ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ - Vistara News

ದೇಶ

ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

Vistara Editorial: ಸಾಂಪ್ರದಾಯಿಕ ಕಥೆ ಪುರಾಣ ಪುಸ್ತಕಗಳ ಓದು ಕೂಡ ದೂರವಾಗುತ್ತಿದೆ. ಇಂಥ ಹೊತ್ತಿನಲ್ಲಿ ಪಠ್ಯದಲ್ಲಿ ರಾಮಾಯಣ ಮತ್ತು ಮಹಾಭಾರತ ಮಹಾಕಾವ್ಯಗಳ ಬೋಧನೆಗೆ ಅವಕಾಶ ಕಲ್ಪಿಸಿದರೆ ಹೆಚ್ಚು ಪ್ರಯೋಜನಕಾರಿಯಾಗಬಲ್ಲದು.

VISTARANEWS.COM


on

Vistara Editorial, Ramayana, Mahabharat must be history curriculum
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಇತಿಹಾಸದ ಪಠ್ಯಕ್ರಮದ ಭಾಗವಾಗಿ ರಾಮಾಯಣ (Ramayana) ಮತ್ತು ಮಹಾಭಾರತ (Mahabharata) ಮಹಾಕಾವ್ಯಗಳನ್ನು ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(NCERT)ಗೆ ಸಮಾಜ ವಿಜ್ಞಾನ ಸಮಿತಿ ಶಿಫಾರಸು ಮಾಡಿದೆ. ಇತಿಹಾಸ ವಿಷಯದಲ್ಲಿ ‘ಶಾಸ್ತ್ರೀಯ ಅವಧಿ’ ಅಡಿಯಲ್ಲಿ ಇದನ್ನು ಕಲಿಸಬಹುದು. ಹಾಗೆಯೇ ಸಂವಿಧಾನದ ಪೀಠಿಕೆಯನ್ನು ಎಲ್ಲಾ ತರಗತಿಗಳ ಗೋಡೆಗಳ ಮೇಲೆ ಸ್ಥಳೀಯ ಭಾಷೆಗಳಲ್ಲಿ ಬರೆಯುವಂತೆಯೂ ಶಿಫಾರಸು ಮಾಡಲಾಗಿದೆ. ಪಠ್ಯಪುಸ್ತಕಗಳಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ, ವೇದಗಳು ಮತ್ತು ಆಯುರ್ವೇದವನ್ನು ಪರಿಚಯಿಸುವುದು ಸೇರಿದಂತೆ ಹಲವಾರು ಪ್ರಸ್ತಾಪಗಳನ್ನು ಸಮಿತಿ ಮುಂದಿಟ್ಟಿದೆ. ಶಾಲೆಗಳ ಸಮಾಜ ವಿಜ್ಞಾನ ಪಠ್ಯಕ್ರಮವನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಸಮಿತಿಯನ್ನು ರಚಿಸಿದೆ(vistara Editorial).

