ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.

VISTARANEWS.COM


on

Vistara Editorial, Janata Darshan by CM must appreciated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ‌ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ‌ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್‌ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್‌ ವರ್ಕರ್‌ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.

ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್‌; ಭಾರತದಲ್ಲಿ ರೈಲು ಕ್ರಾಂತಿ

ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Ration Card : ಆರು ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವವರ ಕಾರ್ಡ್‌ ರದ್ದತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿತ್ತು. ಈಗ ಪಡಿತರ ಕಾರ್ಡ್‌ ರದ್ದಾಗುವ ಭೀತಿಯನ್ನು ಎದುರಿಸುತ್ತಿರುವವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಂಥವರ ಕಾರ್ಡ್‌ ರದ್ದಾಗುವುದಿಲ್ಲ, ಬದಲಾಗಿ ಅಮಾನತು ಸ್ಥಿತಿಯಲ್ಲಿರುತ್ತದೆ.

VISTARANEWS.COM


on

Ration card not cancelled and Vidhanasoudha
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿ ಯೋಜನೆಯನ್ನು (Congress Guarantee Scheme) ಜಾರಿ ಮಾಡಿದೆ. ಅಲ್ಲದೆ, ಇವುಗಳಲ್ಲಿ ಎರಡು ಯೋಜನೆಯಾದ ಗೃಹ ಲಕ್ಷ್ಮಿ (Gruha Lakshmi scheme) ಹಾಗೂ ಅನ್ನಭಾಗ್ಯಕ್ಕೆ (Annabhagya scheme) ಪಡಿತರ ಚೀಟಿ (ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ – APL Card and BPL Card) ನೇರ ಸಂಬಂಧವನ್ನು ಹೊಂದಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿ ಕೆಜಿ ಅಕ್ಕಿಗೆ ತಲಾ 30 ರೂಪಾಯಿಯಂತೆ ಒಬ್ಬರಿಗೆ 170 ರೂಪಾಯಿಯನ್ನು ರಾಜ್ಯ ಸರ್ಕಾರ ಜಮೆ ಮಾಡುತ್ತಾ ಬಂದಿದೆ. ಇವರಲ್ಲಿ ಬಹಳಷ್ಟು ಮಂದಿ ರೇಷನ್‌ ಕಾರ್ಡ್‌ನಲ್ಲಿ (Ration Card) ಸಮಸ್ಯೆ ಇದ್ದರಿಂದ ಹಣ ಸಿಕ್ಕಿರಲಿಲ್ಲ. ಆದರೆ, ಈ ಬಾರಿ ತಿದ್ದುಪಡಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ. ಇದರಿಂದ ಸರ್ಕಾರಕ್ಕೆ ಹೊರೆ ಮತ್ತಷ್ಟು ಹೆಚ್ಚಳವಾಗಲಿದೆ. ಹೀಗಾಗಿ ಆರು ತಿಂಗಳಿನಿಂದ ಪಡಿತರವನ್ನು ಪಡೆಯದೇ ಇರುವವರ ಕಾರ್ಡ್‌ ರದ್ದತಿ ಪ್ರಕ್ರಿಯೆಗೂ ಮುಂದಾಗಿತ್ತು. ಈಗ ಪಡಿತರ ಕಾರ್ಡ್‌ ರದ್ದಾಗುವ ಭೀತಿಯನ್ನು ಎದುರಿಸುತ್ತಿರುವವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಂಥವರ ಕಾರ್ಡ್‌ ರದ್ದಾಗುವುದಿಲ್ಲ, ಬದಲಾಗಿ ಅಮಾನತು ಸ್ಥಿತಿಯಲ್ಲಿರುತ್ತದೆ.

ಹೌದು. ಅಮಾನತು ಸ್ಥಿತಿಯಲ್ಲಿದ್ದರೆ ಆಹಾರ ಇಲಾಖೆಗೆ ಯಾವಾಗ ಬೇಕಾದರೂ ಹೋಗಿ ಸೂಕ್ತ ಕಾರಣ ನೀಡಿ ಕಾರ್ಡ್‌ ಅನ್ನು ಚಾಲ್ತಿಯಲ್ಲಿಟ್ಟುಕೊಳ್ಳಬಹುದಾಗಿದೆ. ಈಗಾಗಲೇ 2023ರ ಸೆ. 29 ರನ್ವಯ 2.96 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ವಿಲೇವಾರಿಗೆ ಆದೇಶ ಮಾಡಲಾಗಿದೆ. ಹಾಗಾಗಿ ಈ ಆದೇಶದನ್ವಯ ಮಾರ್ಚ್ 2023ರ ವರೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಸಿದ್ದ ಅರ್ಜಿಗಳಲ್ಲಿ ಅರ್ಹ ಅರ್ಜಿಗಳಿಗೆ ಪಡಿತರ ಚೀಟಿ ನೀಡುವ ಕಾರ್ಯ ಪ್ರಗತಿಯಲ್ಲಿದೆ. ಇದರ ಜತೆ ಜತೆಯಲ್ಲಿ 6 ತಿಂಗಳಿನಿಂದ ಪಡಿತರ ಧಾನ್ಯ ಪಡೆಯದಂತ ಕಾರ್ಡ್ ದಾರರನ್ನು ಪತ್ತೆ ಮಾಡಲು ಮುಂದಾಗಲಾಗಿದೆ.

