66 ವರ್ಷದ ಹಿಂದೆ ಬಿಸಿಯೂಟ ಶುರು ಮಾಡಿದ್ದು ಕಾಮರಾಜ್ ನಾಡಾರ್, ಕಾರಣವಾಗಿದ್ದು ಒಬ್ಬ ಆದಿವಾಸಿ ಹುಡುಗ! - Vistara News

ಶಿಕ್ಷಣ

66 ವರ್ಷದ ಹಿಂದೆ ಬಿಸಿಯೂಟ ಶುರು ಮಾಡಿದ್ದು ಕಾಮರಾಜ್ ನಾಡಾರ್, ಕಾರಣವಾಗಿದ್ದು ಒಬ್ಬ ಆದಿವಾಸಿ ಹುಡುಗ!

ರಾಜಮಾರ್ಗ ಅಂಕಣ: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಶಾಲೆಯ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ಬರಲಿದೆ. ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು. ಶಾಲೆಯಲ್ಲಿ ಬಿಸಿಯೂಟ ನೀಡುವ ಕ್ರಾಂತಿಕಾರಿ ಯೋಜನೆಯ ಹುಟ್ಟಿನ ಹಿಂದಿನ ಕಥೆ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಮರಾಜ್ ನಾಡಾರ್ ಅವರು ತಮಿಳುನಾಡಿನ ಶಕ್ತಿಶಾಲಿ ಮುಖ್ಯಮಂತ್ರಿ ಆಗಿ ಒಂಬತ್ತು ವರ್ಷಗಳ ಕಾಲ ಆಳಿದವರು (1954-1963). ಅವರು ಹೆಚ್ಚು ಓದಿದವರು ಅಲ್ಲ. ಆರು ವರ್ಷ ಪ್ರಾಯದಲ್ಲಿ ಅಪ್ಪನನ್ನು ಕಳೆದುಕೊಂಡು ಬಡತನದ ಬಾಲ್ಯವನ್ನು ಕಳೆದವರು. ಅದರಿಂದ ಅವರು ಪ್ರಾಥಮಿಕ ಶಾಲೆಗಿಂತ ಮುಂದೆ ಹೋಗಲು ಸಾಧ್ಯ ಆಗಿರಲಿಲ್ಲ.

ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಒಂದು ಘಟನೆಯು ಒಂದು ಕ್ರಾಂತಿಕಾರಕ ನಿರ್ಧಾರಕ್ಕೆ ಕಾರಣ ಆಯಿತು. ಒಮ್ಮೆ ಅವರು ತಮ್ಮ ಹಳೆಯ ಕಾರಿನಲ್ಲಿ ಸಂಚಾರ ಹೊರಟಿದ್ದರು. ಚಿರನ್ಮಹಾದೇವಿ ಎಂಬ ಊರಿನ ರೈಲ್ವೇ ಕ್ರಾಸಿಂಗ್ ಪಕ್ಕದಲ್ಲಿ ಕಾರು ತುಂಬಾ ಹೊತ್ತು ನಿಲ್ಲಬೇಕಾಯಿತು.

RAJAMARGA

ಕಾಮರಾಜ್ ನಾಡಾರ್ ಕಾರಿನ ಕಿಟಕಿಯಿಂದ ಹೊರಗೆ ಕಣ್ಣು ಹಾಯಿಸುತ್ತ ಕುಳಿತಿದ್ದರು. ಅವರ ಕಣ್ಣಿಗೆ ಒಬ್ಬ ಆದಿವಾಸಿ ಹುಡುಗ ಕಂಡ. ಅವನು ತುಂಡು ಬಟ್ಟೆ ತೊಟ್ಟುಕೊಂಡು ದನಗಳನ್ನು ಮೇಯಿಸುತ್ತಿದ್ದ. ಅವನನ್ನು ಕರೆದು ಕಾಮರಾಜರು ಮಾತಿಗೆ ತೊಡಗಿದರು. ಅವನಿಗೆ ಈ ವ್ಯಕ್ತಿ ತಮಿಳುನಾಡಿನ ಮುಖ್ಯಮಂತ್ರಿ ಎಂದು ಗೊತ್ತಿರಲಿಲ್ಲ. ಕಾಮರಾಜರು ಮೊದಲು ಅವನ ಹೆಸರು ಕೇಳಿದರು. ನಂತರ ಯಾಕೋ ಶಾಲೆಗೆ ಹೋಗಲಿಲ್ಲ? ಎಂದರು.

