Chandassu: ಕನ್ನಡ ಛಂದಸ್ಸಿನ ಮೇಲೊಂದು ನೋಟ… - Vistara News

ಶಿಕ್ಷಣ

Chandassu: ಕನ್ನಡ ಛಂದಸ್ಸಿನ ಮೇಲೊಂದು ನೋಟ…

ಛಂದಸ್ಸಿನ ಸಂಬಂಧದದಲ್ಲಿ ಎರಡು ದೃಷ್ಟಿಗಳನ್ನು ಗುರುತಿಸಬಹುದು. ಒಂದು ಸೌಂದರ್ಯ ದೃಷ್ಟಿ, ಇನ್ನೊಂದು ಪ್ರಯೋಜನ ದೃಷ್ಟಿ. ಛಂದಸ್ಸು ಕಾವ್ಯದ ಸೌಂದರ್ಯಕ್ಕೆ ಕಳೆಕಟ್ಟಿ ಆನಂದವನ್ನುಂಟುಮಾಡುತ್ತದೆ ಎಂಬುದು ಸೌಂದರ್ಯ ದೃಷ್ಟಿ. ಕಾವ್ಯಕ್ಕೆ ಪ್ರವಹಿಸಲು ನೆರವಾಗುತ್ತದೆ ಎಂಬುದು ಅಥವಾ ಜ್ಞಾಪಕಕ್ಕೆ ಅನುಕೂಲವಾಗುತ್ತದೆ ಎಂಬುದು ಪ್ರಯೋಜನ ದೃಷ್ಟಿ.

VISTARANEWS.COM


on

kannada inscription
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡ ಕಾವ್ಯಗಳಲ್ಲಿ (kannada poetry) ಮೂರು ಪ್ರಕಾರದ ಛಂದಸ್ಸುಗಳು (Chandassu) ಕಂಡುಬರುತ್ತವೆ. ಒಂದು, ಕನ್ನಡಕ್ಕೆ ವಿಶಿಷ್ಟವಾದ ಛಂದಸ್ಸು. ಇನ್ನೊಂದು, ಚಂಪೂಕಾವ್ಯಗಳಲ್ಲಿ ಮಿಳಿತವಾಗಿರುವ ಸಂಸ್ಕೃತ (Sanskrit) ವರ್ಣಛಂದಸ್ಸು. ಮೂರನೇಯದು, ಪ್ರಾಕೃತಕ್ಕೆ ವಿಶಿಷ್ಟವಾದ ಮಾತ್ರಾಗಣ ಛಂದಸ್ಸು.

ಅದಕ್ಕೂ ಮುನ್ನ, ಛಂದಸ್ಸಿನ ವ್ಯುತ್ಪತ್ತಿ ಮತ್ತು ಕಲ್ಪನೆಗಳತ್ತ ಗಮನ ಹರಿಸೋಣ. ಛಂದಸ್ಸಿನ ವ್ಯುತ್ಪತ್ತಿಯನ್ನು ಛದ್‌ ಮತ್ತು ಛಂದ್-‌ ಈ ಎರಡೂ ಧಾತುಗಳಿಂದ ಸಾಧಿಸುತ್ತಾರೆ. ಎರಡೂ ಧಾತುಗಳ ಅರ್ಥ ಬಹುತೇಕ ಒಂದೇ. ಆಚ್ಛಾದಿಸು ಅಥವಾ ಹೊದಿಸು ಎಂಬ ಅರ್ಥವನ್ನು ಕೊಡುತ್ತವೆ. “ಆಹ್ಲಾದವನ್ನುಂಟು ಮಾಡುವುದು ಯಾವುದೇ ಅದು ಛಂದ” ಎಂದೂ ಅರ್ಥೈಸುವುದುಂಟು. ಅಂದರೆ, ಛಂದಸ್ಸು ಕಾವ್ಯದ ಹೊರಗಿನ ಅಂಶವಲ್ಲ; ಒಳಗಿನ ಅಂಶ. ಕಾವ್ಯಕ್ಕೆ ಚಲನೆಯುಂಟಾಗುವುದು ಛಂದದಿಂದಲೇ.

