ವಿಸ್ತಾರ ಸಂಪಾದಕೀಯ: ಪಕ್ಷಗಳ ಒಕ್ಕೂಟ, ಪ್ರಜಾಪ್ರಭುತ್ವದ ಅಣಕ ಆಗದಿರಲಿ - Vistara News

ದೇಶ

ವಿಸ್ತಾರ ಸಂಪಾದಕೀಯ: ಪಕ್ಷಗಳ ಒಕ್ಕೂಟ, ಪ್ರಜಾಪ್ರಭುತ್ವದ ಅಣಕ ಆಗದಿರಲಿ

Vistara Editorial: ಬಿಜೆಪಿ ನೇತೃತ್ವದ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಕೂಟ ‘ಇಂಡಿಯಾ’ ಮುಂಬರುವ ಸಾರ್ವತ್ರಿಕ ಚುನಾವಣೆಗೆ ಕಹಳೆ ಮೊಳಗಿಸಿವೆ. ವಿಭಿನ್ನ ವಿಚಾರಧಾರೆಗಳನ್ನು ಹೊಂದಿರುವ ರಾಜಕೀಯ ಪಕ್ಷಗಳು ಒಂದೊಂದು ಸೂರಿನಡಿ ಬಂದು ಸೇರಿರುವುದೇ ಭಾರತೀಯ ಪ್ರಜಾಪ್ರಭುತ್ವದ ಸೌಂದರ್ಯವೇ ಸರಿ.

VISTARANEWS.COM


on

Indian Parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2024ರ ಲೋಕಸಭೆ ಎಲೆಕ್ಷನ್‌ಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವಾಗಲೇ ‘ಚುನಾವಣಾ ಮಹಾಭಾರತ’ ಸ್ಪಷ್ಟವಾಗುತ್ತಿದೆ. ಬೆಂಗಳೂರಲ್ಲಿ ಪ್ರತಿಪಕ್ಷಗಳು ‘ಇಂಡಿಯಾ’ ಹೆಸರಿನಡಿ ಒಂದಾಗಿ ಕಹಳೆ ಮೊಳಗಿಸಿದರೆ, ಅತ್ತ ದಿಲ್ಲಿಯಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಹಳೆ ಮಿತ್ರರು ಹಾಗೂ ಹೊಸ ಸ್ನೇಹಿತರನ್ನು ಸೇರಿಸಿಕೊಂಡು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕೂಟ(ಎನ್‌ಡಿಎ)ಕ್ಕೆ ಹೊಸ ಚೈತನ್ಯ ತುಂಬಿದೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆಗೆ ಯಾವ ಪಕ್ಷಗಳು, ಯಾವ ಕೂಟದಲ್ಲಿವೆ, ಅವುಗಳ ಕಾರ್ಯಸೂಚಿಗಳು ಬಹುತೇಕವಾಗಿ ಮಂಗಳವಾರ ನಿಚ್ಚಳವಾಗಿದೆ(Vistara Editorial).

