NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ - Vistara News

ಶಿಕ್ಷಣ

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

NEETPG 2024 : ಜೂನ್‌ 23ಕ್ಕೆ ನೀಟ್‌ ಪಿಜಿ ಪರೀಕ್ಷೆ ನಡೆಯಲಿದ್ದು, ನಾಳೆ ಅಂದರೆ ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.‌

VISTARANEWS.COM


on

NEETPG 2024
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ/ಬೆಂಗಳೂರು : ದೇಶಾದ್ಯಂತ ಸುಮಾರು 259 ಕೇಂದ್ರದಲ್ಲಿ ಜೂನ್‌ 23ಕ್ಕೆ ನೀಟ್ ಪಿಜಿ 2024 (NEETPG 2024) ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ಜೂನ್‌ 18ಕ್ಕೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಪರೀಕ್ಷೆಗೆ ನೋಂದಾಯಿಸಿ ಕೊಂಡಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನ ಅಧಿಕೃತ ವೆಬ್ಸೈಟ್ natboard.edu.in ಡೌನ್‌ಲೋಡ್‌ ಮಾಡಬಹುದು.

ಅರ್ಹ ಅಭ್ಯರ್ಥಿಗಳು ತಮ್ಮ ಲಾಗಿನ್ ಐಡಿ ಮೂಲಕ ನೀಟ್ ಪಿಜಿ ಹಾಲ್ ಟಿಕೆಟ್ 2024 ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಪ್ರವೇಶ ಪತ್ರ ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನಮೂದಿಸಬೇಕು.

ಇದನ್ನೂ ಓದಿ: PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವುದು ಹೇಗೆ?

  1. -ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಅಧಿಕೃತ ವೆಬ್‌ಸೈಟ್‌ಗೆ nbe.edu.in ಹೋಗಿ.
  2. -ಮುಖಪುಟದಲ್ಲಿ “ನೀಟ್ ಪಿಜಿ” ಲಿಂಕ್ ಕ್ಲಿಕ್‌ ಮಾಡಿ. ಇದು ಸಾಮಾನ್ಯವಾಗಿ “ಪರೀಕ್ಷೆಗಳು” ಅಥವಾ “ಪ್ರಮುಖ ಲಿಂಕ್‌ಗಳು” ವಿಭಾಗದಲ್ಲಿ ಕಂಡುಬರುತ್ತದೆ.
  3. -ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಬಳಕೆದಾರ ಐಡಿ ಮತ್ತು ಪಾಸ್ ವರ್ಡ್ ನಮೂದಿಸಿ.
  4. -ಒಮ್ಮೆ ಲಾಗ್ ಇನ್ ಆದ ನಂತರ, ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವ ಆಯ್ಕೆ ಇರುತ್ತದೆ.
  5. -ಡೌನ್ಲೋಡ್ ಮಾಡುವ ಮೊದಲು, ಪ್ರವೇಶ ಪತ್ರದಲ್ಲಿನ ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳಿ. ಇದರಲ್ಲಿ ನಿಮ್ಮ ಹೆಸರು, ಛಾಯಾಚಿತ್ರ, ಪರೀಕ್ಷಾ ದಿನಾಂಕ ಮತ್ತು ಪರೀಕ್ಷಾ ಕೇಂದ್ರದ ವಿವರಗಳು ಇರಲಿದೆ.
  6. -ಪ್ರವೇಶ ಪತ್ರವನ್ನು ಸೇವ್‌ ಮಾಡಲು ಡೌನ್ಲೋಡ್ ಬಟನ್ ಕ್ಲಿಕ್ ಮಾಡಿ. ಫೈಲ್ ಸಾಮಾನ್ಯವಾಗಿ ಪಿಡಿಎಫ್ ರೂಪದಲ್ಲಿರುತ್ತದೆ.
  7. -ಪ್ರವೇಶ ಪತ್ರದ ಕನಿಷ್ಠ ಎರಡು ಪ್ರತಿಗಳ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ. ಪ್ರವೇಶ ಪತ್ರದಲ್ಲಿ ಫೋಟೋ ಅಂಟಿಸಲು ಜಾಗ ಇರಲಿದೆ.
  8. -ಪರೀಕ್ಷಾ ಕೇಂದ್ರಕ್ಕೆ ಏನು ತರಬೇಕು, ನಿಷೇಧಿತ ವಸ್ತುಗಳ ಬಗ್ಗೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನ ಓದಿಕೊಳ್ಳಿ. ಯಾವ ಸಮಯದೊಳಗೆ ನೀವೂ ಪರೀಕ್ಷಾ ಕೇಂದ್ರದೊಳಗೆ ಇರಬೇಕು ಎಂಬುದನ್ನೂ ಸೂಚಿಸಲಾಗುತ್ತದೆ.

