KCET Key Answer 2023 Provisional KCET Answer Key 2023 released on kea website details in kannada KCET Key Answer 2023 : ಸಿಇಟಿ ತಾತ್ಕಾಲಿಕ ಕೀ ಉತ್ತರ ಪ್ರಕಟ; ನಿಮಗೆಷ್ಟು ಅಂಕ ಬರಬಹುದು ನೋಡಿ! - Vistara News

ಪ್ರಮುಖ ಸುದ್ದಿ

KCET Key Answer 2023 : ಸಿಇಟಿ ತಾತ್ಕಾಲಿಕ ಕೀ ಉತ್ತರ ಪ್ರಕಟ; ನಿಮಗೆಷ್ಟು ಅಂಕ ಬರಬಹುದು ನೋಡಿ!

ಕರ್ನಾಟಕ ಪರೀಕ್ಷ ಪ್ರಾಧಿಕಾರವು (ಕೆಇಎ) ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯ (KCET 2023) ತಾತ್ಕಾಲಿಕ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ನೀಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದನ್ನು ಪರಿಶೀಲಿಸಬಹುದಾಗಿದೆ.

VISTARANEWS.COM


on

kcet 2023 answer key kcet 2023 answer key official Provisional KCET Answer Key 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸಿದ ʻಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆʼಯ (KCET 2023) ತಾತ್ಕಾಲಿಕ ಕೀ ಉತ್ತರಗಳನ್ನು (KCET Key Answer 2023) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಮೇ.20 ರಂದು ಈ ಪರೀಕ್ಷೆಯನ್ನು ನಡೆಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.

ಗಣಿತದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಭೌತಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ರಸಾಯನಶಾಸ್ತ್ರದ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಜೀವಶಾಸ್ತ್ರ ಸರಿ ಉತ್ತರಗಳಿಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ತಾತ್ಕಾಲಿಕ ಉತ್ತರಗಳನ್ನು ಪರಿಶೀಲಿಸಿ, ತಮಗೆ ಎಷ್ಟು ಅಂಕ ಬರಬಹುದು ಎಂಬುದನ್ನು ಲೆಕ್ಕ ಹಾಕಬಹುದಾಗಿದೆ. ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಸಹ ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮೇ 26 ರಿಂದ ಮೇ 30 ಬೆಳಗ್ಗೆ 11 ಗಂಟೆಯ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಸುವ ಲಿಂಕ್‌ಗೆ ಇಲ್ಲಿ ಕ್ಲಿಕ್‌ ( Click Here )ಮಾಡಿ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್‌ ಕೋಡ್‌, ಪಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಸಂಖ್ಯೆಗಳ ವಿವರಗಳೊಂದಿಗೆ ಹಾಗೂ ಇದನ್ನು ಸಾಬೀತು ಪಡಿಸಲು ಅಗತ್ಯವಾಗಿರುವ ಮಾಹಿತಿಯನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬಹುದಾಗಿದೆ. ಪ್ರಶ್ನೆಸಂಖ್ಯೆ ಅಥವಾ ವರ್ಷನ್‌ ಕೋಡ್‌ ನಮೂದಿಸದೇ ಅಥವಾ ಆಧಾರ ರಹಿತ ಸಲ್ಲಿಸುವ ಅಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎಯು ಸ್ಪಷ್ಟಪಡಿಸಿದೆ.

ಈ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ, ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ. ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ ಎಂದು ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಈ ಬಾರಿ 2 ಲಕ್ಷದ 61 ಸಾವಿರದ 610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದರು. ಮೇ 20- ಜೀವಶಾಸ್ತ್ರ ಮತ್ತು ಗಣಿತ, ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ, ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದು ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿತ್ತು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://cetonline.karnataka.gov.in/kea/

ಇದನ್ನೂ ಓದಿ : JEE Main 2023 : ಪತ್ರಿಕೆ-2 ರ ಫಲಿತಾಂಶ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

VVPAT Verification: ವಿದ್ಯುನ್ಮಾನ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳನ್ನು ತಾಳೆ ಮಾಡಬೇಕು ಎಂಬುದಾಗಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಚುನಾವಣೆ ಆಯೋಗದಲ್ಲಿ ಬದಲಾವಣೆಗಳನ್ನು ತರುವ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿತು. ಹಾಗೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿತು.

