Education News New Academic Year To Commence From May 29Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು Vistara News
Connect with us

ಪ್ರಮುಖ ಸುದ್ದಿ

Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ (Education News) ಮೇ 31 ರಿಂದ ಆರಂಭಗೊಳ್ಳಲಿವೆ. ಇದಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯು ಸಿದ್ಧತೆ ಆರಂಭಿಸಿದ್ದು, ದಿನಗಣನೆ ಪ್ರಾರಂಭವಾಗಿದೆ.

VISTARANEWS.COM


on

Education News New Academic Year To Commence From May 29
Koo

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿ ಪ್ರಕಾರ ಶಾಲೆಗಳು ಮೇ 31 ರಿಂದ ಆರಂಭವಾಗ ಬೇಕಾಗಿದ್ದು, ಶಾಲಾ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದೆ. ಮೇ 29 ಶಾಲೆಗಳ ಪ್ರಾರಂಭಕ್ಕೆ ಪೂರ್ವತಯಾರಿ ನಡೆಸಲಾಗುತ್ತದೆ (Education News) . ಮೇ 30 ರಂದು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತದೆ. ಮೇ 31ರ ಬುಧವಾರದಿಂದ ತರಗತಿಗಳನ್ನು ಆರಂಭಿಸಲಾಗುತ್ತದೆ.

ಕಳೆದ ಮಾರ್ಚ್‌ 30 ರಂದು ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ (Education News) ವೇಳಾಪಟ್ಟಿ ಪ್ರಕಟಿಸಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದರು.

2023-24ನೇ ಸಾಲಿನ ಮೊದಲನೇ ಶೈಕ್ಷಣಿಕ ಅಧಿವೇಶನವು ಮೇ 29 ರಿಂದ ಆರಂಭಗೊಂಡು ಅಕ್ಟೋಬರ್ 7 ರವರಗೆ ನಡೆಯಲಿದೆ. ಎರಡನೇ ಶೈಕ್ಷಣಿಕ (Education News) ಅಧಿವೇಶನವು ಅಕ್ಟೋಬರ್ 25 ರಿಂದ ಆರಂಭವಾಗಿ 2024 ರ ಏಪ್ರಿಲ್ 10ಕ್ಕೆ ಮುಕ್ತಾಯವಾಗಲಿದೆ.

ದಸರಾ ರಜೆಯು (ಮಧ್ಯಂತರ ರಜೆ) 2023ರ ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ಇರಲಿದೆ. ಮುಂದಿನ ವರ್ಷದ ಬೇಸಿಗೆ ರಜೆಯನ್ನು 2024ರ ಏಪ್ರಿಲ್ 11 ರಿಂದ ಮೇ 28 ರ ವರೆಗೆ ನೀಡಲಾಗುತ್ತದೆ.

ಇಲಾಖೆ ಹೊರಡಿಸಿದ ಶೈಕ್ಷಣಿಕ ಮಾರ್ಗದರ್ಶಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ.

ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧತೆ

ಶಾಲಾ ಪ್ರಾರಂಭೋತ್ಸವವನ್ನು ಯಾಂತ್ರಿಕವಾಗಿ ಪರಿಗಣಿಸದೆ ಅತ್ಯಂತ ಉತ್ಸಾಹದಿಂದ ಆಯೋಜಿಸಬೇಕೆಂದು ಇಲಾಖೆಯು ಸೂಚಿಸಿದ್ದು, ಶಿಕ್ಷಕರು, ಎಸ್‌.ಡಿ.ಎಂ.ಸಿ ಹಾಗೂ ಪೋಷಕರು ಸೇರಿ ಶಾಲಾ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಬೇಕೆಂದು ತಿಳಿಸಿದೆ.

ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ ಶಾಲಾ (Education News) ವಾತಾವರಣವನ್ನು ಆಕರ್ಷಣೀಯವಾಗಿಸಬೇಕು. ಎರಡನೇ ತರಗತಿಯಿಂದ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಬೇಕು. ಹಾಜರಾಗದಿರುವ ಮಕ್ಕಳನ್ನು ಶಾಲೆಗೆ ಕರೆತರುವಂತೆ ಹಾಜರಾಗಿರುವ ಮಕ್ಕಳನ್ನು ಪ್ರೇರೇಪಿಸಬೇಕು. ಅಕ್ಷರ ದಾಸೋಹವನ್ನು ಸಿಹಿ ಊಟದೊಂದಿಗೆ ಆರಂಭಿಸಬೇಕೆಂದೂ ಇಲಾಖೆ ಶಾಲೆಗಳಿಗೆ ಸೂಚಿಸಿದೆ. ಮೇ 31ರಿಂದ ಜೂನ್‌ 03ರ ವರೆಗೆ ಶಾಲಾ ದಾಖಲಾತಿ ಆಂದೋಲನ ನಡೆಸಲಾಗುತ್ತದೆ.

ಸಾಫಲ್ಯ ಪರೀಕ್ಷೆಯ ದಿನಾಂಕವೂ ನಿಗದಿ!

ಶಿಕ್ಷಕರಿಗೆ ಕಳೆದ ಸಾಲಿನಲ್ಲಿ ನಡೆಸಿದ ಮೌಲ್ಯಾಂಕನ ವಿಶ್ಲೇಷಣೆ ಪರೀಕ್ಷೆಯ ವರದಿ ಒದಗಿಸಲಾಗುತ್ತದೆ. ಯಾವೆಲ್ಲಾ ವಿಷಯದಲ್ಲಿ ವಿದ್ಯಾರ್ಥಿಗಳು ಹಿಂದುಳಿದಿದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿರುತ್ತದೆ. ಇದನ್ನು ಅವಲೋಕಿಸಿ, ವಿಶ್ಲೇಷಿಸಿ ಇದಕ್ಕೆ ಪೂರಕವಾಗಿ ನೈದಾನಿಕ ಪರೀಕ್ಷೆ ಹಮ್ಮಿಕೊಂಡು ಫಲಿತಾಂಶ ವಿಶ್ಲೇಷಿಸಬೇಕೆಂದು ಶಿಕ್ಷಕರಿಗೆ ಸೂಚಿಸಲಾಗಿದೆ.