ಹುಡುಗ ಸಿಡಿದು ಹೇಳಿದ – ನಾನು ಶಾಲೆಗೆ ಹೋದರೆ ದನ ಮೇಯಿಸುವುದು ಯಾರು? ನನಗೆ ಊಟ ಕೊಡುವುದು ಯಾರು?

ಕಾಮರಾಜರಿಗೆ ಕಪಾಳಕ್ಕೆ ಎರಡು ಬಿಗಿದ ಅನುಭವ ಆಯಿತು. ಅವರ ಬಾಲ್ಯದ ಹಸಿವು, ಅಪಮಾನ, ನೋವು ಎಲ್ಲವೂ ಸೇರಿ ಕಣ್ಣೀರು ಗಲ್ಲವನ್ನು ತೋಯಿಸಿತು. ಅವರು ಭಾವಜೀವಿ ಮತ್ತು ಬೇರೆಯವರ ಕಷ್ಟಗಳಿಗೆ ಸ್ಪಂದಿಸುವ ಗುಣ ಇದ್ದವರು.

ಮರುದಿನವೇ ಅವರು ಚೆನ್ನೈಗೆ ಬಂದು ಕ್ಯಾಬಿನೆಟ್ ಮೀಟಿಂಗ್ ಕರೆದರು. ಶಾಲೆಯ ಮಕ್ಕಳಿಗೆ ಉಚಿತ ಬಿಸಿಯೂಟವನ್ನು ಒದಗಿಸುವ ಪ್ರಸ್ತಾವ ಮುಂದಿಟ್ಟರು. ಒಂದಿಬ್ಬರು ಒಡಕು ಮಾತು ಹೇಳಿದರೂ ಅವರು ಕ್ಯಾರ್ ಮಾಡಲಿಲ್ಲ. ಅವರಿಗೆ ಹಸಿವಿನ ಬೆಲೆ ಗೊತ್ತಿತ್ತು!

ಅವರ ಹಠ ಮತ್ತು ಬದ್ಧತೆಯ ಫಲವಾಗಿ ಇಡೀ ಭಾರತದಲ್ಲಿ ಮೊತ್ತಮೊದಲ ಬಾರಿಗೆ ಸರಕಾರಿ ಶಾಲೆಯ ಅಷ್ಟೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯು ಜಾರಿಗೆ ಬಂದಿತು(1956)!

ಕಾಮರಾಜರು ಅದೇ ಹುಡುಗನನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಕರೆದು ಸನ್ಮಾನ ಮಾಡಿದರು. ಆ ಕಾಲಕ್ಕೆ ಅದು ಕ್ರಾಂತಿಕಾರಕವಾದ ಯೋಜನೆಯೇ ಆಗಿತ್ತು. ಮುಂದೆ ಬೇರೆ ಬೇರೆ ರಾಜ್ಯಗಳು ಕೂಡ ಆ ಯೋಜನೆಯನ್ನು ಜಾರಿಗೆ ತಂದವು. ಕರ್ನಾಟಕ ಸರಕಾರ ಕೂಡ ‘ಅಕ್ಷರ ದಾಸೋಹ’ ಎಂಬ ಹೆಸರಿನಿಂದ ಈ ಯೋಜನೆಯನ್ನು ಅನುಷ್ಠಾನ ಮಾಡಿತು.

