ವಿಸ್ತಾರ ಸಂಪಾದಕೀಯ: ಹೆಲ್ತ್ ಎಟಿಎಂ ಆರೋಗ್ಯ ಸೇವೆಯ ವ್ಯಾಪ್ತಿ ಹಿಗ್ಗಿಸಲಿ - Vistara News

ಆರೋಗ್ಯ

ವಿಸ್ತಾರ ಸಂಪಾದಕೀಯ: ಹೆಲ್ತ್ ಎಟಿಎಂ ಆರೋಗ್ಯ ಸೇವೆಯ ವ್ಯಾಪ್ತಿ ಹಿಗ್ಗಿಸಲಿ

ರಾಜ್ಯ ಸರ್ಕಾರವು ‘ಆರೋಗ್ಯ ಮಿತ್ರ’ ಯೋಜನೆಯಡಿ ಹೆಲ್ತ್ ಎಟಿಎಂ ಎಂಬ ವಿನೂತನ ಸೌಲಭ್ಯಕ್ಕೆ ಚಾಲನೆ ನೀಡಿದೆ. ಈ ಹೊಸ ವ್ಯವಸ್ಥೆಯು ಆರೋಗ್ಯ ಸುಧಾರಣೆಯಲ್ಲಿ ಸಾಕಷ್ಟು ಮಹತ್ವದ ಪಾತ್ರ ನಿರ್ವಹಣೆ ಮಾಡಲಿದ್ದು, ಆರೋಗ್ಯ ಸೇವೆಯನ್ನು ಇನ್ನಷ್ಟು ಜನರ ಹತ್ತಿರಕ್ಕೆ ತೆಗೆದುಕೊಂಡು ಹೋಗಲಿದೆ.

VISTARANEWS.COM


on

Health ATM
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನರ ಆರೋಗ್ಯ ಸುಧಾರಣೆಯಲ್ಲಿ ರಾಜ್ಯದ ಸಿದ್ದರಾಮಯ್ಯ ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ‘ಸ್ಮಾರ್ಟ್ ಹೆಲ್ತ್ ಕಿಯೋಸ್ಕ್’ (ಹೆಲ್ತ್‌ ಎಟಿಎಂ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉದ್ಘಾಟಿಸಿದ್ದಾರೆ. ‘ಆರೋಗ್ಯ ಮಿತ್ರ’ ಯೋಜನೆಯಡಿ, ಕಾರ್ಪೋರೇಟ್‌ ಕಂಪನಿಗಳ ಸಿಎಸ್‌ಆರ್‌ ನಿಧಿಯಡಿ(CSR Fund) 5 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ‘ಹೆಲ್ತ್‌ ಎಟಿಎಂ’ ಯೋಜನೆ ಜಾರಿಗೊಂಡಿದೆ. ಆರೋಗ್ಯ ಕೇಂದ್ರಗಳಲ್ಲಿ, ವೆಲ್‌ನೆಸ್ ಸೆಂಟರ್ ಸೇರಿದಂತೆ 25 ಆಯ್ದ ಸ್ಥಳಗಳಲ್ಲಿ ಹೆಲ್ತ್ ಎಟಿಎಂ ಆರಂಭ ಮಾಡಲಾಗಿದೆ. ಕರ್ನಾಟಕದ ಸರ್ಕಾರದ ಈ ಸಮುದಾಯ ಆರೋಗ್ಯ ಸುಧಾರಣೆ ನಡೆಯು ಮಹತ್ವದ್ದಾಗಿದ್ದು, ಶ್ಲಾಘನೀಯ ಕಾರ್ಯವಾಗಿದೆ.

ಈ ಸ್ಮಾರ್ಟ್ ಹೆಲ್ತ್ ಕಿಯೋಸ್ಕ್‌ಗಳ ಮೂಲಕ ತಪಾಸಣೆ ಮತ್ತು ಶೀಘ್ರ ರೋಗ ಪತ್ತೆ ಜತೆಗೆ ನಿಯಂತ್ರಣಕ್ಕೆ ತಂತ್ರಜ್ಞಾನ ಬಳಸಲಾಗುತ್ತಿದೆ. ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕಲಬುರಗಿ ಜಿಲ್ಲಾ ಆಡಳಿತ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಆರೋಗ್ಯ ಮಿತ್ರ ಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಯಡಿ ಕಲಬುರಗಿ ಜಿಲ್ಲೆಗೆ ಎಚ್.ಪಿ ಎಂಟರ್‌ಪ್ರೈಸಸ್ ವತಿಯಿಂದ 25 ಹೆಲ್ತ್ ಎಟಿಎಂ ಘಟಕಗಳನ್ನು ಆರಂಭಿಸಲಾಗಿದೆ.

ಈ ಹೆಲ್ತ್‌ ಎಟಿಎಂಗಳಿಂದ ಸಾಕಷ್ಟು ಪ್ರಯೋಜನಗಳಿವೆ. ಜನಸಂದಣಿ ಪ್ರದೇಶಗಳಲ್ಲಿ ಲಭ್ಯತೆ ಇರುವ ಆರೋಗ್ಯ ಎಟಿಎಂಗಳ ಮೂಲಕ ಸರಳವಾದ ಆರೋಗ್ಯ ಸೇವೆಗಳ ಲಭ್ಯವಾಗಲಿದೆ. ನಿಖರವಾದ ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಎಟಿಎಂಗಳನ್ನೂ ಬಳಸುವುದರಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ಸಮಗ್ರ ಆರೋಗ್ಯ ಸೇವೆಗಳಿಂದ ತುರ್ತು ಸ್ಪಂದನೆ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಮೂಲಕ ಉತ್ತಮ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮ ಸಾಧ್ಯವಾಗಲಿದೆ. ನಿರಂತರ ಆರೋಗ್ಯ ತಪಾಸಣೆ ಮತ್ತು ಮೇಲ್ವಿಚಾರಣೆಯ ಮೂಲಕ ರೋಗಗಳನ್ನು ಪತ್ತೆ ಹಚ್ಚಲು ಮತ್ತು ತಡೆಗಟ್ಟಲು ಸಹಕಾರಿಯಾಗಲಿದೆ. ರೋಗಿಯ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಗೌಪ್ಯವಾಗಿ ಇಡಬಹುದು. 10 ನಿಮಿಷದಲ್ಲಿ 50ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಬಹುದು ಮತ್ತು ತ್ವರಿತ ಆರೋಗ್ಯದ ವರದಿಯನ್ನು ನೀಡಲು ಸಾಧ್ಯವಾಗಲಿದೆ. ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿ ಅಂತರವನ್ನು ಕಡಿಮೆ ಮಾಡಿ ದುರ್ಗಮ ಪ್ರದೇಶಗಳಿಗೂ ಕೂಡ ಆರೋಗ್ಯ ಸೇವೆಗಳನ್ನು ತಲುಪಿಸಬಹುದು. ಹಾಗಾಗಿ, ಸಾಮುದಾಯಿಕ ಆರೋಗ್ಯ ಸುಧಾರಣೆ ದೃಷ್ಟಿಯಿಂದ ಈ ಯೋಜನೆಯು ಮೈಲುಗಲ್ಲಾಗಲಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಸನಾತನ ಧರ್ಮ ಕುರಿತ ಕೋರ್ಟ್ ಅಭಿಮತ ಹಿಂದೂ ದ್ವೇಷಿಗಳ ಕಣ್ಣು ತೆರೆಸಲಿ

