ಇತಿಹಾಸದ ಪಠ್ಯದಲ್ಲಿ ರಾಮಾಯಣ, ಮಹಾಭಾರತ! ಶಾಲೆಗಳಲ್ಲಿ ಕಲಿಸಲು ಎನ್‌ಸಿಇಆರ್‌ಟಿಗೆ ಶಿಫಾರಸು Vistara News

ದೇಶ

ಇತಿಹಾಸದ ಪಠ್ಯದಲ್ಲಿ ರಾಮಾಯಣ, ಮಹಾಭಾರತ! ಶಾಲೆಗಳಲ್ಲಿ ಕಲಿಸಲು ಎನ್‌ಸಿಇಆರ್‌ಟಿಗೆ ಶಿಫಾರಸು

NCERT: ಇತಿಹಾಸವನ್ನು ನಾಲ್ಕು ಅವಧಿಗಳಾಗಿ ವಿಂಗಡಿಸಿ ಮೊದಲನೇ ಅವಧಿಯನ್ನು ಶಾಸ್ತ್ರೀಯ ಅವಧಿ ಎಂದು ಪರಿಗಣಿಸಬೇಕು. ಈ ಅವಧಿಯಲ್ಲಿ ರಾಮಾಯಣ ಮತ್ತು ಮಹಾಭಾರತ ಕುರಿತು ಬೋಧನೆ ಮಾಡಲು ಶಿಫಾರಸು ಮಾಡಲಾಗಿದೆ.

VISTARANEWS.COM


on

Ramayana, Mahabharata likely to be part of NCERT SS Textbook Says Committee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಮಾಯಣ (Ramayana) ಮತ್ತು ಮಹಾಭಾರತದಂತಹ (Mahabhart) ಮಹಾಕಾವ್ಯಗಳನ್ನು (Epics of India) ಭಾರತದ ‘ಶಾಸ್ತ್ರೀಯ ಅವಧಿ’ ಅಡಿಯಲ್ಲಿ ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ. ಹಾಗೆಯೇ, ಸಂವಿಧಾನದ ಪೀಠಿಕೆಯನ್ನು (Preamble of the Constitution) ಎಲ್ಲಾ ತರಗತಿಗಳ ಗೋಡೆಗಳ ಮೇಲೆ ಸ್ಥಳೀಯ ಭಾಷೆಗಳಲ್ಲಿ ಬರೆಯುವಂತೆ ಸಮಿತಿಯು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಪ್ರೊ ಸಿ ಐ ಐಸಾಕ್ ತಿಳಿಸಿದ್ದಾರೆ.

ಶಾಲೆಗಳಿಗೆ ಸಮಾಜ ವಿಜ್ಞಾನ ಪಠ್ಯಕ್ರಮವನ್ನು ಪರಿಷ್ಕರಿಸಲು ಸ್ಥಾಪಿಸಲಾದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ ಸಮಾಜ ವಿಜ್ಞಾನ ಸಮಿತಿಯು ಪಠ್ಯಪುಸ್ತಕಗಳಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ, ವೇದಗಳು ಮತ್ತು ಆಯುರ್ವೇದವನ್ನು ಪರಿಚಯಿಸುವುದು ಸೇರಿದಂತೆ ಹಲವಾರು ಪ್ರಸ್ತಾಪಗಳನ್ನು ಮಾಡಿದೆ.

ಸಲಹೆಗಳು ಸಮಾಜ ವಿಜ್ಞಾನದ ಅಂತಿಮ ದಾಖಲೆಯ ಭಾಗವಾಗಿದೆ, ಇದು ವಿಷಯದ ಕುರಿತು ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಅಭಿವೃದ್ಧಿಗೆ ಸಹಾಯ ಮಾಡುವ ಪ್ರಮುಖ ದೃಷ್ಟಿಕೋನ ದಾಖಲೆಯಾಗಿದೆ. ಈ ಪ್ರಸ್ತಾವನೆಗೆ ಎನ್‌ಸಿಇಆರ್‌ಟಿಯಿಂದ ಅಂತಿಮ ಒಪ್ಪಿಗೆ ಸಿಗಬೇಕಿದೆ.

ಇತಿಹಾಸವನ್ನು ನಾಲ್ಕು ಅವಧಿಗಳಾಗಿ ವರ್ಗೀಕರಿಸಲು ಸಮಿತಿಯು ಶಿಫಾರಸುಗಳನ್ನು ಮಾಡಿದೆ; ಶಾಸ್ತ್ರೀಯ ಅವಧಿ, ಮಧ್ಯಕಾಲೀನ ಅವಧಿ, ಬ್ರಿಟಿಷ್ ಯುಗ ಮತ್ತು ಆಧುನಿಕ ಭಾರತ. ಇಲ್ಲಿಯವರೆಗೆ, ಭಾರತೀಯ ಇತಿಹಾಸದಲ್ಲಿ ಕೇವಲ ಮೂರು ವರ್ಗೀಕರಣಗಳಿವೆ. ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತ ಎಂದು ವರ್ಗೀಕರಿಸಲಾಗಿತ್ತು ಎಂದು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಐಸಾಕ್ ಹೇಳಿದ್ದಾರೆ.

ಶಾಸ್ತ್ರೀಯ ಅವಧಿಯಲ್ಲಿ ನಾವು ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತಗಳನ್ನು ಕಲಿಸಲು ಶಿಫಾರಸು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ರಾಮ ಹಾಗೂ ಆತನ ಉದ್ದೇಶದ ಬಗ್ಗೆ ಸಂಪೂರ್ಣ ತಿಳಿವಳಿಕೆ ಇರಬೇಕು. ಹಾಗೆಯೇ, ಪಠ್ಯ ಪುಸ್ತಕಗಳಲ್ಲಿ ಎಲ್ಲ ರಾಜಮನೆತನಗಳ ಬಗ್ಗೆ ಕಲಿಸಬೇಕು. ಕೇವಲ ಒಂದೆರಡು ರಾಜಮನೆತನಗಳ ಬಗ್ಗೆ ಮಾತ್ರ ಸಲ್ಲದು ಎಂದು ಸಮಿತಿಯು ಹೇಳಿದೆ.

ಇಂಡಿಯಾ ಬದಲಿಗೆ ಭಾರತ ಬಳಕೆ

ಕೆಲವು ದಿನಗಳ ಹಿಂದೆ ಇದೇ ಸಮಿತಿ ಪಠ್ಯ ಪುಸ್ತಗಳಲ್ಲಿ ಇಂಡಿಯಾ ಪದದ ಬದಲಿಗೆ ಭಾರತ್ ಪದ ಬಳಕೆಯ ಬಗ್ಗೆ ಶಿಫಾರಸು ಮಾಡಿತ್ತು. ಶಾಲಾ ಪಠ್ಯಗಳಲ್ಲಿ (School Textbooks) ಇಂಡಿಯಾ (India) ಪದ ಬದಲಿಗೆ ಭಾರತ (Bharat) ಪದ ಬಳಸಲು ಉನ್ನತಾಧಿಕಾರದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ(NCERT panel recommends). ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು, ಪ್ರಾಚೀನ ಇತಿಹಾಸದ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ಎಂದು ಪರಿಚಯಿಸಲು ಶಿಫಾರಸು ಮಾಡಿದೆ.