ಛಂದಸ್ಸಿನ ಸಂಬಂಧದದಲ್ಲಿ ಎರಡು ದೃಷ್ಟಿಗಳನ್ನು ಗುರುತಿಸಬಹುದು. ಒಂದು ಸೌಂದರ್ಯ ದೃಷ್ಟಿ, ಇನ್ನೊಂದು ಪ್ರಯೋಜನ ದೃಷ್ಟಿ. ಛಂದಸ್ಸು ಕಾವ್ಯದ ಸೌಂದರ್ಯಕ್ಕೆ ಕಳೆಕಟ್ಟಿ ಆನಂದವನ್ನುಂಟುಮಾಡುತ್ತದೆ ಎಂಬುದು ಸೌಂದರ್ಯ ದೃಷ್ಟಿ. ಕಾವ್ಯಕ್ಕೆ ಪ್ರವಹಿಸಲು ನೆರವಾಗುತ್ತದೆ ಎಂಬುದು ಅಥವಾ ಜ್ಞಾಪಕಕ್ಕೆ ಅನುಕೂಲವಾಗುತ್ತದೆ ಎಂಬುದು ಪ್ರಯೋಜನ ದೃಷ್ಟಿ. ಕಾವ್ಯವು ನೃತ್ಯಕಲೆ, ಸಂಗೀತಗಳ ಸಂಪರ್ಕದಿಂದ ಕಲೆಯ ಛಾಯೆಯನ್ನು ಹೊಂದುವುದೆಂಬುದು ಸೌಂದರ್ಯ ದೃಷ್ಟಿ. ಮಾತ್ರೆ, ಗಣ, ಚರಣ, ಪ್ರಾಸಗಳ ಲೆಕ್ಕಾಚಾರವನ್ನು ಒಳಗೊಂಡ ಶಾಸ್ತ್ರ ಎಂಬುದು ಪ್ರಯೋಜನ ದೃಷ್ಟಿ. ಬಲ್ಲವರಿಗೆ ಸೌಂದರ್ಯದಲ್ಲಿ ಪ್ರಯೋಜನವುಂಟು. ಪ್ರಯೋಜನದಲ್ಲಿ ಸೌಂದರ್ಯ ಒಂದುಗೂಡಬಹುದು.

ಶಾಸ್ತ್ರವೋ, ಕಲೆಯೋ?

ಛಂದಸ್ಸು ಶಾಸ್ತ್ರ ಎನ್ನಲಾಗುತ್ತದೆ. ಕಾವ್ಯದ ಲಯಗಳನ್ನು ಪರಿಶೀಲಿಸಿ ಅವುಗಳ ಲಕ್ಷಣ ಹೇಳುವ ಶಾಸ್ತ್ರವದು. ಆದರೆ ಅದನ್ನು ಬರಿಯ ಶಾಸ್ತ್ರವೆಂದು ತಿಳಿಯುವುದು ಸಾಧುವಲ್ಲ. ಏಕೆಂದರೆ ಅದಕ್ಕೆ ಕಲೆಯ ಸಂಪರ್ಕವೂ ಉಂಟು. ಛಂದಸ್ಸು ನೀಡುವ ಆನಂದವನ್ನು ಗಮನಿಸಿದರೆ ಅದಕ್ಕಿರುವ ಕಲೆಯ ಸಂಪರ್ಕದ ಅರಿವು ಆಗದಿರದು. ಛಂದಸ್ಸು ಒಂದು ಕೈಯನ್ನು ಕಾವ್ಯದೆಡೆಗೆ ಚಾಚಿದರೆ, ಇನ್ನೊಂದನ್ನು ಸಂಗೀತದೆಡೆಗೆ ಚಾಚುತ್ತದೆ. ಅದು ಭಾವಾನುಸಾರಣಿಯು ಹೇಗೋ ಹಾಗೆ ರಾಗಾನುವರ್ತಿಯೂ ಹೌದು. ಹೀಗೆ ಭಾವ, ರಾಗ, ತಾಳಗಳನ್ನು ಅನುಸರಿಸುವ ಛಂದಸ್ಸು ನಿಜವಾಗಿಯೂ ಒಂದು ಕಲೆ.

ಛಂದೋಗ್ರಂಥಗಳು

ಲಭ್ಯವಿರುವ ಕನ್ನಡ ಛಂದೋಗ್ರಂಥಗಳಲ್ಲಿ ಒಂದನೆಯ ನಾಗವರ್ಮ ಬರೆದ ಛಂದೋಂಬುಧಿ ಅತ್ಯಂತ ಪ್ರಾಚೀನವೂ ಪ್ರಮಾಣಭೂತವೂ ಪ್ರಸಿದ್ಧವೂ ಆದ ಗ್ರಂಥ. ಇದಲರಲಿ ಕನ್ನಡ ಛಂದಸ್ಸಿಗೆ ಸಂಬಂಧಿಸಿದ ನಾನಾ ವಿಷಯಗಳು ಸ್ವತಂತ್ರವಾಗಿಯೂ ತಕ್ಕಮಟ್ಟಿಗೆ ವಿಸ್ತಾರವಾಗಿಯೂ ಪ್ರತಿಪಾದಿತವಾಗಿವೆ. ಇದಕ್ಕೂ ಮುಂಚಿನ ಕಾವ್ಯಲಕ್ಷಣ ಗ್ರಂಥವಾದ ಕವಿರಾಜಮಾರ್ಗ ಕನ್ನಡ ಛಂದಸ್ಸಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಒಳಗೊಂಡಿದೆ. ಮಾತ್ರವಲ್ಲ, ಈಶ್ವರ ಕವಿಯ ಕವಿಜಿಹ್ವಾಬಂಧನಂ, ಗುಣಚಂದ್ರನ ಛಂದಸ್ಸಾರ, ಶಾಲ್ಯದ ಕೃಷ್ಣರಾಜನ ಷಟ್ಪ್ರತ್ಯಯ ಮೊದಲಾದ ಛಂದೋಗ್ರಂಥಗಳಲ್ಲಿ ಛಂದಸ್ಸಿನ ಸಾಮಾನ್ಯ ವಿಷಯಗಳನ್ನೂ ಕನ್ನಡ ಛಂದಸ್ಸನ್ನೂ ಕುರಿತಂತೆ ಯಥೋಚಿತವಾಗಿ ವಿಷಯ ನಿರೂಪಣೆ ಕಂಡುಬರುತ್ತದೆ.