ಇದೊಂದು ಕುತೂಹಲಕಾರಿ ಹಾಗೂ ಮಾದರಿ ಸಲಹೆ. ಭಾರತದ ಆಧುನಿಕ ಶಿಕ್ಷಣ, ನಮ್ಮ ಸಂಪ್ರದಾಯ, ಪರಂಪರೆಗಳಿಂದ ಬಹು ದೂರ ಸರಿದಿದೆ ಎಂಬ ಆರೋಪ ಇಂದು ನಿನ್ನೆಯದಲ್ಲ. ಹೊಸದಾಗಿ ತರಲಾದ ಶಿಕ್ಷಣ ನೀತಿಯೂ ಇದಕ್ಕೆ ಸಮರ್ಪಕ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಶಿಕ್ಷಣ ನೀತಿಯು ವೃತ್ತಿಪರತೆ, ಆಧುನಿಕತೆಗೇ ಹೆಚ್ಚು ಒತ್ತು ನೀಡಿದಂತಿದೆ. ಆಧುನಿಕ ಕಾಲದಲ್ಲಿ ಇದು ಸಹಜವೇ ಆಗಿದೆ. ಹಾಗಿದ್ದರೆ ಭಾರತದ ಪರಂಪರೆ, ಸಂಪ್ರದಾಯ, ಕಾವ್ಯ, ತತ್ವಶಾಸ್ತ್ರ, ಮೌಲ್ಯಗಳು ಇವುಗಳನ್ನೆಲ್ಲ ನಮ್ಮ ಮಕ್ಕಳು ಕಲಿಯುವುದು ಯಾವಾಗ ಮತ್ತು ಹೇಗೆ? ಇದಕ್ಕೆ ನಾವು ಪಠ್ಯಕ್ರಮ ಮೊರೆ ಹೋಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎನ್‌ಸಿಇಆರ್‌ಟಿಯ ಪಾತ್ರ ಮಹತ್ವದ್ದಾಗುತ್ತದೆ. ಈ ಪ್ರಸ್ತಾವನೆಗೆ ಎನ್‌ಸಿಇಆರ್‌ಟಿಯಿಂದ ಅಂತಿಮ ಒಪ್ಪಿಗೆ ಸಿಗಬೇಕಿದೆ. ಇತಿಹಾಸವನ್ನು ನಾಲ್ಕು ಅವಧಿಗಳಾಗಿ ವರ್ಗೀಕರಿಸಲು ಸಮಿತಿ ಶಿಫಾರಸು ನೀಡಿದೆ. ಅವು ಶಾಸ್ತ್ರೀಯ ಅವಧಿ, ಮಧ್ಯಕಾಲೀನ ಅವಧಿ, ಬ್ರಿಟಿಷ್‌ ಯುಗ ಮತ್ತು ಆಧುನಿಕ ಭಾರತ. ಇಲ್ಲಿಯವರೆಗೆ, ಭಾರತೀಯ ಇತಿಹಾಸದಲ್ಲಿ ಕೇವಲ ಮೂರು ವರ್ಗೀಕರಣಗಳಿವೆ. ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತ ಎಂದು ವರ್ಗೀಕರಿಸಲಾಗಿತ್ತು. ಶಾಸ್ತ್ರೀಯ ಅವಧಿಯಲ್ಲಿ ಭಾರತೀಯ ಮಹಾಕಾವ್ಯಗಳನ್ನು ಕಲಿಸಲು ಶಿಫಾರಸು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಶ್ರೀರಾಮ ಹಾಗೂ ಆತ ಪ್ರತಿಪಾದಿಸುವ ಮೌಲ್ಯಗಳ ಸಂಪೂರ್ಣ ತಿಳಿವಳಿಕೆ ದೊರೆಯಬೇಕು. ಹಾಗೆಯೇ, ಪಠ್ಯಪುಸ್ತಕಗಳಲ್ಲಿ ಎಲ್ಲ ರಾಜಮನೆತನಗಳ ಬಗ್ಗೆ ಕಲಿಸಬೇಕು. ಕೇವಲ ಒಂದೆರಡು ರಾಜಮನೆತನಗಳ ಬಗ್ಗೆ ಮಾತ್ರ ಸಲ್ಲದು ಎಂದು ಸಮಿತಿ ಹೇಳಿದೆ.