ಹೊಸ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಅಭಿವೃದ್ಧಿಗೆ ಅಡಿಪಾಯ ಹಾಕುವ ಪ್ರಮುಖ ದಾಖಲೆಯಾಗಿರುವ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಗೆ ಏಳು ಸದಸ್ಯರ ಸಮಿತಿಯು ಸರ್ವಾನುಮತ ಶಿಫಾರಸಗಳನ್ನು ನೀಡಿದೆ. ಸಂವಿಧಾನದ ಆರ್ಟಿಕಲ್ 1ರಲ್ಲಿ ಇಂಡಿಯಾ ಎಂದು ಹೇಳಲಾಗುವ ಭಾರತವು ಒಕ್ಕೂಟಗಳ ರಾಷ್ಟ್ರವಾಗಿದೆ ಎಂದು ತಿಳಿಸಲಾಗಿದೆ. ಭಾರತವು ಪ್ರಾಚೀನ ಹೆಸರಾಗಿದ್ದು, 7000 ವರ್ಷಗಳ ಪ್ರಾಚೀನ ವಿಷ್ಣು ಪುರಾಣ ಸೇರಿದಂತೆ ಅನೇಕ ಪುರಾಣ, ಗ್ರಂಥಗಳಲ್ಲಿ ಭಾರತ ಎಂಬ ಹೆಸರು ಉಲ್ಲೇಖಿಸಲಾಗಿದೆ.

1757ರ ಪ್ಲಾಸಿ ಕದನದ ಬಳಿಕ ಈಸ್ಟ್ ಇಂಡಿಯಾ ಕಂಪನಿಯು ಭಾರತಕ್ಕೆ ಇಂಡಿಯಾ ಎಂದು ಬಳಸಲು ಆರಂಭಿಸಲಾಯಿತು. ಹಾಗಾಗಿ, ಸಮಿತಿಯು ಅವಿರೋಧವಾಗಿ ಇಂಡಿಯಾ ಪದ ಬದಲಿಗೆ ಭಾರತ ಎಂಬ ಪದವನ್ನು ಎಲ್ಲ ವರ್ಗದ ಸಾಮಾಜಿಕ ವಿಜ್ಞಾನ ಪಠ್ಯಗಳಲ್ಲಿ ಬಳಸಲು ಶಿಫಾರಸು ಮಾಡಿದೆ ಎಂದು ಐಸಾಕ್ ಅವರು ತಿಳಿಸಿದರು.

ಈ ಸುದ್ದಿಯನ್ನೂ ಓದಿ: NCERT Textbooks: ಆಪರೇಷನ್‌ ಪಠ್ಯಪುಸ್ತಕ; ಖಲಿಸ್ತಾನ, ಅಸಮಾನತೆ, ಪ್ರಜಾಪ್ರಭುತ್ವ ಚಾಪ್ಟರ್‌ ಕೈಬಿಟ್ಟ ಎನ್‌ಸಿಇಆರ್‌ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

Vistara Editorial: ಅಡಿಕೆಗೆ ಸಂಬಂಧಿಸಿ ಸರ್ಕಾರ ತಾನು ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸ ಕೂಡಲೇ ಮಾಡಬೇಕು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಮತ್ತದರ ಪರಿಹಾರದ ಕುರಿತ ಅಧ್ಯಯನ ಎಲ್ಲಿಗೆ ತಲುಪಿದೆ ಎಂಬುದನ್ನು ತಿಳಿಸಬೇಕು.

VISTARANEWS.COM


on

Vistara Editorial, Leaf spot disease for areca nut
Koo

ವಾಣಿಜ್ಯ ಬೆಳೆ ಅಡಿಕೆ ಅಮರಿಕೊಂಡಿರುವ ಸಂಕಷ್ಟಗಳು ಒಂದೆರಡಲ್ಲ. ರಾಜ್ಯದಲ್ಲಿ ಬೆಳೆ ನಷ್ಟ, ಎಲೆ ಚುಕ್ಕೆ ರೋಗ (Leaf spot disease for areca nut), ಹಳದಿ ರೋಗ, ಬೆಲೆ ಕುಸಿತಗಳಂತಹ ಹೊಡೆತದಿಂದ ಕಂಗಾಲಾಗಿರುವ ಅಡಿಕೆ ಬೆಳಗಾರರಿಗೆ ಈಗ ಮತ್ತೊಂದು ಶಾಕಿಂಗ್‌ ನ್ಯೂಸ್‌. ರಾಜ್ಯದಲ್ಲಿ ಅಡಿಕೆ ಅಕ್ರಮ ದಂಧೆಯ ವ್ಯವಸ್ಥಿತ ಜಾಲವೊಂದು ಹುಟ್ಟಿಕೊಂಡಿದೆ. ಅಂತಾರಾಜ್ಯ ಜಾಲ ಇದಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11 ಟನ್‌ ಅಕ್ರಮ ಅಡಿಕೆಯನ್ನು (Illegal Areca nut) ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದಾಗ ಈ ವಿಷಯ ತಿಳಿದುಬಂದಿದೆ. ಇತರ ರಾಜ್ಯಗಳಿಂದ ರಾಜ್ಯದ ಮಾರುಕಟ್ಟೆಯನ್ನು ಅಡಿಕೆ ಅಕ್ರಮವಾಗಿ ಪ್ರವೇಶ ಮಾಡುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಭೂತಾನ್, ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಭಾರತಕ್ಕೆ ಸಾಗಾಟ ಮಾಡಲಾಗುತ್ತಿದೆ. ಈಶಾನ್ಯ ಪ್ರದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಗಳು ಬರುತ್ತಿವೆ. ಅಸ್ಸಾಂ ಮತ್ತು ಮಣಿಪುರದಂತಹ ಪ್ರದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟ ಇಲ್ಲದ ಅಡಿಕೆ ಪೂರೈಸುವ ಜಾಲ ವ್ಯಾಪಕವಾಗಿ ವ್ಯಾಪಿಸುತ್ತಿದೆ. ಇದು ಇಲ್ಲಿ ಅಡಿಕೆ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ಆತಂಕ ಎದುರಾಗಿದೆ. ಇಂತಹ ಅಕ್ರಮಕ್ಕೆ ಕೂಡಲೇ ಕಡಿವಾಣ ಹಾಕಿ, ಈ ಬಗ್ಗೆ ಕಠಿಣ ಕಾನೂನು ರೂಪಿಸಬೇಕು ಎಂಬುದು ಎಲ್ಲ ಅಡಿಕೆ ಬೆಳೆಗಾರರ ಆಗ್ರಹ(Vistara Editorial).

