Jio Institute: ಎಐ, ಡೇಟಾ ಸೈನ್ಸ್‌‌ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ - Vistara News

ದೇಶ

Jio Institute: ಎಐ, ಡೇಟಾ ಸೈನ್ಸ್‌‌ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ

Jio Institute: ಜಿಯೋ ಇನ್‌ಸ್ಟಿಟ್ಯೂಟ್ ಮತ್ತು ಎಐಸಿಟಿಇ ಜತೆಗೂಡಿ ಡೇಟಾ ಸೈನ್ಸ್ ಹಾಗೂ ಕೃತಕ ಬುದ್ಧಿಮತ್ತೆಯಲ್ಲಿ ಬೋಧಕ ವೃಂದಕ್ಕೆ ಹೆಚ್ಚಿನ ಜ್ಞಾನವನ್ನು ಒದಗಿಸುವ ಕೆಲಸವನ್ನು ಮಾಡಲಿವೆ.

VISTARANEWS.COM


on

Jio Institute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ, ಮಹಾರಾಷ್ಟ್ರ: ಕೃತಕ ಬುದ್ಧಿಮತ್ತೆ (ಎಐ) ಮತ್ತು ಡೇಟಾ ಸೈನ್ಸ್ ಕುರಿತು ಬೋಧಕ ವೃಂದದವರಿಗೆ ಬೆಳವಣಿಗೆ ಕಾರ್ಯಕ್ರಮಗಳಿಗಾಗಿ ಜಿಯೋ ಇನ್‌ಸ್ಟಿಟ್ಯೂಟ್ (Jio Institute) ಜತೆಗೆ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ (All India Council for Technical Education – AICTE) ಪಾಲುದಾರಿಕೆ ಮಾಡಿಕೊಂಡಿದೆ. ಎಐಸಿಟಿಇಯ ಅಟಲ್- ATAL (ಎಐಸಿಟಿಇ ತರಬೇತಿ ಮತ್ತು ಕಲಿಕೆ) ಕಾರ್ಯಕ್ರಮದ ಅಡಿಯಲ್ಲಿ ಈ ಸಹಯೋಗದ ಪ್ರಯತ್ನ ಪ್ರಾರಂಭಿಸಲಾಗಿದೆ. ಎಐಸಿಟಿಇ ಅನುಮೋದಿತ ಸಂಸ್ಥೆಗಳಿಂದ ಅಧ್ಯಾಪಕರ ಕೌಶಲವನ್ನು ಹೆಚ್ಚಿಸುವ ಮತ್ತು ಪುನರ್ ಕೌಶಲ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ವಿಶ್ವದರ್ಜೆಯ ಕೃತಕ ಬುದ್ಧಿಮತ್ತೆ (Artificial Intelligence) ಹಾಗೂ ಡೇಟಾ ಸೈನ್ಸ್ (Data Science)ಕಾರ್ಯಕ್ರಮಕ್ಕೆ ಖ್ಯಾತಿ ಪಡೆದಿರುವ ಜಿಯೋ ಇನ್‌ಸ್ಟಿಟ್ಯೂಟ್ ಈ 5-ದಿನಗಳ ವಸತಿ ಸಹಿತ ಬೋಧಕ ವೃಂದದ ಬೆಳವಣಿಗೆ ಕಾರ್ಯಕ್ರಮಕ್ಕೆ ಆಯೋಜಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.

