2nd PUC Result: ದ್ವಿತೀಯ ಪಿಯು ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ! - Vistara News

ಶಿಕ್ಷಣ

2nd PUC Result: ದ್ವಿತೀಯ ಪಿಯು ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ!

2nd PUC Result: ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

2nd PUC Result answer sheet download and re evaluation and re counting date fixed Apply now
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಪ್ರಕಟವಾಗಿದೆ. ಅಧಿಕೃತ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದಾಗಿದೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 ಮಾದರಿಯಂತೆ (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಂಕಗಳನ್ನು ನೀಡಲಾಗಿರುತ್ತದೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
  • ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
  • ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ

ಪರೀಕ್ಷೆ ಬರೆದವರಲ್ಲಿ ಒಟ್ಟಾರೆ ಶೇಕಡ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಎಂದಿನಂತೆ ಮೊದಲ ಸ್ಥಾನದಲ್ಲಿದ್ದು, ಶೇ.97.37 ಫಲಿತಾಂಶ ಪಡೆದುಕೊಂಡಿದೆ. ನಂತರದ ಸ್ಥಾನದಲ್ಲಿ ಉಡುಪಿ ಇದ್ದು, ಶೇ.96.80 ಫಲಿತಾಂಶ ಗಳಿಸಿದೆ. ಮೂರನೇ ಹಾಗೂ ನಾಲ್ಕನೇ ಸ್ಥಾನಗಳಲ್ಲಿ ವಿಜಯಪುರ (ಶೇ.94.89) ಹಾಗೂ ಉತ್ತರ ಕನ್ನಡ (ಶೇ.92.51) ಇವೆ. ಕೊನೆಯ ಸ್ಥಾನದಲ್ಲಿ ಗದಗ (ಶೇ.72.86) ಪಡೆದಿದೆ. ಬೆಂಗಳೂರು ಉತ್ತರ ಶೇ.88.67 ಹಾಗೂ ಬೆಂಗಳೂರು ದಕ್ಷಿಣ ಶೇ.89.57 ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ: 2nd PUC Result: ದ್ವಿತೀಯ ಪಿಯುಸಿಯಲ್ಲಿ ಶೇ.84.59 ಮಂದಿ ಪಾಸ್;‌ ದ.ಕ, ಉಡುಪಿ ಮೊದಲೆರಡು ಸ್ಥಾನ; ಫಲಿತಾಂಶ ಇಲ್ಲಿದೆ ನೋಡಿ

ಗಣಿತದಲ್ಲಿ 6960 ಮಂದಿ, ಜೀವಶಾಸ್ತ್ರದಲ್ಲಿ 5925 ಮಂದಿ, 2570 ಮಂದಿ ಕನ್ನಡದಲ್ಲಿ , 1499 ಮಂದಿ ಸಂಸ್ಕೃತದಲ್ಲಿ , ಅರ್ಥಶಾಸ್ತ್ರದಲ್ಲಿ 1403 ಮಂದಿ, ಗಣಕ ವಿಜ್ಞಾನದಲ್ಲಿ 2661 ಮಂದಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

English Alphabet: ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರ ಏರ್ಪಡಿಸಲಾಗಿತ್ತು. ಈ ವೇಳೆ ಬೆಂಗಳೂರು ಹಾಗೂ ಪ್ರಾನ್ಸ್‌ ವಿದ್ಯಾರ್ಥಿಗಳು, ಇಂಗ್ಲಿಷ್‌ ವರ್ಣಮಾಲೆಯ 27ನೇ ಅಕ್ಷರ ವಿನ್ಯಾಸಗೊಳಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

English Alphabet
Koo

ಬೆಂಗಳೂರು: ಇಂಗ್ಲಿಷ್‌ ವರ್ಣಮಾಲೆಯಲ್ಲಿ (English Alphabet) 26 ಅಕ್ಷರಗಳಿರುವುದು ಗೊತ್ತಿರುವ ಸಂಗತಿ. ಆದರೆ, ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ (LISAA School of Design) ವಿದ್ಯಾರ್ಥಿಗಳು, 27ನೇ ಅಕ್ಷರ ವಿನ್ಯಾಸಗೊಳಿಸುವ ಸವಾಲು ಕೈಗೆತ್ತಿಕೊಂಡಿದ್ದು, ಆ ಮೂಲಕ ಇಂಗ್ಲಿಷ್‌ ಮತ್ತು ಫ್ರೆಂಚ್‌ ಭಾಷೆಯ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಮತ್ತು ಫ್ರಾನ್ಸ್‌ನ ಸ್ಟ್ರಾಸ್‌ಬರ್ಗ್‌ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಾಗಾರದ ಮುಖ್ಯ ಉದ್ದೇಶ ಹೊಸ ಅಕ್ಷರವನ್ನು ವಿನ್ಯಾಸಗೊಳಿಸುವುದಾಗಿತ್ತು.

