ವಿಸ್ತಾರ ಸಂಪಾದಕೀಯ: ಕೊಳವೆಬಾವಿ ದುರಂತಗಳಿಗೆ ಕೊನೆಯೇ ಇಲ್ಲವೆ? - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕೊಳವೆಬಾವಿ ದುರಂತಗಳಿಗೆ ಕೊನೆಯೇ ಇಲ್ಲವೆ?

ಅನುಪಯುಕ್ತ ತೆರೆದ ಕೊಳವೆ ಬಾವಿಯ ಬಳಿ ಆಟವಾಡುವ ಮುಗ್ಧ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪುವ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸುತ್ತಲೇ ಇವೆ. ಇದಕ್ಕೆ ಸರಕಾರದ ವೈಫಲ್ಯವೂ ಜನರಲ್ಲಿ ಜಾಗೃತಿಯ ಕೊರತೆಯೂ ಕಾರಣವಾಗಿದೆ.

VISTARANEWS.COM


on

Borewell
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನೊಂದರಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆಬಾವಿಗೆ (Borewell Tragedy) ಬಿದ್ದಿದ್ದಾನೆ. ಸಾತ್ವಿಕ್ ಮುಜಗೊಂಡ (2) ಎಂಬ ಬಾಲಕ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಶಂಕರಪ್ಪ ಮುಜಗೊಂಡ ಎಂಬುವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. 500 ಅಡಿಯಷ್ಟು ಕೊರೆದರೂ ನೀರು ಬಂದಿರಲಿಲ್ಲ. ಹಾಗಾಗಿ ಮುಚ್ಚದೇ ಹಾಗೆಯೇ ಬಿಟ್ಟಿದ್ದರು. ಈಗ ಅವರ ಮೊಮ್ಮಗನೇ ಈ ಕೊಳವೆ ಬಾವಿಗೆ ಬಿದ್ದಿದ್ದಾನೆ. ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೊಳವೆ ಬಾವಿಯ ಭಯಾನಕ ಕತ್ತಲು ಹಾಗೂ ಉಸಿರುಗಟ್ಟುವ ಸ್ಥಿತಿಯಲ್ಲಿ ಮಕ್ಕಳು ಕಳೆಯಬೇಕಾದ ಕ್ಷಣಗಳನ್ನು ಊಹಿಸುವುದೇ ಕಷ್ಟ. ಸಾತ್ವಿಕ್‌ ಯಾವುದೇ ತೊಂದರೆಯಿಲ್ಲದೆ ಬದುಕಿ ಬರಲಿ ಎಂದು ಹಾರೈಸೋಣ.

ಮಕ್ಕಳು ಅನುಪಯುಕ್ತ ಕೊಳವೆ ಬಾವಿಗಳಿಗೆ ಬೀಳುವುದು ಘೋರ ದುರಂತ. ಕೆಲವು ಬಾಲಕರನ್ನು ಹೇಗೋ ರಕ್ಷಿಸಲು ಸಾಧ್ಯವಾಗಿದೆ. 2006ರಲ್ಲಿ ಬಾಗಲಕೋಟೆಯ ಸಿಕ್ಕೇರಿ ಗ್ರಾಮದ ಯುವತಿ ಕಲ್ಲವ್ವ, 2007ರಲ್ಲಿ ಕಲಬುರಗಿಯ ಭೂಸನೂರು ಗ್ರಾಮದ ಬಾಲಕ ನವನಾಥ, 2009ರಲ್ಲಿ ಇಂಡಿ ತಾಲೂಕಿನ ದೇವರಹಿಂಬರಗಿ ಗ್ರಾಮದ ಬಾಲಕಿ ಕಾಂಚನಾ ಕೊಳವೆ ಬಾವಿಗೆ ಬಿದ್ದು ಬದುಕಿ ಬಂದಿದ್ದಾರೆ. ಇದೊಂದು ಥರ ಮರುಜನ್ಮ ಎನ್ನಬಹುದು. ತುಂಬಾ ಸಲ, ಅಂಥ ಮಕ್ಕಳನ್ನು ಬದುಕಿಸಿಕೊಳ್ಳಲಾಗದ ಹತಾಶೆ ತಂದೆತಾಯಿಗಳನ್ನು ಜೀವಮಾನವಿಡೀ ಕಾಡುತ್ತದೆ. 2000ರಲ್ಲಿ ದಾವಣಗೆರೆಯಲ್ಲಿ ಬಾಲಕ ಕರಿಯ, 2007ರಲ್ಲಿ ರಾಯಚೂರಿನಲ್ಲಿ ಬಾಲಕ ಸಂದೀಪ್, 2014ರಲ್ಲಿ ಬಾಗಲಕೋಟೆಯಲ್ಲಿ 6 ವರ್ಷದ ಬಾಲಕ ತಿಮ್ಮಣ್ಣ ಹಾಗೂ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಬಾಲಕಿ ಅಕ್ಷತಾ, 2017ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ವರ್ಷದ ಬಾಲಕಿ ಕಾವೇರಿ ಹಾಗೂ ಗದಗ ಜಿಲ್ಲೆಯ ಸವಡಿ ಗ್ರಾಮದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಅನುಪಯುಕ್ತ ತೆರೆದ ಕೊಳವೆ ಬಾವಿಯ ಬಳಿ ಆಟವಾಡುವ ಮುಗ್ಧ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪುವ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸುತ್ತಲೇ ಇವೆ. ಇದಕ್ಕೆ ಸರಕಾರದ ವೈಫಲ್ಯವೂ ಜನರಲ್ಲಿ ಜಾಗೃತಿಯ ಕೊರತೆಯೂ ಕಾರಣವಾಗಿದೆ. ನೀರು ದೊರೆಯದ, ನಿರುಪಯುಕ್ತ ಕೊಳವೆ ಬಾವಿಗಳನ್ನು ಮುಚ್ಚಿಸಬೇಕು ಎಂದು ಸರ್ಕಾರ ತುಂಬ ಹಿಂದೆಯೇ ಆದೇಶ ನೀಡಿದೆ. 2014ರಲ್ಲಿ ಒಂದು ದುರಂತ ನಡೆದಾಗ ಜನರು ಹಾಗೂ ಸರ್ಕಾರ ಎಲ್ಲರೂ ಎಚ್ಚೆತ್ತರು; ಅನುಪಯುಕ್ತ ಬಾವಿಗಳನ್ನು ಮುಚ್ಚಿಸಲು ಕಠಿಣ ನಿರ್ದೇಶನ ನೀಡಲಾಯಿತು. ರಾಜ್ಯಾದ್ಯಂತ ಅಭಿಯಾನ ನಡೆಸಿ 1,47,780 ಅಸುರಕ್ಷಿತ ಕೊಳವೆ ಬಾವಿ ಗುರುತಿಸಿ ಮುಚ್ಚಲಾಯಿತು. ಆ ನಂತರ ಸ್ಥಳೀಯ ಪಂಚಾಯಿತಿ ಅಧಿಕಾರಿಗಳಿಗೂ ಸರ್ಕಾರಿ ಅಥವಾ ಖಾಸಗಿ ಬೋರ್‌ವೆಲ್ ಕೊರೆದ ನಂತರ ಅನುಪಯುಕ್ತ ಎಂದಾದರೆ ಅಸುರಕ್ಷಿತವಾಗಿ ಬಿಡದಂತೆ ಸೂಚಿಸಲಾಗಿತ್ತು. ಕಾಲಾಂತರದಲ್ಲಿ ಅದು ಮರೆವು ಅಥವಾ ನಿರ್ಲಕ್ಷ್ಯಕ್ಕೆ ಸಂದಿದೆ.