ಕನ್ನಡ ಛಂದಸ್ಸಿನ ಸ್ವರೂಪ

ಕನ್ನಡದಲ್ಲಿ ಪ್ರಚಲಿತದಲ್ಲಿರುವ ಪದ್ಯಜಾತಿಗಳಲ್ಲಿ ಮೂರು ವಿಧ. ವರ್ಣವೃತ್ತಗಳು, ಮಾತ್ರವೃತ್ತಗಳು ಮತ್ತು ಅಂಶವೃತ್ತಗಳು. ವರ್ಣವೃತ್ತಗಳಲ್ಲಿ ಪ್ರತಿಪಾದಗಳಲ್ಲಿಯೂ ನಿರ್ದಿಷ್ಟವಾದ ಅಕ್ಷರ ಸಂಖ್ಯೆಯಿದ್ದು ಲಘುವೋ ಗುರುವೋ ಆಗಿರುವ ಆಯಾ ಅಕ್ಷರಗಳ ವಿನ್ಯಾಸವೂ ನಿರ್ದಿಷ್ಟವಾಗಿರುತ್ತದೆ. ಮಾತ್ರಾವೃತ್ತಗಳಲ್ಲಿ ಪ್ರತಿಪಾದದಲ್ಲಿಯೂ ಇಷ್ಟಿಷ್ಟು ಮಾತ್ರೆಗಳ ಇಷ್ಟಿಷ್ಟು ಗಣಗಳೆಂದಿದ್ದು, ಮಾತ್ರಾ ಸಂಖ್ಯೆಗೆ ಅನುಗುಣವಾಗಿ ಕೆಲವು ಸಂದರ್ಭಗಳಲ್ಲಿ ಕೆಲವು ಗಣನಿಯಮಗಳನ್ನು ಅನುಸರಿಸಿ ಗಣವಿಭಾಗವಿರುತ್ತದೆ. ಅಂಶವೃತ್ತಗಳಲ್ಲಿ ಪ್ರತಿಪಾದದಲ್ಲಿಯೂ ವಾಚನದ ಅಥವಾ ಗಾಯನದ ಗತಿಯನ್ನು ಅನುಸರಿಸಿ, ತಾಳಲಯಗಳು ಸರಿಯಾಗಿ ಹೊಂದಿಕೊಳ್ಳಲು ಅನುವಾಗುವಂತೆ ಅಕ್ಷರಗಳಿಂದ ಕೂಡಿದ ಗಣಗಳು ಬಂದಿರುತ್ತವೆ. ಅಚ್ಚಕನ್ನಡ ಮಟ್ಟುಗಳು ಅಂಶವೃತ್ತದವು.

ಸಂಸ್ಕೃತ ಛಂದಸ್ಸಿನ ಮೂಲದ ವರ್ಣವೃತ್ತಗಳು

ಪ್ರಾಚೀನ ಕನ್ನಡ ಸಾಹಿತ್ಯದ ಕಾವ್ಯಗಳೂ ಪುರಾಣಗಳೂ ವಿಶೇಷವಾಗಿ ಚಂಪೂ ಪದ್ಧತಿಯಲ್ಲಿ ರಚಿತವಾಗಿವೆ. ಚಂಪೂ ಪದ್ಧತಿಯ ಚೌಕಟ್ಟು ಮುಖ್ಯವಾಗಿ ಗದ್ಯ ಹಾಗೂ ಕಂದ, ವೃತ್ತಗಳಿಂದ ರಚಿತವಾಗಿದೆ. ಸಮ, ಅರ್ಧಸಮ ಮತ್ತು ವಿಷಮ ಎಂಬ ಅವುಗಳ ಮೂರು ಪ್ರಕಾರಗಳಲ್ಲಿ ಮೊದಲನೆಯದೇ ವಿಶೇಷವಾಗಿ ಬಳಕೆಯಾಗಿದ್ದು, ಉಳಿದವು ಕ್ವಚಿತ್ತಾಗಿ ಬಂದಿವೆ. ವರ್ಣವೃತ್ತಗಳಲ್ಲಿ ಕೆಲವನ್ನು ಸಂಸ್ಕೃತ ಛಂದಸ್ಸಿನಿಂದ ನೇರವಾಗಿ ಕನ್ನಡಕ್ಕೆ ತೆಗೆದುಕೊಂಡಿದೆ.

