ವಿಸ್ತಾರ ಸಂಪಾದಕೀಯ: ರಾವಿ ನದಿಗೆ ಭಾರತದ ಅಣೆಕಟ್ಟು ದಿಟ್ಟ ಹೆಜ್ಜೆ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾವಿ ನದಿಗೆ ಭಾರತದ ಅಣೆಕಟ್ಟು ದಿಟ್ಟ ಹೆಜ್ಜೆ

Vistara Editorial: 1960ರಲ್ಲಿ ಸಿಂಧೂ ನದಿ ನೀರು ಹಂಚಿಕೆ ಕುರಿತು ಭಾರತ ಹಾಗೂ ಪಾಕಿಸ್ತಾನವು ಒಪ್ಪಂದ ಮಾಡಿಕೊಂಡಿವೆ. ಭಾರತದ ಹಲವು ನದಿಗಳ ನೀರನ್ನು ಪಾಕಿಸ್ತಾನ ಬಳಸುತ್ತಿದ್ದು ಅದಕ್ಕೀಗ ಕಡಿವಾಣ ಹಾಕಲಾಗುತ್ತಿದೆ. ಅದರ ಭಾಗವಾಗಿಯೇ ರಾವಿ ನದಿ ಅಣೆಕಟ್ಟು ನಿರ್ಮಾಣಗೊಂಡಿದೆ.

VISTARANEWS.COM


on

Vistara Editorial, India built dam to Ravi River, Water crisis for Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೂರು ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ, ಶಾಹ್‌ಪುರ ಕಂಡಿ ಅಣೆಕಟ್ಟು (Shahpur Kandi dam) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ (Ravi River Water) ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರಿಂದ ಪಾಕಿಸ್ತಾನದ ಕೃಷಿಗೆ ಭಾರಿ ಪೆಟ್ಟು ಬೀಳುವ ಜತೆಗೆ ಭಾರತದ ಲಕ್ಷಾಂತರ ರೈತರಿಗೆ ಈ ನದಿಯ ನೀರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಇಚ್ಛಾಶಕ್ತಿ ಪ್ರದರ್ಶಿಸಿ ಅಣೆಕಟ್ಟೆ ನಿರ್ಮಾಣ ಮಾಡಿದ ಕೇಂದ್ರ ಸರ್ಕಾರದ ಕ್ರಮ ಅಭಿನಂದನಾರ್ಹವಾಗಿದೆ(Vistara Editorial).

ಜಮ್ಮು ಗಡಿ ಭಾಗದಲ್ಲಿ ಶಾಹ್‌ಪುರ ಕಂಡಿ ಅಣೆಕಟ್ಟೆಯಿಂದ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ನ 32 ಸಾವಿರ ಹೆಕ್ಟೇರ್‌ ಜಮೀನುಗಳಿಗೆ ನೀರು ಹರಿಸಬಹುದಾಗಿದೆ. ಸುಮಾರು 1,150 ಕ್ಯುಸೆಕ್‌ ನೀರು ಉಳಿತಾಯವಾಗುವುದರಿಂದ ಲಕ್ಷಾಂತರ ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗಲಿದೆ. ಅದರಲ್ಲೂ, ಜಮ್ಮು-ಕಾಶ್ಮೀರದ ಕಠುವಾ, ಸಾಂಬಾ ರೈತರು ಅಣೆಕಟ್ಟಿನ ಲಾಭ ಪಡೆಯಲಿದ್ದಾರೆ. ರಾವಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ಕಟ್ಟಬೇಕು ಎಂಬ ಯೋಜನೆಯು ಹಲವು ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿತ್ತು. 1995ರಲ್ಲಿ ಪಿ.ವಿ. ನರಸಿಂಹರಾವ್‌ ಅವರು ಪ್ರಧಾನಿಯಾಗಿದ್ದಾಗ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಲಾಗಿತ್ತು. ಆದರೆ, ಹತ್ತಾರು ಅಡೆತಡೆಗಳಿಂದಾಗಿ ಯೋಜನೆಯು ನನೆಗುದಿಗೆ ಬಿದ್ದಿತ್ತು. 2018ರಲ್ಲಿ ಅಣೆಕಟ್ಟೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಯಿತು ಮತ್ತು ಆರು ವರ್ಷಗಳಲ್ಲಿಯೇ ಕಾಮಗಾರಿ ಪೂರ್ಣಗೊಂಡಿದೆ. ಈಗ ನದಿಯ ನೀರು ಪಾಕಿಸ್ತಾನಕ್ಕೆ ಹರಿಯದೆ, ಭಾರತದ ರೈತರು ಗದ್ದೆಗಳಿಗೆ ಹರಿಯುತ್ತಿದೆ.

