Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ - Vistara News

ಶಿಕ್ಷಣ

Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Which is best after SSLC: ಅವಕಾಶಗಳು ಕೆಲವೊಮ್ಮೆ ನಮ್ಮ ಮನೆ ಬಾಗಿಲು ಬಡಿಯುತ್ತದೆ. ಆಗ ಅದನ್ನು ತೆರೆದು ಮುಕ್ತವಾಗಿ ಸ್ವಾಗತಿಸಬೇಕಾದರೆ ನಾವು ಚೆನ್ನಾಗಿ ಸಿದ್ಧರಾಗಿರುವುದು ಬಹು ಮುಖ್ಯ. ಇದಕ್ಕಾಗಿ ಸರಿಯಾದ ಯೋಜನೆ ಹಾಕಿಕೊಳ್ಳಲು ಮತ್ತು ನಮ್ಮ ಸುಂದರ ಭವಿಷ್ಯವನ್ನು ರೂಪಿಸಲು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈಗ ಸರಿಯಾದ ಸಮಯ. ಎಸ್ ಎಸ್ ಎಲ್ ಸಿ ಬಳಿಕ ಮುಂದೇನು ಮತ್ತೆ ಯಾಕೆ, ಹೇಗೆ ಎಂಬುದನ್ನು ಮೊದಲು ನಿಮ್ಮನ್ನು ನೀವು ಕೇಳಿಕೊಳ್ಳಿ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

After SSLC
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಸ್ ಎಸ್ ಎಲ್ ಸಿ ಫಲಿತಾಂಶದ (sslc result) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ (students) ಮನದಲ್ಲಿ ಈಗ ಮುಂದೇನು (Which is best After SSLC) ಎನ್ನುವ ಚಿಂತೆಯಂತೂ (tension) ಕಾಡುತ್ತಿದೆ. ಕೆಲವರು ಈಗಾಗಲೇ ತಮ್ಮ ಗುರಿಯನ್ನು (life goal) ನಿರ್ಧರಿಸಿದ್ದರೆ, ಇನ್ನು ಕೆಲವರು ಗೊಂದಲದಲ್ಲಿದ್ದಾರೆ. ಈ ಸಂದರ್ಭದಲ್ಲಿ ಮನೆ ಮಂದಿಯೂ ಚಿಂತಾಕ್ರಾಂತರಾಗಿರುತ್ತಾರೆ. ಮಕ್ಕಳ ಸುಭದ್ರ ಭವಿಷ್ಯಕ್ಕಾಗಿ ಅವರು ತಮ್ಮ ಅನುಭವದ ಆಧಾರದಲ್ಲಿ ಹಲವು ಸಲಹೆಗಳನ್ನು ನೀಡುತ್ತಾರೆ.

ಎಸ್ ಎಸ್ ಎಲ್ ಸಿ ಅನಂತರ ಮುಂದೇನು? ವಿಜ್ಞಾನ, ವಾಣಿಜ್ಯ ಅಥವಾ ಕಲೆ ಇವುಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ? ಎನ್ನುವ ಪ್ರಶ್ನೆಗಳು ಮನದಲ್ಲಿ ಉದ್ಭವಿಸುವುದು ಸಹಜ. ಯಾವುದೇ ವಿಷಯವನ್ನು ಬೇಕಾದರೂ ಆಯ್ದುಕೊಳ್ಳಿ. ಆದರೆ ಅದಕ್ಕೂ ಮೊದಲು ವೃತ್ತಿ ಜೀವನದ ಗುರಿ ಏನು ಎಂಬುದನ್ನು ನಿರ್ಧರಿಸಿ ಮತ್ತು ಅದಕ್ಕೆ ಸೂಕ್ತವಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಿ.

ಎಸ್ ಎಸ್ ಎಲ್ ಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಮುಂದೇನಾಗಬೇಕು ಎಂಬುದನ್ನು ಸ್ಪಷ್ಟವಾಗಿ ನಿರ್ಧರಿಸಲು ಸೂಕ್ತ ಸಮಯ. ವೃತ್ತಿಜೀವನಕ್ಕೆ ಸುಲಭವಾಗಿ ಪ್ರವೇಶಿಸಲು ನೂರಾರು ಅವಕಾಶಗಳು ಈ ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತದೆ. ಆಗ ಗೊಂದಲಗಳಾಗುವುದು ಸಹಜ. ಇದನ್ನು ನಿವಾರಿಸಲು ಇಲ್ಲಿರುವ ಪ್ರಮುಖ ಅಂಶಗಳು ನಿಮಗೆ ಸಹಾಯ ಮಾಡಬಹುದು ಮತ್ತು ಉತ್ತಮ ವೃತ್ತಿ ಮಾರ್ಗಕ್ಕೆ ಮಾರ್ಗದರ್ಶನ ನೀಡಬಹುದು.

