ವಿಸ್ತಾರ ಸಂಪಾದಕೀಯ: ಟೀಮ್ ಇಂಡಿಯಾದ ಸ್ಫೂರ್ತಿ ಹೆಚ್ಚಿಸಿದ ರೋಹಿತ್‌ ಶರ್ಮಾ ದಾಖಲೆ - Vistara News

ಕ್ರಿಕೆಟ್

ವಿಸ್ತಾರ ಸಂಪಾದಕೀಯ: ಟೀಮ್ ಇಂಡಿಯಾದ ಸ್ಫೂರ್ತಿ ಹೆಚ್ಚಿಸಿದ ರೋಹಿತ್‌ ಶರ್ಮಾ ದಾಖಲೆ

Vistara Editorial: ರೋಹಿತ್‌ ಶರ್ಮಾ ಅವರ ದಾಖಲೆಗಳನ್ನು ನಾವು ತುಂಬು ಕಂಠದಿಂದ ಶ್ಲಾಘಿಸಬೇಕಿದೆ. ಕಪ್ತಾನನೊಬ್ಬ ಅದ್ಭುತ ಪ್ರತಿಭೆಯ ಆಟಗಾರನೂ ಆಗಿದ್ದಾಗ ತಂಡದ ಆಟಗಾರರೂ ಅದೇ ಮಟ್ಟದಲ್ಲಿ ಆಟವಾಡುವ ಹುಮ್ಮಸ್ಸನ್ನು ಹೊಂದಿರುತ್ತಾರೆ. ಈ ದೃಷ್ಟಿಯಿಂದ ರೋಹಿತ್‌ ಶರ್ಮಾ ಅವರನ್ನು ವಿಶ್ವಕಪ್‌ ತಂಡಕ್ಕೆ ಕ್ಯಾಪ್ಟನ್‌ ಆಗಿಸುವ ಮೂಲಕ ನಮ್ಮ ಆಯ್ಕೆ ತಂಡ ಉತ್ತಮ ಕಾರ್ಯವನ್ನೇ ಮಾಡಿದೆ.

VISTARANEWS.COM


on

Vistara Editorial: Rohit Sharma cricket record boosted inspiration of Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಸಿ ವಿಶ್ವಕಪ್ 2023ರ ಪಂದ್ಯಾಟಗಳು ಆರಂಭವಾಗಿದ್ದು, ಅಫಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಭಾರತದ ಬ್ಯಾಟರ್​ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆ ಸೃಷ್ಟಿಸಿದ್ದಾರೆ. ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್​ಗಳು, ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ವೇಗದ ಶತಕ, ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕಗಳು, ವಿಶ್ವಕಪ್‌ನಲ್ಲಿ ಅತಿ ವೇಗವಾಗಿ 1000 ರನ್‌ ಪೂರೈಸಿದ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್‌ನಲ್ಲಿ ಭಾರತದ ತಂಡವನ್ನು ಮುನ್ನಡೆಸುತ್ತಿರುವ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಅವರು ಭಾರತ ಕಂಡ ಯಶಸ್ವಿ ಕ್ಯಾಪ್ಟನ್‌ ಅನಿಸುವ ಎಲ್ಲ ಅರ್ಹತೆಗಳನ್ನೂ ಪಡೆದಿದ್ದಾರೆ. ಜತೆಗೆ ಈ ಸಲದ ವಿಶ್ವಕಪ್‌ ತಮ್ಮದಾಗಿಸಿಕೊಳ್ಳುವ ಭರವಸೆಯನ್ನೂ ಭಾರತಕ್ಕೆ ನೀಡಿದ್ದಾರೆ.

ಎಲ್ಲಾ ಸ್ವರೂಪಗಳ ಕ್ರಿಕೆಟ್​ ಸೇರಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಸಿಕ್ಸರ್​ಗಳನ್ನು ಬಾರಿಸಿದ ಹೆಗ್ಗಳಿಕೆಯನ್ನು ರೋಹಿತ್‌ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ವೆಸ್ಟ್ ಇಂಡೀಸ್​​ನ ಸ್ಫೋಟಕ ಬ್ಯಾಟರ್​ ಕ್ರಿಸ್ ಗೇಲ್ 553 ಸಿಕ್ಸರ್​ಗಳ (551 ಇನ್ನಿಂಗ್ಸ್) ದಾಖಲೆಯನ್ನು ಹೊಂದಿದ್ದರು. ರೋಹಿತ್​​ ಅಫಘಾನಿಸ್ತಾನ ವಿರುದ್ಧ ಮೂರನೇ ಸಿಕ್ಸರ್ ಬಾರಿಸುವ ಮೂಲಕ ಒಟ್ಟು 554 ಸಿಕ್ಸರ್​ಗಳೊಂದಿಗೆ ಅಗ್ರಸ್ಥಾನ ಪಡೆದರು. ರೋಹಿತ್ ಶರ್ಮಾ ಕೇವಲ 473 ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿ ಗೇಲ್​ ಅವರನ್ನು ಹಿಂದಿಕ್ಕಿದ್ದಾರೆ. ಏಕದಿನ ಪಂದ್ಯಗಳಲ್ಲಿ ಶಾಹಿದ್ ಅಫ್ರಿದಿ ಮತ್ತು ಗೇಲ್ ನಂತರ ರೋಹಿತ್ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ ಟಿ20 ಪಂದ್ಯಗಳಲ್ಲಿ 140 ಇನಿಂಗ್ಸ್​​ಗಳಲ್ಲಿ 182 ಸಿಕ್ಸರ್​ಗಳನ್ನು ಬಾರಿಸಿ ರೋಹಿತ್ ಅಗ್ರಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 77 ಸಿಕ್ಸ್​ಗಳೊಂದಿಗೆ ರೋಹಿತ್ ಮೂರನೇ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯರಾಗಿದ್ದು, ವೀರೇಂದ್ರ ಸೆಹ್ವಾಗ್ (91) ಮತ್ತು ಎಂಎಸ್ ಧೋನಿ ಅವರ (78) ನಂತರದ ಸ್ಥಾನದಲ್ಲಿದ್ದಾರೆ.

