High Court : ಹೌದು, 1ನೇ ತರಗತಿ ಪ್ರವೇಶಿಸಲು ಮಗುವಿಗೆ 6 ವರ್ಷ ಆಗಿರಲೇಬೇಕು; ಸರ್ಕಾರದ ನಿರ್ಧಾರಕ್ಕೆ ಹೈ ಜೈ! - Vistara News

ಕರ್ನಾಟಕ

High Court : ಹೌದು, 1ನೇ ತರಗತಿ ಪ್ರವೇಶಿಸಲು ಮಗುವಿಗೆ 6 ವರ್ಷ ಆಗಿರಲೇಬೇಕು; ಸರ್ಕಾರದ ನಿರ್ಧಾರಕ್ಕೆ ಹೈ ಜೈ!

High Court : ಮುಂದಿನ ವರ್ಷದಿಂದ ನಿಮ್ಮ ಮಗು ಒಂದನೇ ಕ್ಲಾಸಿಗೆ ಸೇರ್ಪಡೆ ಆಗಬೆಕಾಗಿದೆಯಾ? ಹಾಗಿದ್ದರೆ ಮಗುವಿಗೆ ಆರು ವರ್ಷ ಆಗಿರಲೇಬೇಕು. ಇದನ್ನು ಹೈಕೋರ್ಟ್‌ ಕೂಡಾ ಸಮರ್ಥಿಸಿದೆ.

VISTARANEWS.COM


on

High court age Compulsary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು (First Standard Admission) ಮಗುವಿಗೆ ಆರು ವರ್ಷ ತುಂಬಿರಲೇಬೇಕು (Age compulsary) ಎಂಬ ರಾಜ್ಯ ಸರ್ಕಾರದ ಆದೇಶವನ್ನು ರಾಜ್ಯ ಹೈಕೋರ್ಟ್‌ (Karnataka High court) ಎತ್ತಿಹಿಡಿದಿದೆ. ಹೀಗಾಗಿ, ಇನ್ನು ಆದೇಶದಲ್ಲಿ ಬದಲಾವಣೆ ಆದೀತು, ವಯಸ್ಸಿನಲ್ಲಿ ಸಡಿಲಿಕೆ ಆದೀತು ಎಂದು ಯಾರೂ ಕಾಯುವುದು ಬೇಡ.

ಇದೊಂದು ಖಾಸಗಿ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪೇ ಆದರೂ ಮುಂದಿನ ವರ್ಷದಿಂದ ಒಂದನೇ ತರಗತಿ ಪ್ರವೇಶ ಮಾಡುವ ಲಕ್ಷಾಂತರ ಮಕ್ಕಳು ಮತ್ತು ಪೋಷಕರಿಗೆ ಸಂಬಂಧಿಸಿದ ವಿಷಯವಾಗಿ ಗಮನ ಸೆಳೆದಿದೆ.

ಏನಿದು ಪ್ರವೇಶ ವಿವಾದ, ಹೈಕೋರ್ಟ್‌ ಹೇಳಿದ್ದೇನು?

ನಿಜವೆಂದರೆ ಈ ವ್ಯಾಜ್ಯ ಇರುವುದು ಮಗುವನ್ನು ಎಲ್‌ಕೆಜಿಗೆ ಸೇರಿಸುವ ವಿಚಾರದಲ್ಲಿ. ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರಕ್ಕೆ ತಮ್ಮ ಮಗುವನ್ನು ಎಲ್‌ಕೆಜಿಗೆ ಸೇರಿಸಲು ಪೋಷಕರು ಕೋರಿದ್ದರು. ಶಾಲೆ ಕೂಡಾ ಶುಲ್ಕವನ್ನು ಭರ್ತಿ ಮಾಡಿಕೊಂಡು ಸೀಟು ಕೊಟ್ಟಿತ್ತು. ಆದರೆ ಈ ನಡುವೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಆರು ವರ್ಷ ತುಂಬದ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿತು.