ಎಐಸಿಟಿಇ ಅಧ್ಯಕ್ಷರಾದ ಪ್ರೊ. ಟಿ.ಜಿ. ಸೀತಾರಾಮ್ (Prof T G Sitharam) ಅವರು ಖುದ್ದಾಗಿ ಇದೇ ಆಗಸ್ಟ್ 21ರಂದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್‌ನ ಆಳವಾದ ತಿಳಿವಳಿಕೆಯೊಂದಿಗೆ ಶೈಕ್ಷಣಿಕ ನಾಯಕರು ಮತ್ತು ಹಿರಿಯ ಅಧ್ಯಾಪಕ ಸದಸ್ಯರನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಈ ಸಹಯೋಗದ ಉಪಕ್ರಮ ಹೊಂದಿದೆ ಮತ್ತು ತೀವ್ರ ಕಲಿಕೆಗಾಗಿ ಕೃತಕ ಬುದ್ಧಿಮತ್ತೆ ಪರಿಕರಗಳನ್ನು ಬಳಸಿಕೊಳ್ಳುವ ನೈತಿಕ ಪರಿಗಣನೆಗಳಿಗೆ ಒತ್ತು ನೀಡುತ್ತದೆ. ಈ ಕಾರ್ಯಕ್ರಮವು ಅಧ್ಯಾಪಕರು ಸೇರಿದಂತೆ ಆಯ್ದ ಎಐಸಿಟಿಇಯ 40 ಸದಸ್ಯರಿಗೆ ತೀವ್ರ ತರಬೇತಿಯನ್ನು ನೀಡುತ್ತದೆ.

“ಜಿಯೋ ಇನ್‌ಸ್ಟಿಟ್ಯೂಟ್ ಜತೆಗಿನ ಈ ಸಹಭಾಗಿತ್ವವು ನಮ್ಮ ಅಧ್ಯಾಪಕ ವೃಂದದವರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ಅತ್ಯಾಧುನಿಕ ಶಿಕ್ಷಣಕ್ಕೆ ಉತ್ತೇಜಿಸುವ ನಮ್ಮ ಬದ್ಧತೆಗೆ ಉದಾಹರಣೆ ಆಗಿದೆ. ಇದು ಸಂಕೀರ್ಣವಾದ ಶೈಕ್ಷಣಿಕ ವ್ಯಾಪ್ತಿಯನ್ನು ಪೂರ್ತಿಯಾಗಿ ಅನ್ವೇಷಿಸುವುದಕ್ಕೆ ಅಗತ್ಯವಾದ ಕೌಶಲಗಳ ಜತೆಗೆ ಶಿಕ್ಷಕರಿಗೆ ನೆರವು ಒದಗಿಸಲು ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಶೈಕ್ಷಣಿಕ ಉತ್ಕೃಷ್ಟತೆಯತ್ತ ಸಾಗುವ ನಮ್ಮ ಸಂಕಲ್ಪವನ್ನು ಒತ್ತಿಹೇಳುತ್ತದೆ,” ಎಂದು ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ. ಸೀತಾರಾಮನ್ ಹೇಳಿದ್ದಾರೆ.

ಪರಿಣಾಮಕಾರಿ ಬೋಧನೆ ಮತ್ತು ಕಲಿಕೆಯ ಪರಿಸರವನ್ನು ರೂಪಿಸುವುದರ ಸಲುವಾಗಿ ಒಳನೋಟಗಳೊಂದಿಗೆ ಭಾಗವಹಿಸುವವರನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಇದು ಕೃತಕ ಬುದ್ಧಿಮತ್ತೆ- ಚಾಲಿತ ಮಾಹಿತಿ ಮತ್ತು ಸಂಶೋಧನೆಯ ಹೆಚ್ಚುತ್ತಿರುವ ಪಾರಮ್ಯವನ್ನು ತಿಳಿಸುತ್ತದೆ. ಡೇಟಾ ವಿಶುಯಲೈಸೇಷನ್, ನ್ಯಾಚುರಲ್ ಲ್ಯಾಂಗ್ವೇಜ್ ಪ್ರೊಸೆಸಿಂಗ್, ಟೈಮ್ ಸೀರೀಸ್ ಮತ್ತು ಆಪ್ಟಿಮೈಸೇಶನ್, ಅಪ್ಲಿಕೇಶನ್ಸ್‌, ಜನರೇಟಿವ್ ಎಐ ಮತ್ತು ದೊಡ್ಡ ಭಾಷಾ ಮಾದರಿಗಳು ಸೇರಿದಂತೆ ವೈವಿಧ್ಯಮಯ ವಿಷಯಗಳನ್ನು ಒಳಗೊಂಡಿರುವ ಪಠ್ಯಕ್ರಮವು ವಿಜ್ಞಾನ, ಎಂಜಿನಿಯರಿಂಗ್, ಆರೋಗ್ಯ ಮತ್ತು ಉದಾರ ಕಲೆಗಳಂಥ ಕ್ಷೇತ್ರಗಳಾದ್ಯಂತ ಎಐ ಮತ್ತು ಡೇಟಾ ಸೈನ್ಸ್ ನ ದೂರಗಾಮಿ ಪರಿಣಾಮಗಳನ್ನು ಪರಿಶೀಲಿಸುತ್ತದೆ.