1ರಿಂದ 10ನೇ ತರಗತಿಯವರೆಗೂ ಪೂರ್ವ ಪರೀಕ್ಷೆಯನ್ನು ನಡೆಸಿ, ವಿಶ್ಲೇಷಿಸಿ, ಕಲಿಕಾ ಹಿನ್ನಡೆ ಗುರುತಿಸಿ ಸೂಕ್ತ ರೀತಿಯಲ್ಲಿ ಹೇಳಿಕೊಡಬೇಕು. 1 ರಿಂದ3 ನೇ ತರಗತಿಯವರೆಗಿನ ಮಕ್ಕಳಿಗೆ ದಿನಾಂಕ: 20-06-2023ರಂದು 4 ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ದಿನಾಂಕ:13-06-2023ರಂದು ಸಾಫಲ್ಯ ಪರೀಕ್ಷೆ ನಡೆಸಿ. ಅವರು ಪಡೆದಿರುವ ಅಂಕಗಳನ್ನು ವಿಶ್ಲೇಷಿಸಿ ನಿರಂತರ ಪರಿಹಾರ ಬೋಧನೆಗೆ (remedial teaching) ಅಗತ್ಯ ಮಕ್ಕಳನ್ನು ಗುರುತಿಸಬೇಕೆಂದು ಸೂಚಿಸಲಾಗಿದೆ.

ಶಾಲಾ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ;

ಇದನ್ನೂ ಓದಿ : ಶಿಕ್ಷಕರಿಗೂ ಬಂತು ಡ್ರೆಸ್‌ಕೋಡ್;‌ ಟೀಚರ್‌ಗಳು ಇನ್ನು ಜೀನ್ಸ್‌, ಟಿ-ಶರ್ಟ್‌ ಧರಿಸಿ ಶಾಲೆಗೆ ಹೋಗುವಂತಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Caste Census Report : ಬಿಹಾರದಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಸಿಎಂ ಆದಾಗಲೇ ವರದಿ ಸಿದ್ಧವಾಗಿತ್ತು. ಆದರೆ, ಕಾರಣಾಂತರಗಳಿಂದ ಅದು ಮಂಡನೆಯಾಗಿರಲಿಲ್ಲ. ಈಗಲಾದರೂ ಮಂಡನೆಯಾಗಲಿದೆಯಾ? ಎಂಬ ಪ್ರಶ್ನೆ ಈಗ ಮೂಡಿದೆ.

VISTARANEWS.COM


on

Edited by

caste census repot image
Koo

ಬೆಂಗಳೂರು: ಕಾಂತರಾಜು ನೇತೃತ್ವದ ಸಮಿತಿಯಿಂದ (Committee headed by Kantharaju) 2018ರಲ್ಲಿ ಸಿದ್ಧವಾಗಿರುವ ಜಾತಿಗಣತಿ ವರದಿಯು (Caste Census Report) ರಾಜ್ಯದಲ್ಲಿ ಜಾರಿಯಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಬಿಹಾರದಲ್ಲಿ ಈಗಾಗಲೇ ಜಾತಿಗಣತಿ ವರದಿಯನ್ನು ಅಂಗೀಕಾರ ಮಾಡಲಾಗಿದೆ. ಇದಕ್ಕೆ ವ್ಯಾಪಕ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಹ ವರದಿ ಬಗ್ಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ (Backward Classes Commission Chairman Jayaprakash Hegde) ಅವರು, ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಕಾಂಗ್ರೆಸ್‌ ಹಿರಿಯ ಮುಖಂಡರಿಂದಲೇ ವರದಿ ಅಂಗೀಕಾರಕ್ಕೆ ಒತ್ತಡಗಳು ಕೇಳಿಬಂದಿವೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಇದರ ಬಗ್ಗೆ ಜಾಣ್ಮೆಯ ಉತ್ತರವನ್ನು ನೀಡಿದ್ದು, ಮೊದಲು ತಮ್ಮ ಬಳಿ ವರದಿ ಬರಲಿ ಎಂದು ಹೇಳಿದ್ದಾರೆ. ಹಾಗಾದರೆ, ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮಂಡನೆಯಾಗಲಿದೆಯೇ? ಅಥವಾ ರಾಜ್ಯ ಸರ್ಕಾರ ಸಬೂಬು ಹೇಳುತ್ತಾ ಮುಂದೂಡಲಿದೆಯೇ ಎಂಬ ಕುತೂಹಲ ಮೂಡಿದೆ.

2018ರಲ್ಲಿ ಕಾಂತರಾಜು ನೇತೃತ್ವದ ಸಮಿತಿಯು ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಿತ್ತು. 2019ರಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ (Congress JDS alliance) ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಈ ವರದಿಯನ್ನು ಅಂಗೀಕರಿಸಲು ಒಪ್ಪಿರಲಿಲ್ಲ. ಅಂದು ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿ ಅವರಿಗೆ ಕರೆ ಮಾಡಿದ್ದ ಕುಮಾರಸ್ವಾಮಿ, ಆ ವಿಷಯವನ್ನು ಕ್ಯಾಬಿನೆಟ್‌ಗೆ ಚರ್ಚೆಗೆ ತರದಂತೆ ಸೂಚಿಸಿದ್ದರು. ಹಾಗಾಗಿ ಆ ವರದಿ ಹಾಗೆಯೇ ಉಳಿಯಿತು. ನಂತರ ಬಂದ ಮುಖ್ಯಮಂತ್ರಿಗಳ್ಯಾರೂ ಸಹ ಈ ಜಾತಿಗಣತಿ ವರದಿಯನ್ನು ಪಡೆಯಲು ಮುಂದೆ ಬರಲಿಲ್ಲ. ಆದರೆ, ಈಗ ಬಿಹಾರದಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕಾರ ಮಾಡಿದ್ದರಿಂದ ರಾಜ್ಯದಲ್ಲಿ ಈ ಬಗ್ಗೆ ಕೂಗು ಹೆಚ್ಚಾಗಿದೆ. ಅದಕ್ಕಿಂತ ಮೊದಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಅವಧಿ ಮುಗಿಯುವುದರೊಳಗೆ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಿಯೇ ಹೋಗುವುದಾಗಿ ಹೇಳಿದ್ದರು. ಈ ಮಧ್ಯೆ ವರದಿ ಮಂಡನೆಗೆ ಮೊದಲೇ ಸೋರಿಕೆ ಆಗಿದ್ದರಿಂದ ಮೇಲ್ವರ್ಗದ ಪ್ರಬಲ ಸಮುದಾಯವರು ಸೇರಿದಂತೆ ಹಲವರಿಂದ ಜಾತಿ ಮಂಡನೆಗೆ ವಿರೋಧ ವ್ಯಕ್ತವಾಗಿದೆ. ಅಲ್ಲದೆ, ಈ ವರದಿ ಈಗ ಮಂಡನೆಯಾದರೆ ಲೋಕಸಭಾ ಚುನಾವಣೆ ಮೇಲೆ ಸಾಕಷ್ಟು ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕಾಗಿಯೇ ಸರ್ಕಾರ ಹಿಂದೇಟು ಹಾಕುತ್ತಿದೆ ಎಂಬ ಚರ್ಚೆಗಳೂ ಹುಟ್ಟಿಕೊಂಡಿವೆ.

