Chandassu: ಕನ್ನಡ ಛಂದಸ್ಸಿನ ಮೇಲೊಂದು ನೋಟ… - Vistara News

ಶಿಕ್ಷಣ

Chandassu: ಕನ್ನಡ ಛಂದಸ್ಸಿನ ಮೇಲೊಂದು ನೋಟ…

ಛಂದಸ್ಸಿನ ಸಂಬಂಧದದಲ್ಲಿ ಎರಡು ದೃಷ್ಟಿಗಳನ್ನು ಗುರುತಿಸಬಹುದು. ಒಂದು ಸೌಂದರ್ಯ ದೃಷ್ಟಿ, ಇನ್ನೊಂದು ಪ್ರಯೋಜನ ದೃಷ್ಟಿ. ಛಂದಸ್ಸು ಕಾವ್ಯದ ಸೌಂದರ್ಯಕ್ಕೆ ಕಳೆಕಟ್ಟಿ ಆನಂದವನ್ನುಂಟುಮಾಡುತ್ತದೆ ಎಂಬುದು ಸೌಂದರ್ಯ ದೃಷ್ಟಿ. ಕಾವ್ಯಕ್ಕೆ ಪ್ರವಹಿಸಲು ನೆರವಾಗುತ್ತದೆ ಎಂಬುದು ಅಥವಾ ಜ್ಞಾಪಕಕ್ಕೆ ಅನುಕೂಲವಾಗುತ್ತದೆ ಎಂಬುದು ಪ್ರಯೋಜನ ದೃಷ್ಟಿ.

VISTARANEWS.COM


on

kannada inscription
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡ ಕಾವ್ಯಗಳಲ್ಲಿ (kannada poetry) ಮೂರು ಪ್ರಕಾರದ ಛಂದಸ್ಸುಗಳು (Chandassu) ಕಂಡುಬರುತ್ತವೆ. ಒಂದು, ಕನ್ನಡಕ್ಕೆ ವಿಶಿಷ್ಟವಾದ ಛಂದಸ್ಸು. ಇನ್ನೊಂದು, ಚಂಪೂಕಾವ್ಯಗಳಲ್ಲಿ ಮಿಳಿತವಾಗಿರುವ ಸಂಸ್ಕೃತ (Sanskrit) ವರ್ಣಛಂದಸ್ಸು. ಮೂರನೇಯದು, ಪ್ರಾಕೃತಕ್ಕೆ ವಿಶಿಷ್ಟವಾದ ಮಾತ್ರಾಗಣ ಛಂದಸ್ಸು.

ಅದಕ್ಕೂ ಮುನ್ನ, ಛಂದಸ್ಸಿನ ವ್ಯುತ್ಪತ್ತಿ ಮತ್ತು ಕಲ್ಪನೆಗಳತ್ತ ಗಮನ ಹರಿಸೋಣ. ಛಂದಸ್ಸಿನ ವ್ಯುತ್ಪತ್ತಿಯನ್ನು ಛದ್‌ ಮತ್ತು ಛಂದ್-‌ ಈ ಎರಡೂ ಧಾತುಗಳಿಂದ ಸಾಧಿಸುತ್ತಾರೆ. ಎರಡೂ ಧಾತುಗಳ ಅರ್ಥ ಬಹುತೇಕ ಒಂದೇ. ಆಚ್ಛಾದಿಸು ಅಥವಾ ಹೊದಿಸು ಎಂಬ ಅರ್ಥವನ್ನು ಕೊಡುತ್ತವೆ. “ಆಹ್ಲಾದವನ್ನುಂಟು ಮಾಡುವುದು ಯಾವುದೇ ಅದು ಛಂದ” ಎಂದೂ ಅರ್ಥೈಸುವುದುಂಟು. ಅಂದರೆ, ಛಂದಸ್ಸು ಕಾವ್ಯದ ಹೊರಗಿನ ಅಂಶವಲ್ಲ; ಒಳಗಿನ ಅಂಶ. ಕಾವ್ಯಕ್ಕೆ ಚಲನೆಯುಂಟಾಗುವುದು ಛಂದದಿಂದಲೇ.