ಅಣೆಕಟ್ಟೆಯು ರೈತರಿಗೆ ಅನುಕೂಲವಾಗುವ ಜತೆಗೆ ಜಲವಿದ್ಯುತ್‌ ಉತ್ಪಾದನೆ ಯೋಜನೆಯ ಜಾರಿಗೂ ಭಾರಿ ಅನುಕೂಲವಾಗಲಿದೆ. ಇದಕ್ಕೂ ಮೊದಲು ರಾವಿ ನದಿಯ ನೀರು ಹಳೆಯ ಲಖನ್‌ಪುರ ಡ್ಯಾಮ್‌ನಿಂದ ಪಾಕಿಸ್ತಾನದ ಕಡೆ ಹರಿಯುತ್ತಿತ್ತು. ಈಗ ಮಾಧೋಪುರ ಕಾಲುವೆ ಮೂಲಕ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ ಜಮೀನುಗಳಿಗೆ ನೀರು ಹರಿಸಲಾಗುತ್ತದೆ. 1960ರಲ್ಲಿ ಸಿಂಧೂ ನದಿ ನೀರು ಹಂಚಿಕೆ ಕುರಿತು ಭಾರತ ಹಾಗೂ ಪಾಕಿಸ್ತಾನವು ಒಪ್ಪಂದ ಮಾಡಿಕೊಂಡಿವೆ. ಅದರಂತೆ, ಭಾರತದ ಹಲವು ನದಿಗಳ ನೀರನ್ನು ಪಾಕಿಸ್ತಾನ ಬಳಸುತ್ತಿದೆ. ಈ ಹಿಂದಿನ ಆಡಳಿತದಲ್ಲಿ ತೋರಿದ ನಿರ್ಲಕ್ಷ್ಯ ಮತ್ತು ಪಾಕಿಸ್ತಾನ ಜತೆಗಿನ ಸಂಬಂಧ ದೃಷ್ಟಿಯಿಂದಾಗಿ ಒಪ್ಪಂದದ ಅನ್ವಯ ದೊರೆತ ನೀರನ್ನು ಭಾರತ ಬಳಸುತ್ತಿರಲಿಲ್ಲ. ಆದರೆ, ಈಗ ನ್ಯಾಯಯುತವಾಗಿ ನಮಗೆ ದೊರೆತ ನೀರನ್ನು ಬಳಸಿಕೊಳ್ಳುವ ಪ್ರಯತ್ನದಲ್ಲಿ ಭಾರತವು ಯಶಸ್ವಿಯಾಗಿದೆ. ಆ ಮೂಲಕ, ಪಾಕಿಸ್ತಾನಕ್ಕೆ ಸ್ಪಷ್ಟ ಎಚ್ಚರಿಕೆಯನ್ನೂ ರವಾನಿಸಿದೆ. ನೆರೆಯ ರಾಷ್ಟ್ರಕ್ಕೆ ಯಾವೆಲ್ಲ ಹಂತದಲ್ಲಿ, ಯಾವೆಲ್ಲ ವಲಯದಲ್ಲಿ ಪೆಟ್ಟು ನೀಡಲು ಸಾಧ್ಯವೋ ಅಲ್ಲೆಲ್ಲ ಭಾರತವು ಯಶಸ್ಸು ಸಾಧಿಸುತ್ತಿದೆ. ಇದು ಭಾರತೀಯರಿಗೆ ಹೆಮ್ಮೆ ವಿಷಯವಾಗಿದೆ.

ಭಾರತ ಮತ್ತು ಪಾಕಿಸ್ತಾನಗಳೆರಡೂ ಏಕಕಾಲಕ್ಕೆ ಸ್ವಾತಂತ್ರ್ಯವನ್ನು ಪಡೆದುಕೊಂಡು, 75 ವಸಂತಗಳನ್ನು ಕಂಡಿವೆ. ಭಾರತವು ಈಗ ಜಾಗತಿಕ ಮಟ್ಟದಲ್ಲಿ ಯಾವ ಸ್ಥಾನದಲ್ಲಿದೆ ಮತ್ತು ಪಾಕಿಸ್ತಾನ ಯಾವ ಸ್ಥಾನದಲಿಲ್ಲ ಎಂದು ನೋಡಿದರೆ, ಉಭಯ ರಾಷ್ಟ್ರಗಳ ಮಧ್ಯೆ ಅಜಗಜಾಂತರವಿದೆ. ಯಾವ ವಿಷಯದಲ್ಲೂ, ಯಾವ ಕ್ಷೇತ್ರದಲ್ಲೂ ಇಂದು ಪಾಕಿಸ್ತಾನವು ಭಾರತದ ಸನಿಹದಲ್ಲೂ ಇಲ್ಲ. ಪ್ರಗತಿಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರೀತಿ-ವಿಶ್ವಾಸಗಳಿಂದ ಮುನ್ನಡೆದ ಪರಿಣಾಮ ಇಂದು ಭಾರತವು ಜಗತ್ತಿನ ಅಗ್ರಮಾನ್ಯ ರಾಷ್ಟ್ರವಾಗಿ ಬೆಳೆಯುತ್ತಿದೆ. ಆರ್ಥಿಕವಾಗಿ ಐದನೇ ಅತಿದೊಡ್ಡ ರಾಷ್ಟ್ರವಾಗಿ ಉದಯಿಸಿದೆ. ಎಲ್ಲ ಕ್ಷೇತ್ರಗಳಲ್ಲಿ ಇಂದು ಭಾರತೀಯರ ಪಾರುಪತ್ಯವಿದೆ. ಆದರೆ, ಈ ವಿಷಯದಲ್ಲಿ ಪಾಕಿಸ್ತಾನವು ಬಹಳ ಹಿಂದಿದೆ.