caste census repot image

ಇದನ್ನೂ ಓದಿ: Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

ವರದಿ ಅಂಗೀಕಾರಕ್ಕೆ ಹಿಂದೇಟು ಏಕೆ?

ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅಂಗೀಕರಿಸಲು ಹಿಂದೇಟು ಏಕೆ? ವಿಪಕ್ಷಗಳ ಅಸಮಾಧಾನ ಯಾಕೆ? ಎಂಬುದನ್ನು ನೋಡುವುದಾದರೆ ವರದಿಯಲ್ಲಿನ ಅಂಕಿ-ಅಂಶಗಳು ಮೂಲ ಕಾರಣವಾಗಿದೆ. ವರದಿ ಸಲ್ಲಿಕೆಗೆ ಮೊದಲೇ ಅಂಕಿ-ಅಂಶಗಳ ಸೋರಿಕೆ ಆಗಿವೆ. ಸಿದ್ದರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದಾಗ ಸಮಿತಿ ರಚಿಸಿ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲು ಆದೇಶಿಸಲಾಗಿತ್ತು.

2013ರಲ್ಲಿ ಅಹಿಂದ ಸರ್ಕಾರ ಎಂದೇ ಬಿಂಬಿತವಾಗಿತ್ತು. ಅಲ್ಲದೆ, ಕಾಂಗ್ರೆಸ್‌ಗೆ ಅನುಕೂಲ ಆಗುವ ರೀತಿ ರಿಪೋರ್ಟ್ ತಯಾರಾಗಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಪ್ರಬಲ ಸಮುದಾಯದ ನಾಯಕರಿಂದ ಈ ಬಗ್ಗೆ ಆಕ್ಷೇಪ ಕೇಳಿಬಂದಿತ್ತು. ವರದಿ ಸಿದ್ಧವಾಗುತ್ತಿರುವ ಹೊತ್ತಿನಲ್ಲಿಯೇ ಅಂಕಿ – ಅಂಶಗಳ ಸೋರಿಕೆ ಆಗಿರುವುದೇ ರಾಜಕೀಯ ಪಕ್ಷಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ವರದಿ ಏನು ಹೇಳುತ್ತದೆ?

ಮುಸ್ಲಿಂ ಸಮುದಾಯವೇ ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ. ಎರಡನೇ ಸ್ಥಾನದಲ್ಲಿ ದಲಿತರು, ಮೂರನೇ ಸ್ಥಾನದಲ್ಲಿ ಲಿಂಗಾಯತರು, ನಾಲ್ಕನೇ ಸ್ಥಾನದಲ್ಲಿ ಕುರುಬರು ಹಾಗೂ ಐದನೇ ಸ್ಥಾನದಲ್ಲಿ ಒಕ್ಕಲಿಗರು ಇದ್ದಾರೆಂದು ಮಾಹಿತಿ ಹೇಳುತ್ತದೆ. ಇದರಲ್ಲಿ ಮೀಸಲಾತಿ ಪಡೆಯುತ್ತಿರುವ ಕೆಲ ಸಮುದಾಯಗಳು ಆರ್ಥಿಕವಾಗಿ ಪ್ರಬಲವಾಗಿದ್ದಾರೆಂಬುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಈ ರಿಪೋರ್ಟ್ ಅಂಗೀಕಾರವಾದರೆ ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಇದೇ ರಿಪೋರ್ಟ್ ಆಧರಿಸಿ ಮೀಸಲಾತಿ ವಿಂಗಡಣೆ ಮಾಡಲಾಗುತ್ತದೆ. ಇದರಿಂದ ಕೆಲ ಸಮುದಾಯಗಳಿಗೆ ಅನ್ಯಾಯವಾಗುತ್ತದೆ ಎಂಬುದು ಕೆಲವರ ವಾದವಾಗಿದೆ. ಹೀಗಾಗಿಯೇ ಇದೊಂದು ಅವೈಜ್ಞಾನಿಕ ವರದಿ ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಜತೆಗೆ ಪ್ರಬಲ ಸಮುದಾಯಗಳ ಸ್ವಾಮೀಜಿಗಳಿಂದಲೂ ಈ ರಿಪೋರ್ಟ್‌ಗೆ ವಿರೋಧ ವ್ಯಕ್ತವಾಗಿದೆ.