Water Crisis: ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್‌ಗಳಿನ್ನು ಸರ್ಕಾರದ ಸುಪರ್ದಿಗೆ: ಡಿ.ಕೆ. ಶಿವಕುಮಾರ್

ಸರಕಾರದ ವತಿಯಿಂದ ಕೊರೆಸುವ ಎಲ್ಲ ಕೊಳವೆ ಬಾವಿ ನೀರು ಸಿಗದೆ ಇದ್ದ ಪಕ್ಷದಲ್ಲಿ ಕಡ್ಡಾಯವಾಗಿ ಸುರಕ್ಷಿತ ಕ್ರಮಗಳೊಂದಿಗೆ ಮುಚ್ಚುವಂತೆ ಆದೇಶ ಹೊರಡಿಸಿ ಅದು ಬಹುತೇಕ ಪಾಲನೆಯೂ ಆಗುತ್ತಿದೆ. ಆದರೆ ಕೆಲವೆಡೆ ಖಾಸಗಿಯಾಗಿ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ಸಿಗದಿರುವಾಗ, ಮುಚ್ಚಿಸಲು ಮತ್ತೆ ಹಣ ವ್ಯರ್ಥ ಎಂದು ಹಾಗೇ ಬಿಡುವುದರಿಂದ ದುರಂತಗಳು ನಡೆಯುತ್ತಿವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು. ತದನಂತರ ಏನಾಯಿತೋ ತಿಳಿಯಲಿಲ್ಲ. ಸರ್ಕಾರಿ ಅಥವಾ ಖಾಸಗಿ ಬೋರ್‌ವೆಲ್‌ಗಳು ಕೊರೆದ ನಂತರ ಅಸುರಕ್ಷಿತವಾಗಿ ಬಿಟ್ಟರೆ ಅಧಿಕಾರಿಯಿಂದ ಹಿಡಿದು, ಬೋರ್‌ವೆಲ್ ಕೊರೆಸಿದ ವ್ಯಕ್ತಿಯವರೆಗೆ ಸಂಬಂಧಪಟ್ಟ ಎಲ್ಲರನ್ನೂ ಜವಾಬ್ದಾರರನ್ನಾಗಿ ಮಾಡುವುದು, ದಂಡ ಮತ್ತು ಶಿಕ್ಷೆ ಸೇರಿದಂತೆ ಬಿಗಿ ಕ್ರಮಗಳು ಜಾರಿಗೆ ಬರಬೇಕು. ಅದರ ಪರಿಣಾಮಕಾರಿ ಜಾರಿ ಆಗಬೇಕು. ಹಾಗಿದ್ದರೆ ಮಾತ್ರ ಇಂಥ ದುರಂತಗಳು ಇಲ್ಲವಾಗಬಹುದು.

ಇಂಡಿಯ ಸಾತ್ವಿಕ್‌ ಸುರಕ್ಷಿತವಾಗಿ ಮರಳಿ ಬರಲಿ; ನಮ್ಮೆಲ್ಲರ ಹಾರೈಕೆಗಳು ಆತನೊಂದಿಗೆ ಇವೆ. ಇಂಥ ಪರಿಸ್ಥಿತಿ ಇನ್ಯಾವ ಮಗುವಿಗೂ ಹೆತ್ತವರಿಗೂ ಬರದಿರಲಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ.

VISTARANEWS.COM


on

Religious Freedom
Koo

ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಇತರ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂದು ಹೇಳಿದೆ. ಇದಕ್ಕೆ ಭಾರತ ಸರ್ಕಾರ ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ. “ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂದಿದೆ ಭಾರತ.