ಅಮಾನತಿನಲ್ಲಿಡಲು ಸೂಚನೆ

ಏಕ ಸದಸ್ಯ ಪಡಿತರ ಚೀಟಿಗಳನ್ನು ಹೊರತು ಪಡಿಸಿ 6 ತಿಂಗಳಿನಿಂದ ನಿರಂತರವಾಗಿ ಪಡಿತರ ಪಡೆಯದೇ ಇರುವ ಪಡಿತರ ಚೀಟಿದಾರರನ್ನು ಗುರುತಿಸಿ ಅವರ ಮನೆಯ ಸ್ಥಳ ತನಿಖೆ ಮಾಡಿ, ಸ್ಥಳ ತನಿಖಾ ಸಮಯದಲ್ಲಿ 6 ತಿಂಗಳಿನಿಂದ ನಿರಂತರವಾಗಿ ಪಡಿತರ ಪಡೆಯದೇ ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಅಂತಹ ಪಡಿತರ ಚೀಟಿಗಳನ್ನು ಅಮಾನತಿನಲ್ಲಿಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: FDA SDA Recruitment : ಎಫ್‌ಡಿಎ, ಎಸ್‌ಡಿಎ ನೇಮಕಾತಿಗೆ ಅರ್ಜಿ ಯಾವಾಗ? ಕಾಯುತ್ತಿರುವ ಲಕ್ಷಾಂತರ ಆಕಾಂಕ್ಷಿಗಳು!

ಮತ್ತೆ ಆ್ಯಕ್ಟಿವ್‌ ಮಾಡಲು ಹೀಗೆ ಮಾಡಿ

ಒಂದು ವೇಳೆ ನೀವು 6 ತಿಂಗಳವರೆಗೆ ರೇಷನ್ ಪಡೆಯದೇ ಇದ್ದರೆ ನಿಮ್ಮ ರೇಷ್‌ ಕಾರ್ಡ್‌ ಅಮಾನತು ಸ್ಥಿತಿಯಲ್ಲಿರುತ್ತದೆ. ಇ ವೇಳೆ ಆಹಾರ ಇಲಾಖೆ ಸಿಬ್ಬಂದಿ ಸರ್ವೇಗೆಂದು ನಿಮ್ಮ ಮನೆಗೆ ಬಂದರೆ ಅಲ್ಲಿ ಯಾಕಾಗಿ ಇಷ್ಟು ದಿನ ಪಡಿತರವನ್ನು ಪಡೆದಿಲ್ಲ ಎಂಬ ಸಕಾರಣ ನೀಡಿ, ಮುಂದೆ ಪಡಿತರ ಪಡೆಯುವುದಾಗಿ ಮನವರಿಕೆ ಮಾಡಬಹುದು. ಇಲ್ಲವೇ ರೇಷನ್‌ ಕಾರ್ಡ್‌ ಮಳಿಗೆಗಳಿಗೆ ತೆರಳಿ ನಿಮ್ಮ ಬಯೋಮೆಟ್ರಿಕ್‌ ನೀಡಿ ಆಹಾರವನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

Bengaluru News : ಬೆಂಗಳೂರಲ್ಲಿ ವ್ಯಕ್ತಿಯೊಬ್ಬನ ಬರ್ಬರ (Murder case) ಹತ್ಯೆಯಾಗಿದೆ. ಹತ್ಯೆಗೈದು ಮೃತದೇಹವನ್ನು ಮೋರಿಯಲ್ಲಿ ಬೀಸಾಡಿ ಹೋಗಿದ್ದಾರೆ.