ಜೊತೆಗೆ ಪಠ್ಯಗಳಲ್ಲಿ ʼಇಂಡಿಯಾʼ ಬದಲಿಗೆ ʼಭಾರತʼ ಪದ ಬಳಕೆಗೆ ಕೂಡ ಇದೇ ಸಮಿತಿ ಶಿಫಾರಸು ಮಾಡಿತ್ತು. ಇಂಡಿಯಾ ಜೊತೆಗೆ ಅಥವಾ ಅದರ ಬದಲಿಗೆ ಭಾರತ ಎಂದು ಬಳಸುವುದೇನೂ ತಪ್ಪಲ್ಲ. ಬ್ರಿಟಿಷರು ಇಲ್ಲಿಗೆ ಬಂದು ದೇಶದ ಹೆಸರನ್ನು ಇಂಡಿಯಾ ಎಂದು ಬಳಸುವ ಮುನ್ನ ಇದನ್ನು ಭಾರತ ಎಂದೇ ಗ್ರಹಿಸಲಾಗುತ್ತಿತ್ತು. ಭಾರತ ಎನ್ನುವಾಗ ಭರತನೆಂಬ ಚಕ್ರವರ್ತಿಯ ಮಹನೀಯ ವ್ಯಕ್ತಿತ್ವವೂ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಭಾರತದ ಪರಂಪರೆಯ ಭವ್ಯತೆಯ ಒಂದು ನೋಟ ಸಿಗುತ್ತದೆ. ರಾಮಾಯಣ, ಮಹಾಭಾರತಗಳು ಕೇವಲ ಕತೆ ಮಾತ್ರವಲ್ಲವೇ? ಅದನ್ನು ಕಲಿಸುವುದರಿಂದ ಪ್ರಯೋಜನವೇನು ಎಂದು ಕೆಲವರು ಕೇಳಬಹುದು. ಆದರೆ ಮಹಾಭಾರತವು ಇತಿಹಾಸವೂ ಹೌದು ಎಂದು ಇಂಡಾಲಜಿ ತಜ್ಞರು ಹೇಳುತ್ತಾರೆ. ಮಹಾಭಾರತ ಕಾಲದ ಕುರುಹುಗಳು ಇಂದಿಗೂ ದೊರೆಯತ್ತವೆ. ಸುಮಾರು ಎರಡೂವರೆ ಸಾವಿರ ವರ್ಷಗಳ ಹಿಂದೆ ಇದ್ದ ಮಹಾಭಾರತ ಕಾಲದ ಸಂಸ್ಕೃತಿ, ನಮ್ಮ ಚಿಂತನೆ ಎಷ್ಟು ಸಮಗ್ರವಾಗಿ, ಮೌಲ್ಯಯುತವಾಗಿತ್ತು ಎಂದು ತಿಳಿಸುವಲ್ಲಿ ಸಹಕಾರಿಯಾಗುತ್ತದೆ. ಇನ್ನು ಮರ್ಯಾದಾ ಪುರುಷೋತ್ತಮನಾದ ಶ್ರೀರಾಮನ ಕಥೆಯಂತೂ ಅನೇಕ ಮೌಲ್ಯಗಳ ಗಣಿಯಾಗಿದೆ. ಇಂದು ಮಕ್ಕಳಿಗೆ ಅಜ್ಜ- ಅಜ್ಜಿ ಕಥೆ ಹೇಳುವ ರೂಢಿಯೇ ಬಿಟ್ಟುಹೋಗಿದೆ. ಸಾಂಪ್ರದಾಯಿಕ ಕಥೆ ಪುರಾಣ ಪುಸ್ತಕಗಳ ಓದು ಕೂಡ ದೂರವಾಗುತ್ತಿದೆ. ಇಂಥ ಹೊತ್ತಿನಲ್ಲಿ ಪಠ್ಯದಲ್ಲಿ ಇದನ್ನು ಅಳವಡಿಸುವುದು ಹೆಚ್ಚು ಪ್ರಯೋಜನಕಾರಿಯಾದುದು.