ವಿಶ್ವಕಪ್‌ನಲ್ಲಿ ಅತಿ ವೇಗವಾಗಿ 1000 ರನ್ ಪೂರೈಸಿದ ದಾಖಲೆಯನ್ನೂ ರೋಹಿತ್ ಶರ್ಮಾ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಡಕ್ ಔಟ್ ಆದ ನಂತರ ಕೇವಲ 21 ರನ್​ಗಳ ಅಗತ್ಯವಿದ್ದ ರೋಹಿತ್, ಅಫಘಾನಿಸ್ತಾನ ವಿರುದ್ಧ 1,000 ರನ್ ಪೂರೈಸಿದರು. ಡೇವಿಡ್ ವಾರ್ನರ್ ಅವರೊಂದಿಗೆ 19 ಇನಿಂಗ್ಸ್​ಗಳಲ್ಲಿ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾರತ ತಂಡದ ದಿಗ್ಗಜ ಸಚಿನ್​ ತೆಂಡೂಲ್ಕರ್ ಅವರ ದಾಖಲೆಯೊಂದನ್ನೂ ಮುರಿದಿದ್ದಾರೆ ಶರ್ಮಾ. ಅಫಘಾನಿಸ್ತಾನ ವಿರುದ್ಧದ ಪಂದ್ಯದ ವೇಳೆ ಅವರು ಬಾರಿಸಿದ ಶತಕ ವಿಶ್ವಕಪ್​ನಲ್ಲಿ ಅವರ ಏಳನೇ ಶತಕವಾಗಿದ್ದು, ಈ ಮೂಲಕ ವಿಶ್ವಕಪ್​​ನಲ್ಲಿ ಅತಿ ಹೆಚ್ಚು ಶತಕ ಪಡೆದ ಆಟಗಾರ ಎಂಬ ಖ್ಯಾತಿಯನ್ನೂ ಪಡೆದುಕೊಂಡಿದ್ದಾರೆ. ಸಚಿನ್​ ಆರು ಶತಕ ಬಾರಿಸಿದ್ದರು. ರೋಹಿತ್ ಶರ್ಮಾ 2019ರ ಒಂದೇ ಆವೃತ್ತಿಯಲ್ಲಿ ಐದು ಶತಕ ಬಾರಿಸಿದ್ದರು. ಹಾಗೆಯೇ ವಿಶ್ವ ಕಪ್​ನಲ್ಲಿ ಭಾರತ ಪರ ಅತಿ ವೇಗದ ಶತಕ ಗಳಿಸಿದ ಹೆಗ್ಗಳಿಕೆಯನ್ನೂ ರೋಹಿತ್‌ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 63 ಎಸೆತಗಳಲ್ಲಿ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಿಂದೆ ಕಪಿಲ್ ದೇವ್ 72 ಎಸೆತಗಳಲ್ಲಿ ಶತಕ ಬಾರಿಸಿದ್ದರು.