ಆ ಬಾಲಕನ ಸ್ಫೂರ್ತಿಯಿಂದ ಮತ್ತು ಕಾಮರಾಜರ ಸಂಕಲ್ಪ ಶಕ್ತಿಯಿಂದ ಜಾರಿಗೆ ಬಂದ ಯೋಜನೆಯು ಮುಂದೆ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕವಾದ ಬದಲಾವಣೆಯನ್ನೇ ತಂದಿತು. ಮುಂದೆ ಕಾಮರಾಜ ನಾಡಾರ್ ಅವರಿಗೆ ಭಾರತರತ್ನ ಪ್ರಶಸ್ತಿ ಕೂಡ ದೊರೆಯಿತು.
ಇದನ್ನೂ ಓದಿ| ಎವರೆಸ್ಟ್‌ ವೀರ ಎಡ್ಮಂಡ್ ಹಿಲರಿ ಹೇಳಿದ ಸವಾಲು ಎದುರಿಸುವ ಪಾಠ
ಇದನ್ನೂ ಓದಿ| ರಾಜಮಾರ್ಗ ಅಂಕಣ| ಮಧ್ಯ ರಾತ್ರಿ ಎದ್ದುಬಂದು ಎರಡು ಹಾಡು ಹಾಡಿದ್ದರು ಸುಬ್ಬುಲಕ್ಷ್ಮಿ, ಯಾಕೆಂದರೆ..

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

Inspirational Story: ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಆಕೆಗೆ 25 ವರ್ಷ. ಮಹಾರಾಷ್ಟ್ರ ಸರ್ಕಾರದ ಉದ್ಯೋಗ ಪರೀಕ್ಷೆಯಲ್ಲಿ ಆಕೆ ಉತ್ತೀರ್ಣಳಾಗಿರುವುದು ರಾಜ್ಯಕ್ಕೆ ಹೆಮ್ಮೆ ತಂದಿದೆ.

VISTARANEWS.COM


on

By

Inspirational Story
Koo

ಅಮರಾವತಿ: ಇಪ್ಪತ್ತೈದು ವರ್ಷಗಳ (Inspirational Story) ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ದೃಷ್ಟಿ ದೋಷವುಳ್ಳ ಹೆಣ್ಣು ಮಗುವೊಂದು ಈಗ ಬೆಳೆದು ಬ್ರೈಲ್ ಲಿಪಿಯಲ್ಲಿ (Braille script) ಮಹಾರಾಷ್ಟ್ರ (maharastra) ಸಾರ್ವಜನಿಕ ಸೇವಾ ಆಯೋಗದ (Maha Job Test) ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಾಳೆ. ಅಲ್ಲದೇ ಯುಪಿಎಸ್ ಸಿ (UPSC) ಪರೀಕ್ಷೆ ಬರೆಯುವ ತಯಾರಿ ನಡೆಸುತ್ತಿದ್ದಾಳೆ.

ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ದೃಷ್ಟಿದೋಷವುಳ್ಳ ಹೆಣ್ಣು ಶಿಶುವೊಂದು ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಕಸದ ಬುಟ್ಟಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆಕೆಯ ಹೆತ್ತವರು ಸಿಗದ ಕಾರಣ ಪೊಲೀಸರು ಹಸಿವಿನಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಜಲಗಾಂವ್‌ನ ರಿಮ್ಯಾಂಡ್ ಹೋಮ್‌ಗೆ ಕರೆದೊಯ್ದರು. ಅಲ್ಲಿ ಆಕೆಗೆ ಆಹಾರವನ್ನು ನೀಡಲಾಯಿತು. ಬಳಿಕ ಸುಮಾರು 270 ಕಿ.ಮೀ. ದೂರದಲ್ಲಿರುವ ಅಮರಾವತಿಯ ಪರತ್ವಾಡದಲ್ಲಿ ಕಿವುಡ ಮತ್ತು ಕುರುಡರಿಗಾಗಿ ಇರುವ ಸುಸಜ್ಜಿತ ಪುನರ್ವಸತಿ ಮನೆಗೆ ಆಕೆಯನ್ನು ಸ್ಥಳಾಂತರಿಸಲಾಯಿತು.