ಈ ವರದಿ ಯಾರೋ ಅಡ್ಡಕಸಬಿಗಳು ತಯಾರಿಸಿದ ವರದಿಯಂತೆ ಕಾಣಿಸುತ್ತಿದೆ. ಬಹುಶಃ ಅವರು ಭಾರತಕೆಕ ಬಂದು ಇಲ್ಲಿನ ಧಾರ್ಮಿಕ ಸಹಿಷ್ಣುತೆ, ಸಹಬಾಳ್ವೆ ಇತ್ಯಾದಿಗಳನ್ನು ನೋಡಿದ್ದರೆ ಇಂಥ ವರದಿ ತಯಾರಿಸುತ್ತಿರಲಿಲ್ಲ. ಭಾರತದಿಂದ ಆಚೆಗೆ ಕುಳಿತು ಭಾರತದ ವಿರುದ್ಧವೇ ಯುಟ್ಯೂಬ್‌ ವಿಡಿಯೋ ಮಾಡಿ ಬಿಡುವ ʼಬುದ್ಧಿವಂತʼರ ಮಾತುಗಳನ್ನು ಕೇಳಿಕೊಂಡು ಇದನ್ನು ತಯಾರಿಸಿದಂತೆ ಇದೆ. ಈ ವರದಿಯ ಅಕ್ಷರಕ್ಷರವೂ ಸುಳ್ಳು ಎಂಬುದಕ್ಕೆ ಸಾಕ್ಷಿಗಳನ್ನು ನೀಡಬಹುದು. ಸಿಪಿಎ (ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್) ಎಂಬ ಜಾಗತಿಕ ಸಂಸ್ಥೆ ಕಳೆದ ವರ್ಷ ನೀಡಿರುವ ಜಾಗತಿಕ ವರದಿಯಲ್ಲಿ, ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಅಲ್ಪಸಂಖ್ಯಾತರನ್ನು ಒಳಗೊಳ್ಳುವ ಕ್ರಮಗಳಲ್ಲಿ ಭಾರತ ನಂ.1 ಸ್ಥಾನದಲ್ಲಿದೆ ಎಂದು ಹೇಳಿದೆ. ಇದೊಂದು ಸ್ವತಂತ್ರ ಅಂತಾರಾಷ್ಟ್ರೀಯ ಸಂಸ್ಥೆ. 110 ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿ ಆ ವರದಿ ನೀಡಿತ್ತು. ಭಾರತವೇ ಅಲ್ಪಸಂಖ್ಯಾತರಿಗೆ ಹೆಚ್ಚು ಸುರಕ್ಷಿತ ಜಾಗ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಯಾವುದೇ ನಿರ್ಬಂಧ ಇಲ್ಲ. ಭಾರತದ ಸಂವಿಧಾನವು ಸಂಸ್ಕೃತಿ ಮತ್ತು ಶಿಕ್ಷಣ ಎರಡರಲ್ಲೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸುವ ವಿಶಿಷ್ಟ, ವಿಶೇಷ ವಿಧಿಗಳನ್ನು ಹೊಂದಿದೆ ಎಂದೂ ಈ ವರದಿ ಉಲ್ಲೇಖಿಸಿದೆ. ಭಾರತದ ನಂತರದ 4 ಸ್ಥಾನಗಳಲ್ಲಿ ಪನಾಮಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ನಂತರದ ಸ್ಥಾನದಲ್ಲಿ ಅಮೆರಿಕ ದೇಶ ಇದೆ. ಯುಎಸ್‌ಸಿಐಆರ್‌ಎಫ್‌ ಇದನ್ನು ಗಮನಿಸಿದಂತಿಲ್ಲ.

ನಮ್ಮ ದೇಶದಲ್ಲಿ ಆರು ಧರ್ಮಗಳ (ಮುಸ್ಲಿಂ, ಕ್ರೈಸ್ತ, ಸಿಖ್‌, ಜೈನ, ಬೌದ್ಧ, ಪಾರ್ಸಿ) ಅಲ್ಪಸಂಖ್ಯಾತರು ಒಟ್ಟಾಗಿ ಒಟ್ಟಾರೆ ಜನಸಂಖ್ಯೆಯ 19.3%ದಷ್ಟು ಇದ್ದಾರೆ. ಅಲ್ಪಸಂಖ್ಯಾತರ ಹಿತವನ್ನೂ ಬಹುಸಂಖ್ಯಾತರಂತೆಯೇ ಕಾಯಲು ನಮ್ಮ ಸಂವಿಧಾನದಲ್ಲೂ ʼಧರ್ಮನಿರಪೇಕ್ಷತೆʼಯನ್ನು ಸೇರಿಸಲಾಗಿದೆ. ಅಲ್ಪಸಂಖ್ಯಾತ ಹಿತಚಿಂತನೆ ನೋಡಿಕೊಳ್ಳುವುದಕ್ಕಾಗಿಯೇ ಕೇಂದ್ರದಲ್ಲಿ ʼಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯʼ ಇದೆ. ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ. ಭಾರತದ ಜನಸಂಖ್ಯೆಯ ಸುಮಾರು 14%ದಷ್ಟು, ಅಂದರೆ 20 ಕೋಟಿ ಮಂದಿ ಮುಸ್ಲಿಮರು ಇಲ್ಲಿ ಇದ್ದಾರೆ. ಇದು ದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯ. ಇಂಡೋನೇಷ್ಯಾ ಹಾಗೂ ಪಾಕಿಸ್ತಾನದ ಬಳಿಕ ಅತಿ ಹೆಚ್ಚು ಮುಸ್ಲಿಮರು ಇರುವ ದೇಶ ಎಂದರೆ ಭಾರತ. ಇನ್ನುಳಿದ ಇಸ್ಲಾಮಿಕ್‌ ದೇಶಗಳೆನಿಸಿಕೊಂಡವು ಕೂಡ ಭಾರತದಷ್ಟು ಸಂಖ್ಯೆಯ ಮುಸ್ಲಿಮರನ್ನು ಹೊಂದಿಲ್ಲ. ಭಾರತದಲ್ಲಿ ಎರಡೂ ಧರ್ಮಗಳೂ ಸಾಕಷ್ಟು ಸಾಮರಸ್ಯದಿಂದ ಬಾಳುತ್ತಿವೆ. ಪಾಕಿಸ್ತಾನ, ಇರಾನ್ ಮುಂತಾದ ಅಪ್ಪಟ ಮುಸ್ಲಿಂ ದೇಶಗಳಿಗಿಂತ ಭಾರತೀಯ ಮುಸ್ಲಿಮರು ಹೆಚ್ಚು ಸ್ವಾತಂತ್ರ್ಯ ಮತ್ತು ಸೌಕರ್ಯ ಹೊಂದಿದ್ದಾರೆ. ಹಾಗೆ ನೋಡಿದರೆ ಮುಸ್ಲಿಂ ದೇಶಗಳಲ್ಲೇ ಮುಸ್ಲಿಮರು ಸುರಕ್ಷಿತವಾಗಿಲ್ಲ. ಪಾಕಿಸ್ತಾನ, ಆಫ್ಘಾನಿಸ್ತಾನದ ಮಸೀದಿಗಳಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗುತ್ತಿದೆ. ಅಲ್ಲಿಯ ಅಲ್ಪಸಂಖ್ಯಾತರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಈ ಸೋಗಲಾಡಿ ವರದಿ ಅದನ್ನೇನಾದರೂ ನೆನಪಿಸಿಕೊಂಡಿದೆಯೇ?