ಪರೀಕ್ಷಾ ಕೇಂದ್ರದಲ್ಲಿ ಇದೆಲ್ಲವೂ ನಿರ್ಬಂಧ

ಪಠ್ಯ ಸಾಮಗ್ರಿ (ಮುದ್ರಿತ ಅಥವಾ ಲಿಖಿತ), ಟಿಪ್ಪಣಿಗಳು, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ರೈಟಿಂಗ್ ಪ್ಯಾಡ್ ಹಾಗೂ ಮೊಬೈಲ್‌ ಫೋನ್, ಬ್ಲೂಟೂತ್, ಇಯರ್ ಫೋನ್‌ಗಳು, ಮೈಕ್ರೊಫೋನ್, ಹೆಲ್ತ್ ಬ್ಯಾಂಡ್, ಎಲೆಕ್ಟ್ರಾನಿಕ್ ಪೆನ್, ಸ್ಕ್ಯಾನರ್ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಇನ್ನೂ ಹುಡುಗಿಯರು ಬ್ರೇಸ್ ಲೆಟ್ ಗಳು, ಉಂಗುರ, ಕಿವಿಯೋಲೆಗಳು, ನೋಸ್-ಪಿನ್, ಚೈನ್/ ನಂತಹ ಎಲ್ಲಾ ಆಭರಣಗಳು/ ಪೆಂಡೆಂಟ್‌, ಬ್ಯಾಡ್ಜ್, ಬ್ರೂಚ್ ಎಲ್ಲವನ್ನೂ ನಿಷೇಧಿಸಲಾಗಿದೆ. ಜತೆಗೆ ವ್ಯಾಲೆಟ್, ಕ್ಯಾಪ್ , ನೀರಿನ ಬಾಟೆಲ್‌ ಕೂಡ ಕೊಂಡೊಯ್ಯುವಂತಿಲ್ಲ.

ಜುಲೈ 15ರೊಳಗೆ ಫಲಿತಾಂಶ ಪ್ರಕಟ

ಇನ್ನೂ ನೀಟ್‌ ಪಿಜಿ ಫಲಿತಾಂಶವನ್ನು ಜುಲೈ 15ರೊಳಗಾಗಿ ಪ್ರಕಟಿಸಲಾಗುವುದು ಎಂದು ನ್ಯಾಷನಲ್‌ ಬೋರ್ಡ್‌ ಆಫ್‌ ಎಕ್ಸಾಮಿನೇಷನ್‌ ಮೆಡಿಕಲ್‌ ಸೈನ್ಸ್‌ ತಿಳಿಸಿದೆ. ನೀಟ್-ಪಿಜಿ 2024 ಗೆ ಅರ್ಹತೆ ಪಡೆಯಲು ಇಂಟರ್ನ್ಶಿಪ್ ಪೂರ್ಣಗೊಳಿಸಲು ಕಟ್ ಆಫ್ ದಿನಾಂಕವನ್ನು ಆಗಸ್ಟ್‌ 15ಕ್ಕೆ ನಿಗದಿ ಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

PGCET 2024: ಜುಲೈ 13 ಮತ್ತು 14ರಂದು ನಿಗದಿಯಾಗಿದ್ದ ಪಿಜಿಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಇಎ ತಿಳಿಸಿದೆ.

VISTARANEWS.COM


on

PGCET 2024
Koo

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (PGCET 2024)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಈ ಹಿಂದೆ ಜುಲೈ 13 ರಂದು ಎಂಇ, ಎಂ ಟೆಕ್, ಎಂ ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಜುಲೈ 14ರಂದು ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನಿಗದಿಯಾಗಿತ್ತು. ಆದರೆ, ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಮತ್ತು 10ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪಿಜಿಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದು, ಶೀಘ್ರವೇ ಪರೀಕ್ಷೆಯ ಹೊಸ ದಿನಾಂಕ ಪ್ರಕಟಿಸಲಾಗುವುದು. ಪರೀಕ್ಷೆಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದ್ದು, ಜುಲೈ 7ರವರೆಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಜುಲೈ 9ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ https://kea.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದ್ದಾರೆ.