ಇಲ್ಲಿ ಆಕೆಗೆ ಮಾಲಾ ಪಾಪಲ್ಕರ್ ಎಂದು ಹೆಸರಿಟ್ಟು ಸಾಕಲಾಯಿತು. ಇದೀಗ ಎರಡು ದಶಕಗಳ ಅನಂತರ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ (MPSC) ಪರೀಕ್ಷೆಯನ್ನು ಬರೆದು ಆಕೆ ಉತ್ತೀರ್ಣಳಾಗಿದ್ದಾಳೆ ಮತ್ತು ಮುಂಬಯಿನ ಮಹಾರಾಷ್ಟ್ರ ಸೆಕ್ರೆಟರಿಯೇಟ್ – ಗುಮಾಸ್ತ-ಕಮ್-ಟೈಪಿಸ್ಟ್ ಆಗಿ ಸಚಿವಾಲಯಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಮಾಲಾ ಅವರ ಮಾರ್ಗದರ್ಶಕ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ 81 ವರ್ಷದ ಶಂಕರಬಾಬಾ ಪಾಪಲ್ಕರ್ ಅವರು ಅವರಿಗೆ ತಮ್ಮ ಉಪನಾಮವನ್ನು ಮಾತ್ರ ನೀಡಲಿಲ್ಲ. ಅವಳಲ್ಲಿದ್ದ ಪ್ರತಿಭೆಯನ್ನು ಪೋಷಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಮಾಲಾ, ದೇವರು ಕೇವಲ ನನ್ನನ್ನು ರಕ್ಷಿಸಲಿಲ್ಲ. ನಾನು ಇಂದು ಇರುವ ಸ್ಥಳಕ್ಕೆ ಕರೆದೊಯ್ಯಲು ದೇವತೆಗಳನ್ನು ಕಳುಹಿಸಿದ್ದಾರೆ. ನಾನು ಇಲ್ಲಿ ನಿಲ್ಲುವುದಿಲ್ಲ. ನಾನು ಯುಪಿಎಸ್ ಸಿ ಪರೀಕ್ಷೆಗಳಿಗೆ ಕುಳಿತು ಐಎಎಸ್ ಅಧಿಕಾರಿಯಾಗುತ್ತೇನೆ ಎಂದರು.

ಶಂಕರಬಾಬಾ ಅವರ ಪ್ರಕಾರ, ಮಾಲಾ ತನ್ನ ಪ್ರಾಥಮಿಕ ಶಿಕ್ಷಣವನ್ನು ಅಂಧರ ಶಾಲೆಯಲ್ಲಿ ಮುಗಿಸಿದರು ಮತ್ತು ಹೈಯರ್ ಸೆಕೆಂಡರಿಯನ್ನು ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದರು. ಅವರು 2018ರಲ್ಲಿ ಅಮರಾವತಿ ವಿಶ್ವವಿದ್ಯಾನಿಲಯದಿಂದ ಪದವಿ ಮತ್ತು ಸರ್ಕಾರಿ ವಿದರ್ಭ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಹ್ಯುಮಾನಿಟೀಸ್ ನಿಂದ ಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು ಬ್ರೈಲ್ ಅನ್ನು ಬಳಸಿದರು ಮತ್ತು ಪ್ರತಿ ಪರೀಕ್ಷೆಯಲ್ಲಿ ಬರಹಗಾರರ ಸಹಾಯವನ್ನು ಪಡೆದರು. ಅನಂತರ ದರ್ಯಾಪುರದ ಪ್ರೊ. ಪ್ರಕಾಶ್ ತೋಪ್ಲೆ ಪಾಟೀಲ್ ಅವರು ಅವಳನ್ನು ದತ್ತು ಪಡೆದರು ಎಂದು ತಿಳಿಸಿದರು.