ರೋಹಿತ್‌ ಶರ್ಮಾ ಅವರ ದಾಖಲೆಗಳನ್ನು ನಾವು ತುಂಬು ಕಂಠದಿಂದ ಶ್ಲಾಘಿಸಬೇಕಿದೆ. ಕಪ್ತಾನನೊಬ್ಬ ಅದ್ಭುತ ಪ್ರತಿಭೆಯ ಆಟಗಾರನೂ ಆಗಿದ್ದಾಗ ತಂಡದ ಆಟಗಾರರೂ ಅದೇ ಮಟ್ಟದಲ್ಲಿ ಆಟವಾಡುವ ಹುಮ್ಮಸ್ಸನ್ನು ಹೊಂದಿರುತ್ತಾರೆ. ಈ ದೃಷ್ಟಿಯಿಂದ ರೋಹಿತ್‌ ಶರ್ಮಾ ಅವರನ್ನು ವಿಶ್ವಕಪ್‌ ತಂಡಕ್ಕೆ ಕ್ಯಾಪ್ಟನ್‌ ಆಗಿಸುವ ಮೂಲಕ ನಮ್ಮ ಆಯ್ಕೆ ತಂಡ ಉತ್ತಮ ಕಾರ್ಯವನ್ನೇ ಮಾಡಿದೆ. ರೋಹಿತ್‌ ಆಟ ನಮ್ಮ ಆಟಗಾರರಲ್ಲಿ ಇನ್ನಷ್ಟು ಹುಮ್ಮಸ್ಸು ತುಂಬಲಿ. ರೋಹಿತ್‌ ಕೂಡ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಲಿ. ಕ್ರಿಕೆಟ್‌ ದಾಖಲೆಗಳು ನಮಗೆ ಸಂತೋಷ ಕೊಡುತ್ತವೆ. ಇದರಲ್ಲಿ ವೈಯಕ್ತಿಕ ದಾಖಲೆಗಳು, ತಂಡದ ದಾಖಲೆಗಳು ಎಂದು ಎರಡು ವಿಧ. ನಮ್ಮ ಆಟಗಾರರ ವೈಯಕ್ತಿಕ ದಾಖಲೆಗಳು ನಮ್ಮನ್ನು ಖುಷಿಪಡಿಸುತ್ತವೆ, ನಿಜ, ಆದರೆ ತಂಡ ಎಲ್ಲ ಪಂದ್ಯಗಳನ್ನು ಗೆದ್ದು ದಾಖಲೆ ನಿರ್ಮಿಸಿ ವಿಶ್ವಕಪ್‌ ಅನ್ನು ಗೆದ್ದರೆ ಇನ್ನಷ್ಟು ಸಂತೋಷವಾಗುತ್ತದೆ. ಇದಕ್ಕೆ ಮುಖ್ಯವಾಗಿ ತಂಡಸ್ಫೂರ್ತಿ ಬೇಕಾಗುತ್ತದೆ. ರೋಹಿತ್‌ ಅವರಲ್ಲಿ ವೈಯಕ್ತಿಕ ಪ್ರತಿಭೆಯ ಜತೆಗೆ ತಂಡವನ್ನು ಮುನ್ನಡೆಸುವ ಕೌಶಲ ಕೂಡ ಇದ್ದಂತಿದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ಕ್ಷೇತ್ರಾಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಪಕ್ಷ ರಾಜಕೀಯ ಸರಿಯಲ್ಲ

ಭಾರತ ಅನೇಕ ದಂತಕಥೆ ಎನಿಸುವಂಥ ಕ್ಯಾಪ್ಟನ್‌ಗಳನ್ನು ಕಂಡಿದೆ. ದೇಶಕ್ಕೆ ಮೊದಲ ವಿಶ್ವಕಪ್‌ ಅನ್ನು ಗೆದ್ದು ತಂದು ಕೊಟ್ಟ ಕಪಿಲ್‌ ದೇವ್‌ ಹರಿಯಾಣದ ಪುಟ್ಟ ಹಳ್ಳಿಯೊಂದರಿಂದ ಬಂದ ಗ್ರಾಮೀಣ ಯುವಕ. ಅನೇಕ ಸಮಸ್ಯೆಗಳ ನಡುವೆಯೂ ತಂಡವನ್ನು ಮುನ್ನಡೆಸಿ ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡವರು. ಆಕ್ರಮಣಕಾರಿ ಆಟದ ಮೂಲಕ ವಿರಾಟ್‌ ಕೊಹ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದಾರೆ. ಕ್ಯಾಪ್ಟನ್‌ ಕೂಲ್‌ ಎನಿಸಿಕೊಂಡಿದ್ದ ಎಂ.ಎಸ್ ಧೋನಿ, ತಮ್ಮ ತಂಡದ ಎಲ್ಲ ಆಟಗಾರರಿಂದ ಅತ್ಯುತ್ತಮ ಆಟವನ್ನು ಹೊರತೆಗೆಯಲು ಶ್ರಮಿಸಿ ಯಶಸ್ವಿಯಾದರು. ಎರಡನೇ ವಿಶ್ವಕಪ್‌ ಟಿ20 ವಿಶ್ವಕಪ್‌ ಕಿರೀಟವನ್ನು ದೇಶಕ್ಕೆ ತಂದರು. ಭಾರತ ತಂಡದ ಆತ್ಮಾಭಿಮಾನವನ್ನು ಮುಗಿಲಿನೆತ್ತರಕ್ಕೆ ಏರಿಸಿದ ʼರಾಜಕುಮಾರʼ ಸೌರವ್‌ ಗಂಗೂಲಿಯನ್ನೂ ಮರೆಯಲಾಗದು. ಇದಕ್ಕೂ ಮುನ್ನದ ಸಚಿನ್‌ ತೆಂಡುಲ್ಕರ್‌, ರಾಹುಲ್‌ ದ್ರಾವಿಡ್‌ ಮುಂತಾದವರ ಕೊಡುಗೆಯನ್ನೇ ನೆನೆಯಬೇಕು. ಇದು ಒಂದು ಪರಂಪರೆ. ಈ ಪರಂಪರೆಯನ್ನು ಮುನ್ನಡೆಸುವ ಕೌಶಲ್ಯ, ಪ್ರತಿಭೆ, ನಾಯಕತ್ವ ಗುಣ, ತಂಡಸ್ಫೂರ್ತಿಯನ್ನು ರೋಹಿತ್‌ ಶರ್ಮಾ ಹೊಂದಿದ್ದಾರೆ ಎಂಬುದನ್ನು ಕಾಣಬಹುದು. ಹಾಗಾಗಲಿ.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