ಯುಜಿಸಿಇಟಿಗೆ ಜೂನ್ 29ರವರೆಗೆ ಆಫ್‌ಲೈನ್ ವೆರಿಫಿಕೇಶನ್‌; ಈ ಅಭ್ಯರ್ಥಿಗಳು ಮಾತ್ರ ಹಾಜರಾಗಬೇಕಿಲ್ಲ!

UGCET 2024

ಬೆಂಗಳೂರು: ಯುಜಿಸಿಇಟಿ-2024ರ (UGCET 2024) ಆನ್‌ಲೈನ್ ಅರ್ಜಿಯಲ್ಲಿ ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಂ. ಎನ್, ಜೆಡ್- ಈ ಕ್ಲಾಸ್‌ಗಳನ್ನು ಕ್ಲೇಮ್‌ ಮಾಡಿರುವ ಹಾಗೂ ರ‍್ಯಾಂಕ್‌ ಪಡೆದಿರುವ ಅಭ್ಯರ್ಥಿಗಳಿಗೆ ಆಫ್ ಲೈನ್ ದಾಖಲಾತಿ ಪರಿಶೀಲನೆಯು ಜೂನ್ 25ರಿಂದ 29 ರವರೆಗೆ ಬೆಂಗಳೂರಿನ ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ದಾಖಲಾತಿ ಪರಿಶೀಲನೆಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ. ಇನ್ನೂ “ವೈ” ಅರ್ಹತಾ ಕಂಡಿಕೆಯನ್ನು ಕ್ಲೇಮ್ ಮಾಡಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಅಗತ್ಯವಿಲ್ಲ ಎಂದೂ ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಪಶು ವೈದ್ಯಕೀಯ ಮತ್ತು ಪಶುಸಂಗೋಪನೆ, ಕೃಷಿ ವಿಜ್ಞಾನ ಕೋರ್ಸುಗಳು, [ಬಿ.ಎಸ್ಸಿ (ಆನರ್ಸ್) ಕೃಷಿ, ಬಿ.ಎಸ್ಸಿ (ಆನರ್ಸ್) (ರೇಷ್ಮೆ ಕೃಷಿ) ಮುಂತಾದವು], ಬಿ.ಎಸ್ಸಿ (ನರ್ಸಿಂಗ್), ಬಿ.ಫಾರ್ಮಾ, 2ನೇ ವರ್ಷದ ಬಿ-ಫಾರ್ಮಾ ಮತ್ತು ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ
ಇದು ಅನ್ವಯವಾಗುತ್ತದೆ.

ವಿದ್ಯಾರ್ಥಿಗಳು ತಮ್ಮ ರ‍್ಯಾಂಕ್‌ ಆಧರಿಸಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವೇಳಾಪಟ್ಟಿಯನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲೆಗಳ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿರುವ ಇ-ಮಾಹಿತಿ ಪುಸ್ತಕದಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತಾ ಕಂಡಿಕೆಗೆ ಅನುಸಾರವಾಗಿ ಅವಶ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು.

ಇದನ್ನೂ ಓದಿ: PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

ಅರ್ಹತಾ ಕಂಡಿಕೆ “ಎ”, “ಇ”, “ಎಫ್”, “ಜಿ”, “ಹೆಚ್”, “ಓ” ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಯುಜಿಸಿಇಟಿ-2024ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿದೆ. ಈ ಬಗ್ಗೆ ವಿವರ ಮಾಹಿತಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಸನ್ನ ತಿಳಿಸಿದ್ದಾರೆ.

UGCET 2024

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

NEET Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ರೂವಾರಿ ಸಂಜೀವ್ ಮುಖಿಯಾ; ಈತ ನಟೋರಿಯಸ್‌!

