ವಿಸ್ತಾರ ಸಂಪಾದಕೀಯ: ಚಂಡೀಗಢ ಮೇಯರ್‌ ಚುನಾವಣೆ ಕುರಿತ ಸುಪ್ರೀಂ ತೀರ್ಪು ಐತಿಹಾಸಿಕ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಚಂಡೀಗಢ ಮೇಯರ್‌ ಚುನಾವಣೆ ಕುರಿತ ಸುಪ್ರೀಂ ತೀರ್ಪು ಐತಿಹಾಸಿಕ

Vistara Editorial: ಈ ತೀರ್ಪು ಹಾಗೂ ಪ್ರಕ್ರಿಯೆ ಇತಿಹಾಸವನ್ನೇ ಸೃಷ್ಟಿಸಿದೆ. ಮೇಯರ್‌ ಹುದ್ದೆಗೆ ಚುನಾವಣೆ ನಡೆಸುವುದು ಸ್ಥಳೀಯಾಡಳಿತ ಹಾಗೂ ಅದಕ್ಕೆ ಸಂಬಂಧಿಸಿದ ರಾಜ್ಯ ಚುನಾವಣಾ ಆಯೋಗದ ಹೊಣೆ. ಆದರೆ ಹಾಡಹಗಲೇ ಅಕ್ರಮ ನಡೆದಿರುವುದು ಪ್ರಜಾಪ್ರಭುತ್ವಕ್ಕೆ ಕಳಂಕ ತರುವಂಥದ್ದು.

VISTARANEWS.COM


on

Vistara Editorial, Historical Verdict on Chandigarh Mayor election by Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢದ ಮೇಯರ್‌ ಚುನಾವಣೆಯ (Chandigarh Mayor Election) ಪ್ರಹಸನವನ್ನು ಸುಪ್ರೀಂ ಕೋರ್ಟ್‌ ಕೊನೆಗೊಳಿಸಿದೆ (Supreme Court). ಆಮ್‌ ಆದ್ಮಿ ಪಕ್ಷದ ಕುಲದೀಪ್‌ ಕುಮಾರ್‌ ಅವರನ್ನು ವಿಜೇತರೆಂದು ಕೋರ್ಟ್‌ ಘೋಷಿಸಿದೆ. ವಿವಾದಿತ ಚಂಡೀಗಢ ಮೇಯರ್ ಚುನಾವಣೆಗೆ ಸಂಬಂಧಿಸಿದ ಮತಪತ್ರಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್, ರಿಟರ್ನಿಂಗ್ ಆಫೀಸರ್ ಆಗಿದ್ದ ಅನಿಲ್ ಮಸೀಹ್ ಅವರು ಅಸಿಂಧು ಎಂದು ಘೋಷಿಸಿದ್ದ ಎಂಟು ಮತಪತ್ರಗಳನ್ನು ಸಿಂಧು ಎಂದು ಘೋಷಿಸಿದೆ. ಮತಪತ್ರಗಳ ಮರುಎಣಿಕೆ ನ್ಯಾಯಪೀಠದ ಮುಂದೆಯೇ ನಡೆಯಿತು. ಇದಕ್ಕೂ ಮುನ್ನ ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್‌ ಎಂದು ಘೋಷಿಸಿದ್ದ ರಿಟರ್ನಿಂಗ್‌ ಆಫೀಸರ್ ಅನಿಲ್‌ ಮಸೀಹ್‌ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರ ಪೀಠ ಆದೇಶಿಸಿದೆ. ಅನಿಲ್ ಮಸೀಹ್ ಬಿಜೆಪಿಯ ನಾಮನಿರ್ದೇಶಿತ ಪಾಲಿಕೆ ಸದಸ್ಯರಾಗಿದ್ದರು. ಇವರನ್ನು ರಿಟರ್ನಿಂಗ್ ಆಫೀಸರ್ ಆಗಿ ನೇಮಿಸಲಾಗಿತ್ತು. ಚಂಡೀಗಢ ಸ್ಥಳೀಯಾಡಳಿತದಲ್ಲಿ ಆಪ್‌ ಮತ್ತು ಕಾಂಗ್ರೆಸ್ ಕೂಟಕ್ಕೆ ಸ್ಪಷ್ಟ ಬಹುಮತವಿದ್ದರೂ ಚುನಾವಣಾಧಿಕಾರಿ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿಯೆಂದು ಘೋಷಿಸಿದ್ದರು. ಸೋಮವಾರ ಸುಪ್ರೀಂ ಕೋರ್ಟ್‌ ವಿಚಾರಣೆಗೆ ಹಾಜರಾದ ಅನಿಲ್‌ ಮಸಿಹ್‌ ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸಿಜೆ ನೇತೃತ್ವದ ಪೀಠ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು(Vistara Editorial).