VISTARANEWS.COM


on

VVPAT Verification
Koo

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳನ್ನು ತಾಳೆ ಮಾಡುವ ದಿಸೆಯಲ್ಲಿ ಇವಿಎಂ ಬಳಿ ಇರಿಸುವ ವಿವಿಪ್ಯಾಟ್‌ಗಳ ತಾಳೆಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ನಾವು ಚುನಾವಣೆ ಆಯೋಗವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಹಾಕಿ ನೋಡಬೇಕು ಹಾಗೂ ವಿವಿಪ್ಯಾಟ್‌ ಸ್ಲಿಪ್‌ಗಳನ್ನು (VVPAT Verification) ಬ್ಯಾಲೆಟ್‌ ಬಾಕ್ಸ್‌ನಲ್ಲಿ ಠೇವಣಿ ಮಾಡಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಗಳ ಸಂಬಂಧಿಸಿದಂತೆ ಚುನಾವಣೆ ಆಯೋಗದ (Election Commission) ಸ್ಪಷ್ಟನೆ ಪಡೆದ ಸರ್ವೋಚ್ಚ ನ್ಯಾಯಾಲಯವು (Supreme Court), ಶೇ.100ರಷ್ಟು ತಾಳೆಗೆ ನಿರ್ದೇಶನ ನೀಡಬೇಕು ಎಂಬ ಬಗೆಗಿನ ತೀರ್ಪನ್ನು ಕಾಯ್ದರಿಸಿತು.

“ನಾವು ಚುನಾವಣೆ ಆಯೋಗವನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಚುನಾವಣೆ ಆಯೋಗವು ದೇಶದ ಸಂವಿಧಾನದ ಅನ್ವಯ ರಚಿಸಲಾದ ಸಂಸ್ಥೆಯಾಗಿದೆ. ಹಾಗಾಗಿ, ಅದರ ಕಾರ್ಯಚಟುವಟಿಕೆಗಳನ್ನು ನಾವು ನಿಯಂತ್ರಿಸಲು ಆಗುವುದಿಲ್ಲ. ಅನುಮಾನದ ಆಧಾರದ ಮೇಲೆ ನಾವು ಆದೇಶ ಹೊರಡಿಸಲು ಬರುವುದಿಲ್ಲ. ನೀವು (ಅರ್ಜಿದಾರರು) ಅನುಮಾನ ವ್ಯಕ್ತಪಡಿಸಿದಿರಿ ಎಂಬ ಮಾತ್ರಕ್ಕೆ ನಾವು ಯಾವುದೇ ಆದೇಶ ಹೊರಡಿಸಲು ಆಗುವುದಿಲ್ಲ. ಹಾಗೆಯೇ, ನಾವು ನಿಮ್ಮ ಯೋಚನಾ ಲಹರಿಯನ್ನೂ ಬದಲಿಸಲ್ಲ” ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠ ತಿಳಿಸಿತು.

ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, “ಚುನಾವಣಾ ಪ್ರಕ್ರಿಯೆಯಲ್ಲಿ ಸುಧಾರಣೆಗಳು ಆಗಬೇಕು. ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ಶೇ.100ಕ್ಕೆ 100ರಷ್ಟು ತಾಳೆ ಮಾಡಬೇಕು” ಎಂಬುದಾಗಿ ತಿಳಿಸಿದರು. ಆಗ ನ್ಯಾಯಾಲಯವು, “ಚುನಾವಣೆ ಆಯೋಗದ ಪ್ರಕ್ರಿಯೆಗಳನ್ನು ಬದಲಿಸಲು, ಅದರ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ” ಎಂದು ತಿಳಿಸಿತು.