ನೀಟ್ ಪತ್ರಿಕೆ ಸೋರಿಕೆ (NEET Paper Leak) ಆರೋಪಿ ಸಂಜೀವ್ ಮುಖಿಯಾ ಎರಡು ದಶಕಗಳಿಂದ ಪರೀಕ್ಷೆಯ ವಂಚನೆಯಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ಈ ಹಿಂದೆ ನಳಂದ ಕಾಲೇಜಿನ ನೂರ್ಸರಾಯ್ ಶಾಖೆಯಲ್ಲಿ ತಾಂತ್ರಿಕ ಸಹಾಯಕನಾಗಿ ನೇಮಕಗೊಂಡ ಮುಖಿಯಾನನ್ನು 2016ರ ಬಿಹಾರ ಸಾರ್ವಜನಿಕ ಸೇವಾ ಆಯೋಗದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಬಂಧಿಸಲಾಗಿತ್ತು. ಸೇವೆಯಿಂದ ವಜಾಗೊಳಿಸಲಾಗಿತ್ತು. ಆದರೂ ಈತ ಈ ದಂಧೆ ಮುಂದುವರಿಸಿದ್ದಾನೆ.

VISTARANEWS.COM


on

By

NEET Paper Leak
Koo

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ (NEET Paper Leak) ಉತ್ತರ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳ ಆರೋಪದ ಬಗ್ಗೆ ರಾಷ್ಟ್ರದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದಾರೆ. ಉತ್ತರ ಪತ್ರಿಕೆ ಸೋರಿಕೆಯ ಕುರಿತು ಹೊಸಹೊಸ ಮಾಹಿತಿಗಳು ಹೊರಬೀಳುತ್ತಿದೆ. ಈ ನಡುವೆ, ಬಿಹಾರದ (bihar) ಸಂಜೀವ್ ಮುಖಿಯಾ (Sanjeev Mukhiya) ಈ ಹಗರಣದ ಮುಖ್ಯ ರೂವಾರಿ ಎನ್ನುವುದು ಈಗ ಬಯಲಾಗಿದೆ. ಈತ ಇಂಥ ಕೃತ್ಯಗಳಿಗೆ ನಟೋರಿಯಸ್‌ ಆಗಿದ್ದಾನೆ. ಬಿಹಾರದ ನಳಂದಾ ಜಿಲ್ಲೆಯ ಸಂಜೀವ್ ಸಿಂಗ್ ಎಂದು ಕರೆಯಲ್ಪಡುವ ಸಂಜೀವ್ ಮುಖಿಯಾ ಇತ್ತೀಚಿನ ವೈದ್ಯಕೀಯ ಪ್ರವೇಶ ಪರೀಕ್ಷೆಯ ಹಗರಣದ ಹಿಂದಿನ ಮಾಸ್ಟರ್‌ಮೈಂಡ್ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಈತ ಈಗ ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈತನಿಗಿದೆ ವಂಚನೆಯ ಇತಿಹಾಸ

ಸಂಜೀವ್ ಮುಖಿಯಾ ಎರಡು ದಶಕಗಳಿಂದ ಪರೀಕ್ಷೆಯ ವಂಚನೆಯಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ಈ ಹಿಂದೆ ನಳಂದ ಕಾಲೇಜಿನ ನೂರ್ಸರಾಯ್ ಶಾಖೆಯಲ್ಲಿ ತಾಂತ್ರಿಕ ಸಹಾಯಕನಾಗಿ ನೇಮಕಗೊಂಡ ಮುಖಿಯಾ 2016ರ ಬಿಹಾರ ಸಾರ್ವಜನಿಕ ಸೇವಾ ಆಯೋಗದ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅನೇಕ ಘಟನೆಗಳಲ್ಲಿ ಆರೋಪಿಯಾಗಿದ್ದು, ಬಳಿಕ ಆತನನ್ನು ವಜಾಗೊಳಿಸಲಾಗಿತ್ತು.

ರವಿ ಅತ್ರಿ ಎಂಬ ಮತ್ತೊಬ್ಬ ಕುಖ್ಯಾತನೊಂದಿಗೆ ‘ಸಾಲ್ವರ್ ಗ್ಯಾಂಗ್’ ನಡೆಸುತ್ತಿದ್ದ ಸಂಜೀವ್ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿ ಮಾರುತ್ತಾನೆ. ಅಷ್ಟೇ ಅಲ್ಲ, ಪರೀಕ್ಷೆಯನ್ನು ತೆಗೆದುಕೊಳ್ಳಲು ನಕಲಿ ಅಭ್ಯರ್ಥಿಗಳನ್ನೂ ನೀಡುತ್ತಾನೆ ಎಂದು ಆರೋಪಿಸಲಾಗಿದೆ. ತನಿಖೆಯು ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗಳಿಂದ ಹಿಡಿದು ಅನೇಕ ರಾಜ್ಯಗಳಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳವರೆಗೆ ವಿಸ್ತರಿಸಿರುವ ಜಾಲವನ್ನು ಬಹಿರಂಗಪಡಿಸಿದೆ. ಇದು ಕಾರ್ಯಾಚರಣೆಯ ಪ್ರಮಾಣ ಮತ್ತು ವ್ಯಾಪ್ತಿಯನ್ನು ವಿವರಿಸುತ್ತದೆ.

