ಸರ್ಕಾರಿ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳಿಗೆ ನಿರ್ಬಂಧ: ಹಿಂದು ವಿರೋಧಿ ನಿಲುವು? - Vistara News

ಶಿಕ್ಷಣ

ಸರ್ಕಾರಿ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳಿಗೆ ನಿರ್ಬಂಧ: ಹಿಂದು ವಿರೋಧಿ ನಿಲುವು?

ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.

VISTARANEWS.COM


on

Ban on celebration of religious festivals in residential schools colleges in Karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು (Religious festivals) ಆಚರಿಸುವಂತಿಲ್ಲ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ (National Festivals) ಆದೇಶಿಸಲಾಗಿದೆ.

ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು. ಆದರೆ ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಈ ಸುತ್ತೋಲೆಯನ್ನು ಹೊರಡಿಸಿದೆ. ಕೇವಲ 10 ರಾಷ್ಟ್ರೀಯ ಹಬ್ಬಗಳ ಆಚರಣೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

1) ಗಣರಾಜ್ಯೋತ್ಸವ
2) ಸ್ವಾತಂತ್ರ್ಯ ದಿನಾಚರಣೆ
3) ಗಾಂಧಿ ಜಯಂತಿ
4) ಕನ್ನಡ ರಾಜ್ಯೋತ್ಸವ
5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ
6) ವಾಲ್ಮೀಕಿ ಜಯಂತಿ
7) ಕನಕದಾಸ ಜಯಂತಿ
8) ಬಸವ ಜಯಂತಿ
9) ಸಂವಿಧಾನ ಜಯಂತಿ
10) ಯೋಗ ದಿನಾಚರಣೆ

Ban on celebration of religious festivals in residential schools colleges in Karnataka


ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ.

ಹಿಂದು ವಿರೋಧಿ ನಿಲುವು: ಬಿಜೆಪಿ ಆಕ್ಷೇಪ

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಯನ್ನು ನಿರ್ಬಂಧಿಸುವ ಮೂಲಕ ಕಾಂಗ್ರೆಸ್‌ ಸರ್ಕಾರ ತನ್ನ ಹಿಂದು ವಿರೋಧಿ ನೀತಿಯನ್ನು ಮುಂದುವರಿಸಿದೆ ಎಂದು ಬಿಜೆಪಿ ಆಕ್ಷೇಪಿಸಿದೆ. ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್‌ ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿ, ಸರ್ಕಾರ ಅನಗತ್ಯವಾಗಿ ಇಂಥ ನಿರ್ಧಾರಗಳನ್ನು ತಳೆಯುತ್ತಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Physical Abuse : ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ವಿದ್ಯಾರ್ಥಿನಿಗೆ ಪಿಎಚ್‌ಡಿ ಗೈಡ್ ಮಾನಸಿಕ ಕಿರುಕುಳ

Central University Of Karnataka : ಸಂಜೆಯಾಗುತ್ತಿದ್ದಂತೆ ಸಂಶೋಧನೆಗಾಗಿ ‌ತಮ್ಮ ಕೊಠಡಿಗೆ ಬರುವಂತೆ ಸಹಾಯಕ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಗೆ ಮಾನಸಿಕ ಹಿಂಸೆ ನೀಡುತ್ತಿರುವ ಆರೋಪವೊಂದು (Physical Abuse) ಕೇಳಿಬಂದಿದೆ. ಹೀಗಾಗಿ ಸಂತ್ರಸ್ತೆ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಕಲಬುರಗಿ : ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿನಿಗೆ ಸಹಾಯಕ ಪ್ರಾಧ್ಯಾಪಕನಿಂದ ಮಾನಸಿಕ ಕಿರುಕುಳ (Physical Abuse) ನೀಡಲಾಗುತ್ತಿದೆ ಎನ್ನಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿವಿಯಲ್ಲಿ (Central University Of Karnataka) ಘಟನೆ ನಡೆದಿದೆ.

ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕ ಪ್ರೊ. ವಿಜಯಕುಮಾರ್ ಎಂಬುವವರಿಂದ ವಿದ್ಯಾರ್ಥಿನಿಯರಿಗೆ ಮಾನಸಿಕ‌ ಕಿರುಕುಳ ನೀಡಲಾಗುತ್ತಿದೆ ಅಂತೆ. ಪಿ.ಎಚ್.ಡಿ ಗೈಡ್ ಆಗಿರುವ ಪ್ರೊ. ವಿಜಯಕುಮಾರ್‌, ಸಂಜೆ ಆಗುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಸಂಶೋಧನೆಗಾಗಿ ಕರೆಯುತ್ತಾರೆ.