ಸಾಮಾನ್ಯವಾಗಿ ಸರ್ಕಾರಗಳು ಹೊಸ ಯೋಜನೆಗಳನ್ನು ಸದುದ್ದೇಶ ಮತ್ತು ಅತ್ಯುತ್ಸಾಹದಿಂದಲೇ ಆರಂಭಿಸುತ್ತವೆ. ಆದರೆ, ಅವುಗಳ ಜಾರಿಯಲ್ಲಿ ಹಿನ್ನಡೆಯನ್ನು ಕಾಣುತ್ತವೆ. ಸಮುದಾಯ ಆರೋಗ್ಯ ಸುಧಾರಣೆಯಲ್ಲಿ ರಾಜ್ಯದಲ್ಲಿ ಯಶಸ್ವಿನಿ ಸೇರಿದಂತೆ ಈಗಾಗಲೇ ಅನೇಕ ಆರೋಗ್ಯ ಕಾರ್ಯಕ್ರಮಗಳು ಜಾರಿಯಲ್ಲಿವೆ. ಕೇಂದ್ರ ಸರ್ಕಾರದ ಆಯುಷ್ಮಾನ್ ಕೂಡ ಇದೆ. ಹೀಗಿದ್ದೂ, ಅರ್ಹ ಫಲಾನುಭವಿಗಳಿಗೆ ಸಕಾಲಕ್ಕೆ ಅವುಗಳ ಲಾಭ ದೊರೆಯುತ್ತಿಲ್ಲ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಈ ಕುರಿತು ಆಗಾಗ ಟಿವಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗುತ್ತಲೇ ಇರುತ್ತವೆ. ಯೋಜನೆಯಲ್ಲಿ ಭಾಗಿದಾರರಾಗಿರುವ ಆಸ್ಪತ್ರೆಗಳ ನಿರುತ್ಸಾಹ ಮತ್ತು ಅಧಿಕಾರ ವರ್ಗದ ವಿಳಂಬ ಧೋರಣೆಯು ಜನಪರ ಯೋಜನೆಗಳ ಹಿನ್ನಡೆಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯೋಚಿಸಬೇಕಿದೆ. ಯಾವುದೇ ಯೋಜನೆಯ ಸಾಫಲ್ಯ ಅದರ ಅನುಷ್ಠಾನದಲ್ಲಿ ಅಡಗಿರುತ್ತದೆ. ಹಾಗಾಗಿ, ಯೋಜನೆಯ ಜಾರಿಯನ್ನು ಫಾಲೋಅಪ್ ಮಾಡುವಂಥ ಇಲ್ಲವೇ ನಿಗಾ ವ್ಯವಸ್ಥೆಯನ್ನೂ ರೂಪಿಸಬೇಕು. ಈ ಪ್ರಕ್ರಿಯೆಯಲ್ಲಿ ತಪ್ಪೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಹೊಸ ಯೋಜನೆಗಳ ಜತೆಗೆ ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿದೆ. ಅನೇಕ ಕಡೆ ಸರ್ಕಾರಿ ಆಸ್ಪತ್ರೆಗಳೇ ಇಲ್ಲ. ಆಸ್ಪತ್ರೆಗಳು ಇರುವೆಡೆ ನುರಿತ ಸಿಬ್ಬಂದಿ ಕೊರತೆ ಇರುತ್ತದೆ. ಎಲ್ಲವೂ ಇದ್ದರೆ, ಮೂಲಸೌಕರ್ಯಗಳು ಇರುವುದಿಲ್ಲ. ಜಿಲ್ಲಾ ಮಟ್ಟದ ಆಸ್ಪತ್ರೆಯಿಂದ ಹಿಡಿದು ಗ್ರಾಮ ಮಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದವರಿಗೆ ವೈದ್ಯರ ಕೊರತೆ ಇದೆ. ಈ ಸಮಸ್ಯೆಯೇ ಮುಖ್ಯವಾಗಿ ಆರೋಗ್ಯ ಸುಧಾರಣೆಯಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಗುತ್ತಿದೆ ಎಂಬುದನ್ನು ಸರ್ಕಾರ ಅರಿತುಕೊಂಡು, ಪರಿಹಾರ ಕಂಡುಕೊಳ್ಳುವುದಕ್ಕೆ ಯತ್ನಿಸಬೇಕು. ಹೆಲ್ತ್ ಎಟಿಎಂನಂಥ ವಿನೂತನ ಕಾರ್ಯಕ್ರಮಗಳ ಜತೆಗೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಬಲಪಡಿಸುವ ಕಾರ್ಯವನ್ನು ರಾಜ್ಯ ಸರ್ಕಾರವು ಕಾಲಮಿತಿಯೊಳಗೇ ಮಾಡಲಿ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

ಮಧ್ಯಾಹ್ನವಿರಬಹುದು, ರಾತ್ರಿಯೇ ಇರಬಹುದು, ಊಟದ ನಂತರ ಒಂದ್ಹತ್ತು ನಿಮಿಷ ಸುಮ್ಮನೆ ಕೂತು ನಂತರ ಒಂದ್ಹತ್ತು ನಿಮಿಷದ ಲಘುವಾದ ನಡಿಗೆಯ ಅಭ್ಯಾಸ ಇಟ್ಟುಕೊಳ್ಳುವುದು ಒಳ್ಳೆಯದು ಎನ್ನುತ್ತವೆ ಅಧ್ಯಯನಗಳು. ಊಟವಾದ ತಕ್ಷಣ ನಡೆಯುವುದರಿಂದ ಸಿಗುವ ಅತ್ಯುತ್ತಮ ಲಾಭವೆಂದರೆ ಸರಿಯಾದ ಜೀರ್ಣಕ್ರಿಯೆಗೆ ಪ್ರಚೋದನೆ ಸಿಗುವುದು. ಹೌದು. ಕರುಳು, ಜಠರ ಮತ್ತಿತರ ಜೀರ್ಣಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಂಗಾಂಗಗಳ ಮಾಂಸಖಂಡಗಳಿಗೆ ನಡಿಗೆಯಿಂದ ಚುರುಕು ಮುಟ್ಟಿದಂತಾಗಿ, ಪಚನಕ್ರಿಯೆ ವೇಗವಾಗಿ ಆಗುತ್ತದೆ. ಊಟದ ನಂತರದ ಹಗುರವಾದ ನಡಿಗೆಯಿಂದ ಇನ್ನೂ ಏನೇನು ಲಾಭಗಳಿವೆ ಎಂಬುದರ (Benefits Of Walk After Meal ) ವಿವರ ಇಲ್ಲಿದೆ.