ಈತನಿಗೆ ಕುಟುಂಬ ಮತ್ತು ರಾಜಕೀಯ ಸಂಪರ್ಕಗಳು

ಮುಖಿಯಾ ಅವರ ಪತ್ನಿ ಮಮತಾ ದೇವಿ ಅವರು ‘ಮುಖಿಯಾ’ ಅಥವಾ ಭೂತಾಖರ್ ಪಂಚಾಯತ್‌ನ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಲೋಕ ಜನಶಕ್ತಿ ಪಕ್ಷದಿಂದ ಟಿಕೆಟ್ ಪಡೆದ ಅನಂತರ ಈ ಸ್ಥಾನವನ್ನು ಪಡೆದರು. ಬಿಹಾರದ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಿಸಿದ ಮತ್ತೊಂದು ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಅವರ ಮಗ ಶಿವಕುಮಾರ್ ವಿಚಾರಣೆ ಎದುರಿಸಿದ್ದ. ಹಳ್ಳಿಯಲ್ಲಿ ಮುಖಿಯಾ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಮಾನ್ಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾನೆ. ಆದರೆ ಈತನ ಅಕ್ರಮದ ಜಾಲ ದೇಶವ್ಯಾಪಿ ವ್ಯಾಪಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: NEET UG Retest: ನೀಟ್‌ ಮರುಪರೀಕ್ಷೆಗೆ ಅರ್ಧದಷ್ಟು ಅಭ್ಯರ್ಥಿಗಳು ಗೈರು; ಇವರ ಭವಿಷ್ಯದ ಗತಿ ಏನು?

ನೀಟ್ ಸೋರಿಕೆಯಲ್ಲಿ ಭಾಗಿ

ನೀಟ್ ಯುಜಿ ಪರೀಕ್ಷೆಯಲ್ಲಿ ಅಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ 720 ಅಂಕಗಳನ್ನು ಗಳಿಸಿದ ಅನಂತರ ವಿವಾದ ಭುಗಿಲೆದ್ದಿತ್ತು. ಆರಂಭದಲ್ಲಿ ದೋಷಯುಕ್ತ ಪ್ರಶ್ನೆ ಮತ್ತು ಲಾಜಿಸ್ಟಿಕಲ್ ಸಮಸ್ಯೆಗಳಿಂದ ಗ್ರೇಸ್ ಅಂಕಗಳು ನೀಡಲಾಯಿತು ಎನ್ನಲಾಗಿತ್ತು. ಆದರೆ ಬಿಹಾರ ಪೊಲೀಸರಿಂದ ನಡೆದ ತನಿಖೆಗಳು ವಿಭಿನ್ನ ಅಂಶವನ್ನು ಬಹಿರಂಗಪಡಿಸಿದವು. ಪರೀಕ್ಷೆಯ ಒಂದು ದಿನ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅಂಶ ಬೆಳಕಿಗೆ ಬಂದಿತ್ತು.

ತನಿಖಾ ಅಧಿಕಾರಿಗಳ ಪ್ರಕಾರ, ಸಂಜೀವ್ ಮುಖಿಯಾ 2024ರ ಪರೀಕ್ಷೆಗೆ ನೀಟ್ ಯುಜಿ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರ ಪತ್ರಿಕೆಗಳ ವಿತರಣೆಗೆ ವ್ಯವಸ್ಥೆ ಮಾಡಿದ್ದಾನೆ. ಅವನ ಮೊಬೈಲ್‌ನಲ್ಲಿ ಕೆಲವು ದಾಖಲೆಗಳು ಪತ್ತೆಯಾಗಿವೆ. ಈತನ ಅಕ್ರಮ ದಂಧೆ ಮತ್ತು ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ದೇಶದ ಕೋಟ್ಯಂತರ ವಿದ್ಯಾರ್ಥಿಗಳು ಸಂಕಟ ಪಡುವಂತಾಗಿದೆ.