ಇದನ್ನೂ ಓದಿ: JEE Main 2024: ವಿದ್ಯಾರ್ಥಿಗಳೇ ಗಮನಿಸಿ; ಏಪ್ರಿಲ್‌ 25ರಂದು ಜೆಇಇ ರಿಸಲ್ಟ್‌, ಹೀಗೆ ಚೆಕ್‌ ಮಾಡಿ

ಪ್ರತಿಯೊಂದು ಕ್ಷೇತ್ರದಲ್ಲೂ ಈಗ ಹೆಚ್ಚಿನ ಅವಕಾಶಗಳಿದೆ. ಆಸಕ್ತಿ, ಯೋಗ್ಯತೆ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಸೂಕ್ತ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಯಾವುದೇ ಕೋರ್ಸ್ ಗಳನ್ನು ಆಯ್ದುಕೊಳ್ಳುವ ಮೊದಲು ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಮೌಲ್ಯಮಾಪನ ಮಾಡಿಕೊಂಡು ವಿಶ್ಲೇಷಣೆ ನಡೆಸಿ. ಜೊತೆಗೆ ವೃತ್ತಿಜೀವನದ ಅವಶ್ಯಕತೆಗಳ ಬಗ್ಗೆ ತಿಳಿದುಕೊಳ್ಳಿ.

ಆಸಕ್ತಿಗಳ ಆಧಾರದಲ್ಲಿ ಕೋರ್ಸ್ ಆಯ್ಕೆ ಮಾಡಿದ ಬಳಿಕ ಸರಿಯಾದ ಕೌಶಲ್ಯ ಮತ್ತು ಸಾಮರ್ಥ್ಯ ಇಲ್ಲದೇ ಇದ್ದರೆ ಭವಿಷ್ಯದಲ್ಲಿ ಅದು ಸಮಸ್ಯೆಯನ್ನು ಉಂಟುಮಾಡಬಹುದು. ಹೀಗಾಗಿ ಯಾವುದೇ ಕೋರ್ಸ್ ಆಯ್ಕೆ ಮಾಡುವ ಮೊದಲು ನಿಮ್ಮ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಯಶಸ್ವಿ ವೃತ್ತಿಜೀವನಕ್ಕಾಗಿ ಉತ್ತಮ ಮಾರ್ಗ ಮತ್ತು ಸರಿಯಾದ ಎಚ್ಚರಿಕೆಯ ಯೋಜನೆ ಅತ್ಯಗತ್ಯ. ಇದಕ್ಕಾಗಿ ವೃತ್ತಿ ಮೌಲ್ಯಮಾಪನಗಳು ಮತ್ತು ವೃತ್ತಿಪರ ವೃತ್ತಿ ಸಲಹೆಗಾರರು ಸೂಕ್ತ ಮಾರ್ಗದರ್ಶನ ನೀಡುತ್ತಾರೆ.

ಆಯ್ಕೆಗಳು ಹಲವಾರು

ಎಸ್ ಎಸ್ ಎಲ್ ಸಿ ಬಳಿಕ ನೂರಾರು ಆಯ್ಕೆಗಳು ನಮ್ಮ ಮುಂದೆ ಇರುತ್ತದೆ. ಸರಿಯಾದ ನಿರ್ಧಾರ ಕೈಗೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ನಾವು ರೂಪಿಸಿಕೊಳ್ಳಬಹುದು.