2023ರ ಜೂನ್‌ 1ಕ್ಕೆ ಸರಿಯಾಗಿ ನಾಲ್ಕು ವರ್ಷ ಪೂರ್ಣಗೊಳಿಸದಿರುವುದರಿಂದ ಆಕೆ ಎಲ್‌ಕೆಜಿಗೆ ಪ್ರವೇಶ ಪಡೆಯಲು ಅರ್ಹಳಲ್ಲ ಎಂದು ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರ ಆದೇಶ ಉಲ್ಲೇಖಿಸಿ 2023ರ ಮೇ 27ರಂದು ಪೋಷಕರಿಗೆ ಶಾಲೆಯು ಈಮೇಲ್‌ ಕಳುಹಿಸಿತ್ತು. ಮಗುವನ್ನು ಮುಂದಿನ ವರ್ಷವೂ ನರ್ಸರಿಯಲ್ಲೇ ಉಳಿಸಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿತ್ತು.

ಈ ವಿಚಾರದಲ್ಲಿ ಪೋಷಕರು ಶಾಲೆಯಲ್ಲಿ ಸಾಕಷ್ಟು ವಾಗ್ವಾದ ನಡೆಸಿದ್ದರು. ಕೊನೆಗೆ ಹೈಕೋರ್ಟ್‌ ಮೆಟ್ಟಿಲನ್ನೇ ಹತ್ತಿದರು. ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಈ ಅರ್ಜಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ ಪ್ರಸಕ್ತ ವರ್ಷದಲ್ಲಿ ಎಲ್‌ಕೆಜಿ ಕಲಿಯಲು ಅನುಮತಿಸಬೇಕು ಎಂದು ಕೋರಲಾಗಿತ್ತು. ಇದೀಗ ನ್ಯಾಯಪೀಠ ಪೋಷಕರ ಮನವಿಯನ್ನು ತಳ್ಳಿ ಹಾಕಿದೆ. ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ಅರ್ಜಿದಾರರ ವಾದ ಏನಾಗಿತ್ತು?

ಅರ್ಜಿದಾರರ ಪರವಾಗಿ ವಾದಿಸಿದ್ದ ವಕೀಲ ಕೆ ಎನ್‌ ಶ್ರೀನಿವಾಸ ಅವರು “2020ರ ಮೇ 11ರ ಅಧಿಸೂಚನೆಯ ಪ್ರಕಾರ ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ 5.5 ವರ್ಷ ಆಗಿರಬೇಕು. ಎಲ್‌ಕೆಜಿಗೆ ಮಗು ಸೇರಿಸಲು 3.5 ವರ್ಷ ಆಗಿರಬೇಕು ಎಂದು ಹೇಳಲಾಗಿದೆ. ಈ ಅಧಿಸೂಚನೆಯು ತಮಗೆ ಅನ್ವಯವಾಗುತ್ತದೆಯೇ ವಿನಃ ಹೊಸ ಅಧಿಸೂಚನೆ ಅಲ್ಲʼʼ ಎಂದು ಹೇಳಿದ್ದರು.

ಸರ್ಕಾರದ ಪರ ವಾದ ಏನಿತ್ತು?

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಂ ಹುಯಿಲಗೋಳ ಅವರು “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ 2009ರ ನಿಬಂಧನೆಗಳು ಮತ್ತು ಎನ್‌ಇಪಿಯನ್ನು ಗಮನದಲ್ಲಿಟ್ಟುಕೊಂಡು ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯಸ್ಸು ಮಿತಿ ನಿಗದಿಪಡಿಸಲಾಗಿದೆ” ಎಂದು ತಿಳಿಸಿದ್ದರು.

ಇದನ್ನೂ ಓದಿ : 6 ವರ್ಷ ಪೂರ್ತಿಯಾದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ; ಸರಕಾರದ ಹೊಸ ಆದೇಶ

high court karnataka

ಅಂತಿಮವಾಗಿ ಹೈಕೋರ್ಟ್‌ ಹೇಳಿದ್ದೇನು?

