ವಿಸ್ತಾರ ಸಂಪಾದಕೀಯ: ದಿವ್ಯಾಸ್ತ್ರಗಳ ಸೇರ್ಪಡೆಯಿಂದ ಭಾರತ ಮತ್ತಷ್ಟು ಬಲಿಷ್ಠ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ದಿವ್ಯಾಸ್ತ್ರಗಳ ಸೇರ್ಪಡೆಯಿಂದ ಭಾರತ ಮತ್ತಷ್ಟು ಬಲಿಷ್ಠ

1962ರಲ್ಲಿ ಯುದ್ಧಸನ್ನದ್ಧತೆಯಿಲ್ಲದ ಕಾರಣ ಚೀನಾ ಎದುರು ಮುಖಭಂಗ ಅನುಭವಿಸಿದ ಭಾರತ, ಇಂದು ಅದನ್ನು ಮೀರಿ ನಿಂತಿದೆ ಎಂಬುದನ್ನು ವೈರಿಗಳೂ ಅರ್ಥ ಮಾಡಿಕೊಳ್ಳುವಂತೆ ನಮ್ಮ ನಡೆಯಿರುವುದು ಹೆಮ್ಮೆಯ ಸಂಗತಿ.

VISTARANEWS.COM


on

Agni 5
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಮಿಲಿಟರಿಗೆ ಹೊಸದೊಂದು ʼದಿವ್ಯಾಸ್ತ್ರʼ ಸೇರ್ಪಡೆಗೊಂಡಿದೆ. ಈ ಕಾರ್ಯಕ್ರಮದ ಹೆಸರೇ ʼದಿವ್ಯಾಸ್ತ್ರʼ ಆಗಿತ್ತು. ಅಕ್ಷರಾರರ್ಥದಲ್ಲಿ ಇದು ದಿವ್ಯಾಸ್ತ್ರವೇ ಆಗಿದೆ. ಇದನ್ನು ಯಶಸ್ವಿಯಾಗಿ ಉಡಾಯಿಸಿ ಪರೀಕ್ಷಿಸಲಾಗಿದೆ. ಅಗ್ನಿ -5 (Agni 5) ಎಂಬ ಹೆಸರಿನ ಈ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯು ವಾತಾವರಣದಿಂದ ಆಚೆ ಹೋಗಿ ವಾತಾವರಣ ಮರು ಪ್ರವೇಶಿಸಿ ಬಹು ಗುರಿಗಳ ಮೇಲೆ ಸ್ವತಂತ್ರವಾಗಿ ದಾಳಿಯಿಡಬಲ್ಲ ತಂತ್ರಜ್ಞಾನ (ಎಂಐಆರ್​ಐವಿ) ಹೊಂದಿರುವ ಕ್ಷಿಪಣಿ. ಇದು ನಮ್ಮ ಹೆಮ್ಮೆಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (DRDO) ಹಲವಾರು ವರ್ಷಗಳ ಸಂಶೋಧನೆ ಮತ್ತು ಅಭಿವೃದ್ಧಿಯ ಫಲ. ಇದರೊಂದಿಗೆ ಈ ತಂತ್ರಜ್ಞಾನವನ್ನು ಹೊಂದಿರುವ ಗಣ್ಯ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದೆ. ಅಮೆರಿಕ, ರಷ್ಯಾ, ಚೀನಾ, ಫ್ರಾನ್ಸ್​ ಹಾಗೂ ಬ್ರಿಟನ್​ಈ ಸಾಲಿನ ದೇಶಗಳು.

ವಿಶೇಷ ಎಂದರೆ ಡಿಆರ್​ಡಿಒದ ಮಹಿಳಾ ವಿಜ್ಞಾನಿಯೊಬ್ಬರು ಈ ಮಿಷನ್​​ನ ನೇತೃತ್ವ ವಹಿಸಿದ್ದು. ಹಲವಾರು ಮಹಿಳಾ ವಿಜ್ಞಾನಿಗಳು ಈ ಕಾರ್ಯಾಚರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಆದ್ದರಿಂದ ಇದು ʼನಾರಿಶಕ್ತಿ ದಿವ್ಯಾಸ್ತ್ರʼವೂ ಹೌದು. ಡಿಆರ್​​ಡಿಒ ವಿಜ್ಞಾನಿಗಳು ಅನೇಕ ವರ್ಷಗಳಿಂದ ಈ ಮಲ್ಟಿಪಲ್ ಇಂಡಿಪೆಂಡೆಂಟ್ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ಸ್ (MIRV ) ತಂತ್ರಜ್ಞಾನದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ತಂತ್ರಜ್ಞಾನದಲ್ಲಿ ಅಗ್ನಿ-5 ನಂಥ ಕ್ಷಿಪಣಿ ಅನೇಕ ಸಿಡಿತಲೆಗಳನ್ನು ಜೊತೆಗೇ ಸಾಗಿಸಬಲ್ಲದು. ಡಿಆರ್​ಡಿಒ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ಹೆಚ್ಚಿನ ನಿಖರತೆಯ ಸಂವೇದಕ​ಗಳಿಂದ ಕೂಡಿದೆ. ಸಿಡಿಸಿದ ಬಳಿಕ ಇದು ಮೊದಲು ಬಾಹ್ಯಾಕಾಶಕ್ಕೆ ಹೋಗಿ ಬಳಿಕ ಭೂಮಿಯ ವಾತಾವರಣಕ್ಕೆ ಮರಳುತ್ತದೆ. ವಿವಿಧ ಸ್ಥಳಗಳಲ್ಲಿರುವ ಅನೇಕ ಗುರಿಗಳನ್ನು ಒಂದೇ ಸಲಕ್ಕೆ ಈ ಸಿಡಿತಲೆಗಳ ಮೂಲಕ ನಾಶ ಮಾಡುತ್ತದೆ. ನೂರಾರು ಕಿಲೋಮೀಟರ್ ದೂರದಲ್ಲಿರುವ ಸ್ಥಳಗಳನ್ನು ಗುರಿಯಾಗಿಸಿಯೂ ಈ ದಾಳಿ ಮಾಡಬಹುದು. ಈ ಕ್ಷಿಪಣಿಯ ದೂರವ್ಯಾಪ್ತಿ ಸುಮಾರು 5000 ಕಿ.ಮೀ. ಈಗ ಪರೀಕ್ಷಿಸಿದ್ದು 3500 ಕಿಮೀ ಮಾತ್ರ. ಸರಿಯಾಗಿ ಉಪಯೋಗಿಸಿದರೆ ಬೀಜಿಂಗ್‌ ಅನ್ನು ಇದು ತಲುಪಬಲ್ಲುದು. ಬಹು- ಗುರಿಗಳು ಇದರ ಒಂದು ಅನುಕೂಲ ಆದರೆ, ಇನ್ನೊಂದು ಅನುಕೂಲವೆಂದರೆ ಇದರ ಅನಿರೀಕ್ಷಿತತೆ ಹಾಗೂ ತಡೆಯಲು ಅಸಾಧ್ಯವಾದ ಸಾಮರ್ಥ್ಯ. ಇದು ಎದುರಾಳಿಗಳು ಬಳಸುವ ಕ್ಷಿಪಣಿ ವಿರೋಧಿ ರಕ್ಷಣಾ (AMD) ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ವಂಚಿಸುತ್ತದೆ. ರೇಡಾರ್‌ಗಳಿಗೆ ಸುಲಭವಾಗಿ ಇದು ಉದ್ದೇಶಿಸಿರುವ ಗುರಿಯ ಬಗ್ಗೆ ತಿಳಿಯುವುದಿಲ್ಲ.