ಸಮಾಜ ವಿಜ್ಞಾನ, ಮೂಲ ವಿಜ್ಞಾನ ಹಾಗೂ ಭಾಷಾ ವಿಷಯಗಳ ಪಾಠಗಳು ಹೆಚ್ಚು ಹೆಚ್ಚು ಮೂಲೆಗುಂಪಾಗುತ್ತಿವೆ. ಇಂದು ಇವುಗಳನ್ನು ಓದಬೇಕಲ್ಲಾ ಎಂದು ಓದುವವರೇ ಹೆಚ್ಚು ಎಂಬಂತೆ ಕಾಣುತ್ತಿದೆ. ಇವುಗಳಿಗಿಂತಲೂ ವೃತ್ತಿ ವಿಜ್ಞಾನದ ವಿಷಯಗಳಿಗೇ ಹೆಚ್ಚು ಬೇಡಿಕೆಯಿದೆ. ಹೀಗಾಗಿ ಭಾಷೆ ಹಾಗೂ ಕಲೆಯ ಪಠ್ಯಕ್ರಮಗಳನ್ನು ಇನ್ನಷ್ಟು ಆಕರ್ಷಕ, ಸಮಗ್ರವಾಗಿಸುವ ಹೊಣೆ ಇದೆ. ಆ ನಿಟ್ಟಿನಲ್ಲಿ ಕೂಡ ಇದು ಪ್ರಯೋಜನಕಾರಿಯಾಗಬಹುದು.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಆಧುನಿಕ ತಂತ್ರಜ್ಞಾನ ನೆರವಿನಿಂದ ವಿದ್ಯುತ್ ಅವಘಡಗಳನ್ನು ಶೂನ್ಯಕ್ಕಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Viral Video: ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

VISTARANEWS.COM


on

viral video tn rao
Koo

ಹೈದರಾಬಾದ್:‌ ತಮ್ಮ ಪಕ್ಷದ ಚುನಾವಣಾ ಗೆಲುವಿಗೆ ಹಿಂದೂಗಳ ಮತಗಳು ಅಗತ್ಯವಿಲ್ಲ ಎಂದು ತೆಲಂಗಾಣ ಕಾಂಗ್ರೆಸ್ (Telangana Congress) ನಾಯಕ ಟಿಎನ್ ರಾವ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಈ ಮಾತಿನ ವಿಡಿಯೋ ವೈರಲ್ (viral video) ಆಗಿದೆ.

ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

ತಮ್ಮ ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್ ಪಕ್ಷವು ಭಾರತದ ಹಿಂದೂಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಹಿಂದೂಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದು ಕಾಂಗ್ರೆಸ್‌ನ ಆದ್ಯತೆಯಾಗಿದೆ ಎಂದ ಆರೋಪಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ, ತೆಲಂಗಾಣ ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರ ರಾವ್ ಅವರು ಹೀಗೆಂದಿದ್ದಾರೆ. ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾವ್, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನ ಸಿದ್ಧಾಂತಕ್ಕೆ ಪ್ರಧಾನಿ ಹೋಲಿಸಿ ಟೀಕಿಸಿದ್ದರು. ದೇಶದ ಸಂಪನ್ಮೂಲಗಳು ಮೊದಲು ಬಡವರಿಗೆ ಸಲ್ಲಬೇಕು ಎಂಬ ತತ್ವವನ್ನು ಒತ್ತಿ ಹೇಳಿದರು. ರಾಜಕೀಯ ಲಾಭಕ್ಕಾಗಿ ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೆಲವು ಧಾರ್ಮಿಕ ಗುಂಪುಗಳಿಗೆ ಕಾಂಗ್ರೆಸ್ ಒಲವು ತೋರುತ್ತಿದೆ ಎಂದು ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಧೋರಣೆಯ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದರು.