ವಿಜ್ಞಾನ (PCM/PCB)

ಇತ್ತೀಚಿನ ದಿನಗಳಲ್ಲಿ ವಿಜ್ಞಾನವು ಹೆಚ್ಚಿನವರ ಆಯ್ಕೆ ವಿಷಯವಾಗಿದೆ. ಇದು ವಿದ್ಯಾರ್ಥಿಗಳಿಗೆ ಸಾಕಷ್ಟು ದಾರಿಗಳನ್ನು ತೆರೆಯುತ್ತದೆ ಎನ್ನುವ ನಂಬಿಕೆ ಇದರ ಹಿಂದಿದೆ. ವಿಜ್ಞಾನವನ್ನು ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ 10ನೇ ತರಗತಿಯ ಬಳಿಕ ಇರುವ ದಾರಿಗಳು ಹಲವು.
ಪಿಸಿಎಂ ಅನ್ನು ಅಧ್ಯಯನ ಮಾಡಿದರೆ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸಸ್, ರಕ್ಷಣಾ ಸೇವೆಗಳು, ಮರ್ಚೆಂಟ್ ನೇವಿ ಇತ್ಯಾದಿಗಳಂತಹ ವೃತ್ತಿಗಳಿಗೆ ಹೋಗಬಹುದು.
ಪಿಸಿಬಿ ಅನ್ನು ಅಧ್ಯಯನ ಮಾಡಿದರೆ ಔಷಧ, ಫಿಸಿಯೋಥೆರಪಿ, ಕೃಷಿ, ಪೋಷಣೆ ಮತ್ತು ಆಹಾರ ಪದ್ಧತಿ, ದಂತವೈದ್ಯಶಾಸ್ತ್ರ ಮೊದಲಾದವುಗಳನ್ನು ಆಯ್ಕೆ ಮಾಡಬಹುದು. .
ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತದಂತಹ ಈ ಪ್ರಮುಖ ವಿಷಯಗಳ ಹೊರತಾಗಿ, ಇಂಗ್ಲಿಷ್‌ ಕಡ್ಡಾಯ ಭಾಷಾ ವಿಷಯವಿರುತ್ತದೆ. ಇಲ್ಲಿ ಐದು ಮುಖ್ಯ ವಿಷಯಗಳನ್ನು ಆಯ್ಕೆ ಮಾಡಬೇಕು. ಇವುಗಳ ಜೊತೆಗೆ ಪ್ರಯೋಗಾಲಯಗಳಲ್ಲಿ ಪ್ರಾಯೋಗಿಕ ತರಬೇತಿಯನ್ನೂ ಪಡೆಯಬೇಕಾಗುತ್ತದೆ.


ವಾಣಿಜ್ಯ

ಸ್ವಂತ ವ್ಯವಹಾರ ನಡೆಸಲು ಆಸಕ್ತಿ ಇರುವವರಿಗೆ, ಹಣಕಾಸು ವೃತ್ತಿಯಲ್ಲಿ ತೊಡಗಬೇಕು ಎನ್ನುವವರಿಗೆ ಅರ್ಥಶಾಸ್ತ್ರ ಮತ್ತು ಗಣಿತ ಉತ್ತಮ ಆಯ್ಕೆ. ವಾಣಿಜ್ಯ ಶಾಸ್ತ್ರದ ಪ್ರಮುಖ ವಿಷಯಗಳೆಂದರೆ ಅಕೌಂಟೆನ್ಸಿ, ಅರ್ಥಶಾಸ್ತ್ರ ಮತ್ತು ವ್ಯವಹಾರ ಅಧ್ಯಯನಗಳು. ಕಡ್ಡಾಯ ಭಾಷಾ ವಿಷಯವನ್ನು ಇದರೊಂದಿಗೆ ಅಧ್ಯಯನ ಮಾಡಬೇಕು. ವಾಣಿಜ್ಯ ವಿದ್ಯಾರ್ಥಿಗಳಿಗೆ 10ನೇ ತರಗತಿ ಅನಂತರ ಚಾರ್ಟರ್ಡ್ ಅಕೌಂಟೆನ್ಸಿ, ಬ್ಯಾಂಕಿಂಗ್, ವಿಮೆ, ಹಣಕಾಸು, ಸ್ಟಾಕ್ ಬ್ರೋಕಿಂಗ್, ಹಣಕಾಸು ಮೊದಲಾದ ವೃತ್ತಿ ಆಯ್ಕೆಗೆ ಅವಕಾಶಗಳಿರುತ್ತವೆ.


