CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ - Vistara News

ಶಿಕ್ಷಣ

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

CET 2024 Exam: ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

VISTARANEWS.COM


on

Day 2 of CET 2024 Exam 26 out of syllabus question KEA asks to raise objections by April 27
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಗುರುವಾರ ನಡೆದಿದ್ದ ಮೊದಲ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿದೆ. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿದೆ. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಾರ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ಸಂಬಂಧ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಇಎ, ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ (ಏಪ್ರಿಲ್‌ 24) ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡುವುದಾಗಿ ಹೇಳಿದೆ. ಈಗ ಎರಡನೇ ದಿನವೂ ಇದೇ ಗೊಂದಲವಾಗಿದೆ. ಹೀಗಾಗಿ ಈ ಎರಡೂ ಸಮಸ್ಯೆಗಳ ಬಗ್ಗೆ ಬುಧವಾರ ಚರ್ಚೆ ನಡೆಸಲಾಗುತ್ತದೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಲ್ಲದೆ, ಈಗ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಬಗ್ಗೆ‌ ಆಕ್ಷೇಪಣೆಗಳು ಇದ್ದರೆ, ಇದೇ ಏಪ್ರಿಲ್ 27ರೊಳಗೆ ‌ದೂರು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಗಣಿತ, ಜೀವಶಾಸ್ತ್ರದ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ ವಿರುದ್ಧ ದೂರು

ಜೀವಶಾಸ್ತ್ರದ 11 ಪ್ರಶ್ನೆಗಳು ಹಾಗೂ ಗಣಿತದ 9 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಕೆಇಎಗೆ ದೂರು ನೀಡಿದ್ದಾರೆ. ಇವುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಪಠ್ಯಪುಸ್ತಕದಲ್ಲಿ ಇಲ್ಲದ ಪ್ರಶ್ನೆಗಳು ಬಂದಿವೆ. ಒಟ್ಟು 14 ಮಾರ್ಕ್ಸ್ ಔಟ್ ಆಫ್ ಸಿಲೆಬಸ್ ಬಂದಿದೆ ಎಂದು ಗುರುವಾರ ವಿದ್ಯಾರ್ಥಿಗಳು ಆರೋಪ ಮಾಡಿದ್ದರು. ಈಗ 11 ಮಾರ್ಕ್ಸ್ ಬಗ್ಗೆ ದೂರಿದ್ದಾರೆ.

ಕೆಇಎ ಹೇಳೋದೇನು?

ಗ್ರೇಸ್ ಮಾರ್ಕ್ಸ್ ನೀಡುವ ಬಗ್ಗೆ ಕೆಇಎ ಈವರೆಗೆ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಗ್ರೇಸ್ ಮಾರ್ಕ್ಸ್ ಬಗ್ಗೆ ಬುಧವಾರ ಚರ್ಚಿಸಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗುವುದು. ನಂತರ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ವಿಸ್ತಾರ ನ್ಯೂಸ್‌ಗೆ ಕೆಇಎ ಮಂಡಳಿ ಮಾಹಿತಿ ನೀಡಿದೆ. ಈ ಸಮಿತಿ ರಚನೆಯಾದ ಬಳಿಕ ಅಧ್ಯಯನ ಮಾಡಿ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು.

ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳು

ಈ ವರ್ಷ ಸಿಇಟಿ ಪರೀಕ್ಷೆಗೆ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಗುರುವಾರ ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದರು.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೋಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದನ್ನೂ ಓದಿ: Neha Murder Case: ಐಸಿಸ್‌ ಮಾದರಿಯಲ್ಲಿ ನೇಹಾಗೆ ಚಾಕು ಇರಿತ; ಲವ್‌ ಜಿಹಾದ್‌ ಫಲಿಸದ್ದಕ್ಕೆ ಕೃತ್ಯ: ಪ್ರಮೋದ್‌ ಮುತಾಲಿಕ್