ಪ್ರಧಾನಿ ಮೋದಿಯಿಂದಲೂ ಅಸಮಾಧಾನ

ಬಿಹಾರ ರಾಜ್ಯದಲ್ಲಿ ಆಗಿರುವ ಜಾತಿ ಗಣತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನವನ್ನು ಹೊರಹಾಕಿದ್ದಾರೆ. ಜಾತಿ ಗಣತಿಯಿಂದ ಅಲ್ಪಸಂಖ್ಯಾತರ ಹಕ್ಕು ಕಡಿಮೆ ಮಾಡಲು ಬಯಸುತ್ತಿದೆಯೇ? ನಿನ್ನೆಯಿಂದ ಕಾಂಗ್ರೆಸ್ ನಾಯಕರು ಜಿತ್ನಿ ಆಬಾದಿ ಉತ್ನಾ ಹಕ್ ಎಂದು ಹೇಳುತ್ತಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಏನು ಯೋಚಿಸುತ್ತಿರಬಹುದು? ಅವರು ಅಲ್ಪಸಂಖ್ಯಾತರು ಮೊದಲಿಗರು ಎಂದು ಹೇಳುತ್ತಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅವರಿಗೆ ಹಕ್ಕು ಎನ್ನುತ್ತಿದ್ದರು. ಆದರೆ, ಈಗ ಕಾಂಗ್ರೆಸ್ ಬೇರೆಯದ್ದೆ ಹೇಳುತ್ತಿದೆ. ದೇಶದ ಸಂಪನ್ಮೂಲಗಳಲ್ಲಿ ಯಾರಿಗೆ ಮೊದಲ ಹಕ್ಕು ಎಂದು ಸಮುದಾಯದ ಜನಸಂಖ್ಯೆ ನಿರ್ಧರಿಸುತ್ತದೆ ಎನ್ನುತ್ತಿದ್ದಾರೆ. ಹಾಗಾದರೆ ಕಾಂಗ್ರೆಸ್‌ನವರು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿಮೆ ಮಾಡಲು ಬಯಸುತ್ತಾರೆಯೇ? ಅಲ್ಪಸಂಖ್ಯಾತರನ್ನು ತೊಲಗಿಸಲು ಅವರು ಬಯಸುತ್ತಾರಾ? ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಹಿಂದುಗಳು ಮುಂದೆ ಬಂದು ಅವರ ಎಲ್ಲ ಹಕ್ಕುಗಳನ್ನು ತೆಗೆದುಕೊಳ್ಳಬೇಕೇ? ಇದನ್ನೆಲ್ಲ ಕೇಳಿಕೊಂಡು ಹಿರಿಯ ಕಾಂಗ್ರೆಸ್ ನಾಯಕರು ಸುಮ್ಮನೆ ಕುಳಿತಿದ್ದಾರೆ. ಇದನ್ನೆಲ್ಲಾ ನೋಡಿ ಮಾತನಾಡುವ ಧೈರ್ಯವೂ ಅವರಿಗಿಲ್ಲ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದರು.

ಜಾತಿಗಣತಿ ವರದಿ ಬಿಡುಗಡೆ ಆಗಲಿ: ಬಸವರಾಜ ರಾಯರೆಡ್ಡಿ

ಜಾತಿಗಣತಿ ವರದಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ರಾಯರೆಡ್ಡಿ ವಿಸ್ತಾರ ನ್ಯೂಸ್ ಜತೆಗೆ ಮಾತನಾಡಿದ್ದು, ಈ ಹಿಂದೆ ಸಿದ್ದರಾಮಯ್ಯ ಅವರು ಇದ್ದ ಕಾಲದಲ್ಲಿ ಜಾತಿಗಣತಿ ಮಾಡಲು ಕಾಂತರಾಜ್ ನೇತೃತ್ವದಲ್ಲಿ ಆಯೋಗವನ್ನು ನೇಮಕ ಮಾಡಲಾಗಿತ್ತು. ಅವರು ಕೂಡ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಆದರೆ, ಸೆಕ್ರೆಟರಿ ಸಹಿ ಮಾಡಿರಲಿಲ್ಲ ಎಂಬ ಕಾರಣಕ್ಕೆ ಅದು ಸ್ವೀಕಾರ ಆಗಿಲ್ಲ. ಅಷ್ಟರಲ್ಲಿ ಆ ಸರ್ಕಾರದ ಅವಧೊ ಕೂಡ ಮುಗಿದು ಹೋಯ್ತು ಮುಂದೆ ಬಂದ ಸರ್ಕಾರ ಕೂಡ ವರದಿ ಬಿಡುಗಡೆ ಮಾಡಲಿಲ್ಲ. ಈಗ ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡುತ್ತೇನೆ. ಶೋಷಣೆಗೆ ಒಳಗಾಗಿರುವ ಜನರು ಎಲ್ಲ ವರ್ಗದಲ್ಲೂ ಇದ್ದಾರೆ. ಅಂಥವರಿಗೆ ಸಹಾಯ ಆಗಬೇಕು. ಈ ಹಿನ್ನೆಲೆಯಲ್ಲಿ ವರದಿ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.

ಜಾಣ್ಮೆಯ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಮಗೆ ಮೊದಲು ವರದಿಯನ್ನು ಕೊಡಬೇಕಲ್ವಾ? ಶಾಶ್ವತ ಹಿಂದುಳಿದ ಆಯೋಗವು ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಇದ್ದಾಗ ವರದಿಯನ್ನು ತಯಾರು ಮಾಡಿದ್ದರು. ಆದರೆ, ಅವರು ವರದಿಯನ್ನು ಸ್ವೀಕಾರ ಮಾಡಿರಲಿಲ್ಲ. ಈಗ ಅಧ್ಯಕ್ಷರ ಬದಲಾವಣೆ ಆಗಿದೆ. ಈಗ ಅಧ್ಯಕ್ಷರ ಬದಲಾವಣೆ ಆಗಿದೆ. ಇದರಲ್ಲಿ ಒಂದು ಡಿಫೆಕ್ಟ್ ಇದೆ. ಆಗ ಸೆಕ್ರೆಟರಿ ಸಹಿ ಮಾಡಲಿಲ್ಲ. ಈಗಿದ್ದ ಸೆಕ್ರೆಟರಿ ಬಳಿ ಸಹಿ ಮಾಡಿಸಿ ಕೊಡಬೇಕು. ಈಗ ಇರುವ ಅಧ್ಯಕ್ಷರು ಅದನ್ನು ತಂದು ಕೊಡಬೇಕು. ಅವರು ಬಿಜೆಪಿ ನೇಮಕ ಮಾಡಿರುವ ಅಧ್ಯಕ್ಷರು, ಈಸ್ ದಿಸ್ ಪಾಸಿಬಲ್?‌ ಎಂದು ಪ್ರಶ್ನೆ ಮಾಡಿದ್ದಾರೆ.