ಕನ್ನಡ ಪದ್ಯಸಾಹಿತ್ಯದಲ್ಲಿ ಬಹುಪ್ರಚಲಿತವಾಗಿರುವ ವರ್ಣವೃತ್ತಗಳು ಖ್ಯಾತ ಕರ್ಣಾಟಕಗಳು ಎಂಬ ಹೆಸರಿನಿಂದ ರೂಢಿಯಲ್ಲಿವೆ. ಇವು ಶಾರ್ದೂಲವಿಕ್ರೀಡಿತ, ಮತ್ತೇಭವಿಕ್ರೀಡಿತ, ಉತ್ಪಲಮಾಲೆ, ಚಂಪಕಮಾಲೆ, ಸ್ರಗ್ಧರೆ ಮತ್ತು ಮಹಾಸ್ರಗ್ಧರೆ ಎಂಬ ಆರು ವೃತ್ತಗಳು. ಇವು ಸರಿಸುಮಾರು ಏಳನೇ ಶತಮಾನದಿಂದ ಕನ್ನಡ ಶಾಸನಗಳಲ್ಲಿಯೂ ಕಾವ್ಯಗಳಲ್ಲಿಯೂ ಬಳಕೆಯಲ್ಲಿವೆ.

ಪ್ರಾಕೃತಕ್ಕೆ ವಿಶಿಷ್ಟವಾದ ಮಾತ್ರಾಗಣ ಛಂದಸ್ಸು

ಕನ್ನಡ ಸಾಹಿತ್ಯದ ಕಾವ್ಯ ಶಾಸ್ತ್ರಾದಿ ಗ್ರಂಥಗಳಲ್ಲಿ ವಿಶೇಷವಾಗಿ ಬಳಕೆಯಾಗಿರುವ ಕಂದಪದ್ಯವೂ ವಿರಳವಾಗಿ ಬಳಕೆಯಾಗಿರುವ ರಗಳೆಯೂ ಈ ಗುಂಪಿನಲ್ಲಿವೆ. ಸಂಸ್ಕೃತದ ಆರ್ಯಾವೃತ್ತಗಳ ಮೂಲಕ ಆರ್ಯಾಗೀತೆಯೇ ಪ್ರಾಕೃತದಲ್ಲಿ ಸ್ಕಂಧಕವೆಂದಾಗಿ ಈ ಮೂಲಕ ಕನ್ನಡಕ್ಕೆ ಬಂದು ಕಂದ ಎಂಬ ಹೆಸರಿನಲ್ಲಿ ರೂಢಿಯಾಗಿರುವಂತೆ ತೋರುತ್ತದೆ. ಲಕ್ಷಣಗ್ರಂಥಗಳ ರಚನೆಗೆ ಕಂದಪದ್ಯಗಳು ಹೆಚ್ಚಾಗಿ ಬಳಕೆಯಾಗಿವೆ. ಇದನ್ನೇ ಬಳಸಿ ಕೃತಿ ರಚನೆ ಮಾಡಿರುವುದೂ ಇದೆ. ಜನ್ನನ ಯಶೋಧರ ಚರಿತೆ ಕಾವ್ಯವಾಗಿಯೂ ಸಮಗ್ರವಾಗಿ ಕಂದದಲ್ಲಿ ರಚಿತವಾಗಿದೆ.

ಹರಿಹರ ಮತ್ತು ಅವನೀಚಿನ ಕೆಲವು ಕವಿಗಳು ರಚಿಸಿರುವ ಕೃತಿಗಳು ರಗಳೆಯಲ್ಲಿವೆ. ನಾಗವರ್ಮ ಮತ್ತು ಜಯಕೀರ್ತಿ ಈ ಛಂದಸ್ಸಿನ ಲಕ್ಷಣಗಳನ್ನು ಹೇಳಿದವರಲ್ಲಿ ಪ್ರಮುಖರು. ಮಂದಾನಿಲ, ಲಲಿತ ಮತ್ತು ಉತ್ಸಾಹ ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿರುವ ಮೂರು ರಗಳೆಗಳು ಹರಿಹರನ ಮತ್ತು ಆನಂತರ ಕಾವ್ಯಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತವೆ.

ಅಚ್ಚಕನ್ನಡ ಛಂದಸ್ಸಿನ ಮಟ್ಟುಗಳು

ಇದನ್ನು ನಾಗವರ್ಮನು ಕರ್ಣಾಟಕ ವಿಷಯಜಾತಿವೃತ್ತ ಎಂದೂ ಜಯಕೀರ್ತಿಯು ಕರ್ಣಾಟಕ ವಿಷಯಭಾಷಾಜಾತಿ ಎಂದೂ ಕರೆದಿದ್ದಾರೆ. ಅಕ್ಕರ, ತ್ರಿಪದಿ, ಏಳೆ, ಚೌಪದಿ, ಛಂದೋವತಂಸ, ಅಕ್ಕರಿಕೆ, ಮದನವತಿ, ಗೀತಿಕೆ, ಉತ್ಸಾಹ ಮತ್ತು ಷಟ್ಪದಿಗಳೆಂಬ ಹತ್ತು ಮುಖ್ಯವಾದ ಮಟ್ಟುಗಳನ್ನು ನಾಗವರ್ಮ ಹೇಳಿದ್ದಾನೆ.