ಇದನ್ನೂ ಓದಿ: KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

ಎಂಪಿಎಸ್‌ಸಿ ಪರೀಕ್ಷೆಗಳಿಗೆ ಮಾಲಾಗೆ ತರಬೇತಿ ನೀಡುವ ಜವಾಬ್ದಾರಿಯನ್ನು ವಹಿಸಿಕೊಂಡ ವಿಶಿಷ್ಟ ಅಕಾಡೆಮಿಯ ನಿರ್ದೇಶಕ ಪ್ರೊ. ಅಮೋಲ್ ಪಾಟೀಲ್‌ನಲ್ಲಿ ಮಾಲಾ ಮತ್ತೊಬ್ಬ ಉತ್ತಮ ಸಮರಿಟನ್‌ನನ್ನು ಕಂಡುಕೊಂಡರು. ಮಾಲಾ ಅವರು ಆಗಸ್ಟ್ 2022 ಮತ್ತು ಡಿಸೆಂಬರ್ 2023 ರಲ್ಲಿ ತಹಸೀಲ್ದಾರ್ ಹುದ್ದೆಗೆ ಪರೀಕ್ಷೆಯನ್ನು ಬರೆದಿದ್ದು ಎರಡು ಬಾರಿ ವಿಫಲರಾಗಿದ್ದಾರೆ. ಇದೀಗ MPSC ಕ್ಲರ್ಕ್ (ಟೈಪ್ ರೈಟಿಂಗ್) ಪರೀಕ್ಷೆಯನ್ನು ತೆಗೆದುಕೊಂಡರು. ಈ ಪರೀಕ್ಷೆಯಲ್ಲಿ ಆಕೆ ಪಡೆದಿರುವ ಯಶಸ್ಸು ಆಕೆಯ ಮನೆಯಾದ ಪರತ್ವಾಡದಲ್ಲಿರುವ ನಿರ್ಗತಿಕರ ಕೇಂದ್ರಕ್ಕೆ ಸಂತೋಷ ತಂದಿದೆ ಎಂದರು.

Continue Reading

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

SSLC Exam- 2: ಜೂ.14ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

SSLC Exam- 2: ಈ ನಡುವೆ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ. ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಿದೆ.

VISTARANEWS.COM


on

SSLC exam
Koo

ಬೆಂಗಳೂರು: ಫಲಿತಾಂಶ (SSLC Result) ಸುಧಾರಣೆ ಹಾಗೂ ಮಕ್ಕಳ ಅನುಕೂಲಕ್ಕಾಗಿ ತೆಗೆದುಕೊಂಡ ಹೊಸ ಉಪಕ್ರಮವಾದ ಎಸ್‌ಎಸ್ಎಲ್‌ಸಿ ಪರೀಕ್ಷೆ- 2 (SSLC Exam- 2) ಪರೀಕ್ಷೆ ಜೂನ್ 14ರಿಂದ ಆರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿಯನ್ನು (time table) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸದ್ಯದಲ್ಲೇ ಬಿಡುಗಡೆ ಮಾಡಲಿದೆ. ಈ ಕುರಿತು ಮಂಡಳಿ ಮಹತ್ವದ ಮಾಹಿತಿಯನ್ನು ನೀಡಿದೆ.

ಈ ನಡುವೆ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ. ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಇದೀಗ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ.

ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಕೃಪಾಂಕಗಳನ್ನು ನೀಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಬಹುದು ಎಂದು ಇಲಾಖೆ ಭಾವಿಸಿದರೆ, ಅದು ಸಾಧ್ಯವಾಗದ ಮಾತು. ಕೃಪಾಂಕ ಪಡೆದು ಪಿಯುಸಿಗೋ ಇತರ ಕೋರ್ಸ್‌ಗಳಿಗೋ ಹೋದ ವಿದ್ಯಾರ್ಥಿ ಅಲ್ಲಿ ಕಂಗಾಲಾಗುತ್ತಾನೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೇ ತೊಂದರೆ. ಇಲ್ಲಿ ಕೃಪಾಂಕ ಪಡೆದವರು ಅಲ್ಲೂ ಅದನ್ನೇ ನಿರೀಕ್ಷಿಸಿದರೆ ಆಶ್ಚರ್ಯವಿಲ್ಲ. ಆದರೆ ಅಲ್ಲಿ ಹಾಗೆ ನಡೆಯುವುದಿಲ್ಲ. ಜೀವನದಲ್ಲಿಯೂ ಯಾರೂ ಗ್ರೇಸ್‌ ಮಾರ್ಕ್ಸ್‌ ಕೊಡುವುದಿಲ್ಲ. ಪ್ರತಿಭೆಯಿಂದಲೇ ಮೇಲೆ ಬರಬೇಕಾಗುತ್ತದೆ.