ದ್ವೇಷವನ್ನು ತುಂಬಿಕೊಂಡು, ಧಾರ್ಮಿಕ ಸಂಕುಚಿತವನ್ನೇ ಮುಂದೆ ಮಾಡಿಕೊಂಡ ಬಂದ ಪಾಕಿಸ್ತಾನವು ಆರ್ಥಿಕ ಸಂಕಟದ ಸ್ಥಿತಿಯಲ್ಲಿದೆ. ಅಲ್ಲಿಯ ಜನರ ಪರಿಸ್ಥಿತಿ ಈಗ ಚಿಂತಾಜನಕವಾಗಿದೆ. ಹೊಟ್ಟಿಗೆ ಹಿಟ್ಟಿರದಿದ್ದರೂ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ, ಹಸಿದ ತನ್ನ ಜನರ ಹೊಟ್ಟೆಯನ್ನು ತುಂಬಿಸುವ ಬದಲು, ಭಾರತದ ಜತೆಗೆ ಶಸ್ತ್ರಾಸ್ತ್ರ ಪೈಪೋಟಿಗೆ ಇಳಿದು ಪಾಕಿಸ್ತಾನ ಪಾತಾಳಕ್ಕೆ ಕುಸಿದಿದೆ. ಭಾರತದ ವಿರುದ್ಧ ಉಗ್ರರಿಗೆ ನೆಲೆ ಒದಗಿಸಿ, ಈಗ ಅದರ ದುಷ್ಪರಿಣಾಮವನ್ನು ಎದುರಿಸುತ್ತಿದೆ. ಸ್ನೇಹಿತರನ್ನು ಬದಲಿಸಬಹುದು ಹೊರತ ನೆರೆ ಹೊರೆಯವರೆನ್ನಲ್ಲ ಎಂಬ ಮಾತಿನಂತೆ ಪಾಕಿಸ್ತಾನವು ಭಾರತದ ಜತೆಗೆ ಸ್ನೇಹದಿಂದಲೇ ವರ್ತಿಸಿದ್ದರೆ, ನದಿ ನೀರು ಹಂಚಿಕೆ, ಕಾಶ್ಮೀರ ವಿಷಯ ಸೇರಿದಂತೆ ಎಲ್ಲ ಸಮಸ್ಯೆಗಳೂ ಬಗೆಹರಿಯುತ್ತಿದ್ದವು. ಆದರೆ, ಪಾಕಿಸ್ತಾನ ಆರಿಸಿಕೊಂಡ ಹಾದಿಯು ಭಾರತದ ಹಾದಿಗಿಂತಲೂ ಭಿನ್ನ ಮತ್ತು ವಿಧ್ವಂಸಕಕಾರಿಯಾಗಿತ್ತು. ಆದರೆ, ಭಾರತ ಮಾತ್ರ ಪ್ರಜಾಸತ್ತಾತ್ಮಕ ಹಾದಿಯಲ್ಲಿ ನಡೆದ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವಲ್ಲಿ ಈಗ ಯಶಸ್ವಿಯಾಗುತ್ತಿದೆ. ತನ್ನ ಹಕ್ಕುಗಳನ್ನು ಯಾರ ಮುಲಾಜಿಲ್ಲದೇ ಪಡೆದುಕೊಳ್ಳುತ್ತಿದೆ. ಇದಕ್ಕೆ ರಾವಿ ನದಿಗೆ ಕಟ್ಟಲಾದ ಅಣೆಕಟ್ಟೆ ಹೊಸ ಸಾಕ್ಷಿಯಾಗಿದೆ. ಪಾಕಿಸ್ತಾನವು ಇನ್ನಾದರೂ ಭಾರತದ ಶಕ್ತಿಯನ್ನು ಅರಿತಕೊಂಡು ಮುನ್ನಡೆಯಲಿ. ಇಲ್ಲದಿದ್ದರೆ, ಅದಕ್ಕೆ ಎಲ್ಲ ನಿಟ್ಟಿನಿಂದಲೂ ಸೋಲೇ ಸಿಗಲಿದೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಬೆಂಗಳೂರಿನ ಜಲ ದಾಹ ನೀಗಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ? ನಗರ ವಾಸಿಗಳು ಈ ಬಾರಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡಿದ್ದು ವಿಷಾದನೀಯ.