ಭಾರತದಲ್ಲಿ ಅಡಿಕೆ ಬೆಳೆಯುವ ಪ್ರಮುಖ ರಾಜ್ಯ ಕರ್ನಾಟಕ. ಅದರಲ್ಲೂ ಇಂದು ಮಲೆನಾಡು ಹಾಗೂ ಕರಾವಳಿ ಭಾಗಗಳ ಜೀವನಾಡಿಯೇ ಅಡಿಕೆ ಎಂಬಂತಾಗಿದೆ. ಭೂತಾನ್‌ನಿಂದ ಹಸಿ ಅಡಿಕೆ ಆಮದಿಗೆ ಸರ್ಕಾರ ಒಪ್ಪಿಗೆ ನೀಡಿದ್ದ ಸುದ್ದಿ ಹರಡುತ್ತಿದ್ದಂತೆ ರಾಜ್ಯದಲ್ಲಿ ರಾಶಿ ಕೆಂಪಡಿಕೆಯ ಬೆಲೆಯಲ್ಲಿ ಅಲ್ಪ ಕುಸಿತ ಕಂಡಿತ್ತು. ಅಂದರೆ ಇಲ್ಲಿ ಆಗುವ ಒಂದು ಸಣ್ಣ ಚಲನೆಯೂ ಕೋಟ್ಯಂತರ ಮೌಲ್ಯದ ಅಡಿಕೆ ಮಾರುಕಟ್ಟೆಯಲ್ಲಿ ತೀವ್ರ ಏರುಪೇರಿಗೆ ಕಾರಣವಾಗುತ್ತದೆ. ಇದರ ಜೊತೆಗೆ ಅಡಿಕೆಯನ್ನು ಕಾಡುತ್ತಿರುವ ಇನ್ನೂ ಹಲವು ಸಮಸ್ಯೆಗಳಿವೆ. ಮುಖ್ಯವಾಗಿ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗ. ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಕೆಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗದ (Leaf spot Disease) ವಿಷಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಪ್ರಸ್ತಾಪವಾಗಿದೆ. ಎಲೆ ಚುಕ್ಕಿ ರೋಗದ ತೀವ್ರತೆ ಬಗ್ಗೆ ಪರಿಷತ್‌ನಲ್ಲಿ ಪರಿಷತ್ ಸದಸ್ಯ ರುದ್ರೇಗೌಡ ಪ್ರಸ್ತಾಪಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉತ್ತರಿಸಿದ್ದಾರೆ.

ಎಲೆ ಚುಕ್ಕಿ ರೋಗವನ್ನು ತಡೆಗಟ್ಟಲು ಸಂಶೋಧನೆ ನಡೆಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಸಂಶೋಧನೆಗೆ ಹಣ ಕೂಡ ಬಿಡುಗಡೆ ಮಾಡಲಾಗಿದೆ. ಇದನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಚಲುವರಾಯಸ್ವಾಮಿ ಉತ್ತರಿಸಿದ್ದಾರೆ. ಮಲೆನಾಡು ಭಾಗದಲ್ಲಿ ಅಡಿಕೆಯನ್ನು ಕಾಡುತ್ತಿರುವ ಎಲೆ ಚುಕ್ಕೆ ರೋಗದ ಕುರಿತು ʻವಿಸ್ತಾರ ನ್ಯೂಸ್‌ʼ ನಡೆಸಿದ್ದ ʻಅಡಕತ್ತರಿಯಲ್ಲಿ ಅಡಕೆʼ ಎಂಬ ಅಭಿಯಾನದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ (Congress Government) ಈ ರೋಗದ ನಿಯಂತ್ರಣಕ್ಕೆ ಅಗತ್ಯವಾಗಿರುವ ಔಷಧವನ್ನು ಕಂಡು ಹಿಡಿಯುವ ಸಂಶೋಧನೆಗೆ ಹಣಕಾಸಿನ ನೆರವನ್ನು ಈಚೆಗೆ ನೀಡಿತ್ತು. ಮೊದಲ ಹಂತವಾಗಿ ಶಿವಮೊಗ್ಗ ತೋಟಗಾರಿಕಾ ವಿವಿಗೆ ಸಂಶೋಧನೆಯ ಉದ್ದೇಶಕ್ಕಾಗಿ 43.61 ಲಕ್ಷ ಅನುದಾನ ಬಿಡುಗಡೆ ಮಾಡಿತ್ತು. ರಾಜ್ಯದ 7 ಜಿಲ್ಲೆಗಳಲ್ಲಿನ 53,977.04 ಹೆಕ್ಟೇರ್‌ಗೂ ಹೆಚ್ಚಿನ ಅಡಿಕೆ ತೋಟಗಳು ಎಲೆಚುಕ್ಕಿ ರೋಗದಿಂದ ನಾಶವಾಗುವ ಹಂತ ತಲುಪಿವೆ. ಇದರ ನಿಯಂತ್ರಣಕ್ಕೆ ನಿರ್ದಿಷ್ಟವಾದ ಔಷಧ ಇಲ್ಲದಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಮಲೆನಾಡು ಜಿಲ್ಲೆಗಳಲ್ಲಿ ಈ ರೋಗದ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಶೇ.74 ಅಡಿಕೆ ತೋಟ ನಾಶವಾಗಿದೆ. ಈ ರೋಗದ ನಿಯಂತ್ರಣಕ್ಕೆ ಔಷಧಿಯನ್ನು ಕಂಡು ಹಿಡಿಯಬೇಕೆಂಬ ಉದ್ದೇಶದಿಂದ ಶೃಂಗೇರಿ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರಗಳನ್ನು ತೆರೆಯಲಾಗಿದೆ.