ಸಂಜೆ ಹೊತ್ತಿಗೆ ಸಂಶೋಧನೆಗಾಗಿ ‌ತಮ್ಮ ಕೊಠಡಿಗೆ ಕರೆಯುತ್ತಿದ್ದರು ಎಂದು ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈತನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ರಾಷ್ಟ್ರಪತಿಗಳಿಗೂ ಪತ್ರ ಬರೆದಿದ್ದು ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.

ಭಾನುವಾರ ಮತ್ತು ರಜಾದಿನದಲ್ಲೂ ಕೊಠಡಿಗೆ ಬರುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೋಗದೆ ಇದ್ದರೆ ಶಿಷ್ಯವೇತನ ಅರ್ಜಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಪತ್ರದಲ್ಲಿ ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ. ಇನ್ನೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಮಹಿಳಾ‌ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ಗರ್ಭಿಣಿ ಎಂಬುದು ತಿಳಿದರೂ ವಿನಾಕಾರಣ ಮಾರ್ಗದರ್ಶಕರಿಂದ ತೊಂದರೆ ಆಗುತ್ತಿದೆ. ಮಾರ್ಗದರ್ಶಕರನ್ನು ಬದಲಾವಣೆ ಮಾಡಿ, ಸಂಶೋಧನಾ ಅಧ್ಯಯನಕ್ಕೆ ಸಹಾಯ ಮಾಡುವಂತೆ ಮಹಿಳಾ ಆಯೋಗಕ್ಕೆ ವಿನಂತಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಬಂದಾಗಿನಿಂದಲೂ ಉದ್ದೇಶಪೂರ್ವಕವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನನ್ನ ವೈಯಕ್ತಿಕ ವಿಷಯ ಮಾತಾಡಿ ನಿಂದಿಸುವುದು, ಹಣದ ಆಮಿಷ ತೋರಿಸುವುದು, ವಿವಿಗೆ ರಜಾದಿನಗಳಲ್ಲಿ ಮತ್ತು ಭಾನುವಾರವೂ ವಿಭಾಗಕ್ಕೆ ಬರಬೇಕೆಂದು ಹೇಳುವುದು. ಅವಾಚ್ಯ ಶಬ್ಧಗಳಿಂದ ಬೈಯುತ್ತಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಇದನ್ನೂ ಓದಿ: Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

ನೀಲಿಚಿತ್ರಗಳ ತಾರೆಗೆ ಹಣ ನೀಡಿದ ಪ್ರಕರಣ; ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್‌ ತಪ್ಪಿತಸ್ಥ ಎಂದ ಕೋರ್ಟ್‌

ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ. ನ್ಯಾಯಾರ್ಕ್‌ನ ನ್ಯಾಯಾಲಯ ಡೊನಾಲ್ಡ್ ಟ್ರಂಪ್ ಅವರು ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಇದರೊಂದಿಗೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಮತ್ತೊಮ್ಮೆ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಟ್ರಂಪ್‌ಗೆ ಇದು ಬಹು ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಲಾಗುತ್ತಿದೆ. ನವೆಂಬರ್‌ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌, ತೀರ್ಪನ್ನು ʼಅವಮಾನʼ ಮತ್ತು ʼಮೋಸ” ಎಂದು ಕರೆದಿದ್ದಾರೆ. ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತದಾರರಿಂದ ʼನಿಜವಾದ ತೀರ್ಪುʼ ಹೊರ ಬರಲಿದೆ ಎಂದು ಹೇಳಿದ್ದಾರೆ. ಅದಾಗ್ಯೂ ಈ ಪ್ರಕರಣದಲ್ಲಿ ಟ್ರಂಪ್‌ ಜೈಲು ಸೇರುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ವ್ಯವಹಾರ ದಾಖಲೆಗಳನ್ನು ತಿರುಚಿದ್ದಕ್ಕಾಗಿ ಟ್ರಂಪ್‌ ಅವರಿಗೆ ಜುಲೈ 11ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು ಎಂದು ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು ತಿಳಿಸಿದ್ದಾರೆ. 12 ಸದಸ್ಯರ ತೀರ್ಪುಗಾರರು ಎರಡು ದಿನಗಳಲ್ಲಿ 11 ಗಂಟೆಗಳಿಗೂ ಹೆಚ್ಚು ಕಾಲ ಚರ್ಚಿಸಿ ಗುರುವಾರ ಟ್ರಂಪ್‌ ದೋಷಿ ಎಂದು ಘೋಷಿಸಿದ್ದರು.