VISTARANEWS.COM


on

By

Crime Sense Murder Case
Koo

ಬೆಂಗಳೂರು: ವ್ಯಕ್ತಿಯನ್ನು ಕೊಲೆಗೈದು ಶವವನ್ನು ಮೋರಿಗೆ ಬಿಸಾಡಿ ಹಂತಕರು (Murder Case) ಪರಾರಿ ಆಗಿದ್ದಾರೆ. ಬೆಂಗಳೂರಿನ ಜಾಲಹಳ್ಳಿಯ ಹೆಚ್ಎಂಟಿ ರೋಡ್‌ನ ಮೋರಿಯಲ್ಲಿ ಶವ ಪತ್ತೆಯಾಗಿದೆ.

ವ್ಯಕ್ತಿಯ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ. ಪರಿಣಾಮ ತಲೆ ಹಿಂಭಾಗ ಕಿತ್ತು ಬಂದಿದೆ. ಹತ್ಯೆ ಬಳಿಕ ಶವವನ್ನು ಮೋರಿಗೆ ಎಸೆದು ಹಂತಕರು ಕಾಲ್ಕಿತ್ತಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯಾದವನ ಗುರುತು ಪತ್ತೆಯಾಗಿಲ್ಲ. ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತನ ಮಾಹಿತಿ ಪತ್ತೆ ಹಚ್ಚಲು ಮುಂದಾಗಿದ್ದು, ಹಂತಕರಿಗೆ ಹುಡುಕಾಟ ನಡೆಸಿದ್ದಾರೆ. ಇನ್ನೂ ಮೋರಿಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು

ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುವಾಗ ಯುವಕರ ನಡುವೆ ಜಗಳ ನಡೆದು, ಯುವಕನ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಬೀದರ್‌ನ ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ನಿವಾಸಿ ಬಸವರಾಜ ಜಮಾದಾರ (30) ಹತ್ಯೆಯಾದವ.

ಕಿಟ್ಟಾ ಗ್ರಾಮದಲ್ಲಿ ಗೆಳೆಯನ ಮದುವೆ ಸಮಾರಂಭ ಇತ್ತು. ಈ ಮದುವೆಗೆ ಬಸವರಾಜ ಹೋಗಿದ್ದ. ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡಲೆಂದು ಈತ ಕಿಟ್ಟಾ ಗ್ರಾಮಕ್ಕೆ ತೆರಳಿದ್ದ. ಮೆರವಣಿಗೆಯಲ್ಲಿ ನೃತ್ಯ ಮಾಡುವಾಗ ಕಿಟ್ಟಾ ಗ್ರಾಮದ ಕೆಲ ಯುವಕರೊಂದಿಗೆ ಜಗಳ ನಡೆದಿದೆ. ಈ ನಡುವೆ ಸ್ಥಳೀಯರು ಮಧ್ಯ ಪ್ರವೇಶಿಸಿ ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳಿಸಿದ್ದಾರೆ.

Youth killed in Bidar Vijayapura

ಇದನ್ನೂ ಓದಿ: Road Accident : ಪ್ರತ್ಯೇಕ ಕಡೆಗಳಲ್ಲಿ ಬಸ್‌ ಅಪಘಾತ; ನರಳಾಡಿದ ಪ್ರಯಾಣಿಕರು

ಆದರೆ ಅಷ್ಟಕ್ಕೆ ಸುಮ್ಮನಾಗದ ಕಿಟ್ಟಾ ಗ್ರಾಮದ ಯುವಕರು, ಬಸವರಾಜನನ್ನು ಮೆರವಣಿಗೆಯಿಂದ ಬೇರೆ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಠಾಣೆ ಸಿಪಿಐ ಕೃಷ್ಣಕುಮಾರ ಪಾಟೀಲ, ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲೆ ಮಾಡಿ ಪರಾರಿಯಾದ ಯುವಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ

ವಿಜಯಪುರ ನಗರದ ಕೆಎಚ್‌‌ಬಿ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಲಾಗಿದೆ. ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಸ್ಥಳೀಯರು ದಂಗಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಲನಗರ ಪಿಎಸ್‌ಐ ಮತ್ತು ಡಿವೈಎಸ್‌ಪಿ ಯಲಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವ್ಯಕ್ತಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಹೋಂ ಗಾರ್ಡ್ ಬಟ್ಟೆಯಲ್ಲಿ ತುಂಡಾಗಿ ಬಿದ್ದಿರುವ ಶವ ಪತ್ತೆಯಾಗಿದೆ. ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Police Protest : ಪೊಲೀಸರ ಅಮಾನತ್ತು ವಾಪಸ್ಸು ಪಡೆಯಲು ಸಮಯ ಕೇಳಿದ್ದಕ್ಕೆ ಪೊಲೀಸ್‌ ಸಿಬ್ಬಂದಿ ಹಾಗೂ ಕುಟುಂಬಸ್ಥರು ಅಹೋರಾತ್ರಿ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ಜತೆಗೆ ವಕೀಲರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