ಈ ತೀರ್ಪು ಹಾಗೂ ಪ್ರಕ್ರಿಯೆ ಇತಿಹಾಸವನ್ನೇ ಸೃಷ್ಟಿಸಿದೆ. ಮೇಯರ್‌ ಹುದ್ದೆಗೆ ಚುನಾವಣೆ ನಡೆಸುವುದು ಸ್ಥಳೀಯಾಡಳಿತ ಹಾಗೂ ಅದಕ್ಕೆ ಸಂಬಂಧಿಸಿದ ರಾಜ್ಯ ಚುನಾವಣಾ ಆಯೋಗದ ಹೊಣೆ. ಮತದಾನ ನ್ಯಾಯುತವಾಗಿ ನಡೆಯುವಂತೆ ನೋಡಿಕೊಳ್ಳುವುದು, ಬಳಿಕ ಮತ ಎಣಿಕೆ ಮಾಡಿ ವಿಜಯಿಯನ್ನು ಘೋಷಿಸುವುದು ಕೂಡ ಆಯೋಗದ ರಿಟರ್ನಿಂಗ್‌ ಆಫೀಸರ್‌, ಮತ್ತು ಆ ಮೂಲಕ ರಾಜ್ಯ ಚುನಾವಣಾಧಿಕಾರಿಗಳ ಹೊಣೆ. ಆದರೆ, ಚಂಡೀಗಢದಂಥ ಸ್ಥಳೀಯ ಪಟ್ಟಣವೊಂದರ ಮೇಯರ್‌ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಂಥ ʼಸಣ್ಣʼ ಸಂಗತಿ ಕೂಡ ಸುಪ್ರೀಂ ಕೋರ್ಟ್‌ ಅಂಗಳದಲ್ಲೇ ನಡೆಯಬೇಕಾಗಿ ಬಂದಿದೆ ಎಂಬುದು ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ. ಇದಕ್ಕೂ ಸುಪ್ರೀಂ ಕೋರ್ಟೇ ಬೇಕೆ? ಇಂಥ ಪ್ರಕರಣವೊಂದು ಸುಪ್ರೀಂ ಕೋರ್ಟಿನ ಮೆಟ್ಟಿಲೇರುವುದೇ ಮೊದಲಿಗೆ ಸರಿಯಲ್ಲ. ಕಾರ್ಪೊರೇಟರ್‌ಗಳ ಮಟ್ಟದಲ್ಲೇ ಮುಗಿಯಬೇಕಾದ ವಿಷಯ ಸರ್ವೋಚ್ಚ ನ್ಯಾಯಾಲಯದ ವರೆಗೂ ಹೋಗಿದೆ ಎಂದರೆ ಅಲ್ಲಿ ಪ್ರಜಾಪ್ರಭುತ್ವಕ್ಕೆ ಸವಾಲು ಎದುರಾಗಿದೆ ಎಂದೇ ಅರ್ಥ.