ಪಾರದರ್ಶಕವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗವು ಮತಯಂತ್ರಗಳ ಜತೆಗೆ ವಿವಿಪ್ಯಾಟ್‌ಗಳನ್ನೂ (ವೋಟರ್‌ ವೇರಿಫೈಡ್‌ ಪೇಪರ್‌ ಆಡಿಟ್‌ ಟ್ರಯಲ್)‌ ಇರಿಸುತ್ತದೆ. ಮತಎಣಿಕೆ ಮಾಡುವಾಗ ಇವಿಎಂನಲ್ಲಿ ದಾಖಲಾದ ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ತಾಳೆ ಮಾಡುತ್ತದೆ. ಈಗ ಪ್ರತಿ ಕ್ಷೇತ್ರದಲ್ಲೂ ಐದು ಇವಿಎಂಗಳನ್ನು ಆಯ್ಕೆ ಮಾಡಿಕೊಂಡು, ನಂತರ ಇವಿಎಂಗಳ ಜತೆ ತಾಳೆ ಮಾಡುವ ವಿಧಾನ ಇದೆ. ಆದರೆ, ಎಲ್ಲ ಇವಿಎಂಗಳ ಜತೆ ತಾಳೆ ಹಾಕಬೇಕು ಎಂಬುದು ಅರ್ಜಿದಾರರ ವಾದವಾಗಿದೆ.

ಇದನ್ನು ಓದಿ: ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Continue Reading

ದೇಶ

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Sunita Williams: ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Sunita Williams
Koo

ನ್ಯೂಯಾರ್ಕ್‌: ಭಾರತೀಯ ಮೂಲದ ವಿಖ್ಯಾತ ಗಗನಯಾತ್ರಿ (Astronaut) ಸುನೀತಾ ಎಲ್. ವಿಲಿಯಮ್ಸ್ (Sunita Williams), ತಮ್ಮ ಮೂರನೇ ಬಾಹ್ಯಾಕಾಶ ಯಾತ್ರೆಯನ್ನು (Space mission) ನಡೆಸಲು ಸಜ್ಜಾಗಿದ್ದಾರೆ. ಅಮೆರಿಕದ ನಾಸಾ (NASA) ಸಂಸ್ಥೆಯ ಗಗನಯಾತ್ರಿಯಾದ ಸುನೀತಾ, ಪ್ರಸ್ತುತ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ. ಇದು ಆ ವಾಹನದ ಮೊದಲ ಸಿಬ್ಬಂದಿ ವಿಮಾನ. ಮತ್ತು ಸುನೀತಾಗೆ ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಮೂರನೇ ಕಾರ್ಯಾಚರಣೆಯಾಗಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏಜೆನ್ಸಿಯ ಬೋಯಿಂಗ್ ಕ್ರೂ ಫ್ಲೈಟ್ ಪರೀಕ್ಷೆಯ ತಯಾರಿಗಾಗಿ NASA ಎರಡು ಉಡಾವಣೆಗಳನ್ನು ಆಯೋಜಿಸಿದೆ. ಏಪ್ರಿಲ್ 25ರಂದು EDTನಲ್ಲಿ ಹಾಗೂ ಮೇ 6ರಂದು ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ಪಡೆ ನಿಲ್ದಾಣದಲ್ಲಿ ಬಾಹ್ಯಾಕಾಶ ಉಡಾವಣಾ ಸಂಕೀರ್ಣ-41ರಿಂದ.”

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬಾಹ್ಯಾಕಾಶ ಸಂಸ್ಥೆಯ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ಭಾಗವಾಗಿ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಸಿಬ್ಬಂದಿ ವಿಮಾನದ ಉಡಾವಣೆ, ಡಾಕಿಂಗ್ ಮತ್ತು ಭೂಮಿಗೆ ಹಿಂತಿರುಗುವುದು ಸೇರಿದಂತೆ ಸ್ಟಾರ್‌ಲೈನರ್ ಸಿಸ್ಟಮ್‌ನ ಸಾಮರ್ಥ್ಯಗಳನ್ನು ಪರೀಕ್ಷಿಸಲಾಗಿದೆ.