By

Police call off protest FIR against lawyer who slapped police
Koo

ಚಿಕ್ಕಮಗಳೂರು: ಹೆಲ್ಮೆಟ್‌ ಹಾಕದ ಕಾರಣಕ್ಕೆ ಪ್ರೀತಮ್‌ ಎಂಬ ಯುವ ವಕೀಲನ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಪ್ರಕರಣದಲ್ಲಿ ಪಿಎಸ್‌ಐ, ಎಎಸ್‌ಐ, ಮುಖ್ಯ ಪೇದೆ ಹಾಗೂ ಮೂವರು ಪೇದೆಗಳು ಸೇರಿ ಒಟ್ಟು ಆರು ಪೊಲೀಸರನ್ನು ಎಸ್‌ಪಿ ವಿಕ್ರಮ್‌ ಅಮಟೆ ಅಮಾನತು ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಪೊಲೀಸ್‌ ಕುಟುಂಬಸ್ಥರು ಶನಿವಾರ (ಡಿ.2) ಅಹೋರಾತ್ರಿ ಪ್ರತಿಭಟನೆಯನ್ನು (Police Protest) ನಡೆಸಿದ್ದರು.

ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿಯೇ ಟಾರ್ಪಲ್ ಹಾಕಿ ಮಲಗಿ ಪ್ರತಿಭಟಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ ವರದಿ ನೀಡಲು ಸೂಚನೆ ನೀಡಿತ್ತು. ಹೀಗಾಗಿ ಆರು ಮಂದಿ ಪೊಲೀಸರನ್ನು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಇತರೆ ಸಿಬ್ಬಂದಿ ಶನಿವಾರ ಅಹೋರಾತ್ರಿ ಪ್ರತಿಭಟನೆಗೆ ಮುಂದಾದರು.

ನಗರದ 6 ಠಾಣೆಗಳ 300ಕ್ಕೂ ಹೆಚ್ಚು ಪೊಲೀಸರು ಕೆಲಸ ನಿಲ್ಲಿಸಿ ಪ್ರತಿಭಟನೆಗೆ ಆಗಮಿಸಿ, ನಾವ್ಯಾರು ಕೆಲಸ ಮಾಡಲ್ಲ. ಪೊಲೀಸರಿಗೆ ರಕ್ಷಣೆ ಇಲ್ಲ, ಪೊಲೀಸ್ ಕುಟುಂಬಗಳಿಗೆ ಅನ್ಯಾಯ ಆಗಿದೆ‌. ಒಂದು ವೇಳೆ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಿದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಸ್‌ಪಿಗೆ ಎಚ್ಚರಿಕೆ ನೀಡಿದ್ದರು. ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಇದಾದ ಬಳಿಕ ಪೊಲೀಸರು ಹಾಗೂ ಅವರ ಕುಟುಂಬಸ್ಥರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ತರೀಕೆರೆ ಡಿವೈಎಸ್‌ಪಿ ಹಾಲಮೂರ್ತಿ, ಡಿಸಿಆರ್‌ಬಿ ಡಿವೈಎಸ್‌ಪಿ ಶಿವಪ್ರಸಾದ್ ನಾಯ್ಕ್, ಸೆನ್ ಪಿಎಸ್ಐ ಗವಿರಾಜ್ ಹಾಗೂ ಎಸ್‌ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯು ಯಶಸ್ವಿಯಾಗಿದೆ. ಪೊಲೀಸ್‌ ಸಿಬ್ಬಂದಿ ಅಮಾನತ್ತು ವಾಪಸ್ಸು ಪಡೆಯಲು ಎಸ್‌ಪಿ ವಿಕ್ರಂ ಅಮಟೆ ಸಮಯ ಕೇಳಿದ್ದಕ್ಕೆ ಪ್ರತಿಭಟನೆಯನ್ನು ಕೈಬಿಟ್ಟರು. ಇದೇ ವೇಳೆ ವಶಕ್ಕೆ ಪಡೆದಿದ್ದ ಪೇದೆ ಗುರುಮೂರ್ತಿಯನ್ನು ಬಿಡುಗಡೆ ಮಾಡಲಾಯಿತು. ಜತೆಗೆ ವಕೀಲರ ಮೇಲೂ ನಾಲ್ಕು ಪ್ರತ್ಯೇಕ ಎಫ್ಐಆರ್ ದಾಖಲಾಯಿತು.