ಈ ಕುರಿತು ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಸಂಸ್ಥಾಪಕರು ಮತ್ತು ನಿರ್ದೇಶಕಿ ಅವಿ ಕೆಸ್ವಾನಿ ಅವರು ಮಾತನಾಡಿ, “ಭಾಷೆಯೊಂದು ಸಂವಹನ ಕ್ರಿಯೆಗೆ ನೆರವಾಗುವ ಮಾಧ್ಯಮ. ಅದರಂತೆ ಎಲ್ಲಾ ಅಕ್ಷರಗಳಿಗೂ ಅದರದ್ದೇ ಆದ ಸಾಂಸ್ಕೃತಿಕ ಹಿನ್ನೆಲೆ ಇರುತ್ತದೆ. ನಾವು ವಿನ್ಯಾಸಕಾರರು ಈ ಮೂಲಕ ಹೊಸ ಯೋಚನೆಗಳನ್ನು ಹೊರತರಲು ವೇದಿಕೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇವೆ. ನಮ್ಮ ಉದ್ದೇಶ ಈ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಸವಾಲೊಂದನ್ನು ನೀಡುವುದಾಗಿದೆ. ಮೂಲತಃ ಫ್ರೆಂಚ್‌ ಸ್ಕೂಲ್‌ ಆಫ್‌ ಡಿಸೈನ್‌ ಆಗಿರುವುದರಿಂದ ಇಂಗ್ಲಿಷ್‌ ಮಾತನಾಡುವವರು ಕೆಲ ಫ್ರೆಂಚ್‌ ಉಚ್ಚಾರಣೆ ಮಾಡಲು ಕಷ್ಟಪಡುವುದನ್ನು ಗಮನಿಸಿದ್ದೇವೆ. ಈ ಹಿನ್ನೆಲೆಯಲ್ಲಿ 27ನೇ ಅಕ್ಷರವನ್ನು ವಿನ್ಯಾಸಗೊಳಿಸುವ ಮೂಲಕ ಫ್ರೆಂಚ್‌ ಮತ್ತು ಇಂಗ್ಲಿಷ್‌ ಭಾಷೆಗೆ ಸೇತುವೆ ಕಲ್ಪಿಸುವುದಾಗಿದೆ” ಎಂದು ಹೇಳಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ಫ್ರಾನ್ಸ್‌ನ ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ಜೊತೆಗೆ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದು, ಈ ಮೂಲಕ ನಾಡಿನ ಶ್ರೀಮಂತ ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ವೈಭವವನ್ನು ಪರಿಚಯಿಸುವ ನಿಟ್ಟಿನಲ್ಲಿ ಚನ್ನಪಟ್ಟಣದ ಕರಕುಶಲ ಕೇಂದ್ರ ಮತ್ತು ಮೈಸೂರಿನ ಅರಮನೆಯ ಪರಿಚಯ ಮಾಡಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

KSET Exam 2023: ಕೆಸೆಟ್‌-2023 ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿಡುಗಡೆ ಮಾಡಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ವಿಷಯವಾರು ಲಿಂಕ್‌ ಕ್ಲಿಕ್ ಮಾಡುವ ಮೂಲಕ ತಾತ್ಕಾಲಿಕ ಅಂಕಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

VISTARANEWS.COM


on

KSET Exam 2023 provisional score list
Koo

ಬೆಂಗಳೂರು: ಕೆಸೆಟ್‌ ಪರೀಕ್ಷೆ- 2023ರ (KSET Exam 2023) ತಾತ್ಕಾಲಿಕ ಸ್ಕೋರ್‌ (provisional score list) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ (College lecturer) ಅರ್ಹತಾ ಪರೀಕ್ಷೆಯಾದ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ – ಕೆಸೆಟ್‌ʼ (KSET – Karnataka State Eligibility Test) ಇದರ 2023ನೇ ಸಾಲಿನ ಪರೀಕ್ಷೆಯನ್ನು ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಬರೆದವರು ಈಗ ತಮ್ಮ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಕೆಸೆಟ್‌-2023 ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿಯನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿಡುಗಡೆ ಮಾಡಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ವಿಷಯವಾರು ಲಿಂಕ್‌ ಕ್ಲಿಕ್ ಮಾಡುವ ಮೂಲಕ ತಾತ್ಕಾಲಿಕ ಅಂಕಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು 2024ರ ಜನವರಿ 13ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ರಾಜ್ಯದಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಸಿತ್ತು.