ಸುನಿತಾ ವಿಲಿಯಮ್ಸ್ ಅವರ ಪರಿಣತಿ

ಸುನಿತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ಹಾರಾಟದ ಮೊದಲ ಅನುಭವವು ಡಿಸೆಂಬರ್ 9, 2006ರಿಂದ ಜೂನ್ 22, 2007ರವರೆಗೆ ನಡೆಯಿತು. ʼಎಕ್ಸ್‌ಪೆಡಿಶನ್ 14/15ʼನೊಂದಿಗೆ ಪ್ರಾರಂಭವಾಯಿತು. ಅವರು STS-116ನ ಸಿಬ್ಬಂದಿಯೊಂದಿಗೆ ಸಾಗಿ ಫ್ಲೈಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದರು. ಅವರು ಒಟ್ಟು 29 ಗಂಟೆ 17 ನಿಮಿಷಗಳ ನಾಲ್ಕು ಬಾಹ್ಯಾಕಾಶ ನಡಿಗೆಯೊಂದಿಗೆ ಮಹಿಳೆಯರ ದಾಖಲೆಯನ್ನು ಸ್ಥಾಪಿಸಿದರು. ಜೂನ್ 2007ರಲ್ಲಿ ಯಾನ ಮುಗಿಸಿ STS-117 ಸಿಬ್ಬಂದಿಯೊಂದಿಗೆ ಭೂಮಿಗೆ ಮರಳಿದರು.

ಜುಲೈ 14ರಿಂದ ನವೆಂಬರ್ 18, 2012ರವರೆಗೆ ಅವರ ಎರಡನೇ ಬಾಹ್ಯಾಕಾಶ ಯಾನ, ಎಕ್ಸ್‌ಪೆಡಿಶನ್ 32/33. ಅವರು ರಷ್ಯಾದ ಸೋಯುಜ್ ಕಮಾಂಡರ್ ಯೂರಿ ಮಾಲೆನ್‌ಚೆಂಕೊ ಮತ್ತು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿಯ ಫ್ಲೈಟ್ ಇಂಜಿನಿಯರ್ ಅಕಿಹಿಕೊ ಹೊಶೈಡ್ ಅವರೊಂದಿಗೆ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಜುಲೈ 2012ರಂದು ಹೋದರು. ಕಕ್ಷೆಯ ಪ್ರಯೋಗಾಲಯದಲ್ಲಿ ಸಂಶೋಧನೆ ಮತ್ತು ಪರಿಶೋಧನೆ ನಡೆಸುತ್ತ ನಾಲ್ಕು ತಿಂಗಳು ಕಳೆದಳು.

ಈ ಕಾರ್ಯಾಚರಣೆಗಳ ಸಮಯದಲ್ಲಿ ಅವರು ಹಲವು ಸಂಶೋಧನೆ ನಡೆಸಿದರು. ಬಾಹ್ಯಾಕಾಶ ನಡಿಗೆಗಳನ್ನು ನಡೆಸಿದರು ಮತ್ತು ಬಾಹ್ಯಾಕಾಶದ ಪರಿಶೋಧನೆಗೆ ಗಮನಾರ್ಹವಾಗಿ ಕೊಡುಗೆ ನೀಡಿದರು. ಸುನೀತಾ ವಿಲಿಯಮ್ಸ್ 50 ಗಂಟೆಗಳು ಮತ್ತು 40 ನಿಮಿಷಗಳ ಸಮಯದೊಂದಿಗೆ ದಾಖಲೆ ಸಮಯದ ಬಾಹ್ಯಾಕಾಶ ನಡಿಗೆ ದಾಖಲೆ ಮಾಡಿದ್ದಾರೆ.

ಪ್ರಶಸ್ತಿಗಳು ಮತ್ತು ಗೌರವಗಳು

ಅವರಿಗೆ ಅನೇಕ ಪ್ರಶಸ್ತಿಗಳು ಮತ್ತು ಗೌರವ ಸಂದಿವೆ. ಅವರು US ನೌಕಾಪಡೆಯ ನಿವೃತ್ತ ಕ್ಯಾಪ್ಟನ್. ಅವರಿಗೆ ಎರಡು ಬಾರಿ ರಕ್ಷಣಾ ಉನ್ನತ ಸೇವಾ ಪದಕ, ಲೀಜನ್ ಆಫ್ ಮೆರಿಟ್, ನೌಕಾಪಡೆಯ ಪ್ರಶಂಸಾ ಪದಕ ಎರಡು ಬಾರಿ, ನೌಕಾಪಡೆ ಮತ್ತು ಮೆರೈನ್ ಕಾರ್ಪ್ಸ್ ಸಾಧನೆ ಪದಕ ಮತ್ತು ಮಾನವೀಯ ಸೇವಾ ಪದಕ ನೀಡಲಾಗಿದೆ. ಪ್ರಸ್ತುತ ವಿಲಿಯಮ್ಸ್ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

Continue Reading

ಪರಿಸರ

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಕಳೆದೆರಡು ವಾರದಲ್ಲಿ ಅಡಿಕೆಯ (Areca Price) ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ.