ಇದರ ಜತೆಗೆ ಈ ಕಾರ್ಯಕ್ರಮವು ತಾಂತ್ರಿಕ ವ್ಯಾಪ್ತಿಯ ಒಳಗೆ ಉದಯೋನ್ಮುಖ ಅವಕಾಶಗಳನ್ನು ಅನ್ವೇಷಿಸುತ್ತದೆ. ಜಾಗತಿಕ ತಜ್ಞರು ಮತ್ತು ಶಿಕ್ಷಣತಜ್ಞರ ವಿಶಿಷ್ಟ ವ್ಯಾಪ್ರಿಯಲ್ಲಿ ಕಾರ್ಯಕ್ರಮವನ್ನು ನೀಡಲಾಗುವುದು. ಜಿಯೋ ಇನ್‌ಸ್ಟಿಟ್ಯೂಟ್‌ನ ಡಾ.ಜಿ ರವಿಚಂದ್ರನ್, ಡಾ. ರವೀ ಚಿತ್ತೂರು ಮತ್ತು ಡಾ. ನಿಲಯ್ ಯಾಜ್ಞಿಕ್, ಹಾಗೆಯೇ ಡಾ. ಶೈಲೇಶ್ ಕುಮಾರ್ (ಎಐ ಸಿಒಇ, ಜಿಯೋ), ಪ್ರೊ. ವಿಷ್ಣುಪ್ರಸಾದ್ ನಾಗದೇವರ (ಮಾಜಿ ಡೀನ್, ಐಐಎಂ ಬೆಂಗಳೂರು), ಡಾ. ಲ್ಯಾರಿ ಬಿರ್ನ್‌ಬಾಮ್ (ನಾರ್ತ್-ವೆಸ್ಟರ್ನ್ ಯೂನಿವರ್ಸಿಟಿ ಅಮೆರಿಕ), ಜಾಯೆನ್ ಠಾಕ್ಕರ್ (ಮಾಜಿ-ಟ್ಯಾಬ್ಲೋ ಮತ್ತು ಐಬಿಎಂ), ಪ್ರಸಾದ್ ಜೋಶಿ (ಎಐ ಸಿಒಇ, ಜಿಯೋ) ವಿವಿಧ ಸೆಷನ್ ಗಳನ್ನು ಮುನ್ನಡೆಸುತ್ತಾರೆ.

ಈ ಸುದ್ದಿಯನ್ನೂ ಓದಿ: Education Guide : ಎಲ್ಲರ ಶಿಕ್ಷಣಕ್ಕಾಗಿ ದೂರ ಶಿಕ್ಷಣ!

ಪಾಲುದಾರಿಕೆಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ ಜಿಯೋ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಡಾ. ಪಾಲಕ್ ಶೇಠ್, “ಜಿಯೋ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಣದ ಗಡಿಗಳನ್ನು ಸತತವಾಗಿ ದಾಟುವ ಮೂಲಕ ಶೈಕ್ಷಣಿಕ ಉತ್ಕೃಷ್ಟತೆಯನ್ನು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ. ಈ ಕಾರ್ಯಕ್ರಮವು ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್‌ನ ಜ್ಞಾನವನ್ನು ನೀಡುವುದನ್ನು ಮೀರಿ ವಿಸ್ತರಿಸುತ್ತದೆ. ಇದು ಶಿಕ್ಷಕರಿಗೆ ತಮ್ಮ ವಿದ್ಯಾರ್ಥಿಗಳಲ್ಲಿ ಆಳವಾದ ನೈತಿಕ ಜವಾಬ್ದಾರಿಯನ್ನು ಬೆಳೆಸಲು ಸಬಲಗೊಳಿಸುತ್ತದೆ. ಭಾರತದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವುದಕ್ಕೆ ಕೊಡುಗೆ ನೀಡಲು ನಾವು ಬಹಳ ಉತ್ಸುಕರಾಗಿದ್ದೇವೆ,” ಎಂದಿದ್ದಾರೆ.

ಈ ಕಾರ್ಯಕ್ರಮವು ಆಗಸ್ಟ್ 25 ರಂದು ಕಲೆ ಮತ್ತು ಪರಂಪರೆಯಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯದ ಕುರಿತು ಪ್ರಬುದ್ಧ ಚರ್ಚೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಆ ನಂತರ ದಕ್ಷಿಣ ಮುಂಬೈನ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಮತ್ತು ಇತರ ಮಹತ್ವದ ಪರಂಪರೆಯ ತಾಣಗಳಿಗೆ ಭೇಟಿ ನೀಡಲಾಗುವುದು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Himanta Biswa Sarm: ಸುಮಾರು 70 ವರ್ಷಗಳ ವಿಐಪಿ ಸಂಸ್ಕೃತಿಯನ್ನು ತೊಡೆದು ಹಾಕಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಂದಾಗಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ. ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ವಿಐಪಿ ಸಂಸ್ಕೃತಿಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

VISTARANEWS.COM


on

Himanta Biswa Sarma
Koo

ದಿಸ್ಪುರ: ಅಸ್ಸಾಂನಲ್ಲಿ ಕೆಲವು ʼವಿಐಪಿ ಸಂಸ್ಕೃತಿʼ (VIP culture)ಯನ್ನು ತೊಡೆದು ಹಾಕುವುದಾಗಿ ಹೇಳಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು, ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ʼವಿಐಪಿ ಸಂಸ್ಕೃತಿʼಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

ಜತೆಗೆ “ಜುಲೈಯಿಂದ ಎಲ್ಲ ಸರ್ಕಾರಿ ನೌಕರರು ತಮ್ಮ ಸ್ವಂತ ವಿದ್ಯುತ್ ಬಳಕೆಗೆ ತಾವೇ ಪಾವತಿಸಬೇಕಾಗುತ್ತದೆ” ಎಂದೂ ತಿಳಿಸಿದ್ದಾರೆ. “ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳ ನಿವಾಸಗಳ ವಿದ್ಯುತ್ ಬಿಲ್‌ಗಳನ್ನು ಸರ್ಕಾರವೇ ಇಷ್ಟು ದಿನ ಪಾವತಿಸುತ್ತ ಬಂದಿದೆ. ಈ ವ್ಯವಸ್ಥೆ ಇಂದು ನಿನ್ನೆಯದ್ದಲ್ಲ. ಸುಮಾರು 75 ವರ್ಷಗಳ ಸುದೀರ್ಘ ಕಾಲದಿಂದ ನಡೆದುಕೊಂಡು ಬಂದಿದೆʼʼ ಎಂದು ಅವರು ಹೇಳಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸುವುದಾಗಿ ನುಡಿದಿದ್ದಾರೆ.

ಕಾರಣವೇನು?