ಭಾರತೀಯ ಸೇನೆ ಇಂಥ ಹಲವು ʼದಿವ್ಯಾಸ್ತ್ರʼಗಳನ್ನು ತನ್ನದಾಗಿಸಿಕೊಳ್ಳುತ್ತಿದೆ. ಕಳೆದ ಮೇ ತಿಂಗಳಲ್ಲಿ ಬ್ರಹ್ಮೋಸ್‌ ಸೂಪರ್‌ಸಾನಿಕ್‌ ಕ್ಷಿಪಣಿಯನ್ನು ಸುಖೋಯಿ ಫೈಟರ್‌ ಜೆಟ್‌ನಿಂದ ಉಡಾಯಿಸಲಾಗಿತ್ತು. ಇತ್ತೀಚೆಗಷ್ಟೇ ಐಎನ್‌ಎಸ್‌ ವಿಕ್ರಾಂತ್‌ ಎಂಬ ಏರ್‌ಕ್ರಾಫ್ಟ್‌ ಕ್ಯಾರಿಯರ್‌ ನೌಕೆಯನ್ನೂ ಭಾರತ ಮಿಲಿಟರಿಗೆ ಸೇರಿಸಿಕೊಳ್ಳಲಾಗಿದೆ. ಇದು ಬಂಗಾಲ ಕೊಲ್ಲಿಯೂ ಸೇರಿದಂತೆ ಚೀನಾದ ನೌಕೆಗಳು ಓಡಾಡುವ ಪ್ರದೇಶದ ಮೇಲೆ ತನ್ನ ನಿಗಾ ಇಡಬಲ್ಲುದು ಹಾಗೂ ಅಗತ್ಯ ಬಿದ್ದರೆ ವೈಮಾನಿಕ ದಾಳಿಗೆ ನೆಲವಾಗಿ ಕಾರ್ಯಾಚರಿಸಬಲ್ಲುದು. ಇವೆಲ್ಲವೂ ನಮ್ಮ ಮಿಲಿಟರಿಯ ಸನ್ನದ್ಧತೆಯನ್ನು ಪ್ರದರ್ಶಿಸುವ ಕ್ರಮಗಳಾಗಿವೆ. ರಫೇಲ್‌ ಯುದ್ಧವಿಮಾನಗಳ ಸೇರ್ಪಡೆ, ಉಪಗ್ರಹ ನಾಶಕ ತಂತ್ರಜ್ಞಾನದ ಅಭಿವೃದ್ಧಿ, ಘಾತಕ್‌ ಮಾನವರಹಿತ ದಾಳಿ ಡ್ರೋನ್‌ಗಳ ಅಳವಡಿಕೆ, ಹೆಲಿಕಾಪ್ಟರ್‌ನಿಂದ ನೌಕೆಯತ್ತ ಉಡಾಯಿಸಬಹುದಾದ NASM-SR ಕ್ಷಿಪಣಿಗಳ ನಿಯೋಜನೆ ಮುಂತಾದವು ಅಂಥ ಕ್ರಮಗಳು. ಆರು ಹೊಸ ಸಬ್‌ಮೆರೀನ್‌ಗಳೂ ಸೇನೆ ಸೇರುವ ನಿರೀಕ್ಷೆ ಇದೆ. ಇದರೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳೂ ಆತ್ಮನಿರ್ಭರ ಮಿಲಿಟರಿಯನ್ನು ರೂಪುಗೊಳಿಸುವಲ್ಲಿ ನೆರವಾಗುತ್ತಿವೆ. ಈ ನಿಟ್ಟಿನಲ್ಲಿ ನಮ್ಮ ಡಿಆರ್‌ಡಿಒ, ಇಸ್ರೋ ಮುಂತಾದ ಸಂಸ್ಥೆಗಳು ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡುತ್ತಿವೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಪೌರತ್ವ ತಿದ್ದುಪಡಿ ಕಾಯಿದೆ ಜಾರಿ ಸ್ವಾಗತಾರ್ಹ

ಜಾಣ ರಾಜತಾಂತ್ರಿಕ ನಡೆಗಳ ಜತೆಗೆ ಇಂಥ ಮಿಲಿಟರಿ ಸನ್ನದ್ಧತೆಗಳೂ ಸೇರಿದಾಗ ರಾಷ್ಟ್ರವೊಂದರ ಭದ್ರತಾ ವ್ಯವಸ್ಥೆ ಪರಿಪೂರ್ಣಗೊಳ್ಳುತ್ತದೆ. 1962ರಲ್ಲಿ ಯುದ್ಧಸನ್ನದ್ಧತೆಯಿಲ್ಲದ ಕಾರಣ ಮುಖಭಂಗ ಅನುಭವಿಸಿದ ಭಾರತ, ಇಂದು ಅದನ್ನು ಮೀರಿ ನಿಂತಿದೆ ಎಂಬುದನ್ನು ವೈರಿಗಳೂ ಅರ್ಥ ಮಾಡಿಕೊಳ್ಳುವಂತೆ ನಮ್ಮ ನಡೆಯಿರುವುದನ್ನು ನಾವು ಸ್ವಾಗತಿಸಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌, ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ (CAA) ಮತ್ತು ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಆದರೆ, ಇದಕ್ಕೆ ಭಾರತವು ಸರಿಯಾಗಿಯೇ ತಿರುಗೇಟು ನೀಡಿದೆ. ಪಾಕಿಸ್ತಾನವು ಪ್ರತಿ ಬಾರಿ ಭಾರತದ ಕಡೆ ಬೆರಳು ತೋರಿಸುವ ಬದಲು ತನ್ನ ದೇಶದ ಸಮಸ್ಯೆಗಳನ್ನು ನಿವಾರಿಸಿದರೆ, ಅಲ್ಲಿನ ಜನ ನೆಮ್ಮದಿಯಿಂದ ನಿದ್ದೆ ಮಾಡಬಹುದು.