ಛಂದಸ್ಸಿನ ಸಂಬಂಧದದಲ್ಲಿ ಎರಡು ದೃಷ್ಟಿಗಳನ್ನು ಗುರುತಿಸಬಹುದು. ಒಂದು ಸೌಂದರ್ಯ ದೃಷ್ಟಿ, ಇನ್ನೊಂದು ಪ್ರಯೋಜನ ದೃಷ್ಟಿ. ಛಂದಸ್ಸು ಕಾವ್ಯದ ಸೌಂದರ್ಯಕ್ಕೆ ಕಳೆಕಟ್ಟಿ ಆನಂದವನ್ನುಂಟುಮಾಡುತ್ತದೆ ಎಂಬುದು ಸೌಂದರ್ಯ ದೃಷ್ಟಿ. ಕಾವ್ಯಕ್ಕೆ ಪ್ರವಹಿಸಲು ನೆರವಾಗುತ್ತದೆ ಎಂಬುದು ಅಥವಾ ಜ್ಞಾಪಕಕ್ಕೆ ಅನುಕೂಲವಾಗುತ್ತದೆ ಎಂಬುದು ಪ್ರಯೋಜನ ದೃಷ್ಟಿ. ಕಾವ್ಯವು ನೃತ್ಯಕಲೆ, ಸಂಗೀತಗಳ ಸಂಪರ್ಕದಿಂದ ಕಲೆಯ ಛಾಯೆಯನ್ನು ಹೊಂದುವುದೆಂಬುದು ಸೌಂದರ್ಯ ದೃಷ್ಟಿ. ಮಾತ್ರೆ, ಗಣ, ಚರಣ, ಪ್ರಾಸಗಳ ಲೆಕ್ಕಾಚಾರವನ್ನು ಒಳಗೊಂಡ ಶಾಸ್ತ್ರ ಎಂಬುದು ಪ್ರಯೋಜನ ದೃಷ್ಟಿ. ಬಲ್ಲವರಿಗೆ ಸೌಂದರ್ಯದಲ್ಲಿ ಪ್ರಯೋಜನವುಂಟು. ಪ್ರಯೋಜನದಲ್ಲಿ ಸೌಂದರ್ಯ ಒಂದುಗೂಡಬಹುದು.

ಶಾಸ್ತ್ರವೋ, ಕಲೆಯೋ?

ಛಂದಸ್ಸು ಶಾಸ್ತ್ರ ಎನ್ನಲಾಗುತ್ತದೆ. ಕಾವ್ಯದ ಲಯಗಳನ್ನು ಪರಿಶೀಲಿಸಿ ಅವುಗಳ ಲಕ್ಷಣ ಹೇಳುವ ಶಾಸ್ತ್ರವದು. ಆದರೆ ಅದನ್ನು ಬರಿಯ ಶಾಸ್ತ್ರವೆಂದು ತಿಳಿಯುವುದು ಸಾಧುವಲ್ಲ. ಏಕೆಂದರೆ ಅದಕ್ಕೆ ಕಲೆಯ ಸಂಪರ್ಕವೂ ಉಂಟು. ಛಂದಸ್ಸು ನೀಡುವ ಆನಂದವನ್ನು ಗಮನಿಸಿದರೆ ಅದಕ್ಕಿರುವ ಕಲೆಯ ಸಂಪರ್ಕದ ಅರಿವು ಆಗದಿರದು. ಛಂದಸ್ಸು ಒಂದು ಕೈಯನ್ನು ಕಾವ್ಯದೆಡೆಗೆ ಚಾಚಿದರೆ, ಇನ್ನೊಂದನ್ನು ಸಂಗೀತದೆಡೆಗೆ ಚಾಚುತ್ತದೆ. ಅದು ಭಾವಾನುಸಾರಣಿಯು ಹೇಗೋ ಹಾಗೆ ರಾಗಾನುವರ್ತಿಯೂ ಹೌದು. ಹೀಗೆ ಭಾವ, ರಾಗ, ತಾಳಗಳನ್ನು ಅನುಸರಿಸುವ ಛಂದಸ್ಸು ನಿಜವಾಗಿಯೂ ಒಂದು ಕಲೆ.

ಛಂದೋಗ್ರಂಥಗಳು

ಲಭ್ಯವಿರುವ ಕನ್ನಡ ಛಂದೋಗ್ರಂಥಗಳಲ್ಲಿ ಒಂದನೆಯ ನಾಗವರ್ಮ ಬರೆದ ಛಂದೋಂಬುಧಿ ಅತ್ಯಂತ ಪ್ರಾಚೀನವೂ ಪ್ರಮಾಣಭೂತವೂ ಪ್ರಸಿದ್ಧವೂ ಆದ ಗ್ರಂಥ. ಇದಲರಲಿ ಕನ್ನಡ ಛಂದಸ್ಸಿಗೆ ಸಂಬಂಧಿಸಿದ ನಾನಾ ವಿಷಯಗಳು ಸ್ವತಂತ್ರವಾಗಿಯೂ ತಕ್ಕಮಟ್ಟಿಗೆ ವಿಸ್ತಾರವಾಗಿಯೂ ಪ್ರತಿಪಾದಿತವಾಗಿವೆ. ಇದಕ್ಕೂ ಮುಂಚಿನ ಕಾವ್ಯಲಕ್ಷಣ ಗ್ರಂಥವಾದ ಕವಿರಾಜಮಾರ್ಗ ಕನ್ನಡ ಛಂದಸ್ಸಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಒಳಗೊಂಡಿದೆ. ಮಾತ್ರವಲ್ಲ, ಈಶ್ವರ ಕವಿಯ ಕವಿಜಿಹ್ವಾಬಂಧನಂ, ಗುಣಚಂದ್ರನ ಛಂದಸ್ಸಾರ, ಶಾಲ್ಯದ ಕೃಷ್ಣರಾಜನ ಷಟ್ಪ್ರತ್ಯಯ ಮೊದಲಾದ ಛಂದೋಗ್ರಂಥಗಳಲ್ಲಿ ಛಂದಸ್ಸಿನ ಸಾಮಾನ್ಯ ವಿಷಯಗಳನ್ನೂ ಕನ್ನಡ ಛಂದಸ್ಸನ್ನೂ ಕುರಿತಂತೆ ಯಥೋಚಿತವಾಗಿ ವಿಷಯ ನಿರೂಪಣೆ ಕಂಡುಬರುತ್ತದೆ.