ಅಸ್ತಿತ್ವದಲ್ಲಿರುವ ವಿಐಪಿ ಸಂಸ್ಕೃತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಇದನ್ನು ತಪ್ಪಿಸಿದರೆ ವಿದ್ಯುತ್ ಮಂಡಳಿಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಬೇಕಾದ ಪ್ರಮೇಯ ಎದುರಾಗುವುದಿಲ್ಲ. ಹೀಗಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎನ್ನಲಾಗಿದೆ. “ನಾನು ಕೂಡ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಬಳಸಿದ್ದೇನೆ. ಈ ಬಗ್ಗೆ ನನಗೆ ತಿಳಿದಿರಲಿಲ್ಲ. ಇತ್ತೀಚೆಗೆ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ತಿಳಿದುಕೊಂಡೆ. ನಮ್ಮ ವಿದ್ಯುತ್‌ ಬಿಲ್‌ ನಾವೇ ಪಾವತಿಸುವುದಿಂದ ವಿದ್ಯುತ್ ಮಂಡಳಿಗೆ ಸಹಾಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಶರ್ಮಾ ಹೇಳಿದ್ದಾರೆ.

“ಸಿಎಂ ಕಾರ್ಯದರ್ಶಿ, ಗೃಹ ಮತ್ತು ಹಣಕಾಸು ಇಲಾಖೆಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾತ್ರಿ 8 ಗಂಟೆಗೆ ಸ್ವಯಂ ಚಾಲಿತವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಇದರಿಂದ ನಾವು ವಿದ್ಯುತ್ ಉಳಿಸಬಹುದು. ಈ ಕ್ರಮವು ಈಗಾಗಲೇ ರಾಜ್ಯದಾದ್ಯಂತ 8,000 ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಜಾರಿಯಲ್ಲಿದೆ” ಎಂದು ಹಿಮಂತ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ಇದಕ್ಕೂ ಮುನ್ನ ಗುವಾಹಟಿಯ ರಾಜ್ಯ ಸಚಿವಾಲಯ ಸಂಕೀರ್ಣದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು 2.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಗ್ರಿಡ್-ಸಂಪರ್ಕಿತ ಮೇಲ್ಛಾವಣಿ ಮತ್ತು ನೆಲ-ಮೌಂಟೆಡ್ ಸೌರ ಪಿವಿ ವ್ಯವಸ್ಥೆಯಾದ ಜನತಾ ಭವನ ಸೌರ ಯೋಜನೆಯನ್ನು ಅನಾವರಣಗೊಳಿಸಿದರು. ಈ ವೇಳೆ ಅವರು, ಪ್ರತಿ ಸರ್ಕಾರಿ ಕಚೇರಿಗಳು ಹಂತಹಂತವಾಗಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆರಂಭಿಕ ಹಂತದಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕರೆ ನೀಡಿದರು.

Continue Reading

ಧಾರ್ಮಿಕ

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Bakrid 2024: ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

VISTARANEWS.COM


on

bakrid 2024
Koo

:: ಹಾಶಿಂ ಬನ್ನೂರು

ಮುಸ್ಲಿಮರು (Muslim) ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ (Eid UL Adha- Bakrid 2024) ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ (Quran) ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೇಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು, ಸೌಕರ್ಯ ಹೊಂದಿ ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್ ಆಗಿರುತ್ತದೆ.

ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮೆಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯುವುದು, ಮಿನಾದಲ್ಲಿ ತಂಗುವುದು, ಅರಫಾ ಮೈದಾನಕ್ಕೆ ತೆರಳುವುದು, ಮುಝ್ದಲಿಫಾದಲ್ಲಿ ಇರುವುದು, ಜಮ್ರಾದಲ್ಲಿ ಕಲ್ಲೆಸೆಯುವುದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡುವುದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

ಧರ್ಮ ಪ್ರಚಾರ

ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ಅವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ. ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ್ದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ, ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ.

ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತಮ್ಮ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

ಇದನ್ನೂ ಓದಿ:Govt Holidays : 2024ರಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ರಜೆ; ಇಲ್ಲಿದೆ ಸರ್ಕಾರಿ ರಜೆಗಳ ಪಟ್ಟಿ

Continue Reading

ಪ್ರಮುಖ ಸುದ್ದಿ

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

World War 3: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

World War 3
Koo

ನವದೆಹಲಿ: ಅಫಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಜಾರಿಗೆ ಬಂದಿದ್ದು, ಮಾನವ ಹಕ್ಕುಗಳು ಸರ್ವನಾಶಗೊಂಡಿವೆ. ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಲೇ ಇದೆ. ಇದೆಲ್ಲದ ಕಾರಣ ನಾಸ್ಟ್ರಾಡಾಮಸ್‌ ಹಾಗೂ ಬಾಬಾ ವಂಗಾ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೇ, ಭಾರತದ ಜ್ಯೋತಿಷಿಯೊಬ್ಬರು ಮುಂದಿನ 48 ಗಂಟೆಗಳಲ್ಲಿಯೇ ಮೂರನೇ ಮಹಾಯುದ್ಧ ಆರಂಭವಾಗಲಿದ್ದು, ಜಗತ್ತಿನ ಬಹುತೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಭವಿಷ್ಯ ನುಡಿದಿರುವುದು ಸಂಚಲನ ಮೂಡಿಸಿದೆ.

ಹೌದು, ಹರಿಯಾಣದವರಾದ ಕುಶಾಲ್‌ ಕುಮಾರ್‌ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. “2024ರ ಜೂನ್‌ 18ರಿಂದಲೇ ಅಂದರೆ, ಮುಂದಿನ 48 ಗಂಟೆಗಳಲ್ಲಿಯೇ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಲಿದೆ. ತಮ್ಮನ್ನು ತಾವು ವೈದಿಕ ಜ್ಯೋತಿಷಿ ಎಂದು ಘೋಷಿಸಿಕೊಂಡಿರುವ ಕುಶಾಲ್‌ ಕುಮಾರ್‌ ಅವರು ಇದುವರೆಗೆ ನುಡಿದ ಭವಿಷ್ಯಗಳು ನಿಜವಾಗಿವೆ. ಜೂನ್‌ 18ರಂದೇ ಜಾಗತಿಕವಾಗಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆಯಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷಿ ಕುಶಾಲ್‌ ಕುಮಾರ್.‌

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಕೊರಿಯಾ ಸೈನಿಕರು ದಕ್ಷಿಣ ಕೊರಿಯಾ ಗಡಿಗಳತ್ತ ನುಗ್ಗುತ್ತಿದ್ದಾರೆ. ಇಸ್ರೇಲ್‌ ಹಾಗೂ ಗಾಜಾ ನಡುವಿನ ಸಮರವು ಭಾರಿ ಬಿಕ್ಕಟ್ಟು ಸೃಷ್ಟಿಸಿದೆ. ಉಕ್ರೇನ್‌ನಲ್ಲಿ ರಷ್ಯಾವಂತೂ ಮಾರಣಹೋಮ ನಡೆಸುತ್ತಿದೆ. ಇನ್ನು ಕಳೆದ ಜೂನ್‌ನಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದೆಲ್ಲ ಕಾರಣದಿಂದಾಗಿ ಜಾಗತಿಕ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿ, ಇದು ಮಿಲಿಟರಿ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯುತ್ತದೆ. ಇದರಿಂದ ಜಾಗತಿಕ ಅಶಾಂತಿ ಸೃಷ್ಟಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: Moscow Attack: ರಷ್ಯಾದಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 150, ಏನೆಲ್ಲ ಬೆಳವಣಿಗೆ?