VISTARANEWS.COM


on

Pakistan PM
Koo

ಭಾರತದ ಆಂತರಿಕ ವಿಚಾರಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಗಾದೆ ತೆಗೆದ ಪಾಕಿಸ್ತಾನಕ್ಕೆ ಭಾರತ ಮತ್ತೆ ತಕ್ಕ ಮಾರುತ್ತರ ನೀಡಿದೆ. ಪಾಕಿಸ್ತಾನ ಎಲ್ಲ ಆಯಾಮಗಳಲ್ಲಿ ಅತ್ಯಂತ ಸಂಶಯಾತ್ಮಕ ಚಟುವಟಿಕೆ, ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ಗಳನ್ನು ಹೊಂದಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಹೇಳಿದ್ದಾರೆ. ವಿಶ್ವಸಂಸ್ಥೆಯ (United Nations) ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದ ಪಾಕಿಸ್ತಾನದ ಪ್ರತಿನಿಧಿ ಮನೀರ್‌ ಅಕ್ರಮ್‌, ಕಾಶ್ಮೀರ ವಿವಾದ, ಪೌರತ್ವ ತಿದ್ದುಪಡಿ ಕಾಯ್ದೆ(CAA) ಮತ್ತು ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಿ ಭಾರತದ ವಿರುದ್ಧ ಗುರುತರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರುಚಿರಾ, ಪಾಕಿಸ್ತಾನ ಸದಾ ಕುಕೃತ್ಯಗಳ ಮೂಲಕವೇ ಕುಖ್ಯಾತಿಯನ್ನು ಪಡೆದಿದೆ ಎಂದು ತಿರುಗೇಟು ಕೊಟ್ಟರು. ಸವಾಲಿನ ಸ್ಥಿತಿಯಲ್ಲೂ ಭಾರತ ಶಾಂತಿ ಕಾಪಾಡಲು ಯತ್ನಿಸುತ್ತಿದೆ. ರಚನಾತ್ಮಕ ಮಾತುಕತೆಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದೇವೆ. ಪಾಕ್‌ ಹೇಳಿಕೆ ಅವರ ವಿನಾಶಕಾರಿ ಮನೋಭಾವವನ್ನು ತೋರಿಸುತ್ತದೆ. ರಾಜತಾಂತ್ರಿಕವಾಗಿ ವಿಷಯಗಳನ್ನು ಚರ್ಚಿಸುವುದಕ್ಕೆ ಭಾರತ ಯಾವಾಗಲೂ ಬೆಂಬಲ ನೀಡುತ್ತದೆ ಎಂದಿದ್ದಾರೆ.

ಭಯೋತ್ಪಾದನೆ ಎಂಬುದು ಎಲ್ಲಾ ಧರ್ಮಗಳು ಪ್ರತಿಪಾದಿಸುವ ಶಾಂತಿ ಮತ್ತು ಸೌಹಾರ್ದತೆಗೆ ನೇರ ತದ್ವಿರುದ್ಧವಾದ ವಿಚಾರವಾಗಿದೆ. ಅದು ಒಳ್ಳೆಯ ವಿಚಾರಗಳಿಗೆ ಅಡ್ಡಿಯಾಗಿ ನಿಂತಿದ್ದು, ಹಗೆತನವನ್ನು ಹುಟ್ಟುಹಾಕುತ್ತದೆ ಮತ್ತು ವಿಶ್ವಾದ್ಯಂತ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಪ್ರದಾಯಗಳ ಆಧಾರವಾಗಿರುವ ಗೌರವ ಮತ್ತು ಸಾಮರಸ್ಯದ ಸಾರ್ವತ್ರಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ವಿಶ್ವಸಂಸ್ಥೆಯ ಸದಸ್ಯರು ಒಟ್ಟಾಗಿ ನಿಂತಿ ಪ್ರಪಂಚಾದ್ಯಂತ ಶಾಂತಿ ಸೌಹಾರ್ದತೆ ಕಾಪಾಡಲು ಪಣತೊಡಬೇಕಿದೆ. ಇಡೀ ಪ್ರಪಂಚವೇ ಒಂದು ಕುಟುಂಬ. ನನ್ನ ದೇಶ ಇದರಲ್ಲಿ ನಂಬಿಕೆಯನ್ನಿಟ್ಟುಕೊಂಡಿದೆ ಎಂದು ರುಚಿರಾ ಹೇಳಿದರು. ಧರ್ಮ ಅಥವಾ ನಂಬಿಕೆಯ ಆಧಾರದ ಮೇಲೆ ಹೆಚ್ಚುತ್ತಿರುವ ಅಸಹಿಷ್ಣುತೆ, ತಾರತಮ್ಯ ಮತ್ತು ಹಿಂಸಾಚಾರ ಪಾಕಿಸ್ತಾನದಲ್ಲೇ ಇದೀಗ ಹೆಚ್ಚು ಕಂಡುಬರುತ್ತಿದೆ. ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಇನ್ನಿಲ್ಲದ ದೌರ್ಜನ್ಯ ನಡೆಯುತ್ತಿದೆ. ಅಸಹಾಯಕರಾಗಿ ಅವರು ಭಾರತದತ್ತ ರಕ್ಷಣೆಗಾಗಿ ನೋಡುತ್ತಿದ್ದಾರೆ. ಇಸ್ಲಾಂ ಧರ್ಮನಿಂದನೆಯ ಹೆಸರಿನಲ್ಲಿ ಅಲ್ಲಿನ ಹಿಂದೂಗಳನ್ನು ದಮನಿಸಲಾಗುತ್ತಿದೆ. ಇದನ್ನು ವಿಶ್ವಸಂಸ್ಥೆ ಗಮನಿಸಬೇಕಿದೆ.

ಪಾಕಿಸ್ತಾನದ ಹುಳುಕುಗಳು ಲೋಕದ ಕಣ್ಣಿನ ಮುಂದೆ ಸಾಕಷ್ಟು ಸ್ಪಷ್ಟವಾಗಿಯೇ ಇವೆ. ಅದು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಜಿಹಾದಿ ಉಗ್ರರಿಗಾಗಿ ಶಿಬಿರಗಳನ್ನು ನಡೆಸುತ್ತಿದೆ. ಇದನ್ನು ಅಲ್ಲಿನ ಗುಪ್ತಚರ ಸಂಸ್ಥೆ ಐಎಸ್‌ಐ ನಿರ್ವಹಿಸುತ್ತದೆ. ಅಲ್ಲಿಂದ ಕಾಶ್ಮೀರಕ್ಕೆ ಅಕ್ರಮವಾಗಿ ನುಸುಳುವ ಈ ಉಗ್ರರು ಅಲ್ಲಿ ನರಮೇಧ ನಡೆಸುತ್ತಾರೆ. ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ದೀರ್ಘಾವಧಿಯ ಎನ್‌ಕೌಂಟರ್‌ಗಳು ಹಾಗೂ ಅಲ್ಲಿ ಹುತಾತ್ಮರಾದ ಭಾರತೀಯ ಯೋಧರನ್ನು ನೆನಪಿಸಿಕೊಳ್ಳಬಹುದು. ಹಿಂದೂ, ಕ್ರೈಸ್ತ, ಸಿಖ್‌ ಧರ್ಮದ ಮಹಿಳೆಯರ ಮೇಲೆ ಪಾಕ್‌ನಲ್ಲಿ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ.

ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಬಿಡುಗಡೆ ಮಾಡಿರುವ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ) ವರದಿ- 2024ರ ಪ್ರಕಾರ, ಕಳೆದ ವರ್ಷದಲ್ಲಿ ಪಾಕಿಸ್ತಾನ ಮೂರು ಸ್ಥಾನ ಮೇಲಕ್ಕೇರಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಇಲ್ಲಿ ಬೇರೆ ಯಾವುದೇ ದೇಶಕ್ಕಿಂತ ಅತಿ ಹೆಚ್ಚು ಉಗ್ರ ದಾಳಿ ಘಟನೆಗಳು ನಡೆದಿವೆ. 2023ರಲ್ಲಿ ಇಲ್ಲಿ 490 ದಾಳಿಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಇದು ಹೆಚ್ಚಳವನ್ನು ಕಾಣುತ್ತಿದೆ. ಅದರಲ್ಲೂ ಭಯೋತ್ಪಾದನೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ.55 ಮಂದಿ ಸೇನೆಯ ಸಿಬ್ಬಂದಿ. ಪಾಕಿಸ್ತಾನವು ಭಯೋತ್ಪಾದನೆಯ ರಾಜಧಾನಿ ಎನ್ನುವುದು ಸಾಬೀತಾದ ಸಂಗತಿ. ಮತಾಂಧರನ್ನು, ಪ್ರತ್ಯೇಕತಾವಾದಿಗಳನ್ನು ಸೃಷ್ಟಿಸಿ ಅವರಿಗೆ ಆಯುಧಗಳನ್ನೂ ಪೂರೈಸಿ, ಪಂಜಾಬ್‌ನಲ್ಲೂ ಖಲಿಸ್ತಾನ್‌ವಾದಿಗಳಿಗೆ ತೆರೆಮರೆಯ ಬೆಂಬಲ ನೀಡಿ ಅದು ಸೃಷ್ಟಿಸಿದ ಅನಾಹುತ, ಮಾನವ ಹಕ್ಕು ಉಲ್ಲಂಘನೆ ಅಷ್ಟಿಷ್ಟಲ್ಲ. ಇಂಥ ದೇಶಕ್ಕೆ ಭಾರತಕ್ಕೆ ಉಪದೇಶ ಮಾಡುವ ನೈತಿಕ ನೆಲೆಯಿಲ್ಲ. ಕಾಶ್ಮೀರದ ಬಗೆಗೂ ಮಾತಾಡುವ ಹಕ್ಕು ಆ ದೇಶಕ್ಕೆ ಇಲ್ಲ. ಜಮ್ಮು- ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ದಾಗಿ ಮೂರು ವರ್ಷಗಳಾದವು. ಈ ಸಮಯದಲ್ಲಿ ಅಲ್ಲಿನ ಜನಜೀವನ ಸುಧಾರಿಸಿದೆ. ಪ್ರವಾಸೋದ್ಯಮ ಚಿಗುರಿದೆ. ದೇಶೀಯ ಹಾಗೂ ವಿದೇಶೀಯ ಹೊಸ ಹೂಡಿಕೆಗಳು ಬರುತ್ತಿವೆ. ಇದು ಸಹಜವಾಗಿಯೇ ಇಲ್ಲಿ ಪ್ರತ್ಯೇಕತಾವಾದವನ್ನು ಬಿತ್ತಲು ದಶಕಗಳಿಂದ ಪ್ರಯತ್ನಿಸುತ್ತಿದ್ದ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. ಅದಕ್ಕಾಗಿಯೇ ಆ ದೇಶ ಮೈಪರಚಿಕೊಳ್ಳುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ.

ಇದನ್ನೂ ಓದಿ: United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ.

VISTARANEWS.COM


on

Religious Freedom
Koo

ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಸರ್ಕಾರದ ಕಮಿಷನ್‌ ಆನ್‌ ಇಂಟರ್‌ನ್ಯಾಷನಲ್‌ ರಿಲಿಜಿಯಸ್‌ ಫ್ರೀಡಂ (USCIRF Report) ವರದಿ ಬಿಡುಗಡೆ ಮಾಡಿದೆ. ಭಾರತ ಸೇರಿ 17 ದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ (Religious Freedom) ಕುರಿತು ಕಳವಳ ವ್ಯಕ್ತಪಡಿಸಿದೆ. “ಭಾರತ ಸೇರಿ 17 ದೇಶಗಳಲ್ಲಿ ಜನರು ತಮ್ಮ ಧರ್ಮವನ್ನು ಅನುಸರಿಸುವ, ಧಾರ್ಮಿಕ ವಿಚಾರಗಳ ಮೇಲೆ ನಂಬಿಕೆ ಇರಿಸುವ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತಿದೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಭಾರತದಲ್ಲಿ ರಾಷ್ಟ್ರೀಯವಾದಿ ನೀತಿಗಳ ಹೇರಿಕೆಯಿಂದಾಗಿ ಇತರ ಧರ್ಮಗಳಲ್ಲಿ ನಂಬಿಕೆ ಇಟ್ಟುಕೊಂಡವರಿಗೆ ಸಮಸ್ಯೆಯಾಗಿದೆ. ದ್ವೇಷ ಕಾರುವ ವಾಕ್ಚಾತುರ್ಯ, ಕೋಮುವಾದದಿಂದ ಕೂಡಿದ ಹಿಂಸಾಚಾರಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಇದು ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವುದಕ್ಕೆ ಉದಾಹರಣೆಯಾಗಿದೆ” ಎಂದು ಹೇಳಿದೆ. ಇದಕ್ಕೆ ಭಾರತ ಸರ್ಕಾರ ತಿರುಗೇಟು ನೀಡಿದ್ದು, “ಯುಎಸ್‌ಸಿಐಆರ್‌ಎಫ್‌ ವರದಿಯು ಪಕ್ಷಪಾತ ಹಾಗೂ ರಾಜಕೀಯ ಪ್ರೇರಿತವಾಗಿ ತಯಾರಿಸಿದ್ದಾಗಿದೆ” ಎಂಬುದಾಗಿ ಅಸಮಾಧಾನ ವ್ಯಕ್ತಪಡಿಸಿದೆ. “ಇದಕ್ಕೂ ಮೊದಲು ಕೂಡ ಇಂತಹ ವರದಿಗಳನ್ನು ಅದು ಪ್ರಕಟಿಸಿತ್ತು. ಭಾರತದ ಕುರಿತು ಷಡ್ಯಂತ್ರದಿಂದ ಕೂಡಿದ ವರದಿ ಬಿಡುಗಡೆ ಮಾಡುವುದು ಅದಕ್ಕೆ ರೂಢಿಯೇ ಆಗಿದೆ. ಯುಎಸ್‌ಸಿಐಆರ್‌ಎಫ್‌ ವರದಿಯಲ್ಲಿ ಯಾವುದೇ ಹುರುಳಿಲ್ಲ” ಎಂದಿದೆ ಭಾರತ.