VISTARANEWS.COM


on

Areca Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಒಂದು ನಿರ್ದಿಷ್ಟ ಪಕ್ಷ (Areca Price) ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ, ಷೇರು ಮಾರುಕಟ್ಟೆ ಏರುತ್ತದೆ. ಇನ್ನೊಂದು ನಿರ್ದಿಷ್ಟ ಪಕ್ಷ ಎಲೆಕ್ಷನ್‌ನಲ್ಲಿ ಗೆಲ್ಲುತ್ತದೆ ಅಂತ ಸರ್ವೆ ಏಜೆನ್ಸಿಗಳು ಹೇಳುವಾಗ ಷೇರು ಮಾರುಕಟ್ಟೆ ಕುಸಿಯುತ್ತದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಷೇರು ಮಾರುಕಟ್ಟೆಯ ಏರಿಳತವೂ ತಲ್ಲಣವನ್ನೇ ಸೃಷ್ಟಿ ಮಾಡುತ್ತದೆ. ಆದರೆ, ಈ ಬಾರಿ ಮುಂಬಯಿ ಸ್ಟಾಕ್ ಎಕ್ಸ್ಚೇಂಜ್ ಏರಿಳಿತವನ್ನು ಮೀರಿಸುವಂತೆ ಅಡಿಕೆ ದರ ಗೂಳಿಯ ಕುಣಿತವಾಗಿದೆ! ಕಳೆದೆರಡು ವಾರದಲ್ಲಿ ಅಡಿಕೆಯ ಎಲ್ಲಾ ವೆರೈಟಿಗಳು ಧಾರಣೆ ಮೇಲ್ಮುಖವಾಗಿ ಏರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಒಂದೇ ರೀತಿ 47,000-48,000 ನಡೆಯುತ್ತಿದ್ದ ರಾಶಿ ಅಡಿಕೆ ಧಾರಣೆ, ಕಳೆದ ವಾರ 50,000 ರೂ. ದಾಟಿ, ಈಗ 53,856ಕ್ಕೆ ತಲುಪಿದೆ. ಇನ್ನೂ ಏರುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗುತ್ತಿದೆ. ಅದೇ ರೀತಿ, ಮೂರು ತಿಂಗಳ ಹಿಂದೆ 53,000 ಇದ್ದ ಬೆಟ್ಟ ಅಡಿಕೆ ಧಾರಣೆ ಕಳೆದ ವಾರ 55,000 ರೂ. ದಾಟಿ, ಇವತ್ತು 56,333 ರೂ.ಗೆ ತಲುಪಿದೆ. ಇದೇ ಸಮಯದಲ್ಲಿ ಅಡಿಕೆ ಮಾರುಕಟ್ಟೆಗೆ ಬರುತ್ತಿರುವ ಆವಕವೂ ಏರುತ್ತಿದ್ದು, ಅಡಿಕೆ ಆವಕ ಏರಿದರೂ ಅಡಿಕೆ ಧಾರಣೆ ಏರುತ್ತಿರುವುದು ವಿಶೇಷವಾಗಿದೆ.