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

ವೃತ್ತಿಯನ್ನು ಆಯ್ಕೆ ಮಾಡುವುದು ಜೀವನದ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವು ಕಡಿಮೆ ಅವಧಿಯಲ್ಲಿ ಯಶಸ್ಸಿನ ದೊಡ್ಡ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ತಮ್ಮ ನೆಚ್ಚಿನ ಕ್ಷೇತ್ರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಅದಕ್ಕಾಗಿ ಎಸ್ ಎಸ್ ಎಲ್ ಸಿ ಮುಗಿಸಿರುವ ವಿದ್ಯಾರ್ಥಿಗಳೇ (Best Courses After SSLC) ನಿಮಗೆ ಸೂಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Best Courses After SSLC
Koo

ಎಸ್ ಎಸ್ ಎಲ್ ಸಿ (Best Courses After SSLC) ಬಳಿಕ ಮುಂದೇನು ಎಂಬ ಚಿಂತೆಯಲ್ಲಿದ್ದೀರಾ? ವಿಜ್ಞಾನ (Science), ವಾಣಿಜ್ಯ (commerce) ಅಥವಾ ಕಲೆ (arts) ಈ ಮೂರು ವಿಷಯಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವ ಗೊಂದಲವಿದೆಯೇ ? ಯಾವ ವಿಷಯವನ್ನು ಆಯ್ಕೆ ಮಾಡಿದರೆ ಮುಂದೆ ಯಾವ ಉದ್ಯೋಗಕ್ಕೆ (After SSLC career options) ಸೇರಿಕೊಳ್ಳಬಹುದು ಎನ್ನುವ ಪ್ರಶ್ನೆ ಕಾಡುತ್ತಿದೆಯೇ ? ಹಾಗಿದ್ದರೆ ಇಲ್ಲಿದೆ ನಿಮಗೆ ಸೂಕ್ತ ಮಾಹಿತಿ.

CAREERS

10 ನೇ ತರಗತಿಯ ಫಲಿತಾಂಶಗಳು ಹೊರಬಂದ ಅನಂತರ ಹೆಚ್ಚಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಮಾನ್ಯ ಗೊಂದಲಗಳು ಇದಾಗಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಅಥವಾ ಪೋಷಕರ ಒತ್ತಡದಿಂದಾಗಿ ತಮ್ಮ ಮಾರ್ಗವನ್ನು ಆಯ್ಕೆ ಮಾಡುವಾಗ ತಪ್ಪುಗಳನ್ನು ಮಾಡುತ್ತಾರೆ. ವೃತ್ತಿಯನ್ನು ಆಯ್ಕೆ ಮಾಡುವುದು ಜೀವನದ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವು ಕಡಿಮೆ ಅವಧಿಯಲ್ಲಿ ಯಶಸ್ಸಿನ ದೊಡ್ಡ ಎತ್ತರವನ್ನು ತಲುಪಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯ, ಆಸಕ್ತಿಗಳು ಮತ್ತು ಸಾಮರ್ಥ್ಯಗಳಿಗೆ ಅನುಗುಣವಾಗಿ ತಮ್ಮ ನೆಚ್ಚಿನ ಕ್ಷೇತ್ರವನ್ನು ಆಯ್ಕೆ ಮಾಡುವುದು ಬಹಳ ಮುಖ್ಯ.