ಈ ವರದಿ ಯಾರೋ ಅಡ್ಡಕಸಬಿಗಳು ತಯಾರಿಸಿದ ವರದಿಯಂತೆ ಕಾಣಿಸುತ್ತಿದೆ. ಬಹುಶಃ ಅವರು ಭಾರತಕೆಕ ಬಂದು ಇಲ್ಲಿನ ಧಾರ್ಮಿಕ ಸಹಿಷ್ಣುತೆ, ಸಹಬಾಳ್ವೆ ಇತ್ಯಾದಿಗಳನ್ನು ನೋಡಿದ್ದರೆ ಇಂಥ ವರದಿ ತಯಾರಿಸುತ್ತಿರಲಿಲ್ಲ. ಭಾರತದಿಂದ ಆಚೆಗೆ ಕುಳಿತು ಭಾರತದ ವಿರುದ್ಧವೇ ಯುಟ್ಯೂಬ್‌ ವಿಡಿಯೋ ಮಾಡಿ ಬಿಡುವ ʼಬುದ್ಧಿವಂತʼರ ಮಾತುಗಳನ್ನು ಕೇಳಿಕೊಂಡು ಇದನ್ನು ತಯಾರಿಸಿದಂತೆ ಇದೆ. ಈ ವರದಿಯ ಅಕ್ಷರಕ್ಷರವೂ ಸುಳ್ಳು ಎಂಬುದಕ್ಕೆ ಸಾಕ್ಷಿಗಳನ್ನು ನೀಡಬಹುದು. ಸಿಪಿಎ (ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್) ಎಂಬ ಜಾಗತಿಕ ಸಂಸ್ಥೆ ಕಳೆದ ವರ್ಷ ನೀಡಿರುವ ಜಾಗತಿಕ ವರದಿಯಲ್ಲಿ, ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಅಲ್ಪಸಂಖ್ಯಾತರನ್ನು ಒಳಗೊಳ್ಳುವ ಕ್ರಮಗಳಲ್ಲಿ ಭಾರತ ನಂ.1 ಸ್ಥಾನದಲ್ಲಿದೆ ಎಂದು ಹೇಳಿದೆ. ಇದೊಂದು ಸ್ವತಂತ್ರ ಅಂತಾರಾಷ್ಟ್ರೀಯ ಸಂಸ್ಥೆ. 110 ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿ ಆ ವರದಿ ನೀಡಿತ್ತು. ಭಾರತವೇ ಅಲ್ಪಸಂಖ್ಯಾತರಿಗೆ ಹೆಚ್ಚು ಸುರಕ್ಷಿತ ಜಾಗ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಯಾವುದೇ ನಿರ್ಬಂಧ ಇಲ್ಲ. ಭಾರತದ ಸಂವಿಧಾನವು ಸಂಸ್ಕೃತಿ ಮತ್ತು ಶಿಕ್ಷಣ ಎರಡರಲ್ಲೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸುವ ವಿಶಿಷ್ಟ, ವಿಶೇಷ ವಿಧಿಗಳನ್ನು ಹೊಂದಿದೆ ಎಂದೂ ಈ ವರದಿ ಉಲ್ಲೇಖಿಸಿದೆ. ಭಾರತದ ನಂತರದ 4 ಸ್ಥಾನಗಳಲ್ಲಿ ಪನಾಮಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ನಂತರದ ಸ್ಥಾನದಲ್ಲಿ ಅಮೆರಿಕ ದೇಶ ಇದೆ. ಯುಎಸ್‌ಸಿಐಆರ್‌ಎಫ್‌ ಇದನ್ನು ಗಮನಿಸಿದಂತಿಲ್ಲ.

ನಮ್ಮ ದೇಶದಲ್ಲಿ ಆರು ಧರ್ಮಗಳ (ಮುಸ್ಲಿಂ, ಕ್ರೈಸ್ತ, ಸಿಖ್‌, ಜೈನ, ಬೌದ್ಧ, ಪಾರ್ಸಿ) ಅಲ್ಪಸಂಖ್ಯಾತರು ಒಟ್ಟಾಗಿ ಒಟ್ಟಾರೆ ಜನಸಂಖ್ಯೆಯ 19.3%ದಷ್ಟು ಇದ್ದಾರೆ. ಅಲ್ಪಸಂಖ್ಯಾತರ ಹಿತವನ್ನೂ ಬಹುಸಂಖ್ಯಾತರಂತೆಯೇ ಕಾಯಲು ನಮ್ಮ ಸಂವಿಧಾನದಲ್ಲೂ ʼಧರ್ಮನಿರಪೇಕ್ಷತೆʼಯನ್ನು ಸೇರಿಸಲಾಗಿದೆ. ಅಲ್ಪಸಂಖ್ಯಾತ ಹಿತಚಿಂತನೆ ನೋಡಿಕೊಳ್ಳುವುದಕ್ಕಾಗಿಯೇ ಕೇಂದ್ರದಲ್ಲಿ ʼಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯʼ ಇದೆ. ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ. ಭಾರತದ ಜನಸಂಖ್ಯೆಯ ಸುಮಾರು 14%ದಷ್ಟು, ಅಂದರೆ 20 ಕೋಟಿ ಮಂದಿ ಮುಸ್ಲಿಮರು ಇಲ್ಲಿ ಇದ್ದಾರೆ. ಇದು ದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯ. ಇಂಡೋನೇಷ್ಯಾ ಹಾಗೂ ಪಾಕಿಸ್ತಾನದ ಬಳಿಕ ಅತಿ ಹೆಚ್ಚು ಮುಸ್ಲಿಮರು ಇರುವ ದೇಶ ಎಂದರೆ ಭಾರತ. ಇನ್ನುಳಿದ ಇಸ್ಲಾಮಿಕ್‌ ದೇಶಗಳೆನಿಸಿಕೊಂಡವು ಕೂಡ ಭಾರತದಷ್ಟು ಸಂಖ್ಯೆಯ ಮುಸ್ಲಿಮರನ್ನು ಹೊಂದಿಲ್ಲ. ಭಾರತದಲ್ಲಿ ಎರಡೂ ಧರ್ಮಗಳೂ ಸಾಕಷ್ಟು ಸಾಮರಸ್ಯದಿಂದ ಬಾಳುತ್ತಿವೆ. ಪಾಕಿಸ್ತಾನ, ಇರಾನ್ ಮುಂತಾದ ಅಪ್ಪಟ ಮುಸ್ಲಿಂ ದೇಶಗಳಿಗಿಂತ ಭಾರತೀಯ ಮುಸ್ಲಿಮರು ಹೆಚ್ಚು ಸ್ವಾತಂತ್ರ್ಯ ಮತ್ತು ಸೌಕರ್ಯ ಹೊಂದಿದ್ದಾರೆ. ಹಾಗೆ ನೋಡಿದರೆ ಮುಸ್ಲಿಂ ದೇಶಗಳಲ್ಲೇ ಮುಸ್ಲಿಮರು ಸುರಕ್ಷಿತವಾಗಿಲ್ಲ. ಪಾಕಿಸ್ತಾನ, ಆಫ್ಘಾನಿಸ್ತಾನದ ಮಸೀದಿಗಳಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗುತ್ತಿದೆ. ಅಲ್ಲಿಯ ಅಲ್ಪಸಂಖ್ಯಾತರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಈ ಸೋಗಲಾಡಿ ವರದಿ ಅದನ್ನೇನಾದರೂ ನೆನಪಿಸಿಕೊಂಡಿದೆಯೇ?