  1. ಮಾರ್ಗಸೂಚಿಯ ಹಿಂದೆ ಮೇಲ್ನೋಟಕ್ಕೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ ಎಂದು ನ್ಯಾಯಾಲಯಕ್ಕೆ ಅರ್ಥವಾಗಿದೆ. ಹೀಗಾಗಿ, ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿ ಅದೇ ತರಗತಿಯಲ್ಲಿ ಉಳಿಯಬೇಕಾಗುತ್ತದೆ ಎಂಬ ಕಾರಣಕ್ಕೆ ಮಾರ್ಗಸೂಚಿಯಲ್ಲಿ ಹಸ್ತಕ್ಷೇಪ ಮಾಡಲಾಗದು.
  2. ರಾಷ್ಟ್ರೋತ್ಥಾನ ವಿದ್ಯಾಕೇಂದ್ರವು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಅಳವಡಿಸಿಕೊಂಡಿದ್ದು, ಒಂದನೇ ತರಗತಿ ಪ್ರವೇಶಕ್ಕೆ ಕನಿಷ್ಠ ಮತ್ತು ಗರಿಷ್ಠ ಅರ್ಹತಾ ಮಾನದಂಡವನ್ನು ಸರಿಯಾಗಿ ಮಾರ್ಪಾಡು ಮಾಡಿದೆ.
  3. ವಿದ್ಯಾಕೇಂದ್ರ ಮತ್ತು ರಾಜ್ಯ ಸರ್ಕಾರವು ಹೊರಡಿಸಿರುವ ಪ್ರವೇಶಾತಿ ಮಾರ್ಗಸೂಚಿಗಳು ಸಿಂಧುವಾಗಿದ್ದು, ಎನ್‌ಇಪಿಗೆ ಅನುಗುಣವಾಗಿವೆ.
  4. ರಾಷ್ಟ್ರೋತ್ಥಾನ ವಿದ್ಯಾಕೇಂದ್ರವನ್ನು ಶಿಕ್ಷಣ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ನಡೆಸುತ್ತಿದೆ. ಹೀಗಾಗಿ, ವಿದ್ಯಾಕೇಂದ್ರವು ಎನ್‌ಇಪಿ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
  5. ಜಾಗತಿಕ ಶೈಕ್ಷಣಿಕ ಮಾರ್ಗಸೂಚಿಗಳನ್ನು ಆಧರಿಸಿ ಪ್ರವೇಶಾತಿ ವಯಸ್ಸನ್ನು ಎನ್‌ಇಪಿ ಮಾನದಂಡಗಳಲ್ಲಿ ಸೇರಿಸಲಾಗಿದೆ. ಮಕ್ಕಳಿಗೆ ಸರಿಯಾದ ಆರೈಕೆ ಮತ್ತು ಶಿಕ್ಷಣ ನೀಡಬೇಕು. ಆಟ ಕೇಂದ್ರಿತ, ಚಟುವಟಿಕೆ ಕೇಂದ್ರಿತ, ಹೊಂದಿಕೊಳ್ಳುವ ಕಲಿಕೆಯ ಭರವಸೆಯ ಹಿನ್ನೆಲೆಯಲ್ಲಿ ತಜ್ಞರು ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ.
  6. ಮಕ್ಕಳು ಪ್ರೌಢ ಶಿಕ್ಷಣ ಪಡೆಯುವಾಗ ಅವರಲ್ಲಿ ಪರೀಕ್ಷಾ ಸಂಬಂಧಿ ಒತ್ತಡ ಮತ್ತು ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಸಮಗ್ರ ನೀತಿ ರೂಪಿಸಲಾಗಿದೆ ಎಂದು ತಜ್ಞರು ಹೇಳಿರುವಾಗ ಸಕ್ಷಮ ಪ್ರಾಧಿಕಾರ ರೂಪಿಸಿರುವ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

Gold Rate Today: ಚಿನ್ನದ ದರ ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today bipasha
Koo

ಬೆಂಗಳೂರು: ರಾಜಧಾನಿಯಲ್ಲಿ ಇಂದು ಬಂಗಾರದ ದರ (Gold rate today) ನಿನ್ನೆಯಂತೆಯೇ ಯಥಾಸ್ಥಿತಿ ಕಾಪಾಡಿಕೊಂಡಿದೆ. ಎರಡು ದಿನಗಳಿಂದ ಯಾವುದೇ ಏರಿಳಿಕೆ ಆಗಿಲ್ಲ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಏರಿಕೆಯಾಗಿದ್ದ ದರ, ನಂತರ ಇಳಿದಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,570 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,167 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 52,560 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 65,700 ಮತ್ತು ₹ 6,57,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹ 7,167 ಆಗಿದ್ದು, ಎಂಟು ಗ್ರಾಂ ಬೆಲೆ ₹ 57,336 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 71,670 ಮತ್ತು ₹ 7,16,700 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ₹ 65,850₹ 71,820
ಮುಂಬೈ₹ 65,700₹ 71,670
ಬೆಂಗಳೂರು₹ 65,700₹ 71,670
ಚೆನ್ನೈ₹ 66,500₹ 72,550

