದೆ. ಅನೇಕ ಕಾರಣಗಳಿಂದಾಗಿ ಇದೊಂದು ಮೈಲುಗಲ್ಲು. ಬಾಹ್ಯಾಕಾಶ ಸಂಶೋಧನೆ ಹಾಗೂ ರಕ್ಷಣಾ ರಫ್ತುಗಳು ಭಾರತದ ಜಿಡಿಪಿ ಬೆಳವಣಿಗೆ, ವಿದೇಶಾಂಗ ನೀತಿಯ ವರ್ಧನೆ ಇತ್ಯಾದಿಗಳಲ್ಲಿ ಗರಿಷ್ಠತೆ ಸಾಧಿಸಲು ಕಾರಣವಾಗುತ್ತಿರುವ ಬೆಳವಣಿಗೆಗಳು. ಈ ಹಿಂದೆ ಪ್ರತಿಯೊಂದು ಶಸ್ತ್ರಕ್ಕೂ ಭಾರತ ವಿದೇಶಗಳನ್ನು ಅವಲಂಬಿಸಿತ್ತು. ಆದರೆ ಈಗ ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ದಿನೇದಿನೆ ಸ್ವಾವಲಂಬನೆ ಸಾಧಿಸುತ್ತಿದೆ. ಶಸ್ತ್ರಾಸ್ತ್ರಗಳಿಂದ ಹಿಡಿದು ಯುದ್ಧ ನೌಕೆಗಳನ್ನೂ ಭಾರತದಲ್ಲೇ ತಯಾರಿಸಲಾಗುತ್ತಿದೆ. ಪಾಕಿಸ್ತಾನ ಹೊರತುಪಡಿಸಿ ಇತರ ಹಲವು ನೆರೆದೇಶಗಳಿಗೆ ಭಾರತ ಯಥೇಚ್ಛವಾಗಿ ಶಸ್ತ್ರಾಸ್ತ್ರ ರಫ್ತು ಮಾಡುತ್ತಿದೆ. ಮಿಲಿಟರಿ ಸಾಧನಗಳಿಗಾಗಿ ಭಾರತ ಪ್ರತಿವರ್ಷ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಿನ ಶಸ್ತ್ರಾಸ್ತ್ರ ರಫ್ತು ದಾಖಲೆ ದೇಶದ ಪ್ರಗತಿ ಮತ್ತು ಸ್ವಾವಲಂಬನೆಯ ದೃಷ್ಟಿಯಿಂದ ಮಹತ್ವದ್ದಾಗಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಚೀನಾವನ್ನೂ ಹಿಂದಿಕ್ಕಿದ ಭಾರತದ ಆರ್ಥಿಕತೆಯ ಬೆಳವಣಿಗೆ ಐತಿಹಾಸಿಕ

ಈಗಾಗಲೇ ಭಾರತ ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌ ಕ್ಷಿಪಣಿಗಳನ್ನು, ಮಾರಿಷಸ್‌ಗೆ ಹಗುರ ಯುದ್ಧ ವಿಮಾನಗಳನ್ನು, ವಿಯೆಟ್ನಾಂಗೆ ಅತಿವೇಗದ ರಕ್ಷಣಾ ಬೋಟ್‌ಗಳನ್ನು, ಆರ್ಮೇನಿಯಾಕ್ಕೆ ಆಯುಧಶೋಧಕ ರೇಡಾರ್‌ಗಳನ್ನು, ಇಟಲಿ, ಮಾಲ್ದೀವ್ಸ್‌, ಶ್ರೀಲಂಕಾ, ಮಲೇಷಿಯಾ ಮುಂತಾದ ಹಲವು ದೇಶಗಳಿಗೆ ಪಿನಾಕ ರಾಕೆಟ್‌ ಲಾಂಚರ್‌ಗಳನ್ನು ಹಾಗೂ ಇತರ ಹಲವು ತಂತ್ರಜ್ಞಾನಗಳನ್ನು ರಫ್ತು ಮಾಡುತ್ತಿದೆ. ರಕ್ಷಣಾ ಸಾಮಗ್ರಿಗಳ ರಫ್ತು ಜತಜತೆಗೇ ನೋಡಬೇಕಾದ ಇನ್ನೊಂದು ಸಂಗತಿ ಎಂದರೆ, ಇಸ್ರೋ ಸಂಸ್ಥೆಯು ಉಡಾಯಿಸುತ್ತಿರುವ ಉಪಗ್ರಹಗಳು. ಸ್ಥಳೀಯ ತಂತ್ರಜ್ಞಾನದ ಉಪಗ್ರಹ ವಾಹಕಗಳನ್ನು (ಎಸ್‌ಎಲ್‌ವಿ) ನಾವು ತಯಾರಿಸಿದ್ದು, ಅವುಗಳ ಮೂಲಕ ಅಕ್ಕಪಕ್ಕದ ದೇಶಗಳ ಉಪಗ್ರಹಗಳನ್ನೂ ಕಕ್ಷೆಗೆ ಉಡಾಯಿಸುವ ಉದ್ಯಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ. ನಮ್ಮ ದೇಶದ ಇಂಥ ಸಾಧನೆಗೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), ಎಚ್‌ಎಎಲ್‌, ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಮಹತ್ವದ ಕೊಡುಗೆ ನೀಡುತ್ತಿವೆ. ಡಿಆರ್‌ಡಿಒ ಅಭಿವೃದ್ಧಿಪಡಿಸುತ್ತಿರುವ ಡ್ರೋನ್‌ಗಳು ನಮ್ಮ ಗಡಿಯನ್ನು ಕಾಯುತ್ತಿರುವ ಯೋಧರಿಗೆ ಅತ್ಯುತ್ತಮ ಜತೆಗಾರರಾಗಿವೆ.