ಇದನ್ನೇ ನ್ಯಾಯಪೀಠವೂ ಹೇಳಿದೆ. ರಿಟರ್ನಿಂಗ್‌ ಆಫೀಸರ್ ಮಾಡಿದ ಮತಪತ್ರಗಳ ತಿರುಚುವಿಕೆಯ ಕೆಲಸವನ್ನು ಗಮನಿಸಿದ ನ್ಯಾಯಪೀಠ “ಇದು ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಹೇಳಿತ್ತು. “ಇಂತಹ ಕುತಂತ್ರಗಳಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯು ನಿಷ್ಪ್ರಯೋಜಕವಾಗದಂತೆ ನೋಡಿಕೊಳ್ಳಲು ನ್ಯಾಯಪೀಠ ಕರ್ತವ್ಯ ಬದ್ಧವಾಗಿದೆ” ಎಂದು ಹೇಳಿತ್ತು. “ಮೂಲಭೂತ ಪ್ರಜಾಸತ್ತಾತ್ಮಕ ಆದೇಶವನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಇಂತಹ ಅಸಾಧಾರಣ ಸಂದರ್ಭಗಳಲ್ಲಿ ಮುಂದಡಿ ಇಡಬೇಕು ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ” ಎಂದು ಪೀಠವು ಹೇಳಿದೆ. ಇಂಥ ʼಚಿಲ್ಲರೆʼ ಕೆಲಸಗಳಿಗೆ ನ್ಯಾಯಪೀಠವನ್ನು ಎಳೆದು ತಂದುದು ಅಧಿಕಾರಿಶಾಹಿಗೆ, ಶಾಸಕಾಂಗಕ್ಕೇ ಮುಖಭಂಗ. ಶಾಸಕಾಂಗ ಹಾಗೂ ಕಾರ್ಯಾಂಗ ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ನ್ಯಾಯಾಂಗ ಮೂಗು ತೂರಿಸುವ ಪ್ರಸಕ್ತಿ ಇಲ್ಲಿ ಬರುತ್ತಿರಲೇ ಇಲ್ಲ.

ರಾಜ್ಯ ಚುನಾವಣಾ ಆಯೋಗವು ಮುನ್ಸಿಪಲ್ ಕಾರ್ಪೊರೇಶನ್‌ಗಳಿಗೆ ಚುನಾವಣೆಗಳನ್ನು ನಡೆಸುವ ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ನಿರ್ದೇಶಿಸುತ್ತದೆ ಮತ್ತು ನಿಯಂತ್ರಿಸುತ್ತದೆ. ಪಾಲಿಕೆಗಳು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇಲ್ಲಿ ನ್ಯಾಯಯುತ ಚುನಾವಣೆ ನಡೆಯುವಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಹೊಣೆಯಾಗಿದೆ. ಕಾರ್ಪೊರೇಷನ್‌ ಮೇಯರ್ ಚುನಾವಣೆಯ ಮತ ಎಣಿಕೆಯೇನೂ ಲಕ್ಷಾಂತರ ಸಂಖ್ಯೆಯಲ್ಲಿರುವುದಿಲ್ಲ. ಹಾಡಹಗಲೇ ಇಂಥ ಅಕ್ರಮ ಎಸಗಿ ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗಿದ ರಿಟರ್ನಿಂಗ್ ಆಫೀಸರ್ ವಿರುದ್ಧ ಕಠಿಣ ಕ್ರಮ ಆಗಬೇಕು. ಚುನಾವಣೆಯಲ್ಲಿ ಈ ರೀತಿ ಅಕ್ರಮ ಆಗದಂತೆ ನೋಡಿಕೊಳ್ಳಬೇಕು.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಪ. ಬಂಗಾಳದ ಸಂದೇಶ್‌ಖಾಲಿ ದೌರ್ಜನ್ಯ ಪ್ರಕರಣ ಆಘಾತಕಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ? ನಗರ ವಾಸಿಗಳು ಈ ಬಾರಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡಿದ್ದು ವಿಷಾದನೀಯ.

VISTARANEWS.COM


on

lok sabha election
Koo

ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ (lok sabha Election) ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ರಾಜ್ಯದ ಮೊದಲ ಹಂತದ ಒಟ್ಟಾರೆ ಮತದಾನ 69.23% ದಾಖಲಾಗಿದೆ. ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಮುಂಜಾನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಕಡಿಮೆಯಾಯಿತು. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ (81.48%) ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ (52.81%) ವೋಟಿಂಗ್ ದಾಖಲಾಗಿದೆ. ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದ್ದು, ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿವೆ. ಸಂಸದ ಸ್ಥಾನದ ಆಕಾಂಕ್ಷಿಗಳು ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ.