ಈ ವರದಿಯನ್ನು ಹೊರಡಿಸಿದ ಅಮೆರಿಕದ ಬುಡದಲ್ಲಿ ಏನಿದೆ ಎಂದು ಸ್ವಲ್ಪ ನೋಡೋಣ. ಅತಿ ಹಳೆಯ ಪ್ರಜಾಪ್ರಭುತ್ವ ದೇಶ ಎನಿಸಿಕೊಂಡ ಆ ದೇಶದಲ್ಲಿ ಇನ್ನೂವರೆಗೂ ಒಬ್ಬ ಮಹಿಳೆಯೂ ಅಧ್ಯಕ್ಷರಾಗಲು ಸಾಧ್ಯವಾಗಲಿಲ್ಲ. ಬರಾಕ್‌ ಒಬಾಮರಂಥ ಅಲ್ಪಸಂಖ್ಯಾತರು ಅಧ್ಯಕ್ಷರಾಗಲು ಹಲವು ಶತಮಾನಗಳೇ ಬೇಕಾಯಿತು. ಮಹಿಳೆಯರೂ ತಮ್ಮ ಮತದಾನದ ಹಕ್ಕನ್ನು ಪಡೆಯಲು ಬಡಿದಾಡಬೇಕಾಯಿತು. ಇನ್ನು ಅಲ್ಲಿನ ಆಫ್ರಿಕನ್‌ ಸಮುದಾಯ ಅನುಭವಿಸುತ್ತಿರುವ ಸಂಕಷ್ಟವನ್ನು ಹೇಳಬೇಕಾಗಿಯೇ ಇಲ್ಲ. ಇವರನ್ನು ಇಲ್ಲಿ ನೂರಾರು ವರ್ಷಗಳ ಕಾಲ ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿತ್ತು. ಇದನ್ನು ಹೋಗಲಾಡಿಸಲು ಲಿಂಕನ್‌ನಂಥ ಮುತ್ಸದ್ಧಿ ಬಲಿದಾನ ಮಾಡಬೇಕಾಯಿತು. ಈಗಲೂ ಅಲ್ಲಿ ಕರಿಯರ ಸಮುದಾಯದ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಇದನ್ನು ವಿರೋಧಿಸಿ ನಡೆಸಲಾಗುತ್ತಿರುವ ʼಬ್ಲ್ಯಾಕ್‌ ಲೈವ್ಸ್‌ ಮ್ಯಾಟರ್ʼ ಚಳವಳಿಯನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ಇನ್ನು ಅಲ್ಲಿನ ಮೂಲವಾಸಿ ಅಮೆರಿಕನ್‌ ಸಮುದಾಯದವರನ್ನು ಯಾವ ರೀತಿ ನಿರ್ಮೂಲನ ಮಾಡಲಾಯಿತು ಎಂಬುದು ಚರಿತ್ರೆಯಲ್ಲಿ ಸೇರಿಹೋಗಿರುವ ಕರಾಳ ಅಧ್ಯಾಯಗಳಲ್ಲೊಂದು. ಇಂದು ಹುಡುಕಿದರೂ ಆ ಜನಾಂಗ ಅಲ್ಲಿ ಸಿಗುವುದಿಲ್ಲ. ಇನ್ನು ಮುಸ್ಲಿಮರ ವಿಷಯಕ್ಕೆ ಬಂದರೆ, 9/11 ಘಟನೆಯ ನಂತರ ಅಲ್ಲಿ ಪ್ರತಿಯೊಬ್ಬ ಮುಸ್ಲಿಮನನ್ನೂ ಶಂಕಿತ ಭಯೋತ್ಪಾದಕನಂತೆಯೇ ನೋಡಲಾಗುತ್ತದೆ. ಮುಸ್ಲಿಮರನ್ನು ಈ ಅನುಮಾನದಿಂದಾಗಿಯೇ ಅಲ್ಲಿನ ಸರ್ಕಾರಿ ಆಡಳಿತಾತ್ಮಕ ಹುದ್ದೆಗಳಲ್ಲಿ ಒಳಬಿಟ್ಟುಕೊಳ್ಳಲಾಗುತ್ತಿಲ್ಲ. ಇಂಥ ದೇಶ, ಭಾರತದಂಥ ʼವಸುಧೈವ ಕುಟುಂಬಕಂʼ ಮಂತ್ರವನ್ನು ಸಾರಿದ ಪುರಾತನ ಸಂಸ್ಕೃತಿಯ ದೇಶಕ್ಕೆ ಬುದ್ಧಿವಾದ ಹೇಳುವುದು ಒಂದು ಕೆಟ್ಟ ಜೋಕ್.‌

ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರು ಭಾರತದಲ್ಲೂ ಅಮೆರಿಕದಲ್ಲೂ ಇದ್ದಾರೆ. ಇದು ಅವರ ಹೊಟ್ಟೆಪಾಡು ಎಂದು ಸುಮ್ಮನಾಗವಂತೆಯೂ ಇಲ್ಲ. ಯಾಕೆಂದರೆ ಇವರು ಅಂತಾರಾಷ್ಟ್ರೀಯವಾಗಿ ನಮ್ಮ ಮುಖಕ್ಕೆ ಮಸಿ ಬಳಿಯಬಲ್ಲರು. ಇವರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಳ್ಳುವುದೇ ಸರಿಯಾದ ದಾರಿ. ಅಮೆರಿಕ ಇಂಥವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಬಾರದು.

ಇದನ್ನೂ ಓದಿ: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಕಳವಳ; ತಿರುಗೇಟು ಕೊಟ್ಟ ಕೇಂದ್ರ ಸರ್ಕಾರ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸ್ಮಾರ್ಟ್‌ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ, ವೈರಿಗಳ ಮೇಲೆ ಹದ್ದಿನ ಕಣ್ಣಿಡುವ ಇದು ಗೇಮ್‌ ಚೇಂಜರ್‌ ಎಂದೇ ಹೇಳಲಾಗುತ್ತಿದೆ.

VISTARANEWS.COM


on

SMART Missile
Koo

ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆ. ಇದು ಕ್ಯಾನಿಸ್ಟರ್‌ ಆಧಾರಿತ, 643 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ಆಗಸದಲ್ಲಿಯೇ ಶತ್ರುನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನ ಹೊಂದಿದೆ.

ಭಾರತದ ವಾಯುಪಡೆ, ನೌಕಾಪಡೆ ಹಾಗೂ ಭೂಸೇನೆಗಳು ಮೂರೂ ಕಳೆದ ಒಂದು ದಶಕದಲ್ಲಿ ಸಾಕಷ್ಟು ಹೊಸ ಶಸ್ತ್ರಾಸ್ತ್ರಗಳನ್ನು ಪಡೆದಿವೆ. ಭಾರತದ ನೌಕಾಪಡೆ ಈಗ ಸಾಕಷ್ಟು ಯುದ್ಧನೌಕೆಗಳು, ಐಎನ್‌ಎಸ್‌ ವಿಕ್ರಮಾದಿತ್ಯದಂಥ ಜೆಟ್‌ಫೈಟರ್‌ ಕ್ಯಾರಿಯರ್‌ಗಳು, ಅರಿಹಂತ್‌ನಂತ ಸಬ್‌ಮರೀನ್‌ಗಳನ್ನು ಹೊಂದಿದೆ. ಪ್ರಸ್ತುತ ಇದು ಜಗತ್ತಿನ 7ನೇ ಅತಿ ಪ್ರಬಲ ನೌಕಾಪಡೆಯೆನಿಸಿದೆ. ಈ ಪ್ರಾಬಲ್ಯ ಭಾರತವನ್ನು ಸುತ್ತುವರಿದ ಸಾಗರ ಪ್ರದೇಶವನ್ನು ರಕ್ಷಿಸುವುದಷ್ಟೇ ಅಲ್ಲ, ಇಲ್ಲ ಓಡಾಡುವ ಮಿತ್ರದೇಶಗಳ ನೌಕೆಗಳ ರಕ್ಷಣೆಗೂ ನೆರವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಇತ್ತೀಚೆಗೆ ನಮ್ಮ ನೌಕಾದಳ ಬಲ್ಗೇರಿಯಾ ಹಾಗೂ ಇರಾನ್‌ನ ಹಡಗುಗಳನ್ನು ಕಡಲ್ಗಳ್ಳರಿಂದ ರಕ್ಷಿಸಿದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ನಮ್ಮ ಸ್ವಾಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನೆಲೆಯಿಂದ ಲಕ್ಷದ್ವೀಪದಲ್ಲಿ ನೌಕಾಪಡೆಯು ʼಐಎನ್‌ಎಸ್‌ಜಟಾಯುʼ ಹೆಸರಿನ ಮತ್ತೊಂದು ನೆಲೆಯನ್ನು ನಿರ್ಮಿಸುವ ವ್ಯೂಹಾತ್ಮಕ ಹಾಗೂ ರಕ್ಷಣಾತ್ಮಕ ಹೆಜ್ಜೆ ಇರಿಸಿದೆ. ಈಗಾಗಲೇ ಅಂಡಮಾನ್‌ನಲ್ಲಿ ಐಎನ್‌ಎಸ್‌ ಬಾಜ್‌ ಎಂಬ ನೌಕಾನೆಲೆ ಇದೆ. ಲಕ್ಷದ್ವೀಪದ ಕವರಟ್ಟಿಯಲ್ಲೇ ದ್ವೀಪ್ರಕಾಶಕ ಎಂಬ ನೌಕಾನೆಲೆ ಇದೆ. ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ವೈರಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವುದು, ಸಾಗರ ಪ್ರದೇಶದಲ್ಲಿ ಭಯೋತ್ಪಾದನೆ- ಅಪರಾಧ ತಡೆಗಟ್ಟುವುದು, ಸಮುದ್ರ ಪ್ರದೇಶದಲ್ಲಿ ಮಾದಕವಸ್ತು ಅಕ್ರಮ ಸಾಗಣೆ ನಿಯಂತ್ರಣ ಸಾಧ್ಯ. ಹೊಸ ಟಾರ್ಪೆಡೊ (SMART Missile) ಕ್ಷಿಪಣಿ ಕೂಡ ಇದಕ್ಕೆ ಪೂರಕ.