ಕನ್ನಡ ಛಂದಸ್ಸಿನ ಸ್ವರೂಪ

ಕನ್ನಡದಲ್ಲಿ ಪ್ರಚಲಿತದಲ್ಲಿರುವ ಪದ್ಯಜಾತಿಗಳಲ್ಲಿ ಮೂರು ವಿಧ. ವರ್ಣವೃತ್ತಗಳು, ಮಾತ್ರವೃತ್ತಗಳು ಮತ್ತು ಅಂಶವೃತ್ತಗಳು. ವರ್ಣವೃತ್ತಗಳಲ್ಲಿ ಪ್ರತಿಪಾದಗಳಲ್ಲಿಯೂ ನಿರ್ದಿಷ್ಟವಾದ ಅಕ್ಷರ ಸಂಖ್ಯೆಯಿದ್ದು ಲಘುವೋ ಗುರುವೋ ಆಗಿರುವ ಆಯಾ ಅಕ್ಷರಗಳ ವಿನ್ಯಾಸವೂ ನಿರ್ದಿಷ್ಟವಾಗಿರುತ್ತದೆ. ಮಾತ್ರಾವೃತ್ತಗಳಲ್ಲಿ ಪ್ರತಿಪಾದದಲ್ಲಿಯೂ ಇಷ್ಟಿಷ್ಟು ಮಾತ್ರೆಗಳ ಇಷ್ಟಿಷ್ಟು ಗಣಗಳೆಂದಿದ್ದು, ಮಾತ್ರಾ ಸಂಖ್ಯೆಗೆ ಅನುಗುಣವಾಗಿ ಕೆಲವು ಸಂದರ್ಭಗಳಲ್ಲಿ ಕೆಲವು ಗಣನಿಯಮಗಳನ್ನು ಅನುಸರಿಸಿ ಗಣವಿಭಾಗವಿರುತ್ತದೆ. ಅಂಶವೃತ್ತಗಳಲ್ಲಿ ಪ್ರತಿಪಾದದಲ್ಲಿಯೂ ವಾಚನದ ಅಥವಾ ಗಾಯನದ ಗತಿಯನ್ನು ಅನುಸರಿಸಿ, ತಾಳಲಯಗಳು ಸರಿಯಾಗಿ ಹೊಂದಿಕೊಳ್ಳಲು ಅನುವಾಗುವಂತೆ ಅಕ್ಷರಗಳಿಂದ ಕೂಡಿದ ಗಣಗಳು ಬಂದಿರುತ್ತವೆ. ಅಚ್ಚಕನ್ನಡ ಮಟ್ಟುಗಳು ಅಂಶವೃತ್ತದವು.

ಸಂಸ್ಕೃತ ಛಂದಸ್ಸಿನ ಮೂಲದ ವರ್ಣವೃತ್ತಗಳು

ಪ್ರಾಚೀನ ಕನ್ನಡ ಸಾಹಿತ್ಯದ ಕಾವ್ಯಗಳೂ ಪುರಾಣಗಳೂ ವಿಶೇಷವಾಗಿ ಚಂಪೂ ಪದ್ಧತಿಯಲ್ಲಿ ರಚಿತವಾಗಿವೆ. ಚಂಪೂ ಪದ್ಧತಿಯ ಚೌಕಟ್ಟು ಮುಖ್ಯವಾಗಿ ಗದ್ಯ ಹಾಗೂ ಕಂದ, ವೃತ್ತಗಳಿಂದ ರಚಿತವಾಗಿದೆ. ಸಮ, ಅರ್ಧಸಮ ಮತ್ತು ವಿಷಮ ಎಂಬ ಅವುಗಳ ಮೂರು ಪ್ರಕಾರಗಳಲ್ಲಿ ಮೊದಲನೆಯದೇ ವಿಶೇಷವಾಗಿ ಬಳಕೆಯಾಗಿದ್ದು, ಉಳಿದವು ಕ್ವಚಿತ್ತಾಗಿ ಬಂದಿವೆ. ವರ್ಣವೃತ್ತಗಳಲ್ಲಿ ಕೆಲವನ್ನು ಸಂಸ್ಕೃತ ಛಂದಸ್ಸಿನಿಂದ ನೇರವಾಗಿ ಕನ್ನಡಕ್ಕೆ ತೆಗೆದುಕೊಂಡಿದೆ.

ಕನ್ನಡ ಪದ್ಯಸಾಹಿತ್ಯದಲ್ಲಿ ಬಹುಪ್ರಚಲಿತವಾಗಿರುವ ವರ್ಣವೃತ್ತಗಳು ಖ್ಯಾತ ಕರ್ಣಾಟಕಗಳು ಎಂಬ ಹೆಸರಿನಿಂದ ರೂಢಿಯಲ್ಲಿವೆ. ಇವು ಶಾರ್ದೂಲವಿಕ್ರೀಡಿತ, ಮತ್ತೇಭವಿಕ್ರೀಡಿತ, ಉತ್ಪಲಮಾಲೆ, ಚಂಪಕಮಾಲೆ, ಸ್ರಗ್ಧರೆ ಮತ್ತು ಮಹಾಸ್ರಗ್ಧರೆ ಎಂಬ ಆರು ವೃತ್ತಗಳು. ಇವು ಸರಿಸುಮಾರು ಏಳನೇ ಶತಮಾನದಿಂದ ಕನ್ನಡ ಶಾಸನಗಳಲ್ಲಿಯೂ ಕಾವ್ಯಗಳಲ್ಲಿಯೂ ಬಳಕೆಯಲ್ಲಿವೆ.