ಅಕ್ಕರ: ಇದರಲ್ಲಿ ಪಿರಿಯಕ್ಕರ, ದೊರೆಯಕ್ಕರ, ನಡುವಕ್ಕರ, ಎಡೆಯಕ್ಕರ ಮತ್ತು ಕಿರಿಯಕ್ಕರ ಎಂಬ ಐದು ಪ್ರಬೇಧಗಳಿವೆ. ಸಂಸ್ಕೃತದಲ್ಲಿ ಇವಕ್ಕೆ ಕ್ರಮವಾಗಿ ಮಹಾಕ್ಷರ, ಸಮಾನಾಕ್ಷರ, ಮಧ್ಯಾಕ್ಷರ, ಅಂತರಾಕ್ಷರ ಮತ್ತು ಅಲ್ಪಾಕ್ಷರಗಳೆಂದು ಕರೆಯಲಾಗುತ್ತದೆ.

ತ್ರಿಪದಿ: ಮೂರುಸಾಲಿನ ಒಂದು ಪದ್ಯಜಾತಿ. ಕನ್ನಡದಲ್ಲಿ ಬಾದಾಮಿ ಶಾಸನದ ತ್ರಿಪದಿಗಳೇ ಅತ್ಯಂತ ಪ್ರಾಚೀನವಾದುದು. ಆದರೆ ಕನ್ನಡ ಲಿಖಿತ ಸಾಹಿತ್ಯ ದೊರೆಯುವುದಕ್ಕೆ ಮೊದಲೇ ಜನಪದ ಸಾಹಿತ್ಯದ ರೂಪದಲ್ಲಿ ತ್ರಿಪದಿಗಳು ಪ್ರಚಲಿತದಲ್ಲಿರುವಂತೆ ಕಾಣುತ್ತವೆ. ವಿದ್ಯಾವಂತರಲ್ಲದವರು, ಅಕ್ಷರ ಸಂಸ್ಕೃತಿ ಇಲ್ಲದವರು ಸಹ ತ್ರಿಪದಿಗಳನ್ನು ಕಟ್ಟಿ ಹಾಡಿ ನಲಿಯುತ್ತಿದ್ದರೆಂಬುದಕ್ಕೆ ಶಾಸನಗಳಲ್ಲಿ ಸಾಕ್ಷಿ ದೊರೆತಿದೆ. ಬೀಸುವಾಗ, ಕುಟ್ಟುವಾಗ, ಸಾಮಾನ್ಯ ಜನರು ತ್ರಿಪದಿಗಳನ್ನು ಹಾಡುತ್ತಿದ್ದರು. ಇವೆಲ್ಲ ಮನೋಲ್ಲಾಸಕ್ಕೆ ಅಗತ್ಯವಾದ ಕ್ರಿಯೆಗಳಾಗಿದ್ದವು.

ಏಳೆ: ಇದಕ್ಕೆ ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ನಿದರ್ಶನಗಳಿಲ್ಲ. ಜನಪದ ಸಾಹಿತ್ಯದಲ್ಲಿಯೂ ಹೊಸಗನ್ನಡ ಕಾವ್ಯದಲ್ಲಿಯೂ ಈಚೆಗೆ ವಿರಳವಾಗಿ ನಿದರ್ಶನಗಳು ದೊರೆಯುತ್ತವೆ. ನಾಗವರ್ಮ, ಜಯಕೀರ್ತಿ ಮುಂತಾದ ಲಾಕ್ಷಣಿಕರು ಈ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ʼನೇತಿ ನೇತಿ’- ವಾಸ್ತವ ಮತ್ತು ತೋರಿಕೆಯಲ್ಲಿ ಸತ್ಯದ ಹುಡುಕಾಟ

ಚೌಪದಿ: ಇದರಲ್ಲಿ ಅಂಶಗಣ ಚೌಪದಿ ಮತ್ತು ಮಾತ್ರಾಗಣ ಚೌಪದಿ ಎಂಬ ಎರಡು ವಿಧಗಳಿವೆ. ಇವರಡರ ಹುಟ್ಟು ಮತ್ತು ಸ್ವರೂಪ ಬೇರೆಯೆ ಆಗಿದೆ. ಕನ್ನಡದಲ್ಲಿ ಅಂಶಗಣ ಲಕ್ಷಣದ (ನಾಗವರ್ಮ ಮತ್ತು ಜಯಕೀರ್ತಿ ವಿವರಿಸಿದ) ಚೌಪದಿ ದೊರೆತಿರುವುದು ಒಂದು ಮಾತ್ರ. ಮಾತ್ರಾಗಣದ ಚೌಪದಿಯ ಲಕ್ಷಣಗಳನ್ನು ಪ್ರಾಚೀನ ಲಕ್ಷಣ ಗ್ರಂಥಗಳಲ್ಲಿ ಹೇಳಿಲ್ಲ. ನಾಗವರ್ಮನ ಗ್ರಂಥದಲ್ಲಿ ಹೇಳಿರುವ ಇಂಥ ಲಕ್ಷಣಗಳು ನಡುಗನ್ನಡ ಕಾಲದ ಕಾವ್ಯ, ದಾಸರ ಪದಗಳಲ್ಲಿ ಕಂಡುಬರುತ್ತವೆ.