ಇತ್ತೀಚೆಗೆ ನಮ್ಮ ಕ್ಷಿಪಣಿ ಬಲ ಇನ್ನಷ್ಟು ಮೈದುಂಬಿಕೊಳ್ಳುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ, ಹಲವು ಪರಮಾಣು ಬಾಂಬ್‌ಗಳನ್ನು (Nuclear warhead) ಏಕಕಾಲಕ್ಕೆ ಕೊಂಡೊಯ್ಯಬಲ್ಲ ಸಾಮರ್ಥ್ಯದ ಅಗ್ನಿ-ವಿ (Agni-V) ಬಹು ಸಿಡಿತಲೆ ಕ್ಷಿಪಣಿಯ ಇತ್ತೀಚಿನ ಹಾರಾಟ ಪರೀಕ್ಷೆ ಇಲ್ಲಿ ಉಲ್ಲೇಖನೀಯ. ಇದೊಂದು ಬಹು ಸ್ವತಂತ್ರವಾಗಿ ಕಾರ್ಯಾಚರಿಸಬಲ್ಲ, ರೀ-ಎಂಟ್ರಿ ತಂತ್ರಜ್ಞಾನ ಹೊಂದಿರುವ ಕ್ಷಿಪಣಿ. ಇದರ ಸಿಡಿತಲೆಯು ಬಾಹ್ಯಾಕಾಶದಲ್ಲಿ ಬೇರ್ಪಟ್ಟು, ಬೆಂಕಿಯ ಚೆಂಡುಗಳು ವಾತಾವರಣವನ್ನು ಮರು ಪ್ರವೇಶಿಸುತ್ತವೆ. ಪ್ರತಿಯೊಂದು ಸಿಡಿತಲೆಯೂ ವಿಭಿನ್ನ ವೇಗದಲ್ಲಿ ಕೆಳಗಿಳಿದು ನೆಲಕ್ಕೆ ಅಪ್ಪಳಿಸುತ್ತದೆ. MIRVಯ ಮುಖ್ಯ ಸಾಮರ್ಥ್ಯವೇ ಮರು-ಪ್ರವೇಶ. ಪ್ರತಿ ಸಿಡಿತಲೆಯೂ ವಿಭಿನ್ನ ವೇಗಗಳು ಮತ್ತು ಪ್ರತ್ಯೇಕ ಗುರಿಗಳನ್ನು ಹೊಂದಿರುವುದರಿಂದ, ಕ್ಷಿಪಣಿ ವಿರೋಧಿ ಗುರಾಣಿಗಳಿಂದ ಅಗ್ನಿ-V ಅನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ. ಇದನ್ನು ʼಮಿಷನ್‌ ದಿವ್ಯಾಸ್ತ್ರʼ ಎಂದು ಕರೆಯಲಾಗಿದೆ.

ಏಷ್ಯಾ ಉಪಖಂಡದಲ್ಲಿ ಆ ಮೂಲಕ ಶಸ್ತ್ರಾಸ್ತ್ರ ಪೈಪೋಟಿ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ. ಜಗತ್ತಿನಲ್ಲಿಯೇ ಅತಿ ದೊಡ್ಡದಾದ ಪ್ರಜಾಪ್ರಭುತ್ವ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಉದ್ದೇಶ. ನಾವು ಬಲಿಷ್ಟರಾದಾಗ ನಮ್‌ ಮಸುತ್ತಮುತ್ತಲಿನವರೂ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಅಮೆರಿಕದಂಥ ಬಲಿಷ್ಠ ರಾಷ್ಟ್ರಗಳೂ ʼಭಾರತ ನಮ್ಮ ಮಿತ್ರʼ ಎಂದು ಹಾಡಿ ಹೊಗಳುತ್ತವೆ. ಇಸ್ರೇಲ್‌, ಆಸ್ಟ್ರೇಲಿಯದಂಥ ದೇಶಗಳು ನಮ್ಮೊಂದಿಗೆ ರಕ್ಷಣಾ ಕೊಡುಕೊಳ್ಳುವಿಕೆಗಳನ್ನು ನಡೆಸುತ್ತವೆ. ಫ್ರಾನ್ಸ್‌ನಂಥ ದೇಶಗಳೇ ರಫೇಲ್‌ನಂಥ ಅದ್ಭುತ ಯುದ್ಧಸಾಮರ್ಥ್ಯವನ್ನು ಹೊಂದಿರುವ ಫೈಟರ್‌ ಜೆಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತವೆ. ʼಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸ್ಥಾನಮಾನ ನೀಡಬೇಕುʼ ಎಂದು ಬ್ರಿಟನ್‌ ಪ್ರತಿಪಾದಿಸುತ್ತದೆ. ಇದೆಲ್ಲವೂ ಸ್ವಸಾಮರ್ಥ್ಯ ಇದ್ದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಭಾರತ ನಡೆ ಬಲಿಷ್ಠತೆಯತ್ತ ಸಹಜವಾಗಿ ಮುಂದುವರಿದಿದೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು.