VISTARANEWS.COM


on

lok sabha election
Koo

ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ (lok sabha Election) ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ರಾಜ್ಯದ ಮೊದಲ ಹಂತದ ಒಟ್ಟಾರೆ ಮತದಾನ 69.23% ದಾಖಲಾಗಿದೆ. ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಮುಂಜಾನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಕಡಿಮೆಯಾಯಿತು. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ (81.48%) ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ (52.81%) ವೋಟಿಂಗ್ ದಾಖಲಾಗಿದೆ. ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದ್ದು, ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿವೆ. ಸಂಸದ ಸ್ಥಾನದ ಆಕಾಂಕ್ಷಿಗಳು ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ.

ಮತದಾನ ಪ್ರಮಾಣವನ್ನು ಗಮನಿಸಿದರೆ ಕೆಲವು ಅಂಶಗಳನ್ನು ಹೇಳಬಹುದಾಗಿದೆ. ನಗರಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳೇ ಮತದಾನದ ಪ್ರಮಾಣದಲ್ಲಿ ವಾಸಿ. ಬೆಂಗಳೂರು ಗ್ರಾಮಾಂತರದಲ್ಲಿ 67.29% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರಗಳಲ್ಲಿ 53.15% ಹಾಗೂ 54.42% ಮತದಾನವಾಗಿದೆ. ಮಂಡ್ಯದಲ್ಲಿ ಅತ್ಯಧಿಕ ಮತದಾನವಾಗಿರುವುದು ಈ ಪ್ರದೇಶದ ಜನತೆಯ ರಾಜಕೀಯ ಪ್ರಜ್ಞೆಯಿಂದಾಗಿಯೇ ಇರಬಹುದು. ಕೋಲಾರ (78.07%) ಹಾಗೂ ತುಮಕೂರು (77.70%) ಕೂಡ ಹೆಚ್ಚಿನ ಮತದಾನ ದಾಖಲಿಸಿವೆ. ಬೆಂಗಳೂರು ಕೇಂದ್ರ ಕ್ಷೇತ್ರದ ನೀರಸ ಮತದಾನ (52.81%) ಚಿಂತೆಗೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮತದಾನ ಶೇಕಡಾವಾರು 68.81% ಆಗಿತ್ತು. ಈ ಬಾರಿ ಮೊದಲ ಹಂತದಲ್ಲಿ ಅದಕ್ಕಿಂತ ಸ್ವಲ್ಪ ಹೆಚ್ಚಿಗೆ (69.23%) ಮತದಾನವಾಗಿದೆ. ಆದರೆ ಎರಡನೇ ಹಂತದಲ್ಲಿ ಎಷ್ಟಾಗಲಿದೆ ಎಂಬುದರ ಮೇಲೆ ಒಟ್ಟಾರೆ ಸರಾಸರಿ ನಿರ್ಧಾರವಾಗಲಿದೆ.

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹಾಗೂ ಮತದಾನ ಬಹಿಷ್ಕಾರ ಮಾಡಿದ್ದು ಕೂಡ ನಡೆದಿವೆ. ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದು ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಎದುರಾಯಿತು. ಸ್ವಾತಂತ್ರ್ಯ ದೊರೆತು ಎಂಟು ದಶಕ ಕಳೆದರೂ ಇನ್ನೂ ಮೂಲಸೌಕರ್ಯ ಕಲ್ಪಿಸದ ನಮ್ಮ ಆಡಳಿತಗಳಿಗೆ ಮತದಾನ ಬಹಿಷ್ಕಾರವೇ ಸೂಕ್ತ ಉತ್ತರ ಎಂದು ಗ್ರಾಮೀಣ ಜನತೆ ಕಂಡುಕೊಂಡರೋ ಗೊತ್ತಿಲ್ಲ. ಇದು ಮೊದಲೇ ಸಾರಿ, ಕಾರಣ ಹೇಳಿ ಮಾಡುವ ಬಹಿಷ್ಕಾರ. ಆದರೆ ವಿದ್ಯಾವಂತ ನಗರವಾಸಿಗಳ ʼಮತದಾನ ಬಹಿಷ್ಕಾರʼಕ್ಕೆ ಕಾರಣವಾದರೂ ಏನು? ನಗರದಲ್ಲಿ ಮತದಾನ ಹೆಚ್ಚಳ ಮಾಡಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಮತದಾರರಿಗಾಗಿಯೇ ಉತ್ತೇಜನದ ಉಪಕ್ರಮಗಳು, ಮಹಿಳೆಯರಿಗಾಗಿಯೇ ಸಖಿ ಮತಗಟ್ಟೆಗಳು, ಸಾರ್ವತ್ರಿಕ ರಜೆ ಎಲ್ಲವನ್ನೂ ಘೋಷಿಸಲಾಗಿದೆ. ಯಾವುದೇ ಕಷ್ಟವಿಲ್ಲದೆ ಮತದಾರರ ಗುರುತಿನ ಚೀಟಿ ಅಪ್‌ಡೇಟ್‌ ಮಾಡುವ, ತಮ್ಮ ಮತಗಟ್ಟೆ ಎಲ್ಲಿ ಎಂದು ತಿಳಿಯಲು ಕ್ಯುಆರ್‌ ಕೋಡ್‌ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಲಾಗಿದೆ. ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ?