ಛಂದೋವತಂಸ: ಇದಕ್ಕೆ ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಉದಾಹರಣೆಗಳಿಲ್ಲ. ನಡುಗನ್ನಡ ಕಾವ್ಯ ಮತ್ತು ದಾಸರ ಪದಗಳಲ್ಲಿ ಇದರ ಲಕ್ಷಣಗಳನ್ನು ಹೋಲುವ ಪದ್ಯಗಳಿವೆ.

ಅಕ್ಕರಿಕೆ: ಮೊದಲಿಗೆ ಅಂಶಗಣದಂತೆ ನಿರೂಪಿತವಾಗಿವೆ ಇದರ ಲಕ್ಷಣಗಳು. ನಂತರ ಮಾತ್ರಾಗಣವಾಗಿ ಪರಿಣಮಿಸಿದಂತೆ ತೋರುತ್ತವೆ.

ಮದನವತಿ: ನಾಗವರ್ಮ ಮತ್ತು ಜಯಕೀರ್ತಿಯ ಗ್ರಂಥಗಳಲ್ಲಿ ಉಲ್ಲೇಖವಾಗಿರುವ ಇದು ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಕಂಡುಬಂದಿಲ್ಲ.

ಗೀತಿಕೆ: ಇದು ಗೇಯಾತ್ಮಕವಾದದ್ದು. ಏಳೆ, ತ್ರಿಪದಿ, ಸಾಂಗತ್ಯ, ಗೀತಿಕೆ- ಇವೆಲ್ಲ ಒಂದೇ ಛಂದೋರೀತಿಯವಾದ್ದರಿಂದ ಇವಕ್ಕೆಲ್ಲ ಪರಸ್ಪರ ಸಂಬಂಧವಿದ್ದಂತೆ ತೋರುತ್ತದೆ. ಗೀತಿಕೆಯ ಮೊದಲ ಉಲ್ಲೇಖ ಕಂಡಿರುವುದು ಕವಿರಾಜ ಮಾರ್ಗದಲ್ಲಿ. ಉಳಿದಂತೆ ಪ್ರಾಚೀನ ಕಾವ್ಯಗಳಲ್ಲಿ ಗೀತಿಕೆ ಕಂಡುಬರುವುದಿಲ್ಲ.

ಷಟ್ಪದಿ: ಅಚ್ಚಕನ್ನಡದ ಮಟ್ಟುಗಳಲ್ಲಿ ಗಮನಾರ್ಹವಾದ ಮಟ್ಟಿದು. ಅಂಶಗಣದ ಒಂದು ಷಟ್ಪದಿ ಕಾಣಿಸಿಕೊಂಡಿದ್ದರೆ, ಮಾತ್ರಾ ಗಣದಲ್ಲಿ- ಶರ, ಕುಸುಮ, ಭೋಗ, ಭಾಮಿನಿ, ಪರಿವರ್ಧಿನಿ ಮತ್ತು ವಾರ್ಧಕ ಎಂಬ ಆರು ಷಟ್ಪದಿಗಳು ಪ್ರಸಿದ್ಧವಾಗಿವೆ.

ಇದನ್ನೂ ಓದಿ: ಧೀಮಹಿ ಅಂಕಣ: ಪ್ರಾಚೀನ ಭಾರತದಲ್ಲಿ ಸಪ್ತರ್ಷಿಗಳ ನ್ಯಾಯಾಡಳಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Bengaluru News: ಸ್ಕಾಯ್ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಿದ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ

Bengaluru News: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.

VISTARANEWS.COM


on

Apollo International Public School introduced Sqay samara kale as part of the syllabus
Koo

ಬೆಂಗಳೂರು: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು (Bengaluru News) ಪರಿಚಯಿಸಿದೆ.

ಗುರುವಾರ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡಲಾಯಿತು.

ಶಾಲೆಯ ಪ್ರಾಚಾರ್ಯೆ ಡಾ. ವೇದವತಿ ಬಿ.ಎ. ಮಾತನಾಡಿ, ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru Power Cut: ಜು.27, 28, 30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷೆ ಐಶ್ವರ್ಯ ಡಿಕೆಎಸ್ ಹೆಗ್ಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Wonderla Offer: ವಂಡರ್‌ಲಾದಿಂದ ವಿಶೇಷ ಆಫರ್‌; 1 ಟಿಕೆಟ್‌ ಖರೀದಿಸಿದರೆ ಮತ್ತೊಂದು ಟಿಕೆಟ್‌ ಫ್ರೀ!

ಈ ವೇಳೆ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.