ಪ್ರಾಕೃತಕ್ಕೆ ವಿಶಿಷ್ಟವಾದ ಮಾತ್ರಾಗಣ ಛಂದಸ್ಸು

ಕನ್ನಡ ಸಾಹಿತ್ಯದ ಕಾವ್ಯ ಶಾಸ್ತ್ರಾದಿ ಗ್ರಂಥಗಳಲ್ಲಿ ವಿಶೇಷವಾಗಿ ಬಳಕೆಯಾಗಿರುವ ಕಂದಪದ್ಯವೂ ವಿರಳವಾಗಿ ಬಳಕೆಯಾಗಿರುವ ರಗಳೆಯೂ ಈ ಗುಂಪಿನಲ್ಲಿವೆ. ಸಂಸ್ಕೃತದ ಆರ್ಯಾವೃತ್ತಗಳ ಮೂಲಕ ಆರ್ಯಾಗೀತೆಯೇ ಪ್ರಾಕೃತದಲ್ಲಿ ಸ್ಕಂಧಕವೆಂದಾಗಿ ಈ ಮೂಲಕ ಕನ್ನಡಕ್ಕೆ ಬಂದು ಕಂದ ಎಂಬ ಹೆಸರಿನಲ್ಲಿ ರೂಢಿಯಾಗಿರುವಂತೆ ತೋರುತ್ತದೆ. ಲಕ್ಷಣಗ್ರಂಥಗಳ ರಚನೆಗೆ ಕಂದಪದ್ಯಗಳು ಹೆಚ್ಚಾಗಿ ಬಳಕೆಯಾಗಿವೆ. ಇದನ್ನೇ ಬಳಸಿ ಕೃತಿ ರಚನೆ ಮಾಡಿರುವುದೂ ಇದೆ. ಜನ್ನನ ಯಶೋಧರ ಚರಿತೆ ಕಾವ್ಯವಾಗಿಯೂ ಸಮಗ್ರವಾಗಿ ಕಂದದಲ್ಲಿ ರಚಿತವಾಗಿದೆ.

ಹರಿಹರ ಮತ್ತು ಅವನೀಚಿನ ಕೆಲವು ಕವಿಗಳು ರಚಿಸಿರುವ ಕೃತಿಗಳು ರಗಳೆಯಲ್ಲಿವೆ. ನಾಗವರ್ಮ ಮತ್ತು ಜಯಕೀರ್ತಿ ಈ ಛಂದಸ್ಸಿನ ಲಕ್ಷಣಗಳನ್ನು ಹೇಳಿದವರಲ್ಲಿ ಪ್ರಮುಖರು. ಮಂದಾನಿಲ, ಲಲಿತ ಮತ್ತು ಉತ್ಸಾಹ ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿರುವ ಮೂರು ರಗಳೆಗಳು ಹರಿಹರನ ಮತ್ತು ಆನಂತರ ಕಾವ್ಯಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತವೆ.

ಅಚ್ಚಕನ್ನಡ ಛಂದಸ್ಸಿನ ಮಟ್ಟುಗಳು

ಇದನ್ನು ನಾಗವರ್ಮನು ಕರ್ಣಾಟಕ ವಿಷಯಜಾತಿವೃತ್ತ ಎಂದೂ ಜಯಕೀರ್ತಿಯು ಕರ್ಣಾಟಕ ವಿಷಯಭಾಷಾಜಾತಿ ಎಂದೂ ಕರೆದಿದ್ದಾರೆ. ಅಕ್ಕರ, ತ್ರಿಪದಿ, ಏಳೆ, ಚೌಪದಿ, ಛಂದೋವತಂಸ, ಅಕ್ಕರಿಕೆ, ಮದನವತಿ, ಗೀತಿಕೆ, ಉತ್ಸಾಹ ಮತ್ತು ಷಟ್ಪದಿಗಳೆಂಬ ಹತ್ತು ಮುಖ್ಯವಾದ ಮಟ್ಟುಗಳನ್ನು ನಾಗವರ್ಮ ಹೇಳಿದ್ದಾನೆ.

ಅಕ್ಕರ: ಇದರಲ್ಲಿ ಪಿರಿಯಕ್ಕರ, ದೊರೆಯಕ್ಕರ, ನಡುವಕ್ಕರ, ಎಡೆಯಕ್ಕರ ಮತ್ತು ಕಿರಿಯಕ್ಕರ ಎಂಬ ಐದು ಪ್ರಬೇಧಗಳಿವೆ. ಸಂಸ್ಕೃತದಲ್ಲಿ ಇವಕ್ಕೆ ಕ್ರಮವಾಗಿ ಮಹಾಕ್ಷರ, ಸಮಾನಾಕ್ಷರ, ಮಧ್ಯಾಕ್ಷರ, ಅಂತರಾಕ್ಷರ ಮತ್ತು ಅಲ್ಪಾಕ್ಷರಗಳೆಂದು ಕರೆಯಲಾಗುತ್ತದೆ.