VISTARANEWS.COM


on

Benefits Of Walk After Meal
Koo

ಮಧ್ಯಾಹ್ನ ಊಟವಾದ ಮೇಲೆ ಸಣ್ಣದೊಂದು ನಿದ್ದೆ ಹೊಡೆಯುವುದು ಮನೆಯಲ್ಲಿರುವ ಎಲ್ಲ ಮಂದಿಗೂ ಒಂದು ಸಹಜವಾದ ಅಷ್ಟೇ ಖುಷಿಕೊಡುವ ಒಂದು ಅಭ್ಯಾಸ. ಮಧ್ಯಾಹ್ನದ ನಿದ್ದೆ ಒಳ್ಳೆಯದಲ್ಲ ಎಂದು ಗೊತ್ತಿದ್ದೂ ಗೊತ್ತಿದ್ದೂ ಇದು ಅಭ್ಯಾಸವಾಗಿಬಿಟ್ಟಿರುತ್ತದೆ. ಇನ್ನು ಕಚೇರಿಯಲ್ಲಿ ಕೆಲಸ ಮಾಡುವ ಮಂದಿಗೆ ಈ ಸೌಲಭ್ಯ ಸಿಗುವುದಿಲ್ಲವಾದ್ದರಿಂದ ರಾತ್ರಿ ಮನೆಗೆ ಬಂದ ಮೇಲೆ, ಊಟದ ನಂತರ ಸುಸ್ತಾಗಿ ಮಲಗಿಬಿಡುವುದು ಅಭ್ಯಾಸವಾಗಿಬಿಟ್ಟಿರುತ್ತದೆ. ಒಂದು ಚಂದನೆಯ ಊಟ, ಜೊತೆಗೊಂದು ನಿದ್ದೆ ಎಂಬುದನ್ನು ಯೋಚನೆಯೇ ಎಲ್ಲರಿಗೂ ಖುಷಿಯನ್ನು ಕೊಡುವಂಥದ್ದು. ಆದರೆ, ಹಾಗೆ ನೋಡಿದರೆ, ಈ ಅಭ್ಯಾಸ ಆರೋಗ್ಯದ ದೃಷ್ಟಿಯಿಂದ ಒಳ್ಳೆಯ ಅಭ್ಯಾಸ ಖಂಡಿತ ಅಲ್ಲ. ಮಧ್ಯಾಹ್ನವಿರಬಹುದು, ರಾತ್ರಿಯೇ ಇರಬಹುದು, ಊಟದ ನಂತರ ಒಂದ್ಹತ್ತು ನಿಮಿಷ ಸುಮ್ಮನೆ ಕೂತು ನಂತರ ಒಂದ್ಹತ್ತು ನಿಮಿಷದ ಲಘುವಾದ ನಡಿಗೆಯ ಅಭ್ಯಾಸ ಇಟ್ಟುಕೊಳ್ಳುವುದು ಒಳ್ಳೆಯದು ಎನ್ನುತ್ತವೆ ಅಧ್ಯಯನಗಳು. ಹಾಗಾದರೆ ಬನ್ನಿ, ಊಟದ ನಂತರದ ಹಗುರವಾದ (Benefits Of Walk After Meal ) ನಡಿಗೆಯಿಂದಾಗುವ ಲಾಭಗಳೇನು ಎಂಬುದನ್ನು ತಿಳಿಯೋಣ.

healthy internal organs of human digestive system

ಜೀರ್ಣಕ್ರಿಯೆಗೆ ಪ್ರಚೋದನೆ

ಊಟವಾದ ತಕ್ಷಣ ನಡೆಯುವುದರಿಂದ ಸಿಗುವ ಅತ್ಯುತ್ತಮ ಲಾಭವೆಂದರೆ ಸರಿಯಾದ ಜೀರ್ಣಕ್ರಿಯೆಗೆ ಪ್ರಚೋದನೆ ಸಿಗುವುದು. ಹೌದು. ಕರುಳು, ಜಠರ ಮತ್ತಿತರ ಜೀರ್ಣಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಂಗಾಂಗಗಳ ಮಾಂಸಖಂಡಗಳಿಗೆ ನಡಿಗೆಯಿಂದ ಚುರುಕು ಮುಟ್ಟಿದಂತಾಗಿ, ಪಚನಕ್ರಿಯೆ ವೇಗವಾಗಿ ಆಗುತ್ತದೆ. ಈ ಅಂಗಾಂಶಗಳು ಜಡತ್ವದಿಂದ ಮೇಲೆದ್ದು ತಮ್ಮ ಕೆಲಸವನ್ನು ಚುರುಕಾಗಿ ಮಾಡುತ್ತವೆ. ಊಟವಾದ ಮೇಲಿನ ಹಗುರವಾದ ನಡಿಗೆಯೂ ಸಾಕು, ಓಡುವುದು, ಜಾಗಿಂಗ್‌ ಮಾಡುವುದು ಇತ್ಯಾದಿಗಳ ಅಗತ್ಯವಿಲ್ಲ. ನಿಧಾನವಾದ, ನಿಮ್ಮ ಸಹಜವಾದ ೧೫ ನಿಮಿಷಗಳ ನಡಿಗೆಯೂ ಸಾಕು. ಇದರಿಂದ ಆಹಾರ ಸರಿಯಾಗಿ ಜೀರ್ಣವಾಗಿ ಹೊಟ್ಟೆಯುಬ್ಬರ, ಮಲಬದ್ಧತೆ, ಅಸಿಡಿಟಿ, ಹೊಟ್ಟೆಯ ಸಮಸ್ಯೆ ಇರುವ ಮಂದಿಗೂ ಸಾಕಷ್ಟು ಲಾಭವಾಗುತ್ತದೆ.