ಈ ವರದಿಯನ್ನು ಹೊರಡಿಸಿದ ಅಮೆರಿಕದ ಬುಡದಲ್ಲಿ ಏನಿದೆ ಎಂದು ಸ್ವಲ್ಪ ನೋಡೋಣ. ಅತಿ ಹಳೆಯ ಪ್ರಜಾಪ್ರಭುತ್ವ ದೇಶ ಎನಿಸಿಕೊಂಡ ಆ ದೇಶದಲ್ಲಿ ಇನ್ನೂವರೆಗೂ ಒಬ್ಬ ಮಹಿಳೆಯೂ ಅಧ್ಯಕ್ಷರಾಗಲು ಸಾಧ್ಯವಾಗಲಿಲ್ಲ. ಬರಾಕ್‌ ಒಬಾಮರಂಥ ಅಲ್ಪಸಂಖ್ಯಾತರು ಅಧ್ಯಕ್ಷರಾಗಲು ಹಲವು ಶತಮಾನಗಳೇ ಬೇಕಾಯಿತು. ಮಹಿಳೆಯರೂ ತಮ್ಮ ಮತದಾನದ ಹಕ್ಕನ್ನು ಪಡೆಯಲು ಬಡಿದಾಡಬೇಕಾಯಿತು. ಇನ್ನು ಅಲ್ಲಿನ ಆಫ್ರಿಕನ್‌ ಸಮುದಾಯ ಅನುಭವಿಸುತ್ತಿರುವ ಸಂಕಷ್ಟವನ್ನು ಹೇಳಬೇಕಾಗಿಯೇ ಇಲ್ಲ. ಇವರನ್ನು ಇಲ್ಲಿ ನೂರಾರು ವರ್ಷಗಳ ಕಾಲ ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿತ್ತು. ಇದನ್ನು ಹೋಗಲಾಡಿಸಲು ಲಿಂಕನ್‌ನಂಥ ಮುತ್ಸದ್ಧಿ ಬಲಿದಾನ ಮಾಡಬೇಕಾಯಿತು. ಈಗಲೂ ಅಲ್ಲಿ ಕರಿಯರ ಸಮುದಾಯದ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಇದನ್ನು ವಿರೋಧಿಸಿ ನಡೆಸಲಾಗುತ್ತಿರುವ ʼಬ್ಲ್ಯಾಕ್‌ ಲೈವ್ಸ್‌ ಮ್ಯಾಟರ್ʼ ಚಳವಳಿಯನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಇನ್ನು ಅಲ್ಲಿನ ಮೂಲವಾಸಿ ಅಮೆರಿಕನ್‌ ಸಮುದಾಯದವರನ್ನು ಯಾವ ರೀತಿ ನಿರ್ಮೂಲನ ಮಾಡಲಾಯಿತು ಎಂಬುದು ಚರಿತ್ರೆಯಲ್ಲಿ ಸೇರಿಹೋಗಿರುವ ಕರಾಳ ಅಧ್ಯಾಯಗಳಲ್ಲೊಂದು. ಇಂದು ಹುಡುಕಿದರೂ ಆ ಜನಾಂಗ ಅಲ್ಲಿ ಸಿಗುವುದಿಲ್ಲ. ಇನ್ನು ಮುಸ್ಲಿಮರ ವಿಷಯಕ್ಕೆ ಬಂದರೆ, 9/11 ಘಟನೆಯ ನಂತರ ಅಲ್ಲಿ ಪ್ರತಿಯೊಬ್ಬ ಮುಸ್ಲಿಮನನ್ನೂ ಶಂಕಿತ ಭಯೋತ್ಪಾದಕನಂತೆಯೇ ನೋಡಲಾಗುತ್ತದೆ. ಮುಸ್ಲಿಮರನ್ನು ಈ ಅನುಮಾನದಿಂದಾಗಿಯೇ ಅಲ್ಲಿನ ಸರ್ಕಾರಿ ಆಡಳಿತಾತ್ಮಕ ಹುದ್ದೆಗಳಲ್ಲಿ ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಇಂಥ ದೇಶ, ಭಾರತದಂಥ ʼವಸುಧೈವ ಕುಟುಂಬಕಂʼ ಮಂತ್ರವನ್ನು ಸಾರಿದ ಪುರಾತನ ಸಂಸ್ಕೃತಿಯ ದೇಶಕ್ಕೆ ಬುದ್ಧಿವಾದ ಹೇಳುವುದು ಒಂದು ಕೆಟ್ಟ ಜೋಕ್.‌

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ. ಅಮೆರಿಕ ಇಂಥವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸ್ಮಾರ್ಟ್‌ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ, ವೈರಿಗಳ ಮೇಲೆ ಹದ್ದಿನ ಕಣ್ಣಿಡುವ ಇದು ಗೇಮ್‌ ಚೇಂಜರ್‌ ಎಂದೇ ಹೇಳಲಾಗುತ್ತಿದೆ.