ಹಾಗೆಯೇ ಹಳದಿ ರೋಗ ಕೂಡ. ಆರಂಭದಲ್ಲಿ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಭಾಗದಲ್ಲಿ ಕಾಣಿಸಿಕೊಂಡ ಹಳದಿ ರೋಗ ಅಡಿಕೆ ತೋಟವನ್ನು ನಾಶ ಮಾಡಿ ಅಡಕೆ ಕೃಷಿಕರ ಬದುಕನ್ನು ಸಂಕಷ್ಟಕ್ಕೀಡು ಮಾಡಿತ್ತು. ನಂತರ ಇದು ದಕ್ಷಿಣ ಕನ್ನಡದಾದ್ಯಂತ ವ್ಯಾಪಿಸಿದೆ. ತುಂಬಾ ಕೃಷಿಕರು ಹಳದಿ ರೋಗ ಬಂದು ನಾಶವಾದ ತೋಟವನ್ನು ಕಡಿದುಹಾಕಿದ್ದಾರೆ. ಅಡಿಕೆ ದೀರ್ಘಾವಧಿ ಬೆಳೆಯಾದ್ದರಿಂದ ಅದನ್ನು ಕಡಿದುಹಾಕಿದರೆ ಮುಂದಿನ ಹಲವಾರು ವರ್ಷಗಳು ಯಾವ ಆದಾಯವೂ ಇರುವುದಿಲ್ಲ. ಕಾಸರಗೋಡಿನ ಸಿಪಿಸಿಆರ್‌ಐನಿಂದ 7 ಕೋಟಿ ವೆಚ್ಚದಲ್ಲಿ ಹಳದಿ ಎಲೆ ರೋಗದ ನಿಯಂತ್ರಣ ಅಧ್ಯಯನ ಆರಂಭಿಸಲಾಗಿತ್ತು. ಹಳದಿ ಎಲೆ ರೋಗ ನಿರೋಧಕ ತಳಿಯ ಅಭಿವೃದ್ಧಿಯ ಬಗ್ಗೆಯೂ ಸಂಶೋಧನೆ ಆರಂಭವಾಗಿತ್ತು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಕಾಟದಿಂದ ರೋಗದಿಂದ ತೋಟ ನಾಶವಾಗಿದ್ದರಿಂದ ಮುಂದೇನು ಮಾಡಬೇಕೆಂದು ತೋಚದೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶೃಂಗೇರಿ ತಾಲೂಕಿನಲ್ಲಿ ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ಊರು ತೊರೆದಿದ್ದವು.

ಸರ್ಕಾರ ತಾನು ನೀಡಿರುವ ಭರವಸೆಗಳನ್ನು ಈಡೇರಿಸುವ ಕೆಲಸ ಕೂಡಲೇ ಮಾಡಬೇಕು. ಎಲೆಚುಕ್ಕಿ ಹಾಗೂ ಹಳದಿ ರೋಗಗಳ ಮತ್ತದರ ಪರಿಹಾರದ ಕುರಿತ ಅಧ್ಯಯನ ಎಲ್ಲಿಗೆ ತಲುಪಿದೆ, ಅದರ ಮೇಲೆ ಸರ್ಕಾರದ ನೆಲೆಯಿಂದ ಯಾರಾದರೂ ನಿಗಾ ಇಟ್ಟಿದ್ದಾರೆಯೇ, ಎಂಬುದರ ಬಗ್ಗೆ ಮಾಹಿತಿಯಿಲ್ಲ. ಈ ರೋಗಗಳ ಕಂಟಕದ ನಡುವೆ ಅಕ್ರಮ ಅಡಿಕೆಯೂ ರಾಜ್ಯವನ್ನು ಪ್ರವೇಶಿಸಿದರೆ ನಮ್ಮ ಅಡಿಕೆ ಬೆಳೆಗಾರರ ಮರಣ ಶಾಸನ ಬರೆದಂತೆಯೇ. ರೋಗಗಳ ಬಗೆಗೆ ಹೇಗೋ ಹಾಗೇ ಅಕ್ರಮ ಅಡಿಕೆಯ ಆಗಮನವನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅಡಿಕೆಯು ಕರಾವಳಿ ಹಾಗೂ ಮಲೆನಾಡಿನ ನಾಲ್ಕು ಜಿಲ್ಲೆಗಳ, ಆ ಮೂಲಕ ನಾಡಿನ ಶ್ರೀಮಂತಿಕೆಗೆ ಕಾರಣವಾಗಿದೆ. ಇಲ್ಲಿಂದ ರಫ್ತಾಗುವ ಅಡಿಕೆಗೆ ಉತ್ತಮ ಗುಣಮಟ್ಟ, ಒಳ್ಳೆಯ ಹೆಸರು ಇದೆ. ಅದನ್ನು ಉಳಿಸಿಕೊಳ್ಳಬೇಕು. ಅಗ್ಗದ ಅಡಿಕೆಗೆ ಹಾಗೂ ಮದ್ದಿಲ್ಲದ ರೋಗಗಳಿಗೆ ನಮ್ಮ ಅಡಿಕೆ ಬಲಿಯಾಗದಿರಲಿ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ದಸರಾ ಹೀರೊ ‘ಅರ್ಜುನ’ ದಾರುಣ ಸಾವು, ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ

Continue Reading

ದೇಶ

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Madhya Pradesh: ಐದು ರಾಜ್ಯಗಳ ಪೈಕಿ ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಅನುಭವಿಸಿದೆ.

VISTARANEWS.COM


on

our former mlas they did not get even 50 votes in Madhya Pradesh Says Congress
Koo

ಭೋಪಾಲ್: ನಮ್ಮ ಮಾಜಿ ಶಾಸಕರಿಗೆ (Former MLAs) ಅವರ ಊರಿನಲ್ಲಿ 50 ಮತಗಳು ಬಿದ್ದಿಲ್ಲ (50 Votes). ನಾವು ಗೆಲ್ಲೋದು ಹೇಗೆ ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕ ಕಮಲ್ ನಾಥ್ (Madhya Pradesh Congress Leader Kamal Nath) ಅವರು ಹೇಳಿದ್ದಾರೆ. ತಮ್ಮ ಊರುಗಳಲ್ಲಿ 50 ಮತಗಳು ಕೂಡ ಬಿದ್ದಿಲ್ಲ ಎಂದು ಮಾಜಿ ಶಾಸಕರು ಕಮಲ್ ನಾಥ ಅವರಿಗೆ ತಿಳಿಸಿದ್ದಾರೆ. ಮಧ್ಯ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿರುವ ಕಮಲ್ ನಾಥ್ ಅವರು, ಚುನಾವಣಾ ಅಕ್ರಮ ನಡೆದಿದೆ (electoral malpractices) ಎಂದೇನೂ ಆರೋಪಿಸಲಿಲ್ಲ. ಆದರೆ, ಮತ್ತೊಂದೆಡೆ, ದಿಗ್ವಿಜಯ್ ಸಿಂಗ್ (Digvijaya Singh) ವರು ವಿದ್ಯುನ್ಮಾನ ಮತಯಯಂತ್ರಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಎರಡು ದಿನಗಳ ನಂತರ ಈ ಹೇಳಿಕೆಗಳು ಬಂದಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ ತನ್ನ ಏಕೈಕ ಗೆಲುವಿನಲ್ಲಿ ಸಮಾಧಾನ ಕಂಡುಕೊಳ್ಳಬೇಕಾಯಿತು. ಮಧ್ಯ ಪ್ರದೇಶದಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 66 ಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮಧ್ಯಪ್ರದೇಶದಲ್ಲಿ ಸಮಬಲ ಸ್ಪರ್ಧೆ ನಡೆಯಲಿದೆ ಎಂದು ಎಕ್ಸಿಟ್ ಪೋಲ್‌ಗಳ ಊಹೆ ಕೂಡ ಸುಳ್ಳಾಯಿತು.