heart attack and Diabetes control

ಮಧುಮೇಹಕ್ಕೆ ಮದ್ದು

ಮಧುಮೇಹ ಇರುವ ಮಂದಿಗೆ ಊಟದ ನಂತರದ ವಾಕಿಂಗ್‌ ಬಹಳ ಒಳ್ಳೆಯದು. ಯಾಕೆಂದರೆ, ಈ ಸಂದರ್ಭದ ನಡಿಗೆಯಿಂದ ಮದುಮೇಹಿಗಳ ದೇಹಕ್ಕೆ ಕೂಡಲೇ ಸಕ್ಕರೆ ಏರುವ ಪರಿಣಾಮ ಕೊಂಚ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆ ಸರಿಯಾಗಿ ಆಗುವ ಮೂಲಕ ಸಕ್ಕರೆಯ ಪ್ರಮಾಣ ದೇಹಕ್ಕೆ ರಕ್ತಕ್ಕೆ ಒಡನೆಯೇ ಸೇರದು. ಇದರಿಂದ ಸಕ್ಕರೆಯ ಮಟ್ಟದ ದಿಢೀರ್‌ ಏರಿಕೆಯ ಸಮಸ್ಯೆ ಬಾರದು.

weight loss

ತೂಕ ಇಳಿಸಲು ಸಹಕಾರಿ

ತೂಕ ಇಳಿಸುವ ಮಂದಿಗೆ ಈ ಅಭ್ಯಾಸ ಬಹಳ ಒಳ್ಳೆಯದು. ಕ್ಯಾಲರಿ ಬರ್ನ್‌ ಮಾಡಲು, ಊಟವಾದ ತಕ್ಷಣ ನಡೆಯುವುದರಿಂದ ಸಾಕಷ್ಟು ಲಾಭವಿದೆ. ಕೇವಲ ತೂಕವಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಲಾಭಗಳೂ ಇವೆ. ಅಷ್ಟೇ ಅಲ್ಲ, ಮಾನಸಿಕ ಆರೋಗ್ಯ, ಹೃದಯದ ಆರೋಗ್ಯವೂ ಇದರಿಂದ ವೃದ್ಧಿಯಾಗುತ್ತದೆ. ಮಾಂಸಖಂಡಗಳ ಹಾಗೂ ಎಲುಬಿನ ಆರೋಗ್ಯ ವೃದ್ಧಿಸುತ್ತದೆ.

Blood pressure management

ಬಿಪಿ ನಿಯಂತ್ರಣಕ್ಕೆ ಸಹಕಾರಿ

ರಕ್ತದೊತ್ತಡದ ಸಮಸ್ಯೆ ಇರುವ ಮಂದಿಗೂ ಊಟದ ನಂತರದ ನಡಿಗೆ ಒಳ್ಳೆಯದು. ಇದು ರಕ್ತದೊತ್ತಡವನ್ನು ಸಮತೋಲನಗೊಳಿಸುತ್ತದೆ.

Sleeping

ಒಳ್ಳೆಯ ನಿದ್ದೆಗೆ ಪೂರಕ

ಒಳ್ಳೆಯ ನಿದ್ದೆ ಬೇಕಾ? ಹಾಗಾದರೆ, ನಿತ್ಯವೂ ಊಟದ ನಂತರ ವಾಕ್‌ ಮಾಡಿ. ಹೌದು. ಊಟವಾದ ನಂತರ ೧೫-೨೦ ನಿಮಿಷಗಳ ಹಗುರವಾದ ನಡಿಗೆಯಿಂದ, ಊಟ ಬೇಘ ಕರಗುತ್ತದೆ. ಜೊತೆಗೆ ಹೊಟ್ಟೆ ಹಗುರವಾಗುತ್ತದೆ. ಸುಖವಾದ, ಸೊಂಪಾದ ನಿದ್ದೆ ನಿಮಗೆ ಬರುತ್ತದೆ. ಇದರಿಂದ ಮಾರನೇ ದಿನ ಏಳುವಾಗ ನೀವು ಫ್ರೆಶ್ಶಾಗಿರುತ್ತೀರಿ. ತಾಜಾತನದಿಂದ ನೀವು ಮಾರನೇ ದಿನದ ಕೆಲಸವನ್ನು ಉಲ್ಲಾಸದಿಂದ ಮಾಡುವ ಶಕ್ತಿ, ಚೈತನ್ಯ ನಿಮ್ಮದಾಗುತ್ತದೆ.
ವಾಕ್‌ ಮಾಡುವಾಗ ನೀವು ಒಂದೇ ಒಂದು ವಿಚಾರವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಊಟವಾದ ತಕ್ಷಣ ನಡಿಗೆ ಆರಂಭಿಸಬೇಡಿ. ಊಟದ ನಂತರ ಹತ್ತರಿಂದ 15 ನಿಮಿಷಗಳ ಗ್ಯಾಪ್‌ ಕೊಡಿ. ನಂತರ 10-15 ನಿಮಿಷ ಸಣ್ಣದೊಂದು ವಾಕ್‌ ಮಾಡಿ. ದೂರ ಅಲ್ಲದಿದ್ದರೂ, ಮನೆಯಲ್ಲೇ, ಮನೆಯ ಅಂಗಳದಲ್ಲೇ ಸುಮ್ಮನೆ ವೃತ್ತಾಕಾರದಲ್ಲಿ ನಡೆಯಬಹುದು. ಜೊತೆಗೆ ವೇಗವಾಗಿ ನಡೆಯುವುದು ಈ ಸಂದರ್ಭ ಸಲ್ಲದು. ನಿಧಾನವಾಗಿ ನಡೆದರೆ ಈ ಎಲ್ಲ ಪ್ರಯೋಜನಗಳನ್ನು ಪಡೆಯಬಹುದು. ನಿಯಮಿತವಾಗಿ ಈ ಅಭ್ಯಾಸವನ್ನು ಇಟ್ಟುಕೊಂಡರೆ, ಲಾಭಗಳನ್ನು ಕಂಡುಕೊಳ್ಳುವಿರಿ.

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Continue Reading

ಆರೋಗ್ಯ

World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

ಶತಮಾನಗಳ ಹಿಂದೆ ಯಾಂತ್ರೀಕೃತ ಸಾರಿಗೆಯ ಆರಂಭದ ದಿನಗಳಲ್ಲೇ ಆವಿಷ್ಕಾರಗೊಂಡಿದ್ದ ಸರಳ ವಾಹನ ಸೈಕಲ್‌. ಇಂದಿಗೂ ವಿಶ್ವದೆಲ್ಲೆಡೆ ಜನಪ್ರಿಯವಾಗಿದ್ದು, ಕಡಿಮೆ ಖರ್ಚಿನಲ್ಲಿ ಒಳ್ಳೆಯ ವ್ಯಾಯಾಮವನ್ನು ನೀಡಿ, ಪರಸರಕ್ಕೆ ಹಾನಿ ಮಾಡದಿರುವ ಹೆಗ್ಗಳಿಕೆಯನ್ನೂ ಇದು ಪಡೆದಿದೆ. ಅಂದಹಾಗೆ, ಇಂದು ವಿಶ್ವ ಬೈಸಿಕಲ್‌ (World Bicycle Day) ದಿನ.