Continue Reading

ಪ್ರಮುಖ ಸುದ್ದಿ

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

NCERT Textbooks: ಎನ್‌ಸಿಇಆರ್‌ಟಿ ಪಠ್ಯದಲ್ಲಿ ‘ಬಾಬ್ರಿ ಮಸೀದಿ’ ಎಂಬ ಪದವನ್ನು ತೆಗೆದುಹಾಕಲಾಗಿದೆ. ಬಾಬ್ರಿ ಮಸೀದಿಯನ್ನು ಮೂರು ಅಂತಸ್ತಿನ ಗೊಮ್ಮಟ ಎಂದು ಪ್ರಸ್ತಾಪಿಸಲಾಗಿದೆ. ಇನ್ನು ಅಯೋಧ್ಯೆಯ ಕುರಿತ ನಾಲ್ಕು ಪುಟಗಳ ಅಧ್ಯಾಯವನ್ನು ತೆಗೆದುಹಾಕಿದೆ. ಸೋಮನಾಥ ದೇವಾಲಯದಿಂದ ಅಯೋಧ್ಯೆವರೆಗೆ ಎಲ್‌.ಕೆ.ಅಡ್ವಾಣಿ ಅವರು ಕೈಗೊಂಡ ರಥಯಾತ್ರೆ, ಕರಸೇವೆ ಸೇರಿ ಹಲವು ಅಂಶಗಳನ್ನು ತೆಗೆದುಹಾಕಲಾಗಿದೆ.

VISTARANEWS.COM


on

NCERT Textbooks
Koo

ನವದೆಹಲಿ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿಯು (NCERT) 12ನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ (NCERT Textbooks) ಕೆಲ ಬದಲಾವಣೆಗಳನ್ನು ಮಾಡಿದೆ. ಅದರಲ್ಲೂ, ರಾಜಕೀಯ ಶಾಸ್ತ್ರ ಪುಸ್ತಕದಿಂದ ಬಾಬ್ರಿ ಮಸೀದಿ, ಕರಸೇವೆ ಸೇರಿ ಹಲವು ಅಧ್ಯಾಯಗಳನ್ನು ತೆಗೆದುಹಾಕಿದೆ. ಇದು ಈಗ ಚರ್ಚೆಗೂ ಗ್ರಾಸವಾಗಿದೆ.

ಎನ್‌ಸಿಇಆರ್‌ಟಿ ಪಠ್ಯದಲ್ಲಿ ‘ಬಾಬ್ರಿ ಮಸೀದಿ’ ಎಂಬ ಪದವನ್ನು ತೆಗೆದುಹಾಕಲಾಗಿದೆ. ಬಾಬ್ರಿ ಮಸೀದಿಯನ್ನು ಮೂರು ಅಂತಸ್ತಿನ ಗೊಮ್ಮಟ ಎಂದು ಪ್ರಸ್ತಾಪಿಸಲಾಗಿದೆ. ಇನ್ನು ಅಯೋಧ್ಯೆಯ ಕುರಿತ ನಾಲ್ಕು ಪುಟಗಳ ಅಧ್ಯಾಯವನ್ನು ತೆಗೆದುಹಾಕಿದೆ. ಸೋಮನಾಥ ದೇವಾಲಯದಿಂದ ಅಯೋಧ್ಯೆವರೆಗೆ ಎಲ್‌.ಕೆ.ಅಡ್ವಾಣಿ ಅವರು ಕೈಗೊಂಡ ರಥಯಾತ್ರೆ, ಕರಸೇವೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನೆಲಸಮಗೊಳಿಸಿದ್ದಕ್ಕೆ ಬಿಜೆಪಿ ನಾಯಕರ ವಿಷಾದದ ಹೇಳಿಕೆಗಳನ್ನು ಪಠ್ಯದಿಂದ ಕೈಬಿಡಲಾಗಿದೆ.