ಕಾಂಗ್ರೆಸ್‌ನ ಪ್ರಚಾರದ ನೇತೃತ್ವ ವಹಿಸಿರುವ ಕಮಲ್ ನಾಥ್, ಪಕ್ಷದ ಕಳಪೆ ಪ್ರದರ್ಶನದ ಹಿಂದಿನ ಕಾರಣಗಳನ್ನು ವಿಶ್ಲೇಷಿಸಲು ಪಕ್ಷದ ಜತೆ ಚರ್ಚಿಸಲಾಗುವುದು. ಈ ಕುರಿತು ಗೆದ್ದ ಮತ್ತು ಸೋತ ಅಭ್ಯರ್ಥಿಗಳ ಜತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲವು ಕಾಂಗ್ರೆಸ್ ನಾಯಕು ಇವಿಎಂ ಹ್ಯಾಕ್ ಬಗ್ಗೆ ಆರೋಪಿಸುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕಮಲ್ ನಾಥ್ ಅವರು, ಚರ್ಚೆ ನಡೆಸದೆ ತೀರ್ಮಾನಕ್ಕೆ ಬರುವುದು ಸರಿಯಲ್ಲ, ನಾನು ಮೊದಲು ಎಲ್ಲರೊಂದಿಗೆ ಮಾತನಾಡುತ್ತೇನೆ. ಆ ಮೇಲೆ ಈ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿದರು.

ಇಷ್ಟಾಗಿಯೂ ಅವರು ಚುನಾವಣಾ ಫಲಿತಾಂಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಚಿತ್ತ ಕಾಂಗ್ರೆಸ್ ಪರವಾಗಿಯೇ ಇದೆ ಎಂದು ಒತ್ತಿ ಹೇಳಿದರು. ಮಧ್ಯ ಪ್ರದೇಶದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬುದು ನಿಮಗೂ(ಸುದ್ದಿಗಾರರು) ಗೊತ್ತಿತ್ತು. ಈಗ ನನ್ನೇಕೆ ಕೇಳುತ್ತಿದ್ದೀರಿ. ನಮ್ಮ ಕೆಲವು ಎಮ್ಮೆಲ್ಲೆಗಳು ತಮ್ಮ ಊರಿನಲ್ಲಿ 50 ಮತಗಳು ಬಿದ್ದಿಲ್ಲ ಎಂದು ಹೇಳಿದ್ದಾರೆ. ಹೀಗೆ ಆಗಲು ಹೇಗೆ ಸಾಧ್ಯ ಎಂದು ಕಮಲ್ ನಾಥ್ ಅವರು ಹೇಳಿದ್ದಾರೆ.

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

ಬಿಜೆಪಿ (Bhartiya Janata Party) ಗೆದ್ದಾಗಲೆಲ್ಲ ಪ್ರತಿಪಕ್ಷಗಳು (Opposition Parties) ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ (EVM Hack) ಮಾಡಲಾಗಿದೆ ಎಂದು ಆರೋಪ ಮಾಡುತ್ತಿದ್ದವು. ಈಗ ಕಾಂಗ್ರೆಸ್ ಪಕ್ಷ (Congress Party) ಹೊಸ ಪ್ರಲಾಪವನ್ನು ಆರಂಭಿಸಿದೆ. ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ (Congress Leader Digvijaya Singh) ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿ, ಭಾರತೀಯ ಜನತಾ ಪಾರ್ಟಿಗೆ ಚುನಾವಣಾ ಫಲಿತಾಂಶವು (Election Result 2023) ಎರಡು ದಿನಗಳ ಮುಂಚಿತವಾಗಿಯೇ ಗೊತ್ತಿತ್ತು ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ಚುನಾವಣಾ ಅಕ್ರಮ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದ ಫಲಿತಾಂಶ ಪುಟದ ಎರಡು ಸ್ಕ್ರೀನ್ ಶಾಟ್ ಷೇರ್ ಮಾಡಿಕೊಂಡಿದ್ದಾರೆ. ಅಲ್ಲದೇ, ”ಈ ಎರಡು ಚಿತ್ರಗಳನ್ನು ಹತ್ತಿರದಿಂದ ನೋಡಿ. ಖಚ್ರೋಡ್ ಅಸೆಂಬ್ಲಿ ಕ್ಷೇತ್ರದಲ್ಲಿ ಪ್ರತಿ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದರು ಮತ್ತು ಮತಗಳ ಅಂತರ ಎಷ್ಟು ಎಂಬುದನ್ನು ಬಿಜೆಪಿ ಕಾರ್ಯಕರ್ತರು ಬರೆದಿದ್ದಾರೆ. ಮುಖ್ಯವಾಗಿ, ಈ ಪೋಸ್ಟ್ ಅನ್ನು ಎಣಿಕೆಗೆ ಎರಡು ದಿನಗಳ ಮೊದಲು ಅಂದರೆ ಡಿಸೆಂಬರ್ 1ರಂದು ಮಾಡಲಾಗಿದೆ. ಈಗ ಇದನ್ನು ಫಲಿತಾಂಶಗಳೊಂದಿಗೆ ತುಲನೆ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದ ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ತೇಜ್‌ಬಹದ್ದೂರ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್‌ ಅಭ್ಯರ್ಥಿ ದಿಲಿಪ್ ಸಿಂಗ್ ಗುರ್ಜರ್ ಅವರನ್ನು 15,927 ಮತಗಳ ಅಂತರದಿಂದ ಸೋಲಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಉಲ್ಲೇಖಿಸಿರುವ ಫೇಸ್‌ಬುಕ್ ಪೋಸ್ಟ್ ಅನಿಲ್ ಚಚ್ಚೇದ್ ಅವರ ಪ್ರೊಫೈಲ್‌ನಿಂದ ತೆಗೆದುಕೊಳ್ಳಲಾಗಿದೆ. ಈ ಪ್ರೊಫೈಲ್‌ನಲ್ಲಿ ಅವರು ಡಿಜಿಟಲ್ ಕ್ರಿಯೇಟರ್ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಪ್ರೊಫೈಲ್‌ನಲ್ಲಿ ಚುನಾವಣಾ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಮತ್ತು ಪಕ್ಷದ ಅನೇಕ ರ್ಯಾಲಿಗಳ ಫೋಟೋಗಳನ್ನು ಕಾಣಬಹುದು. ಬಿಜೆಪಿಯನ್ನು ಬೆಂಬಲಿಸುವ ಸಾಕಷ್ಟು ಪೋಸ್ಟ್‌ಗಳಿವೆ.