ಕಲೆ, ಮಾನವಶಾಸ್ತ್ರ

ಸೃಜನಶೀಲರಾಗಿದ್ದರೆ, ಬಲವಾದ ಸಂವಹನ ಕೌಶಲಗಳನ್ನು ಹೊಂದಿದ್ದರೆ ಮತ್ತು ಶೈಕ್ಷಣಿಕ ಸಂಶೋಧನೆಯನ್ನು ಮುಂದುವರಿಸಲು ಬಯಸಿದರೆ ಇದು ಸರಿಯಾದ ಆಯ್ಕೆಯಾಗಿದೆ.
ಕಲೆಯಲ್ಲಿ ನೀಡಲಾಗುವ ಪ್ರಮುಖ ವಿಷಯಗಳೆಂದರೆ ಸಮಾಜಶಾಸ್ತ್ರ, ಇತಿಹಾಸ, ಸಾಹಿತ್ಯ, ರಾಜ್ಯಶಾಸ್ತ್ರ, ಮನೋವಿಜ್ಞಾನ, ಅರ್ಥಶಾಸ್ತ್ರ, ತತ್ವಶಾಸ್ತ್ರ, ಲಲಿತಕಲೆ, ಇತ್ಯಾದಿ ಜೊತೆಗೆ ಒಂದು ಕಡ್ಡಾಯ ಭಾಷಾ ವಿಷಯ. ಹ್ಯುಮಾನಿಟೀಸ್ ವಿದ್ಯಾರ್ಥಿಗಳಿಗೆ 10 ನೇ ತರಗತಿಯ ಅನಂತರ ಮುಂದಿನದು ಮಾಧ್ಯಮ, ಪತ್ರಿಕೋದ್ಯಮ, ಸಾಹಿತ್ಯ, ಸಮಾಜಕಾರ್ಯ, ಉತ್ಪನ್ನ ವಿನ್ಯಾಸ, ಬರವಣಿಗೆ, ಬೋಧನೆ ಮತ್ತು ಇತರ ಹಲವು ವೃತ್ತಿ ಆಯ್ಕೆಗಳಿವೆ.


ವೃತ್ತಿಪರ ಕೋರ್ಸ್‌ಗಳು

ಎಸ್‌ಎಸ್‌ಎಲ್‌ಸಿ ಬಳಿಕ ವೃತ್ತಿಪರ ಕೋರ್ಸ್‌ಗಳನ್ನೂ ಸೇರಿಕೊಳ್ಳಬಹುದು. ಇದು 12ನೇ ತರಗತಿ ಪೂರ್ಣಗೊಳಿಸಿದ ತಕ್ಷಣ ನಿಮ್ಮನ್ನು ಕೆಲಸಕ್ಕೆ ಸಿದ್ಧಪಡಿಸುತ್ತವೆ. ಶಾಲೆಯು ನೀಡುವ ವಿಷಯಗಳ ಆಧಾರದ ಮೇಲೆ ವೃತ್ತಿಪರ ವಿಷಯದ ಆಯ್ಕೆಗಳಿರುತ್ತವೆ. ಇದರಲ್ಲಿ ಲೆಕ್ಕಪತ್ರ ನಿರ್ವಹಣೆ, ತೆರಿಗೆ, ಆಟೋ ಶಾಪ್, ದುರಸ್ತಿ, ವ್ಯಾಪಾರ ಕಾರ್ಯಾಚರಣೆಗಳು, ಆಡಳಿತ, ಬಂಡವಾಳ, ಮಾರುಕಟ್ಟೆ ಕಾರ್ಯಾಚರಣೆಗಳು, ನಾಗರಿಕ, ಎಂಜಿನಿಯರಿಂಗ್, ತಂತ್ರಜ್ಞ, ಆಹಾರ ಪೋಷಣೆ, ಆಹಾರ ಪದ್ಧತಿ, ಆಹಾರ ಉತ್ಪಾದನೆ, ಆತಿಥ್ಯ ನಿರ್ವಹಣೆ, ಸಂಗೀತ ಉತ್ಪಾದನೆ, ಜವಳಿ ವಿನ್ಯಾಸ, ವೆಬ್ ಅಪ್ಲಿಕೇಶನ್‌ಗಳು ಇತ್ಯಾದಿ ಹಲವಾರು ವಿಷಯಗಳಿದ್ದು, ಮುಂದೆ ಸಾಕಷ್ಟು ಅವಕಾಶಗಳನ್ನು ನಿಮ್ಮ ಮುಂದೆ ತೆರೆದಿಡುತ್ತದೆ.