Continue Reading

ದೇಶ

NEET UG 2024: ಕೊನೆಗೂ ನೀಟ್‌ ಫೈನಲ್ ಫಲಿತಾಂಶ ಪ್ರಕಟ; ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆ, ಇಲ್ಲಿದೆ ಪಟ್ಟಿ

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ಫಲಿತಾಂಶ ಹೇಗೆ ನೋಡುವುದು ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

NEET UG 2024
Koo

ನವದೆಹಲಿ: ಸುಪ್ರೀಂ ಕೋರ್ಟ್‌ (Supreme Court) ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಶುಕ್ರವಾರ (ಜುಲೈ 26) ನೀಟ್‌ ಯುಜಿ 2024 (NEET UG 2024) ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಕೊನೆಗೂ ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ನೀಟ್‌ ಕೌನ್ಸೆಲಿಂಗ್‌ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

ಇನ್ನು ಪರಿಷ್ಕೃತ ಫಲಿತಾಂಶದ ಬಳಿಕ ದೇಶದ ಟಾಪರ್‌ಗಳ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ. ಜೂನ್‌ 4ರಂದು ಪ್ರಕಟವಾದ ಫಲಿತಾಂಶದಲ್ಲಿ 67 ಮಂದಿ ಟಾಪ್‌ ಎನಿಸಿದ್ದರು. ಮೃದುಲ್‌ ಮಾನ್ಯ ಆನಂದ್‌, ಆಯುಷ್‌ ನೌಗ್ರೈಯಾ, ಮಜೀನ್‌ ಮಂಜೂರ್‌, ಪ್ರಚಿತಾ, ಸೌರವ್‌, ದಿವ್ಯಾಂಶ್‌, ಗನ್ಮಯ್‌ ಗಾರ್ಗ್‌, ಅರ್ಘ್ಯದೀಪ್‌ ದತ್ತ, ಶುಭಂ ಸೇನ್‌ಗುಪ್ತಾ, ಆರ್ಯನ್‌ ಯಾದವ್‌, ಪಾಲಾಂಶ ಅಗರ್ವಾಲ್‌, ರಜನೀಶ್‌ ಪಿ., ಶ್ರೀನಂದ್‌ ಶಮೀಲ್, ಮಾನೆ ನೇಹಾ ಕುಲದೀಪ್‌, ತೈಜಸ್‌ ಸಿಂಗ್‌ ಹಾಗೂ ದೇವೇಶ್‌ ಜೋಶಿ ಅವರು ಈ ಬಾರಿ ಟಾಪ್‌ ಬಂದಿದ್ದಾರೆ.

ನೀಟ್‌ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ನೀಟ್‌ ಅಧಿಕೃತ ವೆಬ್‌ಸೈಟ್‌ exams.nta.ac.in. ಗೆ ಭೇಟಿ ನೀಡಿ
  • NEET UG 2024 revised result ಎಂಬ ನೋಟಿಫಿಕೇಶನ್‌ ಮೇಲೆ ಕ್ಲಿಕ್‌ ಮಾಡಿ
  • ಇದಾದ ಬಳಿಕ ಹೊಸ ವಿಂಡೋ ಓಪನ್‌ ಆಗಲಿದ್ದು, ಲಾಗಿನ್‌ ಮಾಹಿತಿ ಸೇರಿ ಹಲವು ಮಾಹಿತಿ ಒದಗಿಸಿ
  • ಆಗ ನಿಮ್ಮ ಸ್ಕ್ರೀನ್‌ ಮೇಲೆ ನೀಟ್‌ ಯುಜಿ ಫಲಿತಾಂಶ ಗೋಚರವಾಗಲಿದೆ
  • ಭವಿಷ್ಯದ ರೆಫರೆನ್ಸ್‌ಗಳಿಗಾಗಿ ನೀಟ್‌ ಪರೀಕ್ಷೆಯ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading

ದೇಶ

NEET UG 2024: ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಿದ್ದು ಯಾವ ಕೇಂದ್ರದಿಂದ? ಸಿಬಿಐ ಸ್ಫೋಟಕ ಮಾಹಿತಿ ಬಯಲು

NEET UG 2024: ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ ಎಂಬುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿರುವ ಜತೆಗೆ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನೀಟ್‌ ವಿರುದ್ಧ ನಿರ್ಣಯವನ್ನೇ ಮಂಡಿಸಲಾಗಿದೆ. ಇದರ ಬೆನ್ನಲ್ಲೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕೃಿಗಳು, ಸ್ಫೋಟಕ ಮಾಹಿತಿ ಬಯಲಿಗೆಳೆದಿದ್ದಾರೆ. ಜಾರ್ಖಂಡ್‌ನ ಜಹಾರಿಬಾಗ್‌ನಲ್ಲಿರುವ (Hazaribagh) ಕಚೇರಿಯಿಂದಲೇ ಪ್ರಶ್ನೆಪತ್ರಿಕೆಯನ್ನು (NEET Paper Leak Case) ಕಳ್ಳತನ ಮಾಡಲಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‌