ತ್ರಿಪದಿ: ಮೂರುಸಾಲಿನ ಒಂದು ಪದ್ಯಜಾತಿ. ಕನ್ನಡದಲ್ಲಿ ಬಾದಾಮಿ ಶಾಸನದ ತ್ರಿಪದಿಗಳೇ ಅತ್ಯಂತ ಪ್ರಾಚೀನವಾದುದು. ಆದರೆ ಕನ್ನಡ ಲಿಖಿತ ಸಾಹಿತ್ಯ ದೊರೆಯುವುದಕ್ಕೆ ಮೊದಲೇ ಜನಪದ ಸಾಹಿತ್ಯದ ರೂಪದಲ್ಲಿ ತ್ರಿಪದಿಗಳು ಪ್ರಚಲಿತದಲ್ಲಿರುವಂತೆ ಕಾಣುತ್ತವೆ. ವಿದ್ಯಾವಂತರಲ್ಲದವರು, ಅಕ್ಷರ ಸಂಸ್ಕೃತಿ ಇಲ್ಲದವರು ಸಹ ತ್ರಿಪದಿಗಳನ್ನು ಕಟ್ಟಿ ಹಾಡಿ ನಲಿಯುತ್ತಿದ್ದರೆಂಬುದಕ್ಕೆ ಶಾಸನಗಳಲ್ಲಿ ಸಾಕ್ಷಿ ದೊರೆತಿದೆ. ಬೀಸುವಾಗ, ಕುಟ್ಟುವಾಗ, ಸಾಮಾನ್ಯ ಜನರು ತ್ರಿಪದಿಗಳನ್ನು ಹಾಡುತ್ತಿದ್ದರು. ಇವೆಲ್ಲ ಮನೋಲ್ಲಾಸಕ್ಕೆ ಅಗತ್ಯವಾದ ಕ್ರಿಯೆಗಳಾಗಿದ್ದವು.

ಏಳೆ: ಇದಕ್ಕೆ ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ನಿದರ್ಶನಗಳಿಲ್ಲ. ಜನಪದ ಸಾಹಿತ್ಯದಲ್ಲಿಯೂ ಹೊಸಗನ್ನಡ ಕಾವ್ಯದಲ್ಲಿಯೂ ಈಚೆಗೆ ವಿರಳವಾಗಿ ನಿದರ್ಶನಗಳು ದೊರೆಯುತ್ತವೆ. ನಾಗವರ್ಮ, ಜಯಕೀರ್ತಿ ಮುಂತಾದ ಲಾಕ್ಷಣಿಕರು ಈ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ʼನೇತಿ ನೇತಿ’- ವಾಸ್ತವ ಮತ್ತು ತೋರಿಕೆಯಲ್ಲಿ ಸತ್ಯದ ಹುಡುಕಾಟ

ಚೌಪದಿ: ಇದರಲ್ಲಿ ಅಂಶಗಣ ಚೌಪದಿ ಮತ್ತು ಮಾತ್ರಾಗಣ ಚೌಪದಿ ಎಂಬ ಎರಡು ವಿಧಗಳಿವೆ. ಇವರಡರ ಹುಟ್ಟು ಮತ್ತು ಸ್ವರೂಪ ಬೇರೆಯೆ ಆಗಿದೆ. ಕನ್ನಡದಲ್ಲಿ ಅಂಶಗಣ ಲಕ್ಷಣದ (ನಾಗವರ್ಮ ಮತ್ತು ಜಯಕೀರ್ತಿ ವಿವರಿಸಿದ) ಚೌಪದಿ ದೊರೆತಿರುವುದು ಒಂದು ಮಾತ್ರ. ಮಾತ್ರಾಗಣದ ಚೌಪದಿಯ ಲಕ್ಷಣಗಳನ್ನು ಪ್ರಾಚೀನ ಲಕ್ಷಣ ಗ್ರಂಥಗಳಲ್ಲಿ ಹೇಳಿಲ್ಲ. ನಾಗವರ್ಮನ ಗ್ರಂಥದಲ್ಲಿ ಹೇಳಿರುವ ಇಂಥ ಲಕ್ಷಣಗಳು ನಡುಗನ್ನಡ ಕಾಲದ ಕಾವ್ಯ, ದಾಸರ ಪದಗಳಲ್ಲಿ ಕಂಡುಬರುತ್ತವೆ.

ಛಂದೋವತಂಸ: ಇದಕ್ಕೆ ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಉದಾಹರಣೆಗಳಿಲ್ಲ. ನಡುಗನ್ನಡ ಕಾವ್ಯ ಮತ್ತು ದಾಸರ ಪದಗಳಲ್ಲಿ ಇದರ ಲಕ್ಷಣಗಳನ್ನು ಹೋಲುವ ಪದ್ಯಗಳಿವೆ.