Continue Reading

ಶಿಕ್ಷಣ

Yadgiri News: ಶಿಕ್ಷಣ ಜತೆಗೆ ಸ್ಪರ್ಧಾ ಮನೋಭಾವನೆ ಮೂಡಿಸಿ; ಶಾಸಕ ಶರಣಗೌಡ ಕಂದಕೂರ

Yadgiri News: ಯಾಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್ ಅಂಬೇಡ್ಕರ್‌ ವಸತಿ ಶಾಲೆ ಕಟ್ಟಡವನ್ನು ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಉದ್ಘಾಟಿಸಿದರು.

VISTARANEWS.COM


on

Dr BR Ambedkar Residential School building inaugurated by MLA Sharana Gowda Kandakura at Kotagera village
Koo

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಎಲ್ಲರೂ ಒತ್ತು ನೀಡುವುದು ಅವಶ್ಯಕವಾಗಿದೆ, ಈ ನಿಟ್ಟಿನಲ್ಲಿ ವಸತಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರಲ್ಲಿ ಸ್ಪರ್ಧಾ ಮನೊಭಾವನೆ ಮೂಡಿಸಿದಲ್ಲಿ ಮಾತ್ರ ಅವರಲ್ಲಿರುವ ಪ್ರತಿಭೆಗಳು, ಜ್ಞಾನ ವಿಕಾಸವಾಗುತ್ತದೆ ಎಂದು ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ (Yadgiri News) ತಿಳಿಸಿದರು.

ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಕೊಟಗೇರಾ ಗ್ರಾಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ವತಿಯಿಂದ 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಡಾ. ಬಿ.ಆರ್. ಅಂಬೇಡ್ಕರ್‌ ವಸತಿ ಶಾಲೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ ಸೃಷ್ಟಿಗೆ ಹೆಚ್ಚು ಗಮನ ನೀಡುತ್ತಿದ್ದೇನೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೇ ಶಿಕ್ಷಣ ಒದಗಿಸಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇಂತಹ ಒಳ್ಳೆಯ ಪರಿಸರದಲ್ಲಿ ಸುಸಜ್ಜಿತ ವಸತಿ ಶಾಲೆ ನಿರ್ಮಾಣ ಮಾಡಲಾಗಿದೆ, ಇಲ್ಲಿನ ಶಿಕ್ಷಕರು ಪರಿಸರ ಸ್ವಚ್ಚತೆಗೆ ಆದ್ಯತೆ ನೀಡುವ ಜತೆಗೆ ನಿಮಗೆ ತಂಗಲು ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ, ಇಲ್ಲಿಯೇ ಎಲ್ಲರೂ ವಾಸ ಮಾಡಿ, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚು ಬೋಧನೆ ಮಾಡುವ ಜತೆಗೆ ಅವರ ಚಟುವಟಿಕೆಗಳ ಮೇಲೆ ಗಮನ ಹರಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಅದ್ಧೂರಿಯಾಗಿ ನಡೆದ ’ದ ಪ್ರಸೆಂಟ್’ ಚಿತ್ರದ ಮುಹೂರ್ತ

ಜಿಲ್ಲೆಯಲ್ಲಿ 3 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆಯಿದೆ, ನಾನು ಕೂಡ ಸರ್ಕಾರದ ಮೇಲೆ ಶಿಕ್ಷಕರ ನೇಮಕಕ್ಕೆ ಒತ್ತಡ ಹಾಕಿದ್ದೇನೆ, ಅಲ್ಲದೇ ಜಿಲ್ಲಾ ಕೇಂದ್ರ ಯಾದಗಿರಿಯಲ್ಲಿ 2 ಬಿಸಿಎಂ ವಸತಿ ನಿಲಯಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದೇನೆ ಎಂದರು.