Areca nuts image

ಶಿವಮೊಗ್ಗ APMC ದಾಖಲೆಗಳ ಪ್ರಕಾರ ಹೆಚ್ಚು ವ್ಯಾಪಾರವಾಗುವ ರಾಶಿ ಇಡಿ ಅಡಿಕೆ ಆವಕ ಬಾರೀ ಏರಿಕೆ ಕಂಡಿದೆ:
ದಿನಾಂಕ 17.04.2024: 3,907 ಕ್ವಿಂಟಾಲ್
ದಿನಾಂಕ 19.04.2024: 4,378 ಕ್ವಿಂಟಾಲ್
ದಿನಾಂಕ 22.04.2024: 4543 ಕ್ವಿಂಟಾಲ್
ದಿನಾಂಕ 23.04.2024: 17,474 ಕ್ವಿಂಟಾಲ್
ರಾಶಿ ಇಡಿ ಧಾರಣೆ 53,800 ರೂ., ಬೆಟ್ಟೆ 56,300 ರೂ. ದಾಟಿದಾಗ ಸಹಜವಾಗಿಯೇ ಗೊರಬಲು 41 ಸಾವಿರದ ಸನಿಹ ತಲುಪಿದೆ. ಈ ಎಲ್ಲ ವೆರೈಟಿಗಳ ಧಾರಣೆಯ ಏರಿಕೆಯ ಹಿನ್ನೆಲೆಯಲ್ಲಿ ಸಿಪ್ಪೆ ಗೋಟು ದರವೂ ಏರುವ ನಿರೀಕ್ಷೆಯಿದ್ದು, ಸದ್ಯದಲ್ಲೇ ಓಪನ್ ನಗದು ಮಾರುಕಟ್ಟೆಯಲ್ಲಿ 20,000 ರೂ. ದಾಟುವ ನಿರೀಕ್ಷೆ ರೈತರದು. APMC ಮಂಡಿ ಮತ್ತು ಸೊಸೈಟಿಗಳಲ್ಲಿ ಸಿಪ್ಪೆ ಗೋಟು ವ್ಯವಹಾರವೂ ಬಹಳ ಕಮ್ಮಿ. APMC ಒಳಗೆ ವ್ಯಾಪ್ತಿಗೆ ಬರದೆಯೇ ಸಿಪ್ಪೆ ಗೋಟು ವ್ಯವಹಾರ ನೆಡೆಯುತ್ತದೆ. ಅದನ್ನು APMC ವ್ಯಾಪ್ತಿಯ ಒಳಗೆ ಸಂಪೂರ್ಣ ತರಲು ಪ್ರಯತ್ನ ನೆಡೆಯುತ್ತಿಲ್ಲ.

Areca nut

ಚುನಾವಣೆ ಬಳಿಕ ಏನಾಗಲಿದೆ?

ಎಲ್ಲಾ ವೆರೈಟಿ ಅಡಿಕೆಗಳ (ಹಸ, ಬೆಟ್ಟೆ, ಇಡಿ, ಗೊರಬಲು, ಸಿಪ್ಪೆ ಗೋಟು) ದೊಡ್ಡ ಮಟ್ಟದ ಓಪನ್ ನಗದು ವ್ಯವಹಾರಕ್ಕೆ ಒಂದಿಷ್ಟು ಚುನಾವಣೆ ನೀತಿ ಸಂಹಿತೆ ನಿರ್ಬಂಧ ಇರುವುದರಿಂದ, ಎಲೆಕ್ಷನ್ ಮುಗಿದ ಮೇಲೆ ಅಡಿಕೆ ನಗದು ವ್ಯವಹಾರ ಇನ್ನಷ್ಟು ತೀವ್ರತೆ ಪಡೆದ ಮೇಲೆ ಧಾರಣೆ ಏರಿಕೆಯ ಸಾಧ್ಯತೆಯೂ ಇದೆ ಎಂದು ಅಭಿಪ್ರಾಯ ಇದೆ.
ಏನೇ ಆದರೂ, ಅಡಿಕೆ ಮಾರುಕಟ್ಟೆಯ ಧಾರಣೆ ಸಂಪೂರ್ಣ ಲೆಕ್ಕಾಚಾರಕ್ಕೆ ಸಿಗುವಂಥದ್ದಲ್ಲ! ಅದೂ ಷೇರು ಮಾರುಕಟ್ಟೆಯ ರೀತಿ, ಯಾವಾಗ ಗೂಳಿ ಮುನ್ನುಗ್ಗುತ್ತದೆ, ಕರಡಿ ಕುಣಿಯುತ್ತದೆ ಗೊತ್ತಾಗುವುದಿಲ್ಲ.
ಅಡಿಕೆ ಧಾರಣೆಯ ಗೂಳಿ ನುಗ್ಗುವ ಸಮಯದಲ್ಲೇ ಕಾಳು ಮೆಣಸಿನ ಧಾರಣೆಯೂ ಏರು ಮುಖ ಕಾಣುತ್ತಿದೆ. ಕಾಳು ಮೆಣಸಿನ ದರ ಈಗ 57,000 ರೂ. ತಲುಪಿದೆ. ಒಟ್ಟಿನಲ್ಲಿ ಅಡಿಕೆ, ಕಾಳು ಮೆಣಸು ಧಾರಣೆ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ನಾಲ್ಕು ಜನ ಸೇರಿದಲ್ಲಿ, ರಾಜಕೀಯ ವಿಚಾರದೊಂದಿಗೆ ಅಡಿಕೆ ಧಾರಣೆಯ ಚರ್ಚೆಯೂ ಜೋರಾಗಿ ಸೌಂಡ್ ಮಾಡ್ತಾ ಇದೆ!