ಅಕ್ಕರಿಕೆ: ಮೊದಲಿಗೆ ಅಂಶಗಣದಂತೆ ನಿರೂಪಿತವಾಗಿವೆ ಇದರ ಲಕ್ಷಣಗಳು. ನಂತರ ಮಾತ್ರಾಗಣವಾಗಿ ಪರಿಣಮಿಸಿದಂತೆ ತೋರುತ್ತವೆ.

ಮದನವತಿ: ನಾಗವರ್ಮ ಮತ್ತು ಜಯಕೀರ್ತಿಯ ಗ್ರಂಥಗಳಲ್ಲಿ ಉಲ್ಲೇಖವಾಗಿರುವ ಇದು ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಕಂಡುಬಂದಿಲ್ಲ.

ಗೀತಿಕೆ: ಇದು ಗೇಯಾತ್ಮಕವಾದದ್ದು. ಏಳೆ, ತ್ರಿಪದಿ, ಸಾಂಗತ್ಯ, ಗೀತಿಕೆ- ಇವೆಲ್ಲ ಒಂದೇ ಛಂದೋರೀತಿಯವಾದ್ದರಿಂದ ಇವಕ್ಕೆಲ್ಲ ಪರಸ್ಪರ ಸಂಬಂಧವಿದ್ದಂತೆ ತೋರುತ್ತದೆ. ಗೀತಿಕೆಯ ಮೊದಲ ಉಲ್ಲೇಖ ಕಂಡಿರುವುದು ಕವಿರಾಜ ಮಾರ್ಗದಲ್ಲಿ. ಉಳಿದಂತೆ ಪ್ರಾಚೀನ ಕಾವ್ಯಗಳಲ್ಲಿ ಗೀತಿಕೆ ಕಂಡುಬರುವುದಿಲ್ಲ.

ಷಟ್ಪದಿ: ಅಚ್ಚಕನ್ನಡದ ಮಟ್ಟುಗಳಲ್ಲಿ ಗಮನಾರ್ಹವಾದ ಮಟ್ಟಿದು. ಅಂಶಗಣದ ಒಂದು ಷಟ್ಪದಿ ಕಾಣಿಸಿಕೊಂಡಿದ್ದರೆ, ಮಾತ್ರಾ ಗಣದಲ್ಲಿ- ಶರ, ಕುಸುಮ, ಭೋಗ, ಭಾಮಿನಿ, ಪರಿವರ್ಧಿನಿ ಮತ್ತು ವಾರ್ಧಕ ಎಂಬ ಆರು ಷಟ್ಪದಿಗಳು ಪ್ರಸಿದ್ಧವಾಗಿವೆ.

ಇದನ್ನೂ ಓದಿ: ಧೀಮಹಿ ಅಂಕಣ: ಪ್ರಾಚೀನ ಭಾರತದಲ್ಲಿ ಸಪ್ತರ್ಷಿಗಳ ನ್ಯಾಯಾಡಳಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading

ಕರ್ನಾಟಕ

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

PUC Exam 2024: ಪಿಯುಸಿ ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

PUC Exam 2024
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು, ಅವಶ್ಯಕತೆ ಇರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

SSLC exam

1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಎರಡನೇ ವಾರ್ಷಿಕ ಪರೀಕ್ಷೆಯನ್ನು ಬರೆಯಲು ರಾಜ್ಯಾದ್ಯಂತ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 84,933 ವಿದ್ಯಾರ್ಥಿಗಳು ಹಾಗೂ 64,367 ವಿದ್ಯಾರ್ಥಿನಿಯರು ಇದ್ದಾರೆ. ಇನ್ನು, 32,848 ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮಂಡಳಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಮೇ 9 ರಂದು ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ, ಮೇ 11 ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 13 ರಂದು ಅರ್ಥಶಾಸ್ತ್ರ, ಮೇ 14 ರಂದು ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಮೇ 15 ರಂದು ಹಿಂದಿ ಪರೀಕ್ಷೆಗಳು ನಡೆಯಲಿವೆ. ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ ಭಾಷಾ ಪರೀಕ್ಷೆಗಳು ಮೇ 16 ರಂದು ಬೆಳಗಿನ ಅವಧಿಯಲ್ಲಿ ನಡೆಯಲಿವೆ.

ಇತರೆ ಕಲಾ ಮತ್ತು ಕೌಶಲ ವಿಭಾಗಕ್ಕೆ ಸಂಬಂಧಪಟ್ಟ ವಿಷಯಗಳಾದ ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ ಪರೀಕ್ಷೆಗಳು ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ ನಡೆಯಲಿವೆ. ಆದರೆ, ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುತ್ತಿರುವುದರಿಂದ ಸಿಇಟಿ ಬರೆಯುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರಿಂದ ಮಕ್ಕಳು ಗೊಂದಲಕ್ಕೀಡಾಗಿದ್ದಾರೆ ಎಂದು ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಕ್ಷನ್‌ 144 ಜಾರಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪರೀಕ್ಷೆಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆದ ಮಾದರಿಯಲ್ಲೇ ನಡೆಯಲಿದೆ. ಆದರೆ ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಮೆರಾ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

Continue Reading

ಕರ್ನಾಟಕ

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

CET 2024: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇದರ ಬೆನ್ನಲ್ಲೇ, ತಜ್ಞರ ಸಮಿತಿಯ ವರದಿ ಆಧಾರದ ಮೇಲೆ ಸೋಮವಾರ ರಾಜ್ಯ ಸರ್ಕಾರವು ಅಂತಿಮ ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ, ಎಲ್ಲರ ಗಮನವೀಗ ರಾಜ್ಯ ಸರ್ಕಾರದ ತೀರ್ಮಾನದ ಮೇಲಿದೆ.