ಇದನ್ನೂ ಓದಿ: PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Continue Reading

Latest

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Fact Check: ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

VISTARANEWS.COM


on

Amith Shah
Koo

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಮೂಲಗಳನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿ ಬಂಧನಗಳು ದೇಶಾದ್ಯಂತ ನಡೆಯುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ (ಐ 4 ಸಿ) ಡಿಸಿ ಸಿಂಕು ಶರಣ್ ಸಿಂಗ್ ಅವರು ಸಲ್ಲಿಸಿದ ದೂರಿನ ಪ್ರಕಾರ, “ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಲಿಂಕ್​​ಗಳ ಸಂಗ್ರಹ

ಮುಂದಿನ ಕ್ರಮಕ್ಕಾಗಿ ವೀಡಿಯೊಗಳನ್ನು ಹಂಚಿಕೊಂಡ ಲಿಂಕ್​​ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಎಕ್ಸ್ ಮತ್ತು ಫೇಸ್ಬುಕ್​​ಗೆ ಪತ್ರ ಬರೆದಿದ್ದು, ಅಮಿತ್ ಶಾ ಅವರ ನಕಲಿ ಕ್ಲಿಪ್​ನ ಮೂಲ ಮತ್ತು ವೀಡಿಯೊವನ್ನು ಮೊದಲು ಹಂಚಿಕೊಂಡ ಖಾತೆಯ ಬಗ್ಗೆ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ಕೋರಿದ್ದಾರೆ.

ಹಿಂಸಾಚಾರಕ್ಕೆ ಕಾರಣವಾಗಬಹುದು

ಗೃಹ ಸಚಿವರ ನಕಲಿ ವೀಡಿಯೊಗಳನ್ನು ಕಾಂಗ್ರೆಸ್ ಹರಡಿಸಿದೆ ಎಂಬುದಾಗಿ ಬಿಜೆಪಿ ಹೇಳಿದೆ. ಎಡಿಟ್ ಮಾಡಿದ ತುಣುಕುಗಳನ್ನು ಪ್ರಸಾರ ಮಾಡುವ ಮತ್ತು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷವು ದೇಶದಲ್ಲಿ ಕೋಮು ಸಾಮರಸ್ಯವನ್ನು ಹರಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಂಗ್ರೆಸ್ ತೆಲಂಗಾಣ ಘಟಕವು ಅಮಿತ್ ಶಾ ಅವರ ನಕಲಿ ವೀಡಿಯೊವನ್ನು ಪ್ರಸಾರ ಮಾಡುತ್ತಿದೆ, ಇದು “ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ತೆಲಂಗಾಣ ಕಾಂಗ್ರೆಸ್ ಎಡಿಟ್ ಮಾಡಿದ ವೀಡಿಯೊವನ್ನು ಹರಡುತ್ತಿದೆ, ಇದು ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಮಾಳವೀಯ ಬರೆದಿದ್ದಾರೆ.

ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾಗುವ “ಅಸಂವಿಧಾನಿಕ ಮೀಸಲಾತಿ” ಪ್ರಯೋಜನಗಳನ್ನು ತೆಗೆದುಹಾಕುವ ಬಗ್ಗೆ ಮಾತ್ರ ಶಾ ಮಾತನಾಡುತ್ತಿದ್ದಾರೆ ಎಂದು ಅವರು ಗಮನಸೆಳೆದರು.

ಅನನುಕೂಲಕರ ಮೀಸಲಾತಿ

ಕಾಂಗ್ರೆಸ್ ಮತ್ತು ಅದರ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಮಿತ್ ಶಾ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದೆ ಅಸಂವಿಧಾನಿಕ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೀಸಲಾತಿ ಬಗ್ಗೆ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ತುಷ್ಟೀಕರಣಕ್ಕಾಗಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಮತ್ತು ಜಾಮಿಯಾ ಮತ್ತು ಎಎಂಯುನಂತಹ ಸಂಸ್ಥೆಗಳಲ್ಲಿ ಎಸ್ಸಿ-ಎಸ್ಟಿ ಮತ್ತು ಒಬಿಸಿಯನ್ನು ವಂಚಿತಗೊಳಿಸಲಾಗುತ್ತಿದೆ ಎಂದು” ಎಂದು ಶಾ ಆರೋಪಿಸಿದರು.