ನಂತರ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ 04-04-2024ರಂದು ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಕೆಸೆಟ್ ಪರೀಕ್ಷೆಯ ಪತ್ರಿಕೆ-1 ಮತ್ತು 41 ವಿಷಯಗಳ (ಪತ್ರಿಕೆ-2) ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರವು ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಆಕ್ಷೇಪಣೆಗಳಿಗೆ ಆಹ್ವಾನ

ಪ್ರಸ್ತುತ ಕೆಇಎ ಬಿಡುಗಡೆ ಮಾಡಿರುವ ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ವಿವರವಾದ ಮಾಹಿತಿಗಳೊಂದಿಗೆ ಸಲ್ಲಿಸಲು ಮೇ 10, 2024 ರವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಯನ್ನು ಇಮೇಲ್‌ ವಿಳಾಸ -keakset2023@gmail.com ಗೆ ಕಳುಹಿಸಬಹುದು.

ವಿಶೇಷ ಸೂಚನೆ : ಈಗ ಬಿಡುಗಡೆ ಮಾಡಿರುವ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್-2023ರಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸಬಾರದು ಎಂದು ಕೆಇಎ ಸೂಚನೆ ನೀಡಿದೆ.

ತಾತ್ಕಾಲಿಕ ಅಂಕಪಟ್ಟಿ ಚೆಕ್‌ ಮಾಡುವ ವಿಧಾನ

ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.
ತೆರೆದ ಮುಖಪುಟದಲ್ಲಿ ಇತ್ತೀಚಿನ ಪ್ರಕಟಣೆಗಳು ಎಂಬಲ್ಲಿ ಗಮನಿಸಿ.
ಮೇ 02ರಂದು ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗಳನ್ನು ವಿಷಯವಾರು ಬಿಡುಗಡೆ ಮಾಡಲಾಗಿದೆ.
ನೀವು ಪರೀಕ್ಷೆ ಬರೆದ ವಿಷಯವನ್ನು ಆಯ್ಕೆ ಮಾಡಿ ಕ್ಲಿಕ್ ಮಾಡಿ.
ಪಿಡಿಎಫ್‌ ಫೈಲ್‌ ಓಪನ್ ಆಗುತ್ತದೆ.
ಹೆಸರು, ರಿಜಿಸ್ಟರ್ ನಂಬರ್ ಪ್ರಕಾರ ನಿಮ್ಮ ಅಂಕಗಳನ್ನು ಚೆಕ್‌ ಮಾಡಿಕೊಳ್ಳಿ.
ಆಕ್ಷೇಪಣೆಗಳು ಇದ್ದಲ್ಲಿ ಮೇಲೆ ತಿಳಿಸಿದಂತೆ ಸವಿವರ ಮಾಹಿತಿಗಳೊಂದಿಗೆ ಇ-ಮೇಲ್ ವಿಳಾಸಕ್ಕೆ ಕಳುಹಿಸಿ.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ಶಿಕ್ಷಣ

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

ವೃತ್ತಿಯನ್ನು ಆಯ್ಕೆ ಮಾಡುವುದು ಜೀವನದ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವು ಕಡಿಮೆ ಅವಧಿಯಲ್ಲಿ ಯಶಸ್ಸಿನ ದೊಡ್ಡ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ತಮ್ಮ ನೆಚ್ಚಿನ ಕ್ಷೇತ್ರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಅದಕ್ಕಾಗಿ ಎಸ್ ಎಸ್ ಎಲ್ ಸಿ ಮುಗಿಸಿರುವ ವಿದ್ಯಾರ್ಥಿಗಳೇ (Best Courses After SSLC) ನಿಮಗೆ ಸೂಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Best Courses After SSLC
Koo