ಮತದಾನ ಪ್ರಮಾಣವನ್ನು ಗಮನಿಸಿದರೆ ಕೆಲವು ಅಂಶಗಳನ್ನು ಹೇಳಬಹುದಾಗಿದೆ. ನಗರಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳೇ ಮತದಾನದ ಪ್ರಮಾಣದಲ್ಲಿ ವಾಸಿ. ಬೆಂಗಳೂರು ಗ್ರಾಮಾಂತರದಲ್ಲಿ 67.29% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರಗಳಲ್ಲಿ 53.15% ಹಾಗೂ 54.42% ಮತದಾನವಾಗಿದೆ. ಮಂಡ್ಯದಲ್ಲಿ ಅತ್ಯಧಿಕ ಮತದಾನವಾಗಿರುವುದು ಈ ಪ್ರದೇಶದ ಜನತೆಯ ರಾಜಕೀಯ ಪ್ರಜ್ಞೆಯಿಂದಾಗಿಯೇ ಇರಬಹುದು. ಕೋಲಾರ (78.07%) ಹಾಗೂ ತುಮಕೂರು (77.70%) ಕೂಡ ಹೆಚ್ಚಿನ ಮತದಾನ ದಾಖಲಿಸಿವೆ. ಬೆಂಗಳೂರು ಕೇಂದ್ರ ಕ್ಷೇತ್ರದ ನೀರಸ ಮತದಾನ (52.81%) ಚಿಂತೆಗೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮತದಾನ ಶೇಕಡಾವಾರು 68.81% ಆಗಿತ್ತು. ಈ ಬಾರಿ ಮೊದಲ ಹಂತದಲ್ಲಿ ಅದಕ್ಕಿಂತ ಸ್ವಲ್ಪ ಹೆಚ್ಚಿಗೆ (69.23%) ಮತದಾನವಾಗಿದೆ. ಆದರೆ ಎರಡನೇ ಹಂತದಲ್ಲಿ ಎಷ್ಟಾಗಲಿದೆ ಎಂಬುದರ ಮೇಲೆ ಒಟ್ಟಾರೆ ಸರಾಸರಿ ನಿರ್ಧಾರವಾಗಲಿದೆ.

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹಾಗೂ ಮತದಾನ ಬಹಿಷ್ಕಾರ ಮಾಡಿದ್ದು ಕೂಡ ನಡೆದಿವೆ. ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದು ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಎದುರಾಯಿತು. ಸ್ವಾತಂತ್ರ್ಯ ದೊರೆತು ಎಂಟು ದಶಕ ಕಳೆದರೂ ಇನ್ನೂ ಮೂಲಸೌಕರ್ಯ ಕಲ್ಪಿಸದ ನಮ್ಮ ಆಡಳಿತಗಳಿಗೆ ಮತದಾನ ಬಹಿಷ್ಕಾರವೇ ಸೂಕ್ತ ಉತ್ತರ ಎಂದು ಗ್ರಾಮೀಣ ಜನತೆ ಕಂಡುಕೊಂಡರೋ ಗೊತ್ತಿಲ್ಲ. ಇದು ಮೊದಲೇ ಸಾರಿ, ಕಾರಣ ಹೇಳಿ ಮಾಡುವ ಬಹಿಷ್ಕಾರ. ಆದರೆ ವಿದ್ಯಾವಂತ ನಗರವಾಸಿಗಳ ʼಮತದಾನ ಬಹಿಷ್ಕಾರʼಕ್ಕೆ ಕಾರಣವಾದರೂ ಏನು? ನಗರದಲ್ಲಿ ಮತದಾನ ಹೆಚ್ಚಳ ಮಾಡಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಮತದಾರರಿಗಾಗಿಯೇ ಉತ್ತೇಜನದ ಉಪಕ್ರಮಗಳು, ಮಹಿಳೆಯರಿಗಾಗಿಯೇ ಸಖಿ ಮತಗಟ್ಟೆಗಳು, ಸಾರ್ವತ್ರಿಕ ರಜೆ ಎಲ್ಲವನ್ನೂ ಘೋಷಿಸಲಾಗಿದೆ. ಯಾವುದೇ ಕಷ್ಟವಿಲ್ಲದೆ ಮತದಾರರ ಗುರುತಿನ ಚೀಟಿ ಅಪ್‌ಡೇಟ್‌ ಮಾಡುವ, ತಮ್ಮ ಮತಗಟ್ಟೆ ಎಲ್ಲಿ ಎಂದು ತಿಳಿಯಲು ಕ್ಯುಆರ್‌ ಕೋಡ್‌ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಲಾಗಿದೆ. ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ?