ನವೆಂಬರ್‌ನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಗಣತಿಯ ವರದಿ ಮಂಡನೆಗೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 2015ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ ಈ ಸಮೀಕ್ಷೆಯನ್ನು ನಡೆಸಲಾಗಿತ್ತು. ಈಗ ಈ ವರದಿಯನ್ನು ನವೆಂಬರ್‌ನಲ್ಲಿ ಸಲ್ಲಿಸಲು ಅವರು ಮುಂದಾಗಿದ್ದಾರೆ.

ಇದನ್ನೂ ಓದಿ: Kuruba Conference: ಬೆಳಗಾವಿಯಲ್ಲಿ ಬೃಹತ್‌ ಕುರುಬ ಸಮಾವೇಶದ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನ

ವಿಸ್ತಾರ ನ್ಯೂಸ್‌ಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ನವೆಂಬರ್‌ನಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ. ಈ ಹಿಂದೆ ಸಲ್ಲಿಕೆ ಮಾಡಿದ್ದಾಗ ಕೆಲವೊಂದಿಷ್ಟು ಬದಲಾವಣೆ ಮಾಡಬೇಕಿತ್ತು. ಹಿಂದಿನ ಸರ್ಕಾರದಲ್ಲಿ ಸಮಸ್ಯೆ ಇತ್ತು. ಈಗ ಅಂತಹ ಸಮಸ್ಯೆ ಕಂಡು ಬರುತ್ತಿಲ್ಲ. ಇದೇ ತಿಂಗಳಲ್ಲಿ ಸಮೀಕ್ಷೆ ವರದಿ ಸಲ್ಲಿಕೆ ಮಾಡುತ್ತೇವೆ. ವರದಿ ಸಲ್ಲಿಕೆಗೆ ಸರ್ಕಾರದಿಂದ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಇದು ಆಯೋಗದ ಜವಾಬ್ದಾರಿಯಾಗಿದೆ. ಹೀಗಾಗಿ ಸಲ್ಲಿಕೆ ಮಾಡುತ್ತೇವೆ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ.

ಟ್ವೀಟ್‌ ಮಾಡಿರುವ ಬಿ.ಕೆ. ಹರಿಪ್ರಸಾದ್

ಕಾಂತರಾಜ್ ವರದಿ ಜಾರಿ ಮಾಡಲು ಸರ್ಕಾರಕ್ಕೆ ‌ಒತ್ತಾಯ ಮಾಡಿರುವ ಬಿ.ಕೆ. ಹರಿಪ್ರಸಾದ್, ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕು ಎಂದು ಟ್ವೀಟ್ ಮಾಡಿ ಒತ್ತಡ ಹೇರಿದ್ದಾರೆ.

ಹರಿಪ್ರಸಾದ್‌ ಟ್ವೀಟ್‌ನಲ್ಲೇನಿದೆ?

“ಜಾತಿ ಗಣತಿ ಬಹಿರಂಗ ಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ರಾಹುಲ್‌ ಗಾಂಧಿ ಅವರು ಧ್ವನಿ ಎತ್ತಿದ್ದಾರೆ.

ಬಿಹಾರ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಕೂಡ ರಾಜ್ಯದಲ್ಲಿ ಈಗಾಗಲೇ ಸಿದ್ಧವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕಿದೆ.

“ಇಂಡಿಯಾ” ಮೈತ್ರಿಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಅಲ್ಲಿನ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿ ಐತಿಹಾಸಿಕ ನಡೆ ತೋರಿದ್ದು, ಅಭಿನಂದನೀಯ.

ಹಿಂದುಳಿದ, ಶೋಷಿತವೂ ಸೇರಿದಂತೆ ಎಲ್ಲ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್ ಪಕ್ಷದ್ದಾಗಿದೆ” ಎಂದು ಬಿ.ಕೆ. ಹರಿಪ್ರಸಾದ್‌ ಟ್ವೀಟ್‌ ಮೂಲಕ ಹೇಳಿದ್ದಾರೆ.

ಬಿಹಾರ ಸಿಎಂಗೆ ನನ್ನ ಧನ್ಯವಾದ

ಈ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಬಿಹಾರದಲ್ಲಿ ಜಾತಿ ಸಮೀಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಅದಕ್ಕಾಗಿ ಅಲ್ಲಿನ ಸಿಎಂ ನಿತೀಶ್ ಕುಮಾರ್ ಮತ್ತು ಲಾಲೂ ಪ್ರಸಾದ್ ಯಾದವ್ ಅವರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಜಾತಿಗಣತಿ ಮೂಲಕ ಜನರಿಗೆ ಹಕ್ಕು ಸಿಗಲಿದೆ. ರಾಹುಲ್ ಗಾಂಧಿ ಅವರದ್ದು ಜಾತಿ ಗಣತಿ ಆಗಬೇಕು ಎನ್ನುವ ಆಶಯ ಇತ್ತು. ಕರ್ನಾಟಕದಲ್ಲೂ ಸಮೀಕ್ಷೆ ಮಾಡಿದೆ. ಅದನ್ನು ಬಹಿರಂಗ ಮಾಡಬೇಕು. ತಪ್ಪು – ಒಪ್ಪುಗಳು ಏನೇ ಇರಬಹುದು. ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತದೆಯೋ? ಇಲ್ಲವೋ? ಎಂಬುದು ಗೊತ್ತಿಲ್ಲ. ಸಾರ್ವಜನಿಕರ ಹಣ ಖರ್ಚು ಮಾಡಿದೆ. ಅದನ್ನು ಬಹಿರಂಗ ಮಾಡಬೇಕು. ಚರ್ಚೆಗೆ ಅವಕಾಶ ನೀಡಬೇಕು.