CEAT Cricket Awards: 35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು

VISTARANEWS.COM


on

CEAT Cricket Awards
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ವಿರಾಟ್​ ಕೊಹ್ಲಿ(Virat Kohli) ‘ಸಿಯೆಟ್ ಅವಾರ್ಡ್ಸ್'(CEAT Cricket Awards) ಪ್ರಸ್ತುತ ಪಡಿಸಿದ ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು 2 ಬಾರಿ ಫೈನಲ್‌ ತಲುಪಿಸಿದ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್(Shreyas Iyer) ವರ್ಷದ T20 ನಾಯಕತ್ವ ಪ್ರಶಸ್ತಿಯನ್ನು ಗೆದ್ದರು. ನಾಯಕ ರೋಹಿತ್​ ಶರ್ಮ(Rohit Sharma) ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದರು.

35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನೂತನ ಸಾಮ್ರಾಟನಾಗಿ ಹೊರಹೊಮ್ಮಿದ್ದರು. ಇದುವರೆಗೆ ಕೊಹ್ಲಿ ಒಟ್ಟು 295 ಏಕದಿನ ಪಂದ್ಯಗಳನ್ನು ಆಡಿದ್ದು 58.18 ರ ಸರಾಸರಿಯಲ್ಲಿ ಬ್ಯಾಟ್​ ಬೀಸಿ 13906 ರನ್ ಗಳಿಸಿದ್ದಾರೆ. ಇದರಲ್ಲಿ 50 ಶತಕ ಮತ್ತು 72 ಅರ್ಧಶತಕ ಒಳಗೊಂಡಿದೆ. ಬೌಲಿಂಗ್​ನಲ್ಲೂ 5 ವಿಕೆಟ್ ಪಡೆದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಕೊಹ್ಲಿ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಸಲಿದ್ದಾರೆ ಎಂಬ ಮಾತುಗಳು ಈಗಾಗಲೇ ಕೇಳಿ ಬಂದಿವೆ. ಅಭಿಮಾನಿಗಳ ಜಂಜಾಟದಿಂದ ತಪ್ಪಿಸಿಕೊಂಡು ಸಾಮಾನ್ಯರಂತೆ ಜೀವಿಸಲು ಇಷ್ಟ ಪಡುತ್ತಿರುವ ಕೊಹ್ಲಿ ಮುಂದಿನ ದಿನದಲ್ಲಿ ಲಂಡನ್​ನಲ್ಲಿಯೇ ನೆಲೆಸುವ ಸಾಧ್ಯತೆ ಇದೆ ಎಂದು ಕೆಲ ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಇದನ್ನೂ ಓದಿ

ಶ್ರೇಯಸ್​ ಅಯ್ಯರ್​ ಅವರು ಐಪಿಎಲ್​ನಲ್ಲಿ ಡೆಲ್ಲಿ ತಂಡದ ನಾಯಕನಾಗಿ ತಂಡವನ್ನು ಒಮ್ಮೆ ಫೈನಲ್​ ತಲುಪಿಸಿದ್ದರು. ಅಲ್ಲಿ ಮುಂಬೈ ವಿರುದ್ಧ ತಂಡ ಸೋಲು ಕಂಡು ರನ್ನರ್​ ಅಪ್​ ಪ್ರಶಸ್ತಿ ಪಡೆದಿತ್ತು. ಈ ಬಾರಿಯ ಆವೃತ್ತಿಯಲ್ಲಿ ಕೆಕೆಆರ್​ ತಂಡದ ನಾಯಕನಾಗಿ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. ಹೀಗಾಗಿ ಅವರಿಗೆ ಸಿಯೆಟ್ ಅವಾರ್ಡ್ಸ್​ನಲ್ಲಿ ವರ್ಷದ T20 ನಾಯಕತ್ವ ಪ್ರಶಸ್ತಿ ನೀಡಲಾಯಿತು.

