Site icon Vistara News

2nd PUC Exam 3: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಆರಂಭ

2nd Puc Exam 3

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ 3 ಆರಂಭಗೊಂಡಿದೆ. ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75, 995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ರಾಜ್ಯಾದ್ಯಂತ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇನ್ನೂ ಸಿಸಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಇದನ್ನೂ ಓದಿ: UGCET 2024: ಯುಜಿಸಿಇಟಿಗೆ ಜೂನ್ 25ರಿಂದ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ. ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

Exit mobile version