ರಾಜ್ಯದಲ್ಲಿ ಯಾವಾಗ ಬಿಡುಗಡೆ ಮಾಡುತ್ತಾರೆಯೋ ಅದನ್ನು ಸರ್ಕಾರ ಕೇಳಬೇಕು. ಪಕ್ಷದ ಸದಸ್ಯನಾಗಿ ಬಿಡುಗಡೆ ಮಾಡಬೇಕು ಎನ್ನುವುದು ನನ್ನ ಆಶಯ. ಯಾವುದೇ ಜಾತಿ ಒತ್ತಡ ಹೇರಲಿ, ಮೊದಲು ಬಿಡುಗಡೆ ಮಾಡಬೇಕು. ಆಮೇಲೆ ಯಾರಿಗಾದರೂ ಅನ್ಯಾಯವಾದರೆ ಸರಿ ಮಾಡಬಹುದು. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಿಂದ ಸಿಎಂ ಆಗಿದ್ದಾರೆ. ನಮ್ಮ ನಾಯಕ ರಾಹುಲ್ ಗಾಂಧಿ ಅವರೇ ಜಾತಿಗಣತಿ ಆಗಬೇಕು ಎಂದಿದ್ದಾರೆ. ಹೀಗಾಗಿ ನಾವು ಅವರ ಹೇಳಿಕೆಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Politics : ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ

ಜಾತಿ ಗಣತಿಯನ್ನು ಬಿಡುಗಡೆ ಮಾಡಬೇಕು ಎಂಬ ನನ್ನ ಹೇಳಿಕೆಯಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತ್ಯಕ್ಷ ಹಾಗೂ ಪರೋಕ್ಷ ಟಾರ್ಗೆಟ್ ಮಾಡುವುದು ಏನಿಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ಹೇಳಿದ್ದಾರೆ.

Continue Reading

ದೇಶ

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Maharashtra News: ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ಬಾರಿಸುತ್ತಿರುವ ಮಧ್ಯೆಯೇ ಸಂಭಾಜಿನಗರದ ಮತ್ತೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿರುವ ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Edited by

Maharashtra News, another hospital witnessed for 10 patients death
Koo

ಮುಂಬೈ: ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದ (Maharashtra) ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ರೋಗಿಗಳ ಸಾವು ವರದಿಯಾಗುತ್ತಿರುವ ಬೆನ್ನಲ್ಲೇ ಸಂಭಾಜಿನಗರದ ಘಾಟಿ ಆಸ್ಪತ್ರೆಯಲ್ಲಿ (Ghati Hospital) 24 ಗಂಟೆಯಲ್ಲಿ 10ಕ್ಕಿಂತ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಈ ಹಿಂದೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ (Nanded Government hospital) 48 ಗಂಟೆಯಲ್ಲಿ ಶಿಶುಗಳು ಸೇರಿದಂತೆ 34 ರೋಗಿಗಳು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರವು, ತನಿಖೆಗೆ ಸಮಿತಿಯನ್ನು (Probe Committee) ರಚಿಸುವುದಾಗಿ ಘೋಷಣೆ ಮಾಡಿದೆ(Maharashtra News).

ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಜರಗುತ್ತಿರುವ ಘಟನೆಗಳು ಭಯಾನಕವಾಗಿವೆ. ಅದೇ ರೀತಿ ಘಾಟಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 8 ರೋಗಿಗಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ನಾಂದೇಡ್ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆಂಬ ವರ್ತಮಾನವಿದೆ. ಇದೆಲ್ಲವೂ ಭಯಾನಕವಾಗಿದೆ ಎಂದು ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.

ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು

ಮಹಾರಾಷ್ಟ್ರದ (Maharashtra) ನಾಂದೇಡ್ ಜಿಲ್ಲೆಯ (Nanded District) ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶು (Newborns) ಸೇರಿ 24 ರೋಗಿಗಳು ಮೃತಪಟ್ಟ ಘಟನೆಯು ಮಹಾರಾಷ್ಟ್ರದಲ್ಲಿ ಭಾರೀ ಆಕ್ರೋಶಕ್ಕೆಕಾರಣವಾಗಿತ್ತು. ಇದರ ಬೆನ್ನಲ್ಲೇ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಅವಘಡಕ್ಕೆ ಸರ್ಕಾರಿ ಆಸ್ಪತ್ರೆ ಎದುರಿಸುತ್ತಿರುವ ಸಿಬ್ಬಂದಿ ಹಾಗೂ ಔಷಧಗಳ ಕೊರತೆಯ ಕಾರಣ ಎಂದು ನಾಂದೇಡ್ ಶಂಕರ್ ರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ಹೇಳಿದ್ದಾರೆ(Shankarrao Chavan Government Hospital Dean). ಮೃತಪಟ್ಟ 12 ವಯಸ್ಕರ ಪೈಕಿ ಹೆಚ್ಚಿನವರು ಹಾವು ಕಡಿತಕ್ಕೊಳಗಾದವರಿದ್ದಾರೆ ಎಂದು ಅವರು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ: Maharashtra: ಔಷಧ ಕೊರತೆ, ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು!

ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ, ಈ ಪೈಕಿ ಹೆಚ್ಚಿನವರು ಹಾವು ಕಡಿತದಿಂದ ಬಳಲುತ್ತಿದ್ದರು. ವಿವಿಧ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರಿಂದ ಆಸ್ಪತ್ರೆಯು ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಅವರು ಆಸ್ಪತ್ರೆಯ ಡೀನ್ ಹೇಳಿದ್ದರು.