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಮತದಾನ ಕಡಿಮೆಯಾದರೆ ತಾಂತ್ರಿಕವಾಗಿ ನಾವು ಸಮರ್ಪಕವಾದ ಸರ್ಕಾರವನ್ನು ಚುನಾಯಿಸುತ್ತಿರುವುದಿಲ್ಲ. ದೇಶದ 60% ಜನ ಮಾತ್ರ ಮತ ಹಾಕಿ, ಅದರಲ್ಲಿ 30% ಮತ ಪಡೆದ ಪಕ್ಷ ಅಧಿಕಾರಕ್ಕೆ ಬಂದರೆ, ಒಟ್ಟಾರೆ ದೇಶದ ಜನತೆಯಲ್ಲಿ ಆ ಪಕ್ಷವನ್ನು ಆಯ್ಕೆ ಮಾಡಿದವರು ಮೂರನೇ ಒಂದು ಭಾಗ ಮಾತ್ರವೇ ಆಗಿರುತ್ತಾರೆ. ಉಳಿದ ಮೂರನೇ ಎರಡು ಭಾಗ ಜನತೆ ಆ ಪಕ್ಷದ ವಿರುದ್ಧ ಇದ್ದಾರೆ ಎಂದು ತಿಳಿಯಬೇಕಾಗುತ್ತದೆ. ವಾಸ್ತವ ಹಾಗಿರುವುದಿಲ್ಲ. ಮತ ಹಾಕದ ಮಂದಿಯಲ್ಲಿ ಎಷ್ಟು ಮತಗಳು ಯಾವ ಪಕ್ಷದ್ದು ಎಂದು ನಿರ್ಣಯಿಸುವ ಯಾವ ವಿಧಾನವೂ ಇಲ್ಲ. ಹೀಗಾಗಿ ಮತದಾನ ಪ್ರಮಾಣ ಕಡಿಮೆ ಬಂದಾಗ, ಬರುವ ಫಲಿತಾಂಶವೂ ಅಷ್ಟರ ಮಟ್ಟಿಗೆ ಅಸಮರ್ಪಕವೇ ಆಗಿರುತ್ತದೆ. ಇನ್ನು ವಿದ್ಯಾವಂತರು, ಪ್ರಜ್ಞಾವಂತರು ಮತದಾನದಿಂದ ಹಿಂದುಳಿದರೆ, ಪ್ರಜ್ಞಾವಂತಿಕೆಯ ಆಯ್ಕೆಯೂ ಇಲ್ಲದಾಗುತ್ತದೆ. ಇದರಿಂದ ನಷ್ಟ ಪ್ರಜೆಗಳಿಗೇ. ಮೂರ್ಖರು ಅಧಿಕಾರಕ್ಕೆ ಆರಿಸಿ ಬರಬಾರದು ಎಂದಿದ್ದರೆ, ಬುದ್ಧಿವಂತರು ಮತ ಹಾಕಬೇಕು. ಮೇ 7ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಾದರೂ ಹೆಚ್ಚಿನ ಪ್ರಮಾಣದ ಮತದಾನವಾಗಲಿ ಎಂದು ಆಶಿಸೋಣ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು.