VISTARANEWS.COM


on

SMART Missile
Koo

ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆ. ಇದು ಕ್ಯಾನಿಸ್ಟರ್‌ ಆಧಾರಿತ, 643 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ಆಗಸದಲ್ಲಿಯೇ ಶತ್ರುನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನ ಹೊಂದಿದೆ.

ಭಾರತದ ವಾಯುಪಡೆ, ನೌಕಾಪಡೆ ಹಾಗೂ ಭೂಸೇನೆಗಳು ಮೂರೂ ಕಳೆದ ಒಂದು ದಶಕದಲ್ಲಿ ಸಾಕಷ್ಟು ಹೊಸ ಶಸ್ತ್ರಾಸ್ತ್ರಗಳನ್ನು ಪಡೆದಿವೆ. ಭಾರತದ ನೌಕಾಪಡೆ ಈಗ ಸಾಕಷ್ಟು ಯುದ್ಧನೌಕೆಗಳು, ಐಎನ್‌ಎಸ್‌ ವಿಕ್ರಮಾದಿತ್ಯದಂಥ ಜೆಟ್‌ಫೈಟರ್‌ ಕ್ಯಾರಿಯರ್‌ಗಳು, ಅರಿಹಂತ್‌ನಂತ ಸಬ್‌ಮರೀನ್‌ಗಳನ್ನು ಹೊಂದಿದೆ. ಪ್ರಸ್ತುತ ಇದು ಜಗತ್ತಿನ 7ನೇ ಅತಿ ಪ್ರಬಲ ನೌಕಾಪಡೆಯೆನಿಸಿದೆ. ಈ ಪ್ರಾಬಲ್ಯ ಭಾರತವನ್ನು ಸುತ್ತುವರಿದ ಸಾಗರ ಪ್ರದೇಶವನ್ನು ರಕ್ಷಿಸುವುದಷ್ಟೇ ಅಲ್ಲ, ಇಲ್ಲ ಓಡಾಡುವ ಮಿತ್ರದೇಶಗಳ ನೌಕೆಗಳ ರಕ್ಷಣೆಗೂ ನೆರವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಇತ್ತೀಚೆಗೆ ನಮ್ಮ ನೌಕಾದಳ ಬಲ್ಗೇರಿಯಾ ಹಾಗೂ ಇರಾನ್‌ನ ಹಡಗುಗಳನ್ನು ಕಡಲ್ಗಳ್ಳರಿಂದ ರಕ್ಷಿಸಿದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ನಮ್ಮ ಸ್ವಾಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನೆಲೆಯಿಂದ ಲಕ್ಷದ್ವೀಪದಲ್ಲಿ ನೌಕಾಪಡೆಯು ʼಐಎನ್‌ಎಸ್‌ಜಟಾಯುʼ ಹೆಸರಿನ ಮತ್ತೊಂದು ನೆಲೆಯನ್ನು ನಿರ್ಮಿಸುವ ವ್ಯೂಹಾತ್ಮಕ ಹಾಗೂ ರಕ್ಷಣಾತ್ಮಕ ಹೆಜ್ಜೆ ಇರಿಸಿದೆ. ಈಗಾಗಲೇ ಅಂಡಮಾನ್‌ನಲ್ಲಿ ಐಎನ್‌ಎಸ್‌ ಬಾಜ್‌ ಎಂಬ ನೌಕಾನೆಲೆ ಇದೆ. ಲಕ್ಷದ್ವೀಪದ ಕವರಟ್ಟಿಯಲ್ಲೇ ದ್ವೀಪ್ರಕಾಶಕ ಎಂಬ ನೌಕಾನೆಲೆ ಇದೆ. ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ವೈರಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವುದು, ಸಾಗರ ಪ್ರದೇಶದಲ್ಲಿ ಭಯೋತ್ಪಾದನೆ- ಅಪರಾಧ ತಡೆಗಟ್ಟುವುದು, ಸಮುದ್ರ ಪ್ರದೇಶದಲ್ಲಿ ಮಾದಕವಸ್ತು ಅಕ್ರಮ ಸಾಗಣೆ ನಿಯಂತ್ರಣ ಸಾಧ್ಯ. ಹೊಸ ಟಾರ್ಪೆಡೊ (SMART Missile) ಕ್ಷಿಪಣಿ ಕೂಡ ಇದಕ್ಕೆ ಪೂರಕ.