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಮತದಾನ ಕಡಿಮೆಯಾದರೆ ತಾಂತ್ರಿಕವಾಗಿ ನಾವು ಸಮರ್ಪಕವಾದ ಸರ್ಕಾರವನ್ನು ಚುನಾಯಿಸುತ್ತಿರುವುದಿಲ್ಲ. ದೇಶದ 60% ಜನ ಮಾತ್ರ ಮತ ಹಾಕಿ, ಅದರಲ್ಲಿ 30% ಮತ ಪಡೆದ ಪಕ್ಷ ಅಧಿಕಾರಕ್ಕೆ ಬಂದರೆ, ಒಟ್ಟಾರೆ ದೇಶದ ಜನತೆಯಲ್ಲಿ ಆ ಪಕ್ಷವನ್ನು ಆಯ್ಕೆ ಮಾಡಿದವರು ಮೂರನೇ ಒಂದು ಭಾಗ ಮಾತ್ರವೇ ಆಗಿರುತ್ತಾರೆ. ಉಳಿದ ಮೂರನೇ ಎರಡು ಭಾಗ ಜನತೆ ಆ ಪಕ್ಷದ ವಿರುದ್ಧ ಇದ್ದಾರೆ ಎಂದು ತಿಳಿಯಬೇಕಾಗುತ್ತದೆ. ವಾಸ್ತವ ಹಾಗಿರುವುದಿಲ್ಲ. ಮತ ಹಾಕದ ಮಂದಿಯಲ್ಲಿ ಎಷ್ಟು ಮತಗಳು ಯಾವ ಪಕ್ಷದ್ದು ಎಂದು ನಿರ್ಣಯಿಸುವ ಯಾವ ವಿಧಾನವೂ ಇಲ್ಲ. ಹೀಗಾಗಿ ಮತದಾನ ಪ್ರಮಾಣ ಕಡಿಮೆ ಬಂದಾಗ, ಬರುವ ಫಲಿತಾಂಶವೂ ಅಷ್ಟರ ಮಟ್ಟಿಗೆ ಅಸಮರ್ಪಕವೇ ಆಗಿರುತ್ತದೆ. ಇನ್ನು ವಿದ್ಯಾವಂತರು, ಪ್ರಜ್ಞಾವಂತರು ಮತದಾನದಿಂದ ಹಿಂದುಳಿದರೆ, ಪ್ರಜ್ಞಾವಂತಿಕೆಯ ಆಯ್ಕೆಯೂ ಇಲ್ಲದಾಗುತ್ತದೆ. ಇದರಿಂದ ನಷ್ಟ ಪ್ರಜೆಗಳಿಗೇ. ಮೂರ್ಖರು ಅಧಿಕಾರಕ್ಕೆ ಆರಿಸಿ ಬರಬಾರದು ಎಂದಿದ್ದರೆ, ಬುದ್ಧಿವಂತರು ಮತ ಹಾಕಬೇಕು. ಮೇ 7ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಾದರೂ ಹೆಚ್ಚಿನ ಪ್ರಮಾಣದ ಮತದಾನವಾಗಲಿ ಎಂದು ಆಶಿಸೋಣ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು.