ಹೌದು, ಹಜಾರಿಬಾಗ್‌ನಲ್ಲಿರುವ ಎನ್‌ಟಿಎ ಸಿಟಿ ಕೋಆರ್ಡಿನೇಟರ್‌ ಕಮ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ ಮತ್ತು ಸೆಂಟರ್‌ ಸೂಪರಿಂಟೆಂಡೆಂಟ್‌ ಕಮ್‌ ವೈಸ್‌ ಪ್ರಿನ್ಸಿಪಾಲ್‌ ಆಫ್‌ ಓಯಸಿಸ್‌ ಸ್ಕೂಲ್‌ನಿಂದ ಅಧಿಕಾರಿಗಳ ಕಣ್ಣುತಪ್ಪಿಸಿ ಅಥವಾ ಅವರ ಮೌನಸಮ್ಮತಿಯ ಮಧ್ಯೆಯೇ ನೀಟ್‌ ಪ್ರಶ್ನೆಪತ್ರಿಕೆಯನ್ನು ಎಗರಿಸಲಾಗಿದೆ. ನೀಟ್‌ ಪರೀಕ್ಷೆ ನಡೆದ ಮೇ 5ರಂದು ಪಂಕಜ್‌ ಕುಮಾರ್‌ ಅಲಿಯಾಸ್‌ ಆದಿತ್ಯ ಅಲಿಯಾಸ್‌ ಸಾಹಿಲ್‌ ಎಂಬಾತನು ಪ್ರಶ್ನೆಪತ್ರಿಕೆಯನ್ನು ತೆಗೆದುಕೊಂಡು ಹೋಗಿ, ಹಣ ಕೊಟ್ಟವರಿಗೆ ಅದನ್ನು ಹಂಚಿಕೆ ಮಾಡಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

Continue Reading

ದೇಶ

NEET UG 2024: ನೀಟ್‌ ಪರಿಷ್ಕೃತ ಫಲಿತಾಂಶ ಪ್ರಕಟ ಆಗಿಲ್ಲ, ಹಳೇ ಲಿಂಕ್‌ ಹಂಚಿಕೆ ಎಂದ ಕೇಂದ್ರ; ಮತ್ತೊಂದು ಪ್ರಮಾದ?

NEET UG 2024: ನೀಟ್‌ ವೆಬ್‌ಸೈಟ್‌ನಲ್ಲಿಯೇ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ ಎಂಬ ಲಿಂಕ್‌ ಕಾಣಿಸಿಕೊಂಡಿತ್ತು. ಇದರಿಂದಾಗಿ ನೀಟ್‌ ಯುಜಿ 2024ರ ಫಲಿತಾಂಶ ಪ್ರಕಟವಾಗಿದೆ ಎಂದು ವರದಿ ಮಾಡಲಾಗಿತ್ತು. ಆದರೆ, ಇದು ಹಳೆಯ ಲಿಂಕ್‌ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG 2024) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ (Supreme Court) ಮೆಟ್ಟಿಲೇರಿದ ಬಳಿಕ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ನೀಟ್‌ ರದ್ದುಗೊಳಿಸುವ ಕುರಿತು ನಿರ್ಣಯ ಮಂಡಿಸಲಾಗುತ್ತಿದೆ. ಇದರ ಬೆನ್ನಲ್ಲೇ, ನೀಟ್‌ ಪರೀಕ್ಷೆಯ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಗುರುವಾರ (ಜುಲೈ 25) ನೀಟ್‌ ಯುಜಿ 2024 ಫಲಿತಾಂಶವನ್ನು ಪ್ರಕಟಿಸಿದೆ ಎಂಬುದಾಗಿ ವದಂತಿ ಹರಡಿದೆ. ಇದರ ಬೆನ್ನಲ್ಲೇ, ಇನ್ನೂ ಫಲಿತಾಂಶ ಪ್ರಕಟಿಸಿಲ್ಲ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.

ಕಳೆದ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು. ಅದರಂತೆ, ಈಗ ಪರಿಷ್ಕೃತ ಫಲಿತಾಂಶ ಪ್ರಕಟವಾಗಿದೆ ಎಂದೇ ಹೇಳಲಾಗುತ್ತಿತ್ತು. ಆದರೆ, “ನೀಟ್‌ ಯುಜಿ 2024 ಪರಿಷ್ಕೃತ ಫಲಿತಾಂಶ ಪ್ರಕಟವಾಗಿಲ್ಲ. ವೆಬ್‌ಸೈಟ್‌ನಲ್ಲಿ ಹಳೆಯ ಲಿಂಕ್‌ ಅನ್ನೇ ಶೇರ್‌ ಮಾಡಲಾಗಿದೆ. ಶೀಘ್ರದಲ್ಲೇ ಪರಿಷ್ಕೃತ ಫಲಿತಾಂಶ ಪ್ರಕಟಿಸಲಾಗುತ್ತದೆ” ಎಂಬುದಾಗಿ ಶಿಕ್ಷಣ ಸಚಿವಾಲಯ ತಿಳಿಸಿದೆ.

NEET PG 2024
NEET PG 2024

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Assembly session: ನೀಟ್ ಪರೀಕ್ಷೆ ರದ್ದು, ಒನ್ ನೇಷನ್-ಒನ್ ಎಲೆಕ್ಷನ್ ವಿರುದ್ಧ ನಿರ್ಣಯ; ಉಭಯ ಸದನಗಳಲ್ಲೂ ಅಂಗೀಕಾರ

Continue Reading
Advertisement
Actor Darshan Astrologer Chanda Pandey Said Facing Problems Because Of His vig
ಕ್ರೈಂ18 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ45 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ48 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ56 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ2 hours ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ2 hours ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