VISTARANEWS.COM


on

CET
Koo

ಬೆಂಗಳೂರು: ಎಂಜಿನಿಯರಿಂಗ್‌ ಸೇರಿ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (CET 2024) ಔಟ್‌ ಆಫ್‌ ಸಿಲಬಸ್‌ (Out Of Syllabus) ಪ್ರಶ್ನೆಗಳನ್ನು ಕೇಳಿರುವ ಬಗ್ಗೆ ಪರಿಶೀಲನೆ ನಡೆಸಲು ರಚಿಸಿರುವ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ (Karnataka Government) ವರದಿ ಸಲ್ಲಿಸಿದೆ. ತಜ್ಞರ ಸಮಿತಿಯ ವರದಿ ಅನ್ವಯ ರಾಜ್ಯ ಸರ್ಕಾರವು ಸೋಮವಾರ (ಏಪ್ರಿಲ್‌ 29) ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದ್ದು, ಮರು ಪರೀಕ್ಷೆ ನಡೆಸಲಾಗುತ್ತದೆಯೋ ಅಥವಾ ಗ್ರೇಸ್‌ ಅಂಕಗಳನ್ನು ನೀಡಲಾಗುತ್ತದೆಯೋ ಎಂಬ ಕುತೂಹಲ ವಿದ್ಯಾರ್ಥಿಗಳಲ್ಲಿ ಮೂಡಿದೆ.

ಪಿಯು ಬೋರ್ಡ್‌ ಹಾಗೂ ಕೆಇಎ ನಡುವೆ ಪಠ್ಯಕ್ರಮದ ಕುರಿತು ಪತ್ರಗಳ ಸಮರ ನಡೆದಿದೆ. ಇದರ ಮಧ್ಯೆಯೇ, ಸಿಇಟಿ ಗೊಂದಲವೂ ವಿದ್ಯಾರ್ಥಿಗಳನ್ನು ಆತಂಕಕ್ಕೀಡು ಮಾಡಿದೆ. ಹಾಗಾಗಿ, ಸಿಇಟಿ ವೇಳೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲು ಏನು ಕಾರಣ? ಎಲ್ಲಿ ಲೋಪವಾಯಿತು ಎಂಬುದರ ಕುರಿತು ವರದಿ ಆಧರಿಸಿ ರಾಜ್ಯ ಸರ್ಕಾರವು ಸೋಮವಾರವೇ ತೀರ್ಮಾನ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನವೀಗ ರಾಜ್ಯ ಸರ್ಕಾರದ ಮೇಲಿದೆ.

cet exam karnataka exam authority

ಎಂಜಿನಿಯರಿಂಗ್‌ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್‌ 18 ಮತ್ತು 19ರಂದು ಸಿಇಟಿ ಪರೀಕ್ಷೆಯಲ್ಲಿ ಔಟ್‌ ಆಫ್‌‌‌ ಸಿಲಬಸ್‌‌ ಪ್ರಶ್ನೆಗಳ ಕುರಿತಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರ ಆಕ್ರೋಶ ಈಗಾಗಲೇ ಭುಗಿಲೆದ್ದಿದೆ. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಮಾಡಲಾಗಿದೆ. ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಪಿಯು ಬೋರ್ಡ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಡುವೆ ಪತ್ರ ಸಮರವೂ ನಡೆದಿತ್ತು. ಕೊನೆಗೆ ಎಚ್ಚೆತ್ತ ಸರ್ಕಾರ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿತ್ತು.