ಅಯ್ಯರ್​ ಇದುವೆರೆಗೆ 115 ಐಪಿಎಲ್​ ಪಂದ್ಯವನ್ನಾಡಿ 3127 ರನ್​ ಬಾರಿಸಿದ್ದಾರೆ. ಇದರಲ್ಲಿ 21 ಅರ್ಧಶತಕ ಒಳಗೊಂಡಿದೆ. 96 ಗರಿಷ್ಠ ವೈಯಕ್ತಿ ಮೊತ್ತವಾಗಿದೆ. ಭಾರತ ತಂಡದ ಪರ 51 ಟಿ20, 62 ಏಕದಿನ ಮತ್ತು 14 ಟೆಸ್ಟ್​ ಪಂದ್ಯಗಳನ್ನಾಡಿ ಒಟ್ಟು 4,336 ರನ್​ ಗಳಿಸಿದ್ದಾರೆ. ಟೆಸ್ಟ್​ನಲ್ಲಿ 1, ಏಕದಿನದಲ್ಲಿ 5 ಶತಕ ಬಾರಿಸಿದ್ದಾರೆ.

Continue Reading

ಕ್ರಿಕೆಟ್

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

Viral News: ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

Viral News
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ(t20 world cup 2024) ಭಾರತ ತಂಡ ಕಪ್​ ಗೆದ್ದು ಸರಿ ಸುಮಾರು 2 ತಿಂಗಳು ಕಳೆದಿದೆ. ಇದೀಗ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಬುಧವಾರ ಟ್ರೋಫಿಗೆ ಪೂಜೆ ಸಲ್ಲಿಸಿದರು. ಈ ಫೋಟೊ ವೈರಲ್(Viral News)​ ಆಗಿದೆ.

17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದರು. ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಮರೀನ್ ಡ್ರೈವ್‌ ಪ್ರೇದೇಶದಲ್ಲಿ ಸಾಗರೋಪಾದಿಯಲ್ಲಿ ಜನ ಸೇರಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿತ್ತು.

ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ

ಟೀಮ್​ ಇಂಡಿಯಾ ಭಾರತಕ್ಕೆ ತಂದಿರುವುದು ಡುಪ್ಲಿಕೇಟ್ ಟಿ20 ವಿಶ್ವಕಪ್​ ಟ್ರೋಫಿ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಯಾವುದೇ ವಿಶ್ವಕಪ್​ ಟೂರ್ನಿಯಲ್ಲಿ ಫೋಟೋಶೂಟ್‌ಗೆ ಮಾತ್ರ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಆ ಬಳಿಕ ಐಸಿಸಿ ವರ್ಷದ ಲಾಂಛನದೊಂದಿಗೆ ನಕಲಿ ಬೆಳ್ಳಿಯ ಟ್ರೋಫಿಯನ್ನು ವಿನ್ಯಾಸಗೊಳಿಸುತ್ತದೆ ಮತ್ತು ಇದರನ್ನು ವಿಜೇತ ತಂಡಕ್ಕೆ ನೀಡಲಾಗುತ್ತದೆ. ಮೂಲ ಟ್ರೋಫಿ ಐಸಿಸಿ ಬಳಿಯೇ ಇರುತ್ತದೆ.

ಅಸಲಿ ಟ್ರೋಫಿ ದುಬೈನಲ್ಲಿರುವ ಐಸಿಸಿ ಕೇಂದ್ರ ಕಚೇರಿಯಲ್ಲಿದೆ. ಫೋಟೋಶೂಟ್​ ನಡೆಸಿದ ಬಳಿಕ ಮೂಲ ಟ್ರೋಫಿಯನ್ನು ಕೇಂದ್ರ ಕಚೇರಿಗೆ ನೀಡಲಾಗುತ್ತದೆ. ಯಾವುದೇ ತಂಡ ಕಪ್ ಗೆದ್ದರೂ ಅದನ್ನು ಸಂಭ್ರಮಾಚರಣೆ ಮತ್ತು ಫೋಟೋ ಸೆಷನ್​ವರೆಗೂ ಮಾತ್ರ ಪ್ರಸ್ತುತಪಡಿಸಲಾಗುತ್ತದೆ. ಅದರ ನಂತರ, ಗೆದ್ದವರು ನಕಲಿ ಟ್ರೋಫಿಯೊಂದಿಗೆ ತವರಿಗೆ ಹಿಂದಿರುಗುತ್ತಾರೆ.

Continue Reading

ಕ್ರಿಕೆಟ್

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Danish Kaneria: ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು.