ಪ್ರಮುಖ ಪ್ರತಿಪಕ್ಷಗಳೆಲ್ಲವೂ ಈ ಮೊದಲು ಬಿಹಾರದ ಪಾಟ್ನಾದಲ್ಲಿ ಸಭೆ ಸೇರಿ, ತಮ್ಮ ಒಗ್ಗಟ್ಟಿನ ಮಂತ್ರಕ್ಕೆ ಮುನ್ನುಡಿ ಬರೆದಿದ್ದವು. ಬೆಂಗಳೂರಿನಲ್ಲಿ ನಡೆದ ಎರಡನೇ ಸಭೆಯಲ್ಲಿ 26 ಪ್ರತಿಪಕ್ಷಗಳು ಕೈಜೋಡಿಸಿದವು. ಇದರೊಂದಿಗೆ ಅವುಗಳ ಬಲ ಕೂಡ ಹೆಚ್ಚಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಇಂಡಿಯಾ(I.N.D.I.A) ಹೆಸರಿನಲ್ಲಿ ಒಂದೇ ಸೂರಿನಡಿ ಬಂದು ಕುಳಿತಿವೆ. ಬಹುಶಃ ಅವುಗಳ ಮುಂದಿನ ಸಭೆಗಳಲ್ಲಿ ಈ ‘ಇಂಡಿಯಾ’ ಕೂಟದ ಸಾಮಾನ್ಯ ಕಾರ್ಯಕ್ರಮಗಳು, ನಾಯಕತ್ವದ ಬಗ್ಗೆ ಸ್ಪಷ್ಟವಾಗಿ ತಿಳಿಯಬಹುದು. ಇತ್ತ, ಎನ್‌ಡಿಎ ಶುರುವಾಗಿ 25 ವರ್ಷ ಪೂರೈಸಿದ ನೆಪದಲ್ಲಿ ಬಿಜೆಪಿ, ತನ್ನ ಹಳೆಯ ದೋಸ್ತಿಗಳ ಜತೆಗೆ, ಹೊಸಬರನ್ನು ಕೂಟಕ್ಕೆ ಆಹ್ವಾನಿಸಿ, ಸಭೆ ಮಾಡಿದೆ. ಈಗ ಎನ್‌ಡಿಎ ತೆಕ್ಕೆಯಲ್ಲಿ 38 ಪಕ್ಷಗಳಿವೆ. 2019ರಲ್ಲಿ ಚುನಾವಣೆ ವೇಳೆ, ಅಷ್ಟೇನೂ ಮಹತ್ವದ ಪಡೆಯದ ಎನ್‌ಡಿಎಗೆ ಬಹುಶಃ ಈ ಬಾರಿಯ ಚುನಾವಣೆಯಲ್ಲಿ ತುಸು ಹೆಚ್ಚೇ ಪ್ರಾಮುಖ್ಯತೆ ದೊರೆಯುವ ಸಾಧ್ಯತೆಗಳು ದಟ್ಟವಾಗಿವೆ.

ಈ ಎರಡೂ ರಾಜಕೀಯ ಪಕ್ಷಗಳ ಕೂಟಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದರೆ, ನಮಗೆ ಭಾರತೀಯ ಪ್ರಜಾಪ್ರಭುತ್ವದ ಮೌಲ್ಯ ಮತ್ತು ಅದರ ಸೌಂದರ್ಯ ಗೋಚರಾವಾಗುತ್ತದೆ. ಭಾರತೀಯ ರಾಜಕಾರಣ ಒಂದರೆಡು ಪಕ್ಷಗಳ ಆಟವಲ್ಲ ಎಂಬುದು ಮನವರಿಕೆಯಾಗುತ್ತದೆ. ಇಲ್ಲಿರುವ ಪ್ರತಿಯೊಂದು ಪಕ್ಷವು, ಸಣ್ಣದೇ ಇರದಲೇ ದೊಡ್ಡದೇ ಇರಲಿ, ಅದು ತನ್ನದೇ ಆದ ಮಹತ್ವವನ್ನು, ಪ್ರಭಾವವನ್ನು ಹೊಂದಿದೆ. ಎಷ್ಟೇ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವೈರುಧ್ಯಗಳಿದ್ದರೂ ದೇಶದ ಹಿತಕ್ಕಾಗಿ ಒಗ್ಗೂಡಿಸುವ ಬೆಸುಗೆಯೊಂದಿದೆ. ಅದುವೇ ಭಾರತೀಯ ಪ್ರಜಾಪ್ರಭುತ್ವ. ಇಂಡಿಯಾ ಹೆಸರಿನಲ್ಲಿ ಒಂದಾಗಿರುವ ಪ್ರತಿಪಕ್ಷಗಳನ್ನೇ ತೆಗೆದುಕೊಳ್ಳಿ ಅಥವಾ ಎನ್‌ಡಿಎಯನ್ನಾದರೂ ಪರಿಶೀಲಿಸಿ. ಅಲ್ಲಿ ವಿಭಿನ್ನ ವಿಚಾರಧಾರೆ, ವಿಭಿನ್ನ ಕಲ್ಪನೆಗಳು, ವಿಭಿನ್ನ ಧ್ಯೇಯಗಳು, ಉದ್ದೇಶಗಳು, ಗುರಿಗಳೊಂದಿಗೆ ಶುರುವಾದ ಪಕ್ಷಗಳಿವೆ. ಆದರೂ, ಅವೆಲ್ಲವೂ ತಮಗೆ ಸರಿ ಹೊಂದುವ ಕೂಟಗಳೊಂದಿಗೆ ಹೆಜ್ಜೆ ಹಾಕುತ್ತವೆ ಎಂದರೆ, ಅದು ಭಾರತದ ಗೆಲುವು, ಪ್ರಜಾಪ್ರಭುತ್ವದ ಔದಾರ್ಯ ಎಂದು ಧಾರಾಳವಾಗಿ ಹೇಳಬಹುದು. ಪ್ರಪಂಚದ ಯಾವುದೇ ರಾಷ್ಟ್ರದಲ್ಲೂ ಇಷ್ಟೊಂದು ವೈವಿಧ್ಯತೆಯಲ್ಲಿ ಏಕತೆಯ ಪಕ್ಷ ರಾಜಕಾರಣ ಕಾಣಸಿಗುವುದು ಅಸಾಧ್ಯವೇ ಸರಿ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಪಾಕಿಸ್ತಾನವು ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ಮಾಡಲಿ