ʼʼನಾನು ಮುಗ್ಧ ವ್ಯಕ್ತಿ, ಮತ್ತು ಯಾವುದೇ ತಪ್ಪು ಮಾಡಿಲ್ಲ. ನಾನು ನಮ್ಮ ದೇಶಕ್ಕಾಗಿ ಮತ್ತು ನಮ್ಮ ಸಂವಿಧಾನಕ್ಕಾಗಿ ಹೋರಾಡುತ್ತಿದ್ದೇನೆ. ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದು ಜನರಿಗೆ ಗೊತ್ತಿದೆ. ಹೀಗಾಗಿ ಅವರು ನನ್ನ ಕೈ ಬಿಡುವುದಿಲ್ಲʼʼ ಎಂದು ಟ್ರಂಪ್‌ ಹೇಳಿದ್ದಾರೆ.

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ಇದನ್ನು ಖಾಸಗಿ ವಹಿವಾಟು ಎಂದು ಕರೆದಿದ್ದರು. ಸದ್ಯ ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಚುನಾವಣಾ ಪ್ರಚಾರದ ವೇಳೆ ಎದುರಾಳಿಗಳು ಟ್ರಂಪ್‌ ವಿರುದ್ಧದ ವಿಚಾರದಲ್ಲಿ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಎರಡು ದಿನಗಳ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

VISTARANEWS.COM


on

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
Koo

ಯಲ್ಲಾಪುರ: ಜ್ಞಾನವೇ ಶ್ರೇಷ್ಠವಾದ ಸಂಪತ್ತು ಎಂಬ ಧ್ಯೇಯದೊಂದಿಗೆ ಸದಾ ಸಂಸ್ಕಾರಯುತ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯು ಮುಂಚೂಣಿಯಲ್ಲಿ ಸಾಗುತ್ತಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ತಿಳಿಸಿದರು.

ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪ್ರತಿವರ್ಷವೂ ಶಿಕ್ಷಕರ ಕಲಿಕಾ ಕೌಶಲ್ಯ ಮತ್ತು ಸಾಮರ್ಥ್ಯ ವೃದ್ಧಿಗಾಗಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆ ಎಂದರು.

ನಗರಗಳಲ್ಲಿ ದೊರೆಯುವ ಉತ್ತಮ ಗುಣಾತ್ಮಕ ಶಿಕ್ಷಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಶಿಕ್ಷಣ ಸಂಸ್ಥೆಯು ಸದಾ ಅಗತ್ಯ, ರಚನಾತ್ಮಕವಾದ ಚಟುವಟಿಕೆ ಮತ್ತು ಕಾರ್ಯಕ್ರಮಗಳೊಂದಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್‌ನ ‘ಪ್ರಶಿಕ್ಷಣ ಭಾರತಿ’ಯ ಸಹಯೋಗದಲ್ಲಿ ಪಂಚಮುಖಿ ಶಿಕ್ಷಣದ ಪ್ರಾಮುಖ್ಯತೆ, ಶಿಕ್ಷಕರು ತರಗತಿಗಳಲ್ಲಿ ಪಂಚಮುಖಿ ಶಿಕ್ಷಣದ ಅಂಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಅದನ್ನು ಕಲಿಸುವ ಪದ್ಧತಿಗಳ ಕುರಿತು ಒಂದು ದಿನದ ತರಬೇತಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ ಅವರು ಸಂತೋಷದಾಯಕ ತರಗತಿ ನಿರ್ವಹಣೆಯ ಕುರಿತು, ಉಪನ್ಯಾಸಕ ಡಾ. ಮಹೇಶ್ ಭಟ್ ಅವರು ಪಂಚಮುಖಿ ಶಿಕ್ಷಣ ಹಾಗೂ ಸನಾತನ ಶಿಕ್ಷಣ ಪದ್ಧತಿಯ ಕುರಿತು ಮತ್ತು ಕೀರ್ತಿವತಿ ಮಾತಾಜಿಯವರು ಕಲಿಕಾ ಚಟುವಟಿಕೆ ಆಧಾರಿತ ತರಗತಿ ನಿರ್ವಹಣೆಯ ಕುರಿತು ತರಬೇತಿ ನೀಡಿದರು.