VISTARANEWS.COM


on

Lok sabha Election
Koo

ದೇಶದಲ್ಲಿ ಲೋಕಸಭೆ ಚುನಾವಣೆಯ (lok sabha election) ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ (ಏಪ್ರಿಲ್‌ 26) ಶುಕ್ರವಾರ ನಡೆಯುತ್ತಿದೆ. ಮತದಾನವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಭಾರತದಲ್ಲಿ ಚುನಾವಣೆ ನಡೆಯುತ್ತದೆ ಎಂದರೆ ಜಗತ್ತೇ ಅದನ್ನು ಕುತೂಹಲದಿಂದ ವೀಕ್ಷಿಸುತ್ತದೆ. ಯಾಕೆಂದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರದಲ್ಲಿ, ಯಾವುದೇ ಹಿಂಸಾಚಾರವಿಲ್ಲದೆ, ಒಂದೇ ಒಂದು ಜೀವಹಾನಿಯಿಲ್ಲದೆ, ಯಾವ ಲೋಪದೋಷವೂ ಇಲ್ಲದಂತೆ, ಜಗತ್ತಿಗೇ ಮಾದರಿಯಾಗಿ ನಡೆಯುವ ಮತದಾನ ಪ್ರಕ್ರಿಯೆ ಹಲವು ದೇಶಗಳಿಗೆ ಅಧ್ಯಯನ ಯೋಗ್ಯವಾಗಿ ಕಾಣುತ್ತದೆ. ದಾಖಲೆ ಸಂಖ್ಯೆಯ ಜನರು ಮತದಾನ ಮಾಡಲು ಏಳೆಂಟು ಹಂತಗಳನ್ನು ತೆಗೆದುಕೊಂಡರೂ, ಒಂದೇ ದಿನದಲ್ಲಿ ಸಂಶಯಕ್ಕೆಡೆಯಿಲ್ಲದಂತೆ ಫಲಿತಾಂಶವನ್ನು ಪಡೆಯುವುದು ವಿಶೇಷ. ಅಮೆರಿಕದಂಥ ದೇಶದಲ್ಲೇ ಚುನಾವಣೆ ಹಲವು ಸಲ ಗೊಂದಲಮಯವಾಗಿರುತ್ತದೆ ಎಂಬುದನ್ನು ನೋಡಿದರೆ, ನಮ್ಮದು ಅಧ್ಯಯನಯೋಗ್ಯವೇ ಸರಿ.

ಪ್ರಸ್ತುತ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಏರಲು ಜನತೆಯ ಆಶೀರ್ವಾದ ಕೋರಿದೆ. ನರೇಂದ್ರ ಮೋದಿಯವರು ಪಕ್ಷಕ್ಕೆ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ಸಮರ್ಥ ನಾಯಕತ್ವ ನೀಡಿದ್ದಾರೆ. ಹಲವು ದಶಕಗಳ ಕಾಲ ದೇಶವನ್ನು ಆಳಿ ಸದ್ಯ ಅಧಿಕೃತ ವಿಪಕ್ಷ ಸ್ಥಾನಮಾನವನ್ನೂ ಹೊಂದಿಲ್ಲದ ಕಾಂಗ್ರೆಸ್‌, ಮರಳಿ ಅಧಿಕಾರಕ್ಕೆ ಬರಲು ಹಾತೊರೆಯುತ್ತಿದೆ. ಕಾಂಗ್ರೆಸ್‌ ಪಕ್ಷ ಹಲವು ಮಿತ್ರಪಕ್ಷಗಳನ್ನು ಸೇರಿಸಿಕೊಂಡು ಇಂಡಿಯಾ ಬ್ಲಾಕ್‌ ರಚಿಸಿಕೊಂಡು ಬಿಜೆಪಿಯ ಅಶ್ವಮೇಧವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ. ಚುನಾವಣೆಯ ಪ್ರಚಾರ ಕಣದಲ್ಲಿ ಹಲವು ವಾದವಿವಾದಗಳು, ವಾಗ್ವಾದಗಳು ನಡೆದುಹೋಗಿವೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದು ಮತದಾರನಿಗೆ ಬಿಟ್ಟ ವಿಷಯ. ಮತದಾರ ಸಾಕಷ್ಟು ಬುದ್ಧಿವಂತನಾಗಿದ್ದು, ತನ್ನ ಆಯ್ಕೆಯನ್ನು ಆತ ಮಾಡಬಲ್ಲ.