ಡಿಸೆಂಬರ್ 1ರಂದು ಮಾಡಲಾಗಿರುವ ಪೋಸ್ಟ್‌ನಲ್ಲಿ ಚಚ್ಚೇದ್ ಅವರು ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಒಟ್ಟು 1,78,364 ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ 93,000 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ 77,000 ಮತಗಳನ್ನು ಪಡೆದಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಡಿಸೆಂಬರ್ 3ರಂದು ಪ್ರಕಟವಾದ ಫಲಿತಾಂಶದ ಪ್ರಕಾರ, ಬಿಜೆಪಿ ಅಭ್ಯರ್ಥಿ 93,552 ಮತ್ತು ಕಾಂಗ್ರೆಸ್ ಅಭ್ಯರ್ಥಿ 77,625 ಮತಗಳನ್ನು ಪಡೆದುಕೊಂಡಿದ್ದರು. ಡಿಸೆಂಬರ್ 1ರ ಪೋಸ್ಟ್‌ನಲ್ಲಿ ತಿಳಿಸಲಾದ ಮತಗಳು ಮತ್ತು ಫಲಿತಾಂಶದ ವೇಳೆ ಗೊತ್ತಾದ ಮತಗಳು ಆಲ್ಮೋಸ್ಟ್ ಒಂದೇ ತೆರನಾಗಿವೆ. ಈ ಪೋಸ್ಟ್ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ನಾಯಕರಿಗೆ ಮೊದಲೇ ಫಲಿತಾಂಶ ಗೊತ್ತಿತ್ತು ಎಂದು ಆರೋಪಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಆರೋಪಿಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಶಾಸಕ ರಾಮೇಶ್ವರ್ ಶರ್ಮಾ ಅವರು, ದಿಗ್ವಿಜಯ್ ಸಿಂಗ್ ಅವರು ಯಾರನ್ನೂ ನಂಬಲ್ಲ. ಇವಿಎಂ ಮೇಲೂ ನಂಬಿಕೆ ಇಲ್ಲ. ಸ್ವತಃ ಅವರಿಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಹಾಗೆಯೇ, ಪೋಸ್ಟ್ ಮಾಡಿರುವ ಅನಿಲ್ ಚಚ್ಚೇದ್ ಅವರು ಪಕ್ಷದ ಪದಾಧಿಕಾರಿಯೇ ಅಥವಾ ಅಲ್ಲವೇ ಎಂಬುದನ್ನು ಭಾರತೀಯ ಜನತಾ ಪಾರ್ಟಿಯು ಖಚಿತಪಡಿಸಿಲ್ಲ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಗೆದ್ದ ಮಾರನೇ ದಿನವೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಮತ್ತೆ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತಯೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Continue Reading

ದೇಶ

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

Digvijaya Singh: ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಚುನಾವಣೆ ಸೋತ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಮತ್ತೆ ಇವಿಎಂ ಹ್ಯಾಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

VISTARANEWS.COM


on

BJP knew the result two days earlier vote count Says Congress
Koo

ಭೋಪಾಲ್: ಬಿಜೆಪಿ (Bhartiya Janata Party) ಗೆದ್ದಾಗಲೆಲ್ಲ ಪ್ರತಿಪಕ್ಷಗಳು (Opposition Parties) ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ (EVM Hack) ಮಾಡಲಾಗಿದೆ ಎಂದು ಆರೋಪ ಮಾಡುತ್ತಿದ್ದವು. ಈಗ ಕಾಂಗ್ರೆಸ್ ಪಕ್ಷ (Congress Party) ಹೊಸ ಪ್ರಲಾಪವನ್ನು ಆರಂಭಿಸಿದೆ. ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ (Congress Leader Digvijaya Singh) ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿ, ಭಾರತೀಯ ಜನತಾ ಪಾರ್ಟಿಗೆ ಚುನಾವಣಾ ಫಲಿತಾಂಶವು (Election Result 2023) ಎರಡು ದಿನಗಳ ಮುಂಚಿತವಾಗಿಯೇ ಗೊತ್ತಿತ್ತು ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ಚುನಾವಣಾ ಅಕ್ರಮ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದ ಫಲಿತಾಂಶ ಪುಟದ ಎರಡು ಸ್ಕ್ರೀನ್ ಶಾಟ್ ಷೇರ್ ಮಾಡಿಕೊಂಡಿದ್ದಾರೆ. ಅಲ್ಲದೇ, ”ಈ ಎರಡು ಚಿತ್ರಗಳನ್ನು ಹತ್ತಿರದಿಂದ ನೋಡಿ. ಖಚ್ರೋಡ್ ಅಸೆಂಬ್ಲಿ ಕ್ಷೇತ್ರದಲ್ಲಿ ಪ್ರತಿ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದರು ಮತ್ತು ಮತಗಳ ಅಂತರ ಎಷ್ಟು ಎಂಬುದನ್ನು ಬಿಜೆಪಿ ಕಾರ್ಯಕರ್ತರು ಬರೆದಿದ್ದಾರೆ. ಮುಖ್ಯವಾಗಿ, ಈ ಪೋಸ್ಟ್ ಅನ್ನು ಎಣಿಕೆಗೆ ಎರಡು ದಿನಗಳ ಮೊದಲು ಅಂದರೆ ಡಿಸೆಂಬರ್ 1ರಂದು ಮಾಡಲಾಗಿದೆ. ಈಗ ಇದನ್ನು ಫಲಿತಾಂಶಗಳೊಂದಿಗೆ ತುಲನೆ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದ ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ತೇಜ್‌ಬಹದ್ದೂರ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್‌ ಅಭ್ಯರ್ಥಿ ದಿಲಿಪ್ ಸಿಂಗ್ ಗುರ್ಜರ್ ಅವರನ್ನು 15,927 ಮತಗಳ ಅಂತರದಿಂದ ಸೋಲಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಉಲ್ಲೇಖಿಸಿರುವ ಫೇಸ್‌ಬುಕ್ ಪೋಸ್ಟ್ ಅನಿಲ್ ಚಚ್ಚೇದ್ ಅವರ ಪ್ರೊಫೈಲ್‌ನಿಂದ ತೆಗೆದುಕೊಳ್ಳಲಾಗಿದೆ. ಈ ಪ್ರೊಫೈಲ್‌ನಲ್ಲಿ ಅವರು ಡಿಜಿಟಲ್ ಕ್ರಿಯೇಟರ್ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಪ್ರೊಫೈಲ್‌ನಲ್ಲಿ ಚುನಾವಣಾ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಮತ್ತು ಪಕ್ಷದ ಅನೇಕ ರ್ಯಾಲಿಗಳ ಫೋಟೋಗಳನ್ನು ಕಾಣಬಹುದು. ಬಿಜೆಪಿಯನ್ನು ಬೆಂಬಲಿಸುವ ಸಾಕಷ್ಟು ಪೋಸ್ಟ್‌ಗಳಿವೆ.