ಎರಡನೇ ದಿನ ಬೆಂಗಳೂರಿನ ಮ್ಯಾಕ್ ಮಿಲನ್ ಸಂಸ್ಥೆಯಿಂದ ತರಗತಿ ನಿರ್ವಹಣೆಯಲ್ಲಿ ಶಿಕ್ಷಕರ ಪಾತ್ರ ಮತ್ತು ಮ್ಯಾಕ್ ಮಿಲನ್ ಸಂಸ್ಥೆಯ ಪಠ್ಯ ಪುಸ್ತಕಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಶಿಕ್ಷಕರು ತಮ್ಮ ಕಲಿಕಾ ಕೌಶಲ್ಯವನ್ನು ಹೆಚ್ಚಿಸಿಕೊಂಡು ತರಗತಿಯನ್ನು ಸುಗಮ ಗೊಳಿಸುವ ಕುರಿತು ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಚಾರ್ಯರಾದ ಸುಜಾತ ಹಿರೇಮಠ್ ಭಾಗವಹಿಸಿದ್ದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ, ಪ್ರಾಂಶುಪಾಲೆ ಮಹಾದೇವಿ ಭಟ್, ಪಿಯು ವಿಭಾಗದ ಪ್ರಾಚಾರ್ಯ ಡಿ.ಕೆ. ಗಾಂವ್ಕರ್, ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ, ಕೇಂದ್ರೀಯ ಶಾಲೆಯ ಉಪ ಪ್ರಾಂಶುಪಾಲೆ ಆಸ್ಮಾ ಶೇಖ್ ಹಾಗೂ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

KSET Results 2024:‌ ಕೆ-ಸೆಟ್‌ ಪರೀಕ್ಷೆ ಫಲಿತಾಂಶ; ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

KSET Results 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಫಲಿತಾಂಶ ವೀಕ್ಷಣೆ ಹೇಗೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

KSET Results 2024
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET Results 2024) ಫಲಿತಾಂಶ ಪ್ರಕಟಿಸಿದೆ. ಕಳೆದ ಜನವರಿ 13ರಂದು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಒಟ್ಟು 41 ವಿಷಯಗಳಿಗೆ ನಡೆದ ಪರೀಕ್ಷೆಯಲ್ಲಿ ಒಟ್ಟು 6,675 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಅವರೆಲ್ಲರ ನೋಂದಣಿ ಸಂಖ್ಯೆ, ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಪ್ರಕಟಿಸಲಾಗಿದೆ. ಇನ್ನು, ಫಲಿತಾಂಶ ಪರಿಶೀಲಿಸುವುದು ಹೇಗೆ? ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಫಲಿತಾಂಶವನ್ನು ಹೀಗೆ ಚೆಕ್‌ ಮಾಡಿ

  1. ಮೊದಲು ಕೆಇಎ ಅಧಿಕೃತ ವೆಬ್‌ಸೈಟ್‌ ಆಗಿರುವ https://cetonline.karnataka.gov.in/KEA ಗೆ ಭೇಟಿ ನೀಡಿ
  2. ಮುಖಪುಟದಲ್ಲಿ ಕಾಣಿಸುವ KSET ಫಲಿತಾಂಶ ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  3. ಕೆ-ಸೆಟ್‌ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕವನ್ನು ನಮೂದಿಸಿ
  4. ಕೆ-ಸೆಟ್ ಫಲಿತಾಂಶವನ್ನು ಪರದೆ ಮೇಲೆ ಪ್ರದರ್ಶಿಸಲಾಗುತ್ತದೆ
  5. ಕೊನೆಯ ಹಂತದಲ್ಲಿ ಫಲಿತಾಂಶವನ್ನು ವೀಕ್ಷಿಸುವ ಜತೆಗೆ ಡೌನ್‌ಲೋಡ್‌, ಪ್ರಿಂಟೌಟ್‌ ತೆಗೆದುಕೊಳ್ಳಬಹುದು

1,17,703 ಅಭ್ಯರ್ಥಿಗಳ ನೋಂದಣಿ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 1,17,703 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 7 ಕೇಂದ್ರಗಳಲ್ಲಿ ಜನವರಿ 13ರಂದು ನಡೆದ ಪರೀಕ್ಷೆಗೆ 95,201 ಜನ ಹಾಜರಾಗಿದ್ದರು. ಆದರೆ, ಪರೀಕ್ಷೆಯಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು ಸೇರಿ ಒಟ್ಟು 6,675 ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 97 ತೃತೀಯ ಲಿಂಗಿಗಳು ಹಾಗೂ 350 ಅಭ್ಯರ್ಥಿಗಳು ವಿಶೇಷ ಚೇತನರಾಗಿದ್ದಾರೆ ಎಂಬುದಾಗಿ ಕೆಇಎ ತಿಳಿಸಿದೆ.