ಯಾವುದೇ ರಾಜಕೀಯ ಪಕ್ಷದ ಅಂತಿಮ ಉದ್ದೇಶ ಚುನಾವಣೆಯನ್ನು ಗೆದ್ದು ಅಧಿಕಾರ ಹಿಡಿಯುವುದು. ತನ್ಮೂಲಕ ರಾಷ್ಟ್ರದ ಸೇವೆ ಮಾಡುವುದೇ ಗುರಿಯಾಗಿರುತ್ತದೆ. ಈ ವಿಷಯದಲ್ಲೇ ಏನೇ ಟೀಕೆ-ಟಿಪ್ಪಣಿಗಳಿದ್ದರೂ ಅದೆಲ್ಲವೂ ರಾಜಕಾರಣದ ಸಾಧನಗಳಷ್ಟೇ. ಹಾಗಾಗಿ, ಮುಂಬರುವ ಚುನಾವಣೆಯಲ್ಲಿ ಎನ್‌ಡಿಎಯೇ ಆಗಲೀ, ಇಂಡಿಯಾ ಕೂಟವೇ ಆಗಲಿ ದೇಶದ ಪ್ರಗತಿಯೊಂದನ್ನೇ ಗುರಿಯಾಗಿಸಿಕೊಂಡು ಮುನ್ನಡೆಯಲಿ. ದೇಶದ ಭವ್ಯ ಪರಂಪರೆಯ ಹೆಮ್ಮೆಯೊಂದಿಗೆ ಭವಿಷ್ಯದ ಭವ್ಯ ಭಾರತವನ್ನು ನಿರ್ಮಾಣ ಮಾಡುವ ಸಂಕಲ್ಪಗಳನ್ನು ಜನರ ಮುಂದಿಡಲಿ. ರೈತರು, ಮಹಿಳೆಯರು, ಶ್ರಮಿಕರು, ಹಿಂದುಳಿದವರು, ಆದಿವಾಸಿಗಳು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ತಿಳಿಸಲಿ. ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ರೋಡ್ ಮ್ಯಾಪ್ ಹಾಕುವ ಕೆಲಸವನ್ನು ಮಾಡಲಿ. ಈ ರೀತಿಯಾಗಿ ತಮ್ಮೆಲ್ಲ ಕಾರ್ಯಸೂಚಿಗಳೊಂದಿಗೆ ಜನರ ಮುಂದೆ ಹೋಗಲಿ. ಅಂತಿಮವಾಗಿ ಈ ದೇಶದ ಮತದಾರರಿಗೆ ಯಾರ ಮೇಲೆ ವಿಶ್ವಾಸ ಮೂಡುತ್ತದೆಯೋ ಅವರನ್ನು ಆಶೀರ್ವದಿಸುತ್ತಾರೆ. ಅದರೊಂದಿಗೆ ನಮ್ಮ ಪ್ರಜಾಪ್ರಭುತ್ವಕ್ಕೆ ಗೆಲುವಾಗಲಿ. ಹಾಗೆಯೇ, ರಾಜಕೀಯ ಒಕ್ಕೂಟಗಳು ಅವಕಾಶವಾದಿತನದ ಕೂಟ, ಪ್ರಜಾಪ್ರಭುತ್ವದ ಅಣಕ ಕೂಡ ಆಗದಿರಲಿ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading

ದೇಶ

Kerala Governor: ರಾಮಲಲ್ಲಾನಿಗೆ ಶಿರಬಾಗಿ ನಮಸ್ಕರಿಸಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌; ವಿಡಿಯೋ ನೋಡಿ

Kerala Governor:ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆಯುವ ಮೂಲಕ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಬುಧವಾರ ರಾಮಮಂದಿರಕ್ಕೆ ಭೇಟಿ ಕೊಟ್ಟ ಆರಿಫ್‌ ರಾಮಲಲ್ಲಾನ ಮೂರ್ತಿ ಎದುರು ತಲೆಬಾಗಿ ನಮಸ್ಕರಿಸಿದ್ದಾರೆ. ಅಲ್ಲದೇ ಹಿನ್ನೆಲೆಯಲ್ಲಿ ಜೈ ಶ್ರೀರಾಮ್‌ ಎಂಬ ನಾಮಸ್ಮರಣೆ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Kerala Governor
Koo

ಉತ್ತರಪ್ರದೇಶ: ಒಂದು ವರ್ಷದ ಹಿಂದೆ ತಮ್ಮನ್ನು ಹಿಂದೂ ಎಂದು ಕರೆಯರಿ ಎಂಬ ಹೇಳಿಕೆ ನೀಡಿ ಬಹಳ ಸುದಿಯಾಗಿದ್ದ ಕೇರಳ ರಾಜ್ಯಪಾಲ(Kerala Governor) ಆರಿಫ್‌ ಮೊಹಮ್ಮದ್‌ ಖಾನ್‌(Arif Mohammad Khan) ಅವರು ಅಯೋಧ್ಯೆ(Ayodhya)ಗೆ ತೆರಳಿ ರಾಮಲಲ್ಲಾ(Ramalalla)ನ ದರ್ಶನ ಪಡೆಯುವ ಮೂಲಕ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಬುಧವಾರ ರಾಮಮಂದಿರಕ್ಕೆ ಭೇಟಿ ಕೊಟ್ಟ ಆರಿಫ್‌ ರಾಮಲಲ್ಲಾನ ಮೂರ್ತಿ ಎದುರು ತಲೆಬಾಗಿ ನಮಸ್ಕರಿಸಿದ್ದಾರೆ. ಅಲ್ಲದೇ ಹಿನ್ನೆಲೆಯಲ್ಲಿ ಜೈ ಶ್ರೀರಾಮ್‌ ಎಂಬ ನಾಮಸ್ಮರಣೆ ಕೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ವಿಡಿಯೋವನ್ನು ಸ್ವತಃ ಆರಿಫ್‌ ಮೊಹಮ್ಮದ್‌ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಜೈಶ್ರೀರಾಮ್‌ ನಾಮಸ್ಮರಣೆ ನಡೆವೆಯೇ ಅವರು ರಾಮಲಲ್ಲಾನ ಎದುದು ಮಂಡಿಯೂರಿ ನಮಸ್ಕರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇನ್ನು ಅಯೋಧ್ಯೆ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನವರಿಯಲ್ಲಿನಾನು ಎರಡು ಬಾರಿ ಅಯೋಧ್ಯೆಗೆ ಭೇಟಿಕೊಟ್ಟಿದ್ದೇನೆ. ಅನೇಕ ಬಾರಿ ನಾನು ಇಲ್ಲಿಗೆ ಭೇಟಿಕೊಟ್ಟಿದ್ದೇನೆ. ಅಯೋಶ್ಯೆಗೆ ಬಂದು ಶ್ರೀರಾಮನನ್ನು ಪೂಜಿಸುವುದು ಇದು ಸಂತೋಷದ ವಿಚಾರ ಮಾತ್ರವಲ್ಲದೇ ಹೆಮ್ಮೆಯ ಸಂಗತಿ ಎಂದು ಬರೆದುಕೊಂಡಿದ್ದಾರೆ.