ಪ್ರತಿ ಪತ್ರಿಕೆಯೂ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಎಷ್ಟು ಪ್ರಶ್ನೆಗಳು ಪಠ್ಯಕ್ಕೆ ಹೊರತಾಗಿವೆಯೋ ಅಷ್ಟು ಕೃಪಾಂಕ ನೀಡಬಹುದು. ಹಾಗೆ ನೀಡಿದರೆ ಪ್ರತಿಭಾವಂತರಿಗೆ ಅನ್ಯಾಯವಾಗುತ್ತದೆ. ಪಿಯು ಅಂಕಗಳನ್ನಷ್ಟೇ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿದರೆ ಸಿಇಟಿ ಉದ್ದೇಶ, ಮಾಡಿದ ಖರ್ಚು ವ್ಯರ್ಥವಾಗುತ್ತದೆ. ಹಾಗಾಗಿ, ಮರು ಪರೀಕ್ಷೆ ನಡೆಸುವ ಅಥವಾ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳನ್ನಷ್ಟೇ ಮೌಲ್ಯಮಾಪನ ಮಾಡಿ ಶೇ.100ಕ್ಕೆ ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ಪದವಿ ಪೂರ್ಣ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕೈಬಿಟ್ಟಿರುವ ಪಾಠದ ಪ್ರಶ್ನೆಗಳನ್ನು ಕೇಳಿರುವ ಕುರಿತು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಆರೋಪಿಸಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಪರಿಶೀಲನೆ ನಡೆಸಲು ತಜ್ಞರ ಸಮಿತಿ ರಚಿಸಿತ್ತು. ತಜ್ಞರ ಸಮಿತಿಯು ಏಪ್ರಿಲ್‌ 25ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇದನ್ನೂ ಓದಿ: UPSC EXAM-2023: ಲಕ್ಷಾಂತರ ರೂಪಾಯಿ ಸಂಬಳವಿದ್ದ ಉದ್ಯೋಗವನ್ನೇ ತೊರೆದಿದ್ದ ಯುಪಿಎಸ್‌ಸಿ ಟಾಪರ್ ಆದಿತ್ಯ ಶ್ರೀವಾಸ್ತವ

Continue Reading

ಉದ್ಯೋಗ

Job News: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಎಚ್‌ಸಿಎಲ್‌ ಟೆಕ್‌ನಿಂದ 10 ಸಾವಿರಕ್ಕೂ ಹೆಚ್ಚು ಫ್ರೆಶರ್‌ಗಳ ನೇಮಕ

Job News: ಇತ್ತೀಚೆಗೆ ಮಾಹಿತಿ ತಂತ್ರಜ್ಞಾನದ ಸೇವೆಗಳ ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾ 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಈ ಮಧ್ಯೆ ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ.

VISTARANEWS.COM


on

Job News
Koo

ನವದೆಹಲಿ: ಐಟಿ ಸೇವೆಗಳ ದೈತ್ಯ ಎಚ್‌ಸಿಎಲ್‌ ಟೆಕ್‌ (HCLTech) ಶುಕ್ರವಾರ ತನ್ನ ನಾಲ್ಕನೇ ತ್ರೈ ಮಾಸಿಕ ವರದಿಯನ್ನು ಪ್ರಕಟಿಸಿದೆ. ಈ ವೇಳೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ನೀಡಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅದರಂತೆ 2024-25ರ ಆರ್ಥಿಕ ವರ್ಷದಲ್ಲಿ 10,000ಕ್ಕೂ ಹೆಚ್ಚು ಫ್ರೆಶರ್‌ಗಳನ್ನು ನೇಮಕ ಮಾಡಲಾಗುವುದು ಕಂಪನಿ ಎಂದು ತಿಳಿಸಿದೆ (Job News).

“24ರ ಹಣಕಾಸು ವರ್ಷದಲ್ಲಿ ನಾವು ಸುಮಾರು 15,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಈಗಾಗಲೇ 12,000ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿಕೊಂಡಿದ್ದೇವೆʼʼ ಎಂದು ಎಚ್‌ಸಿಎಲ್‌ ಟೆಕ್‌ನ ಮುಖ್ಯ ಪೀಪಲ್ ಆಫೀಸರ್ ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ. 2023-24ರ ಹಣಕಾಸು ವರ್ಷದ ನಾಲ್ಕನೇ ತ್ರೈ ಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್‌ 3,096 ಪ್ರೆಶರ್‌ಗಳನ್ನು ನೇಮಿಸಿದೆ. ಜತೆಗೆ ಕಂಪನಿಯು 2024ರ ಸಂಪೂರ್ಣ ಹಣಕಾಸು ವರ್ಷದಲ್ಲಿ 12,141 ಪ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ನಾಲ್ಕನೇ ತ್ರೈಮಾಸಿಕದ ವೇಳೆಗೆ ಅದರ ಒಟ್ಟು ಉದ್ಯೋಗಿಗಳ ಸಂಖ್ಯೆ 2,27,481ಕ್ಕೆ ತಲುಪಿದೆ.

”ಮುಂಬರುವ ವರ್ಷದಲ್ಲಿ ನೇಮಕಾತಿಯು ಇದೇ ರೀತಿಯಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ. ಬಹುಶಃ 10,000ಕ್ಕೂ ಹೆಚ್ಚು ಮಂದಿಯನ್ನು ನಿಯೋಜಿಸಲು ಯೋಜನೆ ಹಾಕಿಕೊಂಡಿದ್ದೇವೆ. ಅಂದರೆ ನಾವು ಕ್ಯಾಂಪಸ್ ಮೂಲಕ ನೇಮಕಾತಿ ಮುಂದುವರಿಸುತ್ತೇವೆ” ಎಂದು ರಾಮಚಂದ್ರನ್ ಸುಂದರರಾಜನ್ ತಿಳಿಸಿದ್ದಾರೆ.

6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. 

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ಮೋಹಿತ್‌ ಜೋಶಿ ತಿಳಿಸಿದ್ದಾರೆ.

Continue Reading
Advertisement
viral video tn rao
ಪ್ರಮುಖ ಸುದ್ದಿ2 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ3 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 20244 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ19 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ29 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ44 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ54 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 20244 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202424 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