ಡಿಸೆಂಬರ್ 1ರಂದು ಮಾಡಲಾಗಿರುವ ಪೋಸ್ಟ್‌ನಲ್ಲಿ ಚಚ್ಚೇದ್ ಅವರು ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಒಟ್ಟು 1,78,364 ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ 93,000 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ 77,000 ಮತಗಳನ್ನು ಪಡೆದಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಡಿಸೆಂಬರ್ 3ರಂದು ಪ್ರಕಟವಾದ ಫಲಿತಾಂಶದ ಪ್ರಕಾರ, ಬಿಜೆಪಿ ಅಭ್ಯರ್ಥಿ 93,552 ಮತ್ತು ಕಾಂಗ್ರೆಸ್ ಅಭ್ಯರ್ಥಿ 77,625 ಮತಗಳನ್ನು ಪಡೆದುಕೊಂಡಿದ್ದರು. ಡಿಸೆಂಬರ್ 1ರ ಪೋಸ್ಟ್‌ನಲ್ಲಿ ತಿಳಿಸಲಾದ ಮತಗಳು ಮತ್ತು ಫಲಿತಾಂಶದ ವೇಳೆ ಗೊತ್ತಾದ ಮತಗಳು ಆಲ್ಮೋಸ್ಟ್ ಒಂದೇ ತೆರನಾಗಿವೆ. ಈ ಪೋಸ್ಟ್ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ನಾಯಕರಿಗೆ ಮೊದಲೇ ಫಲಿತಾಂಶ ಗೊತ್ತಿತ್ತು ಎಂದು ಆರೋಪಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಆರೋಪಿಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಶಾಸಕ ರಾಮೇಶ್ವರ್ ಶರ್ಮಾ ಅವರು, ದಿಗ್ವಿಜಯ್ ಸಿಂಗ್ ಅವರು ಯಾರನ್ನೂ ನಂಬಲ್ಲ. ಇವಿಎಂ ಮೇಲೂ ನಂಬಿಕೆ ಇಲ್ಲ. ಸ್ವತಃ ಅವರಿಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಹಾಗೆಯೇ, ಪೋಸ್ಟ್ ಮಾಡಿರುವ ಅನಿಲ್ ಚಚ್ಚೇದ್ ಅವರು ಪಕ್ಷದ ಪದಾಧಿಕಾರಿಯೇ ಅಥವಾ ಅಲ್ಲವೇ ಎಂಬುದನ್ನು ಭಾರತೀಯ ಜನತಾ ಪಾರ್ಟಿಯು ಖಚಿತಪಡಿಸಿಲ್ಲ.

ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಗೆದ್ದ ಮಾರನೇ ದಿನವೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಮತ್ತೆ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತಯೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಚಿಪ್‌ನೊಂದಿಗೆ ಇರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು. ನಾನು 2003ರಿಂದಲೂ ವಿದ್ಯುನ್ಮಾನ ಮತಯಂತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದೇನೆ. ವೃತ್ತಿಪರ ಹ್ಯಾಕರ್ಸ್‌ಗಳಿಗೆ ನಮ್ಮ ಪ್ರಜಾಪ್ರಭುತ್ವದ ನಿಯಂತ್ರಣ ಮಾಡಲು ಬಿಟ್ಟುಕೊಡಬೇಕೇ; ಎಲ್ಲ ಪಾರ್ಟಿಗಳು ಕೇಳಿಕೊಳ್ಳಬೇಕಾದ ಮೂಲಭೂತ ಪ್ರಶ್ನೆಯಾಗಿದೆ. ಗೌರವಾನ್ವಿತ ಕೇಂದ್ರ ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ನಮ್ಮ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಎಕ್ಸ್ ವೇದಿಕೆಯಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mizoram Election Results: ಎಂಎನ್‌ಎಫ್‌ಗೆ ಭಾರೀ ಸೋಲು, ಮಿಜೋರಾಂನಲ್ಲಿ ಇನ್ನು ಜೆಡ್‌ಪಿಎಂ ಆಡಳಿತ

Continue Reading

ದೇಶ

Gautam Adani: ಒಂದೇ ವಾರದಲ್ಲಿ ಅದಾನಿ ಸಂಪತ್ತಿನಲ್ಲಿ 10 ಶತಕೋಟಿ ಡಾಲರ್ ಏರಿಕೆ!

Gautam Adani: ಶಾರ್ಟ್‌ ಸೆಲ್ಲರ್ ಹಿಂಡೆನ್‌ಬರ್ಗ್ ವರದಿಯಿಂದ ಭಾರೀ ಕುಸಿತ ಕಂಡಿದ್ದ ಅದಾನಿ ಗ್ರೂಪ್ ಷೇರುಗಳು ಈಗ ಏರುಗತಿಯಲ್ಲಿದ್ದು, ಗೌತಮ್ ಅದಾನಿ ಮತ್ತೆ ಜಗತ್ತಿನ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ 16ನೇ ಸ್ಥಾನಕ್ಕೆ ಏರಿದ್ದಾರೆ.

VISTARANEWS.COM


on

Gautam adani wealth increased by 10 billion dollars in a week
Koo

ನವದೆಹಲಿ: ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ (Hindenburg Report) ವರದಿಯಿಂದಾಗಿ ಭಾರೀ ಕುಸಿತ ಅನುಭವಿಸಿದ್ದ ಅದಾನಿ ಗ್ರೂಪ್‌(Adani Group) ಷೇರುಗಳು ಈಗ ಏರುಗತಿಯಲ್ಲಿವೆ(adani Shares). ಪರಿಣಾಮ, ಅದಾನಿ ಗ್ರೂಪ್ ಚೇರ್ಮನ್ ಗೌತಮ್ ಅದಾನಿ (Gautam Adani) ಅವರ ಸಂಪತ್ತಿನ ಮೌಲ್ಯವು ಒಂದೇ ವಾರದಲ್ಲಿ 10 ಶತಕೋಟಿ ಡಾಲರ್‌ನಷ್ಟು ಏರಿಕೆ ಕಂಡಿದೆ. ಸದ್ಯ ಅವರು ಒಟ್ಟು ಆಸ್ತಿ ಮೌಲ್ಯ 70.3 ಶತಕೋಟಿ ಡಾಲರ್‌ನಷ್ಟಿದೆ(Gautam Adani’s Wealth) ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂಪತ್ತಿನ ಹೆಚ್ಚಳದ ನಂತರ ಗೌತಮ್ ಅದಾನಿ ಈಗ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 16 ನೇ ಸ್ಥಾನಕ್ಕೆ ಏರಿದ್ದಾರೆ. ಟಾಪ್ 20 ಪಟ್ಟಿಯಲ್ಲಿ ಎರಡನೇ ಭಾರತೀಯ ಬಿಲಿಯನೇರ್ ಆಗಿದ್ದಾರೆ. ಮುಕೇಶ್ ಅಂಬಾನಿ ಅವರು 90.4 ಶತಕೋಟಿ ಡಾಲರ್‌ ಆಸ್ತಿಯೊಂದಿಗೆ 13ನೇ ಸ್ಥಾನದಲ್ಲಿದ್ದಾರೆ.