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳಿಗೆ, ಇಳುವರಿ ಕ್ಷೀಣಿಸುವುದಕ್ಕೆ ಕಾರಣವೇ ಇದು! ಬೆಳೆಗಾರರೇ ಗಮನಿಸಿ…

Continue Reading

ಪ್ರಮುಖ ಸುದ್ದಿ

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

“ನರೇಂದ್ರ ಮೋದಿ (PM Narendra Modi) 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಜೇಮಿ ಡೀಮನ್ ಹೇಳಿದ್ದಾರೆ.

VISTARANEWS.COM


on

pm narendra modi jp morgan jamie dimon
Koo

ಹೊಸದಿಲ್ಲಿ: ಅಮೆರಿಕಕ್ಕೆ (US) ನರೇಂದ್ರ ಮೋದಿ (PM Narendra Modi) ಅವರಂಥ ದೃಢ ನಾಯಕತ್ವದ (Leadership) ಅಗತ್ಯವಿದೆ. ಅವರು ಭಾರತದಲ್ಲಿ (India) ನಾವು ಊಹಿಸಲಸಾಧ್ಯವಾದಷ್ಟು ಕೆಲಸಗಳನ್ನು ಮಾಡಿದ್ದಾರೆ” ಎಂದು ಖ್ಯಾತ ಬಹುರಾಷ್ಟ್ರೀಯ ಸಂಸ್ಥೆ ಜೆಪಿ ಮೋರ್ಗನ್‌ನ ಸಿಇಒ ಜೇಮಿ ಡೀಮನ್‌ (JPMorgan CEO Jamie Dimon) ಹೇಳಿದ್ದಾರೆ.

ಐಜೆಪಿ ಮೋರ್ಗಾನ್ ಚೇಸ್ ಸಿಇಒ ಜೇಮಿ ಡಿಮೊನ್ ಅವರು ಮಂಗಳವಾರ ನ್ಯೂಯಾರ್ಕ್‌ನ ಎಕನಾಮಿಕ್ ಕ್ಲಬ್‌ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ಮೋದಿ 40.0 ಕೋಟಿ ಜನರನ್ನು ಬಡತನದಿಂದ ಹೊರತಂದಿದ್ದಾರೆ. ಅಲ್ಲಿ ಶೌಚಾಲಯಗಳಿಲ್ಲದ 40 ಕೋಟಿ ಜನರು ಇದ್ದಾರೆ. ನಾವಿಲ್ಲಿ ಕೆಲಸಗಳನ್ನು ಹೇಗೆ ಮಾಡಬೇಕು ಎಂದು ಮೋದಿಯವರಿಗೆ ಈ ಬಗ್ಗೆ ಉಪನ್ಯಾಸ ನೀಡುತ್ತೇವೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕಾರ್ಯಕ್ಷಮತೆಯನ್ನು ಜೇಮಿ ಶ್ಲಾಘಿಸಿದ್ದಾರೆ. “ಮೋದಿಯವರು ಭಾರತದಲ್ಲಿ ನಂಬಲಾಗದಂಥ ಶಿಕ್ಷಣ ವ್ಯವಸ್ಥೆ ಮತ್ತು ಮೂಲಸೌಕರ್ಯವನ್ನು ನೀಡುವ ಕೆಲಸ ಮಾಡುತ್ತಿದ್ದಾರೆ” ಎಂದಿದ್ದಾರೆ. “ಭಾರತದಲ್ಲಿ 70 ಕೋಟಿ ಜನರು ಬ್ಯಾಂಕ್ ಖಾತೆಗಳನ್ನು ತೆರೆದಿದ್ದಾರೆ. ಅವರಿಗೆ ಪಾವತಿ ವರ್ಗಾವಣೆಗಳು ನಡೆಯುತ್ತಿವೆ. ಅವರು ಭಾರತದಲ್ಲಿ ಊಹಾತೀತ ಶಿಕ್ಷಣ ವ್ಯವಸ್ಥೆ, ಮೂಲಸೌಕರ್ಯಗಳನ್ನು ಮಾಡಿದ್ದಾರೆ. ಪಿಎಂ ಮೋದಿ ಕಠಿಣ ವ್ಯಕ್ತಿತ್ವದರಾಗಿರುವುದರಿಂದ ಹಳೆಯ ಅಧಿಕಾರಶಾಹಿ ವ್ಯವಸ್ಥೆಯನ್ನು ಮುರಿದು ಅವರು ತಮ್ಮ ಇಡೀ ದೇಶವನ್ನು ಮೇಲೆತ್ತುತ್ತಿದ್ದಾರೆ. ಅಮೆರಿಕದಲ್ಲಿ ಅಂಥವರು ಸ್ವಲ್ಪ ಬೇಕಿದೆ,” ಎಂದಿದ್ದಾರೆ ಜೇಮಿ.

“ಅಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಬೆರಳಚ್ಚು ಅಥವಾ ಕಣ್ಣುಗುಡ್ಡೆಯಿಂದ ಗುರುತಿಸಲಾಗುತ್ತದೆ” ಎಂದು 18 ವರ್ಷಗಳಿಂದ ಯುಎಸ್‌ನ ಅತಿ ದೊಡ್ಡ ಸಾಲದಾತ ಸಂಸ್ಥೆಯ ಮುಖ್ಯಸ್ಥ ಡಿಮನ್ ಹೇಳಿದರು. ಯುಎಸ್‌ನಲ್ಲಿ ರಾಷ್ಟ್ರೀಯ ಸಾಲ, ಹಣದುಬ್ಬರ ಮತ್ತು ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಭೌಗೋಳಿಕ ರಾಜಕೀಯ ಸಂಘರ್ಷಗಳ ಬಗ್ಗೆ ಡಿಮನ್‌ ಎಚ್ಚರಿಕೆ ನೀಡಿದರು. ಹಣದುಬ್ಬರ ಮತ್ತು ಅದರ ಜೊತೆಗೆ ಹೆಚ್ಚಿನ ಬಡ್ಡಿದರಗಳು ನಿರೀಕ್ಷೆಗಿಂತ ಹೆಚ್ಚು ಕಾಲ ಉಳಿಯಬಹುದು ಎಂದು ತಿಳಿಸಿದರು.

ಸಾಲದಾತರು ಮತ್ತು ನಿಯಂತ್ರಕರ ನಡುವೆ ಹೆಚ್ಚು ಸಾಮರಸ್ಯದ ಸಂಬಂಧಕ್ಕೆ ಅವರು ಕರೆ ನೀಡಿದ್ದು, ಹೆಚ್ಚು ಅಂತರ್ಗತ ಆರ್ಥಿಕ ಬೆಳವಣಿಗೆಯ ಅವಶ್ಯಕತೆಯಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ US ಮಿಲಿಟರಿ ಶಕ್ತಿ, ರಾಜಕೀಯ ಧ್ರುವೀಕರಣ ಮತ್ತು ರಾಷ್ಟ್ರದ ಆರ್ಥಿಕ ಕಾರ್ಯಕ್ಷಮತೆ ಉತ್ತಮವಾಗಿವೆ ಎಂದಿದ್ದಾರೆ.

ಇದನ್ನೂ ಓದಿ: PM Narendra Modi: ಮಕ್ಕಳಾಗಿ ವಿಶ್ವನಾಯಕರು! ಎಐ ಮೋಡಿಯಲ್ಲಿ ನರೇಂದ್ರ ಮೋದಿ ನೋಡಿ

Continue Reading
Advertisement
Viral News
ವೈರಲ್ ನ್ಯೂಸ್16 mins ago

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Rajkumar Birth Anniversary ​​Jaggesh said that Rajkumar blessed him when he was admitted due to suicide attempt
ಸ್ಯಾಂಡಲ್ ವುಡ್19 mins ago

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

World Chess Championship
ಕ್ರೀಡೆ22 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ39 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sunita Williams
ದೇಶ39 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್49 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ51 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ53 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ1 hour ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ1 hour ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