ಇತ್ತೀಚೆಗೆ ನಮ್ಮ ಕ್ಷಿಪಣಿ ಬಲ ಇನ್ನಷ್ಟು ಮೈದುಂಬಿಕೊಳ್ಳುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ, ಹಲವು ಪರಮಾಣು ಬಾಂಬ್‌ಗಳನ್ನು (Nuclear warhead) ಏಕಕಾಲಕ್ಕೆ ಕೊಂಡೊಯ್ಯಬಲ್ಲ ಸಾಮರ್ಥ್ಯದ ಅಗ್ನಿ-ವಿ (Agni-V) ಬಹು ಸಿಡಿತಲೆ ಕ್ಷಿಪಣಿಯ ಇತ್ತೀಚಿನ ಹಾರಾಟ ಪರೀಕ್ಷೆ ಇಲ್ಲಿ ಉಲ್ಲೇಖನೀಯ. ಇದೊಂದು ಬಹು ಸ್ವತಂತ್ರವಾಗಿ ಕಾರ್ಯಾಚರಿಸಬಲ್ಲ, ರೀ-ಎಂಟ್ರಿ ತಂತ್ರಜ್ಞಾನ ಹೊಂದಿರುವ ಕ್ಷಿಪಣಿ. ಇದರ ಸಿಡಿತಲೆಯು ಬಾಹ್ಯಾಕಾಶದಲ್ಲಿ ಬೇರ್ಪಟ್ಟು, ಬೆಂಕಿಯ ಚೆಂಡುಗಳು ವಾತಾವರಣವನ್ನು ಮರು ಪ್ರವೇಶಿಸುತ್ತವೆ. ಪ್ರತಿಯೊಂದು ಸಿಡಿತಲೆಯೂ ವಿಭಿನ್ನ ವೇಗದಲ್ಲಿ ಕೆಳಗಿಳಿದು ನೆಲಕ್ಕೆ ಅಪ್ಪಳಿಸುತ್ತದೆ. MIRVಯ ಮುಖ್ಯ ಸಾಮರ್ಥ್ಯವೇ ಮರು-ಪ್ರವೇಶ. ಪ್ರತಿ ಸಿಡಿತಲೆಯೂ ವಿಭಿನ್ನ ವೇಗಗಳು ಮತ್ತು ಪ್ರತ್ಯೇಕ ಗುರಿಗಳನ್ನು ಹೊಂದಿರುವುದರಿಂದ, ಕ್ಷಿಪಣಿ ವಿರೋಧಿ ಗುರಾಣಿಗಳಿಂದ ಅಗ್ನಿ-V ಅನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ. ಇದನ್ನು ʼಮಿಷನ್‌ ದಿವ್ಯಾಸ್ತ್ರʼ ಎಂದು ಕರೆಯಲಾಗಿದೆ.

ಏಷ್ಯಾ ಉಪಖಂಡದಲ್ಲಿ ಆ ಮೂಲಕ ಶಸ್ತ್ರಾಸ್ತ್ರ ಪೈಪೋಟಿ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ. ಜಗತ್ತಿನಲ್ಲಿಯೇ ಅತಿ ದೊಡ್ಡದಾದ ಪ್ರಜಾಪ್ರಭುತ್ವ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಉದ್ದೇಶ. ನಾವು ಬಲಿಷ್ಟರಾದಾಗ ನಮ್‌ ಮಸುತ್ತಮುತ್ತಲಿನವರೂ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಅಮೆರಿಕದಂಥ ಬಲಿಷ್ಠ ರಾಷ್ಟ್ರಗಳೂ ʼಭಾರತ ನಮ್ಮ ಮಿತ್ರʼ ಎಂದು ಹಾಡಿ ಹೊಗಳುತ್ತವೆ. ಇಸ್ರೇಲ್‌, ಆಸ್ಟ್ರೇಲಿಯದಂಥ ದೇಶಗಳು ನಮ್ಮೊಂದಿಗೆ ರಕ್ಷಣಾ ಕೊಡುಕೊಳ್ಳುವಿಕೆಗಳನ್ನು ನಡೆಸುತ್ತವೆ. ಫ್ರಾನ್ಸ್‌ನಂಥ ದೇಶಗಳೇ ರಫೇಲ್‌ನಂಥ ಅದ್ಭುತ ಯುದ್ಧಸಾಮರ್ಥ್ಯವನ್ನು ಹೊಂದಿರುವ ಫೈಟರ್‌ ಜೆಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತವೆ. ʼಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸ್ಥಾನಮಾನ ನೀಡಬೇಕುʼ ಎಂದು ಬ್ರಿಟನ್‌ ಪ್ರತಿಪಾದಿಸುತ್ತದೆ. ಇದೆಲ್ಲವೂ ಸ್ವಸಾಮರ್ಥ್ಯ ಇದ್ದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಭಾರತ ನಡೆ ಬಲಿಷ್ಠತೆಯತ್ತ ಸಹಜವಾಗಿ ಮುಂದುವರಿದಿದೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು.