indian students

ವಿಜ್ಞಾನ, ವಾಣಿಜ್ಯ ಅಥವಾ ಕಲೆ ಈ ಮೂರರಲ್ಲಿ ಯಾವುದು ಎನ್ನುವುದು ಹೆಚ್ಚಿನ ವಿದ್ಯಾರ್ಥಿಗಳು ಎದುರಿಸುವ ಸಾಮಾನ್ಯ ಗೊಂದಲವಾಗಿದೆ. ಕೆಲವು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಏನನ್ನು ಬಯಸುತ್ತಾರೆ ಎಂಬುದರ ಬಗ್ಗೆ ಬಹಳ ಸ್ಪಷ್ಟತೆಯನ್ನು ಹೊಂದಿರುತ್ತಾರೆ. ಆದರೆ ಮತ್ತೊಂದೆಡೆ 10ನೇ ತರಗತಿಯ ಅನಂತರ ತಮ್ಮ ವೃತ್ತಿಯನ್ನು ಆಯ್ಕೆ ಮಾಡುವಾಗ ಗೊಂದಲಕ್ಕೊಳಗಾಗುವ ಮತ್ತು ಮುಂದಿನ ಭವಿಷ್ಯದ ಬಗ್ಗೆ ಸುಳಿವೇ ಇಲ್ಲದ ಅನೇಕ ವಿದ್ಯಾರ್ಥಿಗಳಿದ್ದಾರೆ. ಸರಿಯಾದ ಮಾರ್ಗವನ್ನು ಆರಿಸುವುದು ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರಕ್ಕೂ ಸಾಕಷ್ಟು ಅವಕಾಶಗಳಿವೆ. ಆದರೆ ಒಬ್ಬರು ಯಾವಾಗಲೂ ತಮ್ಮ ಆಸಕ್ತಿಗಳಿಗೆ ಅನುಗುಣವಾಗಿ ಆಯ್ಕೆ ಮಾಡಿಕೊಳ್ಳಬೇಕು.

10 ನೇ ತರಗತಿಯಲ್ಲಿ ಉತ್ತೀರ್ಣರಾದ ಅನಂತರ ಟಾಪ್ 5 ವೃತ್ತಿ ಆಯ್ಕೆಗಳ ಕುರಿತು ಮಾಹಿತಿ ಇಲ್ಲಿವೆ.


ವಿಜ್ಞಾನ

ವಿಜ್ಞಾನವು ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸಂಶೋಧನಾ ಪಾತ್ರಗಳಂತಹ ಅನೇಕ ವೃತ್ತಿ ಆಯ್ಕೆಗಳನ್ನು ನೀಡುತ್ತದೆ. ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಇದು ಅತ್ಯಂತ ನೆಚ್ಚಿನ ವೃತ್ತಿ ಆಯ್ಕೆಯಾಗಿದೆ. ವಿಜ್ಞಾನ ಆಯ್ಕೆ ಮಾಡುವ ಪ್ರಮುಖ ಪ್ರಯೋಜನವೆಂದರೆ 12 ನೇ ತರಗತಿಯ ಅನಂತರ ವಿಜ್ಞಾನದಿಂದ ವಾಣಿಜ್ಯಕ್ಕೆ ಅಥವಾ ವಿಜ್ಞಾನಕ್ಕೆ ಕಲೆಗೆ ಬದಲಾಯಿಸಬಹುದು. 12 ನೇ ತರಗತಿಯ ಅನಂತರ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಹಲವಾರು ವೃತ್ತಿ ಆಯ್ಕೆಗಳು ಲಭ್ಯವಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮುಖ್ಯ ವಿಷಯಗಳಾಗಿವೆ. ಆದರೆ ಗಣಿತವನ್ನು ಇಷ್ಟಪಡದ ಅಥವಾ ಅದರಲ್ಲಿ ಆಸಕ್ತಿಯಿಲ್ಲದ ಅನೇಕ ವಿದ್ಯಾರ್ಥಿಗಳಿದ್ದಾರೆ. ಆದರೆ ನೀವು ವೈದ್ಯಕೀಯ ವೃತ್ತಿಯನ್ನು ಮುಂದುವರಿಸಲು ಬಯಸಿದರೆ ನೀವು ಗಣಿತವನ್ನು ಬಿಟ್ಟು ಇತರ ವಿಷಯಗಳನ್ನು ಆರಿಸಿಕೊಳ್ಳಬಹುದು.

ವೃತ್ತಿ ಆಯ್ಕೆಗಳು

ವಿಜ್ಞಾನ ವಿದ್ಯಾರ್ಥಿಗಳಿಗೆ ಐದು ಪ್ರಮುಖ ವೃತ್ತಿ ಆಯ್ಕೆಗಳಿವೆ. ಬಿಟೆಕ್/ಬಿಇ, ಬ್ಯಾಚುಲರ್ ಆಫ್ ಮೆಡಿಸಿನ್ ಮತ್ತು ಬ್ಯಾಚುಲರ್ ಆಫ್ ಸರ್ಜರಿ (MBBS), ಬ್ಯಾಚುಲರ್ ಆಫ್ ಫಾರ್ಮಸಿ, ಬ್ಯಾಚುಲರ್ ಆಫ್ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ, ಬಿಎಸ್ ಸಿ ಹೋಮ್ ಸೈನ್ಸ್ / ಫೊರೆನ್ಸಿಕ್ ಸೈನ್ಸ್.