VISTARANEWS.COM


on

Lok sabha Election
Koo

ದೇಶದಲ್ಲಿ ಲೋಕಸಭೆ ಚುನಾವಣೆಯ (lok sabha election) ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ (ಏಪ್ರಿಲ್‌ 26) ಶುಕ್ರವಾರ ನಡೆಯುತ್ತಿದೆ. ಮತದಾನವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಭಾರತದಲ್ಲಿ ಚುನಾವಣೆ ನಡೆಯುತ್ತದೆ ಎಂದರೆ ಜಗತ್ತೇ ಅದನ್ನು ಕುತೂಹಲದಿಂದ ವೀಕ್ಷಿಸುತ್ತದೆ. ಯಾಕೆಂದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರದಲ್ಲಿ, ಯಾವುದೇ ಹಿಂಸಾಚಾರವಿಲ್ಲದೆ, ಒಂದೇ ಒಂದು ಜೀವಹಾನಿಯಿಲ್ಲದೆ, ಯಾವ ಲೋಪದೋಷವೂ ಇಲ್ಲದಂತೆ, ಜಗತ್ತಿಗೇ ಮಾದರಿಯಾಗಿ ನಡೆಯುವ ಮತದಾನ ಪ್ರಕ್ರಿಯೆ ಹಲವು ದೇಶಗಳಿಗೆ ಅಧ್ಯಯನ ಯೋಗ್ಯವಾಗಿ ಕಾಣುತ್ತದೆ. ದಾಖಲೆ ಸಂಖ್ಯೆಯ ಜನರು ಮತದಾನ ಮಾಡಲು ಏಳೆಂಟು ಹಂತಗಳನ್ನು ತೆಗೆದುಕೊಂಡರೂ, ಒಂದೇ ದಿನದಲ್ಲಿ ಸಂಶಯಕ್ಕೆಡೆಯಿಲ್ಲದಂತೆ ಫಲಿತಾಂಶವನ್ನು ಪಡೆಯುವುದು ವಿಶೇಷ. ಅಮೆರಿಕದಂಥ ದೇಶದಲ್ಲೇ ಚುನಾವಣೆ ಹಲವು ಸಲ ಗೊಂದಲಮಯವಾಗಿರುತ್ತದೆ ಎಂಬುದನ್ನು ನೋಡಿದರೆ, ನಮ್ಮದು ಅಧ್ಯಯನಯೋಗ್ಯವೇ ಸರಿ.

ಪ್ರಸ್ತುತ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಏರಲು ಜನತೆಯ ಆಶೀರ್ವಾದ ಕೋರಿದೆ. ನರೇಂದ್ರ ಮೋದಿಯವರು ಪಕ್ಷಕ್ಕೆ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಸಮರ್ಥ ನಾಯಕತ್ವ ನೀಡಿದ್ದಾರೆ. ಹಲವು ದಶಕಗಳ ಕಾಲ ದೇಶವನ್ನು ಆಳಿ ಸದ್ಯ ಅಧಿಕೃತ ವಿಪಕ್ಷ ಸ್ಥಾನಮಾನವನ್ನೂ ಹೊಂದಿಲ್ಲದ ಕಾಂಗ್ರೆಸ್‌, ಮರಳಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಹಲವು ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಇಂಡಿಯಾ ಬ್ಲಾಕ್‌ ರಚಿಸಿಕೊಂಡು ಬಿಜೆಪಿಯ ಅಶ್ವಮೇಧವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ. ಚುನಾವಣೆಯ ಪ್ರಚಾರ ಕಣದಲ್ಲಿ ಹಲವು ವಾದವಿವಾದಗಳು, ವಾಗ್ವಾದಗಳು ನಡೆದುಹೋಗಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಮತದಾರನಿಗೆ ಬಿಟ್ಟ ವಿಷಯ. ಮತದಾರ ಸಾಕಷ್ಟು ಬುದ್ಧಿವಂತನಾಗಿದ್ದು, ತನ್ನ ಆಯ್ಕೆಯನ್ನು ಆತ ಮಾಡಬಲ್ಲ.