VISTARANEWS.COM


on

Covishield Vaccine
Koo

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿದೆ. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿದೆ. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದಾರೆ. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತ್ತು. ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾದ ಲಸಿಕೆ ಇದೇ ಆಗಿದೆ. ಅಸ್ಟ್ರಾಜೆನೆಕಾ ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಮೊಕದ್ದಮೆಯನ್ನು ಎದುರಿಸುತ್ತಿದೆ. 51 ಪ್ರಕರಣಗಳಲ್ಲಿ ಸಂತ್ರಸ್ತರು ಲಕ್ಷಗಟ್ಟಲೆ ಪೌಂಡ್‌ ನಷ್ಟ ಪರಿಹಾರ ಬಯಸಿದ್ದಾರೆ. ಅಸ್ಟ್ರಾಜೆನೆಕಾ ಒಪ್ಪಿಕೊಂಡಿರುವ ಆರೋಗ್ಯ ಸಮಸ್ಯೆಯ ಹೆಸರು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome– TTS). ಇದರಲ್ಲಿ ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು. “ಕೊರೊನಾ ಸೋಂಕು ತಗುಲಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುವುದು ಸೇರಿ ಆರೋಗ್ಯ ಸ್ಥಿತಿ ಗಂಭೀರವಾಗಿ, ಬದುಕಿ ಬಂದವರು ಯಾವುದೇ ಕಾರಣಕ್ಕೂ ಹೆಚ್ಚು ದಣಿಯುವ ಕೆಲಸ ಮಾಡಬಾರದು. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಅಧ್ಯಯನ ವರದಿ ಪ್ರಕಾರ, ಹೃದಯಾಘಾತದ ಭೀತಿ ಇರುವ ಕಾರಣ ಒಂದಷ್ಟು ಸಮಯದವರೆಗೆ ಕೊರೊನಾ ಸೋಂಕಿತರು ಹೆಚ್ಚು ಸಮಯದವರೆಗೆ ಅಥವಾ ಹೆಚ್ಚು ಭಾರ ಹೊರುವ ಕೆಲಸ ಮಾಡಬಾರದು. ಒಂದು ವರ್ಷ ಅಥವಾ ಎರಡು ವರ್ಷಗಳವರೆಗೆ ಇಂತಹ ವ್ಯಕ್ತಿಗಳು ಅತಿಯಾದ ವ್ಯಾಯಾಮ, ಜಿಮ್‌ನಲ್ಲಿ ವರ್ಕೌಟ್‌ ಕೂಡ ಮಾಡಬಾರದು” ಎಂದು ಅಧ್ಯಯನ ವರದಿ ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕೊರೊನಾ ಸೋಂಕಿನ ನಂತರ ಹೃದಯಾಘಾತ ಪ್ರಮಾಣ ಏರಿಕೆಯಾಗಿರುವುದನ್ನು ಜಾಗತಿಕ ವರದಿಗಳೇ ದೃಢಪಡಿಸಿವೆ. ಜಾಗತಿಕ ವರದಿಯೊಂದರ ಪ್ರಕಾರ, ಸಾಂಕ್ರಾಮಿಕದ ನಂತರ 24-45 ವರ್ಷದೊಳಗಿನವರಲ್ಲಿ ಹೃದಯಾಘಾತ ಪ್ರಮಾಣ ಶೇ.30ರಷ್ಟು ಏರಿಕೆಯಾಗಿದೆ. ಆ ಮೂಲಕ ಅಂತಾರಾಷ್ಟ್ರೀಯವಾಗಿಯೂ ಕೊರೊನಾ ನಂತರ ಹೃದಯಾಘಾತ ಪ್ರಮಾಣ ಹೆಚ್ಚಾಗಿದೆ ಎಂಬುದು ದೃಢಪಟ್ಟಿದೆ. ಕೊರೊನಾ ನಂತರ ಹೃದಯಾಘಾತ ಪ್ರಮಾಣ ಶೇ.3ರಿಂದ ಶೇ.5ರಷ್ಟು ಏರಿಕೆಯಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿದ್ದ ಡಾ.ಸಿ.ಎನ್.ಮಂಜುನಾಥ್‌ ಕೂಡ ಹೇಳಿದ್ದರು. ಈಗ ಯುವಕರಿಗೂ ಹೃದಯಾಘಾತ ಹೆಚ್ಚುತ್ತಿದೆ. ಅಧಿಕ ಒತ್ತಡ, ಜೀವನ ಶೈಲಿ, ಆಹಾರ ಶೈಲಿ ಇದಕ್ಕೆ ಕಾರಣವಾಗಿದೆ ಎಂದಿದ್ದಾರೆ. ಇದರ ಜೊತೆಗೆ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಕೂಡ ಸೇರಿಕೊಂಡಿರುವುದು ಆತಂಕಕಾರಿ.

ಇವೆಲ್ಲ ಕಾರಣಗಳಿಂದಾಗಿ, ಕೊರೊನಾದಿಂದಾಗಿ ಪೀಡಿತರಾದವರು ಈ ಬಗ್ಗೆ ಅತೀವ ಎಚ್ಚರ ವಹಿಸಲೇಬೇಕಿದೆ. ಸೂಕ್ತ ಆಹಾರ ಸೇವನೆ, ವ್ಯಾಯಾಮ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಬರಮಾಡಿಕೊಳ್ಳಬೇಕು. ಸರ್ಕಾರ ಎಷ್ಟೇ ಆರೋಗ್ಯಸೇವೆ ನೀಡಿದರೂ ವ್ಯಕ್ತಿ ತನ್ನ ಆರೋಗ್ಯವನ್ನು ನೋಡಿಕೊಳ್ಳದಿದ್ದರೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಕೋವಿಡ್‌ ಹಾಗೂ ಲಸಿಕೆಯಿಂದ ಉಂಟಾಗಿರಬಹುದಾದ ಆರೋಗ್ಯ ಸಮಸ್ಯೆಗಳನ್ನೂ ಇನ್ನೊಂದು ತುರ್ತುಸ್ಥಿತಿ ಎಂದೇ ತಿಳಿದು ಸರ್ಕಾರ ಕೂಡ ಕಾರ್ಯಪ್ರವೃತ್ತವಾಗಬೇಕು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ ಎಂಬುದೇ ಆತಂಕದ ಪ್ರಶ್ನೆ.

VISTARANEWS.COM


on

Vistara Editorial
Koo

ಹಾಸನದಲ್ಲಿ ಹುಟ್ಟಿಕೊಂಡು ರಾಜ್ಯಾದ್ಯಂತ, ದೇಶಾದ್ಯಂತ ಸುದ್ದಿಯಾಗುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಕರಣ ಈಗಾಗಲೇ ಸಾಕಷ್ಟು ರಾಜಕೀಯ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣವನ್ನು ಸಾರ್ವಜನಿಕಗೊಳಿಸಿದ ಸಂದರ್ಭ, ಇದರ ಹಿಂದೆ ಮುಂದೆ ಇರುವ ರಾಜಕೀಯ ಲೆಕ್ಕಾಚಾರಗಳು, ಈಗ ನಡೆಯುತ್ತಿರುವ ಪ್ರತಿಭಟನೆಗಳು, ಎಲ್ಲವೂ ಕುತೂಹಲಕರವಾಗಿವೆ. ಆರೋಪಿ ಎನಿಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ, ಈಗಾಗಲೇ ದೇಶ ಬಿಟ್ಟು ಜರ್ಮನಿಗೆ ತೆರಳಿದ್ದಾರೆ. “ತನಿಖೆಗೆ ಕರೆದಾಗ ಬರುತ್ತಾರೆ” ಎಂದು ಅವರ ತಂದೆ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಆದರೆ ಬಹುಶಃ ನಿರೀಕ್ಷಣಾ ಜಾಮೀನು ದೊರೆಯುವವರೆಗೂ ಪ್ರಜ್ವಲ್‌ ಮರಳುವುದು ಅನುಮಾನವೇ ಅನಿಸುತ್ತದೆ. “ತನಿಖೆ ನಡೆಯಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಎಲ್ಲರ ಮಾತೂ ಹೌದು.