ಆದರೆ, ಚಿಂತಿಸಬೇಕಾದ ಒಂದು ವಿಷಯವೆಂದರೆ, ಮತದಾನದ ಪ್ರಮಾಣ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ವಿಶೇಷವಾಗಿ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ (2019) ಇಡೀ ರಾಜ್ಯದಲ್ಲೇ ಕನಿಷ್ಠ ಪ್ರಮಾಣ (ಶೇ 53.7) ಮತದಾನವಾಗಿತ್ತು. ಬೆಂಗಳೂರು ಸೆಂಟ್ರಲ್‌ನಲ್ಲಿ ಮತದಾನ ಪ್ರಮಾಣ ಸೇಕಡ 54.3, ಬೆಂಗಳೂರು ಉತ್ತರದಲ್ಲಿ ಮತದಾನ ಪ್ರಮಾಣ ಶೇಕಡ 54.7 ಇತ್ತು. ಇದೇ ವೇಳೆ ಬೆಂಗಳೂರು ಗ್ರಾಮಾಂತರದಲ್ಲಿ ಮತದಾನ ಪ್ರಮಾಣ ಶೇಕಡ 64.9 ಇತ್ತು. ಕರ್ನಾಟಕದ ಒಟ್ಟು ಮತದಾನ ಪ್ರಮಾಣ ಶೇಕಡ 68 ಇತ್ತು. ಆದ್ದರಿಂದ ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂಬ ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ. ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಆಯೋಗ ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದೆ. ಹಾಗೆಯೇ ಈ ದಿನ ಸಾರ್ವತ್ರಿಕ ರಜೆಯನ್ನು ನೀಡಲಾಗಿದೆ. ರಜೆಯೆಂದು ಪ್ರವಾಸ ಹೋಗುವ ನಗರದ ಮತದಾರರ ಚಾಳಿಯನ್ನು ತಪ್ಪಿಸಲು ಹೆಚ್ಚಿನ ಪ್ರವಾಸೀ ತಾಣಗಳನ್ನು ಕ್ಲೋಸ್‌ ಮಾಡಲಾಗುತ್ತಿದೆ.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಂಡಿದ್ದಾರೆ. ಭಾರತೀಯ ಚುನಾವಣಾ ಆಯೋಗವು ನವೀನ ಮತ್ತು ವಿನೂತನ ಮತದಾರರ ಜಾಗೃತಿ ಅಭಿಯಾನಗಳನ್ನು ಆಯೋಜಿಸಿರುವುದರ ಜೊತೆಗೆ ಹೋಟೆಲ್ ಉದ್ಯಮಿಗಳು, ಕಂಪನಿಗಳು ಮತ್ತು ಇತರ ಸಂಸ್ಥೆಗಳು ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಮತದಾರರನ್ನು ಓಲೈಸಲು ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬುಡಕಟ್ಟು ಸಮುದಾಯಗಳಿಗೆ ವಿಶೇಷ ಮತಗಟ್ಟೆ ರಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರತಿ ಮತವೂ ಅಮೂಲ್ಯ. ಆದರೆ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರೈಲ್ವೇ ಇಲಾಖೆಯ ಸುಧಾರಣೆ ಕ್ರಮಗಳು ಪ್ರಶಂಸಾರ್ಹ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

VISTARANEWS.COM


on

Modi
Koo

ಮುಂದಿನ 5 ವರ್ಷಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಯಾಣಿಕರಿಗೂ (Railway Ticket) ಕನ್ಫರ್ಮ್ಡ್‌ ಟಿಕೆಟ್‌ (Confirmed Tickets) ಸಿಗಲಿವೆ. ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗ್ಯಾರಂಟಿ- ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆ ಎಂದಿದ್ದಾರೆ ಸಚಿವರು. ಇದು ದೇಶದ ರೈಲ್ವೇ ವ್ಯವಸ್ಥೆಯ ಸುಧಾರಣೆಗಳಲ್ಲಿ ಒಂದು ವಿಚಾರ ಮಾತ್ರ.