ಎಸ್ ಎಸ್ ಎಲ್ ಸಿ (Best Courses After SSLC) ಬಳಿಕ ಮುಂದೇನು ಎಂಬ ಚಿಂತೆಯಲ್ಲಿದ್ದೀರಾ? ವಿಜ್ಞಾನ (Science), ವಾಣಿಜ್ಯ (commerce) ಅಥವಾ ಕಲೆ (arts) ಈ ಮೂರು ವಿಷಯಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲವಿದೆಯೇ ? ಯಾವ ವಿಷಯವನ್ನು ಆಯ್ಕೆ ಮಾಡಿದರೆ ಮುಂದೆ ಯಾವ ಉದ್ಯೋಗಕ್ಕೆ (After SSLC career options) ಸೇರಿಕೊಳ್ಳಬಹುದು ಎನ್ನುವ ಪ್ರಶ್ನೆ ಕಾಡುತ್ತಿದೆಯೇ ? ಹಾಗಿದ್ದರೆ ಇಲ್ಲಿದೆ ನಿಮಗೆ ಸೂಕ್ತ ಮಾಹಿತಿ.

CAREERS

10 ನೇ ತರಗತಿಯ ಫಲಿತಾಂಶಗಳು ಹೊರಬಂದ ಅನಂತರ ಹೆಚ್ಚಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಮಾನ್ಯ ಗೊಂದಲಗಳು ಇದಾಗಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಅಥವಾ ಪೋಷಕರ ಒತ್ತಡದಿಂದಾಗಿ ತಮ್ಮ ಮಾರ್ಗವನ್ನು ಆಯ್ಕೆ ಮಾಡುವಾಗ ತಪ್ಪುಗಳನ್ನು ಮಾಡುತ್ತಾರೆ. ವೃತ್ತಿಯನ್ನು ಆಯ್ಕೆ ಮಾಡುವುದು ಜೀವನದ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವು ಕಡಿಮೆ ಅವಧಿಯಲ್ಲಿ ಯಶಸ್ಸಿನ ದೊಡ್ಡ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ತಮ್ಮ ನೆಚ್ಚಿನ ಕ್ಷೇತ್ರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ.

indian students

ವಿಜ್ಞಾನ, ವಾಣಿಜ್ಯ ಅಥವಾ ಕಲೆ ಈ ಮೂರರಲ್ಲಿ ಯಾವುದು ಎನ್ನುವುದು ಹೆಚ್ಚಿನ ವಿದ್ಯಾರ್ಥಿಗಳು ಎದುರಿಸುವ ಸಾಮಾನ್ಯ ಗೊಂದಲವಾಗಿದೆ. ಕೆಲವು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಏನನ್ನು ಬಯಸುತ್ತಾರೆ ಎಂಬುದರ ಬಗ್ಗೆ ಬಹಳ ಸ್ಪಷ್ಟತೆಯನ್ನು ಹೊಂದಿರುತ್ತಾರೆ. ಆದರೆ ಮತ್ತೊಂದೆಡೆ 10ನೇ ತರಗತಿಯ ಅನಂತರ ತಮ್ಮ ವೃತ್ತಿಯನ್ನು ಆಯ್ಕೆ ಮಾಡುವಾಗ ಗೊಂದಲಕ್ಕೊಳಗಾಗುವ ಮತ್ತು ಮುಂದಿನ ಭವಿಷ್ಯದ ಬಗ್ಗೆ ಸುಳಿವೇ ಇಲ್ಲದ ಅನೇಕ ವಿದ್ಯಾರ್ಥಿಗಳಿದ್ದಾರೆ. ಸರಿಯಾದ ಮಾರ್ಗವನ್ನು ಆರಿಸುವುದು ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರಕ್ಕೂ ಸಾಕಷ್ಟು ಅವಕಾಶಗಳಿವೆ. ಆದರೆ ಒಬ್ಬರು ಯಾವಾಗಲೂ ತಮ್ಮ ಆಸಕ್ತಿಗಳಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬೇಕು.

10 ನೇ ತರಗತಿಯಲ್ಲಿ ಉತ್ತೀರ್ಣರಾದ ಅನಂತರ ಟಾಪ್ 5 ವೃತ್ತಿ ಆಯ್ಕೆಗಳ ಕುರಿತು ಮಾಹಿತಿ ಇಲ್ಲಿವೆ.