ಇದನ್ನೂ ಓದಿ: Atrocity on Lawyer: ವಕೀಲರ ಮೇಲಿನ ಹಲ್ಲೆಗೆ ಹೈಕೋರ್ಟ್‌ ಗರಂ; 6 ಪೊಲೀಸರ ಅಮಾನತು

ಕಪ್ಪಾಳಕ್ಕೆ ಹೊಡೆದಿದ್ದ ಪ್ರೀತಮ್‌!

ಸಿಬ್ಬಂದಿ ಹೋರಾಟಕ್ಕೆ ಮಣಿದ ಹಿರಿಯ ಅಧಿಕಾರಿಗಳು ವಕೀಲರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದರು. ಪೇದೆ ಗುರುಪ್ರಸಾದ್ ನೀಡಿದ ದೂರಿನ ಮೇಲೆ ವಕೀಲ ಪ್ರೀತಮ್ ಮೇಲೂ ಎಫ್‌ಐಆರ್ ದಾಖಲಾಗಿದೆ. ವಕೀಲ ಪ್ರೀತಮ್ ಗುರುಪ್ರಸಾದ್‌ ಕಪ್ಪಾಳಕ್ಕೆ ಹೊಡಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂರು ಬೇಡಿಕೆ ಇಟ್ಟ ಪೊಲೀಸರು

  1. ಅಮಾನತು ಆದೇಶ ವಾಪಸ್ ಪಡೆಯಬೇಕು.
  2. ಪ್ರಕರಣ ‌ದಾಖಲಾದ ಸಿಬ್ಬಂದಿ ಬಂಧನ ಮಾಡುವಂತಿಲ್ಲ.
  3. ಪ್ರಕರಣ ದಾಖಲಾದ ವಕೀಲರ ಮೇಲೆ‌ ಸೂಕ್ತ ಕ್ರಮಕೈಗೊಳ್ಳಬೇಕು.

ಏನಿದು ಪ್ರಕರಣ?

ಹೆಲ್ಮೆಟ್ ಹಾಕದಿರುವ ವಿಚಾರಕ್ಕೆ ವಕೀಲರನ್ನು ಠಾಣೆಗೆ ಕರೆದೊಯ್ದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಪೊಲೀಸರ ವಿರುದ್ಧ ಸಿಡಿದೆದ್ದ ರಾಜ್ಯ ವಕೀಲರ ಸಂಘ ಬೀದಿಗಿಳಿದು ಪ್ರತಿಭಟನೆ ನಡೆಸಿ ಖಾಕಿ ವಿರುದ್ಧ ಕೆಂಡ ಕಾರಿದ್ದರು. ಕಾಫಿನಾಡಲ್ಲಿ ವಕೀಲರ ಪ್ರತಿಭಟನೆ ಕ್ಷಣ ಕ್ಷಣಕ್ಕೂ ಕಾವು ಪಡೆಯುತ್ತಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸದಿದ್ದರೆ ಮುಂದೆ ಏನಾದರೂ ನಮಗೆ ಗೊತ್ತಿಲ್ಲ ಎಂದು ವಕೀಲರ ಪಡೆ ಖಡಕ್ ವಾರ್ನಿಂಗ್ ಕೊಟ್ಟಿತ್ತು.

ಅಂದಹಾಗೇ ಕಳೆದ ನವೆಂಬರ್‌ 30ರ ರಾತ್ರಿ 7 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದೆ ಹೋಗುತ್ತಿದ್ದ ವಕೀಲ ಪ್ರೀತಮ್‌ನನ್ನು ತಡೆದ ಪೊಲೀಸರು ಬೈಕ್‌ನಿಂದ ಕೆಳಗಿಳಿಸಿ ಕೀ ಕಿತ್ತುಕೊಂಡಿದ್ದರು. ಈ ವಿಚಾರ ದೊಡ್ಡದಾಗಿ ಬೈಕ್ ಸವಾರನನ್ನು ಠಾಣೆಗೆ ಕರೆದು ಕರೆದೊಯ್ದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿರುವ ವಿಚಾರ ಇತರೆ ವಕೀಲರು ಸಿಟ್ಟಿಗೆಳುವಂತೆ ಮಾಡಿತ್ತು.