ಕಳೆದ 10 ವರ್ಷಗಳಲ್ಲಿ ದೇಶದ ರೈಲ್ವೇ ವ್ಯವಸ್ಥೆಯನ್ನು ಸಾಕಷ್ಟು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ. ದೇಶಾದ್ಯಂತ ರೈಲ್ವೆ ಪ್ರಯಾಣಿಕರಿಗೆ ಹೊಸ ಸೌಲಭ್ಯ, ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಪ್ರಯತ್ನಪಡುತ್ತಿದೆ. ಅದೇ ರೀತಿ ಪ್ರಯಾಣಿಕರು ಸುಲಭವಾಗಿ ಹಾಗೂ ಕ್ಷಿಪ್ರವಾಗಿ ರೈಲು ಟಿಕೆಟ್‌ಗಳನ್ನು ಪಡೆಯುವಂತೆ ಮಾಡುವುದು ಮೊದಲ ಆದ್ಯತೆ. ಇದಕ್ಕಾಗಿ ಇನ್ನಷ್ಟು ರೈಲುಗಳ ಓಡಾಟ, ದೇಶಾದ್ಯಂತ ರೈಲುಗಳ ವಿಸ್ತರಣೆ, ರೈಲ್ವೆ ಲೇನ್‌ಗಳನ್ನು ವಿಸ್ತರಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. 2014ರಿಂದ 2024ರ ಅವಧಿಯಲ್ಲಿ ದೇಶಾದ್ಯಂತ 31 ಸಾವಿರ ಹೊಸ ಟ್ರ್ಯಾಕ್‌ಗಳನ್ನು ಅಳವಡಿಸಲಾಗಿದೆ. 2004ರಿಂದ 2014ರ ಅವಧಿಯಲ್ಲಿ 5 ಸಾವಿರ ಕಿಲೋಮೀಟರ್‌ ರೈಲು ಮಾರ್ಗ ವಿದ್ಯುದ್ದೀಕರಣವಾಗಿದ್ದರೆ, 2014ರಿಂದೀಚೆಗೆ ವಿದ್ಯುದ್ದೀಕರಣದ ಪ್ರಮಾಣವು 44 ಸಾವಿರ ಕಿಲೋಮೀಟರ್‌ಗೆ ಏರಿಕೆಯಾಗಿದೆ. ಕಳೆದ 10 ವರ್ಷದಲ್ಲಿ 54 ಸಾವಿರ ಬೋಗಿಗಳನ್ನು ತಯಾರಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಪ್ರಧಾನಿ ಮೋದಿಯವರು 41 ಸಾವಿರ ಕೋಟಿ ರೂ. ವೆಚ್ಚದ 2000 ರೈಲ್ವೆ ಪ್ರಾಜೆಕ್ಟ್‌ಗಳನ್ನು ದೇಶಾದ್ಯಂತ ಲೋಕಾರ್ಪಣೆ ಮಾಡಿದ್ದರು. ಈ ಮೊದಲು ರೈಲ್ವೆ ಇಲಾಖೆ ಎಂದರೆ ನಷ್ಟ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಅದೇ ರೈಲ್ವೆಯು ಪರಿವರ್ತನೆಯ ಬಹುದೊಡ್ಡ ಶಕ್ತಿಯಾಗಿ ಬದಲಾಗಿದೆ. ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದ್ದು, ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗಲಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದರು. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರ ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಸಣ್ಣಪುಟ್ಟ ಸಂಗತಿಗಳಲ್ಲೂ ರೈಲ್ವೇ ಇಲಾಖೆ ಸುಧಾರಣೆ ತರುತ್ತಿದೆ. ಉದಾಹರಣೆಗೆ, ಐಆರ್‌ಟಿಸಿ (Indian Railway Catering and Tourism Corporation) ವೆಬ್‌ಸೈಟ್‌ನಿಂದ ಕಾಯ್ದಿರಿಸಿದ ಆರ್‌ಎಸಿ (Reservation Against Cancellation) ಟಿಕೆಟ್‌ಗಳನ್ನು ರದ್ದುಗೊಳಿಸಲು ಕನಿಷ್ಠ ಶುಲ್ಕವನ್ನು (60 ರೂ. ಮಾತ್ರ) ವಿಧಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಅಂದರೆ ಈ ಮೊದಲಿನ ಅನಿಯಂತ್ರಿತ ಶುಲ್ಕ ಇನ್ನು ಇರುವುದಿಲ್ಲ. ಕಳೆದ ಮೂರು ವರ್ಷಗಳಲ್ಲಿ ರೈಲ್ವೇಯು ವೈಟಿಂಗ್‌ ಟಿಕೆಟ್‌ಗಳ ರದ್ದತಿಯಿಂದ ಬರೋಬ್ಬರಿ 1,230 ಕೋಟಿ ರೂ. ಆದಾಯ ಗಳಿಸಿದೆ. ಈ ಹಣದುಬ್ಬರದ ಕಾಲದಲ್ಲೂ ಕನಿಷ್ಠ ಪ್ರಯಾಣಿಕ ಹಾಗೂ ಸರಕು ಸಾಗಣೆ ಶುಲ್ಕವನ್ನು ರೈಲ್ವೇಯು ಹೊಂದಿರುವುದರಿಂದ, ಸಾರ್ವಜನಿಕ ಸೇವೆಯ ಮಾಧ್ಯಮವೂ ಆಗಿದೆ. ಹೀಗಾಗಿ ರೈಲ್ವೆಯಲ್ಲಿ ಆಗುವ ಸುಧಾರಣೆಯು ಇನ್ನೊಂದು ರೀತಿಯಲ್ಲಿ ಬಡ- ಮಧ್ಯಮ- ಕೆಳವರ್ಗದ ಜನತೆಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಸೌಲಭ್ಯವನ್ನು ನೀಡುವ ಉಪಕ್ರಮವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ, ಹೊಸತನ ತರುತ್ತಿದ್ದಾರೆ. ಹೆದ್ದಾರಿ ಸಾರಿಗೆಯಲ್ಲಿ ನಿತಿನ್‌ ಗಡ್ಕರಿ ಅವರ ನೇತೃತ್ವದಲ್ಲಿ ಆಗಿರುವ ಸಾಧನೆಯೇ ಇದಕ್ಕೆ ಸಾಕ್ಷಿ. ಇದೇ ರೀತಿ ರೈಲ್ವೆಯಲ್ಲೂ ಆಗಬೇಕಿದೆ.

ಇದನ್ನೂ ಓದಿ: Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

Continue Reading
Advertisement
Sex Scandals
Latest4 mins ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ4 mins ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ19 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ20 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ32 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ33 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ42 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ51 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ54 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ1 hour ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20244 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202424 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