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಶ್ರೀಮಂತರು, ಪ್ರಭಾವಿಗಳು ಹಾಗೂ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ? ಇದು ಕಾನೂನು ಹಾಗೂ ನ್ಯಾಯಾಂಗದ ಪಾರದರ್ಶಕತೆ, ತನಿಖಾ ಸಂಸ್ಥೆಗಳ ಪ್ರಾಮಾಣಿಕತೆ ಹಾಗೂ ಸಾಕ್ಷಿಗಳನ್ನು ಕಲೆಹಾಕುವ ಪರಿಶ್ರಮ ಇವುಗಳನ್ನೆಲ್ಲ ಅವಲಂಬಿಸಿದೆ.

ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದು, ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಎಡಿಜಿಪಿ ಬಿ.ಕೆ. ಸಿಂಗ್ ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿದೆ. ಮಹಿಳಾ ಸಂಘಟನೆಗಳು, ಮಹಿಳಾ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಲು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದೆ.

ಇದೆಲ್ಲವೂ ಒಂದು ಕಡೆಗಾದರೆ, ಪ್ರಕರಣದ ಇನ್ನೊಂದು ಆಯಾಮವನ್ನೂ ನೋಡಬೇಕು. ಲೈಂಗಿಕ ಕಿರುಕುಳದ ವಿಡಿಯೋಗಳನ್ನು ಹಾದಿಬೀದಿಯಲ್ಲಿ ಎಲ್ಲರಿಗೂ ಸಿಗುವಂತೆ ಹಂಚಿದವರು ಯಾರು? ಯಾಕೆ ಅದನ್ನು ಚುನಾವಣೆಯ ಸಂದರ್ಭದಲ್ಲಿಯೇ ಹೊರಬಿಡಲಾಯಿತು? ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯ ಮೈತ್ರಿ ಮಾಡಿಕೊಂಡಿರುವ ಸಮಯವನ್ನೇ ಆಯ್ದುಕೊಂಡು ಈ ವಿಡಿಯೋಗಳನ್ನು ಹರಿದಾಡುವಂತೆ ಮಾಡುವ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಯೊಬ್ಬರ ಸೋಲಿಗಾಗಿ ನಡೆಸಿದ ಸಂಚು ಕೂಡ ಇಲ್ಲವೇ? ಇದು ಸಮಯಸಾಧಕತನವಲ್ಲ, ಇದರ ಹಿಂದೆ ರಾಜಕೀಯ ಇಲ್ಲ ಎನ್ನುವುದು ತೀರಾ ಮುಗ್ಧತೆಯೂ ಅಲ್ಲ, ಭಂಡತನವಾಗುತ್ತದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ನಿಜ; ಆದರೆ ಸಂತ್ರಸ್ತ ಅಮಾಯಕ ಮಹಿಳೆಯರ ಗುರುತನ್ನು ಸಾರ್ವಜನಿಕಗೊಳಿಸಿದವರೂ ಆರೋಪಿಗಳೇ ಅಲ್ಲವೇ? ಅವರಿಗೂ ಶಿಕ್ಷೆಯಾಗಬೇಕಿದೆ. ಇದು ಮಹಿಳೆಯ ಘನತೆಗೆ ಕುಂದು ತರುವ ಸಂಚು.

ಘಟನೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದೊಳಗೆ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ತಿಳಿಯದು. ಅದು ಪಕ್ಷದ ಆಂತರಿಕ ವಿಚಾರ. ಪಕ್ಷದಿಂದ ಅವರ ಉಚ್ಚಾಟನೆಗೆ ತೀರ್ಮಾನಿಸಲಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. ಹಾಗೆ ಆದರೆ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬೇಕು. ಬಿಜೆಪಿ ಕೂಡ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ನಿಲುವು ಏನಿದೆ ಎಂದು ಸಾರ್ವಜನಿಕರು ತಿಳಿಯಲು ಬಯಸಿದರೆ ತಪ್ಪಾಗದು. ಹಾಗೆಯೇ ಹಾಸನ ಲೋಕಸಭೆ ಕ್ಷೇತ್ರದ ಮತದಾರರ ಮನಸ್ಸಿನಲ್ಲಿ ಈ ಪ್ರಕರಣ ಯಾವ ರೀತಿ ಕೆಲಸ ಮಾಡಿದೆ, ಫಲಿತಾಂಶ ಹೇಗಿದ್ದೀತು ಎಂದು ತಿಳಿಯುವುದಕ್ಕೆ ಫಲಿತಾಂಶದವರೆಗೂ ಕಾಯಬೇಕಾದೀತು. ಬಿಕೆ ಸಿಂಗ್‌ ನೇತೃತ್ವದ ಎಸ್‌ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪ್ರಕರಣ ತಾರ್ಕಿಕ ಕೊನೆ ಮುಟ್ಟಬಹುದು. ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹಾರೈಸೋಣ.

ಇದನ್ನೂ ಓದಿ: DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Continue Reading
Advertisement
Costly wedding gift
ವಾಣಿಜ್ಯ1 min ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್11 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ12 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ16 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ23 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ26 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ29 mins ago

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

RCB vS GT:
ಕ್ರೀಡೆ32 mins ago

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

English Alphabet
ಬೆಂಗಳೂರು38 mins ago

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

Crime News
ಕ್ರೈಂ39 mins ago

Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ23 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