VISTARANEWS.COM


on

World Bicycle Day
Koo

ಕುವೆಂಪು ಅವರ ʻಮಲೆಗಳಲ್ಲಿ ಮದುಮಗಳುʼ ಕಾದಂಬರಿಯಲ್ಲಿ ಸೈಕಲ್‌ನ ದೃಶ್ಯವೊಂದು ಬರುತ್ತದೆ. ಮಲೆನಾಡಿನ ಆ ಪ್ರಾಂತ್ಯಕ್ಕೇ ಹೊಸದಾಗಿ ಸೈಕಲ್‌ ಅಥವಾ ʻಬೀಸೆಕಲ್ಲುʼ ಪ್ರವೇಶ ಮಾಡಿದಾಗ, ಅದನ್ನು ಏರಿ ಚಲಾಯಿಸುವುದನ್ನು ಹೇಳಿಕೊಡುವ ಸನ್ನಿವೇಶವೊಂದು ಇನ್ನಿಲ್ಲದಂತೆ ನಗೆಯುಕ್ಕಿಸುತ್ತದೆ. ಶತಮಾನಗಳ ಹಿಂದೆ ಯಾಂತ್ರೀಕೃತ ಸಾರಿಗೆಯ ಆರಂಭದ ದಿನಗಳಲ್ಲೇ ಆವಿಷ್ಕಾರಗೊಂಡು ಸರಳ ವಾಹನವಿದು. ಇಂದಿಗೂ ವಿಶ್ವದೆಲ್ಲೆಡೆ ಜನಪ್ರಿಯವಾಗಿದ್ದು, ಕಡಿಮೆ ಖರ್ಚಿನಲ್ಲಿ ಒಳ್ಳೆಯ ವ್ಯಾಯಾಮವನ್ನು ನೀಡಿ, ಪರಸರಕ್ಕೆ ಹಾನಿ ಮಾಡದಿರುವ ಹೆಗ್ಗಳಿಕೆಯನ್ನೂ ಇದು ಪಡೆದಿದೆ. ಅಂದಹಾಗೆ, ಇಂದು ವಿಶ್ವ ಬೈಸಿಕಲ್‌ (World Bicycle Day) ದಿನ. ಮೊದಲ ಬಾರಿಗೆ, 2018ರ ಜೂನ್‌ 3ರಂದು ಈ ದಿನ ಆಚರಣೆಗೊಂಡಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸ್ವೀಕಾರಗೊಂಡ ಈ ದಿನದ ಆಚರಣೆಯ ನಿರ್ಣಯವನ್ನು ಎಲ್ಲ ಸದಸ್ಯರಾಷ್ಟ್ರಗಳೂ ಬೆಂಬಲಿಸಿದ್ದವು. ಜಗತ್ತಿನ ಎಲ್ಲ ರಾಷ್ಟ್ರಗಳು ಬೈಸಿಕಲ್‌ ದಿನದ ಆಚರಣೆಗೆ ಮತ್ತು ವರ್ಷದ ಉಳಿದ ದಿನಗಳಲ್ಲೂ ಸೈಕಲ್‌ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂಬುದು ಈ ದಿನದ ನಿರ್ಣಯಗಳಲ್ಲಿ ಒಂದಾಗಿತ್ತು.

Cycling Benefits

ಏನಿದರ ಮಹತ್ವ?

ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವುದರ ಜೊತೆಗೆ, ಇದನ್ನು ನಿಯಮಿತವಾಗಿ ಬಳಸುವುದರಿಂದ ವಾತಾವರಣದ ಮಾಲಿನ್ಯವನ್ನು ಸಹ ತಗ್ಗಿಸಬಹುದು. ಎಲ್ಲರಿಗೂ ಕೈಗೆಟುಕುವಂಥ ಸರಳ, ಸುಂದರ, ಆಹ್ಲಾದಕರ ಸಾರಿಗೆಯಿದು. ಸೈಕಲ್‌ ಹೊಡೆಯುವುದು ಮಧ್ಯಮ ಪ್ರಮಾಣದ ವ್ಯಾಯಾಮ. ಹೃದಯದ ಆರೋಗ್ಯವನ್ನು ಗಟ್ಟಿಗೊಳಿಸುವಂಥ ಲಘು ಕಾರ್ಡಿಯೊ ಸಹ ಹೌದು. ದೇಹದ ಕೆಳಭಾಗಕ್ಕೆ ಹೆಚ್ಚಿನ ವ್ಯಾಯಾಮ ನೀಡುವ ಈ ಕ್ರಿಯೆಯನ್ನು ಸುಮ್ಮನೆ ಖುಷಿಗಾಗಿಯೂ ಮಾಡಬಹುದು. ಮನೆಯಲ್ಲಿ ಮಕ್ಕಳಿದ್ದರೆ ಅವರೊಂದಿಗೆ ಸೈಕಲ್‌ ಹೊಡೆಯುವುದು, ಸ್ನೇಹಿತರು ಸುಮ್ಮನೇ ಗೊತ್ತುಗುರಿಯಿಲ್ಲದೆ ಸೈಕಲ್‌ನಲ್ಲಿ ಅಡ್ಡಾಡುವುದು, ಕಿವಿಗೊಂದು ಇಯರ್‌ಪ್ಲಗ್‌ ಸಿಕ್ಕಿಸಿ ಬೇಕಾದ್ದನ್ನು ಕೇಳುತ್ತಲೇ ಸೈಕಲ್‌ನಲ್ಲಿ ಸುತ್ತಾಡುವುದು- ಹೀಗೆ ಸೈಕಲ್‌ ಹೊಡೆಯುವುದಕ್ಕೆ ಎಷ್ಟೊಂದು ಆಯಾಮಗಳು ಉಂಟಲ್ಲವೇ?

ಆರೋಗ್ಯಕ್ಕೆ ಇನ್ನೇನು ಲಾಭಗಳಿವೆ?

ಸೈಕಲ್‌ ಹೊಡೆಯುವುದನ್ನು ಲಘು ಕಾರ್ಡಿಯೊ ವ್ಯಾಯಾಮ ಎಂದು ಪರಿಗಣಿಸಲಾಗುತ್ತದೆ. ಅಂದರೆ ಸೈಕಲ್‌ ಹೊಡೆಯುವಷ್ಟೂ ಹೊತ್ತು ನಮ್ಮ ಹೃದಯ ಹೆಚ್ಚಿನ ಪ್ರಮಾಣದ ರಕ್ತವನ್ನು ಪಂಪ್‌ ಮಾಡುತ್ತಿರುತ್ತದೆ. ಇದರಿಂದ ದೇಹದ ಒಟ್ಟಾರೆ ಶಕ್ತಿ ಮತ್ತು ತ್ರಾಣ ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಹಾಗೆಂದು ಕಠಿಣವಾದ ಕಾರ್ಡಿಯೊ ಇದಲ್ಲ, ಹೃದಯವನ್ನು ಕ್ರಮೇಣ ಬಲಗೊಳಿಸುವ ಲಘು ವ್ಯಾಯಾಮ.