ವಾಣಿಜ್ಯ

ವಿಜ್ಞಾನದ ಅನಂತರ ವಾಣಿಜ್ಯ ವಿಷಯವು ಎರಡನೇ ಅತ್ಯಂತ ಜನಪ್ರಿಯ ವೃತ್ತಿ ಆಯ್ಕೆಯಾಗಿದೆ. ವ್ಯಾಪಾರಕ್ಕೆ ವಾಣಿಜ್ಯವು ಉತ್ತಮವಾಗಿದೆ. ಸಂಖ್ಯೆ, ಹಣಕಾಸು ಮತ್ತು ಅರ್ಥಶಾಸ್ತ್ರ ಇಷ್ಟದ ವಿಷಯವಾಗಿದ್ದರೆ ವಾಣಿಜ್ಯ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು. ಚಾರ್ಟರ್ಡ್ ಅಕೌಂಟೆಂಟ್, ಎಂಬಿಎ, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಹೂಡಿಕೆಯಂತಹ ವ್ಯಾಪಕವಾದ ಆಯ್ಕೆಗಳನ್ನು ಇದು ನೀಡುತ್ತದೆ. ಅಕೌಂಟೆನ್ಸಿ, ಹಣಕಾಸು ಮತ್ತು ಅರ್ಥಶಾಸ್ತ್ರದೊಂದಿಗೆ ಪರಿಚಿತರಾಗಿರುವ ವಾಣಿಜ್ಯ ವಿದ್ಯಾರ್ಥಿಗಳಿಗೆ ವೃತ್ತಿ ಆಯ್ಕೆಗಳು ಇಂತಿವೆ. ಚಾರ್ಟರ್ಡ್ ಅಕೌಂಟೆಂಟ್, ವ್ಯಾಪಾರ ನಿರ್ವಹಣೆ, ಜಾಹೀರಾತು ಮತ್ತು ಮಾರಾಟ ನಿರ್ವಹಣೆ, ಡಿಜಿಟಲ್ ಮಾರ್ಕೆಟಿಂಗ್, ಮಾನವ ಸಂಪನ್ಮೂಲ ಅಭಿವೃದ್ಧಿ.


ಕಲೆ ಅಥವಾ ಮಾನವಶಾಸ್ತ್ರ

ಕಲೆ ಅಥವಾ ಮಾನವೀಯ ವಿಷಯಗಳ ಬಗ್ಗೆ ಶೈಕ್ಷಣಿಕ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುವವರು ಸೃಜನಶೀಲರಾಗಿದ್ದರೆ ಮತ್ತು ಮಾನವೀಯತೆಗೆ ಆಳವಾಗಿ ಧುಮುಕಲು ಬಯಸಿದರೆ ಕಲೆ ಅತ್ಯುತ್ತಮ ಆಯ್ಕೆಯಾಗಿದೆ. ಕಲಾ ವಿದ್ಯಾರ್ಥಿಗಳಿಗೆ ಇತಿಹಾಸ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ ಮುಖ್ಯ ವಿಷಯಗಳು.
ಆರ್ಟ್ಸ್ ಈಗ ವೃತ್ತಿಜೀವನದ ಪರ್ಯಾಯವನ್ನು ನೀಡುತ್ತದೆ. ಇದು ವಿಜ್ಞಾನ ಮತ್ತು ವಾಣಿಜ್ಯದಿಂದ ನೀಡಲಾಗುವ ಸಮಾನವಾಗಿ ಲಾಭದಾಯಕವಾಗಿದೆ. ಕಲಾ ವಿದ್ಯಾರ್ಥಿಗಳಿಗೆ ವೃತ್ತಿಯಲ್ಲಿ ಉತ್ಪನ್ನ ವಿನ್ಯಾಸ, ಮಾಧ್ಯಮ / ಪತ್ರಿಕೋದ್ಯಮ, ಫ್ಯಾಷನ್ ತಂತ್ರಜ್ಞಾನ, ವೀಡಿಯೊ ರಚನೆ ಮತ್ತು ಸಂಪಾದನೆ, ಮಾನವ ಸಂಪನ್ಮೂಲ ತರಬೇತಿ, ಶಾಲಾ ಬೋಧನೆ ಇತ್ಯಾದಿ ಕ್ಷೇತ್ರಗಳಿಗೆ ಪ್ರವೇಶ ಪಡೆಯಬಹುದು.