ನೆರೆಯ ಮೊಟನಳ್ಳಿ ಕ್ರಾಸ್ ಹತ್ತಿರ ಇರುವ ಮೋರಾರ್ಜಿ ವಸತಿ ಶಾಲೆ ದುರಸ್ತಿಗೆ ಆದಷ್ಟು ಬೇಗನೇ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮತಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಸಾವಿರಾರು ಜನರು ಉದ್ಯೊಗ ಹರಸಿ ಬೃಹತ್ ನಗರಗಳಿಗೆ ವಲಸೆ ಹೋಗಿದ್ದಾರೆ, ಉನ್ನತ ಅಭ್ಯಾಸ ಮಾಡಿದ ನಮ್ಮ ಯುವಕರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ, ಕಡೆಚೂರ-ಬಾಡಿಯಾಲ ಭಾಗದಲ್ಲಿ 3 ಸಾವಿರ ಎಕರೆ ಕೈಗಾರಿಕಾ ಭೂಮಿಯಿದೆ, ನಾನೂ ಈಗಾಗಲೇ ಅವರನ್ನು ಭೇಟಿಯಾಗಿ ಇಲ್ಲಿನ ವಾಸ್ತವಿಕ ಪರಿಸ್ಥಿತಿಯನ್ನು ವಿವರಿಸಿ, ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಅದ್ಯತೆ ನಿಡಬೇಕೆಂದು ಮನವಿ ಮಾಡಿದ್ದೇನೆ, ಅವರಿಂದಲೂ ಕೂಡ ಸಕರಾತ್ಮಕ ಬೆಂಬಲ ದೊರೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ: Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಋಷಿಕೇಶ, ಬಿಆರ್‌ಸಿ ಮಲ್ಲಿಕಾರ್ಜುನ, ಮೋಟನಳ್ಳಿ ಗ್ರಾ.ಪಂ ಅಧ್ಯಕ್ಷೆ ಧನಲಕ್ಷ್ಮಿ, ಪ್ರಾಂಶುಪಾಲೆ ರಮಾಭಾಯಿ, ಗುರುಮಠಕಲ್ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಾಪಣ್ಣ ಮನ್ನೆ, ಬ್ಲಾಕ್ ಜೆಡಿಎಸ್ ಅಧ್ಯಕ್ಷ ಪ್ರಕಾಶ ನೀರಟ್ಟಿ, ರಾಮಣ್ಣ ಕೋಟಗೇರಾ, ಸುಭಾಶ್ಚಂದ್ರ ಕಟಕಟಿ ಹೊನಗೇರಾ, ದೀಪಕ್ ಬೆಳ್ಳಿ, ರವಿ ಪಾಟೀಲ್, ಅಶೋಕ ಕೋಟಗೇರಾ, ಬಂದಪ್ಪಗೌಡ ಲಿಂಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

KPSC Recruitment : ಕೆಪಿಎಸ್‌ಸಿ ನೇಮಕಾತಿ ವಿಳಂಬ; ಪೊಲೀಸರ ಕಾಲಿಗೆ ಬಿದ್ದು ಅಭ್ಯರ್ಥಿಗಳ ಗೋಳಾಟ

ಕೆಪಿಎಸ್‌ಸಿ ನೇಮಕಾತಿಗೆ (KPSC Recruitment) ಸಂಬಂಧಪಟ್ಟಂತೆ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಆಯುಕ್ತಾಯದಲ್ಲಿನ ಗ್ರೂಪ್‌ ಸಿ ವೃಂದದ ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಆಯ್ಕೆಯಾದರೂ, ಕೆಲಸ ಸಿಗದೇ ಅಭ್ಯರ್ಥಿಗಳು ಗೋಳಾಡಿದರು.

VISTARANEWS.COM


on

By

KPSC recruitment delayed
Koo

ಬೆಂಗಳೂರು: ಸೋಮವಾರ ಕೆಪಿಎಸ್‌ಸಿ (KPSC Recruitment) ಮುಂಭಾಗ ನೂರಾರು ನೊಂದ ಅಭ್ಯರ್ಥಿಗಳು ಜಮಾಯಿಸಿ ಕಣ್ಣೀರು ಹಾಕಿದ್ದರು. ಕೈಗಾರಿಕ ತರಬೇತಿ ಮತ್ತು ಉದ್ಯೋಗ ಆಯುಕ್ತಾಯದಲ್ಲಿನ ಗ್ರೂಪ್‌ ಸಿ ವೃಂದದ ಕಿರಿಯ ತರಬೇತಿ ಅಧಿಕಾರಿ ಹುದ್ದೆಗೆ ಆಯ್ಕೆಯಾದರೂ, ಕೆಲಸ ಸಿಗದೇ ಅಭ್ಯರ್ಥಿಗಳು ಪರದಾಡುತ್ತಿದ್ದಾರೆ.