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 90.50 ಹಾಗೂ 8 ಗ್ರಾಂಗೆ ₹ 724 ಇದೆ. 10 ಗ್ರಾಂಗೆ ₹ 905 ಹಾಗೂ 1 ಕಿಲೋಗ್ರಾಂಗೆ ₹ 90,500 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

  1. ಹಣದುಬ್ಬರ

ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

  1. ಜಾಗತಿಕ ಉದ್ವಿಗ್ನತೆಗಳು

ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

  1. ಚೀನಾದ ಪ್ರಭಾವ

ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

  1. ಕಡಿಮೆ ಬಡ್ಡಿ ದರಗಳು

ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

  1. ಹೂಡಿಕೆ ಮಾಡಬಹುದೆ?

ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬೆಲೆ ಗಮನಿಸಿ

Continue Reading

ಬೆಳಗಾವಿ

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Karnataka Rain : ನಿನ್ನೆ ಭಾನುವಾರ ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದ. ಘಟನೆಯಲ್ಲಿ ಮತ್ತಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದರು. ಆದರೆ ಸೋಮವಾರದಂದು ಗಾಯಾಳು ಒಬ್ಬ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

By

karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ (Belgavi News) ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ವಿಠ್ಠಲ ತಳವಾರ ಮೃತ ದುರ್ದೈವಿ.

ಸೋಮನಾಥ್ ಮುಚ್ಚಂಡಿಕರ್, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಈ ಮೂವರು ಯುವಕರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಧರೆಗುರುಳಿ ಬೈಕ್‌ ಮೇಲೆ ಬಿದ್ದಿತ್ತು.

ಮರ ಬಿದ್ದ ರಭಸಕ್ಕೆ ಸೋಮನಾಥ್ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡಿದ್ದ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಿಠ್ಠಲ್‌ ತಳವಾರ್‌ ತಲೆಗೂ ಗಂಭೀರ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಸಾವು ಬದುಕಿನ ನಡುವೆ ಹೋರಾಡಿದ ವಿಠ್ಠಲ್‌ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.

ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡು ಸ್ವಪ್ನಿಲ್ ದೇಸಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಈಗಾಗಲೇ ಹಲವು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿತ್ತು. ಇದೀಗ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೆರಡು ದಿನಗಳು ಮಾತ್ರ ಬಾಕಿ ಇವೆ ಅಂದರೆ, ಜೂನ್‌ 12ಕ್ಕೆ ಮುಕ್ತಾಯವಾಗಲಿದೆ.

VISTARANEWS.COM


on

By

HSRP Number Plate
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ‌ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌ (HSRP Number Plate) ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂನ್‌ 12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರವೇ ನೋಂದಣಿ ಮಾಡಿ

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಇದನ್ನೂ ಓದಿ: NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
-ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
-ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
-HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.
-HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
-ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
-ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
-ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
-ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

-HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

-ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
-ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
-ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
-ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
-ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಹೆಚ್ಚುತ್ತಿವೆ ನಕಲಿ ಹಾವಳಿ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

PM Narendra Modi: ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

VISTARANEWS.COM


on

pm narendra Modi Cabinet
Koo

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

“ಒಕ್ಕೂಟ ವ್ಯವಸ್ಥೆಯ ಆಶಯ…” ನೂತನ ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಇದನ್ನೂ ಓದಿ: Narendra Modi: 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

Continue Reading
Advertisement
Viral Video
ವೈರಲ್ ನ್ಯೂಸ್19 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ25 mins ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ36 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ36 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್49 mins ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ59 mins ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು1 hour ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ1 hour ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್1 hour ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ2 hours ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