ಐಟಿಐ- ಕೈಗಾರಿಕಾ ತರಬೇತಿ ಸಂಸ್ಥೆ

ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿದ ಅನಂತರ ಸುಲಭವಾಗಿ ಉದ್ಯೋಗವನ್ನು ಬಯಸುವ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳನ್ನು ಒದಗಿಸುವ ತರಬೇತಿ ಕೇಂದ್ರಗಳಾಗಿವೆ ಐಟಿಐ. ಯಾವುದೇ ತಾಂತ್ರಿಕ ಕೋರ್ಸ್ ಅನ್ನು ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಲು ಬಯಸುವ ವಿದ್ಯಾರ್ಥಿಗಳಿಗೆ ಐಟಿಐ ಕೋರ್ಸ್‌ಗಳು ಉತ್ತಮ ಅವಕಾಶಗಳನ್ನು ಒದಗಿಸುತ್ತದೆ. ಐಟಿಐಯಲ್ಲಿ ಕೋರ್ಸ್ ಪೂರ್ಣಗೊಳಿಸುವ ವಿದ್ಯಾರ್ಥಿಯು ಕೈಗಾರಿಕಾ ಕೌಶಲ್ಯಗಳಲ್ಲಿ ತರಬೇತಿ ಪಡೆಯಬಹುದು ಮತ್ತು ಅದೇ ಕ್ಷೇತ್ರದಲ್ಲಿ ಕೆಲಸ ಮಾಡುವ ಮೂಲಕ ಜೀವನ ನಿರ್ವಹಣೆ ಮಾಡಬಹುದು. ಐಟಿಐ ಅನಂತರ ವೃತ್ತಿ ಆಯ್ಕೆಗಳು ಇಂತಿವೆ. ಪಿಡಬ್ಲ್ಯೂಡಿಗಳು ಮತ್ತು ಇತರ ಸಾರ್ವಜನಿಕ ವಲಯಗಳಲ್ಲಿ ಉದ್ಯೋಗಾವಕಾಶ, ಖಾಸಗಿ ವಲಯಗಳಲ್ಲಿ ಉದ್ಯೋಗಗಳು, ಸ್ವಯಂ ಉದ್ಯೋಗ, ವಿದೇಶಗಳಲ್ಲಿ ಉದ್ಯೋಗ, ವಿಶೇಷತೆಯಲ್ಲಿ ಹೆಚ್ಚಿನ ಅಧ್ಯಯನಗಳಿಗೆ ಅವಕಾಶವಿದೆ.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ


ಪಾಲಿಟೆಕ್ನಿಕ್ ಕೋರ್ಸ್‌

10ನೇ ತರಗತಿಯ ಅನಂತರ ವಿದ್ಯಾರ್ಥಿಗಳು ಮೆಕ್ಯಾನಿಕಲ್, ಸಿವಿಲ್, ಕೆಮಿಕಲ್, ಕಂಪ್ಯೂಟರ್, ಆಟೋಮೊಬೈಲ್ ನಂತಹ ಪಾಲಿಟೆಕ್ನಿಕ್ ಕೋರ್ಸ್‌ಗಳಿಗೆ ಹೋಗಬಹುದು. ಈ ಕಾಲೇಜುಗಳು 3 ವರ್ಷ, 2 ವರ್ಷ ಮತ್ತು 1 ವರ್ಷದ ಡಿಪ್ಲೊಮಾ ಕೋರ್ಸ್‌ಗಳನ್ನು ಒದಗಿಸುತ್ತದೆ. ಪಾಲಿಟೆಕ್ನಿಕ್ ಕೋರ್ಸ್ ಅನಂತರ ವೃತ್ತಿಯಲ್ಲಿ ಮುಖ್ಯವಾಗಿ ಖಾಸಗಿ ವಲಯದ ಉದ್ಯೋಗಗಳು, ಸರ್ಕಾರಿ ವಲಯದ ಉದ್ಯೋಗಗಳು, ಉನ್ನತ ಅಧ್ಯಯನಗಳು, ಸ್ವಯಂ ಉದ್ಯೋಗಿ, ಸ್ವಂತ ವ್ಯಾಪಾರವನ್ನು ನಡೆಸಲು ಅವಕಾಶವಿದೆ.

Continue Reading

ಪ್ರಮುಖ ಸುದ್ದಿ

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

SSLC Result 2024: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

VISTARANEWS.COM


on

karnataka SSLC result 2024
Koo

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್‌ (SSLC result) ಪ್ರಕಟಿಸುವ ಸಾಧ್ಯತೆಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

2023 & 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ರಿಸಲ್ಟ್ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ, ಕಾತರ ಹೆಚ್ಚಿದೆ. ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪರೀಕ್ಷಾ ಮಂಡಳಿ ಅಧಿಕಾರಿಗಳು ಕೂಡ ರಿಸಲ್ಟ್ ರಿವೀಲ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ.

ಮೂರು ಅವಕಾಶ

ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಈ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಲ್ಲಿ ಸಮಾಧಾನವಾಗದಿದ್ದರೆ ವಿದ್ಯಾರ್ಥಿ ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಬಹುದಿತ್ತು. ಆದರೆ, ಪೂರಕ ಪರೀಕ್ಷೆಯಲ್ಲೇನಾದರೂ ಇನ್ನೂ ಕಳಪೆ ಫಲಿತಾಂಶ ಬಂದರೆ ಅಥವಾ ಫೇಲಾದರೆ ವಾರ್ಷಿಕ ಪರೀಕ್ಷೆಯ ಫಲಿತಾಂಶ ಉಳಿಸಿಕೊಳ್ಳಲು ಅವಕಾಶವಿರಲಿಲ್ಲ. ಈಗ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಉಳಿಸಿಕೊಳ್ಳಬಹುದು.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Continue Reading

ಪ್ರಮುಖ ಸುದ್ದಿ

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

CET Exam: ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

VISTARANEWS.COM


on

CET exam 2024
Koo

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ (CET exam 2024) ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್‌ನನಲ್ಲಿ ಪ್ರಕಟಿಸಲಾಗಿದೆ. ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್‌ ಮೂಲಕ ಏಪ್ರಿಲ್ 30ರಂದು ಬೆಳಗ್ಗೆ 11ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಈ ಮೂಲಕ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಉಂಟಾಗಿದ್ದ ಗೊಂದಲ, ಮರುಪರೀಕ್ಷೆಗಳ ಆತಂಕ ಬಗೆಹರಿದಿದೆ. ಸರ್ಕಾರ ರಚಿಸಿದ್ದ ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿಯ ಅಭಿಪ್ರಾಯ ಆಧರಿಸಿ ಸಿಇಟಿ ಮರುಪರೀಕ್ಷೆ ನಡೆಸದೇ ಇರಲು ಹಾಗೂ ತಪ್ಪಾದ ಪ್ರಶ್ನೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ವೇಳೆ ಇನ್ನು ಮುಂದೆ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಲೋಪಗಳಾಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಯಿಂದ ಏ.18 ಮತ್ತು 19ರಂದು ನಡೆಸಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading
Advertisement
Mumbai
ದೇಶ1 min ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ57 mins ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ1 hour ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 hours ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ2 hours ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Reliance Retail Tira Beauty launch new brand Nails Our Way
ದೇಶ2 hours ago

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