Continue Reading

Latest

Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

Physical Abuse: ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

VISTARANEWS.COM


on

Physical Abuse
Koo

ಲಖನೌ: ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ 17 ವರ್ಷದ ಬಾಲಕಿಯೊಬ್ಬಳನ್ನು ಮೂರು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿ, ಅತ್ಯಾಚಾರ ಎಸಗಿದ (Physical Abuse) ಘಟನೆ ಲಖೀಂಪುರದಲ್ಲಿ ನಡೆದಿದೆ. ಕ್ರೂರಿ ಆಕೆಯ ಮುಖದ ಮೇಲೆ ಬಿಸಿ ಕಬ್ಬಿಣದ ರಾಡ್​​ನಿಂದ ತನ್ನ ಹೆಸರನ್ನು ಬರೆದಿದ್ದಾನೆ ಎಂದೂ ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 19 ರಂದು, 21 ವರ್ಷದ ಯುವಕ ಈ ಕೆಲಸ ಮಾಡಿದ್ದಾರೆ. ತನ್ನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಆಕೆಯನ್ನು ಬಲವಂತವಾಗಿ ತನ್ನ ಮನೆಗೆ ಕರೆಯೊಯ್ದಿದ್ದ. ಅವಳನ್ನು ಮೂರು ದಿನಗಳ ಕಾಲ ಅಲ್ಲಿ ಬಂಧಿಯಾಗಿಟ್ಟು ಹಲ್ಲೆ ಹಾಗೂ ಅತ್ಯಾಚಾರ ಮಾಡಿದ್ದ.

ನಾನು ಏಪ್ರಿಲ್ 19 ರಂದು ಮನೆಗೆ ಸಾಮಗ್ರಿ ಖರೀದಿಸಲು ಅಂಗಡಿಗೆ ಹೋಗಿದ್ದೆ. ಅವನು ನನ್ನನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ದಿದ್ದ. ಅಲ್ಲಿ ತಪ್ಪು ಕೆಲಸಗಳನ್ನು ಮಾಡಿದನು. ನಂತರ ಅವನು ನನ್ನ ಮುಖವನ್ನು ರಾಡ್ ನಿಂದ ಸುಟ್ಟು ತನ್ನ ಹೆಸರನ್ನು ಬರೆದನು, ಅವನ ಸಹೋದರಿ ಮತ್ತು ತಾಯಿ ನನ್ನನ್ನು ಹಿಡಿದುಕೊಂಡಿದ್ದರು. ನಾನು ಕೂಗುತ್ತಲೇ ಇದ್ದೆ, ಆದರೆ ಯಾರೂ ನಮ್ಮನ್ನು ರಕ್ಷಿಸಲು ಬರಲಿಲ್ಲ” ಎಂದು ಬಾಲಕಿ ತಿಳಿಸಿದ್ದಾರೆ.

ಬಾಲಕಿ ಹೇಗೋ ಸೆರೆಯಿಂದ ತಪ್ಪಿಸಿಕೊಂಡು ಏಪ್ರಿಲ್ 21ರಂದು ಮನೆಗೆ ಹಿಂದಿರುಗಿದ್ದಳು. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ, ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 343 (ಅಕ್ರಮ ಬಂಧನ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 504 (ಉದ್ದೇಶಪೂರ್ವಕ ಅವಮಾನ) ಮತ್ತು ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ನಿಬಂಧನೆಗಳನ್ನು ಸೇರಿಸಲಾಯಿತು.

Continue Reading

ದೇಶ

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

Pakistan Spy: ಪಾಕಿಸ್ತಾನ ಪರ ಗೂಢಾಚಾರಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳ ಬಂಧಿಸಿದೆ.