ಆದರೆ, ಚಿಂತಿಸಬೇಕಾದ ಒಂದು ವಿಷಯವೆಂದರೆ, ಮತದಾನದ ಪ್ರಮಾಣ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ (2019) ಇಡೀ ರಾಜ್ಯದಲ್ಲೇ ಕನಿಷ್ಠ ಪ್ರಮಾಣ (ಶೇ 53.7) ಮತದಾನವಾಗಿತ್ತು. ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾನ ಪ್ರಮಾಣ ಸೇಕಡ 54.3, ಬೆಂಗಳೂರು ಉತ್ತರದಲ್ಲಿ ಮತದಾನ ಪ್ರಮಾಣ ಶೇಕಡ 54.7 ಇತ್ತು. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಮತದಾನ ಪ್ರಮಾಣ ಶೇಕಡ 64.9 ಇತ್ತು. ಕರ್ನಾಟಕದ ಒಟ್ಟು ಮತದಾನ ಪ್ರಮಾಣ ಶೇಕಡ 68 ಇತ್ತು. ಆದ್ದರಿಂದ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ. ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಆಯೋಗ ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದೆ. ಹಾಗೆಯೇ ಈ ದಿನ ಸಾರ್ವತ್ರಿಕ ರಜೆಯನ್ನು ನೀಡಲಾಗಿದೆ. ರಜೆಯೆಂದು ಪ್ರವಾಸ ಹೋಗುವ ನಗರದ ಮತದಾರರ ಚಾಳಿಯನ್ನು ತಪ್ಪಿಸಲು ಹೆಚ್ಚಿನ ಪ್ರವಾಸೀ ತಾಣಗಳನ್ನು ಕ್ಲೋಸ್‌ ಮಾಡಲಾಗುತ್ತಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಂಡಿದ್ದಾರೆ. ಭಾರತೀಯ ಚುನಾವಣಾ ಆಯೋಗವು ನವೀನ ಮತ್ತು ವಿನೂತನ ಮತದಾರರ ಜಾಗೃತಿ ಅಭಿಯಾನಗಳನ್ನು ಆಯೋಜಿಸಿರುವುದರ ಜೊತೆಗೆ ಹೋಟೆಲ್ ಉದ್ಯಮಿಗಳು, ಕಂಪನಿಗಳು ಮತ್ತು ಇತರ ಸಂಸ್ಥೆಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಮತದಾರರನ್ನು ಓಲೈಸಲು ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ವಿಶೇಷ ಮತಗಟ್ಟೆ ರಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

VISTARANEWS.COM


on

Modi
Koo

ಮುಂದಿನ 5 ವರ್ಷಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಯಾಣಿಕರಿಗೂ (Railway Ticket) ಕನ್ಫರ್ಮ್ಡ್‌ ಟಿಕೆಟ್‌ (Confirmed Tickets) ಸಿಗಲಿವೆ. ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗ್ಯಾರಂಟಿ- ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆ ಎಂದಿದ್ದಾರೆ ಸಚಿವರು. ಇದು ದೇಶದ ರೈಲ್ವೇ ವ್ಯವಸ್ಥೆಯ ಸುಧಾರಣೆಗಳಲ್ಲಿ ಒಂದು ವಿಚಾರ ಮಾತ್ರ.