VISTARANEWS.COM


on

Siddaramaiah
Koo

ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವರು ಹೇಳುವ ಪ್ರಕಾರ, ಎಸ್‌ಎಸ್‌ಎಲ್‌ಸಿಯಲ್ಲಿ ಈ ಹಿಂದೆಯೂ ಶೇಕಡಾ 5ರಷ್ಟು ಕೃಪಾಂಕಗಳು ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಡಲಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಕೃಪಾಂಕಗಳನ್ನು ಯಾಕೆ ಕೊಡಬೇಕಾಯಿತು ಎಂದು ನೋಡೋಣ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇತ್ತು. ಈ ಬಾರಿ ಗಾಬರಿಗೊಳಿಸುವ ಪ್ರಮಾಣದಲ್ಲಿ, ಅಂದರೆ ಶೇ.30ರಷ್ಟು ಫಲಿತಾಂಶ ಕುಸಿದಿದೆ. ಅಂದರೆ ನಿಜವಾಗಿ ಬಂದಿರುವುದು ಶೇ. 53 ಫಲಿತಾಂಶ ಮಾತ್ರ. ಇದರಿಂದ ಗಾಬರಿಯಾದ ಶಿಕ್ಷಣ ಇಲಾಖೆ, ಮುಖಂಭಂಗ ತಪ್ಪಿಸಿಕೊಳ್ಳುವುದಕ್ಕಾಗಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟಿದೆ. ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಇಲ್ಲವಾದರೆ ಇಷ್ಟು ಮಕ್ಕಳು ನಪಾಸಾಗುತ್ತಿದ್ದರು. ಇಷ್ಟು ಕೃಪಾಂಕ ನೀಡಿದರೂ ದೊರೆತ ಫಲಿತಾಂಶ ಮಾತ್ರ 73.40% ಅಷ್ಟೇ. ಅಂದರೆ ಕಳೆದ ಸಲಕ್ಕಿಂತ ಶೇಕಡಾ 10.49ರಷ್ಟು ಕಡಿಮೆ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದರೂ ಕಡಿಮೆ ಫಲಿತಾಂಶ ದಾಖಲಾಗಿದೆ.

ಇದೇಕೆ ಹೀಗಾಯಿತು? ಇದು ವೆಬ್‌ ಕಾಸ್ಟಿಂಗ್‌ನಿಂದ ಎಂದು ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಹೀಗಾಗಿ ಮೇಲ್ವಿಚಾರಣೆ ಬಿಗಿಯಾಗಿದೆ. ಅಂದರೆ ನಕಲು ಮಾಡಲು ಸಾಧ್ಯವಾಗಲಿಲ್ಲ ಎಂದು ನೇರವಾಗಿ ಹೇಳಬಹುದು. ಅಂದರೆ ಪರೋಕ್ಷವಾಗಿ, ನಕಲು ಮಾಡುವುದಕ್ಕೆ ಅವಕಾಶ ಇದ್ದುದರಿಂದಲೇ ಮೊದಲು ಇಷ್ಟೊಂದು ಫಲಿತಾಂಶ ಬರುತ್ತಿತ್ತು ಎಂದು ಒಪ್ಪಿಕೊಂಡಂತಾಯಿತಲ್ಲವೆ? ಈ ಸಲದ ಫಲಿತಾಂಶ ಕಡಿಮೆ ಎನ್ನುವುದಕ್ಕಿಂತಲೂ, ನಕಲು ಮಾಡಿಯೇ ನಾವು ಹೆಚ್ಚಿನ ಫಲಿತಾಂಶ ಪಡೆಯುತ್ತಿದ್ದೆವು ಎನ್ನುವ ಕಟುವಾಸ್ತವ ನಮ್ಮನ್ನು ಹೆಚ್ಚು ಕುಟುಕಬೇಕು.