VISTARANEWS.COM


on

Danish Kaneria
Koo

ಲಂಡನ್​: ಭಾರತದಲ್ಲಿ ಹೆಚ್ಚು ಮಹತ್ವವಿರುವ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನವನ್ನು(Raksha Bandhan) ಸೋಮವಾರವಷ್ಟೇ ಎಲ್ಲಡೆ ಅದ್ಧೂರಿಯಾಗಿ ಆಚರಿಸಲಾಗಿತ್ತು. ಸಹೋದರ-ಸಹೋದರಿಯರು ಪರಸ್ಪರ ರಾಖಿ ಕಟ್ಟುವ ಮೂಲಕ ಈ ಸಂಭ್ರಮಾಚರಣೆ ಮಾಡಿದ್ದರು. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಕೂಡ ತಮ್ಮ ಪರಿವಾರದೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಈ ಫೋಟೊವನ್ನು ಕನೇರಿಯಾ ತಮ್ಮ ಅಧಿಕೃತ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.​ ಜತೆಗೆ ರಕ್ಷಾ ಬಂಧನ ಆಚರಣೆಯ ಕೆಲವು ಝಲಕ್‌ಗಳನ್ನು ಹಂಚಿಕೊಳ್ಳುತ್ತಿದ್ದೇವೆ! ಎಂದು ಬರೆದುಕೊಂಡಿದ್ದಾರೆ.

ಯಾರು ಈ ದಾನಿಶ್ ಕನೇರಿಯಾ?


ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು. ಈ ವಿಚಾರವನ್ನು ಸ್ವತಃ ಅವರೇ ಹೇಳಿದ್ದರು. ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಸಹ ಆಟಗಾರರಿಂದ ಒತ್ತಾಯ ಬಂದಿತ್ತು ಎಂದು ದೂರಿದ್ದರು. ಕ್ರಿಕೆಟ್​ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಎಂಬ ಹೆಗ್ಗಳಿಕೆಗೆ ಕನೇರಿಯಾ ಅವರದ್ದು . ಟೆಸ್ಟ್ ಕ್ರಿಕೆಟ್​ನಲ್ಲಿ 250 ಕ್ಕೂ ಹೆಚ್ಚು ವಿಕೆಟ್​ಗಳ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು.

ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಇದನ್ನೂ ಓದಿ Sanju Samson | ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡದಕ್ಕೆ ಬೇಸರ ವ್ಯಕ್ತಪಡಿಸಿದ ಪಾಕ್​ ಕ್ರಿಕೆಟಿಗ ಕನೇರಿಯಾ

ರಾಮಮಂದಿರ ಉದ್ಘಾಟನೆಯ ವೇಳೆಯೂ ಕನೇರಿಯಾ ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​​ ಖಾತೆಯಲ್ಲಿ ರಾಮಮಂದಿರದ ಫೋಟೊ ಹಂಚಿಕೊಂಡು ಜೈಶ್ರೀರಾಮ್. ಎಲ್ಲ ಹಿಂದೂಗಳಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದರು.

2012ರ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಸ್ಪಾಟ್‌ ಫಿಕ್ಸಿಂಗ್‌ ನಡೆಸಿದ್ದು ಸಾಬೀತಾದ ಕಾರಣ ದಾನಿಶ್‌ ಕನೇರಿಯಾ ಅವರಿಗೆ ಪಿಸಿಬಿ ಆಜೀವ ಕ್ರಿಕೆಟ್‌ ನಿಷೇಧ ವಿಧಿಸಿತ್ತು. ಪಾಕಿಸ್ತಾನದಲ್ಲಿ ಐತಿಹಾಸಿಕ ಹಿಂದೂ ದೇಗುಲಗಳನ್ನು ನೆಲಸಮ ಮಾಡುತ್ತಿರುವ ಬಗ್ಗೆಯೂ ಕನೇರಿಯಾ ಧ್ವನಿ ಎತ್ತಿದ್ದರು.

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಪ್ರತಿದಿನ ಲೆಕ್ಕವಿಲ್ಲದಷ್ಟು ಮತಾಂತರ, ಅಪಹರಣ, ಅತ್ಯಾಚಾರ, ಹತ್ಯೆ ಸೇರಿದಂತೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಈ ಅನ್ಯಾಯದ ವಿರುದ್ಧ ವಿಶ್ವಾದ್ಯಂತ ಇರುವ ಹಿಂದೂಗಳು ಒಂದಾಗಿ ಹೋರಾಟ ನಡೆಸಬೇಕು ಎಂದು ಅವರು ಟ್ವೀಟ್‌ ಮೂಲಕ ಹಿಂದೊಮ್ಮೆ ಮನವಿ ಮಾಡಿದ್ದರು.

Continue Reading

ಕ್ರೀಡೆ

Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ

Robin Uthappa: ಉತ್ತಪ್ಪ ಅವರು 2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು

VISTARANEWS.COM


on

Robin Uthappa
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ರಾಬಿನ್​ ಉತ್ತಪ್ಪ(Robin Uthappa) ಹಿಂದೆ ತಾನು ಖಿನ್ನತೆಯಿಂದ(Depression) ಬಳಲಿ ಆತ್ಮಹತ್ಯೆಗೆ ಮುಂದಾಗಿ ಇದರಿಂದ ಹೊರಬಂದ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ. ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಚಿಕಿತ್ಸೆ ಪಡೆಯುವುದು ಹೇಗೆ ಎಂಬಹುದನ್ನು ತಿಳಿಸುವ ಉದ್ದೇಶದಿಂದ ಅವರು ಈ ವಿಚಾರವನ್ನು ತಿಳಿಸಿದ್ದಾರೆ.