ವಿಜ್ಞಾನ

ವಿಜ್ಞಾನವು ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸಂಶೋಧನಾ ಪಾತ್ರಗಳಂತಹ ಅನೇಕ ವೃತ್ತಿ ಆಯ್ಕೆಗಳನ್ನು ನೀಡುತ್ತದೆ. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಇದು ಅತ್ಯಂತ ನೆಚ್ಚಿನ ವೃತ್ತಿ ಆಯ್ಕೆಯಾಗಿದೆ. ವಿಜ್ಞಾನ ಆಯ್ಕೆ ಮಾಡುವ ಪ್ರಮುಖ ಪ್ರಯೋಜನವೆಂದರೆ 12 ನೇ ತರಗತಿಯ ಅನಂತರ ವಿಜ್ಞಾನದಿಂದ ವಾಣಿಜ್ಯಕ್ಕೆ ಅಥವಾ ವಿಜ್ಞಾನಕ್ಕೆ ಕಲೆಗೆ ಬದಲಾಯಿಸಬಹುದು. 12 ನೇ ತರಗತಿಯ ಅನಂತರ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಹಲವಾರು ವೃತ್ತಿ ಆಯ್ಕೆಗಳು ಲಭ್ಯವಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮುಖ್ಯ ವಿಷಯಗಳಾಗಿವೆ. ಆದರೆ ಗಣಿತವನ್ನು ಇಷ್ಟಪಡದ ಅಥವಾ ಅದರಲ್ಲಿ ಆಸಕ್ತಿಯಿಲ್ಲದ ಅನೇಕ ವಿದ್ಯಾರ್ಥಿಗಳಿದ್ದಾರೆ. ಆದರೆ ನೀವು ವೈದ್ಯಕೀಯ ವೃತ್ತಿಯನ್ನು ಮುಂದುವರಿಸಲು ಬಯಸಿದರೆ ನೀವು ಗಣಿತವನ್ನು ಬಿಟ್ಟು ಇತರ ವಿಷಯಗಳನ್ನು ಆರಿಸಿಕೊಳ್ಳಬಹುದು.

ವೃತ್ತಿ ಆಯ್ಕೆಗಳು

ವಿಜ್ಞಾನ ವಿದ್ಯಾರ್ಥಿಗಳಿಗೆ ಐದು ಪ್ರಮುಖ ವೃತ್ತಿ ಆಯ್ಕೆಗಳಿವೆ. ಬಿಟೆಕ್/ಬಿಇ, ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ (MBBS), ಬ್ಯಾಚುಲರ್ ಆಫ್ ಫಾರ್ಮಸಿ, ಬ್ಯಾಚುಲರ್ ಆಫ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ, ಬಿಎಸ್ ಸಿ ಹೋಮ್ ಸೈನ್ಸ್ / ಫೊರೆನ್ಸಿಕ್ ಸೈನ್ಸ್.


ವಾಣಿಜ್ಯ

ವಿಜ್ಞಾನದ ಅನಂತರ ವಾಣಿಜ್ಯ ವಿಷಯವು ಎರಡನೇ ಅತ್ಯಂತ ಜನಪ್ರಿಯ ವೃತ್ತಿ ಆಯ್ಕೆಯಾಗಿದೆ. ವ್ಯಾಪಾರಕ್ಕೆ ವಾಣಿಜ್ಯವು ಉತ್ತಮವಾಗಿದೆ. ಸಂಖ್ಯೆ, ಹಣಕಾಸು ಮತ್ತು ಅರ್ಥಶಾಸ್ತ್ರ ಇಷ್ಟದ ವಿಷಯವಾಗಿದ್ದರೆ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು. ಚಾರ್ಟರ್ಡ್ ಅಕೌಂಟೆಂಟ್, ಎಂಬಿಎ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಹೂಡಿಕೆಯಂತಹ ವ್ಯಾಪಕವಾದ ಆಯ್ಕೆಗಳನ್ನು ಇದು ನೀಡುತ್ತದೆ. ಅಕೌಂಟೆನ್ಸಿ, ಹಣಕಾಸು ಮತ್ತು ಅರ್ಥಶಾಸ್ತ್ರದೊಂದಿಗೆ ಪರಿಚಿತರಾಗಿರುವ ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿ ಆಯ್ಕೆಗಳು ಇಂತಿವೆ. ಚಾರ್ಟರ್ಡ್ ಅಕೌಂಟೆಂಟ್, ವ್ಯಾಪಾರ ನಿರ್ವಹಣೆ, ಜಾಹೀರಾತು ಮತ್ತು ಮಾರಾಟ ನಿರ್ವಹಣೆ, ಡಿಜಿಟಲ್ ಮಾರ್ಕೆಟಿಂಗ್, ಮಾನವ ಸಂಪನ್ಮೂಲ ಅಭಿವೃದ್ಧಿ.