Ayodhya Babri Masjid

ಬಾಬ್ರಿ ಮಸೀದಿ ಉಲ್ಲೇಖ ತೆಗೆದುಹಾಕಿದ ಕುರಿತು ಎನ್‌ಸಿಇಆರ್‌ಟಿ ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಅವರು ಇಂಡಿಯಾ ಟುಡೇ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. “ವಿದ್ಯಾರ್ಥಿಗಳು ಏಕೆ ಗಲಭೆ, ಹಿಂಸಾಚಾರ ಸೇರಿ ಹಲವು ನಕಾರಾತ್ಮಕ ಅಂಶಗಳ ಕುರಿತು ಕಲಿಯಬೇಕು. ಗುಜರಾತ್‌ ಹಿಂಸಾಚಾರ, ಬಾಬ್ರಿ ಮಸೀದಿ ನೆಲಸಮ ಸೇರಿ ಹಲವು ಅಂಶಗಳ ಕುರಿತು ಏಕೆ ಅಧ್ಯಯನ ಮಾಡಬೇಕು. ಅಷ್ಟಕ್ಕೂ, ನಾವು ಪಠ್ಯವನ್ನು ತಯಾರಿಸುವಾಗ ಯಾವುದೇ ಸಿದ್ಧಾಂತಗಳನ್ನು ಅನುಸರಿಸುವುದಿಲ್ಲ. ತಜ್ಞರ ಶಿಫಾರಸಿನಂತೆ ಬದಲಾವಣೆ ಮಾಡಲಾಗಿದೆ” ಎಂದು ತಿಳಿಸಿದರು.

ಬಾಬ್ರಿ ಮಸೀದಿ ಬದಲು ಮೂರು ಅಂತಸ್ತಿನ ಗುಮ್ಮಟ ಎಂದು ಪ್ರಸ್ತಾಪಿಸಿರುವುದು, ಗುಜರಾತ್‌ ಹಿಂಸಾಚಾರವನ್ನು ಕೈಬಿಟ್ಟಿರುವುದು ಸೇರಿ ಹಲವು ಅಂಶಗಳನ್ನು ಕೈಬಿಟ್ಟಿರುವ ಕುರಿತು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರದ ಸಿದ್ಧಾಂತಗಳನ್ನು ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದಾಗ್ಯೂ, ಎನ್‌ಸಿಇಆರ್‌ಟಿಯು ಬಳಿಕ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: Textbook Revision: ಪಠ್ಯ ಪುಸ್ತಕ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ; ಯಾವ ಪಾಠಗಳಿಗೆ ಕೊಕ್‌?

Continue Reading
Advertisement
Flesh-Eating Bacteria
ಆರೋಗ್ಯ8 mins ago

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

CM Siddaramaiah and Vidhanasoudha
ಪ್ರಮುಖ ಸುದ್ದಿ16 mins ago

CM Siddaramaiah: 370 ನಿವೃತ್ತ ಅಧಿಕಾರಿಗಳಿಗೆ ಬಾಗಿಲು ತೋರಿಸಿದ ಸರಕಾರ

Euro 2024
ಕ್ರೀಡೆ24 mins ago

Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

Nayana Nagaraj ginirama serial fame got married with suhas
ಕಿರುತೆರೆ25 mins ago

Nayana Nagaraj: 10 ವರ್ಷದ ಪ್ರೀತಿ! ಮನಮೆಚ್ಚಿದ ಹುಡುಗನ ಜತೆ ಸಪ್ತಪದಿ ತುಳಿದ ʻಗಿಣಿರಾಮʼ ನಟಿ

Auto Launches
ಆಟೋಮೊಬೈಲ್28 mins ago

Auto Launches: ಸ್ಕೋಡಾ ಕುಶಾಕ್‌, ಬಿಎಂಡಬ್ಲ್ಯು ಆರ್ 1300 ಸೇರಿ ಇನ್ನೂ ಹಲವು ಹೊಸ ವಾಹನ ಮಾರುಕಟ್ಟೆಗೆ!

Irregular Periods problem Here are some simple home remedies
ಆರೋಗ್ಯ44 mins ago

Irregular Periods: ಏರುಪೇರಾದ ಋತುಚಕ್ರದ ಸಮಸ್ಯೆಯೇ? ಇಲ್ಲಿವೆ ಸರಳ ಮನೆಮದ್ದುಗಳು!

Drowned in river
ಕ್ರೈಂ1 hour ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Himanta Biswa Sarma
ದೇಶ1 hour ago

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Actor Darshan Renukaswamy Send His Photos To Pavitra Gowda
ಕ್ರೈಂ2 hours ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ2 hours ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ15 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ16 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ21 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