ಅಮೆರಿಕದ ಇಂಟರ್ನ್ಯಾಷನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಶನ್ (DFC)ಯ ವರದಿಯ ನಂತರ, ಮಂಗಳವಾರ ಅದಾನಿ ಗ್ರೂಪ್‌ ಷೇರುಗಳು 20% ರಷ್ಟು ಏರಿಕೆ ಕಂಡವು. ಅದಾನಿ ಗ್ರೂಪ್ ವಿರುದ್ಧ ಹಿಂಡೆನ್‌ಬರ್ಗ್ ಮಾಡಿದ್ದ ಕಾರ್ಪೊರೇಟ್ ವಂಚನೆಯ ವರದಿಯ ಆರೋಪಗಳು ಅಪ್ರಸ್ತು ಎಂಬುದನ್ನು ಈ ಬೆಳವಣಿಗೆಯು ಸಾಬೀತುಪಡಿಸುತ್ತಿವೆ.

ಶ್ರೀಲಂಕಾದಲ್ಲಿ ಕಂಟೈನರ್ ಟರ್ಮಿನಲ್ ನಿರ್ಮಿಸಲು ಡಿಎಫ್‌ಸಿ 553 ಮಿಲಿಯನ್ ಡಾಲರ್ ಅಂದರೆ, 4600 ಕೋಟಿ ರೂ.ಗೂ ಹೆಚ್ಚು ಸಾಲವನ್ನು ಅದಾನಿಗೆ ನೀಡಿದೆ. ಸಾಲವನ್ನು ನೀಡುವ ಮೊದಲು, ಡಿಎಫ್‌ಸಿ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡೆನ್‌ಬರ್ಗ್‌ನ ಆರೋಪಗಳ ಕುರಿತು ತನಿಖೆ ಮಾಡಿದ್ದು, ಅವು ಸುಳ್ಳು ಎಂದು ಕಂಡುಬಂದಿದೆ ಎಂದು ಹೇಳಿದೆ. ಕಳೆದ ಒಂದು ವಾರದಲ್ಲಿ ಅದಾನಿ ಗ್ರೂಪ್ ಸಂಪತ್ತಿನಲ್ಲಿಿ 1.76 ಲಕ್ಷ ಕೋಟಿ ರೂ.ಗೂ ಅಧಿಕ ಏರಿಕೆಯಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಈ ಮಧ್ಯೆ, ಷೇರು ಪೇಟೆ ನಿಯಮಗಳನ್ನು ಮೀರಿರುವ ಆರೋಪ ಎದುರಿಸುತ್ತಿರುವ ಅದಾನಿ ಗ್ರೂಪ್ ವಿರುದ್ಧ, ನ್ಯಾಯಾಲಯ ನಿಯಂತ್ರಣದಲ್ಲಿ ತನಿಖೆಗೆ ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಕಾಯ್ದಿಟ್ಟಿದೆ. ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲ ಈ ಪಿಐಎಲ್ ದಾಖಲಿಸಲಾಗಿತ್ತು.

ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ.

ಷೇರು ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಭಾರಿ ಲವಲವಿಕೆ ಕಂಡುಬಂದಿದೆ. ಬಿಎಸ್‌ಇ ಸೆನ್ಸೆಕ್ಸ್‌ 877.43 ಪಾಯಿಂಟ್‌ಗಳ ಏರಿಕೆಯೊಂದಿಗೆ (ಶೇ.1.3%) 68,358.52 ಅಂಕಗಳೊಂದಿಗೆ ಸಾರ್ವಕಾಲಿಕ ಸಾಧನೆ ಮಾಡಿತು. ಇನ್ನು ನಿಫ್ಟಿಯೂ 284.80 ಅಂಕಗಳ ಏರಿಕೆಯೊಂದಿಗೆ (ಶೇ.1.41) 20,552.70 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪಾಯಿಂಟ್‌ಗಳ ದಾಖಲೆ ಬರೆಯಿತು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಾಲರ್‌ ಎದುರು ರೂಪಾಯಿ ಮೌಲ್ಯವು 6 ಪೈಸೆ ಸುಧಾರಣೆಯಾಗಿದೆ. ಇನ್ನು ಷೇರು ಮಾರುಕಟ್ಟೆಯಲ್ಲ ವಹಿವಾಟು ಆರಂಭವಾದ ಕೆಲವೇ ನಿಮಿಷಗಳಲ್ಲಿ ಹಲವು ಕಂಪನಿಗಳ ಮಾರುಕಟ್ಟೆ ಬಂಡವಾಳವು 4.09 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬೆಳಗ್ಗೆಯ ಟ್ರೇಡಿಂಗ್‌ನಲ್ಲಿ ಅದಾನಿ ಗ್ರೂಪ್‌ ಕಂಪನಿಗಳು ಹೆಚ್ಚು ಲಾಭ ಗಳಿಸಿವೆ. ಹಾಗೆಯೇ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಎನ್‌ಟಿಪಿಸಿ ಹಾಗೂ ಲಾರ್ಸೆನ್‌ & ಟರ್ಬೊ ಕೂಡ ಹೆಚ್ಚಿನ ಲಾಭ ಗಳಿಸಿದವು.

ಈ ಸುದ್ದಿಯನ್ನೂ ಓದಿ: Gautam Adani: ಶರದ್ ಪವಾರ್ ಮನೆಗೆ ಗೌತಮ್ ಅದಾನಿ; ಎರಡು ಗಂಟೆ ಮಾತುಕತೆ!

Continue Reading
Advertisement
Vistara Editorial, Leaf spot disease for areca nut
ಕರ್ನಾಟಕ21 mins ago

ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

read your daily horoscope predictions for december 6 2023
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Elephant Arjuna
ಕರ್ನಾಟಕ7 hours ago

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Kabaddi news
ಕ್ರೀಡೆ7 hours ago

Pro Kabaddi : ಮುಂಬಾ ವಿರುದ್ಧ ಜಯಂಟ್ಸ್​​ಗೆ 39-37 ಅಂಕಗಳ ಜಯ

Belagavi Winter Session
ಕರ್ನಾಟಕ7 hours ago

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

our former mlas they did not get even 50 votes in Madhya Pradesh Says Congress
ದೇಶ7 hours ago

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Team India1
ಟಾಪ್ 10 ನ್ಯೂಸ್8 hours ago

VISTARA TOP 10 NEWS : ಸಿದ್ದು ಮುಸ್ಲಿಂ ಓಲೈಕೆ ಜಟಾಪಟಿ, ʼಅರ್ಜುನʼನಿಗೆ ಕಂಬನಿಯ ವಿದಾಯ ಇತ್ಯಾದಿ ಪ್ರಮುಖ ಸುದ್ದಿಗಳು

Vistara News Best Teacher Award -2023 programme inauguration by Yadgiri DC Sushila B. at Yadgiri
ಕರ್ನಾಟಕ8 hours ago

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

BJP knew the result two days earlier vote count Says Congress
ದೇಶ9 hours ago

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

read your daily horoscope predictions for december 6 2023
ಪ್ರಮುಖ ಸುದ್ದಿ1 hour ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ10 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ10 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ10 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ4 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

ಟ್ರೆಂಡಿಂಗ್‌