ಎಷ್ಟು ಅಂಕ ಪಡೆದರೆ ತೇರ್ಗಡೆ?

ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪೇಪರ್‌ 1 ಹಾಗೂ 2 ಸೇರಿ ಒಟ್ಟು 200 ಅಂಕಗಳಲ್ಲಿ ಶೇ.40ರಷ್ಟು ಅಂಕ ಪಡೆಯಬೇಕು. Cat-I, IIA, IIB, IIIA, IIIB, ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಎರಡೂ ಪರೀಕ್ಷೆಗಳ ಒಟ್ಟು 200 ಅಂಕಗಳ ಪೈಕಿ ಶೇ.35ರಷ್ಟು ಅಂಕಗಳನ್ನು ಪಡೆಯಬೇಕು. ಆಗ ಅವರು ಕೆ-ಸೆಟ್‌ನಲ್ಲಿ ತೇರ್ಗಡೆ ಹೊಂದಿದಂತಾಗುತ್ತದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Continue Reading

ಪ್ರಮುಖ ಸುದ್ದಿ

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

School Reopen: ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಿನ್ನೆಯೇ ನಡೆದಿದ್ದು, ಇವತ್ತು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿಗಳು ಮಾಡಿದ್ದಾರೆ.

VISTARANEWS.COM


on

school reopen
Koo

ಬೆಂಗಳೂರು: ಬರೋಬ್ಬರಿ 40 ದಿನಗಳ ಬೇಸಿಗೆ ರಜೆಯ (Summer holidays) ಬಳಿಕ ಇಂದು ಮಕ್ಕಳು ಮತ್ತೆ ಶಾಲೆಯ (School reopen) ಮುಖ ಕಾಣುತ್ತಿದ್ದಾರೆ. ಇಷ್ಟು ದಿನ ರಜೆಯ ಮಜದಲ್ಲಿದ್ದ ಮಕ್ಕಳು ಇದೀಗ ಪುಸ್ತಕ, ಪೆನ್, ಬ್ಯಾಗ್ ರೆಡಿ ಮಾಡಿಕೊಂಡಿದ್ದು, ಇಂದು ಸ್ಕೂಲ್‌ ಕಾಂಪೌಂಡ್‌ ಒಳಗೆ ಮತ್ತೆ ಹೆಜ್ಜೆ ಹಾಕಲಿದ್ದಾರೆ.

ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಿನ್ನೆಯೇ ನಡೆದಿದ್ದು, ಇವತ್ತು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿಗಳು ಮಾಡಿದ್ದಾರೆ. ಶೈಕ್ಷಣಿಕ ಮಾರ್ಗಸೂಚಿಯಂತೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ.

ಶಾಲಾ ಪ್ರಾರಂಭೋತ್ಸವದೊಂದಿಗೆ ಮೊದಲ ದಿನ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಬುಧವಾರ ಮತ್ತು ಗುರುವಾರ ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಚಗೊಳಿಸಬೇಕು. ಅಲ್ಲದೆ ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.

ಮೇ 29ರಿಂದ 2024- 25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ವಿದ್ಯಾವಿಕಾಸ ಯೋಜನೆಯಡಿ 2024-25ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2024-25ರ ಸಾಲಿನಲ್ಲಿ ಮೊದಲನೇ ಅವಧಿ ಮೇ 29 ಹಾಗೂ ಎರಡನೇ ಅವಧಿ ಅಕ್ಟೋಬರ್‌ 21ಕ್ಕೆ ಶುರುವಾಗಲಿದೆ. ಅಕ್ಟೋಬರ್‌ 3ರಿಂದ 20ರವರಗೆ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್‌ 11ರಿಂದ ಬೇಸಿಗೆ ರಜೆ ಶುರುವಾಗಲಿದೆ.