ರಫ್ತು ಮಾತ್ರವಲ್ಲ, ರಕ್ಷಣಾ ಸಾಮಗ್ರಿಗಳಲ್ಲಿ ಆತ್ಮನಿರ್ಭರತೆ ಕೂಡ ನಮ್ಮಿಂದ ಸಾಧ್ಯವಾಗುತ್ತಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಎಂದರೆ ತುಮಕೂರಿನ ಗುಬ್ಬಿಯಲ್ಲಿ ಪ್ರಧಾನಿ ಉದ್ಘಾಟಿಸಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಹೆಲಿಕಾಪ್ಟರ್ ಉತ್ಪಾದನಾ ಘಟಕ. ಇದು ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 3 ಟನ್‌ನಿಂದ 12 ಟನ್ ತೂಕದ ತನಕ ವಿವಿಧ ಶ್ರೇಣಿಗಳ ಹೆಲಿಕಾಪ್ಟರ್‌ಗಳನ್ನು ನಿರ್ಮಿಸುತ್ತದೆ. ಇಲ್ಲಿ ಉತ್ಪಾದನೆಗೊಳ್ಳಲಿರುವ ಹಗುರ ಹೆಲಿಕಾಪ್ಟರ್‌ಗಳು (ಎಲ್‌ಯುಎಚ್) ದೇಶದ ಮಿಲಿಟರಿ ಮತ್ತು ನಾಗರಿಕ ಅಗತ್ಯಗಳನ್ನು ಪೂರೈಸಲಿವೆ. ಇದರಿಂದ ಭಾರತದ ವಾಯುಪಡೆ ಹಾಗೂ ವಾಯುಸಾರಿಗೆ ಇನ್ನಷ್ಟು ಸಮೃದ್ಧವಾಗಲಿವೆ. ಇದು ಒಂದು ಉದಾಹರಣೆ ಮಾತ್ರ. ಇನ್ನೊಂದು ಉದಾಹರಣೆ ಎಂದರೆ ಇತ್ತೀಚೆಗೆ ಪ್ರಯೋಗಾರ್ಥ ಉಡಾಯಿಸಲಾದ ಅಣ್ವಸ್ತ್ರ ಸಿಡಿತಲೆಯನ್ನು 5000 ಕಿಲೋಮೀಟರ್‌ ದೂರ ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿರುವ ಅಗ್ನಿ-5 ಖಂಡಾಂತರ ಕ್ಷಿಪಣಿಯ ಅಭಿವೃದ್ಧಿ. ಈ ಕ್ಷಿಪಣಿ ಚೀನಾದ ಉತ್ತರ ತುದಿಯಿಂದ ಹಿಡಿದು ಯುರೋಪಿನ ಬಹುತೇಕ ಭಾಗಗಳಿಗೂ ಗುರಿ ಇಟ್ಟು ದಾಳಿ ಮಾಡುವ ಸಾಮರ್ಥ್ಯ ಹೊಂದಿರುವುದು ಭಾರತದ ರಕ್ಷಣಾ ದೃಷ್ಟಿಯಿಂದ ಮಹತ್ವದ್ದು. ಹಾಗೆಯೇ ಕಳೆದ ತಿಂಗಳು ಪರೀಕ್ಷಿಸಲಾದ ಮಿಷನ್‌ ದಿವ್ಯಾಸ್ತ್ರ. ಇದು ಏಕಕಾಲಕ್ಕೆ ಹಲವು ಸಿಡಿತಲೆಗಳನ್ನು ಉಡಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

ಇದೆಲ್ಲದರ ಹಿನ್ನೆಲೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನ ಫಲ ಕೊಡಲಾರಂಭಿಸಿದೆ ಎನ್ನಬಹುದು. ಆದರೂ ಭಾರತ ತರಿಸಿಕೊಳ್ಳುತ್ತಿರುವ ಶಸ್ತ್ರಾಸ್ತ್ರಗಳ ಪ್ರಮಾಣ ಸಾಕಷ್ಟಿದೆ. ಅತಿ ಹೆಚ್ಚು ಶಸ್ತ್ರಾಸ್ತ್ರ ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಭಾರತವೂ ಒಂದು. ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಹೆಚ್ಚಿದಷ್ಟು ಆಮದು ಕಡಿಮೆಯಾಗಬಹುದು. ರಫ್ತು ಹೆಚ್ಚಾದಷ್ಟು ನಮ್ಮ ಗಣ್ಯತೆ, ಜಿಡಿಪಿ, ವಿದೇಶಾಂಗ ಸಾಮರ್ಥ್ಯವೂ ಅಧಿಕವಾಗುತ್ತದೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್15 mins ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ18 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ23 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ31 mins ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ43 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ45 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ46 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ49 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ1 hour ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20244 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