ಕಳೆದ 10 ವರ್ಷಗಳಲ್ಲಿ ದೇಶದ ರೈಲ್ವೇ ವ್ಯವಸ್ಥೆಯನ್ನು ಸಾಕಷ್ಟು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ. ದೇಶಾದ್ಯಂತ ರೈಲ್ವೆ ಪ್ರಯಾಣಿಕರಿಗೆ ಹೊಸ ಸೌಲಭ್ಯ, ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಪ್ರಯತ್ನಪಡುತ್ತಿದೆ. ಅದೇ ರೀತಿ ಪ್ರಯಾಣಿಕರು ಸುಲಭವಾಗಿ ಹಾಗೂ ಕ್ಷಿಪ್ರವಾಗಿ ರೈಲು ಟಿಕೆಟ್‌ಗಳನ್ನು ಪಡೆಯುವಂತೆ ಮಾಡುವುದು ಮೊದಲ ಆದ್ಯತೆ. ಇದಕ್ಕಾಗಿ ಇನ್ನಷ್ಟು ರೈಲುಗಳ ಓಡಾಟ, ದೇಶಾದ್ಯಂತ ರೈಲುಗಳ ವಿಸ್ತರಣೆ, ರೈಲ್ವೆ ಲೇನ್‌ಗಳನ್ನು ವಿಸ್ತರಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. 2014ರಿಂದ 2024ರ ಅವಧಿಯಲ್ಲಿ ದೇಶಾದ್ಯಂತ 31 ಸಾವಿರ ಹೊಸ ಟ್ರ್ಯಾಕ್‌ಗಳನ್ನು ಅಳವಡಿಸಲಾಗಿದೆ. 2004ರಿಂದ 2014ರ ಅವಧಿಯಲ್ಲಿ 5 ಸಾವಿರ ಕಿಲೋಮೀಟರ್‌ ರೈಲು ಮಾರ್ಗ ವಿದ್ಯುದ್ದೀಕರಣವಾಗಿದ್ದರೆ, 2014ರಿಂದೀಚೆಗೆ ವಿದ್ಯುದ್ದೀಕರಣದ ಪ್ರಮಾಣವು 44 ಸಾವಿರ ಕಿಲೋಮೀಟರ್‌ಗೆ ಏರಿಕೆಯಾಗಿದೆ. ಕಳೆದ 10 ವರ್ಷದಲ್ಲಿ 54 ಸಾವಿರ ಬೋಗಿಗಳನ್ನು ತಯಾರಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮೋದಿಯವರು 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು ದೇಶಾದ್ಯಂತ ಲೋಕಾರ್ಪಣೆ ಮಾಡಿದ್ದರು. ಈ ಮೊದಲು ರೈಲ್ವೆ ಇಲಾಖೆ ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆಯು ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ. ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದರು. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರ ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಸಣ್ಣಪುಟ್ಟ ಸಂಗತಿಗಳಲ್ಲೂ ರೈಲ್ವೇ ಇಲಾಖೆ ಸುಧಾರಣೆ ತರುತ್ತಿದೆ. ಉದಾಹರಣೆಗೆ, ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು (60 ರೂ. ಮಾತ್ರ) ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಅಂದರೆ ಈ ಮೊದಲಿನ ಅನಿಯಂತ್ರಿತ ಶುಲ್ಕ ಇನ್ನು ಇರುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ರೈಲ್ವೇಯು ವೈಟಿಂಗ್‌ ಟಿಕೆಟ್‌ಗಳ ರದ್ದತಿಯಿಂದ ಬರೋಬ್ಬರಿ 1,230 ಕೋಟಿ ರೂ. ಆದಾಯ ಗಳಿಸಿದೆ. ಈ ಹಣದುಬ್ಬರದ ಕಾಲದಲ್ಲೂ ಕನಿಷ್ಠ ಪ್ರಯಾಣಿಕ ಹಾಗೂ ಸರಕು ಸಾಗಣೆ ಶುಲ್ಕವನ್ನು ರೈಲ್ವೇಯು ಹೊಂದಿರುವುದರಿಂದ, ಸಾರ್ವಜನಿಕ ಸೇವೆಯ ಮಾಧ್ಯಮವೂ ಆಗಿದೆ. ಹೀಗಾಗಿ ರೈಲ್ವೆಯಲ್ಲಿ ಆಗುವ ಸುಧಾರಣೆಯು ಇನ್ನೊಂದು ರೀತಿಯಲ್ಲಿ ಬಡ- ಮಧ್ಯಮ- ಕೆಳವರ್ಗದ ಜನತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಸೌಲಭ್ಯವನ್ನು ನೀಡುವ ಉಪಕ್ರಮವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

ಇದನ್ನೂ ಓದಿ: Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

Continue Reading
Advertisement
love jihad
ಕರ್ನಾಟಕ4 mins ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ17 mins ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು40 mins ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ44 mins ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ48 mins ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 202455 mins ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ1 hour ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ2 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ2 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ2 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20247 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202410 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202412 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202412 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ15 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