ಮೊಬೈಲ್‌ನಿಂದ ದೂರವಿರಿ

ಇದರ ಜೊತೆಗೆ, ಶಾಲೆ ಆರಂಭದಲ್ಲಿಯೇ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವಂತೆ ಪೋಷಕರಿಗೆ ಮನವಿ ಮಾಡಿವೆ ಖಾಸಗಿ ಶಾಲೆ ಒಕ್ಕೂಟಗಳು. ಖಾಸಗಿ ಶಾಲಾ ಒಕ್ಕೂಟದಿಂದ ಪೋಷಕರಿಗೆ ಪತ್ರ ಬರೆಯಲಾಗಿದೆ. ಮಕ್ಕಳಲ್ಲಿ ಹೆಚ್ಚಾಗಿರುವ ಮೊಬೈಲ್ ಗೀಳಿನಿಂದ ಭವಿಷ್ಯ ಹಾಳು ಎಂದು ಪೋಷಕರು ಎಚ್ಚರಿಕೆ ವಹಿಸುವಂತೆ ಖಾಸಗಿ ಶಾಲಾ ಒಕ್ಕೂಟ ಮನವಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ನಲ್ಲೆ ಮುಳುಗಿರುವ ಮಕ್ಕಳು ಸದಾ ಸಾಮಾಜಿಕ ಜಾಲತಾಣದಲ್ಲಿ ಹೈ ಆಕ್ಟಿವ್ ಆಗಿರುತ್ತಾರೆ. ಇದರಿಂದ ನಾನಾ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮೊಬೈಲ್ ಬಳಕೆ ಮಿತಗೊಳಿಸುವಂತೆ ಪೋಷಕರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: School Reopen: ನಾಳೆಯಿಂದ ಶಾಲೆ ಮರು ಆರಂಭ; ಮೊದಲ ದಿನವೇ ಮಕ್ಕಳಿಗೆ ಸಿಹಿ ಸುದ್ದಿ

Continue Reading
Advertisement
Prajwal revanna
ಪ್ರಮುಖ ಸುದ್ದಿ6 mins ago

Prajwal Revanna : ಪ್ರಜ್ವಲ್​ ರೇವಣ್ಣ ಅರೆಸ್ಟ್​ ಆಗುವಾಗ ಧರಿಸಿದ್ದ ಬಟ್ಟೆ ಬ್ರಾಂಡ್ ಯಾವುದು? ಅದಕ್ಕೆಷ್ಟು ಬೆಲೆ?

contractor self harming
ಕ್ರೈಂ16 mins ago

Self Harming: ಕಂಟ್ರಾಕ್ಟರ್‌ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ, ಮತ್ತೊಂದು ಸರ್ಕಾರಿ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಯಲಿಗೆ!

Aadhaar-PAN Link
ದೇಶ30 mins ago

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Valmiki Corporation Scam
ಪ್ರಮುಖ ಸುದ್ದಿ43 mins ago

Valmiki Corporation Scam: ಸಚಿವ ನಾಗೇಂದ್ರ ತಲೆದಂಡ ಫಿಕ್ಸ್‌; ರಾಜೀನಾಮೆ ಕೊಡಲು ಸಿಎಂ ಸೂಚನೆ

RBI
ದೇಶ50 mins ago

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

Raghu Thatha Hombale Films Realease date announced
ಕಾಲಿವುಡ್51 mins ago

Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

Anant Ambani Shakira set to perform 2nd pre-wedding
ಬಾಲಿವುಡ್55 mins ago

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Prajwal Revanna
ಪ್ರಮುಖ ಸುದ್ದಿ59 mins ago

Prajwal Revanna : ನಾನವನಲ್ಲ, ನಾನವನಲ್ಲ; ಪೊಲೀಸರ ಪ್ರಶ್ನೆಗೆ ಈ ಒಂದೇ ಉತ್ತರ ನೀಡುತ್ತಿರುವ ಪ್ರಜ್ವಲ್​ ರೇವಣ್ಣ!

T20 World Cup 2024
ಕ್ರೀಡೆ1 hour ago

T20 World Cup 2024: ನ್ಯೂಯಾರ್ಕ್​ನಲ್ಲಿ ಕಳಪೆ ಗುಣಮಟ್ಟದ ಆಹಾರ; ಟೀಮ್​ ಇಂಡಿಯಾ ಆಟಗಾರರಿಂದ ಅಸಮಾಧಾನ

Vijayanagara News
ವಿಜಯನಗರ1 hour ago

Vijayanagara News : ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