Increases muscle strength and body flexibility Cycling Benefit

ಬಲವರ್ಧನೆ

ಕಾಲಿನ ಮಾಂಸಪೇಶಿಗಳು, ಅಂದರೆ ಕ್ವಾಡ್‌, ಕಾಫ್‌, ಶಿನ್‌ ಮತ್ತು ಹ್ಯಾಮ್‌ಸ್ಟ್ರಿಂಗ್‌ ಭಾಗಗಳಲ್ಲಿರುವ ಮಾಂಸಖಂಡಗಳು ಸುದೃಢಗೊಳ್ಳುತ್ತವೆ. ಕಟಿಯಿಂದ ಕೆಳಗಿನ ದೇಹಭಾಗ ಸದಾ ಕಾಲ ಸಕ್ರಿಯವಾಗಿ ಇರುವುದರಿಂದ ದೇಹದ ಕೆಳಭಾಗದ ಮಾಂಸಖಂಡಗಳ ಬಲವರ್ಧನೆಗೆ ಒಳ್ಳೆಯ ವ್ಯಾಯಾಮವಿದು. ಇದಕ್ಕಾಗಿಯೇ ಸೈಕ್ಲಥಾನ್‌ಗಳು ನಿಮ್ಮ ಸಮೀಪದಲ್ಲಿ ನಡೆಯುತ್ತಿದ್ದರೆ ತಪ್ಪದೆ ಭಾಗವಹಿಸಿ. ಆಗ ಒಂದಿಷ್ಟು ಸಮಾನ ಮನಸ್ಕರ ಸ್ನೇಹ ದೊರೆತು, ನಿಯಮಿತವಾಗಿ ಸೈಕಲ್‌ ಹೊಡೆಯುವ ಅವಕಾಶವಾಗುತ್ತದೆ.

Image Of Cycling Benefit

ಲವಲವಿಕೆ

ಎಂಥ ಟ್ರಾಫಿಕ್‌ ಜಾಮ್‌ನಲ್ಲೂ ಸಿಳ್ಳೆ ಹೊಡೆಯುತ್ತಾ ಮುಂದೆ ಸಾಗುವ ಸೈಕಲ್‌ ಸವಾರರನ್ನು ಕಾಣುವ ಉಳಿದವರಿಗೆ ಒಂದೆಳೆ ಹೊಟ್ಟೆಕಿಚ್ಚಾದರೆ ಅಚ್ಚರಿಯೇನಿಲ್ಲ. ಲೋಕದ ಚಿಂತೆಯನ್ನೇ ಬಿಟ್ಟು ನಮ್ಮಷ್ಟಕ್ಕೆ ನಾವು ಸೈಕಲ್‌ ಹೊಡೆಯುವ ಈ ಕ್ರಿಯೆ ಮನಸ್ಸಿನ ಲವಲವಿಕೆಯನ್ನು ಹೆಚ್ಚಿಸುತ್ತದೆ. ಅದರಲ್ಲೂ ಟ್ರಾಫಿಕ್‌ ಕಿರಿಕಿರಿಯಿಲ್ಲದ ಸುಂದರ ದಾರಿಗಳಲ್ಲಿ ಸೈಕಲ್‌ ಹೊಡೆಯುವ ಅಭ್ಯಾಸವಿದ್ದರೆ ಖಿನ್ನತೆ, ಆತಂಕ, ಒತ್ತಡಗಳನ್ನು ದೂರ ಮಾಡಲು ಸಾಧ್ಯವಿದೆ.

Weight Loss Slim Body Healthy Lifestyle Concept Benefits Of Saffron

ತೂಕ ಇಳಿಕೆ

ಒಂದು ತಾಸು ಮಧ್ಯಮ ವೇಗದಲ್ಲಿ ಸೈಕಲ್‌ ಹೊಡೆಯುವುದರಿಂದ ಅಂದಾಜು 300 ಕ್ಯಾಲರಿ ಕರಗಿಸಬಹುದಂತೆ. ಹಾಗಾಗಿ ತೂಕ ಇಳಿಸುವವರಿಗೆ ಇದೊಂದು ಖುಷಿ ಕೊಡುವ ವ್ಯಾಯಾಮ. ಮಾತ್ರವಲ್ಲ, ಇದರಿಂದ ದೇಹದ ಹಲವಾರು ಕೀಲುಗಳು ಗಟ್ಟಿಯಾಗಿ ಆರ್ಥರೈಟಿಸ್‌ನಂಥ ಸಮಸ್ಯೆಗಳನ್ನು ದೂರ ಇರಿಸಬಹುದು. ಮಧುಮೇಹಿಗಳಿಗೂ ಇದು ಒಳ್ಳೆಯ ವ್ಯಾಯಾಮ. ಇನ್ನೇಕೆ ತಡ, ಹೊರಡಿ ಸೈಕಲ್‌ ಹಿಡಿದು!

Continue Reading

ಆರೋಗ್ಯ

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Vijayanagara News: ಹೊಸಪೇಟೆ ನಗರದ 27 ವಾರ್ಡ್‌ನ ಚಪ್ಪರದಳ್ಳಿ ಪ್ರದೇಶದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ ಜರುಗಿತು.

VISTARANEWS.COM


on

Vijayanagara SP Shriharibabu drives to blood donation camp in Hosapete
Koo

ಹೊಸಪೇಟೆ: ನಗರದ 27ನೇ ವಾರ್ಡ್‌ನ ಚಪ್ಪರದಳ್ಳಿ ಪ್ರದೇಶದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ (Vijayanagara News) ಹಮ್ಮಿಕೊಳ್ಳಲಾಗಿತ್ತು.

ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಕ್ತದಾನವು ಶ್ರೇಷ್ಠ ದಾನ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಮೂಲಕ ಅಪಾಯದಲ್ಲಿ ಇರುವ ಅಮೂಲ್ಯ ಜೀವವನ್ನು ಉಳಿಸಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

ಹೊಸಪೇಟೆ ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡ ಮಾತನಾಡಿದರು. ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಮಾತನಾಡಿದರು.

ರಕ್ತದಾನ ಶಿಬಿರದಲ್ಲಿ 25ಕ್ಕೂ ಅಧಿಕ ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು‌. ಶಿಬಿರದಲ್ಲಿ ವಿಜಯನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿಎಲ್, ತಹಸೀಲ್ದಾರ್‌ ಶೃತಿ ಮಳ್ಳಪ್ಪಗೌಡ ಅವರು, ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರವನ್ನು ವಿತರಿಸಿದರು.

ಇದನ್ನೂ ಓದಿ: Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

ಈ ಸಂದರ್ಭದಲ್ಲಿ ಹೊಸಪೇಟೆ ನಗರಸಭೆ ಸದಸ್ಯ ಹುಲಗಪ್ಪ, ಮುಖಂಡರಾದ ಪ್ರಕಾಶ್, ವೆಂಕಟೇಶ, ಪರಂಗಟ್ಟಿ ಶೇಖರ್, ನಾಗರಾಜ್, ಸೋಮಣ್ಣ, ಮರುಳಸಿದ್ದಪ್ಪ, ಬಸಪ್ಪ, ಚೇತನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ಆರೋಗ್ಯ

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಐಸಿಎಂಆರ್ ಮಾರ್ಗಸೂಚಿ (ICMR Guidelines) ಪ್ರಕಾರ ಬೇಸಗೆಯಲ್ಲಿ ಕಬ್ಬಿಣ ರಸದ ಸೇವನೆಯನ್ನುಆದಷ್ಟು ಕಡಿಮೆ ಮಾಡಿದರೆ ಒಳ್ಳೆಯದು.

VISTARANEWS.COM


on

By

ICMR Guidelines
Koo

ಕೆಲವೆಡೆ ಮಳೆ (rain) ಸುರಿದರೂ ಇನ್ನು ಕೆಲವೆಡೆ ಬಿಸಿಲಿನ (summer) ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ಬೇಸಿಗೆಯ ಶಾಖದಿಂದ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಅನೇಕರು ಕಬ್ಬಿನ ರಸ (sugercane juice), ಹಣ್ಣಿನ ರಸ (fruit juice) ಮತ್ತು ಕೋಲ್ಡ್ ಕಾಫಿಗಳಂತಹ (cold coffee) ಪಾನೀಯಗಳನ್ನು ಸೇವಿಸುತ್ತಾರೆ. ಆದರೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR Guidelines) ಜನಪ್ರಿಯ ಬಾಯಾರಿಕೆ ತಣಿಸುವ ಈ ಪಾನೀಯಗಳ ಅತಿಯಾದ ಸೇವನೆಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಆದ್ದರಿಂದ ಇದರ ಸೇವನೆಯನ್ನು ಕಡಿಮೆ ಮಾಡಬೇಕು ಎನ್ನುತ್ತದೆ ಐಸಿಎಂಆರ್. ತಂಪು ಪಾನೀಯಗಳು ನೀರು ಅಥವಾ ತಾಜಾ ಹಣ್ಣುಗಳಿಗೆ ಪರ್ಯಾಯವಲ್ಲ. ಹೀಗಾಗಿ ಆದಷ್ಟು ತಂಪು ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು. ಬದಲಿಗೆ ಮಜ್ಜಿಗೆ, ಸಕ್ಕರೆ ಸೇರಿಸದೆ ನಿಂಬೆ ನೀರು, ಸಂಪೂರ್ಣ ಹಣ್ಣಿನ ರಸ ಮತ್ತು ತೆಂಗಿನ ನೀರು ಸೇವನೆ ಒಳ್ಳೆಯದು ಎಂದು ಹೇಳಿದೆ.

ಕಬ್ಬಿನ ರಸ ಅಪಾಯಕಾರಿ ಏಕೆ?

ಆಹಾರ ತಜ್ಞರ ಪ್ರಕಾರ ಕಬ್ಬಿನ ರಸದಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಸಮೃದ್ಧವಾಗಿದೆ. ಇದು ವಿಶೇಷವಾಗಿ ಬಿಸಿ ವಾತಾವರಣದಲ್ಲಿ ಹಲವಾರು ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ ಎನ್ನುತ್ತಾರೆ.
ನಿರ್ಜಲೀಕರಣ

ಹೆಚ್ಚಿನ ಸಕ್ಕರೆ ಸೇವನೆಯು ದೇಹದಲ್ಲಿ ಹೆಚ್ಚಿನ ನೀರಿನ ನಷ್ಟಕ್ಕೆ ಕಾರಣವಾಗಬಹುದು. ಸಕ್ಕರೆಯು ಚಯಾಪಚಯಗೊಳಿಸಲು ದೇಹಕ್ಕೆ ಹೆಚ್ಚಿನ ನೀರು ಬೇಕಾಗುತ್ತದೆ. ದೇಹವು ಈಗಾಗಲೇ ಬೆವರಿನ ಮೂಲಕ ಗಮನಾರ್ಹವಾದ ನೀರನ್ನು ಕಳೆದುಕೊಂಡಾಗ ಬೇಸಿಗೆಯಲ್ಲಿ ಇದು ವಿಶೇಷವಾಗಿ ಸಮಸ್ಯಾತ್ಮಕವಾಗಿದೆ.

ಮಧುಮೇಹ

ಕಬ್ಬಿನ ರಸದಿಂದ ದೇಹ ಸಕ್ಕರೆಯನ್ನು ತ್ವರಿತವಾಗಿ ಹೀರಿಕೊಳ್ಳುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಏರುಪೇರಾಗುವುದು. ಇನ್ಸುಲಿನ್ ಪ್ರತಿರೋಧ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಇದು ಹೆಚ್ಚಿಸುತ್ತದೆ.

ತೂಕ ಹೆಚ್ಚಳ

ಸಕ್ಕರೆ ಪಾನೀಯಗಳಿಂದ ಹೆಚ್ಚಿನ ಕ್ಯಾಲೋರಿಗಳು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಇದು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಗಳಂತಹ ಆರೋಗ್ಯ ಸಮಸ್ಯೆಗಳನ್ನು ಇನ್ನಷ್ಟು ಸಂಕೀರ್ಣಗೊಳಿಸುತ್ತದೆ.

ಹಣ್ಣು ಮತ್ತು ಹಣ್ಣಿನ ರಸ ಯಾವುದು ಒಳ್ಳೆಯದು?