ಕುಟುಂಬದ ಹಣಕಾಸಿನ ಜವಾಬ್ದಾರಿಯೊಂದಿಗೆ ತಮ್ಮ ಕಲಿಕೆಯನ್ನು ಮುಂದುವರಿಸಬೇಕು ಎಂದು ಬಯಸುವವರಿಗೂ ಎಸ್ ಎಸ್ ಎಲ್ ಸಿ ಮುಗಿದ ತಕ್ಷಣ ಹಲವು ಆಯ್ಕೆಗಳನ್ನು ನೀಡುತ್ತದೆ.
ಐಟಿಐ ಗಳು, ಪಾಲಿಟೆಕ್ನಿಕ್ ಡಿಪ್ಲೋಮಾಗಳು, ಪ್ಯಾರಾಮೆಡಿಕಲ್ ಮತ್ತು ವೃತ್ತಿಪರ ಕೋರ್ಸ್‌ಗಳು ಶೀಘ್ರದಲ್ಲೇ ನಿಮ್ಮನ್ನು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುತ್ತದೆ. ಇದು 10 ನೇ ತರಗತಿಯನ್ನು ಪೂರ್ಣಗೊಳಿಸಿದ ತಕ್ಷಣ ಉದ್ಯೋಗವನ್ನು ಹುಡುಕಲು ಸಹಾಯ ಮಾಡುತ್ತದೆ.

ಐಟಿಐ (ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್)

ಐಟಿಐ ಪ್ರಮಾಣಪತ್ರಗಳನ್ನು ತಾಂತ್ರಿಕ ಮತ್ತು ಕೆಲವು ತಾಂತ್ರಿಕೇತರ ಕೋರ್ಸ್‌ಗಳಲ್ಲಿ 100ಕ್ಕೂ ಹೆಚ್ಚು ವಿಶೇಷತೆಗಳಲ್ಲಿ ನೀಡಲಾಗುತ್ತದೆ. ಇದು ಸರ್ಕಾರಿ ತರಬೇತಿ ಸಂಸ್ಥೆಯಾಗಿದ್ದು ಅದು ನಿಮಗೆ ತರಬೇತಿ ನೀಡುತ್ತದೆ ಮತ್ತು ವಿವಿಧ ಕೈಗಾರಿಕೆಗಳಿಗೆ ನಿಮ್ಮನ್ನು ನುರಿತರನ್ನಾಗಿ ಮಾಡುತ್ತದೆ. ಐಟಿಐ ಕೋರ್ಸ್‌ಗಳ ಅವಧಿಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಇರುತ್ತದೆ.

ಉನ್ನತ ಐಟಿಐ ಕೋರ್ಸ್‌ಗಳು ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ನಿರ್ವಹಣೆ, ಡ್ರಾಫ್ಟ್‌ಮನ್ (ಸಿವಿಲ್), ಮೆಕ್ಯಾನಿಕ್ (ಆಟೋ ಎಲೆಕ್ಟ್ರಿಕಲ್ಸ್ & ಎಲೆಕ್ಟ್ರಾನಿಕ್ಸ್), ಇಂಟೀರಿಯರ್ ಡೆಕೋರೇಶನ್ ಮತ್ತು ಡಿಸೈನಿಂಗ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಬೇಕರ್ ಮತ್ತು ಮಿಠಾಯಿಗಾರ, ಶೀಟ್ ಮೆಟಲ್, ಪ್ಲಂಬಿಂಗ್ ಇತ್ಯಾದಿ.

ಇನ್ನು ಪಿಡಬ್ಲ್ಯೂ ಡಿಗಳಂತಹ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಪಾಲಿಟೆಕ್ನಿಕ್ ಕೋರ್ಸ್‌ಗಳು ಸಹಾಯ ಮಾಡುತ್ತದೆ.

ಕಡಿಮೆ ವೆಚ್ಚದ ಡಿಪ್ಲೊಮಾ ಕೋರ್ಸ್‌ಗಳಿದ್ದು, ಇದನ್ನು 10 ಅಥವಾ 12 ನೇ ತರಗತಿಯ ಬಳಿಕವೂ ಮಾಡಬಹುದು. ಇದರಲ್ಲಿ ಮೆಕ್ಯಾನಿಕಲ್, ಸಿವಿಲ್, ಕೆಮಿಕಲ್, ಕಂಪ್ಯೂಟರ್, ಮೆರೈನ್ ಟೆಕ್ನಾಲಜಿ, ಟೆಕ್ಸ್‌ಟೈಲ್ ಟೆಕ್ನಾಲಜಿ, ಆಟೋಮೊಬೈಲ್, ಇತ್ಯಾದಿ ಕೋರ್ಸ್‌ಗಳನ್ನು ಆಯ್ಕೆ ಮಾಡಬಹುದು.