ಈ ಆಸ್ಪತ್ರೆಯು ತೃತೀಯ ಹಂತದ ಆರೈಕೆ ಕೇಂದ್ರವಾಗಿದೆ. ಅಲ್ಲದೇ, 70ರಿಂದ 80 ಕಿ.ಮೀ ವ್ಯಾಪ್ತಿಯಲ್ಲಿನ ಏಕೈಕ ಸರ್ಕಾರಿ ಆಸ್ಪತ್ರೆಯಾಗಿದೆ. ಹಾಗಾಗಿ, ದೂರದ ಸ್ಥಳಗಳಿಂದ ರೋಗಿಗಳು ಈ ಆಸ್ಪತ್ರೆಗೆ ಆಗಮಿಸುತ್ತಾರೆ. ಹೀಗೆ, ರೋಗಿಗಳು ಸಂಖ್ಯೆ ಹೆಚ್ಚಳವಾದಾಗ ಅವರನ್ನು ಈ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುವುದು ಕಷ್ಟ. ಆಗ ಸಮಸ್ಯೆಗಳು ಶುರುವಾಗುತ್ತವೆ ಎಂದು ಅವರು ತಿಳಿಸಿದ್ದಾರೆ. ಹಾಫ್ಕಿನ್ ಎಂಬ ಸಂಸ್ಥೆಯಿದ್ದು, ಇಲ್ಲಿಂದ ಔಷಧಿಗಳನ್ನು ಖರೀದಿಸಬೇಕು. ಆದರೆ ಈ ಸಂಸ್ಥೆಯಿಂದ ಔಷಧಗಳ ಖರೀದಿ ಸಾಧ್ಯವಾಗಿಲ್ಲ. ಆಗ ನಾವು ಸ್ಥಳೀಯವಾಗಿ ಔಷಧಗಳನ್ನು ಖರೀದಿಸಿ ರೋಗಿಗಳಿಗೆನೀಡಿದ್ದೇವೆ ಎಂದು ಡೀನ್ ಅವರು ತಿಳಿಸಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕ್ರೀಡೆ

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ ನಿಂದ (Asian Games) ಹೊರಗುಳಿಯಲು ನಿರ್ಧರಿಸಿದ್ದಾರೆ. ನೀರಜ್ ಚೋಪ್ರಾ ಈಗ ಚಿನ್ನದ ಪದಕದ ಫೇವರಿಟ್ ಆಗಿದ್ದಾರೆ.

VISTARANEWS.COM


on

Arshad Nadeem
Koo

ಹ್ಯಾಂಗ್ಜೌ: ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಏಷ್ಯನ್ ಗೇಮ್ಸ್ (Asian Games) 2023 ರಿಂದ ಹಿಂದೆ ಸರಿದಿದ್ದಾರೆ. 26 ವರ್ಷದ ಅಥ್ಲೀಟ್​ ಮೊಣಕಾಲು ಗಾಯದಿಂದ ಬಳಲುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಕಾಂಟಿನೆಂಟಲ್ ಈವೆಂಟ್​ನಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಪಂದ್ಯಾವಳಿಯಲ್ಲಿ ಅವರು ಭಾರತದ ನೀರಜ್ ಚೋಪ್ರಾ ಅವರ ಅತಿದೊಡ್ಡ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾಗುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅವರ ನಿರ್ಗಮನದಿಂದಾಗಿ ಏಷ್ಯನ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಇರುವುದಿಲ್ಲ. ನೀರಜ್ ಚೋಪ್ರಾ ಮತ್ತು ಅರ್ಷದ್ ಕಳೆದ ಕೆಲವು ವರ್ಷಗಳಿಂದ ಜಾವೆಲಿನ್ ಥ್ರೋನಲ್ಲಿ ತೀವ್ರ ಪೈಪೋಟಿಯನ್ನು ಒಡ್ಡುತ್ತಿದ್ದಾರೆ. ಈ ಕಾರಣದಿಂದ ಭಾರತಕ್ಕೆ ಚಿನ್ನದ ಪದಕ ಬಹುತೇಕ ಖಚಿತಗೊಂಡಿದೆ.

ವರದಿಗಳ ಪ್ರಕಾರ, ಅರ್ಷದ್ ನದೀಮ್ ಏಷ್ಯಾಡ್​ಗಾಗಿ ತರಬೇತಿ ಪಡೆಯುತ್ತಿದ್ದರು ಹಾಗೂ ಈವೆಂಟ್​ನಲ್ಲಿ ಭಾಗವಹಿಸಲು ಸಜ್ಜಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಗಾಯಗೊಂಡ ಅವರನ್ನು ಎಂಆರ್​ಐ ಸ್ಕ್ಯಾನ್​ಗೆ ಒಳಪಡಿಸಿದಾಗ ಗಾಯವನ್ನು ಬಹಿರಂಗಪಡಿಸಿದೆ. ಹೀಗಾಗಿ ಅವರು ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಪಾಕಿಸ್ತಾನದ ಚೆಫ್ ಡಿ ಮಿಷನ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹ್ಯಾಂಗ್ಝೌನಲ್ಲಿ ನಡೆದ ಮೊದಲ ತರಬೇತಿಯ ನಂತರ ಅರ್ಷದ್ ಅವರ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಕ್ರೀಡಾಪಟುವನ್ನು ಎಂಆರ್​ಐ ಸ್ಕ್ಯಾನ್​​ಗೆ ಕರೆದೊಯ್ಯಲಾಯಿತು, ನಂತರ ಏಷ್ಯಾಡ್​ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿಸಲಾಗಿದೆ.

ಇತ್ತೀಚೆಗೆ ಅರ್ಷದ್ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರು ಅಲ್ಲಿ 87.82 ಮೀಟರ್ ಎಸೆದಿದ್ದರು. ಈ ಕೂಟದಲ್ಲಿ 88.17 ಮೀಟರ್ ಎಸೆತದೊಂದಿಗೆ ತಮ್ಮ ಮೊದಲ ವಿಶ್ವ ಚಾಂಪಿಯನ್​ಷಿಪ್ ಚಿನ್ನದ ಪದಕವನ್ನು ನೀರಜ್ ಚೋಪ್ರಾ ಗೆದಿದ್ದರು.