ಆಯೋಗದ ವಿಳಂಬ ಧೋರಣೆ ಖಂಡಿಸಿ ಅಭ್ಯರ್ಥಿಗಳು ಕಿಡಿಕಾರಿದರು. 2018ರಲ್ಲಿ ನೋಟಿಫಿಕೇಶನ್‌ ಮಾಡಿ, 2022 ಫೈನಲಿಸ್ಟ್‌ ಅನೌನ್ಸ್‌ ಮಾಡಲು ನಾಲ್ಕು ವರ್ಷ ತೆಗೆದುಕೊಂಡರು. ಬಳಿಕ ಮೆರಿಟ್‌ ಲಿಸ್ಟ್‌ ಸಿಕ್ಕಿಲ್ಲ ಎಂಬ ಕಾರಣಕ್ಕೆ ಆಯೋಗವೇ ಕೋರ್ಟ್‌ ಮೊರೆಹೋಯಿತು. ಆ ನಂತರ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಟಿಸಿ, ಪಟ್ಟಿಯಲ್ಲಿ ಆದ್ಯತೆ ಬಗ್ಗೆ ಶೀಘ್ರವಾಗಿ ಪ್ರಕಟಿಸಲಾಗುವುದೆಂದು ಆಯೋಗವು ತಿಳಿಸಿತು.

ಇದನ್ನೂ ಓದಿ: Dengue Fever : ಬಿಬಿಎಂಪಿ ಆಯುಕ್ತರಿಗೂ ಡೆಂಗ್ಯೂ; ಬೆಂಗಳೂರಲ್ಲಿ 1,230 ಮಂದಿಗೆ ಫೀವರ್‌!

ಆದರೆ 11 ತಿಂಗಳು ಕಳೆದರೂ ನೇಮಕಾತಿ ಪತ್ರ ಸಿಕ್ಕಿಲ್ಲ. ಸೆಲೆಕ್ಷನ್ ಲಿಸ್ಟ್‌ನಲ್ಲಿ ಹೆಸರು ಬಂದವರು ಸತ್ತೇ ಹೋಗಿದ್ದಾರೆ. ಕೆಲವರು 50 ವರ್ಷ ದಾಟಿದ್ದಾರೆ. ಕುಟುಂಬಗಳು ಬೀದಿಗೆ ಬಂದಿವೆ ಎಂದು ಗೋಳಾಡಿದರು. ಕೆಪಿಎಸ್‌ಸಿಯಿಂದ ಆಯ್ಕೆಯಾದರೂ ಉದ್ಯೋಗ ಸಿಕ್ಕಿಲ್ಲ. ವಯಸ್ಸು 40 ದಾಟುತ್ತಿದ್ದರೂ ಹೋರಾಟ‌ ಮಾಡುವ ಅನಿವಾರ್ಯ ಎದುರಾಗಿದೆ ಎಂದು ತಮ್ಮ ಅಸಹಾಯಕತೆಯನ್ನು ಹೊರ ಹಾಕಿದರು.

ವರ್ಷ ಕಳೆದರೂ ಇಂದಿಗೂ ಅಭ್ಯರ್ಥಿಗಳಿಗೆ ನ್ಯಾಯ ಲಭಿಸಿಲ್ಲ. ಸರ್ಕಾರ ಬದಲಾದರೂ ಇವರ ಪರದಾಟಕ್ಕೆ ಮಾತ್ರ ಮುಕ್ತಿ ಸಿಕ್ಕಿಲ್ಲ. 400 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಉಳಿದ 500 ಅಭ್ಯರ್ಥಿಗಳ ಬಾಳಿನಲ್ಲಿ ಆಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ನೊಂದ ಅಭ್ಯರ್ಥಿಗಳು ಬಿಜೆಪಿ ಸರ್ಕಾರದ ಸಚಿವರಾಗಿದ್ದ ಡಾ. ಸಿ.ಎನ್ ಅಶ್ವತ್ಥನಾರಾಯಣರನ್ನೂ ಭೇಟಿಯಾಗಿದ್ದರು. ಇದೀಗ ಈಗೀನ ಸಚಿವರಾದ ಶರಣ್ ಪ್ರಕಾಶ್ ಪಾಟೀಲರನ್ನೂ ಭೇಟಿಯಾಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನ್ಯಾಯ ದೊರಕಿಸಿ ಇಲ್ಲ ದಯಾಮರಣ ನೀಡುವಂತೆ ಕೋರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Acharya Pramod Krishnam
ದೇಶ17 mins ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest30 mins ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ37 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest39 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ41 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್46 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ47 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ50 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್1 hour ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ1 hour ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