ಟ್ವಿಟರ್​ ಎಕ್ಸ್​ ವಿಡಿಯೊದಲ್ಲಿ ಮಾತನಾಡಿದ ಉತ್ತಪ್ಪ, ಖಿನ್ನತೆಯೊಂದಿಗಿನ ತನ್ನ ಸಮರವು ಕ್ರಿಕೆಟ್ ಮೈದಾನದಲ್ಲಿ ತಾನು ಎದುರಿಸಿದ ಯಾವುದೇ ಸವಾಲುಗಳಿಗಿಂತ ಹೆಚ್ಚಿನದಾಗಿತ್ತು ಎಂದು ಹೇಳಿದ್ದಾರೆ. ಕ್ರಿಕೆಟ್ ಕ್ಷೇತ್ರದಲ್ಲಿ ನಾನು ಹಲವು ಯುದ್ಧಗಳನ್ನು ಎದುರಿಸಿದ್ದೇನೆ, ಆದರೆ ಅವು ಯಾವುದೂ ನಾನು ಖಿನ್ನತೆಯೊಂದಿಗೆ ಹೋರಾಡಿದ ಯುದ್ಧಕ್ಕಿಂತ ಕಠಿಣವಾಗಿರಲಿಲ್ಲ. ಜೀವನದಲ್ಲಿ ಏನು ಮಾಡಬೇಕೆಂದು ನಿಮಗೆ ತಿಳಿದಿಲ್ಲದಿದ್ದಾಗ ಆತ್ಮಹತ್ಯೆಯ ಯೋಚನೆಗಳು ತಲೆಗೆ ಬರುತ್ತದೆ. ಆ ಕತ್ತಲೆಯಿಂದ ಹೊರಬರಲು ಸ್ವಲ್ಪ ಸಹಾಯ ಬೇಕಾಗುತ್ತದೆ ಎಂದು ಹೇಳುವ ಮೂಲಕ ಉತ್ತಪ್ಪ ತಮ್ಮ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

“ಇತ್ತೀಚೆಗೆ ಇಂಗ್ಲೆಂಡ್​ನ ಮಾಜಿ ಕ್ರಿಕೆಟಿಗ ಗ್ರಹಾಮ್ ತೋರ್ಪ್ ಮತ್ತು ಭಾರತದ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕೇಳಿದ್ದೇವೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ)ನ ಬೆನ್ನೆಲುಬು ಆಗಿದ್ದ ವಿ.ಬಿ. ಚಂದ್ರಶೇಖರ್ ಸರ್ ಸಾವನ್ನೂ ಕೂಡ ನಾವು ನೋಡಿದ್ದೇವೆ. ಇದೇ ಮಾನಸಿಕ ಸ್ಥಿತಿಯನ್ನು ನಾನೂ ಅನುಭವಿಸಿದ್ದೇನೆ. ಇದು ಉತ್ತಮ ವಿಷಯವಲ್ಲ. ನಮ್ಮನ್ನು ಪ್ರೀತಿಸುವ ಜನರಿಗೆ ನಾವು ಹೊರೆಯಾಗುತ್ತೇವೆ ಎಂಬ ಭಾವನೆ ನಮ್ಮಲ್ಲಿ ಬರುತ್ತದೆ” ಎಂದು 38 ವರ್ಷದ ಉತ್ತಪ್ಪ ಹೇಳಿದರು.

ಇದನ್ನೂ ಓದಿ Robin Uthappa: ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಬಿನ್ ಉತ್ತಪ್ಪಗೆ ಬಿಗ್ ರಿಲೀಫ್; ಜಾಮೀನು ರಹಿತ ವಾರೆಂಟ್​ಗೆ ಹೈಕೋರ್ಟ್ ತಡೆ

ಉತ್ತಪ್ಪ ಅವರು 2022ರಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. 2006 ರಲ್ಲಿ ಇಂಗ್ಲೆಂಡ್‌ ವಿರುದ್ಧದ ಏಕದಿನ ಪಂದ್ಯದ ಮೂಲಕ ಭಾರತ ತಂಡಕ್ಕೆ ಪಾದರ್ಪಣೆ ಮಾಡಿದ ರಾಬಿನ್‌ ಉತ್ತಪ್ಪ, 46 ಏಕದಿನ ಪಂದ್ಯಗಳನ್ನು ಆಡಿದ್ದು, 934 ರನ್‌ ಗಳನ್ನು ಗಳಿಸಿದ್ದಾರೆ. 86 ಅವರ ಸರ್ವಾಧಿಕ ರನ್.‌ 2007 ರ ಟಿ-20 ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗಿದ್ದ ಉತ್ತಪ್ಪ ಪಾಕಿಸ್ತಾನ ವಿರುದ್ಧದ ಸಮಬಲಗೊಂಡ ಪಂದ್ಯದಲ್ಲಿ ಬಾಲ್‌ ಶೂಟೌಟ್​ನಲ್ಲಿ ಗೆಲ್ಲಲು ಪ್ರಧಾನ ಪಾತ್ರ ವಹಿಸಿದ್ದರು. 13 ಅಂತಾರಾಷ್ಟ್ರೀಯ ಟಿ-20 ಪಂದ್ಯವನ್ನಾಡಿರುವ ಅವರು, 118.01 ಸ್ಟ್ರೈಕ್‌ ರೇಟ್‌ ನೊಂದಿಗೆ 249 ರನ್‌ ಗಳಿಸಿದ್ದಾರೆ.