ದಂಡ ಹಾಕುವ ಬದಲು ಠಾಣೆಯಲ್ಲಿ ವಕೀಲ ಪ್ರೀತಮ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಚಿಕ್ಕಮಗಳೂರು ನಗರ ಠಾಣೆಯ ಮುಂದೆ ರಾತ್ರಿ ಇಡೀ ಪ್ರತಿಭಟನೆ ನಡೆಸಿ ಸುಖಾ ಸುಮ್ಮನೆ ಹಲ್ಲೆ ನಡೆಸಿದ ಪೊಲೀಸರನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದರು. ಚಿಕ್ಕಮಗಳೂರು ಎಸ್‌ಪಿ ವಿಕ್ರಂ ಅಮಟೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದರು ಪಟ್ಟು ಬಿಡದ ನೂರಾರು ವಕೀಲರು ಪೊಲೀಸರನ್ನು ಬಂಧಿಸಿಲೇ ಬೇಕೆಂದು ಒತ್ತಾಯ ಮಾಡಿದರು. ಬಳಿಕ ವಕೀಲರ ಪ್ರತಿಭಟನೆಗೆ ಮಣಿದ ಎಸ್‌ಪಿ ವಿಕ್ರಂ, ಓರ್ವ ಪಿಎಸ್ಐ, ಎಎಸ್‌ಐ ಸೇರಿ ಆರು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಕೋರ್ಟ್‌ ಕಲಾಪ ಬಹಿಷ್ಕರಿಸಿದ್ದ ವಕೀಲರು

ಇನ್ನೂ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಮುಂದೆ ಪ್ರತಿಭಟನೆಗಳಿದ್ದ ನೂರಾರು ವಕೀಲರು, ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನೆಗೆ ಬಂದಿದ್ದ ವಕೀಲರು, ತಪ್ಪಿತಸ್ಥ ಪೊಲೀಸರನ್ನು ಬಂಧಿಸಬೇಕು, ಹಲ್ಲೆಗಳಾದ ವಕೀಲ ಪ್ರೀತಂಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Election Results 2023 : ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಅಲ್ಲಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

VISTARANEWS.COM


on

R Ashok
Koo

ಬೆಂಗಳೂರು: ತೆಲಂಗಾಣ ಕಾಂಗ್ರೆಸ್‌ನವರಿಗೆ (Telangana Congress) ಧಮ್ ಇಲ್ಲ. ಬರಗಾಲ ಬಂದಾಗ ಸಿಎಂ ಸಿದ್ದರಾಮಯ್ಯ (CM Siddaramaiah) ಕಣ್ಣೀರು ಸುರಿಸಿದ್ದೇ ಸುರಿಸಿದ್ದು. ಇವಾಗ ಅವರದ್ದು ಬರೀ ಮೊಸಳೆ ಕಣ್ಣೀರು ಎಂಬುದು ಗೊತ್ತಾಗಿದೆ. ಅಧಿವೇಶನದಲ್ಲಿ ಬರದ ಬಗ್ಗೆ ಮಾತನಾಡೋದು ಬಿಟ್ಟು ಇಲ್ಲಿ ರೆಸಾರ್ಟ್‌ಗೆ ತೆಲಂಗಾಣದ ಶಾಸಕರನ್ನು ಕರೆತಂದು ಸಚಿವರು ಸೇವೆ ಮಾಡುತ್ತಾ ಕುಳಿತುಕೊಂಡರೆ ಪರಿಣಾಮ ನೆಟ್ಟಗಿರಲ್ಲ. ಅವರಿಗೆ ಹೋರಾಟ ಪ್ರತಿಭಟನೆಗಳ ಮೂಲಕ ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಆರ್.‌ ಅಶೋಕ್ (R Ashok) ಹೇಳಿದರು. ಅಲ್ಲದೆ, ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ (Election Results 2023) ಬಿಜೆಪಿ ಮುನ್ನಡೆ ಸಾಧಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಅಧಿವೇಶನ ಇದ್ದರೂ ನಮ್ಮ ಸಚಿವರು ತೆಲಂಗಾಣಕ್ಕೆ ಹೋಗಿ ಸೇವೆ ಮಾಡುತ್ತಿದ್ದಾರೆ. ಮುಂದೆ ಇವರಿಗೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ. ಆದರೆ, ಇಲ್ಲಿ ಬರದ ಸ್ಥಿತಿಯನ್ನು ಇಟ್ಟುಕೊಂಡು ಈ ವೇಳೆ ರಾಜ್ಯದ ರೆಸಾರ್ಟ್‌ಗಳಿಗೆ ಅಲ್ಲಿನ ಶಾಸಕರನ್ನು ಕರೆತಂದು ನಮ್ಮ ಸಚಿವರು ಸೇವೆ ಮಾಡಲು ಮುಂದಾದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಗೆಲ್ಲುವ ರಾಜ್ಯಗಳಿಗೆ ಓಡಿ ಹೋಗುವ ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ಗೆಲ್ಲುವ ರಾಜ್ಯಗಳಿಗೆಲ್ಲ ಓಡಿ ಹೋಗುತ್ತಾರೆ. ಮಧ್ಯಪ್ರದೇಶ ಗೆದ್ದರೂ ಅಲ್ಲಿಗೆ ಓಡಿ ಹೋಗುತ್ತಿದ್ದರು. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಿಸಿ ಸಿಎಂ ಆಗಬೇಕು ಎಂಬ ಅವರ ಕನಸಿಗೆ ಇಲ್ಲಿರುವ ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಾರೆ ಎಂಬುದನ್ನು ನೋಡಬೇಕಲ್ಲವೇ? ಪಾಪ ಶಿವಕುಮಾರ್‌ಗೆ ಸಿದ್ದರಾಮಯ್ಯ ಬಿಟ್ಟು ಕೊಡಬೇಕಲ್ಲ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ವ್ಯಂಗ್ಯವಾಡಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲ ಕಡೆ ಬಿಜೆಪಿ ಗೆಲುವಿನ ಹೊಸ್ತಿಲಿನಲ್ಲಿ ಇದೆ. ಗ್ಯಾರಂಟಿಗಳು ಎಲ್ಲ ಠುಸ್ ಪಟಾಕಿ ಎಂದು ಹೇಳಿದರು.

ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಸೋಲು ಕಂಡಿದ್ದೆವು. ತೆಲಂಗಾಣದಲ್ಲೂ ನಾವು ನಾಲ್ಕು ಸೀಟು ಪಡೆದಿದ್ದೇವೆ. ರಾಜಸ್ಥಾನ ಬಿಜೆಪಿ ಗೆಲ್ಲೋದು ನಿಶ್ಚಿತ. ತೆಲಂಗಾಣದಲ್ಲೂ ಬಿಜೆಪಿ ಹೆಚ್ಚು ಸೀಟುಗಳು ಬರುತ್ತಿದೆ. ಎಲ್ಲ ಕಡೆಯೂ ಬಿಜೆಪಿ ಜಯದ ಹೊಸ್ತಿಲಲ್ಲಿ ಇದೆ. ಇದೆಲ್ಲವೂ ನರೇಂದ್ರ ಮೋದಿಯವರ ವರ್ಚಸ್ಸಿನಿಂದ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಎಲ್ಲ ಕಡೆ ಟೋಪಿ ಹಾಕಿಕೊಂಡು‌ ಹೋಗಿ ಈ ನಮ್ಮ ಕಾಂಗ್ರೆಸ್ ನಾಯಕರು ತೆಲಂಗಾಣದ ರೆಸಾರ್ಟ್‌ನಲ್ಲಿ ಸರ್ವಿಸ್‌ ಕೊಡೋಕೆ ಹೋಗಿದ್ದಾರೆ. ಇದು ಒಂದು ನಾಚಿಕೆಗೇಡಿನ ಸಂಗತಿ ಎಂದು ಆರ್. ಅಶೋಕ್ ಕಿಡಿಕಾರಿದರು.

ಲೋಕಸಭಾ ಚುನಾವಣೆಯಲ್ಲಿ ಲಾಭ

ತೆಲಂಗಾಣದಲ್ಲಿ ಕೆಸಿಆರ್ ಕುಟುಂಬ ರಾಜಕಾರಣದಿಂದ ಹಿನ್ನಡೆ ಆಗಿದೆ. ಕಳೆದ ಚುನಾವಣೆಯಲ್ಲಿ ಈ ನಾಲ್ಕು ರಾಜ್ಯದಲ್ಲಿ ನಾವು ಸೋತ್ತಿದ್ದೆವು. ಆದರೆ, ಈ ಬಾರಿ ಎರಡು ರಾಜ್ಯದಲ್ಲಿ ಗೆಲುವು ಸಾಧಿಸಿದ್ದೇವೆ. ತೆಲಂಗಾಣದಲ್ಲಿ 11 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದೇವೆ. ಕಳೆದ ಬಾರಿ ತೆಲಂಗಾಣದಲ್ಲಿ ನಾಲ್ಕು ಸ್ಥಾನ ಇತ್ತು. ಈಗ 11 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದೇವೆ. ದೊಡ್ಡ ದೊಡ್ಡ ರಾಜ್ಯದಲ್ಲಿ ಬಿಜೆಪಿ ಮುನ್ನಡೆಯನ್ನು ಕಂಡುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪರಿಣಾಮ ಬೀರಬಹುದಾದ ರಾಜ್ಯದಲ್ಲಿ ನಾವು ಮುಂದೆ ಇದ್ದೇವೆ ಎಂದು ಆರ್.‌ ಅಶೋಕ್ ಹೇಳಿದರು.

ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ

ಬಿಆರ್‌ಎಸ್ ತೆಲಂಗಾಣದಲ್ಲಿ ಕುಟುಂಬ ರಾಜಕೀಯ ಮಾಡಿದೆ. ತನ್ನ ತಪ್ಪಿನಿಂದಲೇ ಬಿಆರ್‌ಎಸ್ ತೆಲಂಗಾಣವನ್ನು ಕಳೆದುಕೊಂಡಿದೆ. ಕಳೆದ ಬಾರಿ ಮಧ್ಯಪ್ರದೇಶ, ಛತ್ತಿಸ್‌ಗಡ, ರಾಜಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಗಳಿಸಿತ್ತು. ಆದರೆ, ಈ ವರ್ಷ ಬಿಜೆಪಿ ಮುಂದಿದೆ. ಕರ್ನಾಟಕದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಹೋಗುವ ವಿಚಾರ. ಈಗಿನ ಫಲಿತಾಂಶ ನೋಡಿದರೆ ಕಾಂಗ್ರೆಸ್‌ನವರೆ ಬಿಜೆಪಿಗೆ ಬರುವ ಸಾಧ್ಯತೆ ಇದೆ. ಕಾಂಗ್ರೆಸ್‌ನಲ್ಲೇ ಭಿನ್ನಮತೀಯ ಚಟುವಟಿಕೆ ಹೆಚ್ಚಾಗಿದೆ. ಬೆಳಗಾವಿ, ದಾವಣಗೆರೆ, ರಾಯಚೂರಿನಲ್ಲಿ ಕಾಂಗ್ರೆಸ್ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್‌ನವರು ಅವರ ಕಾಲಿನ ಮೇಲೆ ಅವರೇ ಕಲ್ಲು ಹಾಕಿಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ನಾಳೆ ಅಧಿವೇಶನ ಇದ್ದರೂ ಡಿ.ಕೆ. ಶಿವಕುಮಾರ್‌ ಹಾಗೂ ಕೆಲವು ಸಚಿವರು ತೆಲಂಗಾಣಕ್ಕೆ ಹೋಗಿರುವ ವಿಚಾರ‌ದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ರಾಜ್ಯದಲ್ಲಿ ಬರ ಇದೆ‌. ಇಲ್ಲಿನ ರೈತರು ಬರಗಾಲದಲ್ಲಿ ಸಂಕಷ್ಟದಲ್ಲಿದ್ದರೂ ತೆಲಂಗಾಣಕ್ಕೆ ಹೋಗಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

ಲೋಕಸಭೆಯಲ್ಲೂ ಗ್ಯಾರಂಟಿ ಅಬ್ಬರ; ಜನ ತೀರ್ಮಾನ ಮಾಡ್ತಾರೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಯೋಜನೆಗಳ ಅಬ್ಬರ ಬರಲಿದೆ. ಆದರೆ, ಜನ ತೀರ್ಮಾನ ಮಾಡುತ್ತಾರೆ. ಮೋದಿ ಸರ್ಕಾರ ಬೇಕಾ ಅಥವಾ ಮಮತಾ ಬ್ಯಾನರ್ಜಿ, ರಾಹುಲ್‌ನಂಥವರ ಸರ್ಕಾರ ಬೇಕಾ ಅಂತಾ ಜನ ತೀರ್ಮಾನ ಮಾಡಲಿ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading
Advertisement
Rajastan Elections: 10 reasons for BJP Win
ದೇಶ6 mins ago

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

raman singh bhupesh baghel
ದೇಶ7 mins ago

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

Ration card not cancelled and Vidhanasoudha
ಕರ್ನಾಟಕ19 mins ago

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Sachin Tendulkar says he is super impressed by Vicky Kaushal
ಕ್ರಿಕೆಟ್27 mins ago

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Crime Sense Murder Case
ಕರ್ನಾಟಕ53 mins ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ59 mins ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ1 hour ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್1 hour ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ2 hours ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ8 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ20 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