ಮೂಲತಃ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದರೂ ಆರಿಫ್‌ ಹಿಂದೂ ಸಂಸ್ಕೃತಿ, ಪರಂಪರೆ ಬಗ್ಗೆ ಅತೀವ ನಂಬಿಕೆ ಮತ್ತು ಪ್ರೀತಿ ಇಟ್ಟುಕೊಂಡವರು. ಈ ಹಿಂದೆ ಆರ್ಯ ಸಮಾಜವು ತಮ್ಮನ್ನು ಹಿಂದೂ ಎಂದು ಕರೆಯಲೇಬೇಕು ಎಂದು ಆಗ್ರಹಿಸಿದ್ದರು. ಕೇರಳದ ತಿರುವನಂಥಪುರದ ಕೇರಳ ಹಿಂದೂಸ್ ಆಫ್ ನಾರ್ಥ್ ಅಮೆರಿಕ(ಕೆಎಚ್ಎನ್ಎ) ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ(ಆರ್ಯ ಸಮಾಜ) ನನ್ನದೊಂದು ಗಂಭೀರ ಆರೋಪವಿದೆ. ನೀವೇಕೆ ನನ್ನನ್ನು ಹಿಂದೂ ಎಂದು ಕರೆಯುವುದಿಲ್ಲ. ಹಿಂದೂ ಎಂಬುದನ್ನು ನಾನು ಧಾರ್ಮಿಕವಾಗಿ ಪರಿಗಣಿಸುವುದಿಲ್ಲ. ಅದೊಂದು ಭೌಗೋಳಿಕ ಸೂಚಕಪದವಾಗಿದೆ ಎಂದು ಹೇಳಿದರು.

ಭಾರತದಲ್ಲಿ ಹುಟ್ಟಿದವರು, ಇಲ್ಲೇ ವಾಸಿಸುವವರು, ಇಲ್ಲಿ ಹರಿಯುವ ನದಿಗಳು ನೀರು ಕುಡಿಯುವವರು ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳಬೇಕು. ಹಾಗಾಗಿ, ನೀವು ನನ್ನನ್ನೂ ಹಿಂದೂ ಎಂದೇ ಕರೆಯಬೇಕು ಎಂದು ಸೈಯರ್ ಸೈಯದ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಅಭಿಪ್ರಾಯಪಟ್ಟಿದ್ದರು. ವಸಾಹತುಶಾಹಿ ಯುಗದಲ್ಲಿ ಹಿಂದೂ, ಮುಸ್ಲಿಂ ಮತ್ತು ಸಿಖ್‌ನಂತಹ ಪರಿಭಾಷೆಗಳನ್ನು ಬಳಸುವುದು ಓಕೆ. ಏಕೆಂದರೆ ಬ್ರಿಟಿಷರು ನಾಗರಿಕರ ಸಾಮಾನ್ಯ ಹಕ್ಕುಗಳನ್ನು ನಿರ್ಧರಿಸಲು ಸಮುದಾಯಗಳನ್ನು ಆಧಾರವಾಗಿಸಿಕೊಂಡಿದ್ದರು. ಕೇರಳ ಸರ್ಕಾರದ ಜತೆಗಿನ ಸಂಘರ್ಷಕ್ಕೆ ಆಗಾಗ ಸುದ್ದಿಯಾಗುವ ಖಾನ್, ನಾನು ಹಿಂದೂ ಎಂದು ಹೇಳುವುದು ತಪ್ಪು ಎಂಬ ಭಾವನೆ ಮೂಡಿಸುವ ಷಡ್ಯಂತ್ರ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಕೇರಳ ಸರ್ಕಾರದ ಮತ್ತು ಆರಿಫ್‌ ನಡುವೆ ತೀವ್ರ ವೈಮನಸ್ಸು ಇದ್ದು, ವಿಶೇಷ ಬೆಳವಣಿಗೆಯೊಂದರಲ್ಲಿ ಅವರು ಸರ್ಕಾರದ ವಿರುದ್ಧ ನಡುರಸ್ತೆಯಲ್ಲಿ ಧರಣಿ ಕುಳಿತು ದೇಶದ ಗಮನ ಸೆಳೆದಿದ್ದರು.

Continue Reading

ದೇಶ

Air India Express: 30 ಸಿಬ್ಬಂದಿಯನ್ನು ವಜಾಗೊಳಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌; ಇಂದು 74 ವಿಮಾನಗಳ ಹಾರಾಟ ರದ್ದು

Air India Express: ಸಾಮೂಹಿಕ ಅನಾರೋಗ್ಯದ ರಜೆ ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು.