VISTARANEWS.COM


on

Koo

ಗುಜರಾತ್‌: ಪಾಕಿಸ್ತಾನ ಪರ ಗೂಢಾಚಾರಿಕೆ(Pakistan Spy) ಮಾಡುತ್ತಿದ್ದ ವ್ಯಕ್ತಿಯನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳ(Gujarat anti terrorist squad) ಬಂಧಿಸಿದೆ. ಗುಜರಾತ್‌ನ ಜಾಮ್‌ನಗರ ನಿವಾಸಿ ಮೊಹಮ್ಮದ್‌ ಸಾಕ್ಲೈನ್‌ ಎಂಬಾತ ಬಂಧಿತ ಆರೋಪಿ. ಈತ ಭಾರತದ ಸಿಮ್‌ ಖರೀದಿಸಿ ವಾಟ್ಸಾಪ್‌ ಆಕ್ಟೀವೇಟ್‌ ಮಾಡಿಕೊಂಡಿದ್ದ. ಈ ಸಿಮ್‌ ಅನ್ನು ಪಾಕಿಸ್ತಾನ ಕೆಲವು ವ್ಯಕ್ತಿಗಳು ಆಪರೇಟ್‌ ಮಾಡುತ್ತಿದ್ದರು ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರ(Jammu and Kashmir)ದಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆ ವಿರುದ್ಧ ಗೂಢಾಚಾರಿಕೆ ಮಾಡುತ್ತಿದ್ದ ಈತ ಕೆಲವೊಂದು ಗೌಪ್ಯ ವಿಚಾರಗಳನ್ನು ಪಾಕಿಸ್ತಾಕ್ಕೆ ರವಾನಿಸಿದ್ದ ಆರೋಪ ಈತನ ಮೇಲಿತ್ತು.

2023 ಅಕ್ಟೋಬರ್‌ನಲ್ಲಿ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಲಾಭ್‌ಶಂಕರ್‌ ಮಹೇಶ್ವರಿ ಎಂಬಾತನನ್ನು ಗುಜರಾತ್‌ನ ತಾರಾಪುರದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಈತನಿಗೆ ಸಾಕ್ಲೈನ್‌ ಸಿಮ್‌ ಕಾರ್ಡ್‌ ನೀಡಿದ್ದ. ಮೂಲದ ಲಾಭ್‌ ಶಂಕರ್‌ ಪಾಕಿಸ್ತಾನದವನಾಗಿದ್ದು, ಈತನ ತನ್ನ ಗರ್ಭಿಣಿ ಪತ್ನಿ ಸಮೇತ ಗುಜರಾತ್‌ನಲ್ಲಿ ಬಂದು ನೆಲೆಸಿದ್ದ. ಅಲ್ಲದೇ ಭಾರತೀಯ ಪೌರತ್ವವನ್ನೂ ಪಡೆದಿದ್ದ. ಈತ ವಾಟ್ಸ್‌ಆಪ್‌ ಮೂಲಕ ಭಾರತೀಯ ಸೇನೆ ಬಗ್ಗೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ. 2023ರಲ್ಲಿ ಎಟಿಎಸ್‌ ಆತನನ್ನು ಅರೆಸ್ಟ್‌ ಮಾಡಿತ್ತು. ಇದಾದ ಬಳಿಕ ಸಾಕ್ಲೈನ್‌ ತಲೆ ಮರೆಸಿಕೊಂಡಿದ್ದ.

ಕಳೆದ ವರ್ಷ ಪಾಕಿಸ್ತಾನ ಗುಪ್ತಚರ ದಳ ಐಎಸ್​ಐ ಜತೆ ಸಂಪರ್ಕ ಹೊಂದಿದ್ದ ಯುವಕನೊಬ್ಬನನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ATS) ಅರೆಸ್ಟ್ ಮಾಡಿದೆ. ಆರೋಪಿ ಹೆಸರು ಮೊಹಮ್ಮದ್​ ರಯೀಸ್ ಎಂದಾಗಿದ್ದು, ಈತ ಐಎಸ್​​ಐಗಾಗಿ ಕೆಲಸ ಮಾಡುತ್ತಿದ್ದ. ಭಾರತದ ಸೇನಾ ಸಂಸ್ಥೆಗಳ ಬಗ್ಗೆ ಐಎಸ್​​ಐಗೆ ಪ್ರಮುಖ ಮಾಹಿತಿಗಳನ್ನು ರವಾನೆ ಮಾಡುತ್ತಿದ್ದ ಎಂದು ಉತ್ತರ ಪ್ರದೇಶ ಎಟಿಎಸ್​ ತಿಳಿಸಿತ್ತು.