VISTARANEWS.COM


on

Covishield Vaccine
Koo

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿದೆ. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿದೆ. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದಾರೆ. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತ್ತು. ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾದ ಲಸಿಕೆ ಇದೇ ಆಗಿದೆ. ಅಸ್ಟ್ರಾಜೆನೆಕಾ ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಮೊಕದ್ದಮೆಯನ್ನು ಎದುರಿಸುತ್ತಿದೆ. 51 ಪ್ರಕರಣಗಳಲ್ಲಿ ಸಂತ್ರಸ್ತರು ಲಕ್ಷಗಟ್ಟಲೆ ಪೌಂಡ್‌ ನಷ್ಟ ಪರಿಹಾರ ಬಯಸಿದ್ದಾರೆ. ಅಸ್ಟ್ರಾಜೆನೆಕಾ ಒಪ್ಪಿಕೊಂಡಿರುವ ಆರೋಗ್ಯ ಸಮಸ್ಯೆಯ ಹೆಸರು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome– TTS). ಇದರಲ್ಲಿ ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು. “ಕೊರೊನಾ ಸೋಂಕು ತಗುಲಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುವುದು ಸೇರಿ ಆರೋಗ್ಯ ಸ್ಥಿತಿ ಗಂಭೀರವಾಗಿ, ಬದುಕಿ ಬಂದವರು ಯಾವುದೇ ಕಾರಣಕ್ಕೂ ಹೆಚ್ಚು ದಣಿಯುವ ಕೆಲಸ ಮಾಡಬಾರದು. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಅಧ್ಯಯನ ವರದಿ ಪ್ರಕಾರ, ಹೃದಯಾಘಾತದ ಭೀತಿ ಇರುವ ಕಾರಣ ಒಂದಷ್ಟು ಸಮಯದವರೆಗೆ ಕೊರೊನಾ ಸೋಂಕಿತರು ಹೆಚ್ಚು ಸಮಯದವರೆಗೆ ಅಥವಾ ಹೆಚ್ಚು ಭಾರ ಹೊರುವ ಕೆಲಸ ಮಾಡಬಾರದು. ಒಂದು ವರ್ಷ ಅಥವಾ ಎರಡು ವರ್ಷಗಳವರೆಗೆ ಇಂತಹ ವ್ಯಕ್ತಿಗಳು ಅತಿಯಾದ ವ್ಯಾಯಾಮ, ಜಿಮ್‌ನಲ್ಲಿ ವರ್ಕೌಟ್‌ ಕೂಡ ಮಾಡಬಾರದು” ಎಂದು ಅಧ್ಯಯನ ವರದಿ ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕೊರೊನಾ ಸೋಂಕಿನ ನಂತರ ಹೃದಯಾಘಾತ ಪ್ರಮಾಣ ಏರಿಕೆಯಾಗಿರುವುದನ್ನು ಜಾಗತಿಕ ವರದಿಗಳೇ ದೃಢಪಡಿಸಿವೆ. ಜಾಗತಿಕ ವರದಿಯೊಂದರ ಪ್ರಕಾರ, ಸಾಂಕ್ರಾಮಿಕದ ನಂತರ 24-45 ವರ್ಷದೊಳಗಿನವರಲ್ಲಿ ಹೃದಯಾಘಾತ ಪ್ರಮಾಣ ಶೇ.30ರಷ್ಟು ಏರಿಕೆಯಾಗಿದೆ. ಆ ಮೂಲಕ ಅಂತಾರಾಷ್ಟ್ರೀಯವಾಗಿಯೂ ಕೊರೊನಾ ನಂತರ ಹೃದಯಾಘಾತ ಪ್ರಮಾಣ ಹೆಚ್ಚಾಗಿದೆ ಎಂಬುದು ದೃಢಪಟ್ಟಿದೆ. ಕೊರೊನಾ ನಂತರ ಹೃದಯಾಘಾತ ಪ್ರಮಾಣ ಶೇ.3ರಿಂದ ಶೇ.5ರಷ್ಟು ಏರಿಕೆಯಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿದ್ದ ಡಾ.ಸಿ.ಎನ್.ಮಂಜುನಾಥ್‌ ಕೂಡ ಹೇಳಿದ್ದರು. ಈಗ ಯುವಕರಿಗೂ ಹೃದಯಾಘಾತ ಹೆಚ್ಚುತ್ತಿದೆ. ಅಧಿಕ ಒತ್ತಡ, ಜೀವನ ಶೈಲಿ, ಆಹಾರ ಶೈಲಿ ಇದಕ್ಕೆ ಕಾರಣವಾಗಿದೆ ಎಂದಿದ್ದಾರೆ. ಇದರ ಜೊತೆಗೆ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಕೂಡ ಸೇರಿಕೊಂಡಿರುವುದು ಆತಂಕಕಾರಿ.

ಇವೆಲ್ಲ ಕಾರಣಗಳಿಂದಾಗಿ, ಕೊರೊನಾದಿಂದಾಗಿ ಪೀಡಿತರಾದವರು ಈ ಬಗ್ಗೆ ಅತೀವ ಎಚ್ಚರ ವಹಿಸಲೇಬೇಕಿದೆ. ಸೂಕ್ತ ಆಹಾರ ಸೇವನೆ, ವ್ಯಾಯಾಮ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಬರಮಾಡಿಕೊಳ್ಳಬೇಕು. ಸರ್ಕಾರ ಎಷ್ಟೇ ಆರೋಗ್ಯಸೇವೆ ನೀಡಿದರೂ ವ್ಯಕ್ತಿ ತನ್ನ ಆರೋಗ್ಯವನ್ನು ನೋಡಿಕೊಳ್ಳದಿದ್ದರೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಕೋವಿಡ್‌ ಹಾಗೂ ಲಸಿಕೆಯಿಂದ ಉಂಟಾಗಿರಬಹುದಾದ ಆರೋಗ್ಯ ಸಮಸ್ಯೆಗಳನ್ನೂ ಇನ್ನೊಂದು ತುರ್ತುಸ್ಥಿತಿ ಎಂದೇ ತಿಳಿದು ಸರ್ಕಾರ ಕೂಡ ಕಾರ್ಯಪ್ರವೃತ್ತವಾಗಬೇಕು.

Continue Reading
Advertisement
Viral Video
ವೈರಲ್ ನ್ಯೂಸ್33 seconds ago

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Salaar Movie Fails To Get Expected TRP Star Suvarna
ಸಿನಿಮಾ4 mins ago

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

RCB vs GT
ಕ್ರಿಕೆಟ್7 mins ago

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

Ajay Devgn 'Shaitaan' to stream on OTT
ಒಟಿಟಿ25 mins ago

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Brij Bhushan
ಕ್ರೀಡೆ27 mins ago

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Prajwal Revanna Case red corner notice
ಪ್ರಮುಖ ಸುದ್ದಿ31 mins ago

Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Iran-Israel
ವಿದೇಶ38 mins ago

Iran-Israel: ಇರಾನ್ ವಶಪಡಿಸಿಕೊಂಡ ಇಸ್ರೇಲ್‌ ಹಡಗಿನಲ್ಲಿದ್ದ 17 ಭಾರತೀಯರು ಸೇರಿ ಎಲ್ಲ ಸಿಬ್ಬಂದಿಯ ಬಿಡುಗಡೆ

Kannada New Movie Rangasthala movie
ಸ್ಯಾಂಡಲ್ ವುಡ್51 mins ago

Kannada New Movie: ‘ ರಂಗಸ್ಥಳ’ ಸಿನಿಮಾಗೆ ಮಲಯಾಳಂನ ಖ್ಯಾತ ನಟ ಎಂಟ್ರಿ

Mallikarjuna Kharge
ದೇಶ57 mins ago

Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

RCB vs GT
ಕ್ರೀಡೆ58 mins ago

RCB vs GT: ಆರ್​ಸಿಬಿ ಅಭಿಮಾನಿಗಳಿಗೆ ಇಂದು ಶೇ.99ರಷ್ಟು ನಿರಾಸೆ ಖಚಿತ; ಪಂದ್ಯ ನಡೆಯುವುದೇ ಅನುಮಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ17 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