ಪ್ಯಾರಾ ಮೆಡಿಕಲ್ ಕೋರ್ಸ್‌ಗಳು

ಪ್ಯಾರಾ ಮೆಡಿಕಲ್ ಶಾಖೆಯು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಉತ್ತಮ ಅವಕಾಶಗಳನ್ನು ನೀಡುತ್ತದೆ. ಪ್ಯಾರಾಮೆಡಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ 10ನೇ ತರಗತಿ ಅನಂತರ ಎಕ್ಸ್-ರೇ ತಂತ್ರಜ್ಞ, ಡಯಾಲಿಸಿಸ್ ತಂತ್ರಜ್ಞ, ನರ್ಸಿಂಗ್ ಅಸಿಸ್ಟೆನ್ಸ್, ನೇತ್ರ ತಂತ್ರಜ್ಞನಾಗಿ ವೃತ್ತಿ ಜೀವನ ಪ್ರಾರಂಭಿಸಬಹುದು.

ವೃತ್ತಿಪರ ಕೋರ್ಸ್‌ಗಳು

ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ 1 ರಿಂದ 2 ವರ್ಷಗಳವರೆಗಿನ ಅಲ್ಪಾವಧಿಯ ಕೋರ್ಸ್‌ಗಳಿರುತ್ತವೆ. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (NSDC) ಮತ್ತು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನ (NSFQ) ಅಡಿಯಲ್ಲಿ ಸರ್ಕಾರವು ನೀಡುವ ಉದ್ಯೋಗ ಕೇಂದ್ರಿತ ಕೋರ್ಸ್‌ಗಳಾಗಿವೆ. ಇದರಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳೆಂದರೆ ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಫ್ಯಾಶನ್ ಡಿಸೈನಿಂಗ್, ಡೆಸ್ಕ್‌ಟಾಪ್ ಪಬ್ಲಿಷಿಂಗ್ (ಡಿಟಿಪಿ), ಆಭರಣ ವಿನ್ಯಾಸ, ಪ್ರಯಾಣ ಮತ್ತು ಪ್ರವಾಸೋದ್ಯಮ, ವೈದ್ಯಕೀಯ ಚಿತ್ರಣ ಇತ್ಯಾದಿ.

ನೆನಪಿರಲಿ

ಸರಿಯಾದ ಕೋರ್ಸ್ ಮತ್ತು ವಿಷಯಗಳ ಆಯ್ಕೆಯ ಮೇಲೆ ಗಮನ ಕೇಂದ್ರೀಕರಿಸಿ. ಇದರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುವುದು ಮತ್ತು ಉದ್ಯೋಗ ಮಾರುಕಟ್ಟೆಯಲ್ಲಿ ಅಪಾರ ಸ್ಪರ್ಧೆಗೆ ನಿಮ್ಮನ್ನು ಸಿದ್ಧಪಡಿಸುವ ಕೌಶಲ್ಯಗಳನ್ನು ಬೆಳೆಸುವುದು ಕೂಡಾ ಅತ್ಯಗತ್ಯ. ಪ್ರಪಂಚದಾದ್ಯಂತ ಏನು ನಡೆಯುತ್ತಿದೆ ಎಂಬುದರ ಮಾಹಿತಿಯೂ ಇರಲಿ. ಇದರಿಂದ ಉದ್ಯೋಗ ಕ್ಷೇತ್ರ ಪ್ರವೇಶಿಸುವುದು ಸುಲಭವಾಗುತ್ತದೆ.
ಇತರ ವಿಶಯಗಳನ್ನೂ ಕಲಿಯಿರಿ