ಹಣ್ಣುಗಳು ಪೌಷ್ಟಿಕಾಂಶದ ಫೈಬರ್ ಅನ್ನು ಹೊಂದಿರುತ್ತವೆ. ಇದು ಜ್ಯೂಸ್ ಮಾಡುವಾಗ ಹೊರಹಾಕಲ್ಪಡುತ್ತದೆ. ಫೈಬರ್ ನಿಮ್ಮನ್ನು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಕೊಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಸಂಪೂರ್ಣ ಹಣ್ಣುಗಳನ್ನು ಅಗಿಯುವುದರಿಂದ ಲಾಲಾರಸದ ಉತ್ಪಾದನೆ ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಆದರೆ ಸಕ್ಕರೆ ಹೀರಿಕೊಳ್ಳುವಿಕೆಯ ವೇಗವನ್ನು ನಿಯಂತ್ರಿಸುತ್ತದೆ.

ನೀರು ಮತ್ತು ತಂಪು ಪಾನೀಯ

ಹಲವು ಬಾರಿ ನೀರಿಗೆ ಬದಲಾಗಿ ತಂಪು ಪಾನೀಯಗಳನ್ನು ಸೇವಿಸುತ್ತೇವೆ. ಇದು ಆರೋಗ್ಯಕರವಲ್ಲ ಎನ್ನುತ್ತಾರೆ ಆಹಾರ ತಜ್ಞರು. ತಂಪು ಪಾನೀಯಗಳು ಹೆಚ್ಚಿನ ಪ್ರಮಾಣದ ಸಕ್ಕರೆಗಳನ್ನು ಹೊಂದಿರುತ್ತವೆ. ಇದು ಹೆಚ್ಚಿನ ಕ್ಯಾಲೋರಿ ಸೇವನೆ ಮತ್ತು ಸಂಭಾವ್ಯ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅನೇಕ ತಂಪು ಪಾನೀಯಗಳು ಕೃತಕ ಸುವಾಸನೆ, ಬಣ್ಣ ಮತ್ತು ಸಂರಕ್ಷಕಗಳನ್ನು ಒಳಗೊಂಡಿರುತ್ತವೆ. ಇದು ಕಾಲಾನಂತರದಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಉಂಟು ಮಾಡುತ್ತದೆ. ತಂಪು ಪಾನೀಯಗಳಲ್ಲಿನ ಕೆಫೀನ್ ಮತ್ತು ಆಮ್ಲೀಯ ಅಂಶವು ಮೂತ್ರವರ್ಧಕ ಪರಿಣಾಮವನ್ನು ಹೊಂದಿರುತ್ತದೆ. ಇದು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಭಾರತದಂತಹ ಬಿಸಿ ವಾತಾವರಣದಲ್ಲಿ ಇದು ವಿಶೇಷವಾಗಿ ಅಪಾಯಕಾರಿ.

ಬೇಸಿಗೆಯಲ್ಲಿ ಚಹಾ, ಕಾಫಿ

ಪ್ರತಿದಿನ ಎಷ್ಟು ಕಾಫಿ ಮತ್ತು ಚಹಾವನ್ನು ಸೇವಿಸುತ್ತೀರಿ ಎಂಬುದರ ಬಗ್ಗೆ ಗಮನವಿರಲಿ. ಬರಿ ಹೊಟ್ಟೆಗೆ ಚಹಾ, ಕಾಫಿ ಸೇವನೆಯನ್ನು ತಪ್ಪಿಸಿ. ಕುಡಿಯಲೇ ಬೇಕು ಅನಿಸಿದರೆ ಉಪಹಾರ ಮತ್ತು ಮಧ್ಯಾಹ್ನ ಊಟದ ಮಧ್ಯದ ಸಮಯಕ್ಕೆ ಮುಂದೂಡಿ. ಇಲ್ಲವಾದರೆ ದಾಲ್ಚಿನ್ನಿ, ಅರಿಶಿನದಂತಹ ಗಿಡಮೂಲಿಕೆಗಳನ್ನು ಮತ್ತು ಕ್ಯಾಮೊಮೈಲ್, ಮಲ್ಲಿಗೆ, ದಾಸವಾಳದ ಚಹಾದಂತಹ ಹೂವುಗಳನ್ನು ಕುಡಿಯಬಹುದು.

ದೇಹದ ಸಮಸ್ಯೆ ಆಲಿಸಿ

ಬೇಸಿಗೆಯಲ್ಲಿ ನಡುಗುವಿಕೆ, ಆತಂಕ ಅಥವಾ ನಿದ್ರೆಯ ಸಮಸ್ಯೆಗಳನ್ನು ಅನುಭವಿಸಿದರೆ ಆದಷ್ಟು ವಿಶ್ರಾಂತಿ ಪಡೆಯಿರಿ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಿ.

ನಿರ್ಜಲೀಕರಣವಾಗದಂತೆ ತಡೆಯುವುದು ಹೇಗೆ?

ಬೇಸಿಗೆಯಲ್ಲಿ ಆರೋಗ್ಯವಾಗಿರಲು ದೇಹವನ್ನು ಹೈಡ್ರೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಪ್ರತಿದಿನ ಕನಿಷ್ಠ 8- 10 ಗ್ಲಾಸ್ ನೀರನ್ನು ಕುಡಿಯಿರಿ. ದೇಹದಲ್ಲಿ ಬೆವರಿನ ಮೂಲಕ ಕಳೆದುಹೋಗುವ ಲವಣ ಮತ್ತು ಖನಿಜಗಳನ್ನು ಪುನಃ ತುಂಬಿಸಲು ಮನೆಯಲ್ಲಿ ಅಥವಾ ವಾಣಿಜ್ಯಿಕವಾಗಿ ಲಭ್ಯವಿರುವ ಎಲೆಕ್ಟ್ರೋಲೈಟ್ ಪರಿಹಾರಗಳನ್ನು ಬಳಸಿ.

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸಲು ಆಹಾರದಲ್ಲಿ ಕಲ್ಲಂಗಡಿ, ಸೌತೆಕಾಯಿ ಮತ್ತು ಕಿತ್ತಳೆಯಂತಹ ನೀರು-ಭರಿತ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ. ಆಲ್ಕೋಹಾಲ್ ಮತ್ತು ಸಕ್ಕರೆ ಪಾನೀಯಗಳು ನಿರ್ಜಲೀಕರಣದ ಅಪಾಯವನ್ನು ಹೆಚ್ಚಿಸಬಹುದು. ಇದನ್ನು ಮಿತವಾಗಿ ಸೇವಿಸಿ ಅಥವಾ ಸಂಪೂರ್ಣವಾಗಿ ತಪ್ಪಿಸಬೇಕು.

Continue Reading
Advertisement
Mallikarjun Kharge
Lok Sabha Election 20242 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ3 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Arecanut Price
ಕೃಷಿ3 hours ago

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

First PU Class Commencement Programme at Vishwadarshana College
ಉತ್ತರ ಕನ್ನಡ3 hours ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ3 hours ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ4 hours ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ4 hours ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ4 hours ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ4 hours ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ4 hours ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ10 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