ವಿಶ್ವ ಚಾಂಪಿಯನ್​​ಷಿಪ್​ನಲ್ಇ ಇಬ್ಬರೂ ಕ್ರೀಡಾಪಟುಗಳ ಪ್ರದರ್ಶನವು ಏಷ್ಯಾಡ್​ನಲ್ಲಿ ದೊಡ್ಡ ಪೈಪೋಟಿ ಎದುರಾಗುವ ನಿರೀಕ್ಷೆಗಳನ್ನು ಹುಟ್ಟಿಸಿತ್ತು. ನೀರಜ್​​ಗೆ ಹೋಲಿಸಿದರೆ ಅರ್ಷದ್ ಉತ್ತಮ ವೈಯಕ್ತಿಕ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ವರ್ಷ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 90.18 ಮೀಟರ್ ಎಸೆಯುವ ಮೂಲಕ ನೀರಜ್ ಚೋಪ್ರಾ ಅನುಪಸ್ಥಿತಿಯಲ್ಲಿ ತಮ್ಮ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದರು.

ಏಷ್ಯನ್ ಗೇಮ್ಸ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ಋತುವಿನಲ್ಲಿ ನೀರಜ್ ಚೋಪ್ರಾ 88.77 ಮೀಟರ್ ಎಸೆದು ಋತುವಿನ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅರ್ಷದ್ 87.82 ಮೀ ದೂರ ಎಸೆದು ಅವರ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದಾರೆ. ಅರ್ಷದ್ ಅನುಪಸ್ಥಿತಿಯು ಈಗ ನೀರಜ್ ಅವರನ್ನು ಚಿನ್ನದ ಪದಕಕ್ಕೆ ಅತ್ಯಂತ ನೆಚ್ಚಿನ ಸ್ಪರ್ಧಿಯನ್ನಾಗಿ ಮಾಡಿದೆ. ನೀರಜ್​ ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿದ್ದಾರೆ. ಅವರು ಜಕಾರ್ತಾದಲ್ಲಿ ಚಿನ್ನ ಗೆದಿದ್ದರು. ಅರ್ಷದ್ ಅಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.

Continue Reading

ಕ್ರೀಡೆ

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

ಅನ್ನು ರಾಣಿಯ ಚಿನ್ನದ ಪದಕದೊಂದಿಗೆ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಬೆಳ್ಳಿ, ಕಂಚು ಸೇರಿ 69 ಪದಕಗಳೊಂದಿಗೆ (Asian Games ) ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.

VISTARANEWS.COM


on

Annu Rani
Koo

ಹ್ಯಾಂಗ್ಜೌ: ಭಾರತದ ಜಾವೆಲಿನ್​ ಎಸೆತಗಾರ್ತಿ ಅನ್ನುರಾಣಿ ಏಷ್ಯನ್​ ಗೇಮ್ಸ್​ನಲ್ಲಿ (Asian Games) ಹೊಸ ದಾಖಲೆ ಬರೆದ್ದಾರೆ. ಅವರು ಖಂಡಾಂತರ ಕ್ರೀಡಾಕೂಟದ ಮಹಿಳೆಯರ ಜಾವೆಲಿನ್​ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮೊಟ್ಟ ಮೊದಲ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ನಡೆಸ ಸ್ಪರ್ಧೆಯಲ್ಲಿ ಅತ್ಯುತ್ತಮ 62.92 ಮೀಟರ್ ದೂರಕ್ಕೆ ಜಾವೆಲಿನ್​ ಎಸೆತ ಅನ್ನು ರಾಣಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಅಂದ ಹಾಗೆ ಅನ್ನು ರಾಣಿ 2014ರಲ್ಲಿ ನಡೆದಿದ್ದ ಏಷ್ಯನ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು ಇದೀಗ ಅವರು ಪ್ರದರ್ಶನದಲ್ಲಿ ಸುಧಾರಣೆ ಮಾಡಿಕೊಂಡು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದರು.

ಅನ್ನು ರಾಣಿ ಅವರ ಚಿನ್ನದ ಪದಕದ ಸಾಧನೆಯೊಂದಿಗೆ ಭಾರತದ ಬಂಗಾರದ ಗಳಿಕೆ 15ಕ್ಕೆ ಏರಿಕೆಯಾಗಿದೆ. 26 ಬೆಳ್ಳಿ ಹಾಗೂ 28 ಕಂಚಿನ ಪದಕದ ಸಾಧನೆಯೊಂದಿಗೆ ಒಟ್ಟಾರೆ 69 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿಸಿದೆ.

ಮಂಗಳವಾರ ಸಂಜೆ ಪಾರುಲ್ ಚೌಧರಿ, ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು.

ಮಹಿಳೆಯರ 400 ಮೀಟರ್ ಓಟದ ಫೈನಲ್​ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್​ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್​ ತಂಡವು ತಂಡವು ನೇಪಾಳ ವಿರುದ್ಧ 23 ರನ್​ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.

ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.

ಇದನ್ನೂ ಓದಿ : Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

ಬ್ಯಾಡ್ಮಿಂಟರ್​ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್​ಗೆ ಅರ್ಹತೆ ಪಡೆಯಿತು.

ಪುರುಷರ ಡೆಕಾಥ್ಲಾನ್​ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.

Continue Reading
Advertisement
salman
ಬಾಲಿವುಡ್14 mins ago

Salman Khan: ಬರ್ತ್‌ ಡೇ ಪಾರ್ಟಿಯಲ್ಲಿ ಸಲ್ಮಾನ್‌ ಸಖತ್ ಡ್ಯಾನ್ಸ್! ಅಭಿಮಾನಿಗಳಿಗೆ ನಟನ ಆರೋಗ್ಯದ್ದೇ ಚಿಂತೆ

caste census repot image
ಕರ್ನಾಟಕ28 mins ago

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Sachin tendulkar
ಕ್ರಿಕೆಟ್31 mins ago

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

Eid Milad procession
ಕರ್ನಾಟಕ53 mins ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್1 hour ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ1 hour ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ1 hour ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema1 hour ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

Annu Rani
ಕ್ರೀಡೆ2 hours ago

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

Old Pension Scheme Madhu Bangarappa
ಕರ್ನಾಟಕ2 hours ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ5 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ6 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ16 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