ಕಲೆ ಅಥವಾ ಮಾನವಶಾಸ್ತ್ರ

ಕಲೆ ಅಥವಾ ಮಾನವೀಯ ವಿಷಯಗಳ ಬಗ್ಗೆ ಶೈಕ್ಷಣಿಕ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುವವರು ಸೃಜನಶೀಲರಾಗಿದ್ದರೆ ಮತ್ತು ಮಾನವೀಯತೆಗೆ ಆಳವಾಗಿ ಧುಮುಕಲು ಬಯಸಿದರೆ ಕಲೆ ಅತ್ಯುತ್ತಮ ಆಯ್ಕೆಯಾಗಿದೆ. ಕಲಾ ವಿದ್ಯಾರ್ಥಿಗಳಿಗೆ ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ ಮುಖ್ಯ ವಿಷಯಗಳು.
ಆರ್ಟ್ಸ್ ಈಗ ವೃತ್ತಿಜೀವನದ ಪರ್ಯಾಯವನ್ನು ನೀಡುತ್ತದೆ. ಇದು ವಿಜ್ಞಾನ ಮತ್ತು ವಾಣಿಜ್ಯದಿಂದ ನೀಡಲಾಗುವ ಸಮಾನವಾಗಿ ಲಾಭದಾಯಕವಾಗಿದೆ. ಕಲಾ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಉತ್ಪನ್ನ ವಿನ್ಯಾಸ, ಮಾಧ್ಯಮ / ಪತ್ರಿಕೋದ್ಯಮ, ಫ್ಯಾಷನ್ ತಂತ್ರಜ್ಞಾನ, ವೀಡಿಯೊ ರಚನೆ ಮತ್ತು ಸಂಪಾದನೆ, ಮಾನವ ಸಂಪನ್ಮೂಲ ತರಬೇತಿ, ಶಾಲಾ ಬೋಧನೆ ಇತ್ಯಾದಿ ಕ್ಷೇತ್ರಗಳಿಗೆ ಪ್ರವೇಶ ಪಡೆಯಬಹುದು.


ಐಟಿಐ- ಕೈಗಾರಿಕಾ ತರಬೇತಿ ಸಂಸ್ಥೆ

ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ ಅನಂತರ ಸುಲಭವಾಗಿ ಉದ್ಯೋಗವನ್ನು ಬಯಸುವ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳನ್ನು ಒದಗಿಸುವ ತರಬೇತಿ ಕೇಂದ್ರಗಳಾಗಿವೆ ಐಟಿಐ. ಯಾವುದೇ ತಾಂತ್ರಿಕ ಕೋರ್ಸ್ ಅನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಟಿಐ ಕೋರ್ಸ್‌ಗಳು ಉತ್ತಮ ಅವಕಾಶಗಳನ್ನು ಒದಗಿಸುತ್ತದೆ. ಐಟಿಐಯಲ್ಲಿ ಕೋರ್ಸ್ ಪೂರ್ಣಗೊಳಿಸುವ ವಿದ್ಯಾರ್ಥಿಯು ಕೈಗಾರಿಕಾ ಕೌಶಲ್ಯಗಳಲ್ಲಿ ತರಬೇತಿ ಪಡೆಯಬಹುದು ಮತ್ತು ಅದೇ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಜೀವನ ನಿರ್ವಹಣೆ ಮಾಡಬಹುದು. ಐಟಿಐ ಅನಂತರ ವೃತ್ತಿ ಆಯ್ಕೆಗಳು ಇಂತಿವೆ. ಪಿಡಬ್ಲ್ಯೂಡಿಗಳು ಮತ್ತು ಇತರ ಸಾರ್ವಜನಿಕ ವಲಯಗಳಲ್ಲಿ ಉದ್ಯೋಗಾವಕಾಶ, ಖಾಸಗಿ ವಲಯಗಳಲ್ಲಿ ಉದ್ಯೋಗಗಳು, ಸ್ವಯಂ ಉದ್ಯೋಗ, ವಿದೇಶಗಳಲ್ಲಿ ಉದ್ಯೋಗ, ವಿಶೇಷತೆಯಲ್ಲಿ ಹೆಚ್ಚಿನ ಅಧ್ಯಯನಗಳಿಗೆ ಅವಕಾಶವಿದೆ.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ


ಪಾಲಿಟೆಕ್ನಿಕ್ ಕೋರ್ಸ್‌

10ನೇ ತರಗತಿಯ ಅನಂತರ ವಿದ್ಯಾರ್ಥಿಗಳು ಮೆಕ್ಯಾನಿಕಲ್, ಸಿವಿಲ್, ಕೆಮಿಕಲ್, ಕಂಪ್ಯೂಟರ್, ಆಟೋಮೊಬೈಲ್ ನಂತಹ ಪಾಲಿಟೆಕ್ನಿಕ್ ಕೋರ್ಸ್‌ಗಳಿಗೆ ಹೋಗಬಹುದು. ಈ ಕಾಲೇಜುಗಳು 3 ವರ್ಷ, 2 ವರ್ಷ ಮತ್ತು 1 ವರ್ಷದ ಡಿಪ್ಲೊಮಾ ಕೋರ್ಸ್‌ಗಳನ್ನು ಒದಗಿಸುತ್ತದೆ. ಪಾಲಿಟೆಕ್ನಿಕ್ ಕೋರ್ಸ್ ಅನಂತರ ವೃತ್ತಿಯಲ್ಲಿ ಮುಖ್ಯವಾಗಿ ಖಾಸಗಿ ವಲಯದ ಉದ್ಯೋಗಗಳು, ಸರ್ಕಾರಿ ವಲಯದ ಉದ್ಯೋಗಗಳು, ಉನ್ನತ ಅಧ್ಯಯನಗಳು, ಸ್ವಯಂ ಉದ್ಯೋಗಿ, ಸ್ವಂತ ವ್ಯಾಪಾರವನ್ನು ನಡೆಸಲು ಅವಕಾಶವಿದೆ.

Continue Reading

ಪ್ರಮುಖ ಸುದ್ದಿ

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

SSLC Result 2024: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

VISTARANEWS.COM


on

karnataka SSLC result 2024
Koo

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್‌ (SSLC result) ಪ್ರಕಟಿಸುವ ಸಾಧ್ಯತೆಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

2023 & 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ರಿಸಲ್ಟ್ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ, ಕಾತರ ಹೆಚ್ಚಿದೆ. ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪರೀಕ್ಷಾ ಮಂಡಳಿ ಅಧಿಕಾರಿಗಳು ಕೂಡ ರಿಸಲ್ಟ್ ರಿವೀಲ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ.

ಮೂರು ಅವಕಾಶ

ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಈ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಲ್ಲಿ ಸಮಾಧಾನವಾಗದಿದ್ದರೆ ವಿದ್ಯಾರ್ಥಿ ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಬಹುದಿತ್ತು. ಆದರೆ, ಪೂರಕ ಪರೀಕ್ಷೆಯಲ್ಲೇನಾದರೂ ಇನ್ನೂ ಕಳಪೆ ಫಲಿತಾಂಶ ಬಂದರೆ ಅಥವಾ ಫೇಲಾದರೆ ವಾರ್ಷಿಕ ಪರೀಕ್ಷೆಯ ಫಲಿತಾಂಶ ಉಳಿಸಿಕೊಳ್ಳಲು ಅವಕಾಶವಿರಲಿಲ್ಲ. ಈಗ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಉಳಿಸಿಕೊಳ್ಳಬಹುದು.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Continue Reading
Advertisement
Aishwarya Rajinikanth new house priceless reaction Rajinikanth
ಕಾಲಿವುಡ್5 mins ago

Aishwarya Rajinikanth: ಮಗಳ ಹೊಸ ಮನೆ ಕಂಡು ಹುಬ್ಬೇರಿಸಿದ ರಜನಿಕಾಂತ್!

Josh Baker
ಕ್ರೀಡೆ7 mins ago

Josh Baker: 6 ವಿಕೆಟ್‌ ಪಡೆದು ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಇಂಗ್ಲೆಂಡ್ ಕ್ರಿಕೆಟಿಗ

International Firefighters Day 2024
ಪ್ರಮುಖ ಸುದ್ದಿ23 mins ago

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

Nijjar Killling
ವಿದೇಶ25 mins ago

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Vettaiyan Movie Rajinikanth And Amitabh Bachchan Poses Together
ಸಿನಿಮಾ27 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ32 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ45 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್47 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ57 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ57 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ20 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