VISTARANEWS.COM


on

Air India Express
Koo

ನವದೆಹಲಿ: ಸಾಮೂಹಿಕ ಅನಾರೋಗ್ಯದ ರಜೆ (Sick Leave) ಹಾಕಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನದ 30 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ ರಜೆ ಹಾಕಿರುವ ಹಿನ್ನೆಲೆಯಲ್ಲಿ ಹಲವು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಹಾರಾಟ ರದ್ದಾಗಿವೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಅನೇಕ ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ. ಇಂದು ಸಂಜೆ 4 ಗಂಟೆಯೊಳಗೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಗಮಿಸದಿದ್ದರೆ ಶಿಸ್ತು ಕ್ರಮ ನಡೆಸಲಾಗುವುದು ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಕೊರತೆಯಿಂದ ಗುರುವಾರ ಸುಮಾರು 74 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಬುಧವಾರ ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾದ ಅಂಗಸಂಸ್ಥೆಯಾದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಸುಮಾರು 86 ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದ್ದರು.

30ಕ್ಕೂ ಹೆಚ್ಚು ಸಿಬ್ಬಂದಿಗೆ ನೀಡಲಾದ ವಜಾ ಪತ್ರದಲ್ಲಿ, ಸಾಮೂಹಿಕ ರಜೆಯು ʼಯಾವುದೇ ಸಮರ್ಥನೀಯ ಕಾರಣವಿಲ್ಲದೆ ಪೂರ್ವ ನಿಯೋಜಿತ ಮತ್ತು ಸಂಘಟಿತ ಕೆಲಸದಿಂದ ದೂರವಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆʼ ಎಂದು ಉಲ್ಲೇಖಿಸಲಾಗಿದೆ. “ನಿಮ್ಮ ಪ್ರತಿಭಟನೆ ಕಾರಣದಿಂದ ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಯಿತು. ಇದು ಕಂಪನಿಯ ಪ್ರಯಾಣಿಕರಿಗೆ ಭಾರಿ ಅನಾನುಕೂಲತೆಯನ್ನು ಉಂಟು ಮಾಡಿದೆ. ನಿಮ್ಮ ಕೃತ್ಯವು ಸಾರ್ವಜನಿಕ ಹಿತಾಸಕ್ತಿಯನ್ನು ವಿರುದ್ಧವಾಗಿದೆ. ಜತೆಗೆ ಕಂಪನಿಗೆ ಗಂಭೀರ ವಿತ್ತೀಯ ನಷ್ಟವನ್ನು ಉಂಟು ಮಾಡಿದೆʼʼ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚೆನ್ನೈಯಿಂದ ಕೋಲ್ಕತ್ತಾ, ಚೆನ್ನೈಯಿಂದ ಸಿಂಗಾಪುರ, ತಿರುಚ್ಚಿಯಿಂದ ಸಿಂಗಾಪುರ ಮತ್ತು ಜೈಪುರದಿಂದ ಮುಂಬೈಗೆ ತೆರಳು ವಿಮಾನಗಳು ರದ್ದಾಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಕಾರಣವೇನು?