2015 ರಲ್ಲಿ ಕೊನೆಯ ಬಾರಿ ಜಿಂಬಾಬ್ಬೆ ವಿರುದ್ಧದ ಏಕದಿನ ಹಾಗೂ ಟಿ-20 ಯನ್ನು ಆಡಿದ್ದರು. ಐಪಿಎಲ್​ನಲ್ಲಿ ಮಂಬಯಿ, ಆರ್​ಸಿಬಿ, ಕೆಕೆಆರ್‌, ರಾಜಸ್ಥಾನ್‌ ರಾಯಲ್ಸ್‌, ಸಿಎಸ್‌ ಕೆ ಪರವಾಗಿ ಆಡಿದ್ದರು. ಐಪಿಎಲ್‌ ನಲ್ಲಿ 205 ಪಂದ್ಯವನ್ನಾಡಿ ಒಟ್ಟು 4952 ರನ್‌ ಗಳಿಸಿದ್ದಾರೆ.

Continue Reading
Advertisement
PM Narendra Modi Poland visit
ಪ್ರಮುಖ ಸುದ್ದಿ11 mins ago

PM Narendra Modi Poland visit: ಉಕ್ರೇನ್‌ನ ಹಾದಿಯಲ್ಲಿ ʼಯುದ್ಧʼದ ಕುರಿತು ನಿಲುವು ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿ

Honoring to the Ancestors
ವಿದೇಶ12 mins ago

Honoring to the Ancestors: ಈ ಸಮುದಾಯದ ಜನ ಪ್ರತಿ ವರ್ಷ ಸಮಾಧಿಯಿಂದ ಶವ ಹೊರತೆಗೆದು ಸ್ವಚ್ಛಗೊಳಿಸುತ್ತಾರೆ!

road rage murder case 1
ಬೆಂಗಳೂರು28 mins ago

Murder Case: ಟೀ ಕುಡಿಯಲು ಹೋದವ ಹಾಲು ತರಲು ಬಂದಿದ್ದವನಿಂದ ಹತ್ಯೆಯಾದ! ರೋಡ್‌ ರೇಜ್‌ ಕೊಲೆಯಲ್ಲಿ ಅಂತ್ಯ

Painkillers Side Effects
ಆರೋಗ್ಯ40 mins ago

Painkillers Side Effects: ನೋವು ನಿವಾರಕಗಳನ್ನು ನುಂಗುತ್ತೀರಾ? ಹಾಗಾದರೆ ಈ ಮಾಹಿತಿ ತಿಳಿದಿರಲಿ!

PM Modi
ವಿದೇಶ46 mins ago

PM Modi: ಉಕ್ರೇನ್‌‌ನಲ್ಲಿ ಮೋದಿ ವಿಮಾನ ಬಿಟ್ಟು ‘ರೈಲ್ ಫೋರ್ಸ್ ಒನ್‌’ ಮೂಲಕ ಪ್ರಯಾಣಿಸಲಿದ್ದಾರೆ; ಈ ರೈಲಿನ ವಿಶೇಷವೇನು?

vikram ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ50 mins ago

ರಾಜಮಾರ್ಗ ಅಂಕಣ: ಆತನ ಬದುಕು ಆತನ ಸಿನೆಮಾ ಕಥೆಗಳಿಗಿಂತ ರೋಚಕ!

Kaun Banega Crorepati
ಸಿನಿಮಾ54 mins ago

Kaun Banega Crorepati: ಕೌನ್ ಬನೇಗಾ ಕರೋಡ್‌‌ಪತಿ ವಿಜೇತರು ತೆರಿಗೆ ಎಷ್ಟು ಕಟ್ಟಬೇಕು?

Traffic Rules
ದೇಶ2 hours ago

Traffic Rules: ಚಪ್ಪಲಿ ಧರಿಸಿ ಬೈಕ್ ಓಡಿಸಿದರೆ ದಂಡ ವಿಧಿಸಲಾಗುತ್ತದೆಯೆ?

Karnataka Weather
ಕರ್ನಾಟಕ2 hours ago

Karnataka Weather: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ವಿವಿಧೆಡೆ ಭಾರಿ ಮಳೆ ಸಾಧ್ಯತೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