ಸರಿ, ಈಗ ಪರೀಕ್ಷಾ ಪದ್ಧತಿ ಬಿಗಿಯಾದಂತಾಯಿತು. ಆದರೆ ಕೃಪಾಂಕಗಳನ್ನು ನೀಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಬಹುದು ಎಂದು ಇಲಾಖೆ ಭಾವಿಸಿದರೆ, ಅದು ಸಾಧ್ಯವಾಗದ ಮಾತು. ಕೃಪಾಂಕ ಪಡೆದು ಪಿಯುಸಿಗೋ ಇತರ ಕೋರ್ಸ್‌ಗಳಿಗೋ ಹೋದ ವಿದ್ಯಾರ್ಥಿ ಅಲ್ಲಿ ಕಂಗಾಲಾಗುತ್ತಾನೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೇ ತೊಂದರೆ. ಇಲ್ಲಿ ಕೃಪಾಂಕ ಪಡೆದವರು ಅಲ್ಲೂ ಅದನ್ನೇ ನಿರೀಕ್ಷಿಸಿದರೆ ಆಶ್ಚರ್ಯವಿಲ್ಲ. ಆದರೆ ಅಲ್ಲಿ ಹಾಗೆ ನಡೆಯುವುದಿಲ್ಲ. ಜೀವನದಲ್ಲಿಯೂ ಯಾರೂ ಗ್ರೇಸ್‌ ಮಾರ್ಕ್ಸ್‌ ಕೊಡುವುದಿಲ್ಲ. ಪ್ರತಿಭೆಯಿಂದಲೇ ಮೇಲೆ ಬರಬೇಕಾಗುತ್ತದೆ. ಕೃಪಾಂಕಗಳ ಬದಲು ಸರ್ಕಾರ ಗುಣಮಟ್ಟದ ಬೋಧನೆ, ಅರ್ಹ ಶಿಕ್ಷಕರ ನೇಮಕ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಇಂಗ್ಲಿಷ್‌ ಕಲಿಕೆ, ಸ್ಪರ್ಧಾತ್ಮಕ ಶಿಕ್ಷಣದ ಪರಿಚಯ, ಗಟ್ಟಿಮುಟ್ಟಾದ ಶಾಲೆ ಕಟ್ಟಡ ತರಗತಿಗಳು, ಪ್ರಯೋಗಾಲಯ ಹಾಗೂ ಲ್ಯಾಬ್‌ಗಳು, ಅನ್ಯ ಕೆಲಸಗಳಿಂದ ಶಿಕ್ಷಕರಿಗೆ ಮುಕ್ತಿ- ಇವುಗಳನ್ನೆಲ್ಲ ಕಲ್ಪಿಸಬೇಕು. ಆಗ ಉತ್ತಮ ಫಲಿತಾಂಶ ಕೊಡಿ ಎಂದು ಕಟ್ಟುನಿಟ್ಟು ಮಾಡುವುದರಲ್ಲಿ ಅರ್ಥವಿದೆ. ಶಿಕ್ಷಕರಿಂದ ಎಲ್ಲ ಸಾಧ್ಯತೆಗಳನ್ನೂ ಕಿತ್ತುಕೊಂಡು ಒಳ್ಳೆಯ ಫಲಿತಾಂಶ ನೀಡಿ ಎಂದರೆ ಹೇಗೆ ಸಾಧ್ಯ?

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Continue Reading
Advertisement
Pralhad Joshi
ಕರ್ನಾಟಕ3 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ4 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ4 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ5 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ5 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ6 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ12 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