ಟಾಟಾ ಗ್ರೂಪ್‌ ಜತೆಗೆ ಏರ್‌ ಇಂಡಿಯಾ ವಿಲೀನಗೊಂಡ ಬಳಿಕ ಸಿಬ್ಬಂದಿ ನಡುವೆ ತಾರತಮ್ಯ ಸಮಸ್ಯೆ ಉಂಟಾಗಿತ್ತು. ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೆಲವೊಂದು ಸಿಬ್ಬಂದಿಗೆ ಕೆಲದರ್ಜೆಯ ನೌಕರಿಯನ್ನು ನೀಡಲಾಗುತ್ತಿದೆ. ಪರಿಹಾರ ಪ್ಯಾಕೇಜ್‌ನ ಪ್ರಮುಖ ಭಾಗಗಳನ್ನು ಮಾರ್ಪಡಿಸಲಾಗಿದೆ ಅಥವಾ ತೆಗೆದು ಹಾಕಲಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಬಲವಂತವಾಗಿ ಬಾಯಿಮುಚ್ಚಿಸಲಾಗುತ್ತಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ವಿಮಾನಯಾನ ಸಂಸ್ಥೆಯು ಪ್ರಸ್ತುತ ಎಐಎಕ್ಸ್ ಕನೆಕ್ಟ್ (ಹಿಂದಿನ ಏರ್ ಏಷ್ಯಾ ಇಂಡಿಯಾ) ಅನ್ನು ತನ್ನೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಯಲ್ಲಿದೆ. ಪೈಲಟ್ ಸಮಸ್ಯೆಗಳಿಂದಾಗಿ ಟಾಟಾ ಗ್ರೂಪ್ ಪೂರ್ಣ-ಸೇವಾ ವಾಹಕ ವಿಸ್ತಾರಾ ರದ್ದಾಗಿರುವ ಬೆನ್ನಲ್ಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಈ ಬಿಕ್ಕಟ್ಟು ಆರಂಭವಾಗಿದೆ. ಏರ್ ಇಂಡಿಯಾದೊಂದಿಗೆ ವಿಲೀನಗೊಳ್ಳುವ ಪ್ರಕ್ರಿಯೆ ಬಗ್ಗೆ ವಿಸ್ತಾರಾದಲ್ಲಿದ್ದ ಪೈಲಟ್‌ಗಳಲ್ಲೂ ಅಸಮಾಧಾನವು ಭುಗಿಲೆದ್ದಿತ್ತು. ಹೊಸ ಒಪ್ಪಂದಗಳನ್ನು ಅನುಸರಿಸಿ, ಪೈಲಟ್‌ಗಳು ವಿಮಾನಗಳನ್ನು ನಿರ್ವಹಿಸುವ ರೋಸ್ಟರ್‌ಗಳು ಮತ್ತು ಅವರ ವೇತನ ಪ್ಯಾಕೇಜ್‌ಗಳ ಅಂಶಗಳ ಬಗ್ಗೆ ಕಳವಳಗಳಿವೆ. ಈ ಎಲ್ಲ ಕಾರಣಗಳಿಂದ ಏರ್‌ ಇಂಡಿಯಾ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Air India | ಏರ್‌ ಇಂಡಿಯಾದಲ್ಲಿ ವಿಸ್ತಾರ, ಏರ್‌ ಏಷ್ಯಾ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಲೀನ ಶೀಘ್ರ

Continue Reading
Advertisement
Money Guide
ಮನಿ-ಗೈಡ್3 mins ago

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Virender Sehwag
ಕ್ರಿಕೆಟ್11 mins ago

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Administration of Hindu temples should be handed over to Hindus says Pejawara Shri
ಕರ್ನಾಟಕ36 mins ago

Pejawar Swamiji: ದೇವಾಲಯಗಳ ಆಡಳಿತ ಸಂಪೂರ್ಣವಾಗಿ ಹಿಂದೂಗಳಿಗೆ ಒಪ್ಪಿಸಬೇಕು: ಪೇಜಾವರ ಶ್ರೀ

Navneet Rana
Lok Sabha Election 20241 hour ago

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

SSLC Result 2024 SSLC 2nd and 3rd exam aspirants to have special classes
ಕರ್ನಾಟಕ2 hours ago

SSLC Result 2024: ಎಸ್‌ಎಸ್‌ಎಲ್‌ಸಿ 2, 3ನೇ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್‌! ಇರಲಿದೆ ಸ್ಪೆಷಲ್‌ ಕ್ಲಾಸ್‌

SSLc Exam 2 time table
ಶಿಕ್ಷಣ2 hours ago

SSLC 2 Exam Time Table : ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಡೇಟ್‌ ಫಿಕ್ಸ್‌; ವೇಳಾಪಟ್ಟಿ ಹೀಗಿದೆ

Mahender Pratap Singh
ದೇಶ2 hours ago

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

No one has failed in SSLC says Education Department
ಕರ್ನಾಟಕ2 hours ago

SSLC Result 2024: ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾರೂ ಫೇಲ್‌ ಆಗಿಲ್ಲ! ಶಿಕ್ಷಣ ಇಲಾಖೆ ಹೀಗೆ ಹೇಳಿದ್ದು ಯಾಕೆ?

SSLC Result 2024 what is the reason for most of the students fail in SSLC
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Aavesham Releases On OTT Fahadh Faasil Hit Malayalam Film
ಮಾಲಿವುಡ್3 hours ago

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ3 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ3 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