ಉದ್ಯೋಗ ಕ್ಷೇತ್ರದಲ್ಲಿ ಈಗ ಸಾಕಷ್ಟು ಪೈಪೋಟಿ ಇದೆ. ಹೀಗಾಗಿ ನಿರಂತರ ಒಂದಲ್ಲ ಒಂದು ವಿಷಯಗಳನ್ನು ಕಲಿಯುವುದು ಒಳ್ಳೆಯದು. ಸಂವಹನ ಕೌಶಲ್ಯ ಬೆಳೆಸಿಕೊಳ್ಳುವುದು, ಹೊಸ ಭಾಷೆ ಕಲಿಕೆ ನಿಮ್ಮ ಭವಿಷ್ಯಕ್ಕೆ ಒಳ್ಳೆಯ ಅಡಿಪಾಯ ಹಾಕಿಕೊಡುತ್ತದೆ. ಅಲ್ಲದೇ ಓದುವ ಅಭ್ಯಾಸ ನಿರಂತರವಾಗಿರಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Bengaluru News: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.

VISTARANEWS.COM


on

Apollo International Public School introduced Sqay samara kale as part of the syllabus
Koo

ಬೆಂಗಳೂರು: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು (Bengaluru News) ಪರಿಚಯಿಸಿದೆ.

ಗುರುವಾರ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡಲಾಯಿತು.

ಶಾಲೆಯ ಪ್ರಾಚಾರ್ಯೆ ಡಾ. ವೇದವತಿ ಬಿ.ಎ. ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷೆ ಐಶ್ವರ್ಯ ಡಿಕೆಎಸ್ ಹೆಗ್ಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಈ ವೇಳೆ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.

Continue Reading

ದೇಶ

NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಹೇಗೆ ನೋಡುವುದು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

NEET UG 2024
Koo

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಶುಕ್ರವಾರ (ಜುಲೈ 26) ನೀಟ್‌ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಕೊನೆಗೂ ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಇನ್ನು ಪರಿಷ್ಕೃತ ಫಲಿತಾಂಶದ ಬಳಿಕ ದೇಶದ ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ. ಜೂನ್‌ 4ರಂದು ಪ್ರಕಟವಾದ ಫಲಿತಾಂಶದಲ್ಲಿ 67 ಮಂದಿ ಟಾಪ್‌ ಎನಿಸಿದ್ದರು. ಮೃದುಲ್‌ ಮಾನ್ಯ ಆನಂದ್‌, ಆಯುಷ್‌ ನೌಗ್ರೈಯಾ, ಮಜೀನ್‌ ಮಂಜೂರ್‌, ಪ್ರಚಿತಾ, ಸೌರವ್‌, ದಿವ್ಯಾಂಶ್‌, ಗನ್ಮಯ್‌ ಗಾರ್ಗ್‌, ಅರ್ಘ್ಯದೀಪ್‌ ದತ್ತ, ಶುಭಂ ಸೇನ್‌ಗುಪ್ತಾ, ಆರ್ಯನ್‌ ಯಾದವ್‌, ಪಾಲಾಂಶ ಅಗರ್ವಾಲ್‌, ರಜನೀಶ್‌ ಪಿ., ಶ್ರೀನಂದ್‌ ಶಮೀಲ್, ಮಾನೆ ನೇಹಾ ಕುಲದೀಪ್‌, ತೈಜಸ್‌ ಸಿಂಗ್‌ ಹಾಗೂ ದೇವೇಶ್‌ ಜೋಶಿ ಅವರು ಈ ಬಾರಿ ಟಾಪ್‌ ಬಂದಿದ್ದಾರೆ.

ನೀಟ್‌ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ನೀಟ್‌ ಅಧಿಕೃತ ವೆಬ್‌ಸೈಟ್‌ exams.nta.ac.in. ಗೆ ಭೇಟಿ ನೀಡಿ
  • NEET UG 2024 revised result ಎಂಬ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ
  • ಇದಾದ ಬಳಿಕ ಹೊಸ ವಿಂಡೋ ಓಪನ್‌ ಆಗಲಿದ್ದು, ಲಾಗಿನ್‌ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
  • ಆಗ ನಿಮ್ಮ ಸ್ಕ್ರೀನ್‌ ಮೇಲೆ ನೀಟ್‌ ಯುಜಿ ಫಲಿತಾಂಶ ಗೋಚರವಾಗಲಿದೆ
  • ಭವಿಷ್ಯದ ರೆಫರೆನ್ಸ್‌ಗಳಿಗಾಗಿ ನೀಟ್‌ ಪರೀಕ್ಷೆಯ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading

ದೇಶ

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

NEET UG 2024: ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ ಎಂಬುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಜತೆಗೆ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನೀಟ್‌ ವಿರುದ್ಧ ನಿರ್ಣಯವನ್ನೇ ಮಂಡಿಸಲಾಗಿದೆ. ಇದರ ಬೆನ್ನಲ್ಲೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕೃಿಗಳು, ಸ್ಫೋಟಕ ಮಾಹಿತಿ ಬಯಲಿಗೆಳೆದಿದ್ದಾರೆ. ಜಾರ್ಖಂಡ್‌ನ ಜಹಾರಿಬಾಗ್‌ನಲ್ಲಿರುವ (Hazaribagh) ಕಚೇರಿಯಿಂದಲೇ ಪ್ರಶ್ನೆಪತ್ರಿಕೆಯನ್ನು (NEET Paper Leak Case) ಕಳ್ಳತನ ಮಾಡಲಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‌

ಹೌದು, ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ. ನೀಟ್‌ ಪರೀಕ್ಷೆ ನಡೆದ ಮೇ 5ರಂದು ಪಂಕಜ್‌ ಕುಮಾರ್‌ ಅಲಿಯಾಸ್‌ ಆದಿತ್ಯ ಅಲಿಯಾಸ್‌ ಸಾಹಿಲ್‌ ಎಂಬಾತನು ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಹೋಗಿ, ಹಣ ಕೊಟ್ಟವರಿಗೆ ಅದನ್ನು ಹಂಚಿಕೆ ಮಾಡಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

Continue Reading

ದೇಶ

NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

NEET UG 2024: ನೀಟ್‌ ವೆಬ್‌ಸೈಟ್‌ನಲ್ಲಿಯೇ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ ಎಂಬ ಲಿಂಕ್‌ ಕಾಣಿಸಿಕೊಂಡಿತ್ತು. ಇದರಿಂದಾಗಿ ನೀಟ್‌ ಯುಜಿ 2024ರ ಫಲಿತಾಂಶ ಪ್ರಕಟವಾಗಿದೆ ಎಂದು ವರದಿ ಮಾಡಲಾಗಿತ್ತು. ಆದರೆ, ಇದು ಹಳೆಯ ಲಿಂಕ್‌ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿದ ಬಳಿಕ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನೀಟ್‌ ರದ್ದುಗೊಳಿಸುವ ಕುರಿತು ನಿರ್ಣಯ ಮಂಡಿಸಲಾಗುತ್ತಿದೆ. ಇದರ ಬೆನ್ನಲ್ಲೇ, ನೀಟ್‌ ಪರೀಕ್ಷೆಯ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಗುರುವಾರ (ಜುಲೈ 25) ನೀಟ್‌ ಯುಜಿ 2024 ಫಲಿತಾಂಶವನ್ನು ಪ್ರಕಟಿಸಿದೆ ಎಂಬುದಾಗಿ ವದಂತಿ ಹರಡಿದೆ. ಇದರ ಬೆನ್ನಲ್ಲೇ, ಇನ್ನೂ ಫಲಿತಾಂಶ ಪ್ರಕಟಿಸಿಲ್ಲ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.

ಕಳೆದ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ ಎಂದೇ ಹೇಳಲಾಗುತ್ತಿತ್ತು. ಆದರೆ, “ನೀಟ್‌ ಯುಜಿ 2024 ಪರಿಷ್ಕೃತ ಫಲಿತಾಂಶ ಪ್ರಕಟವಾಗಿಲ್ಲ. ವೆಬ್‌ಸೈಟ್‌ನಲ್ಲಿ ಹಳೆಯ ಲಿಂಕ್‌ ಅನ್ನೇ ಶೇರ್‌ ಮಾಡಲಾಗಿದೆ. ಶೀಘ್ರದಲ್ಲೇ ಪರಿಷ್ಕೃತ ಫಲಿತಾಂಶ ಪ್ರಕಟಿಸಲಾಗುತ್ತದೆ” ಎಂಬುದಾಗಿ ಶಿಕ್ಷಣ ಸಚಿವಾಲಯ ತಿಳಿಸಿದೆ.

NEET PG 2024
NEET PG 2024

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading
Advertisement
Actor Darshan Lata Jaiprakash says that since Darshan is a devotee of God,
ಸಿನಿಮಾ11 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ15 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ25 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ25 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ45 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ1 hour ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ1 hour ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ2 hours ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್2 hours ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