ಮೊಹಮ್ಮದ್​ ರಯೀಸ್​ ಉತ್ತರ ಪ್ರದೇಶದ ಗೊಂಡಾದ ತರಬ್​ಗಂಜ್​ ಏರಿಯಾದ ನಿವಾಸಿ. ಮುಂಬಯಿಯಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್​ ಎಂಬಾತನ ಸಂಪರ್ಕಕ್ಕೆ ಬಂದ ನಂತರ ಅವನು ಐಎಸ್​ಐ ಗೂಢಾಚಾರನಾಗಿ ಬದಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದರು. ಮೊಹಮ್ಮದ್ ರಯೀಸ್​, ಎಟಿಎಸ್​ ಎದುರು ಹೇಳಿಕೆ ಕೊಡುವಾಗ ಅರ್ಮಾನ್​ ಹೆಸರನ್ನು ಹೇಳಿದ್ದಾನೆ. ಆತನೇ ನನ್ನ ಸಂಪರ್ಕಕ್ಕೆ ಬಂದ. ಭಾರತದಲ್ಲಿ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ ಎಂಬ ವಿಷಯವನ್ನು ನನ್ನ ತಲೆಗೆ ತುಂಬಿದ. ನಾನೂ ಅವನ ಮಾತನನ್ನು ನಂಬಿ, ಐಎಸ್​ಐಗಾಗಿ ಕೆಲಸ ಮಾಡಲು ಶುರು ಮಾಡಿದೆ ಎಂದು ರಯೀಸ್ ಹೇಳಿಕೊಂಡಿದ್ದ.

ಇದನ್ನೂ ಓದಿ:Viral Video: ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು; ವಿಡಿಯೋ ವೈರಲ್‌

600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ

ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ ಅವರ ಬಳಿ 602 ಕೋಟಿ ಮೌಲ್ಯದ 86 ಕೆಜಿ ನಿಷೇಧ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದೆ. ಕಾರ್ಯಾಚರಣೆಯ ಸಮಯದಲ್ಲಿ ಕಿಡಿಗೇಡಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಆಗ ಆರೋಪಿಗಳು ಕಾಲಿಗೆ ಗುಂಡು ಹಾರಿಸಿ ಅವರನ್ನು ಅರೆಸ್ಟ್‌ ಮಾಡಿದ್ದಾರೆ.

Continue Reading
Advertisement
dheeren rajkumar announces a new film change his name
ಸ್ಯಾಂಡಲ್ ವುಡ್3 mins ago

Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

MS Dhoni
Latest12 mins ago

MS Dhoni : ಐಪಿಎಲ್​ನಲ್ಲಿ 150 ಪಂದ್ಯಗಳನ್ನು ಗೆದ್ದ ಹೆಗ್ಗಳಿಕೆಗೆ ಪಾತ್ರರಾದ ಧೋನಿ; ಅವರ ಬಳಿಕ ಯಾರಿದ್ದಾರೆ?

Mahesh Babu shares sweet moments with sister Manjula and Prabhas aunt
South Cinema20 mins ago

Mahesh Babu: ಸಹೋದರಿ ಮಂಜುಳಾ, ಪ್ರಭಾಸ್ ಚಿಕ್ಕಮ್ಮ ಜತೆ ಸಿಹಿಕ್ಷಣ ಹಂಚಿಕೊಂಡ ಮಹೇಶ್‌ ಬಾಬು!

Kavya Maran
Latest36 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್38 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ42 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ43 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202444 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
Latest59 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ1 hour ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202444 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202420 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202424 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